Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು. ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು. ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ…
ಕೊರಟಗೆರೆ: ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದಲ್ಲಿ ಸಮದಾಯ ಭವನ ಶಿಥಿಲಾವಸ್ಥೆಯಲ್ಲಿ ನಿಂತಿದೆ. ಸುಮಾರು ವರ್ಷಗಳಿಂದ ಪಾಳು ಬಿದ್ದ ಸಮುದಾಯ ಭವನದ ಪುನಶ್ಚೇತನ ಯಾವಾಗ ಅಂತ ಇಲ್ಲಿನ ಸಾರ್ವಜನಿಕರು ಪ್ರಶ್ನಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಸಮುದಾಯ ಭವನ ಬಾಳು ಬಿದ್ದಿದೆ ಎಂದು ಆರೋಪಿಸಿದ್ದಾರೆ. ಪುನಶ್ಚೇತನ ಇಲ್ಲದೇ ಕುಡುಕರ ಅಡ್ಡೆಯಾದ ಸಮುದಾಯ ಭವನದ ಉದ್ದಾರ ಯಾವಾಗ ಅಂತ ಜನ ಪ್ರಶ್ನೆ ಮಾಡುತ್ತಿದ್ದಾರೆ. ನೇಗಲಾಲ ಗ್ರಾಮದ ಸಮುದಾಯ ಭವನ ಕುಡುಕರ ಅನೈತಿಕ ಚಟುವಟಿಕೆಗಳ ಅಡ್ಡೆಯಾಗಿದ್ದು, ಎಲ್ಲಿ ನೋಡಿದರೂ ಕಸ ಕಸ ಕಸ..?ಮೇಲ್ಚಾವಣಿ ಇಲ್ಲದೆ ಸೊರಗುತ್ತಿದೆ. ಗ್ರಾಮದ ನರಸಿಂಹಸ್ವಾಮಿ ಮತ್ತು ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿರುವ ಸಮುದಾಯ ಭವನದ ಕಥೆ ಇದಾಗಿದೆ. ವಿಶ್ವ ಬ್ಯಾಂಕ್ ನೆರವಿನ ಯೋಜನೆ ಅನುದಾನದಲ್ಲಿ ನಿರ್ಮಾಣವಾಗಿದ್ದ ಸಮುದಾಯ ಭವನ ಈಗ ಕುಡುಕರ ಅಡ್ಡೆಯಾಗಿದೆ. ಸಮುದಾಯ ಭವನದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಪಡಿಸಿ ಗ್ರಾಮದ ಬಡವರಿಗೆ ಅನುಕೂಲ ಮಾಡಿಕೊಡಬೇಕೆಂದು ಗ್ರಾಮ ಪಂಚಾಯತಿ…
ಬೆಳಗಾವಿ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಮಾಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷಮೆ ಕೇಳಬೇಕು ಎಂದು ನಡೆಯುತ್ತಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಳಗಾವಿಯ ಅಂಬೇಡ್ಕರ್ ಗಾರ್ಡನ್ ನಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು. ಸ್ಥಳಕ್ಕೆ ತೆರಳಿದ ಮಾಜಿ ಸಚಿವ ಸಿ.ಸಿ.ಪಾಟೀಲ್, ಶಾಸಕರಾದ ಡಾ.ವಿ.ಐ.ಪಾಟೀಲ್, ಹೆಚ್.ಎಸ್.ಶಿವಶಂಕರ್ ಅವರು, ಪ್ರತಿಭಟನಾನಿರತ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೀಸಲಾತಿ ವಿಷಯದಲ್ಲಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 21ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದಾರೆ. ಹೀಗಾಗಿ ನಮ್ಮ ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದೇವೆ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ ಎಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿ ಟಿ ರವಿಯವರು ಮಾತನಾಡಿದ್ದು ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು. ಸದನದಲ್ಲಿ ಪ್ರಶ್ನೋತ್ತರ ವೇಳೆ ಮುಗಿದ ಬಳಿಕ, ಕಾಂಗ್ರೆಸ್ನವರು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆಗೆ ಮುಂದಾದರು. ಈ ವೇಳೆ ಗಲಾಟೆ ಆಯ್ತು, ಗಲಾಟೆ ಹಿನ್ನೆಲೆ ಕಲಾಪ ಮುಂದೂಡಿದ್ವಿ. ಅವಾಗ ಇದೆಲ್ಲ ಗಲಾಟೆ ಆಗಿದೆ. ಸಂಜೆ 6 ಗಂಟೆಗೆ ಸಿಟಿ ರವಿ ಬಂಧನವಾಗಿರುವ ಬಗ್ಗೆ ಮಾಹಿತಿ ಬಂತು ಎಂದರು. ನಮ್ಮತುಮಕೂರಿನ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ. ಬೆಳಗಾವಿ ಕೋರ್ಟ್ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದ ಹಿನ್ನೆಲೆ ಸಿಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್ಸಿ ಕೋರ್ಟ್ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿಯನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಸಿಟಿ ಕಾರನ್ನು ಹಿಂಬಾಲಿಸಿಕೊಂಡು ಬರುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಳಗಾವಿ: ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣದ ಸತ್ಯಾಂಶ ಹೊರತರಲು ನ್ಯಾಯಾಂಗ ತನಿಖೆಗೆ ಆದೇಶಿಸಲು ಸರ್ಕಾರ ಸಿದ್ಧವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ. ನಾನು ತಪ್ಪಿತಸ್ಥನೆಂದು ಕಂಡುಬಂದರೆ, ಯಾವುದೇ ಕ್ರಮವನ್ನು ಎದುರಿಸಲು ನಾನು ಸಿದ್ಧನಿದ್ದೇನೆ, ತಪ್ಪಿತಸ್ಥರನ್ನು ಉಳಿಸುವ ಪ್ರಶ್ನೆಯೇ ಇಲ್ಲ ಎಂದು ದಿನೇಶ್ ಹೇಳಿದರು. ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ನವೆಂಬರ್ 9, 10 ಮತ್ತು 11 ರಂದು ಒಟ್ಟು 34 ಸಿಸೇರಿಯನ್ ಹೆರಿಗೆಗಳನ್ನು ನಡೆಸಲಾಯಿತು. ಈ ಪೈಕಿ ಏಳು ಮಹಿಳೆಯರು ತೀವ್ರ ಅಸ್ವಸ್ಥರಾಗಿದ್ದರು ಮತ್ತು ಅವರಲ್ಲಿ ಐವರು ಸಾವನ್ನಪ್ಪಿದರು. ಕೂಡಲೇ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವೈದ್ಯರ ತಂಡವನ್ನು ಬಳ್ಳಾರಿಗೆ ಕಳುಹಿಸಲಾಯಿತು. ಈ ತಂಡವು ನವೆಂಬರ್ 14 ರಂದು ತನ್ನ ವರದಿಯನ್ನು ಸಲ್ಲಿಸಿತು, ಆಸ್ಪತ್ರೆಯಲ್ಲಿ ವೈದ್ಯರು ಎಲ್ಲಾ ನಿಯಮಗಳನ್ನು ಅನುಸರಿಸಿದ್ದಾರೆ ಮತ್ತು ಅವರ ಕಡೆಯಿಂದ ಯಾವುದೇ ನಿರ್ಲಕ್ಷ್ಯವಾಗಿಲ್ಲ ಎಂದು ಕಂಡುಹಿಡಿದಿದೆ. ಸಿಸೇರಿಯನ್ ನಂತರ ತಾಯಂದಿರಿಗೆ ನೀಡಲಾದ ರಿಂಗರ್ಸ್ ಲ್ಯಾಕ್ಟೇಟ್ IV ದ್ರವದ ಪ್ರತಿಕೂಲ…
ಬೆಂಗಳೂರು: ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದನ್ನು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಖಂಡಿಸಿದ್ದು, ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವುದು ಕಳವಳಕಾರಿ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಬೀದರ್: ಔರಾದ ತಾಲೂಕಿನ ಕೌಠ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಿಲ ಕುಮಾರ ಕುಲಕರ್ಣಿ ಅವರನ್ನು ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಕೌಠ (ಬಿ) ಗ್ರಾಮ ಪಂಚಾಯತ್ ಅಧ್ಯಕ್ಷ ರವಿನಾ ಗೌತಮ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ. ಪಿಡಿಒ ಅವರು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವ ವಸತಿ ಯೋಜನೆಯ ಸುಮಾರು 84 ಮನೆಗಳು ಹಾಗೂ PMAY ಆವಾಸ ಯೋಜನೆಯ 83 ಮನೆಗಳು ಮಂಜೂರಾದರು ಇಲ್ಲಿಯವರೆಗೆ ಗ್ರಾಮ ಸಭೆ ಕರೆಯದೆ ವಿಳಂಬ ನೀತಿ ಅನುಸರಿಸುದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮನೆಗಳ GPS ಮಾಡಿ ಹಣ ಬಿಡುಗಡೆ ಮಾಡಲು 4,000/ದಿಂದ 5000/-ಗಳನ್ನು ಫಲಾನುಭವಿಗಳಲ್ಲಿ ಬೇಡಿಕೆ ಇಡುತ್ತಿದ್ದಾರೆ. ಕೆಲವು ಖಾಲಿ ಚಕ್ ತಂದು ಅದರ ಮೇಲೆ ಸಹಿ ಮಾಡುವಂತೆ ಹೇಳುತ್ತಿದ್ದಾರೆ ಅವರ ಬಗ್ಗೆ ಪ್ರಶ್ನಿಸಿದರೆ ನಿಮಗೆ ತಿಳಿಯುವುದಿಲ್ಲ ಸಹಿ ಮಾಡಿ ಎಂದು ಹೇಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪ್ರತಿ ದಿನ ಪಂಚಾಯಿತಿಗೆ ಬರದಿರುವುದರಿಂದ ಸಾರ್ವಜನಿಕರ ಸಮಸ್ಯೆಗಳು ಹಾಗೇ ಉಳಿಯುತ್ತಿವೆ. ಇದರಿಂದ ಪಂಚಾಯತಿನ ಅಭಿವೃದ್ಧಿ ಕುಂಠಿತಗೊಂಡಿದೆ. ಇವರ…
ಬೀದರ್: ಜಿಲ್ಲೆಯ ಕಾರಂಜಾ ಯೋಜನೆಗಾಗಿ ಭೂಮಿ ಕಳೆದುಕೊಂಡು ನ್ಯಾಯಯುತ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿರುವ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸುವರ್ಣಸೌಧದ ಸಮಿತಿ ಕೊಠಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಸಚಿವ ರಹೀಂ ಖಾನ್, ಶಾಸಕರ ಉಪಸ್ಥಿತಿಯಲ್ಲಿ ಸಂತ್ರಸ್ತರ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಇದು ಹಲವು ವರ್ಷಗಳ ಹಿಂದಿನ ಸಮಸ್ಯೆಯಾಗಿದ್ದು ಈ ಬಗ್ಗೆ ಅಧ್ಯಯನ ನಡೆಸಲು ಸಮಿತಿ ರಚಿಸುವುದಾಗಿ ಸಿಎಂ ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪಾವಗಡ: ಪಟ್ಟಣದ ಹೊರ ವಲಯ ಚಳ್ಳಕೆರೆ ರಸ್ತೆ ಸಮೀಪದ ಜಮೀನೊಂದರಲ್ಲಿ ಗಂಡ ಹೆಂಡತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಶುಕ್ರವಾರ ಬೆಳಗ್ಗೆ 9 ಗಂಟೆಗೆ ನಡೆದಿದೆ. ಸಾಸಲಕುಂಟೆ ಸಮೀಪದ ವೆಂಕಟಮ್ಮನಹಳ್ಳಿ ಗ್ರಾಮದ ಗೋವಿಂದರೆಡ್ಡಿ ಮತ್ತು ಜ್ಯೋತಿ ಎನ್ನುವವರು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗೋವಿಂದ ರೆಡ್ಡಿಗೆ ಎರಡು ಮದುವೆಯಾಗಿದ್ದು, ಜ್ಯೋತಿ ಮೊದಲನೇ ಹೆಂಡತಿ ಎಂದು ಹೇಳಲಾಗುತ್ತಿದೆ, ಈತನ ಎರಡನೆಯ ಹೆಂಡತಿ ಲಕ್ಷ್ಮೀದೇವಿ ಎಂದು ತಿಳಿದು ಬಂದಿದ್ದು ಸದ್ಯ ಈಕೆ ಬೆಂಗಳೂರಿನಲ್ಲಿ ವಾಸವಿದ್ದಾಳೆ. ಪಾವಗಡ ಪಟ್ಟಣದ ಲಾಡ್ಜ್ ಒಂದರಲ್ಲಿ ರಾತ್ರಿ ಜ್ಯೋತಿ ಮತ್ತು ಗೋವಿಂದ ರೆಡ್ಡಿ ತಂಗಿದ್ದು ಬೆಳಗ್ಗೆ ಒಂಬತ್ತು ಗಂಟೆಯ ಸಂದರ್ಭದಲ್ಲಿ ಪಟ್ಟಣದ ಹೊರವಲಯದ ಜಮೀನ್ ಒಂದರ ಬಂಡೆಯ ಮೇಲೆ ಮದ್ಯಕ್ಕೆ ವಿಷವನ್ನು ಮಿಕ್ಸ್ ಮಾಡಿ ಕುಡಿದಿದ್ದು ಜ್ಯೋತಿ 9:30ರ ಸಂದರ್ಭದಲ್ಲಿ ಸಾವನ್ನಪ್ಪಿದ್ದರೆ ಕೊನೆ ಉಸಿರಿನಲ್ಲಿದ್ದ ಗೋವಿಂದ ರೆಡ್ಡಿಯನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ಪ್ರವಾನಿಸಿ ಚಿಕಿತ್ಸೆ ನೀಡಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಆತನೂ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ತುಮಕೂರು ಎ ಎಸ್ ಪಿ…