Author: admin

ಹಿರಿಯೂರು:  ಖಾಸಗಿ ಬಸ್ಸೊಂದು ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಗುಯಿಲಾಳ್ ಟೋಲ್ ಬಳಿ ಶನಿವಾರ ಬೆಳಗ್ಗೆ  ನಡೆದಿದೆ. ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಖಾಸಗಿ ಬಸ್ ನ ಟಯರ್ ಸ್ಫೋಟಗೊಂದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.  ಬೆಂಕಿ ಹತ್ತಿಕೊಂಡ ತಕ್ಷಣವೇ ಎಚ್ಚೆತ್ತ ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಇದರಿಂದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ. ಖಾಸಗಿ ಬಸ್ಸು ದಾವಣಗೆರೆಯಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿತ್ತು. ಬಸ್ ನಲ್ಲಿ ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ಬಂಧನವಾಗಿ ಕೋರ್ಟ್ ಆದೇಶದಂತೆ ಬಿಡುಗಡೆಯಾಗಿದ್ದಾರೆ. ಬಿಡುಗಡೆಯ ಬಳಿಕ ಅಂದು ನಡೆದ ಘಟನೆಯೇನು ಎಂಬ ಬಗ್ಗೆ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಸಿ.ಟಿ.ರವಿ ಮಾತನಾಡಿದರು. ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಮುಗಿದ ಮೇಲೆ ಅಂಬೇಡ್ಕರ್ ವಿಚಾರವಾಗಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪೊಲೀಸರು ಬಂದು ನನ್ನನ್ನು ಪ್ರತ್ಯೇಕವಾಗಿ ಬಂಧಿಸಿದರು. ಬಂಧನ ಬಳಿಕ ಖಾನಾಪುರ ಠಾಣೆಗೆ ಕರೆದೊಯ್ದಿದ್ದರು. ಅಲ್ಲಿಂದ, ಪೊಲೀಸರು ರಾತ್ರಿವಿಡೀ ಸವದತ್ತಿ, ರಾಮದುರ್ಗ, ನಂದಗಡ, ಕಿತ್ತೂರು ಸೇರಿದಂತೆ ಸುಮಾರು 420 ಕಿಮೀ ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸುತ್ತಾಡಿಸಿದ್ದಾರೆ. ರಾತ್ರಿಯಿಡೀ ನನ್ನನ್ನು ಕಾರಿನಲ್ಲಿ ಕೂರಿಸಿಕೊಂಡು ಸುತ್ತಾಡುವಾಗ ಪೊಲೀಸರಿಗೆ ಕರೆಗಳು ಬರುತ್ತಿದ್ದು, ಆದೇಶಗಳನ್ನು ನೀಡಲಾಗುತ್ತಿತ್ತು, ಪೊಲೀಸರಿಗೆ ನಾನು ಪದೇ ಪದೇ ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೀರಿ ಎಂದು ಕೇಳಿದರೆ ಸರಿಯಾಗಿ ಉತ್ತರ ಕೊಡುತ್ತಿರಲಿಲ್ಲ. ಏನೋ ಪಿಸುಪಿಸು ಮಾತನಾಡುತ್ತಿದ್ದರು. ನನ್ನ ತಲೆಗೆ ಪೆಟ್ಟಾಗಿದ್ದರಿಂದ ತಲೆ ಸುತ್ತು ಬಂದಂತೆ, ವಾಂತಿ ಬಂದಂತೆ ಆಗುತ್ತಿತ್ತು.…

Read More

ಬೆಂಗಳೂರು:  ನೆಲಮಂಗಲದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ  ಕಾರಿನಲ್ಲಿದ್ದ 6 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.  ಕಾರ್‌ನ ಮೇಲೆ ಕಂಟೇನರ್‌ ಲಾರಿ ಉರುಳಿ ಬಿದ್ದ ಪರಿಣಾಮ ಈ ಅಪಘಾತ ಸಂಭವಿಸಿದೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್‌ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುಮಕೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವವರಿಗೆ ಕರ್ನಾಟಕ ರಣಧೀರರ ವೇದಿಕೆ (ರಿ.) ಕೊಡಮಾಡುವ ರಾಣಿಚೆನ್ನಭೈರಾದೇವಿ ಪ್ರಶಸ್ತಿ– 2024ಕ್ಕೆ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್‌ ಜಮ್‌ ಭಾಜನರಾಗಿದ್ದಾರೆ. ಕನ್ನಡ ನಾಡು–ನುಡಿ, ನೆಲ, ಜಲ, ಭಾಷೆ, ಸಾಹಿತ್ಯ ಹಾಗೂ ಸಮಾಜಸೇವೆಯಲ್ಲಿ ಸೇವೆ ಸಲ್ಲಿಸಿರುವವರಿಗೆ ಈ ಪ್ರಶಸ್ತಿ ನೀಡಲಾಗುವುದು. ಇತ್ತೀಚೆಗೆನೆಲಮಂಗಲದಲ್ಲಿ ನಡೆದ 5ನೇ ವರ್ಷದ ಕನ್ನಡರಾಜ್ಯೋತ್ಸವ ಹಾಗೂ ಭುವನೇಶ್ವರಿ ಹಬ್ಬ ಮತ್ತು ಹೊಯ್ಸಳ ವಿಶಿಷ್ಟ ಸೇವಾ ಪುರಸ್ಕಾರ 2024ರ ಸಮಾರಂಭದಲ್ಲಿ ಪ್ರಶಸ್ತಿ ನೀಡಿಗೌರವಿಸಲಾಯಿತು. ಕರ್ನಾಟಕ ರಣಧೀರರ ವೇದಿಕೆ (ರಿ.) ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ತಿಮ್ಮಪ್ಪಗೌಡ ಕೆ.ಎಸ್.,ಮತ್ತಿತರಗಣ್ಯರು ಈ ಸಂದರ್ಭ ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಬೆಸ್ಕಾಂ ಗ್ರಾಮೀಣ ಉಪವಿಭಾಗ–1ಕ್ಕೆ ಸಂಬಂಧಿಸಿದಂತೆ ನಗರದ ಕೋತಿ ತೋಪು ಹೊರಪೇಟೆ ವೃತ್ತದಲ್ಲಿ ಡಿಸೆಂಬರ್ 21ರ ಮಧ್ಯಾಹ್ನ 3 ಗಂಟೆಗೆ ಗ್ರಾಹಕ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ಕೋರಾ, ಸಿಟಿ ಕೆರೆ, ಬೆಳ್ಳಾವಿ ಶಾಖೆ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಹಕರು ಸಂವಾದ ಸಭೆಯಲ್ಲಿ ಪಾಲ್ಗೊಂಡು ತಮ್ಮ ದೂರು ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ಜಯನಗರದಲ್ಲಿಂದು ಗ್ರಾಹಕ ಸಂವಾದ ಸಭೆ ತುಮಕೂರು:  ಬೆಸ್ಕಾಂ ನಗರ ಉಪವಿಭಾಗ-2ಕ್ಕೆ ಸಂಬಂಧಿಸಿದಂತೆ ನಗರದ ಜಯನಗರದಲ್ಲಿರುವ ಉಪವಿಭಾಗ ಕಚೇರಿಯಲ್ಲಿ ಡಿಸೆಂಬರ್ 21ರ ಮಧ್ಯಾಹ್ನ 3 ಗಂಟೆಗೆ ಗ್ರಾಹಕ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೆಹಬೂಬ್ ಷರೀಫ್ ತಿಳಿಸಿದ್ದಾರೆ. ಎಸ್.ಎಸ್.ಪುರಂ, ಸರಸ್ವತಿ ಪುರಂ, ಜಯನಗರ ಹಾಗೂ ಸುತ್ತಮುತ್ತಲಿನ ಗ್ರಾಹಕರು ಸಂವಾದ ಸಭೆಯಲ್ಲಿ ಪಾಲ್ಗೊಂಡು ತಮ್ಮ ಕುಂದು–ಕೊರತೆ ಸಲ್ಲಿಸಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು:  ಭಾರತ ಸರ್ಕಾರದ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕರ ಕುಂದುಕೊರತೆಗಳ ಇಲಾಖೆ ವತಿಯಿಂದ ಡಿಸೆಂಬರ್ 24ರವರೆಗೆ “ಸುಶಾಸನ ಸಪ್ತಾಹ–ಪ್ರಶಾಸನ ಗ್ರಾಮಗಳ ಕಡೆಗೆ” ಎಂಬ ಅಭಿಯಾನವನ್ನು ಕೈಗೊಳ್ಳುವಂತೆ ನಿರ್ದೇಶಿಸಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 23ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅಭಿಯಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ವತಿಯಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಮಟ್ಟದಲ್ಲಿ ವಿಶೇಷ ಶಿಬಿರ/ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಇದರಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಹಾಗೂ ಉತ್ತಮ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಕಾರ್ಯಾಗಾರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರವು ಉತ್ತಮ ಆಡಳಿತ ನೀಡುವ ಬಗ್ಗೆ ತಮ್ಮ ಸಲಹೆಗಳನ್ನು ನೀಡಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು:  ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ಪ್ಯಾಕೇಜ್-ವಿಶೇಷ ಘಟಕ/ಗಿರಿಜನ ಉಪಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತೀ ಸಣ್ಣ ಘಟಕಗಳ ಸ್ಥಾಪನೆಗೆ ಸಹಾಯಧನ ಸೌಲಭ್ಯ ಕಲ್ಪಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಪ.ಜಾತಿ/ಪ.ಪಂಗಡ ಉದ್ದಿಮೆದಾರರು/ಫಲಾನುಭವಿಗಳು ಮಾರ್ಗಸೂಚಿಯನ್ವಯ ಪೂರ್ಣ ಪ್ರಮಾಣದ ಪ್ರಸ್ತಾವನೆಯನ್ನು ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ‘ನಾಗನಿಲಯ’, 5ನೇ ಮುಖ್ಯ ರಸ್ತೆ, ಸಿದ್ದಗಂಗಾ ಬಡಾವಣೆ, ತುಮಕೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0816–2275370ಯನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 21 ಮತ್ತು 22ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಡಿಸೆಂಬರ್ 21ರಂದು ಅಂಕಸಂದ್ರ, ದೊಡ್ಡಗುಣಿ, ಚೇಳೂರು, ಹೊಸಕೆರೆ, ಹಾಗಲವಾಡಿ, ಊರ್ಡಿಗೆರೆ ಉಪಸ್ಥಾವರದ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮ ಹಾಗೂ ಡಿಸೆಂಬರ್ 22ರಂದು ಸಿಟಿ ಕೆರೆ, ಮೆಳೆಕೋಟೆ, ಬೆಳಧರ, ಕೋರಾ, ತುಮಕೂರು ಉಪಸ್ಥಾವರದ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಶ್ರವಣಬೆಳಗೊಳದ ಶ್ರೀ ದಿಗಂಬರ ಜೈನ ಮಠದ ಪೀಠಾಧ್ಯಕ್ಷರಾದ ತುಮಕೂರು ನಗರಕ್ಕೆ  ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಗಮಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶೋಭಾಯಾತ್ರೆಗೆ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಜಿ ಚಾಲನೆ ನೀಡಿದರು. ಮಹಾವೀರ ಭವನದ ಬಳಿಯಿಂದ ಹೊರಟ ಶೋಭಾಯಾತ್ರೆಯಲ್ಲಿ ಸ್ವಾಮೀಜಿ ಅವರನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿದರು. ಮಹಿಳೆಯರು ಪೂರ್ಣ ಕುಂಭ ಕಳಸ ಹೊತ್ತು ಸಾಗಿದರು. ವಾದ್ಯ ವೃಂದ, ಹಾಗೂ ಜೈನ ಸಮುದಾಯದವರು ಪಾಲ್ಗೊಂಡಿದ್ದರು. ಶೋಭಯಾತ್ರೆಯು ಎಂ.ಜಿ. ರಸ್ತೆ, ಗುಂಚಿ ಚೌಕ, ಚರ್ಚ್ ಸರ್ಕಲ್, ಮಂಡಿಪೇಟೆ ಸರ್ಕಲ್ ಮಾಗವಾಗಿ ಪಾಶ್ವನಾಥ ದಿಗಂಬರ ಜಿನಮಂದಿರ ತಲುಪಿತು. ಜಿನಮಂದಿರದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಪೂಜಾದಿಗಳನ್ನು ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್. ಚಲುವರಾಯಸ್ವಾಮಿ, ಜಗದ ಮೂಲೆಮೂಲೆಗೂ ಕನ್ನಡದ ವಾಣಿ ಹರಡಲಿ. ಕನ್ನಡ ಭಾಷೆಯನ್ನು ಪ್ರೇಮಿಸಬೇಕು. ನೆಲ, ಜಲದ ಉಳಿವಿಗಾಗಿ ಒಟ್ಟಾಗಿ ನಿಲ್ಲಬೇಕು. ಎಲ್ಲೇ ಇದ್ದರು ಕನ್ನಡಿಗರಾಗಿ ನಾಡಿನ ಏಳಿಗೆಗೆ ಶ್ರಮಿಸೋಣ ಎಂದು ಹೇಳಿದರು. ಎರಡು ಸಾವಿರ ವರ್ಷಕ್ಕಿಂತ ಹೆಚ್ಚು ಇತಿಹಾಸವಿರುವ ಕನ್ನಡ ಭಾಷೆಗೆ ಸಾಕಷ್ಟು ಇತಿಹಾಸವಿದೆ. ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಎಂದರೆ ಅದು ನಮ್ಮ ಮಂಡ್ಯ. ಗ್ರಾಮೀಣ ಸೊಗಡನ್ನು ಮೈಗೂಡಿಸಿಕೊಂಡಿರುವ ಮಂಡ್ಯ ಜಿಲ್ಲೆ ಸಾಹಿತ್ಯ ಕ್ಷೇತ್ರಕ್ಕೂ ದೊಡ್ಡ ಕೊಡುಗೆ ನೀಡಿದೆ ಎಂದರು. ಬಿ.ಎಂ.ಶ್ರೀಕಂಠಯ್ಯ, ಕೆ.ಎಸ್.ನರಸಿಂಹಸ್ವಾಮಿ, ಪು.ತಿ.ನರಸಿಂಹಾಚಾರ್, ಭಾಷಾತಜ್ಞ, ಸಂಶೋಧಕ ವೆಂಕಟಸುಬ್ಬಯ್ಯ, ಸೀತಾಸುತ, ಜಾನಪದ ತಜ್ಞ ಡಾ. ಎಚ್.ಎಲ್.ನಾಗೇಗೌಡರು, ಬೊಮ್ಮರಸೇಗೌಡ ಅವರಂತಹ ಅನೇಕ ಶ್ರೇಷ್ಠ ಸಾಹಿತಿಗಳನ್ನು ನಾಡಿಗೆ ಕೊಟ್ಟಿರುವ ಜಿಲ್ಲೆ ಮಂಡ್ಯ. ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ಹೊಂದಾಣಿಕೆ…

Read More