Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಬೀದರ್: ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವರಾದ ಅಮಿತ್ ಶಾ ವಿರುದ್ಧ ನಗರದ ಅಂಬೇಡ್ಕರ್ ವೃತ್ತದ ಹತ್ತಿರ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಬೀದರ್ ಘಟಕ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಪಕ್ಷದ ಜಿಲ್ಲಾಧ್ಯಕ್ಷರಾದ ಯೋಹಾನ್ ಡಿಸೋಜಾ ಮಾತನಾಡಿ, ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್.ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಪಾರ್ಲಿಮೆಂಟ್ ನಲ್ಲಿ ಭಾಷಣ ಮಾಡುತ್ತಾ, ಪರಮಪೂಜ್ಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಕೀಳು ಮಟ್ಟದಲ್ಲಿ ಮಾತನಾಡಿ ಅವಮಾನ ಮಾಡಿದ್ದಾರೆ. ಅಮಿತ್ ಶಾ ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ ಕೇಂದ್ರ ಮಂತ್ರಿಯಾಗಿ ಸಂವಿಧಾನ ಪಿತಾ ಪರಮ ಪೂಜ್ಯ ಬಾಬಾಸಾಹೇಬ್ ಅವರ ಬಗ್ಗೆ ನಗಣ್ಯ ರೀತಿಯಲ್ಲಿ ವ್ಯಾಖ್ಯಾನಿಸಿ ಮಾತನಾಡಿದ್ದಾರೆ. ಇದು ಎಲ್ಲಾ ಪ್ರಜಾಪ್ರಭುತ್ವವಾದಿಗಳು ಮತ್ತು ಅಂಬೇಡ್ಕರ್ ಅಭಿಮಾನಿಗಳಿಗೆ ಮಾನಸಿಕವಾಗಿ ಬಹಳ ನೋವುಂಟು ಮಾಡಿದ್ದಾರೆ ಅವರು ತಕ್ಷಣವೇ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ…
ಮೈಸೂರು: ಭಾರತೀಯ ಜೈನ್ ಮಿಲನ್ ವಲಯ — 8 ಮೈಸೂರು ವಿಭಾಗ ಮಟ್ಟದ ಜಿನ ಭಜನ ಸ್ಪರ್ಧೆ ಎಂಟನೇ ಆವೃತ್ತಿಗೆ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥ ಕಲ್ಯಾಣ ಮಂಟಪದಲ್ಲಿ ಚಾಲನೆ ನೀಡಲಾಯಿತು. ಭಾರತೀಯ ಜೀನ್ ಮಿಲನ್ ವಲಯ — 8ರ ಗೌರವ ಅಧ್ಯಕ್ಷರಾದ ಶೀಲಾ ಅನಂತರಾಜು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜೀವನ ಮಹಿಳಾ ಒಕ್ಕೂಟದ ಮಾಜಿ ಕಾರ್ಯಾಧ್ಯಕ್ಷರಾದ ಪದ್ಮಿನಿ ಪದ್ಮರಾಜ್, ಜ್ಯೋತಿ ನೇಮಿರಾಜು ಲಿಂಗನಮಕ್ಕಿ, ಭಾರತೀಯ ಜೈನ ಮಿಲನ್ ವಲಯ –8 ರ ಅಧ್ಯಕ್ಷ ಕೆ.ಯುವರಾಜು ಭಂಡಾರಿ, ಸುಶ್ರುತ ಕಣ್ಣಿನ ಆಸ್ಪತ್ರೆಯ ಡಾ. ಪಲ್ಲವಿ ಪ್ರಭು, ಡಾ.ಸಿ.ಎ.ಪಿ. ಪ್ರಭು ಇನ್ನಿತರ ಗಣ್ಯರುಗಳು ಭಾಗವಹಿಸಿದ್ದರು. ಸಂಗೀತ ವಿದುಷಿ ಸೌಮ್ಯ ಶ್ರೀಧರ್ ಜೈನ್ ಮತ್ತು ತಂಡ ಮಂಗಳ ಜಿನಭಕ್ತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ನೇಹ, ಶರ್ಮಿಳಜಿನೇಶ್, ಮೈಸೂರು ವಿಭಾಗದ ಉಪಾಧ್ಯಕ್ಷ ಸಿ.ಎಸ್. ನಾಗರಾಜ್, ಕಾರ್ಯದರ್ಶಿ ಎಂ.ರತ್ನರಾಜು, ಪ್ರಸನ್ನ ಕುಮಾರ್, ಜಿ.ಬಿ .ಚಂದ್ರಶೇಖರ್, ಇನ್ನಿತರ ಪದಾಧಿಕಾರಿಗಳು, ವಿವಿಧ ಜೈನ ಸಂಘಟನೆಗಳ ಅಧ್ಯಕ್ಷರು,…
ಕೊರಟಗೆರೆ: ಕರುನಾಡಿನ ಸುಪ್ರಸಿದ್ದ ಪುಣ್ಯ ಕ್ಷೇತ್ರವಾದ ಸಿದ್ದರಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ತೋವಿನಕೆರೆ–ತುಂಬಾಡಿ ಮಾರ್ಗದ ಪಿಡಬ್ಲ್ಯೂಡಿ ಇಲಾಖೆಯ 2 ಕಿ.ಮೀ. ಮುಖ್ಯರಸ್ತೆಯಲ್ಲಿ ಬರೋಬ್ಬರಿ 400 ಕ್ಕೂ ಅಧಿಕ ಗುಂಡಿಗಳು ಬಿದ್ದು ಮುಖ್ಯ ರಸ್ತೆಯೇ ಕಾಣೆಯಾಗಿ ವಾಹನ ಸವಾರರಿಗೆ ಉಂಟಾಗಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟದಿಂದ ನೇಗಲಾಲದ ಸಂಪರ್ಕದ 2 ಕಿ.ಮೀ. ರಸ್ತೆಯು ಗುಂಡಿಮಯ ಆಗಿರುವ ಪರಿಣಾಮ ಸಸ್ಯಕಾಶಿಗೆ ಆಗಮಿಸುವ ಪ್ರವಾಸಿಗರಿಗೆ, ರೈತಾಪಿವರ್ಗಕ್ಕೆ ಮತ್ತು ಶಾಲೆಗೆ ತೆರಳುವ ಮಕ್ಕಳಿಗೆ ಪ್ರತಿನಿತ್ಯವು ಸಮಸ್ಯೆಯಾಗಿ ಪರಿಣಮಿಸಿದೆ. ಮುಖ್ಯರಸ್ತೆ ಕಾಮಗಾರಿಯಲ್ಲಿ ಗುತ್ತಿಗೆದಾರನ ಅಕ್ರಮ: ತೋವಿನಕೆರೆಯಿಂದ ಜೋನಿಗರಹಳ್ಳಿ ಮಾರ್ಗವಾಗಿ ಸಿದ್ದರಬೆಟ್ಟ ಮೂಲಕ ತುಂಬಾಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಮತದಾರರ ಮನವಿಯಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪಿಡಬ್ಲ್ಯೂಡಿ ಇಲಾಖೆಯಿಂದ 5 ಕೋಟಿ ಅನುದಾನ ನೀಡಿ ಸಮಗ್ರ ಅಭಿವೃದ್ದಿಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ಗುತ್ತಿಗೆದಾರ ಮತ್ತು ಅಧಿಕಾರಿವರ್ಗ 2 ಕಿ.ಮೀ. ರಸ್ತೆಯನ್ನೇ ನಿರ್ಮಿಸದೇ ಇರೋದು ಬೆಳಕಿಗೆ ಬಂದಿದೆ. ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ: 5 ಕೋಟಿ ಅನುದಾನ ನೀಡಿದ್ರು, ರಸ್ತೆ ಕಾಮಗಾರಿ…
ತುಮಕೂರು: ಮಾನವನ ಮನಸ್ಸು ಆತ್ಮಗಳ ಶುದ್ದಿಗೆ ಸ್ವಾಧ್ಯಾಯದ ಚಿಂತನೆಗಳು ಅಗತ್ಯವಾಗಿದೆ ಎಂದು ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಅವರಿಂದು ತುಮಕೂರಿನ ಜೈನ ಭವನದಲ್ಲಿ ನಡೆದ ಮಂಗಳ ಪುರಪ್ರವೇಶ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ರಕ್ತದ ಶುದ್ಧಿ ಕರುಣಕ್ಕೆ ಡಯಾಲಿಸಿಸ್ ಹೇಗೋ, ಮಾನವನ ಮನಸ್ಸು ಶುದ್ದಿ, ಆತ್ಮ ಶುದ್ದಿಗೆ ಚಿಂತನೆಗಳು ಅಗತ್ಯ. ಪೂಜೆ , ನೊoಪಿ , ವೃತ, ಆರಾಧನೆಗಳನ್ನ ಮಾಡುವುದು ಸ್ವಾದ್ಯಾಯವಾಗಿದೆ. ತಮ್ಮ ವೃತ್ತಿಯ ಜೊತೆಗೆ ಬಿಡುವು ಮಾಡಿಕೊಂಡು ಸ್ವಾಧ್ಯಾಯಗಳನ್ನು ಮಾಡುವಂತೆ ತಿಳಿಸಿದರು. ಇಲ್ಲಿ ಧರ್ಮ ಸಂಸ್ಕಾರ ವಿದೆ ಧಾರ್ಮಿಕ ಸಂಸ್ಕಾರ ತುಂಬಿದ ಲಕ್ಷ್ಮಿ ಸೇನಾ ಭಟ್ಟರಕ ಪೀಠವಿದೆ ಎಂದ ಅವರು, ಇಲ್ಲಿ ಹಲವಾರು ಚಾತುರ್ಮಾಸಗಳು ನಡೆದಿವೆ, ಇಲ್ಲಿ ಶ್ರೇಷ್ಠ ಮುನಿ ಸಂಸ್ಕಾರ ವಂತರಿದ್ದಾರೆ. ಪಿಂಚಿ ಮಂದಿರ ,ಚಂದ್ರನಾಥ ಮೂರ್ತಿ, ಮಂದರಗಿರಿ ಬೆಟ್ಟದ ಮೇಲಿನ ಜೈನ ಬಸದಿಗಳ ಸಂಕೀರ್ಣ, ಜೀರ್ಣೋದ್ಧಾರ ಮಾಡಿ ಕೊಡುಗೆ ನೀಡಿದ್ದಾರೆ ಎಂದ ಭಟ್ಟರಕ ಶ್ರೀಗಳು,…
ತುಮಕೂರು: ಜಿಲ್ಲೆ ತುಮಕೂರು ತಾಲ್ಲೂಕು, ಬೆಳಧರ ಶಾಲೆಯು ಸ್ವತಂತ್ರ ಪೂರ್ವದಲ್ಲಿಯೇ ಪ್ರಾರಂಭವಾದ ಶಾಲೆಯಾಗಿದ್ದು, ಸುಮಾರು 10–15 ಹಳ್ಳಿಗಳ ಕೃಷಿಕರ, ಬಡ ಅಲ್ಪಸಂಖ್ಯಾತ ಮಕ್ಕಳು, ಪರಿಶಿಷ್ಟಜಾತಿ ಪಂಗಡದ ಅತೀ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಯಾಗಿದೆ. ಕೋರಾ ಹೋಬಳಿಯಲ್ಲಿಯೇ ಅತಿಹೆಚ್ಚು ಮಕ್ಕಳನ್ನು ಹೊಂದಿರುವ ಕನ್ನಡ ಶಾಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವಂತಹ ಶಾಲೆಯ ಮಕ್ಕಳಿಗೆ ಸುರಕ್ಷತೆ ಇಲ್ಲದೇ ಇರುವುದು ಜಿಲ್ಲಾಡಳಿತದ ಬೇಜವಾಬ್ದಾರಿಯಾಗಿದೆ ಎಂದು ತುಮಕೂರಿನ ಕಾಳಜಿ ಫೌಂಡೇಶನ್ ಟೀಕಿಸಿದೆ. ಈ ಶಾಲೆಯ ವಿದ್ಯಾರ್ಥಿಗಳು ಶಾಲೆಗೆ ಲಗತ್ತಾಗಿರುವಂತೆ ಕಾನೂನು ಬಾಹಿರ ಕಲ್ಯಾಣ ಮಂಟಪದವರು ಶಾಲಾ ಆಟದ ಮೈದಾನವನ್ನೇ ಪಾರ್ಕಿಂಗ್ ಮಾಡಿಕೊಂಡಿರುವ ಪರಿಣಾಮ ಸ್ವಚ್ಛಂದವಾಗಿ ಅಭ್ಯಾಸ ಮಾಡಬೇಕಾದ ಮಕ್ಕಳು, ಕಲ್ಯಾಣ ಮಂಟಪದ ಸದ್ದುಗದ್ದಲಗಳ ನಡುವೆ, ವಾಹನಗಳಿಂದ ಭಯಭೀತರಾಗಿ ಜೀವ ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವುದು ಬೇಸರವೆನಿಸುತ್ತಿದೆ. ಕಾಂಪೌಂಡ್ ನಿರ್ಮಾಣಕ್ಕೆ ಹಣವಿಲ್ಲ ಎಂದಿರುವ ತುಮಕೂರು ಜಿಲ್ಲಾಡಳಿತ ಜನವರಿ 10, 2025ರ ಒಳಗೆ ಕಾಂಪೌಂಡ್ ಕಾಮಗಾರಿ ಪ್ರಾರಂಭ ಮಾಡದೇ ಇದ್ದಲ್ಲಿ, ನಾವು ಸಹ ಎಸ್.ಡಿ.ಎಂ.ಸಿ. ಮನವಿ ಮೇರೆಗೆ ಶಾಲೆ ಆಟದ ಮೈದಾನಕ್ಕೆ ಕಾಂಪೌಂಡ್…
ತುಮಕೂರು: ಬೆಳಧರ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಜಿಲ್ಲಾಡಳಿತದಲ್ಲಿ ಹಣವಿಲ್ಲ: ಭಿಕ್ಷಾಟನೆಗೆ ಮುಂದಾದ ವಿವಿಧ ಸಂಘಟನೆಗಳು
ತುಮಕೂರು: ಬೆಳಧರ ಸರ್ಕಾರಿ ಶಾಲೆಗೆ ಕಾಂಪೌಂಡ್ ನಿರ್ಮಾಣಕ್ಕೆ ಹಣವಿಲ್ಲವೆಂದು ಕೈತೊಳೆದುಕೊಂಡಿರುವ ತುಮಕೂರು ಜಿಲ್ಲಾಡಳಿತಕ್ಕೆ ಸಾರ್ವಜನಿಕರಿಂದ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ಕೊಡುವ ಬಗ್ಗೆ ವಿವಿಧ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತುಮಕೂರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ತುಮಕೂರು ಜಿಲ್ಲೆ ತುಮಕೂರು ತಾಲ್ಲೂಕು, ಬೆಳಧರ ಶಾಲೆಯು ಸ್ವತಂತ್ರ ಪೂರ್ವದಲ್ಲಿಯೇ ಪ್ರಾರಂಭವಾದ ಶಾಲೆಯಾಗಿದ್ದು, ಸುಮಾರು 10–15 ಹಳ್ಳಿಗಳ ಕೃಷಿಕರ, ಬಡ ಅಲ್ಪಸಂಖ್ಯಾತ ಮಕ್ಕಳು, ಪರಿಶಿಷ್ಟಜಾತಿ ಪಂಗಡದ ಅತೀ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಯಾಗಿದ್ದು ಕೋರಾ ಹೋಬಳಿಯಲ್ಲಿಯೇ ಅತಿಹೆಚ್ಚು ಮಕ್ಕಳನ್ನು ಹೊಂದಿರುವ ಕನ್ನಡ ಶಾಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಹಿಂದೆ ಸ್ವತಂತ್ರ ಪೂರ್ವದಲ್ಲಿ ಪ್ರಾರಂಭವಾದ ಶಾಲೆಗೆ ಆಟದ ಮೈದಾನ ಇಲ್ಲವೆಂದು ಮನಗಂಡ ಅಂದಿನ ಸರ್ಕಾರ ಶಾಲೆಗೆ ಲಗತ್ತಾಗಿದ್ದ 2 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡು ಶಾಲಾ ಆಟದ ಮೈದಾನಕ್ಕೆಂದು 1959ರಲ್ಲಿಯೇ ಗ್ರಾಮಠಾಣಾಗೆ ಲಗತ್ತು ಮಾಡಿ ಶಾಲೆಯ ಸ್ವಾಧೀನಕ್ಕೆ ಅಂದರೆ ಮಕ್ಕಳ ಶೈಕ್ಷಣಿಕೆ ಚಟುವಟಿಕೆಗಳು ಮತ್ತು ಮಕ್ಕಳ ಪಠ್ಯೇತರ ಚಟುವಟಿಕೆಗಳಿಗೆ ಅನುಕೂಲ ಆಗುವಂತೆ ಶಾಲಾ ಸುಪರ್ಧಿಗೆ ಕೊಟ್ಟಿತ್ತು.…
ಕೊರಟಗೆರೆ : ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿ ಅರ್ಹ ಫಲಾನುಭವಿಗಳಿಗೂ ತಲುಪಿಸುವ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಲಾಗುವುದು ಎಂದು ಕೊರಟಗೆರೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅದ್ಯಕ್ಷ ಬಿ.ಸಿ.ವೆಂಕಟೇಶ್ಮೂರ್ತಿ ತಿಳಿಸಿದರು. ಅವರು ಕೊರಟಗೆರೆ ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಸಮಿತಿಯ ನೂತನ ಆಡಳಿತ ಕಚೇರಿಯನ್ನು ಪ್ರಾರಂಭಿಸಿ ಮಾತನಾಡಿ, ಸರ್ಕಾರದ ಗೃಹ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್ ರವರ ಮಾರ್ಗದರ್ಶನದಲ್ಲಿ ಈ ಅನುಷ್ಠಾನ ಸಮಿತಿಯು ಕಾರ್ಯನಿರ್ವಹಿಸಲಿದ್ದು, ನನ್ನೊಂದಿಗೆ 15 ಉಪಾಧ್ಯಕ್ಷರನ್ನು ಈ ಸಮಿತಿಯಲ್ಲಿ ನೇಮಕ ಮಾಡಿದ್ದು, ನಾವೆಲ್ಲರು ಒಟ್ಟುಗೂಡಿ ಈ ಕಾರ್ಯಕ್ರಮಕ್ಕೆ ಯಾವುದೇ ಕುಂದು–ಕೊರತೆ ಬಾರದಂತೆ ನಿಷ್ಠೆಯಿಂದ ಕೆಲಸ ಮಾಡುತ್ತೇವೆ ಎಂದರು. ತಹಶೀಲ್ದಾರ್ ಮಂಜುನಾಥ್ ಮಾತನಾಡಿ, ಸರ್ಕಾರವು ಜಾರಿಗೊಳಿಸಿರುವ 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ವೆಂಕಟೇಶ್ ಮೂರ್ತಿ ರವರ ಅಧ್ಯಕ್ಷತೆಯಲ್ಲಿ 15 ಉಪಾಧ್ಯಕ್ಷರ ಸಮಿತಿಯನ್ನು ಸರ್ಕಾರವು ರಚನೆ ಮಾಡಿದ್ದು, ಈ ಸಮಿತಿಗೆ ತಾಲ್ಲೂಕು ಆಡಳಿತ ಸೇರಿದಂತೆ ವಿವಿದ ಇಲಾಖೆಗಳು ಸಹಕಾರ ನೀಡಲಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ…
ತುಮಕೂರು: ಬೆವಿಕಂ ಶಿರಾ ಉಪ ವಿಭಾಗದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 22ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶಿರಾ ನಗರ, ಯಲಿಯೂರು, ಮದಲೂರು, ಬಂದಕುಂಟೆ, ಕೊಟ್ಟ, ಭೂವನಹಳ್ಳಿ, ಗೌಡಗೆರೆ, ಲಕ್ಷ್ಮೀಮಸಾಗರ ಪಂಚಾಯತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಈ. ಶಾಂತರಾಜು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಚೇಳೂರು-ತುಮಕೂರು ಮಾರ್ಗದ ಮುಖ್ಯ ರಸ್ತೆಯ ದುಸ್ಥಿತಿ ನೋಡಿದರೆ “ರಸ್ತೆ ಗುಂಡಿಯೊಳಗೋ, ಗುಂಡಿಯೇ ರಸ್ತೆಯೋ” ಅಂತ ತಿಳಿಯದೇ ಸಾರ್ವಜನಿಕರು ಪರದಾಡುವಂತಹ ಸ್ಥಿತಿ ಕಂಡು ಬರುತ್ತದೆ. ರಸ್ತೆಯಾದ್ಯಂತ ಗುಂಡಿಗಳೇ ಕಾಣುತ್ತಿದ್ದು, ವಾಹನ ಸವಾರರು ಸುಗಮ ಸಂಚಾರಕ್ಕೆ ಪರದಾಡುವಂತಾಗಿದೆ. ಈ ಮಾರ್ಗದಲ್ಲಿ ದಿನನಿತ್ಯ ಸಂಚರಿಸುವವರಿಗೆ ಈ ಗುಂಡಿಮಯ ರಸ್ತೆ, ಅಕ್ಷರಶಃ ನರಕ ತೋರಿಸುತ್ತದೆ. ಈ ರಸ್ತೆಯಲ್ಲಿ ಪ್ರಯಾಣಿಸುವ ಸಾರ್ವಜನಿಕರು ರಸ್ತೆ ಅವ್ಯವಸ್ಥೆ ಸರಿಪಡಿಸದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಾ ಸಂಚರಿಸುತ್ತಿದ್ದಾರೆ. ಪ್ರತಿನಿತ್ಯ ಇಲ್ಲಿ ಸಣ್ಣಪುಟ್ಟ ಅಪಘಾತಗಳು ನಡೆಯುತ್ತಲೇ ಇರುತ್ತವೆ, ದ್ವಿಚಕ್ರವಾಹನ ಸವಾರರ ಪಾಡಂತೂ ಹೇಳತೀರದು ಎನ್ನುವಂತಾಗಿದೆ. ಗುಂಡಿಗಳಿಂದಾಗಿ ಅಪಘಾತಗಳು ಹೆಚ್ಚಳವಾಗುತ್ತಿವೆ. ಸರಕು ಮತ್ತು ಪ್ರಯಾಣಿಕರ ವಾಹನಗಳು ಗುಂಡಿಗಳಿಂದಾಗಿ ಹಾನಿಗೊಳಗಾಗುತ್ತಿವೆ. ಸುಗಮ ಸಂಚಾರ ಸಾಧ್ಯವಾಗದೇ ಸಾರ್ವಜನಿಕರು ಕಿರಿಕಿರಿ ಅನುಭವಿಸುತ್ತಿದ್ದಾರೆ. ಗುಂಡಿಮಯ ರಸ್ತೆಯಲ್ಲಿ ಧೂಳಿನ ಮಳೆಯೇ ಸುರಿಯುವಂತೆ ಧೂಳು ಕಂಡು ಬಂದಿದೆ. ಸಂಬಂಧಿತ ಪ್ರಾಧಿಕಾರಗಳಾದ ಪಿಡಬ್ಲ್ಯೂಡಿ (PWD) ಮತ್ತು ಸ್ಥಳೀಯ ಆಡಳಿತ ಇಷ್ಟೆಲ್ಲ ಸಮಸ್ಯೆಗಳ ಅರಿವಿದ್ದರೂ, ಜಾಣ ಕುರುಡು ವಹಿಸಿದ್ದಾರೆ. ಈ ರಸ್ತೆ ಸಮಸ್ಯೆಯ ವಿರುದ್ಧ ಜನ ರಸ್ತೆಗಿಳಿಯದೇ…
ಬೆಂಗಳೂರು: ರಾಜ್ಯದಲ್ಲಿ ಏನೇ ಆದರೂ ನಾನೇ ಕಾರಣನಾ? ಬಿಜೆಪಿಯವರ ಮನೆಯಲ್ಲಿ, ಪಕ್ಷದಲ್ಲಿ ಅಷ್ಟೇ ಯಾಕೆ, ಅವರ ಹೊಟ್ಟೆ ಒಳಗೆ ಏನಾದ್ರೂ ನಾನೇ ಕಾರಣನಾ? ಎಂದು ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಆಕ್ಷೇಪಾರ್ಹ ಪದಬಳಕೆ ಸಂಬಂಧ ಮಾತನಾಡಿದ ಅವರು, ಅವರ ಪಕ್ಷ, ಅವರ ಮುಖಂಡರ ಸಂಸ್ಕ್ರತಿ ಏನು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಪೊಲೀಸ್ ಉಂಟು, ಕೋರ್ಟ್ ಉಂಟು, ಅಪರಾಧ ಉಂಟು. ರಾಜ್ಯದಲ್ಲಿ ಏನೇ ಆದರೂ ನಾನೇ ಕಾರಣ, ಅವರ ಪಕ್ಷ, ಹೊರಗಡೆ, ಮನೆ, ಹೊಟ್ಟೆ ಒಳಗೆ ಏನಾದ್ರೂ ಎಲ್ಲದಕ್ಕೂ ನಾನೇ ಕಾರಣ. ನನ್ನ ನೆನಸಿಕೊಂಡಿಲ್ಲ ಅಂದ್ರೆ ಅವರಿಗೆ ನಿದ್ದೆ ಬರಲ್ಲ ಎಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನಿಗೆ, ಕೋರ್ಟ್ಗೆ ಏನು ಗೌರವ ಕೊಡಬೇಕೊ ಕೊಡುತ್ತೇವೆ. ಕೋರ್ಟ್ ಏನು ಬೇಕೋ ನಿರ್ಧಾರ ತೆಗೆದುಕೊಳ್ಳುತ್ತೆಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಮಾತನಾಡಿದ್ದು ಸರೀನಾ ಎಂದು ಕೇಳಿ? ಅವರ ಭಾಷೆ, ಸಂಸ್ಕ್ರತಿಯಿಂದ ಹರುಕು ಬಾಯಿ ಎನ್ನುವುದು ಗೊತ್ತಾಗಿದೆ. ಈ ಹಿಂದೆ ಜಯಮಾಲಾಗೂ ಮಾತಾಡಿದ್ರು, ಸಿಎಂ…