Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ತುಮಕೂರು: ನಗರದ ಪ್ರಸಿದ್ಧ ದೇವನೂರು ಚರ್ಚ್ ಕ್ರಿಸ್ಮಸ್ ಹಬ್ಬದ ಸಂಭ್ರಮದಲ್ಲಿ ಮುಳುಗಿದ್ದು, ಚರ್ಚಿನ ಸುತ್ತಮುತ್ತ ಬಣ್ಣ ಬಣ್ಣದ ಲೈಟಿಂಗ್ ಗಳಿಂದ ಆಕರ್ಷಕವಾಗಿ ಸಿಂಗಾರಗೊಳ್ಳಲಾಗಿದೆ. ಪ್ರತಿವರ್ಷದಂತೆ ಈ ವರ್ಷವೂ ಡಿಸೆಂಬರ್ 25ರಂದು ಕ್ರಿಸ್ಮಸ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಚರ್ಚಿನ ಕಾರ್ಯದರ್ಶಿ ಹೇಮಂತ್ ಅವರು, “ಕ್ರಿಸ್ಮಸ್ ಹಬ್ಬವು ಯೇಸು ಕ್ರಿಸ್ತರ ಜನ್ಮದಿನವನ್ನು ಸ್ಮರಿಸುವ ಪ್ರಮುಖ ದಿನ. ಹಬ್ಬದ ಮಹತ್ವವನ್ನು ನೆನಪಿಸಿಕೊಳ್ಳಲು ಚರ್ಚಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದೇವೆ” ಎಂದು ಹೇಳಿದರು. ಹಬ್ಬದ ದಿನದ ಕಾರ್ಯಕ್ರಮಗಳು: ಬೆಳಿಗ್ಗೆ 8: ಯೇಸು ಕ್ರಿಸ್ತನ ಆರಾಧನೆ. ಬೆಳಿಗ್ಗೆ 11:00 – ಸಂಜೆ 7:00: ಪುಟಾಣಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಕೇಕ್ ಕಟಿಂಗ್, ಬಡವರಿಗೆ ಬಟ್ಟೆ ವಿತರಣೆ, ಮತ್ತು ಆರ್ಥಿಕ ಸಹಾಯ. ಸಮುದಾಯದ ಎಲ್ಲರೂ ಈ ಹಬ್ಬದಲ್ಲಿ ಪಾಲ್ಗೊಂಡು ಕ್ರಿಸ್ಮಸ್ ಸಂತೋಷವನ್ನು ಹಂಚಿಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಚರ್ಚಿನ ಹಿರಿಯರು, ಯುವಕರು, ಮಹಿಳೆಯರು ಮತ್ತು ಮಕ್ಕಳು ಉತ್ಸಾಹದಿಂದ ಭಾಗವಹಿಸಿದ್ದು, ಸಮಾರಂಭದ…
ತುಮಕೂರು: ಕೊರಟಗೆರೆ ತಾಲ್ಲೂಕಿನ ವಿವಿಧ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆಯಿಂದ ವಶ ಪಡಿಸಿಕೊಂಡಿದ್ದ ಮದ್ಯ ನಾಶ ಪಡಿಸಲಾಯಿತು. ಕಳೆದ ಸುಮಾರು ವರ್ಷಗಳಿಂದ ಚುನಾವಣೆ ಸಮಯದಲ್ಲಿ ಸೇರಿದಂತೆ ಚಿಲ್ಲರೆ ಅಂಗಡಿಗಳಲ್ಲಿ ಮಾರಾಟ ಮಾಡಲು ಇರಿಸಿದ್ದ ಮದ್ಯವನ್ನು ವಶಪಡಿಸಿಕೊಳ್ಳಲಾಗಿತ್ತು. ಪೊಲೀಸ್ ಇಲಾಖೆಯ 7 ಪ್ರಕರಣಗಳು ಹಾಗೂ ಅಬಕಾರಿ ಇಲಾಖೆಯ 5 ಪ್ರಕರಣಗಳಲ್ಲಿ ಸುಮಾರು ಮದ್ಯ ವಶಕ್ಕೆ ಪಡೆಯಲಾಗಿತ್ತು. 64 ಲೀಟರ್ ನಷ್ಟು ಮದ್ಯ ಮತ್ತು 2 ಲೀಟರ್ ಬಿಯರ್ ಸೇರಿ 30 ಸಾವಿರ ಬೆಲೆಯ ಮದ್ಯವನ್ನು ತಾಲ್ಲೂಕಿನ ಬೋಡಬಂಡೆನಹಳ್ಳಿ ಬಳಿ ಇರುವ ಕಸವಿಲೇವಾರಿ ಘಟಕದಲ್ಲಿ ದೀಪಕ್ ನೇತೃತ್ವದಲ್ಲಿ ಅಬಕಾರಿ ಜಿಲ್ಲಾಧಿಕಾರಿ ಆದೇಶದಂತೆ ಮದ್ಯ ನಾಶ ಮಾಡಲಾಯಿತು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಸರಗೂರು: ದೇವರ ಹೆಸರು ಹೇಳಿದರೆ ಮುಕ್ತಿ ಸಿಗುತ್ತದೆ. ಅಂಬೇಡ್ಕರ್ ಹೆಸರು ಹೇಳಿದರೆ ಮುಕ್ತಿ ಸಿಗಲ್ಲ ಎಂದರೆ, ಇದು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಮಾಡಿದ ಅವಮಾನ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಹಾಗೂ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಕಿಡಿಕಾರಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರದಂದು ಸಂವಿಧಾನ ಸಂರಕ್ಷಣಾ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಮುಖಂಡರು ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಪ್ರತಿಭಟನೆಯಲ್ಲಿ ಮಾತನಾಡಿದರು. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಕೊಡದೇ ಇದ್ದಿದ್ದರೆ ಅಮಿತ್ ಶಾ ಗೃಹ ಮಂತ್ರಿಯೂ ಆಗುತ್ತಿರಲಿಲ್ಲ. ಆದರೆ ಇಂದು ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆಗ್ರಹಿಸಿದರು. ಗೃಹ ಸಚಿವ ಅಮಿತ್ ಶಾ ಎದುರಾಳಿ ಪಕ್ಷವನ್ನು ಎದುರಿಸುವ ಸಲುವಾಗಿ ಅಂಬೇಡ್ಕರ್ ಅವರನ್ನು ಬಳಸಿಕೊಂಡಿದ್ದಾರೆ. ಮತ್ತೊಂದು ಪಕ್ಷವನ್ನು ಮಣಿಸಲು ಬಾಬಾ ಸಾಹೇಬರನ್ನು ಬಳಸಿಕೊಂಡರೆ ಸಹಿಸಲು ಅದನ್ನು ಸಾಧ್ಯವಿಲ್ಲ .ವಿವಾದ ಕಿಡಿ ಅಕ್ಷಮ್ಯ ಅಪರಾಧ. ಈ ಮೊಂಡುತನದ ಹೇಳಿಕೆಯನ್ನು…
ತುಮಕೂರು : ನಗರದ ತಿಲಕ್ ಪಾರ್ಕ್ ಪೊಲೀಸರು ಪತ್ರಕರ್ತನ ಸೋಗಿನಲ್ಲಿ ಗಾಂಜಾ ಸಾಗಿಸುತ್ತಿದ್ದವನನ್ನು ಬಂಧಿಸಿ ಒಂದು ಕಾರು, ಲಕ್ಷಾಂತರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಶೈಕ್ಷಣಿಕ ನಗರಿ ತುಮಕೂರು ನಗರದಲ್ಲಿ ಇತ್ತೀಚೆಗೆ ಗಾಂಜಾ, ಡ್ರಗ್ಸ್ ಹಾವಳಿ ಹೆಚ್ಚಾಗಿದೆ ಅನ್ನೋ ಆರೋಪ ಪದೇ ಪದೇ ಕೇಳಿಬರ್ತಾನೆ ಇದೆ. ನಗರದಲ್ಲಿ ಗಾಂಜಾ ದಂಧೆಕೋರರು ಹೆಚ್ಚಾಗಿದ್ದು, ಬೇರೆ ಬೇರೆ ರೂಪದಲ್ಲಿ ಅವುಗಳನ್ನ ಮಾರಾಟ ಮಾಡ್ತಿದ್ದಾರೆ. ಹೀಗಾಗಿ ನಿಷೇಧಿತ ಗಾಂಜಾ ಮತ್ತು ಡ್ರಗ್ಸ್ ಸುಲಭವಾಗಿ ಯುವಕರ ಕೈ ಸೇರುತ್ತಿವೆ. ಇದರಿಂದ ಅಹಿತಕರ ಘಟನೆಗಳು ನಡೆಯೋದು ಕೂಡ ಹೆಚ್ಚಾಗಿದ್ದು, ನಗರದ ಶಾಂತಿಗೆ ಧಕ್ಕೆಯುಂಟಾಗ್ತಿದೆ ಅಂತಾ ತುಮಕೂರಿನ ನಾಗರಿಕರು ಆರೋಪಿಸುತ್ತಿದ್ದರು. ಅದರಲ್ಲಿಯೂ ನಗರದ ತಿಲಕ್ ಪಾರ್ಕ್ ಮತ್ತು ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿಯೇ ಈ ರೀತಿ ಪ್ರಕರಣಗಳು ಬೆಳಕಿಗೆ ಬರ್ತಿದ್ವು. ಹೀಗಾಗಿ ಇಂತಹ ಕ್ರಿಮಿಗಳನ್ನ ಮಟ್ಟಹಾಕಬೇಕು ಅಂತಾ ಪೊಲೀಸರು ಪಣತೊಟ್ಟಿದ್ದು, ಇದೀಗ ತಿಲಕ್ ಪಾರ್ಕ್ ಪೊಲೀಸರು ಭರ್ಜರಿ ಭೇಟೆಯನ್ನೇ ಆಡಿದ್ದಾರೆ. ಪತ್ರಕರ್ತನ ಸೋಗಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ದಂಧೆಕೋರನನ್ನ…
ರಾಯಚೂರು: ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಸಾಯಿ ಮಂದಿರದಲ್ಲಿ ಹುಲಿಗುಡ್ಡ ಗ್ರಾಮದ ಪರಿಸರ ಪ್ರೇಮಿಗಳಾದ ಗಣೇಶ ಮಾಲಿ ಪಾಟೀಲ್ ಅವರ ಮದುವೆ ಸಮಾರಂಭದಲ್ಲಿ ಮಾಲಿ ಪಾಟೀಲ್ ಬಂಧುಗಳ ಮತ್ತು ವನಸಿರಿ ಫೌಂಡೇಶನ್ ತಾಲೂಕು ಘಟಕ ಲಿಂಗಸಗೂರು ಸಹಯೋಗದೊಂದಿಗೆ “ಮದುವೆ ಮಂಟಪದಲ್ಲಿ ಪರಿಸರ ಜಾಗೃತಿ”ಎಂಬ ದ್ಯೇಯ ವಾಕ್ಯದೊಂದಿಗೆ 501 ಉಚಿತ ಸಸಿ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ ಜರಗಿತು. ಈ ಸಂಧರ್ಭದಲ್ಲಿ ಕುಟುಂಬದ ವತಿಯಿಂದ ವಿವಿಧ ತಳಿಗಳ 501 ಸಸಿಗಳನ್ನು ವಿತರಿಸಲಾಯಿತು.ವೇದಿಕೆಯ ಮೇಲೆ ನೂತನ ವಧುವರರಿಗೂ ಸಸಿಗಳನ್ನು ಕೊಡುವುದರ ಮೂಲಕ ಶುಭ ಹಾರೈಸಲಾಯಿತು. ಮದುವೆಗೆ ಆಗಮಿಸಿದ ಬಂಧುಗಳು ತುಂಬಾ ಆಸಕ್ತಿ ವಹಿಸಿ ವಿವಿಧ ತಳಿಗಳ ಸಸಿಗಳ ಬಗ್ಗೆ ಮಾಹಿತಿ ತಿಳಿದುಕೊಂಡರು ಮತ್ತು ಕೊಂಡೊಯ್ದರು.ಇದೇ ವೇಳೆ ವನಸಿರಿ ಪೌಂಡೇಶನ್ ವತಿಯಿಂದ ಸಸಿಗಳ ವಿತರಣೆಯ ಜೊತೆಗೆ ನೋಂದಣಿ ಕಾರ್ಯ ಕೂಡ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ನೇತೃತ್ವದವಹಿಸಿದ ವನಸಿರಿ ಜಾಲತಾಣದ ಅಧ್ಯಕ್ಷರಾದ ಚನ್ನಪ್ಪ ಕೆ. ಹೊಸಹಳ್ಳಿ ಅವರು ಮಾತನಾಡಿ, ಮಾಲಿ ಪಾಟೀಲ್ ಬಂಧುಗಳು ಮದುವೆ…
ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಒಂದೆರಡು ಕಡೆ ಸಂಜೆ, ರಾತ್ರಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಮಲೆನಾಡು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ದಕ್ಷಿಣ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ. ಈಗಿನಂತೆ ಡಿಸೆಂಬರ್ 27ರ ತನಕ ರಾಜ್ಯದಾದ್ಯಂತ ಅಲ್ಲಲ್ಲಿ ಮೋಡ ಹಾಗೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಕಲಬುರಗಿ ಶಾಖಾ ಆಸ್ಪತ್ರೆ ನಾಳೆ ಲೋಕಾರ್ಪಣೆಗೊಳ್ಳಲಿದೆ. ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 21 ವೈದ್ಯರು, 120 ಸ್ಟಾಫ್ ನರ್ಸ್ ಸೇರಿದಂತೆ ಇತರೆ ಸಿಬ್ಬಂದಿ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ನೂತನ ಜಯದೇವ ಆಸ್ಪತ್ರೆಯಲ್ಲಿ 3 ಕ್ಯಾಥಲ್ಯಾಬ್, ಮೂರು ಆಪರೇಷನ್ ಥಿಯೇಟರ್, ಒಂದು ಹೈಬ್ರಿಡ್ ಓ.ಟಿ ಇರಲಿದೆ. ಎಕ್ಸ್ರೇ, ಇ.ಎಂ.ಆರ್.ಐ., ಬ್ಲಡ್ ಬ್ಯಾಂಕ್ ಸೇವೆ ಲಭ್ಯವಿರಲಿದೆ. 105 ಐ.ಸಿ.ಯು ಬೆಡ್, 120 ಜನರಲ್ ಬೆಡ್ ಸೇರಿದಂತೆ ಒಟ್ಟಾರೆ 371 ಹಾಸಿಗೆ ಸಾಮರ್ಥ್ಯ ಇದ್ದು, ಅತ್ಯಾಧುನಿಕ ಸೌಲಭ್ಯದೊಂದಿಗೆ ಬಿ.ಪಿ.ಎಲ್ ರೋಗಿಗಳಿಗೆ…
ಬೆಳಗಾವಿ: 9 ತಿಂಗಳ ತುಂಬು ಗರ್ಭಿಣಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ. ಸುವರ್ಣ ಮಾಂತಯ್ಯ ಮಠಪತಿ (35) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮನೆಗೆ ನುಗ್ಗಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.ಮಹಿಳೆಗೆ ಈಗಾಗಲೇ ನಾಲ್ವರು ಹೆಣ್ಣು ಮಕ್ಕಳಿದ್ದು, ಐದನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನೊಂದು ವಾರದಲ್ಲಿ ಈಕೆ ಐದನೇ ಮಗುವಿಗೆ ಜನ್ಮ ನೀಡಬೇಕಿತ್ತು. ಮುಂದಿನ ಒಂದು ವಾರದಲ್ಲಿ ಹೆರಿಗೆಗೆ ದಿನಾಂಕವನ್ನು ವೈದ್ಯರು ನಿಗದಿ ಮಾಡಿದ್ದರು. ಮಹಿಳೆಯ ಪತಿ ಶನಿವಾರ ಮಧ್ಯಾಹ್ನ ಹಸುಗಳಿಗೆ ಮೇವು ತರಲು ತೋಟಕ್ಕೆ ಹೋಗಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತಕ್ಷಣವೇ ಪಕ್ಕದ ಹಾರೂಗೇರಿ ಖಾಸಗಿ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಲಾಯಿತು. ಆದರೆ, ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಕಲಬುರಗಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಘಟನೆಗೆ ಹಲವು ಎಂಎಲ್ ಸಿಗಳು ಸಾಕ್ಷಿಯಾಗಿದ್ದಾರೆ. ಇದು ಕ್ರಿಮಿನಲ್ ಅಪರಾಧವಾಗಿರುವುದರಿಂದ ನಾವು ಈ ವಿಷಯವನ್ನು ತನಿಖೆ ಮಾಡುತ್ತಿದ್ದೇವೆ. ಹೀಗಿರುವಾಗ ಅವರು (ರವಿ) ನ್ಯಾಯಾಂಗ ತನಿಖೆಗೆ ಏಕೆ ಒತ್ತಾಯಿಸುತ್ತಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಪುರಾವೆಗಳಿವೆ. ಅನೇಕ ಎಂಎಲ್ಸಿಗಳು ಅವರು ಅಂದಿದ್ದನ್ನು ಕೇಳಿದ್ದಾರೆ. ಇದು ಕ್ರಿಮಿನಲ್ ಅಪರಾಧಕ್ಕೆ ಸಮಾನವಾಗಿದೆ, ಅಲ್ಲವೇ? ಎಂದು ಕೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ಅವರು ಯಶವಂತಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ 6 ರಲ್ಲಿ ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಸೇವೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಗೋಲ್ಡನ್ ಚಾರಿಯೇಟ್ ರೈಲು ಸೇವೆಗಳು 2018 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು ಅದನ್ನು ಮರುಚಾಲನೆಗೊಳಿಸಲಾಗಿದೆ. ಈ ರೈಲಿನ ಮಾಲೀಕತ್ವವನ್ನು 50% ಭಾರತೀಯ ರೈಲ್ವೇ, 25% ಪ್ರವಾಸೋದ್ಯಮ ಸಚಿವಾಲಯ ಭಾರತ ಸರ್ಕಾರ ಹಾಗೂ ಕೆಎಸ್ಟಿಡಿಸಿಯ 25% ರಷ್ಟು ಷೇರುಗಳ ಮೂಲಕ ರಾಜ್ಯ ಸರ್ಕಾರ ಹೊಂದಿದೆ. ರೈಲಿನ ಒಳಾಂಗಣವನ್ನು ಕಲಾತ್ಮಕವಾಗಿ ನಿರ್ಮಿಸಲಾಗಿದೆ. 18 ಕೋಚ್ಗಳಲ್ಲಿ ಕರ್ನಾಟಕ ಆಳಿದ ರಾಜವಂಶಸ್ಥರುಗಳಾದ ಕದಂಬ, ಹೊಯ್ಸಳ, ವಿಜಯನಗರ ಚಾಲುಕ್ಯರ ಹೆಸರನ್ನು ಇಡಲಾಗಿದೆ. ಊಟ, ವಸತಿಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಗೋಲ್ಡನ್ ಚಾರಿಯೇಟ್ ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ…