Author: admin

ತುಮಕೂರು: ರಾಯಚೂರು ಜಿಲ್ಲೆಯ ಮಲಿಯಾಬಾದ್ ಪ್ರದೇಶದಲ್ಲಿ ಕನ್ನಡದ ಅರಸ ಅಮೋಘ ವರ್ಷನ ಪ್ರಮುಖ ಶಿಲಾ ಶಾಸನವೊಂದು ಪತ್ತೆಯಾಗಿದೆ. ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಎಂ.ಕೊಟ್ರೇಶ್‌ ಅವರು ಕ್ಷೇತ್ರ ಕಾರ್ಯ ಮಾಡುವ ಸಂದರ್ಭದಲ್ಲಿ ಈ ಶಾಸನವು ಪತ್ತೆಯಾಗಿದೆ. ಆ ಪ್ರದೇಶದ ಗೋಶಾಲೆಯಲ್ಲಿ ಕೆಲಸ ಮಾಡುವ ರಾಜಸ್ಥಾನದ ಮುರಳಿ ಅವರು ಮಲಿಯಾಬಾದ್‌ ಕೋಟೆಯ ಆವರಣದಲ್ಲಿ ಮುಳ್ಳು ಕಂಟಿಗಳನ್ನು ಸ್ವಚ್ಛಗೊಳಿಸುವಾಗ ಈ ಶಾಸನವು ಕಂಡು ಬಂದಿದೆ. ಸಂಶೋಧನೆಯಿಂದ ಶಾಸನದ ವಿವರಗಳು ಬೆಳಕಿಗೆ ಬಂದಿವೆ ಎಂದು ಪ್ರೊ.ಎಂ.ಕೊಟ್ರೇಶ್ ತಿಳಿಸಿದ್ದಾರೆ. ಈ ಶಾಸನವು ರಾಷ್ಟ್ರಕೂಟರ ಅರಸ ಅಮೋಘ ವರ್ಷನ ಆಡಳಿತದ ಅವಧಿಯ ಅಂದರೆ ಸು.ಸಾ.ಶ. 850ರ ಸಂದರ್ಭದ್ದಾಗಿದ್ದು, ಇಪ್ಪತ್ತು ಸಾಲುಗಳನ್ನು ಒಳಗೊಂಡಿದೆ. “ಈ ಶಾಸನದಲ್ಲಿ ಬಲ್ಲಾಳೇಶ್ವರಪುರದ ಉಲ್ಲೇಖ ಬರುತ್ತದೆ. ಈ ಬಲ್ಲಾಳೇಶ್ವರಪುರ ಯಾವುದು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಪಲ್ಲವಾನ್ವಯ ಎಂಬ ವಿಷಯದ ಪ್ರಸ್ತಾಪವಿದ್ದು ತುಮಕೂರು ಜಿಲ್ಲೆಯ ಸಂಬಂಧವನ್ನು ತೋರಿಸುತ್ತದೆ. ತುಮಕೂರು ಜಿಲ್ಲೆಯ ಅಂಚಿನಲ್ಲಿರುವ ಹೆಂಜೆರು ಅಥವಾ ಹೇಮಾವತಿ ನೊಳಂಬರ ರಾಜಧಾನಿ ಈ ನೊಳಂಬರಿಗೆ…

Read More

ತುಮಕೂರು : ಇದೇ ತಿಂಗಳು 26 ರಂದು ನಡೆಯಲಿರುವ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನಾಸಮಾರಂಭ ಹಾಗೂ ಚಟುವಟಿಕೆಗಳ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಡಾ.ಬಾಲ ಗುರುಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಇದೇ ಸಂರದರ್ಭಲ್ಲಿ ಮಾತನಾಡಿದ ಅವರು, ಇದೇ ತಿಂಗಳ 26 ರಂದು ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ ಕಾರ್ಯಕ್ರಮವು ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷತೆಯನ್ನು ವಹಿಸಲಿದ್ದು, ಜಿಲ್ಲೆಯ ಮತ್ತೊಬ್ಬ ಸಚಿವರಾದ ಕೆ.ಎನ್.ರಾಜಣ್ಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ರಾಜ್ಯ ಚಲನಚಿತ್ರ ನಟಿ ಉಮಾಶ್ರೀ, ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಾದ ರೂಪಾ ಸಿಂಧೂರಿ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸಿ.ಇ.ಒ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್, ಇತರರು ಆಗಮಿಸಲಿದ್ದು, ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ಹರಿಕಥಾ ದಾಸರಾದ ಲಕ್ಷ್ಮಣ ದಾಸ್, ಚಲನಚಿತ್ರ ನಟ ಹನುಮಂತೇಗೌಡ, ಸಪ್ತಗಿರಿ ಕಾಲೇಜಿನ ಅಧ್ಯಕ್ಷರಾದ ಜಿ.ವಿ.ಕುಮಾರ್, ಇವರುಗಳನ್ನು ಸನ್ಮಾನ ಕಾರ್ಯಕ್ರಮ…

Read More

ತುಮಕೂರು:  ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಮಾತದಾನ ಅತ್ಯಂತ ಪ್ರಮುಖವಾಗಿದ್ದು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಯುವಜನತೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಆರ್. ಅಧಿಕಾರಿಗಳಿಗೆ ಸೂಚಿಸಿದರು. ನಗರದ ನಿರೀಕ್ಷಣಾ ಮಂದಿರ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ವಿವಿಧ ಶಿಕ್ಷಣ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವಕರು ಚುನಾವಣೆ ಸಂದರ್ಭಗಳಲ್ಲಿ ತಮ್ಮ ಕ್ಷೇತ್ರಗಳಿಗೆ ತೆರಳಿ ಮತದಾನ ಮಾಡಲು ಆಸಕ್ತಿ ತೋರದೆ ಇರುವುದರಿಂದ ಅವರು ಇರುವ ಸ್ಥಳಗಳಲ್ಲೇ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು. ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಯಡಿ ಸ್ವೀಕೃತವಾದ ಅರ್ಜಿಗಳು, ಮನೆ-ಮನೆ ಸಮೀಕ್ಷೆಯ ಪ್ರಗತಿ ಹಾಗೂ ಇ.ಪಿ.ರೇಷಿಯೋ, ಜೆಂಡರ್ ರೇಷಿಯೋ ಮುಂತಾದ ಮತದಾರರ ಪಟ್ಟಿಯ ಸಂಬಂಧ ಸಾಧಿಸಿರುವ ಪ್ರಗತಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರನ್ನು ನೋಂದಣಿ ಮಾಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಇ.ಪಿ. ರೇಷಿಯೋ ಮತ್ತು ಜೆಂಡರ್ ರೇಷಿಯೋ…

Read More

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಿಸೆಂಬರ್ 23ರ ಬೆಳಿಗ್ಗೆ 10 ಗಂಟೆಗೆ ನಗರದ ಬಿ.ಹೆಚ್.ರಸ್ತೆಯ ಶ್ರೀ ಸಿದ್ಧಗಂಗಾ ಪ್ರೌಢ ಶಾಲೆಯಲ್ಲಿ “ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ.ಮನಮೋಹನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ 5 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ವೈಯಕ್ತಿಕ ಮತ್ತು ಸಾಮೂಹಿಕ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಮಾವು(Mango) ಹೂ ಮತ್ತು ಕಾಯಿ ಕಟ್ಟುವ ಸಮಯದಲ್ಲಿ ಮಾವು ಬೆಳೆಗಾರರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ತೋಟಗಾರಿಕಾ ಇಲಾಖೆ ಸಲಹೆ ನೀಡಿದೆ. ಮಾವಿನಲ್ಲಿ ರೋಗ ಮತ್ತು ಕೀಟ ಬಾಧೆಯನ್ನು ತಡೆಗಟ್ಟಲು ಮಾವಿನ ತೋಟಗಳನ್ನು ಸ್ವಚ್ಚವಾಗಿ ಇಡಬೇಕು. ಮಾವಿನ ಗಿಡಗಳ ಬುಡದಲ್ಲಿ ಕಳೆಗಳನ್ನು ತೆಗೆಯಬೇಕು. ಹೂವು ಉದುರುವುದನ್ನು ತಡೆಗಟ್ಟಲು ಹೂವಿನ ಪ್ರಾರಂಭದ ಹಂತದಲ್ಲಿ ಪ್ರತಿ 25 ದಿನಕ್ಕೊಮ್ಮೆ ಪೊಟ್ಯಾಶಿಯಂ ನೈಟ್ರೇಟ್ (KNO3) 5 ಗ್ರಾಂ ಔಷಧಿಯನ್ನು 1 ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಬೇಕು. ಮಾವಿನ ಗಿಡದಲ್ಲಿ ಹೂ ಚೆನ್ನಾಗಿ ಕಚ್ಚಲು NAA (Planofix) ಸಸ್ಯ ಪ್ರಚೋದಕ 4 ಮಿ.ಲೀ. ಔಷಧಿಯನ್ನು 16 ಲೀ. ನೀರಿನಲ್ಲಿ ಬೆರೆಸಿ 15 ದಿನಗಳ ಅಂತರದಲ್ಲಿ 2 ಬಾರಿ ಸಿಂಪಡಿಸಬೇಕು. ಹೂವು ಮತ್ತು ಕಾಯಿ ಉದುರುವುದನ್ನು ತಡೆಗಟ್ಟಲು ಮಾವಿನ ಸ್ಪೆಷಲ್-05 ಗ್ರಾಂ ಔಷಧಿಯನ್ನು 1 ಲೀ. ನೀರಿನಲ್ಲಿ ಮಿಶ್ರಣ ಮಾಡಿ 25 ದಿನಕ್ಕೊಮ್ಮೆ 3 ಬಾರಿ ಸಿಂಪಡಣೆ ಮಾಡಬೇಕು. ಮಾವಿನ ಜಿಗಿ ಹುಳುವನ್ನು ಹತೋಟಿ ಮಾಡಲು ಬೇವಿನ ಎಣ್ಣೆ…

Read More

ತುಮಕೂರು:  ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 31, 32 ಹಾಗೂ 35ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಲು ಡಿಸೆಂಬರ್ 20ರಂದು ಸಂಜೆ 4 ಗಂಟೆಗೆ ಸಿದ್ಧರಾಮೇಶ್ವರ ಬಡಾವಣೆಯ ಶಿವ ಸುಬ್ರಮಣ್ಯ ಪಾರ್ಕ್ ನಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು,  ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್, ಯಶವಂತಪುರ ಮೆಟ್ರೋ ನಿಲ್ದಾಣ, ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶಿಶು ಆಹಾರ ಕೇಂದ್ರಗಳು ಇವೆ ಎಂದು ತಿಳಿಸಿದರು. ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಹಾಗೂ ಅಂಗವಿಕಲರಿಗೆ ಶೌಚಾಲಯಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಇದೇ ವೇಳೆ ಅವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪಾವಗಡ: ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ವತಿಯಿಂದ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕಣ್ಣಿಗೆ ಸಂಬಂಧ ಪಟ್ಟ ತೊಂದರೆಗಳಿಗೆ ಪರೀಕ್ಷೆಗಳನ್ನು ನಡೆಸಲಾಯಿತು. ಶಿಬಿರದಲ್ಲಿ ಕಣ್ಣಿಗೆ ಸಂಬಂಧಪಟ್ಟ ತೊಂದರೆಗಳಿಗೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದ 58 ರೋಗಿಗಳಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಶಿಬಿರದ ಕಾರ್ಯಕ್ರಮಕ್ಕೆ ಜನ ಶಿಕ್ಷಣ ಸಂಸ್ಥೆ ತುಮಕೂರು ನಿರ್ದೇಶಕರಾದ ಸುಕನ್ಯಾ ರವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಬ್ಯಾಂಕ್ ಕೌನ್ಸಿಲಿಂಗ್ ನಾಗಲಕ್ಷ್ಮಿ, ಸೇವಾ ಟ್ರಸ್ಟಿನ ಸಂಧ್ಯಾ, ಶಂಕರ ಕಣ್ಣಿನ ಆಸ್ಪತ್ರೆ ವೈದ್ಯರಾದ ಅನುರಾಧ, ಮೌನಿಕ, ಮೇಲ್ವಿಚಾರಕರಾದ ಹರೀಶ್, ಸಾರ್ವಜನಿಕ ಆಸ್ಪತ್ರೆಯ ಪವಿತ್ರ, ಮುಖಂಡರಾದ ಪ್ರಕಾಶ್ ರೆಡ್ಡಿ, ಅಮಿಲಿನೆನಿ ನರೇಶ್, ಕೃಷ್ಣಪ್ಪ, ತಿರುಮನಿ ಆಸ್ಪತ್ರೆ ರಮೇಶ್, ಮಂಜುನಾಥ, ಶಾಮಣ್ಣ, ಲೋಕೇಶ, ಇದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಪಾವಗಡ:  ತಾಲೂಕಿನ ವ್ಯಾಪ್ತಿಯಲ್ಲಿ ಮರಿದಾಸನಹಳ್ಳಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶಿಕ್ಷಣ ಕಾಯ೯ಕ್ರಮದಡಿಯಲ್ಲಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ಟ್ಯೂಷನ್ ಕ್ಲಾಸ್  ನೀಡಲಾಗುತ್ತಿದ್ದು, ಇದರ ಉದ್ಘಾಟನೆಯನ್ನ  ತಾಲೂಕು ಯೋಜನಾಧಿಕಾರಿಗಳಾದ ಮಹೇಶ್‌ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಡಾ. ವಿರೇಂದ್ರ ಹೆಗ್ಗಡೆಯವರ ಆಶಯದಂತೆ‌ ತಾಲ್ಲೂಕಿನ ಗ್ರಾಮಾಂತರ 6 ಪ್ರೌಢಶಾಲೆಗಳಲ್ಲಿ 10 ನೇ ತರಗತಿಯ ಮಕ್ಕಳಿಗೆ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನ ಪಡೆಯಲು,  ಗಣಿತ‌ ಹಾಗೂ ಇಂಗ್ಲೀಷ್ ವಿಷಯಗಳಿಗೆ ಒತ್ತು ಕೊಟ್ಟು,  3 ತಿಂಗಳ ಕಾಲ ವಿಶೇಷ ಟ್ಯೂಷನ್ ಮಾಡಲು ನುರಿತ ಅನುಭವ ಹೊಂದಿರುವ  ಶಿಕ್ಷಕರಿಗೆ 3 ತಿಂಗಳು ಯೋಜನೆಯಿಂದ ಗೌರವಧನ ನೀಡಿ ಸಂಜೆ 4 ಗಂಟೆಯಿಂದ 5 ಗಂಟೆಯವರಿಗೆ ಟ್ಯೂಷನ್ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು. ಮಕ್ಕಳು ಇದರ  ಸದುಪಯೋಗ ಪಡೆದುಕೊಂಡು‌ ವಾಷಿ೯ಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನ ಪಡೆದು ಮುಂದಿನ ನಿಮ್ಮ ಭವಿಷ್ಯವನ್ನ ಉತ್ತಮವಾಗಿ ರೂಪಿಸಿಕೊಳ್ಳಿ ಎಂದು ತಿಳಿಸಿದರು. ಕಾಯ೯ಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ರಾಜಗೋಪಾಲ್, ವಲಯ ಮೇಲ್ವಿಚಾರಕಿ ವೆಂಕಟರತ್ನ,…

Read More

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ದಳವಾಯಿಹಳ್ಳಿ ಗ್ರಾಮದ ವಿನಯ್ ಕುಮಾರ್ ಎಸ್. ಅವರು ತುಮಕೂರು ವಿಶ್ವವಿದ್ಯಾನಿಲಯದ ಅಖಿಲ ಭಾರತ ವಿಶ್ವವಿದ್ಯಾಲಯದ ದಕ್ಷಿಣ ವಲಯ ಮತ್ತು KSCA 1ನೇ ವಿಭಾಗದ ಕ್ರಿಕೆಟ್ ಆಟಗಾರರಾಗಿದ್ದು, ಇವರ ಕ್ರೀಡಾ ಕ್ಷೇತ್ರದ ಸಾಧನೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಆಗಿದ್ದಾರೆ. ಇವರಿಗೆ ಡಿ.25ರಂದು ಬೆಂಗಳೂರಿನಲ್ಲಿ  ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭದಲ್ಲಿ ಸನ್ಮಾನಿಸಲು ಕನ್ನಡ ಫಿಲಂ ಚೇಂಬರ್ಸ್‌ ಕಮಿಟಿಯಿಂದ ಆಹ್ವಾನಿಸಲಾಗಿದೆ ಎಂದು ಕನ್ನಡ ಫಿಲಂ ಚೇಂಬ‌ರ್ ಸಮಿತಿ ರಾಜ್ಯಾಧ್ಯಕ್ಷ ಎಂ.ಎಸ್.ರವೀಂದ್ರ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More