Subscribe to Updates
Get the latest creative news from FooBar about art, design and business.
- ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
- ಬಿತ್ತನೆ ಬೀಜ: ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
- ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
- ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
Author: admin
ತುಮಕೂರು: ಸರ್ಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮೆನು ಚಾರ್ಚ್ ಗಳನ್ನು ಪ್ರದರ್ಶಿಸಬೇಕು. ಮೆನು ಚಾರ್ಟ್ ನಲ್ಲಿರುವಂತೆ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಉಪಹಾರ, ಭೋಜನ ವ್ಯವಸ್ಥೆ ಮಾಡಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ತುಮಕೂರು ತಾಲ್ಲೂಕು ವಿದ್ಯಾರ್ಥಿ ನಿಲಯಗಳ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ತಿಪ್ಪೇಸ್ವಾಮಿ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಮಂಗಳವಾರ ನಡೆದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪಾಲಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಲಯಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಸುರಕ್ಷತೆ ಮತ್ತು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು. ವಿದ್ಯಾರ್ಥಿನಿಲಯಗಳಲ್ಲಿ ಗುಣಮಟ್ಟದ ಆಹಾರ, ಗ್ರಂಥಾಲಯ, ಕ್ರೀಡಾಕಿಟ್, ಶೌಚಾಲಯ, ವಿದ್ಯುತ್ ಸಂಪರ್ಕ, ಸಮವಸ್ತ್ರ, ಸಿಸಿ ಕ್ಯಾಮರಾ, ಕಂಪ್ಯೂಟರ್, ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಎಲ್ಲಾ ಸರ್ಕಾರಿ ವಿದ್ಯಾರ್ಥಿನಿಲಯಗಳ ನಿಲಯ ಪಾಲಕರು ಕೇಂದ್ರ ಸ್ಥಾನದಲ್ಲಿದ್ದು, ವಿದ್ಯಾರ್ಥಿನಿಲಯಗಳಲ್ಲಿ ಯಾವುದೇ ಸಮಸ್ಯೆಗಳು ತಲೆದೋರದಂತೆ ಎಚ್ಚರಿಕೆವಹಿಸಬೇಕೆಂದು ನಿರ್ದೇಶನ ನೀಡಿದರು. ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರಿಗೆ ಪ್ರತಿ ಮಾಹೆ ಸ್ಯಾನಿಟರಿ ನ್ಯಾಪ್ಕಿನ್ ನೀಡಬೇಕು. ವಿದ್ಯಾರ್ಥಿ…
ತುಮಕೂರು: ಜಿಲ್ಲೆಯಲ್ಲಿ 2024ರ ಏಪ್ರಿಲ್ ನಿಂದ ನವೆಂಬರ್ ವರೆಗೆ 16 ತಾಯಿ ಮರಣ ಹಾಗೂ 196 ಶಿಶು ಮರಣ ಸಂಭವಿಸಿದ್ದು, ತಾಯಿ ಮತ್ತು ಶಿಶು ಮರಣದ ಪ್ರಮಾಣವನ್ನು ಶೂನ್ಯಕ್ಕಿಳಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 2024ರ ಏಪ್ರಿಲ್ನಿಂದ ನವೆಂಬರ್ ವರೆಗೆ 19,583 ಹೆರಿಗೆ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 16 ತಾಯಿ ಮರಣ ಹಾಗೂ 196 ಶಿಶು ಮರಣ ಸಂಭವಿಸಿವೆ. ತಾಯಿ ಮತ್ತು ಶಿಶು ಮರಣಗಳ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದರಲ್ಲದೆ, ಖಾಸಗಿ/ ಸರ್ಕಾರಿ ಆಸ್ಪತ್ರೆಗಳಲ್ಲಿ ಉದಾಸೀನ ಮಾಡದೆ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ತಾಯಿ ಮತ್ತು ಶಿಶು ಮರಣ ಸಂಭವಿಸಿದ ನಂತರ ಮರಣ ಪ್ರಮಾಣದ ಬಗ್ಗೆ ಚರ್ಚಿಸುವ ಬದಲು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ…
ತುಮಕೂರು: ಹಲವಾರು ವರ್ಷಗಳಿಂದ ಪೋಡಿ ದುರಸ್ತಿಗೊಳ್ಳದೆ ಬಾಕಿ ಉಳಿದುಕೊಂಡಿದ್ದ ಜಮೀನುಗಳನ್ನು ಕನಿಷ್ಠ ಮಂಜೂರಿ ದಾಖಲೆಗಳ ಪರಿಶೀಲನೆ ನಡೆಸಿ ಹೊಸ ಪಹಣಿ ಸೃಜಿಸುವ ಮೂಲಕ ರೈತರ ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ದೊರಕಿಸಿಕೊಡಲು ಕಂದಾಯ ಇಲಾಖೆಯು ದರಖಾಸ್ತು ದುರಸ್ತಿ ಪೋಡಿ ಮಾರ್ಗಸೂಚಿ ನಿಯಮಗಳನ್ನು ಸರಳೀಕರಣಗೊಳಿಸಿದ್ದು, ಜಿಲ್ಲೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. ಭೂ ಮಂಜೂರಿಯಂತೆ ಸರ್ಕಾರಿ ಸರ್ವೇ ನಂಬರುಗಳಿಂದ ಪ್ರತ್ಯೇಕಿಸಿ ಹಿಡುವಳಿ ಭೂಮಿಯನ್ನಾಗಿಸುವ ಪೋಡಿ ದುರಸ್ತಿಯ ಪ್ರಕ್ರಿಯೆಯಲ್ಲಿನ ಕಠಿಣ ನಿಯಮಗಳನ್ನು ಸರ್ಕಾರ ಸರಳೀಕರಣ ಮಾಡಿರುವ ಪರಿಣಾಮ ಸರ್ಕಾರಿ ನಂಬರುಗಳಲ್ಲಿನ ಮಂಜೂರಿ ರೈತಾಪಿ ವರ್ಗದವರಿಗೆ ಈ ನಿಯಮಗಳಿಂದ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಕನಿಷ್ಠ 3 ಮಂಜೂರಿ ದಾಖಲೆಗಳಿದ್ದರೂ ಆಗುತ್ತೆ ದರಖಾಸ್ತು ಮತ್ತು ಪೋಡಿ ದರಖಾಸ್ತು ಮತ್ತು ಪೋಡಿ ಪ್ರಕರಣಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ದೃಷ್ಟಿಯಿಂದ ಸರ್ಕಾರವು ನಮೂನೆ 1-5ನ್ನು ತಯಾರಿಸುವ ಪ್ರಕ್ರಿಯೆಯನ್ನು ಸರಳೀಕರಿಸಿದ್ದು, ಕನಿಷ್ಠ 3 ಮಂಜೂರಿ ದಾಖಲೆಗಳು ಲಭ್ಯವಿದ್ದಲ್ಲಿ ತಹಶೀಲ್ದಾರ್ಗಳು ನೈಜತೆ…
ತುಮಕೂರು: ತುಮಕೂರು ನಗರದ ಹಿರಿಯ ಸಮಾಜ ಸೇವಕರಾದ ಪಿ.ಎಸ್.ಚಂದ್ರಮೋಹನ್(65) ಇಂದು ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರು ಸದಾ ಶಿಕ್ಷಣ ಪ್ರೇಮಿಯಾಗಿದ್ದರು, ಬಡವರು, ದೀನರು, ಮಕ್ಕಳ ಬಗ್ಗೆ ಅಪಾರ ಪ್ರೇಮವನ್ನು ಹೊಂದಿದ್ದರು. ಪಿ.ಎಸ್.ಚಂದ್ರಮೊಹನ್ ರವರ ತಂದೆ ದಿವಂಗತ ಕೆ.ಸುಬ್ಬರಾಯರವರು ನಿವೃತ್ತ ಎಇಓ ಆಗಿದ್ದು, ತಾಯಿ ದಿವಂಗತ ಸರೋಜಮ್ಮನವರು ತಂದೆ—ತಾಯಿ ಇಬ್ಬರೂ ಸಹ ಶಿಕ್ಷಣಕ್ಕೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು. ತಮ್ಮ ಪ್ರಾಥಮಿಕ ಶಿಕ್ಷಣವನ್ನು ತುರುವೇಕೆರೆ, ಗುಬ್ಬಿಯಲ್ಲಿ ಪಡೆದು ಪಿಯುಸಿಯನ್ನು ತುಮಕೂರಿನ ಸರ್ಕಾರಿ ಕಾಲೇಜಿನಲ್ಲಿ ಪಡೆದು ಬಿಇ(ಸಿವಿಲ್) ಪದವಿಯನ್ನು ಶ್ರೀ ಸಿದ್ಧಗಂಗಾ ಇನ್ಸಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪಡೆದು ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಆಗಿ ಸೇವೆಗೆ ಸೇರಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ 36 ವರ್ಷ ಸರ್ಕಾರಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಅವರಿಗೆಇಬ್ಬರು ಮಕ್ಕಳಿದ್ದು ಹಿರಿಯ ಮಗ ಟಿ.ಸಿ.ಚೇತನ್ ರವರು ಬಿ.ಇ.(ಕಂಪ್ಯೂಟರ್ ಸೈನ್ಸ್) ಪದವೀಧರರಾಗಿದ್ದು ಕೆನಡಾದೇಶದಲ್ಲಿ ಸಾಫ್ಟ್ ವೇರ್ ಕಂಪೆನಿಯಲ್ಲಿ ಮ್ಯಾನೇಜರ್ ಆಗಿದ್ದಾರೆ. ಮಗಳು ಸಹ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರು ಹೆಂಡತಿ,…
ಕಾರ್ಕಳ: ಇಲ್ಲಿನ ಹಿರಿಯಂಗಡಿಯ ಇತಿಹಾಸ ಪ್ರಸಿದ್ಧ ಹಲ್ಲರ ಬಸದಿಯ ರಥೋತ್ಸವ ಹಾಗೂ ಸಮಾವಸರಣ ಪೂಜೆಗಳು ನಡೆದವು. ಶ್ರೀ ನೇಮಿನಾಥ ತೀರ್ಥಂಕರ, ಶ್ರೀ ಪಾರ್ಶ್ವನಾಥ ತೀರ್ಥಂಕರ ಹಾಗೂ ಚತುರ್ವಿಶ ತೀರ್ಥಂಕರ, ಮಾತೆ ಪದ್ಮಾವತಿಗೆ ವಿಶೇಷ ಪೂಜೆ, ಅಭಿಷೇಕ, ಆರಾಧನೆಗಳು ನಡೆದವು . ಕಾರ್ಕಳ ,ಮೂಡುಬಿದರೆ ,ಕಳಸ ಸೇರಿದಂತೆ, ನಾಡಿನ ವಿವಿಧಡೆಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಯಶ್ರೀ ಹೊರನಾಡು ಅವರ ಸಂಗೀತ ಹೊಸ ಮೆರುಗು ನೀಡಿತು. ವರದಿ: ಜೆ.ರಂಗನಾಥ, ತುಮಕೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಮೂಡುಬಿದರೆ: ಜೈನ ಧರ್ಮ ಪುರಾತನವಾದ ಧರ್ಮವಾಗಿದ್ದು ಸರ್ವಧರ್ಮಗಳೊಂದಿಗೆ ಸಮನ್ವಯ ಕಾಪಾಡಿಕೊಂಡು ಬರುತ್ತಿರುವ ಧರ್ಮವಾಗಿದೆ, ಎಲ್ಲಾ ಧರ್ಮಗಳನ್ನು ಪ್ರೋತ್ಸಾಹಿಸುತ್ತಿದ್ದು, ಈ ಪರಿ ಬೇರೆ ಧರ್ಮದಲ್ಲಿ ಕಾಣುವುದಿಲ್ಲ ಎಂದು ಮೂಡುಬಿದರೆ ಜೈನ ಮಠದ ಸ್ವಸ್ತಿ ಶ್ರೀ ಚಾರು ಕೀರ್ತಿ ಭಟ್ಟರಕ ಪಂಡಿತಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಅವರಿಂದ ಮೂಡುಬಿದರೆ ಲೆಪ್ಪ ಬಸದಿಯ ಶ್ರೀ ಚಂದ್ರನಾಥ ತೀರ್ಥಂಕರ ಹಾಗೂ ಮಾತೇ ಜ್ವಾಲಾ ಮಾಲಿನಿ ಅಮ್ಮನವರ 38ನೇ ವಾರ್ಷಿಕ ಲಟ್ಟಣಿಗೆ ಅಭಿಷೇಕ, ಧಾರ್ಮಿಕ ಸಭಾ, ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮೂಡುಬಿದಿರೆ ಬಾಗದಲ್ಲಿ ಶ್ರೀಮಂತ ಮನೆತನಗಳು, ಮಠಗಳು, ರಾಜರಿದ್ದರು ಜೈನ ಧರ್ಮದ ಆಚಾರ ವಿಚಾರಗಳನ್ನು ಜನ ಗೌರವಿಸುತ್ತಿದ್ದರು, ಎಲ್ಲಾ ಧರ್ಮಗಳನ್ನು ಪ್ರೋತ್ಸಾಹಿಸಿದ್ದಾರೆ ಇದೊಂದು ಸರ್ವಧರ್ಮ ಸಮನ್ವಯ ಕ್ಷೇತ್ರವಾಗಿತ್ತು ಎಂದರು. ಮೂಡುಬಿದರೆಯಲ್ಲಿ ಜೈನ ಧರ್ಮಕ್ಕೆ ಪುರಾತನ ಇತಿಹಾಸವಿದೆ, ಉನ್ನತವಾಗಿ ಬೆಳೆದಿದೆ, ಪುತ್ತಿಗೆ ಅರಸರು, ಪರಂಪರೆ, ಕಾವ್ಯವಾಚನ ನೀಡಿದ್ದಾರೆ ಲೆಪ್ಪದ ಬಸದಿಗೆ ಈ ಹಿಂದೆ ವೈಭವದ ಪಂಚಕಲ್ಯಾಣಗಳು ನಡೆದಿವೆ ,ಕೆರೆ, ಕಟ್ಟೆ ಬಾವಿಗಳನ್ನು ಜನರಿಗೆ ಧಾರೆ ಎರೆದ ಜೈನ…
ಬೆಳಗಾವಿ ಸುವರ್ಣಸೌಧ: ಬಡವರನ್ನು ಅತಿ ಹೆಚ್ಚಿನ ಬಡ್ಡಿ ನೀಡುವ ಆಸೆಯೊಡ್ಡಿ, ಠೇವಣಿ ಪಡೆದು, ನಂತರ ವಂಚಿಸುವ ಯತ್ನವನ್ನು ತಡೆಗಟ್ಟುವುದು ಹಾಗೂ ವಂಚಕರನ್ನು ಕಠಿಣವಾಗಿ ಶಿಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ಸೋಮವಾರ 2024 ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಬಡವರು, ಮಧ್ಯವರ್ಗದವರು, ಮತ್ತಿತರರು ಹಣಕಾಸು ವ್ಯವಹಾರಗಳಲ್ಲಿ ಆಸೆಗೆ ಬಲಿಯಾಗಿ ವಂಚನೆಗೆ ಒಳಗಾಗುವುದನ್ನು ತಡೆಗಟ್ಟಲು ಹಾಗೂ ವಂಚಕರನ್ನು ಶಿಕ್ಷಿಸುವ ನಿಟ್ಟಿನಲ್ಲಿ ವಿಧೇಯಕ ತರಲಾಗುತ್ತಿದೆ. ಈ ದಿಸೆಯಲ್ಲಿ ಆಯಾ ವಿಭಾಗದ ಉಪವಿಭಾಗಾಧಿಕಾರಿಗಳು ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು, ಕಾನೂನು ಕ್ರಮ ಕೈಗೊಳ್ಳಲು ಹೆಚ್ಚಿನ ಅಧಿಕಾರ ನೀಡಲಾಗುತ್ತಿದೆ ಎಂದರು. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಾತನಾಡಿ, 2003–04 ರಲ್ಲಿ ವಿನಿವಿಂಕ್ ಶಾಸ್ತ್ರಿ ಕೋಟ್ಯಾಂತರ ರೂ. ಗಳ ಠೇವಣಿ ಸಂಗ್ರಹಿಸಿ,…
ಸುವರ್ಣ ವಿಧಾನಸೌಧ ಬೆಳಗಾವಿ: ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಡಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ಡ್ರಿಲ್ಲಿಂಗ್ ಏಜೆನ್ಸಿ ಹಾಗೂ ಇಂಪ್ಲಿಮೆಂಟಿಂಗ್ ಏಜೆನ್ಸಿಗಳಿಗೆ 25 ಸಾವಿರ ದಂಡ ಹಾಗೂ 1 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸುವ ಮಸೂದೆ ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದರು. ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನಸಭೇಯಲ್ಲಿ ಮಸೂದೆ ಅಂಗಿಕಾರವಾದ ನಂತರ ಪ್ರತಿಕ್ರಿಯೆ ನೀಡಿದರು. ವಿಫಲ ಕೊಳವೆ ಬಾವಿಗಳನ್ನು ಮುಚ್ಚದೇ ಇರುವ ಮೂಲಕ ಹಲವಾರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಪ್ರಕರಣಗಳಿಗೆ ಬ್ರೇಕ್ ಹಾಕುವುದು ಸರಕಾರದ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ…
ಬೆಳಗಾವಿ ಸುವರ್ಣಸೌಧ: ರಾಯಚೂರು ವಿಶ್ವ ವಿದ್ಯಾನಿಲಯಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಎಂದು ಮರು ನಾಮಕರಣ ಮಾಡುವ ವಿಧೇಯಕಕ್ಕೆ ಸೋಮವಾರ ವಿಧಾನ ಸಭೆಯಲ್ಲಿ ಅಂಗೀಕಾರ ದೊರೆಯಿತು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೋಮವಾರ 2024ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವ ವಿದ್ಯಾನಿಲಯ ತಿದ್ದುಪಡಿ ವಿಧೇಯಕವನ್ನು ಸದನದಲ್ಲಿ ಪರ್ಯಾಲೋಚನೆಗೆ ಪ್ರಸ್ತಾಪಿಸಿದಾಗ, ಸದನ ಧ್ವನಿ ಮತದಿಂದ ವಿಧೇಯಕಕ್ಕೆ ಅಂಗೀಕಾರ ನೀಡಿತು. ಈ ಹಿಂದೆ ರಾಯಚೂರು ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿಶ್ವ ವಿದ್ಯಾನಿಲಯ ಇನ್ನೂ ಮುಂದೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾನಿಲಯ ಮರು ನಾಮಕರಣಗೊಂಡಿದೆ. ಇದೇ ವೇಳೆ ಸಚಿವ ಡಾ.ಎಂ.ಸಿ.ಸುಧಾಕರ್ ಚಾಣಕ್ಯ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ ಅನುಮೋದನೆಗೆ ಪ್ರಸ್ತಾಪಿಸಿದಾಗ ಯಾವುದೇ ಚರ್ಚೆ ಇಲ್ಲದೆ ಸದನ ಅಂಗೀಕರಿಸಿತು. ಈ ವಿಧೇಯಕದ ಉದ್ದೇಶವೇನೆಂದರೆ ರಾಜ್ಯ ಸರ್ಕಾರ ಮೂಲಕದ ಸಂಬಂಧಪಟ್ಟ ಕ್ಷೇತ್ರದಿಂದ ವಿಶೇಷ ತಜ್ಞರನ್ನು ವಿಶ್ವ ವಿದ್ಯಾನಿಲಯ ಆಡಳಿತ ಮಂಡಳಿಗೆ ನಾಮ ನಿರ್ದೇಶನ ಮಾಡಲು ಅವಕಾಶ ಕಲ್ಪಿಸುವುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಳಗಾವಿ ಸುವರ್ಣಸೌಧ: ರಾಜ್ಯದ ಆರೋಗ್ಯಇಲಾಖೆ ಯಲ್ಲಿ ಒಟ್ಟು 69,915 ಹುದ್ದೆಗಳು ಮಂಜೂರಾಗಿದ್ದು ಅವುಗಳಲ್ಲಿ 37045 ಹುದ್ದೆಗಳನ್ನು ಭರ್ತಿ ಮಾಡಿದ್ದು 32870 ಹುದ್ದೆಗಳು ಖಾಲಿ ಇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಎಂ. ಜಿ. ಮುಳೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಖಾಲಿಯಿರುವ ಹುದ್ದೆಗಳಲ್ಲಿ ಗ್ರೂಪ್–ಡಿ ಹುದ್ದೆಗಳನ್ನು ಶೇ.30 ರಷ್ಟು Non–Clinical ಗೂ, ಶೇ. 45 ರಷ್ಟು ಗ್ರೂಪ್-ಡಿ ಹುದ್ದೆಗಳನ್ನು ಒಟ್ಟಾರೆಯಾಗಿ ಶೇ. 75 ರಷ್ಟು ಮೀರದಂತೆ ಹೊರಗುತ್ತಿಗೆ ಮೂಲಕ ಟೆಂಡರ್ ಆಹ್ವಾನಿಸಿ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಜಿಲ್ಲಾಧಿಕಾರಿಗಳ ಅನುಮೋದನೆ ಪಡೆದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು. ರಾಜ್ಯದಲ್ಲಿ ಖಾಲಿಯಿರುವ ತಜ್ಞ ವೈದ್ಯರನ್ನು ಮತ್ತು ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಕೆಲವು ಷರತ್ತಿಗೊಳಪಟ್ಟು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಮತ್ತು ಇಲಾಖೆಯ ಮುಖಾಂತರ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬರುವ ತಜ್ಞ ವೈದ್ಯರನ್ನು ತಜ್ಞತ ಹುದ್ದೆಗೆ…