Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಸಂತಪೂರ ಪೊಲೀಸರು ಠಾಣೆಯ ಸರಹದ್ದಿನಲ್ಲಿ ಬರುವ ಸಂತಪೂರ ಗ್ರಾಮದ ಮಾಜಿ ಸೈನಿಕ ಪ್ರೌಢ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ ನಡೆಸಲಾಯಿತು. ಮಕ್ಕಳಿಗೆ ಅಪರಾಧಗಳು ನಡೆಯದಂತೆ ಯಾವ ರೀತಿ ತಡೆಯುವುದು, ಮತ್ತು ರಸ್ತೆ ಅಪಘಾತಗಳು ನಡೆಯದಂತೆ ರಸ್ತೆ ಸುರಕ್ಷತೆಯ ಬಗ್ಗೆ, ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಇತರೆ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಯಿತು ಎಂದು ಸಂತಪೂರ ಪಿ.ಎಸ್.ಐ. ನಂದಕುಮಾರ ತಿಳಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಹೈಕೋರ್ಟ್ ನಿಂದ ಜಾಮೀನು ಪಡೆದ ಬಳಿಕ ಇಂದು ನಟ ದರ್ಶನ್ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಫಿಸಿಯೋಥೆರಪಿ ಮೂಲಕವೇ ಬೆನ್ನುನೋವು ಗುಣಪಡಿಸಿಕೊಳ್ಳುವ ಪ್ಲ್ಯಾನ್ ಮಾಡಿರುವ ದರ್ಶನ್ ಕುಟುಂಬ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿದೆ. ಆಸ್ಪತ್ರೆಯ ಬಿಲ್ ಸೇರಿದಂತೆ, ಎಲ್ಲಾ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ದರ್ಶನ್ ತಮ್ಮ ಕಾರಿನಲ್ಲಿ ತೆರಳಿದರು. ಬೆಳಿಗ್ಗೆ 6 ಗಂಟೆಯಿಂದಲೇ ಪತ್ನಿ ವಿಜಯಲಕ್ಷ್ಮೀ ಆಸ್ಪತ್ರೆಗೆ ಆಗಮಿಸಿದ್ದರು. ನಟ ದರ್ಶನ್ ಪುತ್ರ ವಿನೀಶ್, ನಟ ಧನ್ವೀರ್, ಸಹೋದರ ದಿನಕರ್ ಆಸ್ಪತ್ರೆ ಆವರಣಕ್ಕೆ ಆಗಮಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ ಕೆ.ಐ.ಎ.ಡಿ.ಬಿ. ವತಿಯಿಂದ ಸ್ವಾಧೀನಪಡಿಸಿಕೊಳ್ಳುವ ಜಮೀನಿನ ಪರಿಹಾರವನ್ನು ಸಂಬಂಧಪಟ್ಟ ಖಾತೆದಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆರ್.ಟಿ.ಜಿ.ಎಸ್. (RTGS) ಮುಖಾಂತರ ನೇರವಾಗಿ ಜಮೆ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯ ಸರ್ಕಾರವು ಕೈಗಾರಿಕಾ ಪ್ರದೇಶಗಳ ಸ್ಥಾಪನೆಗೆ ಕೆಐಎಡಿ ಕಾಯ್ದೆ, 1996ರನ್ವಯ ಭೂಸ್ವಾಧೀನ ಪಡಿಸಿಕೊಳ್ಳುತ್ತಿದ್ದು, ಈ ಕಾಯ್ದೆಯನ್ವಯ ರೈತರನ್ನು ಅವರ ಜಮೀನಿನಲ್ಲಿ ಸ್ಥಾಪಿತವಾಗುವ ಕೈಗಾರಿಕೆಗಳಲ್ಲಿ ಸಹಭಾಗಿತ್ವ ನೀಡಲು ಅವಕಾಶವಿರುವುದಿಲ್ಲ ಎಂದರು. ರಾಜ್ಯದಲ್ಲಿ ವಿವಿಧ ನಗರಾಭಿವೃದ್ಧಿ ಪ್ರಾಧಿಕಾರಗಳು ರೈತರಿಂದ ಭೂಸ್ವಾಧೀನ ಪಡಿಸಿಕೊಳ್ಳುವಾಗ ಅಭಿವೃದ್ಧಿ ಪಡಿಸಲಾದ ನಿವೇಶನಗಳನ್ನು ಹಂಚಿಕೆ ಮಾಡುವ ರೀತಿಯಲ್ಲೇ, ಕೆಐಎಡಿಬಿ ಯಿಂದ ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ಕೈಗಾರಿಕಾ ಪ್ರದೇಶದ ಜಮೀನುಗಳಿಗೆ ಭೂಪರಿಹಾರದ ಬದಲಾಗಿ ಪ್ರತಿ ಎಕರೆ ಜಮೀನಿಗೆ 10,781 ಚದರಡಿ ಅಭಿವೃದ್ಧಿ ಪಡಿಸಿದ ವಿಸ್ತೀರ್ಣವನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದರು. ನಮ್ಮತುಮಕೂರಿನ…
ಬೆಳಗಾವಿ ಸುವರ್ಣಸೌಧ: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿ.ಬಿ.ಎಂ.ಪಿ. ಮಾದರಿಯಲ್ಲಿ ಎ — ಖಾತಾ ಮತ್ತು ಬಿ–ಖಾತಾ ಎಂದು ಇ–ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹಿಂ ಖಾನ್ ತಿಳಿಸಿದರು. ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯ ಚಿದಾನಂದ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ 1964ರಲ್ಲಿ ಅಳವಡಿಸಿಕೊಳ್ಳುವ…
ಬೆಳಗಾವಿ ಸುವರ್ಣಸೌಧ: ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯು ಬೆಂಗಳೂರಿಗೆ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡುವ ಪ್ರಸ್ತಾವನೆಯ ಕುರಿತು ಅಧ್ಯಯನ ನಡೆಸಿ ವರದಿ ನೀಡುವ ಕಾರ್ಯವನ್ನು ಐಡೆಕ್ ಸಂಸ್ಥೆಗೆ ವಹಿಸಲಾಗಿರುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಟಿ.ಎನ್.ಜವರಾಯಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು, ಗುಡ್ಡಗಾಡು ಪ್ರದೇಶ, ಎತ್ತರದ ರಚನೆಗಳು. ಸಂಪರ್ಕ–ರಸ್ತೆ (NH & SH), ರೈಲು ಮತ್ತು ಮೆಟ್ರೋ ಸಂಪರ್ಕ. ಬಳಕೆದಾರರಿಗೆ ಉದ್ದೇಶಿತ ವಿಮಾನ ನಿಲ್ದಾಣವನ್ನು ತಲುಪುವ ದೂರ ಮತ್ತು ಸಮಯ, ವಿಸ್ತಾರವಾದ ಭೂಪ್ರದೇಶ, ಜಮೀನಿನ ಪ್ರಕಾರಗಳು, ಕಡಿಮೆ ಜನಸಾಂದ್ರತೆಯ ಪ್ರದೇಶ ಮತ್ತು ಜಲಸಂಪನ್ಮೂಲದ ಲಭ್ಯತೆ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಸಂಭಾವ್ಯ ಸ್ಥಳಗಳ ಅಧ್ಯಯನವನ್ನು ನಡೆಸಲಾಗುತ್ತಿದೆ ಎಂದರು. ಅದರಂತೆ, ಯೋಜನೆಗೆ ಸಂಬಂಧಿಸಿದಂತೆ ಯೋಜನಾ ವರದಿ / ಪ್ರಸ್ತಾವನೆಯನ್ನು ಸಿದ್ಧಪಡಿಸುವ ಕಾರ್ಯ ಪರಿಶೀಲನೆಯಲ್ಲಿರುತ್ತದೆ ಎಂದು…
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮೆಡ್ ಪ್ಲಸ್ ಹಾಗೂ ಸಿದ್ಧಿ ಅಸೋಸಿಯೇಟ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಡಿಸೆಂಬರ್ 20ರ ಬೆಳಿಗ್ಗೆ 10 ಗಂಟೆಗೆ ಉದ್ಯೋಗಕ್ಕಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿ.ಬಿ.ಎ, ಬಿ.ಬಿ.ಎಂ, ಡಿ.ಫಾರ್ಮ, ಬಿ.ಫಾರ್ಮ, ಐ.ಟಿ.ಐ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳು ಮಾತ್ರ ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, 9071021143, 9513136642ನ್ನು ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಳಗಾವಿ ಸುವರ್ಣಸೌಧ: ಸಕ್ಕರೆ ಕಾರ್ಖಾನೆಗಳು ರೈತರಿಗೆ ಬಾಕಿ ಮೊತ್ತವನ್ನು ನೀಡಿರುವುದಿಲ್ಲವೆಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ನಿರ್ದಿಷ್ಟ ಪ್ರಕರಣಗಳು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತಾಲಯದಲ್ಲಿ ವರದಿಯಾಗಿರುವುದಿಲ್ಲ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ ಅವರು ಹೇಳಿದರು. ವಿಧಾನ ಪರಿಷತನಲ್ಲಿ ಮಂಗಳವಾರ ಸದಸ್ಯರಾದ ಎನ್.ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.2018-19ನೇ ಸಾಲಿಗೆ ಸಂಬಂಧಿಸಿದಂತೆ ಮಾತ್ರ ಮೂರು ಸಕ್ಕರೆ ಕಾರ್ಖಾನೆಗಳಿಂದ 3.94 ರೂ ಕೋಟಿಗಳ ಕಬ್ಬು ಬಿಲ್ಲನ್ನು ಪಾವತಿಸುವುದು ಬಾಕಿ ಇದೆ. ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಸಿ., ಹಳ್ಳಿಖೇಡ್, ಹುಮನಾಬಾದ್ ತಾಲ್ಲೂಕಿನಿಂದ 0.89 ಕೋಟಿ ಬಾಕಿ ಮೊತ್ತ, ಭವಾನಿ ಶುಗರ್ಸ್ ಲಿ., ಬರೂರು, ಬೀದರ್ ತಾಲ್ಲೂಕಿನಿಂದ 1.80 ಕೋಟಿ ರೂ. ಮತ್ತು ಧ್ಯಾನಯೋಗಿ ಶ್ರೀ ಶಿವಕುಮಾರ್ ಸ್ವಾಮೀಜಿ ಶುಗರ್ಸ್ ಲಿ., ಮರಗೂರು, ಇಂಡಿ ತಾಲ್ಲೂಕಿನಿಂದ 1.25 ಕೋಟಿ ರೂ ಕಬ್ಬು ಬಿಲ್ಲನ್ನು…
ಬೆಳಗಾವಿ: ಶಿರಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕರು ಹಾಗೂ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ವಿಧಾನಸಭೆಯಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಸೇರಿದಂತೆ ವಿವಿಧ ಗಣ್ಯರು ಟಿ.ಬಿ.ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದರು. ಶಾಸಕ ಜಯಚಂದ್ರ ಅವರ ಸಮಯಪಾಲನೆ ಹಾಗೂ ಶಿಸ್ತುಬದ್ದ ಕಾರ್ಯ ನಿರ್ವಹಣೆ, ಕಲಾಪದಲ್ಲಿ ಅವರು ತೊಡಗಿಸಿಕೊಳ್ಳುವ ರೀತಿಯ ಬಗ್ಗೆ ಕೊಂಡಾಡಿದರು. ಸದನದಲ್ಲಿ ಹಾಜರಿದ್ದು ಸಭೆಯ ಗಾಂಭೀರ್ಯತೆ ಕಾಪಾಡುವುದರ ಮೂಲಕ ಕಿರಿಯ ಶಾಸಕರಿಗೆ ತೋರಿದ ಮಾರ್ಗದರ್ಶನ ಮೆಚ್ಚುವಂತದ್ದು ಎಂದು ಅಭಿಪ್ರಾಯಪಟ್ಟರು. ಟಿ.ಬಿ. ಜಯಚಂದ್ರ ಅವರು ಕಳ್ಳಂಬೆಳ್ಳ ಮತ್ತು ಶಿರಾದಿಂದ ಒಟ್ಟು 7 ಬಾರಿ ಶಾಸಕರಾಗಿದ್ದು, ಅವರು ರಾಜ್ಯದಲ್ಲಿ ಸಚಿವರಾಗಿ ಕೃಷಿ, ಸಂಸದೀಯ ವ್ಯವಹಾರ ಖಾತೆಗಳನ್ನ ನಿರ್ವಹಿಸಿದ್ಧಾರೆ. ವಿವಿಧ ನಿಗಮ ಮಂಡಳಿಯ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ದೆಹಲಿ ವಿಶೇಷ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಸದನದಲ್ಲಿ ಅತ್ಯುತ್ತಮ…
ಬೆಳಗಾವಿ: ಪದ್ಮಶ್ರೀ ಪುರಸ್ಕೃತ ವೃಕ್ಷ ಮಾತೆ ತುಳಸಿಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ತನಲ್ಲಿ ಡಿ.17 ರಂದು ಸಂತಾಪ ಸೂಚಿಸಲಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಅವರು, ತುಳಸಿಗೌಡ ಅವರ ನಿಧನರಾದ ವಿಷಯವನ್ನು ಸದನಕ್ಕೆ ತಿಳಿಸಲು ವಿಷಾಧಿಸುತ್ತೇನೆ ಎಂದು ಹೇಳಿ ಸಂತಾಪ ಸೂಚನೆಯ ನಿರ್ಣಯವನ್ನು ಮಂಡಿಸಿದರು. ತುಳಸಿ ಗೌಡ ಅವರು 1944ರ ಡಿಸೆಂಬರ್.16 ರಂದು ಅಂಕೋಲ ತಾಲ್ಲೂಕಿನ ಹೊನ್ನಳ್ಳಿ ಗ್ರಾಮದ ಹಾಲಕ್ಕಿ ಬುಡಕಟ್ಟು ಕುಟುಂಬದಲ್ಲಿ ಜನಿಸಿದ್ದ ಶ್ರೀಯುತರು ‘ಪರಿಸರವೇ ನನ್ನ ಉಸಿರು’ ಎಂದು ತಮ್ಮ ಜೀವನದುದ್ದಕ್ಕೂ ಲಕ್ಷಾಂತರ ಮರಗಳನ್ನು ಬೆಳೆಸಿ ಪಾಲನೆ ಪೋಷಣೆ ಮಾಡುವ ಮೂಲಕ ‘ವೃಕ್ಷ ಮಾತೆ’ ಎಂದು ಕರೆಯಲ್ಪಡುತ್ತಿದ್ದರು. ಯಾವುದೇ ಔಪಚಾರಿಕ ಶಿಕ್ಷಣವಿಲ್ಲದಿದ್ದರೂ ಶಾಲಾ ಮಕ್ಕಳಿಗೆ ಗಿಡಗಳನ್ನು ಬೆಳೆಸುವ ತರಬೇತಿ ನೀಡುತ್ತಿದ್ದರು. ಪ್ರತಿ ವರ್ಷ 30 ಸಾವಿರ ಸಸಿಗಳನ್ನು ಪೋಷಿಸಿದ ಕೀರ್ತಿಗೆ ಭಾಜನರಾಗಿದ್ದರು. ಶ್ರೀಯುತರಿಗೆ ಅರಣ್ಯ ತಿಳುವಳಿಕೆ ಅಪಾರವಾಗಿತ್ತು. ಸಾಗವಾನಿಯನ್ನೇ ಹೆಚ್ಚಾಗಿ ಬೆಳೆಸುತ್ತಿದ್ದ ಇವರು ಇದರ ಹೊರತಾಗಿ ಎಳ್ಳು, ನಂದಿ, ಪೀಫುಲ್, ಫಿಕಸ್, ಬಿದಿರು, ರಾಟನ್, ಜಮುನ್, ಗೋಡಂಬಿ, ಮತ್ತಿ ಮುಂತಾದ…
ಬೆಳಗಾವಿ ಸುವರ್ಣಸೌಧ: ವೃಕ್ಷಮಾತೆ ಎಂದೇ ಜನಪ್ರಿಯರಾಗಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕು ಹೊನ್ನಳ್ಳಿ ಗ್ರಾಮದ ವೃಕ್ಷ ಸಂರಕ್ಷಕಿ ತುಳಸಿ ಗೌಡ ನಿಧನಕ್ಕೆ ಮಂಗಳವಾರ ವಿಧಾನ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸಂತಾಪ ನಿರ್ಣಯ ಮಂಡಿಸಿ ತುಳಸಿ ಗೌಡ ಅವರ ನಿಧನಕ್ಕೆ ವಿಷಾದ ವ್ಯಕ್ತಪಡಿಸಿದರು. ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಸಮುದಾಯದ ಬಡಕುಟುಂಬದಲ್ಲಿ ಜನಿಸಿದ್ದು, ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಮರಗಳೊಂದಿಗೆ ಅನುಭವ ಹಾಗೂ ಅಪಾರ ಜ್ಞಾನವನ್ನು ಹೊಂದಿದ್ದ ಅವರು ಅರಣ್ಯದ ಎನ್ಸೈಕ್ಲೋಪೀಡಿಯಾ, ವೃಕ್ಷ ಮಾತೆ ಎಂದೇ ಪ್ರಖ್ಯಾತರಾಗಿದ್ದರು. ಮುನ್ನೂರಕ್ಕೂ ಹೆಚ್ಚಿನ ಮರಗಳ ಪ್ರಬೇಧಗಳನ್ನು ತಿಳಿದಿದ್ದ ಅವರು ನಿಂತ ಜಾಗದಲ್ಲೇ ಅವುಗಳ ಬಗ್ಗೆ ವಿವರಿಸುವಷ್ಟು ಜ್ಞಾನವನ್ನು ಹೊಂದಿದ್ದರು. ಅರಣ್ಯ ಇಲಾಖೆಯ ಜೊತೆಗೆ ಕೈಜೋಡಿಸಿ 65ಕ್ಕೂ ಹೆಚ್ಚು ವರ್ಷಗಳಿಂದ ಪರಿಸರ ಸಂರಕ್ಷಣೆ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದ್ದರು. ಬಾಲ್ಯದಲ್ಲೇ ವಿಧವೆಯಾದ ತುಳಸಿಗೌಡ ಮರಗಳಲ್ಲೇ ಮಕ್ಕಳು ಹಾಗೂ ಕುಟುಂಬವನ್ನು ಕಂಡವರು. ಒಂದು ಕಾಲದಲ್ಲಿ ಕಾಡಿನಿಂದ ಸೌದೆ…