Author: admin

ಕೊರಟಗೆರೆ: ಹೊಸ ಮನೆ ಕಟ್ಟುವ ಸಂದರ್ಭದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಆಕೆಯನ್ನ 6 ತಿಂಗಳ ಗರ್ಭಿಣಿಯನ್ನಾಗಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೋಕ್ಸೋ ಕಾಯ್ದೆ ಅಡಿ ಕೊರಟಗೆರೆ ಪೊಲೀಸ್ ಅಧಿಕಾರಿಗಳು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಲೋಕೇಶ್ (48 ) ಎಂಬಾತ ಕೃತ್ಯ ನಡೆಸಿದ ಆರೋಪಿಯಾಗಿದ್ದಾನೆ. 9ನೇ ತರಗತಿಯ ವಿದ್ಯಾರ್ಥಿನಿಯನ್ನ ಆಕೆಯ ಮನೆಯವರು ಮನೆಯಲ್ಲಿ ಇಲ್ಲದಿರುವ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ಎಸಗಿ 6 ತಿಂಗಳ ಗರ್ಭಿಣಿಯನ್ನಾಗಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೊರಟಗೆರೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಿಂದ ಆರ್ ಬಿ ಎಸ್ ಕೆ ತಂಡ ವೈದ್ಯಕೀಯ ಪರೀಕ್ಷೆ ನಡೆಸಲು ಶಾಲೆಗೆ ಹೋದ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಆರೋಗ್ಯ ತಪಾಸಣೆಯ ಸಂದರ್ಭದಲ್ಲಿ ಗರ್ಭವತಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಈ ಸಂಬಂಧ ಪೋಷಕರು ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು , ಸಿಪಿಐ ಅನಿಲ್ ಕುಮಾರ್ ಪೋಕ್ಸೋ ಕಾಯ್ದೆ ಅಡಿ ಪ್ರಕರಣ…

Read More

ಪಾವಗಡ: ಮನೆಗಳಲ್ಲಿ ಪ್ರಕರಣಗಳನ್ನು ಕಡಿಮೆ ಮಾಡಲು ಪಟ್ಟಣದಲ್ಲಿ ಪಾವಗಡ ಪೊಲೀಸರು ವಿನೂತನ ಪ್ರಯತ್ನ ನಡೆಸಿದ್ದಾರೆ. ಹೌದು..! ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಇತ್ತೀಚಿಗೆ ಮನೆಗಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಳ ಹಾಕುವ ನಿಟ್ಟಿನಲ್ಲಿ ಪಾವಗಡ ಪೊಲೀಸರು ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಅದೇನಪ್ಪ ಅಂದ್ರೆ, ಮನೆ ಮಂದಿ ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋದಂತಹ ಸಂದರ್ಭದಲ್ಲಿ ಪಾವಗಡ ಪೊಲೀಸರಿಗೆ ಮಾಹಿತಿ ನೀಡಿ, ನಾವು ನಿಮ್ಮ ಮನೆಗೆ ರಕ್ಷಣೆ ಕಲ್ಪಿಸುತ್ತೇವೆ ಎಂಬ ಮಾಹಿತಿ ಮತ್ತು ಪೊಲೀಸರನ್ನು ದೂರವಾಣಿ ಸಂಖ್ಯೆಗಳನ್ನು ಒಳಗೊಂಡಂತಹ ಸ್ಟಿಕ್ಕರ್ ಅನ್ನ ಪಾವಗಡ ಪಟ್ಟಣದ ಶ್ರೀನಿವಾಸನಗರ ನಾಗರಕಟ್ಟೆ ವೃತ್ತ ಸೇರಿದಂತೆ ವಿವಿಧಡೆ ಮನೆಗಳ ಬಾಗಿಲುಗಳ ಮೇಲೆ ಪೊಲೀಸರೇ ಸ್ವತಃ ಅಂಟಿಸಿ ಜಾಗೃತಿ ಮೂಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಪಾವಗಡ ವೃತ್ತ ನಿರೀಕ್ಷಕ ಎಂ.ಆರ್.ಸುರೇಶ್ ಅವರು ಮನೆಗಳಿಂದ ಪ್ರವಾಸ ಅಥವಾ ಊರುಗಳಿಗೆ ಹೋಗುವ ಸಂದರ್ಭದಲ್ಲಿ ಬೆಲೆ ಬಾಳುವಂತಹ ವಸ್ತುಗಳನ್ನ ಜೋಪಾನವಾಗಿ ತಮ್ಮ ಜೊತೆಗೆ ತೆಗೆದುಕೊಂಡು ಹೋಗುವುದಾಗಲಿ ಬ್ಯಾಂಕಿನಲ್ಲಿ ಇರಿಸುವುದಾಗಲಿ ಮಾಡಬೇಕು ಅಥವಾ ತಾವು ಊರುಗಳಿಗೆ…

Read More

ಬೀದರ್: ಜಿಲ್ಲೆಯ ಕಮಲನಗರ ತಾಲೂಕಿನ ಅಸಮರ್ಪಕ ಬಸ್ ವ್ಯವಸ್ಥೆಯಿಂದಾಗಿ ಹೆಣ್ಣುಮಕ್ಕಳು ಶಿಕ್ಷಣದಿಂದ ದೂರ ಉಳಿಯುತ್ತಿರುವ ಘಟನೆ ನಡೆಯುತ್ತಿದೆ. ಕೊರೆಕಲ್, ಬ್ಯಾಂಬರಿ, ಡೋಣಗಾಂವ(ಮಹಾ), ಬೇಡಕುಂದಾ, ಲಕ್ಷ್ಮಿನಗರ ಸೇರಿದಂತೆ ಇನ್ನೂ ಹಲವು ಗ್ರಾಮಗಳಿಂದ ಠಾಣಾಕುಶನೂರಿಗೆ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆ–ಕಾಲೇಜುಗಳಿಗೆ ತೆರಳುತ್ತಾರೆ. ಆದರೆ ಸೂಕ್ತ ಬಸ್ ವ್ಯವಸ್ಥೆಯಿಲ್ಲದೇ ನಡಿಗೆಯಿಂದಲೇ ಓಡಾಡಬೇಕಾಗಿದೆ. ಈ ಮಧ್ಯೆ ಕೆಲ ಕಿಡಿಗೇಡಿಗಳು ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದು, ವಿದ್ಯಾರ್ಥಿನಿಯರು ಮಧ್ಯದಲ್ಲಿಯೇ ಶಿಕ್ಷಣದಿಂದ ದೂರ ಉಳಿಯುವಂತಾಗಿದೆ. ಠಾಣಾಕುಶನೂರದಲ್ಲಿ ಸರ್ಕಾರಿ ಪಿಯುಸಿ ಕಾಲೇಜು, ಫ್ರೌಢಶಾಲೆ, ಸರ್ಕಾರಿ ಕನ್ಯಾ ಫ್ರೌಢಶಾಲೆ, ಪ್ರಾಥಮಿಕ ಕನ್ಯಾ ಶಾಲೆಗಳಿವೆ. ಜವಾಹರಲಾಲ್ ನೆಹರೂ ತಾಂತ್ರಿಕ ಮಹಾವಿದ್ಯಾಲಯ, ಅನುದಾನಿತ ಶಾಲೆಗಳಿವೆ. ಸುತ್ತಲಿನ ಗ್ರಾಮಗಳ ಮಕ್ಕಳು ಶಿಕ್ಷಣಕ್ಕಾಗಿ ಇಲ್ಲಿಗೆ ಬರುತ್ತಾರೆ. ಆದರೆ ಬಸ್ ಸೌಲಭ್ಯವಿಲ್ಲದೇ ನಿತ್ಯ 7–8 ಕಿ.ಮೀ. ದೂರವನ್ನು ನಡೆದುಕೊಂಡೇ ಕ್ರಮಿಸಬೇಕಾಗಿದೆ ಎಂದು ಲಕ್ಷ್ಮಿ ನಗರದ ನಿವಾಸಿಗಳು ಅಳಲು ತೊಂಡಿಕೊಂಡರು. ವರದಿ: ಅರವಿಂದ ಮಲ್ಲೀಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ತುಮಕೂರು: ನ್ಯಾಯಾಲಯದ ಆದೇಶದ ಮೇರೆಗೆ ವಿವಿಧ ಜಿಎಸ್ ಸಿ ನಂಬರ್ ಗಳಲ್ಲಿ ಅಮಾನತ್ತುಪಡಿಸಿಕೊಂಡು ಮಾಲೀಕರು ಪತ್ತೆಯಾಗದ 39 ದ್ವಿಚಕ್ರ ವಾಹನಗಳನ್ನು ಡಿಸೆಂಬರ್ 23ರ ಬೆಳಿಗ್ಗೆ 10.30 ಗಂಟೆಗೆ ನಗರ ಪೊಲೀಸ್ ಠಾಣೆ ಆವರಣದಲ್ಲಿ ಸಾರ್ವಜನಿಕವಾಗಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ರಸ್ತೆ ನಿಯಮಗಳನ್ನು ಪಾಲಿಸಿದಲ್ಲಿ ಅಪಘಾತ ಪ್ರಕರಣಗಳನ್ನು ತಡೆಗಟ್ಟಬಹುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಸಲಹೆ ನೀಡಿದರು. ನಗರದ ಎಂಪ್ರೆಸ್ ಬಾಲಕಿಯ ಪ್ರೌಢಶಾಲೆ ಆವರಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಎಲ್.ಇ.ಡಿ. ವಾಹನಗಳ ಮುಖಾಂತರ ರಸ್ತೆ ಸುರಕ್ಷತಾ ನಿಯಮ ಕುರಿತು ಜನ–ಜಾಗೃತಿ ಮೂಡಿಸುವ ವಿಡಿಯೋ ಸಂದೇಶವುಳ್ಳ ತುಣುಕುಗಳ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಾಹನ ಚಾಲಕರ ಬೇಜವಾಬ್ದಾರಿಯಿಂದ ಅಪಘಾತಗಳು ಸಂಭವಿಸುತ್ತಿವೆ. ಹೆಲ್ಮೆಟ್ ಇಲ್ಲದ ವಾಹನ ಚಾಲನೆ ವೀಲಿಂಗ್ ಸಾಹಸಗಳಿಂದ ಯುವಕರು ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು ಎಂದು ಹೇಳಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಸಾದ್ ಎ.ವಿ. ಮಾತನಾಡಿ, ತುಮಕೂರು ನಗರದ ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಬಸ್ ನಿಲ್ದಾಣ, ಮಾರುಕಟ್ಟೆಗಳಲ್ಲಿ ಎಲ್.ಇ.ಡಿ. ವಾಹನಗಳ ಮುಖಾಂತರ ಜನ-ಜಾಗೃತಿ ಮೂಡಿಸುವ ವಿಡಿಯೋ ಸಂದೇಶವುಳ್ಳ ತುಣುಕುಗಳನ್ನು ಪ್ರದರ್ಶಿಸುವ 250 ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆ ಉಪನಿರ್ದೇಶಕ ಡಾ:…

Read More

ತುಮಕೂರು: ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮ ಹಾಗೂ ಕಾನೂನು ಪಾಲನೆ ಕುರಿತು ಮೊಬೈಲ್ ಕ್ಯಾಮೆರಾ ಸಹಾಯದಿಂದ ಕಿರುಚಿತ್ರ ತಯಾರಿಸಿ ಕಳುಹಿಸಲು ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಮನವಿ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಕರು ತಂಬಾಕು ಸೇವನೆಗೆ ದಾಸರಾಗುತ್ತಿದ್ದು, ಯುವಜನರಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕಿರು ಚಿತ್ರಗಳನ್ನು ಇಲಾಖೆಯ ವೆಬ್ಸೈಟ್ನಲ್ಲಿ ಅಳವಡಿಸಲು ಉದ್ದೇಶಿಸಲಾಗಿದೆ. ಆಸಕ್ತರು ತಂಬಾಕು ದುಷ್ಪರಿಣಾಮ ಕುರಿತು ಕಿರುಚಿತ್ರಗಳನ್ನು ತಯಾರಿಸಿ ಇಲಾಖೆಯ ಇ–ಮೇಲ್ datctumkur@gmail.comಗೆ ಕಳುಹಿಸಬಹುದಾಗಿದೆ. ಈ ಕಿರುಚಿತ್ರಗಳಿಗೆ ಇಲಾಖೆ ವತಿಯಿಂದ ಯಾವುದೇ ಸಂಭಾವನೆ/ಸೌಲಭ್ಯಗಳನ್ನು ನೀಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಪ.ಜಾತಿ/ಪ.ಪಂಗಡ ಸಮುದಾಯಗಳ ಸಮಸ್ಯೆಗಳನ್ನು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಪ.ಜಾತಿ ಮತ್ತು ಪ.ಪಂಗಡಗಳ ಕುಂದುಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪ.ಪಂಗಡಗಳ ಸ್ಮಶಾನ ಭೂಮಿ ಅಭಿವೃದ್ಧಿ, ನಿವೇಶನ ಹಂಚಿಕೆ, ಸಾಗುವಳಿ ಚೀಟಿ, ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಕುಂದು ಕೊರತೆ ಸಭೆಗಳಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಶೀಲಿಸಿ ತಾಲ್ಲೂಕು ಹಂತದಲ್ಲೇ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು. ಜಿಲ್ಲೆಯ ಹಲವಾರು ಗ್ರಾಮಗಳಲ್ಲಿನ ಪ.ಜಾತಿ ಮತ್ತು ಪ.ಪಂಗಡಗಳ ಸ್ಮಶಾನ ಭೂಮಿ ಸಮಸ್ಯೆಗೆ ಪರಿಹಾರ ದೊರಕಿಸಿಕೊಡದಿರುವ ಬಗ್ಗೆ ಸಮುದಾಯದ ಮುಖಂಡರ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲೂ ಸ್ಮಶಾನಕ್ಕಾಗಿ ಪ್ರತ್ಯೇಕ ಭೂಮಿಯನ್ನು ಮೀಸಲಿಟ್ಟಿದ್ದು, ಜಿ.ಪಿ.ಎಸ್ ಮೂಲಕ ಸರ್ವೇ ನಡೆಸಿ ಸ್ಮಶಾನ ಭೂಮಿಗೆ ಆವರಣ ಗೋಡೆ ನಿರ್ಮಾಣದ ಜೊತೆಗೆ…

Read More

ತುಮಕೂರು: ಭಾರತ ಸೇವಾದಳ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ತುಮಕೂರು ವತಿಯಿಂದ ತಾಲ್ಲೂಕು ಮಟ್ಟದ ಮಕ್ಕಳ ನಾಯಕತ್ವ ತರಬೇತಿ ಶಿಬಿರವನ್ನು ಗುಬ್ಬಿಯ  ಸರ್ಕಾರಿ ಬಾಲಕಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಸ್. ನಟರಾಜು ಅವರು ಗಿಡಕ್ಕೆ ನೀರು ಹಾಕುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳು ಶಾಲೆಯಲ್ಲಿ ನಾಯಕ–ನಾಯಕಿಯರಾಗಿ ನಡೆಯಲು ಸೇವಾದಳದ ನಾಯಕತ್ವ ಶಿಬಿರದ ಚಟುವಟಿಕೆಗಳು ವಿದ್ಯಾರ್ಥಿಗಳ ಕಲಿಕಾ ಹಂತ ಹಾಗೂ ತಮ್ಮೆಲ್ಲರ ಮುಂದಿನ ಜೀವನಕ್ಕೆ ಪೂರಕವಾಗಿದೆ ಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಬಿ.ಜಿ. ವೆಂಕಟೇಗೌಡ ಮಾತನಾಡಿ, ಮಕ್ಕಳಲ್ಲಿ ಸೇವಾ ಮನೋಭಾವನೆಯೊಂದಿಗೆ ಮಾನವೀಯ ಮೌಲ್ಯಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಗುಬ್ಬಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸಿ. ರಮೇಶ್ ಮಕ್ಕಳನ್ನು ಕುರಿತು ಮಾತನಾಡಿ, ಗುರು ಹಿರಿಯರನ್ನು, ರಾಷ್ಟ್ರಧ್ವಜ, ರಾಷ್ಟ್ರಗೀತೆಗಳನ್ನು ಗೌರವಿಸಬೇಕು.  ದೇಶ ಪ್ರೇಮವನ್ನು ಬೆಳೆಸಿಕೊಳ್ಳುವುದರಿಂದ ದೇಶದ ನಾಗರಿಕನಾಗಲು ಸಾಧ್ಯ ಎಂದರು. ಜಿಲ್ಲಾ ಉಪಾಧ್ಯಕ್ಷರಾದ ಜಿ. ವೆಂಕಟೇಶ್…

Read More

ಶ್ರವಣಬೆಳಗೊಳ: ಶಾಂತಿ ಸರಳತೆ ಮತ್ತು ತ್ಯಾಗದ ಸಂದೇಶವನ್ನು ಬಾಹುಬಲಿಯು ಇಡೀ ಜಗತ್ತಿಗೆ ಸಾರಿದ್ದಾರೆ. ಅಂತಹ ವ್ಯಕ್ತಿಯ ಈ ಆರ‍್ಶವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಮುನ್ನೆಡೆದಾಗ ಪರಿಪೂರ್ಣತೆಯ ಸಾರ್ಥಕ ಜೀವನ ನಡೆಸಬಹುದೆಂದು ಮೈಸೂರು ಶಾರದಾ ವಿಲಾಸ ಶಿಕ್ಷಣ ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಎಚ್.ಎನ್.ವಿಶ್ವನಾಥ್ ಹೇಳಿದರು. ಗೊಮ್ಮಟ ನಗರದ ಎಸ್.ಎನ್.ಪದವಿ ಪರ್ವ ಕಾಲೇಜಿನ ರಜತ ಮಹೋತ್ಸವದ ಅಂಗವಾಗಿ ಸ್ನೇಹಲೋಕ ಹಿರಿಯ ವಿದ್ಯಾರ್ಥಿಗಳ ಬಳಗದವರು ಆಯೋಜಿಸಿದ್ದ ಗುರು ವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸಕರಾಗಿ ಭಾಗವಹಿಸಿ ಭಾನುವಾರ ಮಾತನಾಡಿದರು. ಶಿಕ್ಷಣ ಪಡೆಯುವ ಹಂತದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಧನೆಯ ಗುರಿಯನ್ನು ಸಾಧಿಸಬೇಕಾದರೆ ಕಲಿಯುವಿಕೆಯಲ್ಲಿ ಬದಲಾಗುವ ಮನಸ್ಥಿತಿಯನ್ನು ರೂಡಿಸಿಕೊಂಡಾಗ ತನ್ನ ಸ್ವಂತಿಕೆಯ ಅಸ್ತಿತ್ವವನ್ನು ಉಳಿಸಿಕೊಳ್ಳಬಹುದು ಎಂದು ಹೇಳಿದರು. ಜೀವನದಲ್ಲಿ ನಿಂತ ನೀರಾಗದೇ ಸದಾ ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಾ ಕಷ್ಟ ಪಟ್ಟಾಗ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ ಎಂದು ಹುರಿದುಂಬಿಸಿದರು. ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಯುವರಾಜ್, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ  ಬಬನ್ ಪಿ.ದತ್ತವಾಡೆ ಪ್ರಾಂಶುಪಾಲ…

Read More

ವೈ.ಎನ್.ಹೊಸಕೋಟೆ: ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ಕಟ್ಟಿಕೊಡುವುದೇ ಮುಖ್ಯ ಶಿಕ್ಷಣ ಎಂದು ನಿವೃತ್ತ ಉಪಪ್ರಾಂಶುಪಾಲರಾದ ಡಿ.ಎನ್.ಸುಬ್ಬಣ್ಣ ತಿಳಿಸಿದರು. ಗ್ರಾಮದ ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆಯ ೧೯೯೮–೯೯ ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಬಳಗ ಶನಿವಾರ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಾತಾಪಿತೃಗಳನ್ನು ಗುರುಗಳನ್ನು ಗೌರವಿಸುವುದು ಮತ್ತು ಪೂಜಿಸುವುದು ಈ ನೆಲದ ಸಂಸ್ಕೃತಿ. ಆ ಸಂಸ್ಕೃತಿಯನ್ನು ನಮ್ಮ ಈ ಶಾಲೆ ಕಟ್ಟಿದೆ. ವಿದ್ಯಾರ್ಥಿಗಳಲ್ಲಿ ಪಾಠಗಳ ಜೊತೆಗೆ ಮೌಲ್ಯಗಳನ್ನು ಕಟ್ಟಿಕೊಟ್ಟಾಗ ಅದು ಉತ್ತಮ ಶಿಕ್ಷಣವಾಗುತ್ತದೆ. ಸಂಸ್ಕಾರವನ್ನು ಕಟ್ಟಿದ ಈ ಶಾಲೆಗೆ ಹಳೆಯ ವಿದ್ಯಾರ್ಥಿಗಳಾದ ತಾವು ಸಹಕಾರ ನೀಡಿದರೆ ಶಾಲಾ ಪ್ರಗತಿ ಸಾಧ್ಯ ಎಂದರು. ಸುವರ್ಣ ಸಂಭ್ರಮದ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದಕ್ಕೆ ನಮ್ಮ ಬದುಕು ಸಾರ್ಥಕವೆನಿಸುತ್ತಿದೆ. ವಿದ್ಯಾರ್ಥಿಗಳು ಗುರುವಂದನೆ ಕಾರ್ಯಕ್ರಮದಡಿ ನಮಗೆ ನೀಡಿದ ಗೌರವಾಧಾರಣಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ನಿವೃತ್ತ ಪ್ರಾಂಶುಪಾಲ ಮಹಮ್ಮದ್ ಹುಸೇನ್ ತಿಳಿಸಿದರು. ನಾನು ಕಲಿತ  ಈ ಶಾಲೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನಗೆ ದೊರೆತ ಪುಣ್ಯ ಎಂದು ಭಾವಿಸಿದ್ದೇನೆ.…

Read More