Author: admin

ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯಲ್ಲಿ ಚಾಲುಕ್ಯ ಫೌಂಡೇಶನ್, ದಾಸನಪುರ ಬೆಂಗಳೂರು, ಆರೋಗ್ಯ ಇಲಾಖೆ ಪಾವಗಡ ರವರ ಸಂಯುಕ್ತ ಆಶ್ರಯದಲ್ಲಿ ರಕ್ತದ ಗುಂಪು ಪತ್ತೆ ಪರೀಕ್ಷೆ ಮತ್ತು ಹದಿಹರೆಯದವರ ಆರೋಗ್ಯ ಮತ್ತು ಸ್ವಾಸ್ಥ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 120 ವಿದ್ಯಾರ್ಥಿಗಳಿಗೆ ರಕ್ತದ ಗುಂಪು ಪರೀಕ್ಷೆ ಮತ್ತು ಹದಿಹರೆಯದವರ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವನ್ನು ಹಿರಿಯ ಮತ್ತು ಕಿರಿಯ ಆಪ್ತ ಸಮಾಲೋಚಕರಿಂದ ಆಪ್ತ ಸಮಾಲೋಚನೆ ಮಾಡಿಸಲಾಯಿತು. ಕಾರ್ಯಕ್ರಮವನ್ನು ನಡೆಸಿಕೊಟ್ಟ ಚಾಲುಕ್ಯ ಫೌಂಡೇಶನ್ ರವರಿಗೆ ಧನ್ಯವಾದಗಳು. ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕರಾದ ರಾಮಚಂದ್ರಪ್ಪ ಕೆ., ಶಿಕ್ಷಕರಾದ ರೇಣುಕರಾಜ್ ಜಿ.ಹೆಚ್., ಹನುಮೇಶ್ ಎನ್., ಮೋಹನ್ ಕುಮಾರ್.ಜಿ.ಕೆ., ಅಭಿಷೇಕ್, ಶಿಕ್ಷಕಿಯರಾದ ವಿಮಲಾ ಆರ್., ರಶ್ಮಿ ಸಿ.ಎಸ್., ಮಾನಸ ಮತ್ತು ಶ್ರೀ ಲಕ್ಷ್ಮೀ , ಉಮಾಪತಿ, ಆರೋಗ್ಯ ಇಲಾಖೆಯ ಹನುಮಂತರಾಜು, ಇಂದಿರಾ ಮತ್ತಿತರರು ಭಾಗವಹಿಸಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುಮಕೂರು: “ಹೆಣ್ಣು ಮಕ್ಕಳ ಜಾಗೃತಿ ದಿನಗಳಿವು. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಶಿಕ್ಷಣ ಇಂದು ಹೆಣ್ಣು ಮಕ್ಕಳು ಜಾಗೃತಿ ವಹಿಸಲು ಸಹಕಾರಿಯಾಗಿದೆ. ಇಂದಿನ ದೌರ್ಜನ್ಯಪೂರಿತ ಸಮಾಜದಲ್ಲಿ ಅತ್ಯಂತ ಎಚ್ಚರಿಕೆಯಿದ ಬಾಳಬೇಕಿದೆ. ಆದರ್ಶಗಳನ್ನು ಇಟ್ಟುಕೊಂಡು ಗುರಿ ತಲುಪಲು ಶ್ರಮವಹಿಸಬೇಕು. ಹದಿಹರೆಯ, ಸವಾಲಿನ ಕಾಲಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಸಕಾರಾತ್ಮಕವಾಗಿ ಆಲೋಚಿಸಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕು’’ ಎಂದು ಲೇಖಕಿ ಸುಶೀಲಾಸದಾಶಿವಯ್ಯ ಅಭಿಪ್ರಾಯಪಟ್ಟರು. ಅವರು ಜಿಲ್ಲಾ ಮಹಿಳಾ ಸಂಘಟನೆ, ನಗರದ ಅನನ್ಯ ಕಾಲೇಜಿನಲ್ಲಿ ಏರ್ಪಡಿಸಿದ್ದ ಮಹಿಳಾ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಹಿಳಾ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷೆಯಾದ ಲೇಖಕಿ ಡಾ.ಬಿ.ಸಿ. ಶೈಲಾನಾಗರಾಜ್ ಮಾತನಾಡಿ “ಹೆಣ್ಣನ್ನು ಶತಮಾನಗಳ ಕಾಲ ಅಕ್ಷರ ವಂಚಿತಳನ್ನಾಗಿ ಮಾಡಿ ಆ ಮೂಲಕ ಜ್ಞಾನ ಹಾಗೂ ಪ್ರತಿಭಾ ಕ್ಷೇತ್ರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದ್ದ ಪುರುಷ ವ್ಯವಸ್ಥೆಗೆ ಈ ದಿನಗಳಲ್ಲಿ ಹೆಣ್ಣುಮಕ್ಕಳು ಶಿಕ್ಷಣ ಕ್ಷೇತ್ರದಲ್ಲಿ ಪುರುಷರಿಗಿಂತ ಮುಂದಿದ್ದು, ಸಾಧನೆಯ ಹಾದಿಯಲ್ಲಿರುವ ಬಹುದೊಡ್ಡ ಸಂಘಟಿತ ಹೋರಾಟವಾಗಿದೆ. ತಮ್ಮ ಮೇಲಿನ…

Read More

ತುಮಕೂರು:  ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ರುಡ್‌ ಸೆಟ್ ಸಂಸ್ಥೆಯಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮನೋವಿಜ್ಞಾನ, ಪತ್ರಿಕೋದ್ಯಮ, ಗ್ರಾಮೀಣಾಭಿವೃದ್ಧಿ, ಸಮಾಜಶಾಸ್ತ್ರ, ಸಮಾಜ ಕಾರ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ/ ಎಂ.ಕಾಂ/ಬಿಎಸ್ಸಿ(ಕೃಷಿ), ಬಿಬಿಎಂ/ಬಿ.ಎ./ಬಿಎಸ್ಸಿ ಪದವಿಯೊಂದಿಗೆ ಬಿ.ಎಡ್ ಅಥವಾ ಎಂ.ಎಡ್ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯನ್ನು ಬಲ್ಲವರಾಗಿದ್ದು, ಟೈಪಿಂಗ್ ಹಾಗೂ ಗಣಕಯಂತ್ರದಲ್ಲಿ ಎಂ.ಎಸ್ ವರ್ಡ್, ಎಂ.ಎಸ್ ಎಕ್ಸೆಲ್, ಎಂ.ಎಸ್. ಪವರ್ ಪಾಯಿಂಟ್‌ ನಲ್ಲಿ ಪರಿಣಿತಿ ಹೊಂದಿದ್ದು, 22 ರಿಂದ 30 ವಯೋಮಾನದೊಳಗಿನವರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರವನ್ನು ಇ-ಮೇಲ್: rudsetinlm@gmail.comಗೆ ಡಿಸೆಂಬರ್ 28ರೊಳಗೆ ಸಲ್ಲಿಸಬೇಕು. ಆಯ್ಕೆಯಾದವರಿಗೆ ಮಾಸಿಕ 30,000 ರೂ. ಗಳ ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9113880324 ಅಥವಾ 9686172444ನ್ನು ಸಂಪರ್ಕಿಸ ಬೇಕೆಂದು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ರವಿಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು:  ಪ್ರಿಯಕರನೊಂದಿಗೆ ಸೇರಿ ಗಂಡನನ್ನೆ ಬೆಂಕಿ ಹಚ್ಚಿ ರಸ್ತೆಯಲ್ಲಿಯೇ ಭೀಕರವಾಗಿ ಕೊಲೆ ಮಾಡಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ಪ್ರಿಯಕರ  ಇಬ್ಬರಿಗೂ ತುಮಕೂರು ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅನ್ನಪೂರ್ಣ ಮತ್ತು ರಾಮಕೃಷ್ಣ ಇಬ್ಬರು ಅಪರಾಧಿಗಳೆಂದು ನ್ಯಾಯಾಲಯ ಘೋಷಿಸಿದೆ. ತಲಾ ರೂ. 30,000/- ದಂಡವನ್ನು ವಿಧಿಸಿ ತೀರ್ಪು ನೀಡಿದೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗೋಕುಲ–ಬಡ್ಡಿಹಳ್ಳಿ ಬಡಾಣೆಯಲ್ಲಿ ನಾರಾಯಣ ಬಾಬು ವಾಸವಾಗಿದ್ದರು. ಅವರನ್ನು ಅವರ ಪತ್ನಿ ಅಪರಾಧಿ ಅನ್ನಪೂರ್ಣ ತನ್ನ ಪ್ರಿಯಕರನೊಂದಿಗೆ ಸೇರಿ 2021ರ ಸೆಪ್ಟೆಂಬರ್ 12ರಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಮನೆಯಲ್ಲಿದ್ದ ಜಿ.ನಾರಾಯಣ ಅವರನ್ನು ಪೆಟ್ರೋಲ್ ಹಾಕಿ ಬೆಂಕಿ ಹಚ್ಚಿದ್ದರು. ಮೈಯೆಲ್ಲಾ ಬೆಂಕಿ ಹತ್ತಿಕೊಂಡು ಉರಿ ತಾಳಲಾರದೇ ಜಿ.ನಾರಾಯಣ ಅವರು ಮನೆಯಿಂದ ಹೊರಗಡೆ ಓಡಿ ಬಂದಿದ್ದರು. ಮನೆಯ ಮುಂದೆ ಸ್ವಲ್ಪ ದೂರದಲ್ಲಿದ್ದ ಸಿಮೆಂಟ್ ಚರಂಡಿಗೆ ಮಕಾಡೆಯಾಗಿ ಬಿದ್ದಿದ್ದರು. ಅಲ್ಲಯೇ ಇದ್ದ ಆರೋಪಿ ರಾಮಕೃಷ್ಣ ಆತನನ್ನು ಹಿಂಬಾಲಿಸಿಕೊಂಡು…

Read More

ತುಮಕೂರು: ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ 2025ರ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ 15 ದಿನಗಳ ಕಾಲ ನಡೆಯಲಿರುವ ವಸ್ತು ಪ್ರದರ್ಶನವನ್ನು ವೈವಿಧ್ಯಮಯವಾಗಿ ಜನಮೆಚ್ಚುವಂತೆ ಏರ್ಪಡಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚಿಸಿದರು. ಶ್ರೀ ಸಿದ್ಧಗಂಗಾ ಮಠದಲ್ಲಿ ಬುಧವಾರ ಸಂಜೆ ನಡೆದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ವಸ್ತುಪ್ರದರ್ಶನವು ಜಿಲ್ಲೆಯ ಸಮಗ್ರ ಚಿತ್ರಣವನ್ನು ನೀಡುವಂತಿರಬೇಕು. ಕೃಷಿ, ಅರಣ್ಯ, ತೋಟಗಾರಿಕೆ, ಆರೋಗ್ಯ, ಕೈಗಾರಿಕೆ, ಪಶುವೈದ್ಯ, ರೇಷ್ಮೆ, ಮೀನುಗಾರಿಕೆ, ಶಿಕ್ಷಣ, ಜವಳಿ ಮತ್ತು ಕೈಮಗ್ಗ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕ್ರೀಡಾ, ಪ್ರವಾಸೋದ್ಯಮ, ಕಾರ್ಮಿಕ, ವಾರ್ತಾ ಇಲಾಖೆಗಳು ಮಳಿಗೆಗಳನ್ನು ತೆರೆದು ವಿದ್ಯಾರ್ಥಿಗಳು, ಕೃಷಿಕರು, ಕೈಗಾರಿಕೋದ್ಯಮಿಗಳು, ಜನಸಾಮಾನ್ಯರಿಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಹಾಗೂ ಇಲಾಖೆಗಳು ನೀಡುವ ಸವಲತ್ತುಗಳ ಬಗ್ಗೆ ಜನಪರ ಮಾಹಿತಿಯನ್ನು ಈ ವಸ್ತುಪ್ರದರ್ಶನದಲ್ಲಿ ನೀಡಬೇಕು ಎಂದು ತಿಳಿಸಿದರು. ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಲಕ್ಷಾಂತರ ಮಂದಿ…

Read More

ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಸಂತಪೂರ ಹುಬ್ಬಳ್ಳಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಬೇಕು ಎಂದು ಇತ್ತೀಚೆಗೆ  ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ದಲಿತ ಸಂಘರ್ಷ ಸಮಿತಿ(DSS) ಮನವಿ ಮಾಡಿತ್ತು. ಈ ಬಗ್ಗೆ ನಮ್ಮತುಮಕೂರು  ಮಾಧ್ಯಮ ವಿವರವಾದ ವರದಿ ಪ್ರಕಟಿಸಿದ ಬೆನ್ನಲ್ಲೇ ಇದೀಗ ಅಧಿಕಾರಿಗಳು ಬ್ಯಾರಿಕೇಡ್ ಅಳವಡಿಕೆ ಮಾಡಿದ್ದಾರೆ. ನಮ್ಮ ಮನವಿಗೆ ಸ್ಪಂದಿಸಿ ಸಂತಪುರ ಗ್ರಾಮ ಪಂಚಾಯತ್ ಪಿಡಿಒ ಸಂತೋಷ್ ಪಾಟೀಲ್ ಔರಾದ್ ರಾಷ್ಟ್ರೀಯ ಹೆದ್ದಾರಿ ಸಂತಪುರ ಬಸವೇಶ್ವರ ವೃತ್ತದ  ಹತ್ತಿರ ಮತ್ತು ಮಸ್ಕಲ್ ಕ್ರಾಸ್ ಹತ್ತಿರ ಬ್ಯಾರಿಕೇಡ್ ಅಳವಡಿಸಿದ್ದಾರೆ ಅವರಿಗೆ ತುಂಬಾ ಧನ್ಯವಾದಗಳು ಎಂದು ಭೀಮವಾದ ದಲಿತ ಸಂಘರ್ಷ ಸಮಿತಿ ಮುಖಂಡರು ತಿಳಿಸಿದರು. ಇದೇ ವೇಳೆ ಸಾರ್ವಜನಿಕ ಸಮಸ್ಯೆಯ ಬಗ್ಗೆ ವರದಿ ಮಾಡಿ ಅಧಿಕಾರಿ ವರ್ಗಗಳ ಗಮನ ಸೆಳೆದ ನಮ್ಮತುಮಕೂರು ವಾಹಿನಿಗೆ ಗ್ರಾಮಸ್ಥರು ಹಾಗೂ ಸಂಘಟನೆಯ ಮುಖಂಡರು ಧನ್ಯವಾದಗಳನ್ನು ಸಲ್ಲಿಸಿದರು.  ಈ ಸಂದರ್ಭದಲ್ಲಿ ಸಂತಪೂರ ಪಿ.ಎಸ್.ಐ. ನಂದಕುಮಾರ್ ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಬೆಂಗಳೂರು ಜಿಲ್ಲಾ ಅಂಗನವಾಡಿಯ ಸಾವಿರಾರು ನೌಕರರು ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಬೆಂ.ನಗರ ಜಿಲ್ಲಾ ಅಧ್ಯಕ್ಷ ಲೀಲಾವತಿ, ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ, ಗುಜರಾತ್ ಹೈಕೋರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಿ ಎಂದು ಪ್ರತಿಭಟಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಅಂಗನವಾಡಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಿ ಸಂಬಳ ಹೆಚ್ಚಿಸುವುದಾಗಿ ತಿಳಿಸಿದರು. ಆದರೆ ಯಾವುದೇ ರೀತಿಯಲ್ಲೂ ಸಮಸ್ಯೆ ನಿವಾರಣೆಯಾಗಿಲ್ಲ ಎಂದು ಆಗ್ರಹಿಸಿದರು. ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ, ಪೂರಕ ಪೌಷ್ಟಿಕ ಆಹಾರದ ಬದಲು ಸಂಪೂರ್ಣ ಆಹಾರ, ಮ.ಮ.ಇ.14 ಐಸಿಡಿ 2023ರ ಅದೇಶದ ಪ್ರಕಾರ ಕೂಡಲೇ ಗ್ರಾಜ್ಯುಟಿ ಅನುದಾನದ ಬಿಡುಗಡೆ ಮಾಡಿ ಮತ್ತು ಎಲ್ಲರಿಗೂ ಅನ್ವಯಿಸಿ ಎಂದು ಒತ್ತಾಯಿಸಿದರು. ಮುಂಗಡವಾಗಿ ಕರೆನ್ಸಿ ಹಣ, ಕೋಳಿ ಮೊಟ್ಟೆ, ಬಾಡಿಗೆ,…

Read More

ಔರಾದ: ತಾಲೂಕಿನ ಭೋಂತಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಸಾವಗಾಂವ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನ ಪರದಾಡುತ್ತಿದ್ದಾರೆ. ಹನಿ ನೀರಿಗಾಗಿ ಇಲ್ಲಿಯ ಜನರು ಹಾಹಾಕಾರ ಪಡುವ ಪರಿಸ್ಥಿತಿ ಉದ್ಭವಿಸಿದೆ.  ಜೆಜೆಎಂ ಯೋಜನೆ ಮೂಲಕ ಕೋಟ್ಯಾಂತರ ರೂಪಾಯಿಗಳು ಖರ್ಚು ಮಾಡಿದರೂ, ಜನರಿಗೆ ಹನಿ ನೀರು ಒದಗಿಸಲು ಅಧಿಕಾರಿಗಳಿಂದ ಆಗುತ್ತಿಲ್ಲ, ಸಂಪೂರ್ಣ ಕಳಪೆ ಮಟ್ಟ ಕಾಮಗಾರಿ ಮಾಡಿರೋದ್ರಿಂದ ಈ ಯೋಜನೆ ದಿಕ್ಕು ತಪ್ಪಿದೆ ಎಂದು ಮುಖಂಡ ಸುಧಾಕರ್ ಕೊಳ್ಳುರ ಅವರು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮದ ಮಿನಬಾಯಿ ಎನ್ನುವ ತುಂಬ ಗರ್ಭಿಣಿ ಮಗುವನ್ನು ಎತ್ತಿಕೊಂಡು  ನೀರಿಗಾಗಿ ಅಲೆದಾಡುತ್ತಿರುವ ದೃಶ್ಯ ನೋಡಿದರೆ . ಇಡೀ ಮನುಕುಲದ ತಲೆತಗ್ಗಿಸುವ ಘಟನೆಯಾಗಿದೆ ಎಂದು ಸುಧಾಕರ್ ಕೊಳ್ಳುರ  ಹೇಳಿದರು. ಪ್ರತಿ ವರ್ಷ ಇಲ್ಲಿಯ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗುತ್ತಿದೆ. ಸಂಬಂಧಪಟ್ಟ ಗ್ರಾಮ ಪಂಚಾಯತ್ ಹಾಗೂ ಗ್ರಾಮೀಣ ನೀರು ಸರಬರಾಜು ಇಲಾಖೆ ಅಧಿಕಾರಿಗಳು ನಮಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನೋತರ ವರ್ತಿಸುತ್ತಿರುವುದು  ಖಂಡನೀಯ ಎಂದು ಅವರು ಹೇಳಿದರು. ಕುಡಿಯುವ…

Read More

ಬೀದರ್: ಜಿಲ್ಲೆಯ ಕಮಲನಗರ ತಾಲೂಕಿನ ಹಂದಿಕೆರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಕಾಮಗಾರಿ ಪೂರ್ಣಗೊಂಡದ ಮೇಲೆ ಹಣ ಪಾವತಿಸಬೇಕು ಎಂದು ಹಂದಿಕೆರಾ ಗ್ರಾಮದ ಸಮಾಜ ಸೇವೆಕ ಅಮೂಲ ಬಿರಾದಾರ ಅವರು ಮಂಗಳವಾರ ಚಿಮೆಗಾಂವ ಗ್ರಾಮ ಪಂಚಾಯಿತಿ ಕಚೇರಿಗೆ ತೆರಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ತಾನಾಜಿ ಪಾಟೀಲವರಿಗೆ ಮನವಿ ಸಲ್ಲಿಸಿದರು. ಹಂದಿಕೆರಾ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ವರ್ಷ ಹಿಂದೆ ಮಕ್ಕಳಗಾಗಿ ಶೌಚಾಲಯಗಾಗಿ ಕಟ್ಟಿಸಿದ ಶೌಚಾಲಯವನ್ನು ಅಪೂರ್ಣ ಇದ್ದು, ಹೊಂಡಾ ಸೇಫ್ಟಿ ಟ್ಯಾಂಕ್ ಮಾಡದೆ ಶೌಚಾಲಯ ಕೋಣೆಗಳನ್ನು ತಯಾರಿಸಿದ್ದಾರೆ. ಈ ಕುರಿತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಹಣ ಪಾವತಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ವರದಿ ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೀದರ: ಜಿಲ್ಲೆಯ ಸೈಬರ್ ಅಪರಾಧ ಪೊಲೀಸ್ ಠಾಣೆ  ಪೊಲೀಸರಿಂದ  ಬೀದರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಕಛೇರಿಯಲ್ಲಿ ಸೈಬರ್ ಅಪರಾಧದ ಬಗ್ಗೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ, ಶಿವಾನಂದ ಘಾಣಿಗೇರ, ಪಿ.ಐ. ಸೈಬರ್ ಅಪರಾಧ ಪೊಲೀಸ್ ಠಾಣೆ ಬೀದರ್ ಇವರು ತಮ್ಮ ಸಿಬ್ಬಂದಿ ಮಲ್ಲಿಕಾರ್ಜುನ ಪಾಟೀಲ್, ಹರಿಕಿಶನ್ ಠಾಕೂರ್ ರವರೊಂದಿಗೆ ಬೀದರ್ ದ ಸಾರ್ವಜನಿಕ ಶಿಕ್ಷಣ ಇಲಾಖೆ (ಡಿ.ಡಿ.ಪಿ.ಐ.) ಕಛೇರಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ  ಸೈಬರ್ ಅಪರಾಧಗಳಿಗೆ ಒಳಗಾಗದಂತೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಮತ್ತು ಅಪರಾಧ ಸಂಭವಿಸಿದಲ್ಲಿ ತಕ್ಷಣ ಸೈಬರ್ ಅಪರಾಧ ಸಹಾಯವಾಣಿ 1930 ತಕ್ಷಣವೇ ಕರೆ ಮಾಡಿ ತಮ್ಮ ದೂರನ್ನು ದಾಖಲಿಸಿ ಸೈಬರ್  ವಂಚನೆಯಿಂದ ಪಾರಾಗಬಹುದು ಎಂಬ ಬಗ್ಗೆ ಅರಿವು ಮೂಡಿಸಿದರು. ಕರ್ತವ್ಯದ ಸಮಯದಲ್ಲಿ ಒತ್ತಡದಲ್ಲಿದ್ದಾಗ ಸರಕಾರಿ ನೌಕರರು ಸೈಬರ್ ಅಪರಾಧಕ್ಕೆ ಒಳಗಾಗುವ ಸಾಧ್ಯತೆಗಳು ಹೆಚ್ಚು ಇರುವುದರಿಂದ ಅವರು ಯಾವ ರೀತಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎನ್ನುವುದರ…

Read More