Subscribe to Updates
Get the latest creative news from FooBar about art, design and business.
- 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
- ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ: ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
- ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
- ರಾಹುಲ್ ಗಾಂಧಿ ಪ್ರಧಾನಿಯಾಗಲಿ: ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
- ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
- ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
- ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
- ಹೂ ಲೋಕ, ಭೂರಮೆಯ ರಥ : ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ ವಾಹ್..!
Author: admin
ತಿಪಟೂರು: ನಗರ ಹಾಗೂ ತಾಲೂಕಿನ ಜನತೆಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸಲು ನಾನು ಬದ್ಧನಾಗಿದ್ದೇನೆ ಎಂದು ತಿಪಟೂರು ಶಾಸಕ ಕೆ. ಷಡಕ್ಷರಿ ತಿಳಿಸಿದರು. ಇದರ ಬಗ್ಗೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸಲಾಗಿದೆ ನಗರದ ಜನಸಂಖ್ಯೆ ಈಗಾಗಲೇ ಒಂದು ಲಕ್ಷ ಮೀರುತ್ತಿದ್ದು, ನೀರಿನ ಅವಶ್ಯಕತೆ ಹೆಚ್ಚಾಗುತ್ತದೆ. ಭವಿಷ್ಯದ ದೂರದೃಷ್ಟಿ ಇಟ್ಟುಕೊಂಡು ಯೋಜನೆ ರೂಪಿಸಬೇಕಿದೆ ಎಂದರು. ಈಚನೂರು ಕೆರೆ ಸಂಗ್ರಹಗಾರಿಕೆ ಪರ್ಯಾಯ ಮೊಲಗಳಿಂದ ಕುಡಿಯುವ ನೀರು ಒದಗಿಸಲು ಸಮೀಕ್ಷೆ ಮಾಡಿದ್ದು ನೀಲ ನಕ್ಷೆ ತಯಾರಿಸಲಾಗಿದೆ ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಸಚಿವರ ಜೊತೆ ಚರ್ಚಿಸಲಾಗಿದ್ದು, ಕೆರೆಯ ನೀರು ಯಾರ ಸ್ವತ್ತು ಅಲ್ಲ, ಕುಡಿಯುವ ನೀರಿಗೆ ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಕೇಳಿದೆ. ನೀರಿನ ಮೂಲ ಗುರುತಿಸಿ ನಗರದ ಜನತೆಗೆ ನಿರಂತರ ಕುಡಿಯುವನೀರು ಪೂರೈಸುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ಹೇಳಿದರು. ಅವಶ್ಯಕತೆ ಇರುವ ಕಡೆ ನೂತನ ಪೈಪ್ ಲೈನ್ ಅಳವಡಿಕೆ, ಅವಶ್ಯಕತೆ ಇರುವ ಕಡೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗುವುದು ಎಂದು ತಿಳಿಸಿದರು. ನಾನು…
ಪಾವಗಡ: ತಾಲೂಕಿನ ಜ್ಞಾನ ಬೋಧನಿ ಶಾಲೆಯ ವಾರ್ಷಿಕೋತ್ಸವ “ಸಂಭ್ರಮ 2025” ಭಾನುವಾರ ಸಂಜೆ ಭವ್ಯವಾಗಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಪಾವಗಡ ಘಟಕದ ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಕಲಿಕೆ ಎನ್ನುವುದು ಮಾನವ ಜೀವನದ ಬಹುಮುಖ್ಯ ಭಾಗ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯನ್ನು, ಉತ್ಸಾಹವನ್ನು ನಿಂದಿರುವ ಜ್ವಾಲೆಯಂತೆ ಪ್ರಜ್ವಲಿಸುತ್ತ ಕೊಂಡೊಯ್ಯಬೇಕು. ಈ ರೀತಿಯ ಕಾರ್ಯಕ್ರಮಗಳು ಅವರ ಪ್ರತಿಭೆಗಳನ್ನು ಹೊರತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು. ಪೋಷಕರ ಪಾತ್ರವನ್ನು ಮುಖ್ಯಗೊಳಿಸಿದ ಉದ್ದೇಶಪೂರ್ಣ ಸಂದೇಶ: ಶಾಲೆಯ ಕಾರ್ಯದರ್ಶಿ ಡಾ. ಕೆ.ಎಸ್. ಅನಿಲ್ ಕುಮಾರ್, ಪೋಷಕರ ಪಾತ್ರವನ್ನು ಪ್ರಸ್ತಾಪಿಸಿ, “ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೋಷಕರಿಂದ ದೊರೆಯುವ ಸಮಯ ಅತಿ ಮುಖ್ಯ. ಇದು ಮಕ್ಕಳಿಗೆ ನಂಬಿಕೆ ಹಾಗೂ ಶ್ರದ್ಧೆ ಮೂಡಿಸುವುದರೊಂದಿಗೆ, ಒತ್ತಡವನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ. ಈ ಮೂಲಕ ಅವರು ಉತ್ತಮ ಪ್ರಗತಿಯನ್ನು ಸಾಧಿಸಬಹುದು” ಎಂದು ಹೇಳಿದರು. ಅಭಿಮಾನವನ್ನು ಹೆಚ್ಚಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು: ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ, ವಿದ್ಯಾರ್ಥಿಗಳು ತಮ್ಮ…
ತುಮಕೂರು: ನಗರದಲ್ಲಿ ಸಿರಿಧಾನ್ಯ ಹಬ್ಬಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೂನಿಯರ್ ಕಾಲೇಜು ಮೈದಾನದಲ್ಲಿ ಚಾಲನೆ ನೀಡಿದರು. ಚಾಲನೆ ನೀಡಲು ಎತ್ತಿನಗಾಡಿಯಲ್ಲಿ ಬಂದ ಸಚಿವ ಪರಮೇಶ್ವರ್ ಅವರೊಂದಿಗೆ ಜಿಲ್ಲಾಧಿಕಾರಿ ಶುಭಾಕಲ್ಯಾಣ ಹಾಜರಿದ್ದರು. ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರಿಗೆ ಈ ಕಲಾ ಹಾಗೂ ಆಕರ ಆಹಾರದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. 2 ದಿನಗಳ ಕಾಲ ನಡೆಯಲಿರುವ ಸಿರಿಧಾನ್ಯ ಹಬ್ಬದಲ್ಲಿ ಸಾಮೆ, ಬರಗು, ನವಣೆ, ಹಾರಕ, ಕೊರಲೆ ಸೇರಿದಂತೆ ಅನೇಕ ಸಿರಿಧಾನ್ಯಗಳನ್ನು ಪ್ರದರ್ಶಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
2025–26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀ6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್ ಲೈನ್ ಕೌನ್ಸಿಲಿಂಗ್ಕ್ಷೆ ಮತ್ತು ಆನ್ ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 11-01-2025 5 x 4.00 0๐๘ 25-01-2025 53, 11.590 1 ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 15–02–2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ. ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ಯುವಜನತೆ ಸ್ವಾಮಿ ವಿವೇಕಾನಂದರಆದರ್ಶ ಮತ್ತು ಚಿಂತನೆಗಳನ್ನು ಅಳವಡಿಸಿಕೊಂಡರೆ ಜೀವನದಲ್ಲಿಯಶಸ್ಸು ಸಾಧ್ಯವಿದೆ. ನಮ್ಮದೇಶದ ಮಹತ್ತರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಯುವ ಸಮುದಾಯದ ಪಾತ್ರ ಮಹತ್ವದಿ ಇದನ್ನು ಅರಿತು ಕಾರ್ಯೋಮುಖರಾಗಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಶೇಖರ್ ತಿಳಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಸಂಕ್ರಾಂತಿ ಸಂಭ್ರಮಕಾರ್ಯಕ್ರಮವನ್ನು ಉದ್ಘಾಟಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ.ಕರಿಯಣ್ಣ, ಸಂಕ್ರಾಂತಿಯು ನಮ್ಮ ಧಾನ್ಯಗಳನ್ನು ಪೂಜಿಸಿ ಸಂಭ್ರಮಿಸುವ ಸಡಗರದ ಹಬ್ಬವಾಗಿದೆ. ಈಗಿನ ಯುವಜನತೆ ನಮ್ಮ ನೆಲದ ಸಂಸ್ಕೃತಿಯನ್ನು ಮರೆಯುತ್ತಿರುವ ಈ ಸಂದರ್ಭದಲ್ಲಿ ಈ ಸಂಕ್ರಾಂತಿ ಸಂಭ್ರಮದಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಲ್ಲಿ ಮೌಲ್ಯವನ್ನು ತುಂಬಿಸಲು ಸಾಧ್ಯವಾಗುತ್ತಿದೆ ಎಂದರು. ವಿಭಾಗದ ಮುಖ್ಯಸ್ಥ ಡಾ.ಎಂ.ಡಿ.ಶ್ರೀನಿವಾಸ್ ಮೂರ್ತಿ, ಉಪನ್ಯಾಸಕರಾದ ಮಂಜುಳಾದೇವಿ, ರಾಜೇಶ್ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಪಾವಗಡ: ಭೂಮಿಯ ಮೇಲೆ ಜನಿಸಿದ ಮೇಲೆ ಒಂದು ಸಾಧನೆಯನ್ನು ಮಾಡಿ ತಾನು ಏನೆಂದು ಸಮಾಜಕ್ಕೆ ತೋರಿಸಬೇಕು ಮತ್ತು ಪ್ರತಿಯೊಬ್ಬರು ಜಾಗೃತವಾಗುವುದರ ಜೊತೆಗೆ ಜಾಗೃತರನ್ನಾಗಿ ಮಾಡಬೇಕೆಂದು ಬೆಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು ಹಾಗೂ ಹಿರಿಯ ಲೇಖಕರಾದ ಪ್ರೊಫೆಸರ್ ಚಿತ್ತಯ್ಯ ಪೂಜಾರ್ ತಿಳಿಸಿದ್ದಾರೆ. ಪಾವಗಡ ತಾಲೂಕಿನ ಕಿಲಾರ್ಲಹಳ್ಳಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2 ಗಂಟೆಯಲ್ಲಿ ಪತ್ರಕರ್ತ, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ನವೀನ್ ಕಿಲಾರ್ಲಹಳ್ಳಿ ಅವರು ಬರೆದಿರುವಂತಹ “ಮೌಲ್ಯಗಳು ಮರೆಯಾಗದಿರಲಿ ಇದು ಹೆತ್ತವರ ಹೊಡಲಿನ ಕೂಗು” ಎನ್ನುವ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಸಮಾಜದ ಸೂತ್ರಗಳನ್ನು ನಿಗಾದಿಂದ ಗಮನಿಸಿದವರು ಮಾತ್ರ ಸಮಾಜವನ್ನು ತಿದ್ದಿ ತೀಡಲು ಮುಂದಾಗುತ್ತಾರೆ, ಸದ್ಯದ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗಗಳಲ್ಲಿ ಸೋಂಬೇರಿಗಳ ಸಂಖ್ಯೆ ಹೆಚ್ಚುತ್ತಿದೆ ಇಂತಹವರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡಲು ಸಾಧ್ಯವಾಗಿದೆ ಹದಿನೈದು ಸಾವಿರಕ್ಕೆ ಬೆಂಗಳೂರಿನ ತೆರಳಿ ಕೆಲಸ ಮಾಡುವುದರ ಜೊತೆಗೆ ಅನೇಕ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ದುಃಖಕರ ಸಂಗತಿ, ಕಲಾವಿದ ನವೀನ್ ಕಿಲಾರ್ಲಹಳ್ಳಿ ಯುವ ಸಮೂಹಕ್ಕೆ ಸಂದೇಶವೊಂದನ್ನು ನೀಡುತ್ತಾ ಗುರು ಹಿರಿಯರು ಹೆತ್ತ ತಂದೆ ತಾಯಿಯನ್ನು…
ಪಾವಗಡ: ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ಹೊರವಲಯದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಆಯೋಜಿಸಲಾದ ಐಪಿಎಲ್ ಮಾದರಿಯ ಎರಡನೇ ಆವೃತ್ತಿಯ ತೊಗಟವೀರ ಪ್ರೀಮಿಯರ್ ಲೀಗ್ (TPL) ಟೂರ್ನಮೆಂಟ್ ಗೆ ಭಾನುವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಂಗ್ರೆಸ್ ಮುಖಂಡ ಹಾಗೂ ಸಮಾಜಸೇವಕ ಉಮೇಶ್ ಟಿ ಮತ್ತು ಗ್ರಾಮ ಪಂಚಾಯಿತಿ ಸದಸ್ಯ ರಘು ಟೇಪ್ ಕಟ್ ಮಾಡುವ ಮೂಲಕ ಲೀಗ್ ಗಾಗಿ ಚಾಲನೆ ನೀಡಿದರು. ಟೂರ್ನಮೆಂಟ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಉಮೇಶ್ ಟಿ, “ನಗರಗಳಿಗೆ ಸ್ಥಳಾಂತರಗೊಂಡಿರುವ ನಮ್ಮ ಯುವಕರು ಹಬ್ಬ–ಹರಿದಿನಗಳಲ್ಲಿ ತಮ್ಮ ಊರಿಗೆ ಬಂದು ಹತ್ತಿರದವರೊಂದಿಗೆ ಸಂತಸವಾಗಿ ದಿನವನ್ನು ಆಚರಿಸಬೇಕೆಂದು ಈ ಟೂರ್ನಮೆಂಟ್ ಆಯೋಜಿಸಲಾಗಿದೆ. ಕ್ರೀಡಾ ಚಟುವಟಿಕೆಗಳು ಯುವಕರಲ್ಲಿ ಆಧ್ಯಾತ್ಮ, ಶಿಸ್ತು ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಹೆಚ್ಚಿಸುತ್ತದೆ. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೌಲ್ಯಗಳನ್ನು ಈ ಟೂರ್ನಮೆಂಟ್ ಗಳಲ್ಲಿ ಕಲಿಯಬಹುದು,” ಎಂದು ಹೇಳಿದರು. ಗ್ರಾಮದಲ್ಲಿ ಈ ರೀತಿಯ ಇನ್ನಷ್ಟು ಕ್ರೀಡಾ ಚಟುವಟಿಕೆಗಳಿಗೆ ತಮ್ಮ ಬೆಂಬಲ ಮತ್ತು ಸಹಕಾರವನ್ನು ನೀಡಲು ಅವರು…
ಹೆಚ್.ಡಿ.ಕೋಟೆ: ತಾಲೂಕಿನ ಚಿಕ್ಕಕೆರೆಯೂರು ಗ್ರಾಮದ ಗಣೇಶ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಕಾರ್ಯಕ್ರಮವನ್ನು ಶುದ್ಧಗಂಗಾ ವಿಭಾಗದ ಯೋಜನಾ ಅಧಿಕಾರಿ ಯುವರಾಜ್ ಜೈನ್ ಕಸ ಗುಡಿಸುವ ಮೂಲಕ ಕಾರ್ಯ ಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಕ್ರಮ ಕುರಿತು ಮಾತನಾಡಿದ ಯುವರಾಜ್, ನಮಗೆ ಉತ್ತಮ ಆರೋಗ್ಯ ಲಭಿಸಬೇಕಾದರೆ ನಮ್ಮ ಸುತ್ತಲಿನ ಪರಿಸರವನ್ನು ನಾವು ಶುಚಿಯಾಗಿ ನೋಡಿಕೊಳ್ಳಬೇಕು, ಅದು ನಮ್ಮೆಲ್ಲರ ಹೊಣೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶುದ್ಧಗಂಗಾ ವಿಭಾಗದ ಯೋಜನಾಧಿಕಾರಿ ಯುವರಾಜ್ ಜೈನ್, ತಾಲೂಕು ಯೋಜನಾಧಿಕಾರಿ ಭಾಸ್ಕರ್, ಮೇಲ್ವಿಚಾರಕಿ ಪವಿತ್ರ, ಸುನಿಲ್, ಸೇವಾ ಪ್ರತಿನಿಧಿ ರೇಖಾ, ಸಂಘದ ಮಹಿಳಾ ಸದಸ್ಯರು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಸಮಾಜದಲ್ಲಿ ಬೆಳೆಯುತ್ತಿರುವ ಧರ್ಮ ದ್ವೇಷ, ಜಾತಿಪದ್ದತಿ, ಲಿಂಗ ಅಸಮಾನತೆ ಮತ್ತು ಅಸ್ಪೃಶ್ಯತೆಗಳನ್ನು ತೊಡೆದುಹಾಕಲು ಮಾನಸಿಕ ಮಾಲಿನ್ಯವನ್ನು ನಿವಾರಣೆ ಮಾಡಬೇಕೆಂದು ನಾಡೋಜ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ. ತುಮಕೂರು ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ‘ಈ ದಿನ ಡಾಟ್ ಕಾಮ್’ ಆಯೋಜಿಸಿದ್ದ ‘ನಮ್ಮ ಕರ್ನಾಟಕ ನಡೆದು 50 ಹೆಜ್ಜೆ, ಮುಂದಿನ ದಿಕ್ಕು’ ವಿಶೇಷ ಸಂಚಿಕೆ ಹಾಗೂ ನ್ಯೂಸ್ ಆಪ್ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಬೀದಿಗಳು ಸ್ವಚ್ಛವಾಗುವುದು ಮಾತ್ರವಲ್ಲದೆ, ಭಾವ ಭಾರತೀಯತ್ವವೂ ಸ್ವಚ್ಛವಾಗಬೇಕಾಗಿದೆ. ಜನರ ಮನಸ್ಸಿನಲ್ಲಿ ಆಳವಾಗಿ ಬೇರುಬಿಟ್ಟಿರುವ ಮನುಸ್ಮೃತಿ ಮತ್ತು ಬಂಡವಾಳಶಾಹಿಯ ಮಾಲಿನ್ಯವನ್ನು ನಿವಾರಿಸಬೇಕಾಗಿದೆ” ಎಂದು ಅವರು ಹೇಳಿದರು. ಹಿರಿಯ ಸಾಮಾಜಿಕ ಚಿಂತಕ ಕೆ.ದೊರೈರಾಜ್ ಆಪ್ ಬಿಡುಗಡೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಮಾಜಿ ಜಿಲ್ಲಾಧ್ಯಕ್ಷೆ ಬಾ.ಹ.ರಮಾಕುಮಾರಿ ವಹಿಸಿದ್ದರು. ಪರಿಸರವಾದಿ ಸಿ.ಯತಿರಾಜು, ರೈತ ಸಂಘದ ಜಿಲ್ಲಾಧ್ಯಕ್ಷ ಎ. ಗೋವಿಂದರಾಜು, ಸಾಮಾಜಿಕ ಹೋರಾಟಗಾರ ಎ.ನರಸಿಂಹಮೂರ್ತಿ, ಎಐಟಿಯುಸಿ ಮುಖಂಡ ಗಿರೀಶ್ ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿ, ಅಕ್ಕಿರಾಮಪುರದ ಇತಿಹಾಸ ಪ್ರಸಿದ್ಧ ಶ್ರೀ ಅನಂತನಾಥ ಸ್ವಾಮಿ ದೇವರ ಧರ್ಮ ಸಂಸ್ಥೆ ವತಿಯಿಂದ ನಡೆದ ಶ್ರೀ ಅನಂತನಾಥ ಹಾಗೂ ಬ್ರಹ್ಮ ಯಕ್ಷರ ವಾರ್ಷಿಕ ಪೂಜೆ ಮಹೋತ್ಸವ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಶ್ರೀ ಕ್ಷೇತ್ರ ನರಸಿಂಹರಾಜಪುರ ಸಿಂಹನ ಗದ್ದೆ ಬಸ್ತಿ ಮಠದ ಪೀಠಾಧ್ಯಕ್ಷರಾದ ಸ್ವಸ್ತಿ ಶ್ರೀ ಲಕ್ಷ್ಮಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ಹಾಗೂ ಶ್ರೀ ಕ್ಷೇತ್ರ ಆರತಿಪುರ ಜೈನಮಠದ ಸ್ವಸ್ತಿ ಶ್ರೀ ಸಿದ್ದಂತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಶುಭ ಆಶೀರ್ವಾದದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಬೆಳಗ್ಗೆ ಆಗ್ರೋದಕ ಉತ್ಸವ ಧ್ವಜಾರೋಹಣ ,ನಿತ್ಯ ಪೂಜೆ, ಕಳಸ ಮಹಾಭಿಷೇಕ ಪೂಜೆ, ಪಂಚಾಮೃತ ಅಭಿಷೇಕ ಹಾಗೂ ಷೋಡಷೋಪಚಾರ ಪೂಜೆ, ಮಹಾ ಮಂಗಳಾರತಿ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶ್ರೀ ಅನಂತ ನಾಥ ತೀರ್ಥಂಕರ , ಕ್ಷೇತ್ರಪಾಲ , ಬ್ರಹ್ಮ ದೇವರಿಗೆ, ಜಿನ ಶಾಸನ ದೇವಿಯರಿಗೆ ಪೂಜೆ, ಮಹಾ ಮಂಗಳಾರತಿಗಳು ನಡೆದವು. ಪುರೋಹಿತರದ ಬಸ್ತಿ ಪಾರ್ಶ್ವನಾಥ ಹಾಗೂ ಬಸ್ತಿ ಮಹಾವೀರ…