Subscribe to Updates
Get the latest creative news from FooBar about art, design and business.
- ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
- ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
- ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
- ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
Author: admin
ಬೆಳಗಾವಿ: ಎರಡು ತಿಂಗಳ ಮಗುವನ್ನು ಹೆತ್ತ ತಾಯಿಯೇ ಕೆರೆಗೆ ಎಸೆದಿರುವ ಘಟನೆಯೊಂದು ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ. ಕಣಬರಗಿ ಗ್ರಾಮದ ನಿವಾಸಿ ಶಾಂತಿ ಕರವಿನಕೊಪ್ಪ ತನ್ನ ಮಗುವನ್ನು ಕೆರೆಗೆ ಎಸೆದ ತಾಯಿಯಾಗಿದ್ದಾಳೆ. ಈಕೆ ಮಗುವನ್ನು ಕೆರೆಗೆ ಎಸೆಯುತ್ತಿರುವುದನ್ನು ಕಂಡ ಕೆಲವು ಯುವಕರು ತಕ್ಷಣವೇ ಕೆರೆಗೆ ಹಾರಿ ಮಗುವನ್ನು ರಕ್ಷಿಸಿದ್ದಾರೆ. ಬಳಿಕ ಬೆಳಗಾವಿ ಮಕ್ಕಳ ಖಾಸಗಿ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಾಳಮಾರುತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು, ತಾಯಿ ಶಾಂತಿಯನ್ನು ಬಂಧಿಸಿದ್ದಾರೆ. ಇನ್ನೂ ಮಗುವನ್ನು ಕೆರೆಗೆ ಎಸೆದಿರುವ ಬಗ್ಗೆ ಪ್ರಶ್ನಿಸಿದ ವೇಳೆ, ಮಗುವಿಗೆ ನಿರಂತರವಾಗಿ ಫಿಡ್ಸ್ ಬರುತ್ತಿತ್ತು. ನಿನ್ನೆಯಷ್ಟೇ ಆಸ್ಪತ್ರೆಯಿಂದ ಕರೆದುಕೊಂಡು ಬಂದಿದ್ದೆ. ಹಾಗಾಗಿ ಕೆರೆಗೆ ಎಸೆದಿರುವುದಾಗಿ ತಾಯಿ ಶಾಂತ ಹೇಳಿದ್ದಾಳೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಗದಗ: ರೋಣ ಮತಕ್ಷೇತ್ರದಲ್ಲಿ ಶಾಸಕ ಜಿ.ಎಸ್.ಪಾಟೀಲ ನೇತೃತ್ವದಲ್ಲಿ 197 ಕೋಟಿ ರೂ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಯ ರೋಣ ಪಟ್ಟಣದ ದ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ರೋಣ ವಿಧಾನಸಭೆ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಸಿರಿಧಾನ್ಯ ಅತ್ಯಂತ ಜನಪ್ರಿಯ ಉತ್ಪಾದನೆಯಲ್ಲೊಂದಾಗಿದ್ದು, ಜಗತ್ತಿನಲ್ಲಿ ಸಿರಿಧಾನ್ಯವನ್ನು ಹೆಚ್ಚು ಹೆಚ್ಚು ಬೆಳೆಯಲು ಪ್ರಯತ್ನಿಸಲಾಗುತ್ತಿದೆ. ಅದಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಸಿರಿಧಾನ್ಯ ಹೆಚ್ಚು ನಾರಿನಾಂಶ ಇರುವ ಆಹಾರಧಾನ್ಯ. ಹೆಚ್ಚಾಗಿ ಬಳಸುವುದರಿಂದ ನಮ್ಮ ಶರೀರದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಡಯಾಬಿಟಿಸ್ ನಿಯಂತ್ರಣಕ್ಕೆ ಅನುಕೂಲವಾಗುತ್ತದೆ ಎಂದರು. ಗ್ಯಾರಂಟಿ ಯೋಜನೆ ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ನಮ್ಮ ಮೇಲೆ ಟೀಕೆ ಮಾಡುತ್ತಿದೆ. ಅಭಿವೃದ್ಧಿ ಗೆ ಹಣ ಇಲ್ಲದೆ ಹೋದರೆ ಇಷ್ಟೊಂದು ಕಾರ್ಯಗಳನ್ನು ಮಾಡಲು ಸಾಧ್ಯ ವಿರಲಿಲ್ಲ ಎಂದರು. ವಿರೋಧ ಪಕ್ಷದವರು ರಾಜ್ಯದ ಜನತೆಗೆ ಆರ್ಥಿಕವಾಗಿ,…
ಬೀದರ್: ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ, ಸಂತಪೂರ ಪೊಲೀಸ್ ಠಾಣೆಯ ಪಿ.ಎಸ್.ಐ ನಂದಕುಮಾರ ರವರು ತಮ್ಮ ಸಿಬ್ಬಂದಿ ರವರೊಂದಿಗೆ ಠಾಣಾ ವ್ಯಾಪ್ತಿಯ ಮೂರಾರ್ಜಿ ದೇಶಾಯಿ ವಸತಿ ಶಾಲೆ (ಪ.ಜಾ) ಸಂತಪೂರ ಮತ್ತು ಸರಕಾರಿ ಪ್ರೌಢ ಶಾಲೆ ಸಂತಪೂರದಲ್ಲಿ ಶಾಲಾ ಮಕ್ಕಳಿಗೆ ಬಾಲ ಅಪರಾಧಗಳನ್ನು ತಡೆಹಿಡಿಯಲು ಪೊಲೀಸರೊಂದಿಗೆ ಕೈ ಜೊಡಿಸಿ ಎಂಬ ವಾಕ್ಯದೊಂದಿಗೆ ಶಾಲಾ ಮಕ್ಕಳಿಗೆ ಅಪರಾಧ ತಡೆ ಮಾಸಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಮಕ್ಕಳಿಗೆ ಅಪರಾಧಗಳು ನಡೆಯದಂತೆ ಯಾವ ರೀತಿ ತಡೆಯುವುದು ಮತ್ತು ರಸ್ತೆ ಅಪಘಾತಗಳು ನಡೆಯದಂತೆ ರಸ್ತೆ ಸುರಕ್ಷತೆಯ ಬಗ್ಗೆ, ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಇತರೆ ಕಾನೂನುಗಳ ಬಗ್ಗೆ ಗ್ರಾಮದಲ್ಲಿ ಅರಿವು ಮೂಡಿಸಲಾಯಿತು. ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಅರಿವು ಅತೀ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸಂತಪೂರ ಪೊಲೀಸರು ಅರಿವು ಮೂಡಿಸುವ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ…
ಬಾಳೆಹೊನ್ನೂರು (ಚಿಕ್ಕಮಗಳೂರು: ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಪ್ರಯತ್ನ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಭರವಸೆ ನೀಡಿದರು. ಬಾಳೆ ಹೊನ್ನೂರಿನ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಫಲವಾಗಿ ಕರ್ನಾಟಕದಲ್ಲಿ 6395 ಆನೆಗಳಿದ್ದು. ಆನೆಗಳ ಸಂಖ್ಯೆಯಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದರೆ, ಹುಲಿಯ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಆದರೆ ಅರಣ್ಯ ಪ್ರದೇಶ ಕಡಿಮೆ ಆಗುತ್ತಿರುವುದರಿಂದ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳವಾಗಿದ್ದು ಇದರ ನಿಯಂತ್ರಣಕ್ಕೆ ಸರ್ಕಾರ ಮತ್ತು ಅರಣ್ಯ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ ಎಂದರು. ಆನೆಗಳು ನಾಡಿಗೆ ಬರುವುದನ್ನು ತಡೆಯಲು ರೈಲ್ವೆ ಬ್ಯಾರಿಕೇಡ್, ಕಂದಕ, ಸೌರ ಬೇಲಿ ಹಾಕಲಾಗುತ್ತಿದೆ. ತುರ್ತು ಸ್ಪಂದನ ಪಡೆ, ಆನೆ ಕಾರ್ಯಪಡೆಯನ್ನು ರಚಿಸಿದ್ದು, ಜನರಿಗೆ ಆನೆಗಳ ಚಲನವಲನದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಇದರ ಜೊತೆಗೆ 2 ಸಾವಿರ ಹೆಕ್ಟೇರ್ ಕಾನನ ಪ್ರದೇಶದಲ್ಲಿ ಆನೆಗಳ…
ಪಾವಗಡ : ಆರೋಗ್ಯದ ಕಾಳಜಿ ಬಗ್ಗೆ ಸಾರ್ವಜನಿಕರು ಹೆಚ್ಚು ಗಮನ ನೀಡಿ, ಹೆಲ್ಪ್ ಸೊಸೈಟಿ ಸೇವೆಯನ್ನು ಸಾರ್ವಜನಿಕರು ಸದುಪಯೋಗ ಜೊತೆಗೆ ಹೆಲ್ಪ್ ಸೊಸೈಟಿ ಸೇವಾ ಕಾರ್ಯಕ್ಕೆ ನಾವು ಕೂಡ ಕೈ ಜೋಡಿಸಿ ಮತ್ತಷ್ಟು ಸೇವೆಗೆ ಸಹಕಾರಿಯಾಗಬೇಕೆಂದು ಕರೆ ನೀಡಿದರು. ಪಾವಗಡ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್, ಹಾಗೂ ಆಕಾಶ್ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಬೆಂಗಳೂರು ರವರ ಸಹಯೋಗದಲ್ಲಿ ಏರ್ಪಡಿಸಿದ್ದ ಉಚಿತ ಅರೋಗ್ಯ ತಪಾಸಣಾ ಶಿಬಿರದ ಕಾರ್ಯಕ್ರಮವನ್ನು ಕುರಿತು ತಿಳಿಸಿದರು. ಕಮ್ಮ ಸಂಘದ ಅಧ್ಯಕ್ಷರಾದ ವೈ ಆರ್ ಚೌದರಿ, ನಿವೃತ್ತ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರವರು ಮಾತನಾಡುತ್ತ ಗಡಿ ಭಾಗದ ಭೀಮನಕುಂಟೆ ಗ್ರಾಮದಲ್ಲಿ ಅರೋಗ್ಯ ಶಿಬಿರ ಆಯೋಜನೆಗೆ ಹೆಲ್ಪ್ ಸೊಸೈಟಿ ಮುಂದಾದಲ್ಲಿ ನಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಪ್ರಭಾಕರ್ ಮಾತನಾಡುತ್ತ ಹೆಲ್ಪ್ ಸೊಸೈಟಿ ಸೇವಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.ಶಿಬಿರದ ಆಯೋಜಕರಾದ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ…
ತುಮಕೂರು: ವಿಶ್ವದಲ್ಲಿ ಭಾರತವು ಅತೀ ದೊಡ್ಡ ಸ್ಮಾರ್ಟ್ಫೋನ್ ಉತ್ಪಾದನಾ ದೇಶವಾಗಿ ಹೊರಹೊಮ್ಮಿದೆ. ಶೇ.40ರಷ್ಟು ಯುಪಿಐ ವಹಿವಾಟು ಇದರಿಂದ ಹೆಚ್ಚಾಗಿದ್ದು, ದೇಶದ ಮೂಲೆ ಮೂಲೆಗಳಲ್ಲಿ ಡಿಜಿಟಲ್ ವಹಿವಾಟು ನಡೆಸುತ್ತಿರುವುದರಿಂದ ಹಣಕಾಸಿನ ಸಾಕ್ಷರತೆ ಪ್ರಮಾಣ ಹೆಚ್ಚಾಗಿದೆ ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯ (ಎಐಸಿಟಿಇ) ಅಧ್ಯಕ್ಷರಾದ ಪ್ರೊ. ಟಿ.ಜಿ. ಸೀತಾರಾಮ್ ತಿಳಿಸಿದರು. ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಹೆಚ್.ಎಮ್.ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ಸಾಹೇ (ಶ್ರೀ ಸಿದ್ಧಾರ್ಥ ಆಕಾಡೆಮಿ ಆಫ್ ಹೈಯರ್ ಎಜುಕೇಷನ್) ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದ ಭಾಷಣದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನದ ಸಹಾಯದಿಂದ ಪ್ರತಿಯೊಂದು ಮೂಲೆಯಲ್ಲಿಯೂ ಯುಪಿಐ ವಹಿವಾಟು ನಡೆಸಲು ಸಾಧ್ಯವಾಗುತ್ತಿದೆ. ಯುಪಿಐ ವಹಿವಾಟು, ಅತೀ ಹೆಚ್ಚು ಮೊಬೈಲ್, ಇಂಟರ್ ನೆಟ್ ಬಳಕೆದಾರರು, ಹಣಕಾಸು ಸಾಕ್ಷರತೆ ಈ ಎಲ್ಲಾ ಕಾರಣಗಳಿಂದ 2035ರ ವೇಳೆಗೆ ಭಾರತ ವಿಶ್ವಗುರುವಾಗಲಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಕೌಶಲ್ಯ ಹೊಂದಿದವರಿಗೆ ಉದ್ಯೋಗಾವಕಾಶಗಳು ಹೆಚ್ಚಿದ್ದು, ಹೊಸ ಆವಿಷ್ಕಾರಗಳಿಗೆ ಇದು ಮುನ್ನುಡಿಯಾಗಲಿದೆ ಎಂದರು. ಶೇ.40ರಷ್ಟು ಕೋರ್ಸ್ಗಳು ಆನ್ ಲೈನ್ ಮತ್ತು…
ವಾಸ್ತವ ಮತ್ತು ವಸ್ತುನಿಷ್ಠ ದತ್ತಾಂಶವೇ ಇಲ್ಲದೆ ಸರ್ಕಾರ ತರಾತುರಿಯಲ್ಲಿ ಒಳ ಮೀಸಲಾತಿ ಜಾರಿಗೊಳಿಸಬಾರದೆಂದು ಒತ್ತಾಯಿಸಿ ಡಿಸೆಂಬರ್ 17ರಂದು ಬೆಳಗಾವಿ ಸುವರ್ಣಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಸರ್ಕಾರ ನಿಖರವಾದ ದತ್ತಾಂಶ ಪಡೆಯದೆ ತಾರಾತುರಿಯಲ್ಲಿ ಒಳ ಮೀಸಲಾತಿ ಜಾರಿ ನಿರ್ಧಾರ ತೆಗೆದುಕೊಳ್ಳಲು ಹೊರಟಿರುವುದು ಖಂಡನೀಯ. ಸರ್ಕಾರ ದತ್ತಾಂಶವನ್ನು ಅಧಿಕೃತವಾಗಿ ಘೋಷಿಸಬೇಕೆಂದು ತಿಪ್ಪೇಸ್ವಾಮಿ(ತಿಪ್ಪಸರ್ ನಾಯ್ಕ್) ಸಂಸ್ಥಾಪಕ ರಾಜ್ಯಾಧ್ಯಕ್ಷರು ಕರ್ನಾಟಕ ಬಂಜಾರ ಜಾಗೃತಿ ದಳ(ರಿ) ಒತ್ತಾಯಿಸಿದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಹೆಚ್.ಕಾಂತರಾಜ್ ಅವರ ಅವಧಿಯಲ್ಲಿ 2015ರಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳ ದತ್ತಾಂಶವಿದೆ ಆದರೆ ಸರ್ಕಾರ ಈ ವರದಿಯನ್ನು ಒಪ್ಪಿಕೊಂಡಿಲ್ಲ. ಕಳೆದ ಬಾರಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಿ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅಪ್ರಸ್ತುತವೆಂದು ತಿರಸ್ಕರಿಸಿದೆ. ಆದಕಾರಣ ಸರ್ಕಾರವು ಯಾವುದೇ ರಾಜಕೀಯ ಒತ್ತಡಕ್ಕೆ ಓಲೈಕೆ ರಾಜಕಾರಣಕ್ಕೆ.ಮತಗಳ ಹಿತದೃಷ್ಠಿಗೆ ಮಣಿದು ಒಳ ಮೀಸಲಾತಿಯನ್ನು ಜಾರಿ ಮಾಡಬಾರದು. ಪರಿಶಿಷ್ಟರ ದತ್ತಾಂಶವನ್ನು ಬಹಿರಂಗಪಡಿಸಬೇಕು.ಕರ್ನಾಟಕ ಸರ್ಕಾರ ನಿವೃತ್ತ…
ಬೀದರ್: ಒಳ ಮೀಸಲಾತಿ ಜಾರಿಗೆ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಧ್ವನಿಯೆತ್ತಬೇಕು, ಅಲ್ಲದೇ ಹಕ್ಕೊತ್ತಾಯ ಸಮಾವೇಶದಲ್ಲಿ ಭಾಗಿಯಾಗಬೇಕು ಎಂದು ಒತ್ತಾಯಿಸಿ ಜಿಲ್ಲೆಯ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದಿಂದ ಇಂದು ಔರಾದ ಶಾಸಕರಾದ ಪ್ರಭು ಚೌವ್ಹಾಣ್ ಅವರ ಕಚೇರಿ ಎದುರು ಮಾದಿಗ ದಂಡೋರ ಹೋರಾಟ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿದ ಮೇಘ ಅವರ ನೇತೃತ್ವದಲ್ಲಿ ತಮಟೆ ಚಳುವಳಿ ಮಾಡಲಾಯಿತು. ಈ ಪ್ರತಿಭಟನೆಯಲ್ಲಿ ಮಾದಿಗ ದಂಡೋರ ಹೋರಾಟ ಸಮಿತಿ ತಾಲೂಕ ಅಧ್ಯಕ್ಷರುಗಳಾದ ರವಿ ಕಾರಂಜಿ, ವಿಜಯ ಕುಮಾರ, ಸಮಾಜದ ಯುವ ಘಟಕ ಅಧ್ಯಕ್ಷರಾದ ಮಾರುತಿ ಸೂರ್ಯವಂಶಿ, ಸಮಾಜದ ಮುಖಂಡರಾದ ಅನಿಲ ಕಾರಂಜಿ, ಗೋವಿಂದ ಬೋಸ್ಲೆ, ಶಾಮ ಹಲ್ಯಾಳ, ಸಂಜು ಕುಮಾರ ಹೋಳಕರ, ಜಾಂಬ ಯುವ ಸೇನೆ ತಾಲೂಕು ಉಪಾಧ್ಯಕ್ಷರು ಜೈವಂತ್ ಮೇತ್ರೆ ಚಿಂತಕಿ, ಶಿವರಾಜ ಬೆಲದ್ದಾಳ, ದಾವಿದ ಸಂತಪೂರ, ಸುಮಂತ ಉಜನಿ, ನಾಗೇಶ ಸಾಕ್ರೆ ಮುಂತಾದವರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಐಕ್ಯೂ ಎಸಿ, ವಾಣಿಜ್ಯ ವಿಭಾಗದ ವತಿಯಿಂದ ಚಾರ್ಟೆಡ್ ಅಕೌಂಟೆಂಟ್ ಒರಿಯೆಂಟೇಶನ್ ಕಾರ್ಯಕ್ರಮವನ್ನು ಐ ಸಿ ಏ ಐ ಜೊತೆ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿ ಜೀವನದಲ್ಲಿ ಎಲ್ಲ ವಿದ್ಯಾರ್ಥಿಗಳು ಕನಸು ಕಾಣ್ತಾರೆ ಅದನ್ನು ನನಸು ಮಾಡವುದು ಮುಖ್ಯ ಜವಾಬ್ದಾರಿ. ಎಲ್ಲರಿಗೂ ಕೆಲಸ ಸಿಗುತ್ತೆ ಆದರೆ ಕನಸು ಕಂಡ ಕೆಲಸ ಸಿಗಬೇಕೆಂದು ಕನಸನ್ನು ನನಸು ಮಾಡುವುದೇ ವಿದ್ಯಾರ್ಥಿಯ ಗುರಿಯಾಗಿರಬೇಕು. ಚಾರ್ಟೆಡ್ ಅಕೌಂಟ್ ಪರೀಕ್ಷೆ ಕ್ಲಿಯರ್ ಮಾಡೋದು ಸುಲಭದ ಮಾತಲ್ಲ ಆದರೆ “ಮನಸ್ಸಿದ್ದರೆ ಮಾರ್ಗ” ಎಂಬಂತೆ ನಿಮ್ಮ ಓದಿನಲ್ಲಿನ ಶ್ರಮ ,ಆಸಕ್ತಿ ಇದ್ದರೆ ಎಲ್ಲವೂ ಸಾಧ್ಯ ನಾಲ್ಕೈದು ವರ್ಷ ಕಷ್ಟಪಟ್ಟು ಜೊತೆಗೆ ಇಷ್ಟದಿಂದ ಓದಿನಲ್ಲಿ ಆಸಕ್ತಿ ವಹಿಸಿದರೆ ಪರೀಕ್ಷೆಯನ್ನು ಎದುರಿಸಲು ಯಾವುದೇ ತೊಂದರೆ ಇರುವುದಿಲ್ಲ. ಮೊದಲ ಬಾರಿಗೆ ಪ್ರಯತ್ನ ವಿಫಲವಾದರೂ ಆತ್ಮವಿಶ್ವಾಸ ಕಳೆದುಕೊಳ್ಳದೆ ಮರಳಿ ಯತ್ನವ ಮಾಡು ಎಂಬಂತೆ ಪ್ರಯತ್ನಿಸಿ ಮುಂದೆ ಒಂದಿನ ಸಿಎ ಆಗ್ತೀರಾ. ನಿಮ್ಮ ಓದಿನಲ್ಲಿ ಆತ್ಮವಿಶ್ವಾಸ ಮುಖ್ಯ ಜೊತೆಗೆ ಸಂಬಂಧಪಟ್ಟ ಟೆಸ್ಟ್ ಬುಕ್…
ಪಾವಗಡ: ತಾಲೂಕಿನ ವೆಂಕಟಪುರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೂನ್ ಆಸ್ಪತ್ರೆ ಮತ್ತು ರೇಡಿಯಂಟ್ ಅಕಾಡೆಮಿ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ರೇಡಿಯೆಂಟ್ ಸಂಸ್ಥೆಯ ಪಾತಲಿಂಗಪ್ಪ, ವೈ ಶಂಕರ್, ಮುರಳಿ, ನಾಗಭೂಷಣ್ ಹಾಗೂ ಬೂನ್ ಆಸ್ಪತ್ರೆಯ ವೈದ್ಯರಾದ ಡಾ. ಪೂಜಾ, ನಾಗಭೂಷಣ್, ಕಾವ್ಯಶ್ರೀ, ಶಿಕ್ಷಕರಾದ ಸದಾಶಿವ ಶೆಟ್ಟಿ, ಹನುಮಂತ್ ರಾಯ ರಂಜಿತ್ ಕುಮಾರ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx