Author: admin

ಬೆಳಗಾವಿ: ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿಂದ 13/12/2024ರಂದು ಬೆಳಗಾವಿಯ ಸುವರ್ಣ ಸೌಧದ ಮುಂದೆ ನಡೆದ ಸಾಮಾಜಿಕ ನ್ಯಾಯಕ್ಕಾಗಿ ಸ್ಲಂ ನಿವಾಸಿಗಳ ಹಕ್ಕೋತ್ತಾಯ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಸರ್ಕಾರದ ಪರವಾಗಿ ಮನವಿ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ್‌ ಅಬ್ಬಯ್ಯ,  ರಾಜ್ಯದಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಪ್ರಸ್ತುತ ಬಜೆಟ್‌ನಲ್ಲಿ ಹಣ ಮೀಸಲಿಡುವುದು ಸೇರಿದಂತೆ ಸ್ಲಂ ಕಾಯಿದೆಗೆ ವಿರುದ್ಧವಾಗಿರುವ ವಸತಿ ಇಲಾಖೆ ಸುತ್ತೋಲೆ ವಾಪಸಾತಿ ಹಾಗೂ ಲ್ಯಾಂಡ್‌ ಬ್ಯಾಂಕ್‌ ನೀತಿ ಕುರಿತಂತೆ ಪ್ರಸ್ತುತ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಚರ್ಚೆ ಮಾಡಲು ಈಗಾಗಲೇ ಸಮಯ ನಿಗಧಿಯಾಗಿದ್ದು ಅದರಂತೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸ್ಲಂ ಜನರಿಗೆ ಹಕ್ಕುಪತ್ರ ವಿತರಣೆ ನೋಂದಣಿ ಮತ್ತು ಇ.ಖಾತಾ ಪ್ರಕ್ರಿಯೆಯನ್ನು ಸರಳಗೊಳಿಸಿ ಖಾಸಗಿ ಸ್ಲಂಗಳ ಅಭಿವೃದ್ಧಿಗೂ ಮುಂದಾಗುವ ಜೊತೆಗೆ ಪ್ರಧಾನ್‌ ಮಂತ್ರಿ ಅವಾಸ್‌ ಯೋಜನೆ ಅಡಿಯಲ್ಲಿ ನಿರ್ಮಿಸುತ್ತಿರುವ ವಸತಿ ಯೋಜನೆಯನ್ನು ಪೂರ್ಣಗೊಳಲು ಹಣ ಮಂಜೂರಾತಿ  ಸೇರಿದಂತೆ ಸ್ಲಂ ಜನರ ಪರವಾದ ಕಾನೂನು ಮತ್ತು ನೀತಿಗಳನ್ನು ನನ್ನ ಅವಧಿಯಲ್ಲಿ…

Read More

ಬೆಂಗಳೂರು: 2020 ರಲ್ಲಿ ಕೋವಿಡ್ –19 ಸಂದರ್ಭದಲ್ಲಿ ಪಿಪಿಇ ಕಿಟ್‌ ಗಳು, ಎನ್ 95 ಮಾಸ್ಕ್ ಮತ್ತು ಇತರ ವೈದ್ಯಕೀಯ ಉಪಕರಣಗಳನ್ನು ಖರೀದಿಸುವಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಅನೇಕ ಅಧಿಕಾರಿಗಳು ಮತ್ತು ಖಾಸಗಿ ಕಂಪನಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಲ್ಲದೇ, ಆ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ. ಶ್ರೀರಾಮುಲು, ನಂತರ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅವರಿಗೂ ಅಕ್ರಮದ ಬಿಸಿ ತಟ್ಟಲಿದೆ ಎನ್ನಲಾಗುತ್ತಿದೆ. ಬಹುಕೋಟಿ ಹಗರಣದ ತನಿಖೆಗಾಗಿ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಐಜಿಪಿ ಅಥವಾ ಎಡಿಜಿಪಿ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸುವ ಸಾಧ್ಯತೆಯಿದೆ. ವಿವಿಧ ಪ್ರಕರಣಗಳಲ್ಲಿ ಎಫ್‌ ಐಆರ್‌ ಗಳು ದಾಖಲಾಗುವುದರಿಂದ, ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಎಸ್‌ ಐಟಿಯನ್ನು ಸ್ಥಾಪಿಸುವುದು ಉತ್ತಮ ಎಂದು  ನವೆಂಬರ್ 14 ರಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಯೋಜಿಸಲಾಗಿತ್ತು ಎಂದು ಆರೋಗ್ಯ ಸಚಿವ…

Read More

ರಾಯಚೂರು: ತಾಲ್ಲೂಕಿನ ರಬ್ಬನಕಲ್ ಗ್ರಾಮದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈಶ್ವರಿ (32)  ಅವರಿಗೆ ಹೆರಿಗೆ ಆಗಿತ್ತು. ಬಳಿಕ ಬುಧವಾರ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮೂರು ದಿನಗಳ ನಂತರ ಮನೆಯಲ್ಲಿ ರಕ್ತಸ್ರಾವ ಉಂಟಾಗಿದೆ ಎಂದು ಶುಕ್ರವಾರ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಅವರು ಸಾವನ್ನಪ್ಪಿದ್ದಾರೆ. ಮಟಮಾರಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ಹೆರಿಗೆ ಆಗಿದೆ. ಎರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ಹೋದೆವು. ಮನೆಗೆ ಹೋದಾಗ ರಕ್ತಸ್ರಾವ ಸಮಸ್ಯೆ ಕಾಣಿಸಿಕೊಂಡಿದೆ. ನಂತರ ಮತ್ತೆ ಮಟಮಾರಿ ಆಸ್ಪತ್ರೆಗೆ ಬಂದಾಗ ವೈದ್ಯರು ಇಲ್ಲದೆ ಸಮಸ್ಯೆ ಎದುರಾಯಿತು. ತಕ್ಷಣ ಆಂಬುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ನಾವು ಏನೂ ಮಾಡೋಕೆ ಆಗಲ್ಲ ಎಂದು ಬರೆಸಿಕೊಂಡು ಚಿಕಿತ್ಸೆ ನೀಡಿದರು. ಸ್ವಲ್ಪ ಹೊತ್ತಲ್ಲೇ ಸಾವನ್ನಪ್ಪಿದ್ದಾಳೆ  ಎಂದು ಮೃತ  ಮಹಿಳೆಯ ಸಂಬಂಧಿ ಚರಣರಾಜ್ ತಿಳಿಸಿದರು. ಮೃತ ಬಾಣಂತಿಗೆ ಮೂವರು ಮಕ್ಕಳಿದ್ದಾರೆ ಎಂದು ಕುಟುಂಬಸ್ಥರು…

Read More

ಮಂಡ್ಯ: ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸುಖಧರೆ ಗ್ರಾಮ ನಡೆದಿದೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುಟ್ಲುಪಾಡಿಯ ಪ್ರೀತಂ ಶೆಟ್ಟಿ (24) ಮೃತಪಟ್ಟ ಯುವಕನಾಗಿದ್ದಾನೆ. ಸುಖಧರೆ ಗ್ರಾಮದಲ್ಲಿ ಹನುಮ ಜಯಂತಿ ಹಿನ್ನೆಲೆ ತಡರಾತ್ರಿ ಪ್ರೊ.ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿತ್ತು. ಪ್ರೀತಂ ಕಬಡ್ಡಿ ಪಂದ್ಯಾಟ ಮುಗಿಸಿ ರೆಸ್ಟ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಹೃದಯಾಘಾತದಿಂದ ಕುಸಿದು ಬಿದ್ದ ತಕ್ಷಣವೇ ಅವರನ್ನು ನಾಗಮಂಗಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದ್ದು, ಸಂಜೆ, ರಾತ್ರಿ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ. ಸುಳ್ಯ ತಾಲೂಕಿನ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಡಿಸೆಂಬರ್ 17ರ ತನಕ ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಆವರಿಸುವ ಲಕ್ಷಣಗಳಿವೆ. ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮೋಡದ ವಾತಾವರಣದ ಜೋತೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಈಗಿನಂತೆ ಡಿಸೆಂಬರ್ 17ರ ತನಕ ಮಲೆನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ಒಳನಾಡು : ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಡಿಸೆಂಬರ್ 16ರ ತನಕ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿಸೆಂಬರ್ 17ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ವಾಯುಭಾರ ಕುಸಿತದ ಮಳೆಯ ಮುನ್ಸೂಚೆನೆ ಇದೆ. ಬಂಗಾಳಕೊಲ್ಲಿಯ…

Read More

ಧಾರವಾಡ: ಕರ್ನಾಟಕ ಉಚ್ಛ ನ್ಯಾಯಾಲಯದ ಧಾರವಾಡ ಪೀಠದಲ್ಲಿ ಇಂದು (ಡಿ.14) ರಾಷ್ಟ್ರೀಯ  ಲೋಕ ಅದಾಲತ್‌ ನ್ನು ಕರ್ನಾಟಕ ಉಚ್ಛ ನ್ಯಾಯಾಲಯ, ಧಾರವಾಡ ಪೀಠದ ಹಿರಿಯ ನ್ಯಾಯಮೂರ್ತಿಗಳಾದ  ಶ್ರೀನಿವಾಸ್ ಹರೀಶ ಕುಮಾರ್ ಅವರ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು. ಈ  ಅದಾಲತನಲ್ಲಿ  ನ್ಯಾಯಮೂರ್ತಿಗಳಾದ  ಜೆ.ಎಮ್. ಖಾಜಿ ಮತ್ತು  ಟಿ.ಜಿ. ಶಿವಶಂಕರೆಗೌಡ ಹಾಗೂ ಇವರೊಂದಿಗೆ ಲೋಕ ಅದಾಲತ್ ನ ಸದಸ್ಯರುಗಳಾದ  ಎಮ್.ಟಿ.ಬಾಂಗಿ, ಅರ್ಚನಾ ಮಗದುಮ ಮತ್ತು  ವಿ.ಜಿ. ದಳವಾಯಿ ಈ ರೀತಿಯಾಗಿ ಒಟ್ಟು ಮೂರು ಪೀಠಗಳನ್ನು ಆಯೋಜಿಸಲಾಗಿತ್ತು. ಸದರಿ ಅದಾಲತನಲ್ಲಿ ಒಟ್ಟು 5೦೦ ಪ್ರಕರಣಗಳನ್ನು ಕೈಗೈತ್ತಿಕೊಳ್ಳಲಾಗಿತ್ತು. ಆ ಪೈಕಿ ಒಟ್ಟು 235 ಪ್ರಕರಣಗಳನ್ನು ರೂ. 5,86,30,660/- ಮೊತ್ತಕ್ಕೆ  ಇತ್ಯರ್ಥಪಡಿಸಲಾಯಿತು. ಈ ಲೋಕ ಅದಾಲತ್ ದಲ್ಲಿ ಸುಮಾರು 10 ವರ್ಷಗಳಿಂದ ಬಗೆಹರೆಯದ ದಿವಾಣಿ ಪ್ರಕರಣವನ್ನು  ನ್ಯಾಯಮೂರ್ತಿ ಟಿ. ಜಿ. ಶಿವಶಂಕರೆಗೌಡ ಮತ್ತು ನ್ಯಾಯವಾದಿ ವಿ. ಜಿ. ದಳವಾಯಿ ಸದಸ್ಯರನ್ನೊಳಗೊಂಡ ಪೀಠವು ಸೂಕ್ತ ಸಲಹೆ ನೀಡುವುದರ ಮೂಲಕ ಮತ್ತು ಉಭಯ ಕಕ್ಷಿದಾರರ ವಕೀಲರುಗಳಾದ  ಕಿರಣಕುಮಾರ ಎಸ್. ಚಟ್ಟಿಮಠ ಮತ್ತು ವಸಂತ…

Read More

ಧಾರವಾಡ: ಕರ್ನಾಟಕ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ ಅವರು ಇಂದು ಬೆಳಿಗ್ಗೆ, ನರೇಂದ್ರ ಕ್ರಾಸ್ ದಿಂದ ಗಬ್ಬೂರ ವರೆಗಿನ ಬೈಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ರಾಷ್ಷ್ರೀಯ ಹೆದ್ದಾರಿ 48 ರಲ್ಲಿ  ಧಾರವಾಡದ ನರೇಂದ್ರ ಕ್ರಾಸ್ ದಿಂದ ಹುಬ್ಬಳ್ಳಿಯ ಗಬ್ಬೂರ ವರೆಗೆ ಬರುವ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಅಗಲೀಕರಣದ ಕಾಮಗಾರಿಗೆ ಮೊದಲ ಹಂತದಲ್ಲಿ ಅಗತ್ಯವಿರುವ ಭೂಮಿ ಸ್ವಾದೀನಪಡಿಸಿಕೊಂಡು ನೀಡಿದರೂ, ಗುತ್ತಿಗೆದಾರ ಕಾಮಗಾರಿ ವಿಳಂಬ ಮಾಡುತ್ತಿರುವುದು ಕಂಡುಬರುತ್ತಿದೆ. ಯಾವುದೇ ವಿಳಂಬವಿಲ್ಲದೆ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಅವರು ಗುತ್ತಿಗೆದಾರರಿಗೆ ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮುಂದಿನ 15 ದಿನಗಳಲ್ಲಿ ಬಾಕಿ ಇರುವ ಕಾಮಗಾರಿ ಪೂರ್ತಿಗೊಳಿಸಿ, ತಮಗೆ ದಾಖಲೆ ಸಲ್ಲಿಸುವಂತೆ ಮತ್ತು ಸಂಬಂಧಿಸಿದ ಅಧಿಕಾರಿಗಳು ನಿಗಾವಹಿಸಿ, ವರದಿ ನೀಡುವಂತೆ ಅವರು ಸೂಚಿಸಿದರು. ಕಾಮಗಾರಿ ಗುಣಮಟ್ಟದಾಗಿರಬೇಕು. ಕಳಪೆ ಕಾಮಗಾರಿ ಆಗಲು ಅವಕಾಶವಾಗದಂತೆ ಪ್ರತಿ ಹಂತದಲ್ಲಿ ಸಂಬಂಧಿಸಿದ ಅಧಿಕಾರಿಗಳು ಮೇಲುಸ್ತುವಾರಿ, ನೀಗಾ ವಹಿಸಬೇಕಾಗುತ್ತದೆ…

Read More

ಮಂಡ್ಯ: ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ಅನೇಕ ಬದಲಾವಣೆಯನ್ನು ತರುವ ಮೂಲಕ ಕಂದಾಯ ಇಲಾಖೆಯಲ್ಲಿ ಸುಧಾರಣೆ ತರಲಾಗಿದೆ. ಜನ ಸಾಮಾನ್ಯರ ಸಮಸ್ಯೆಯನ್ನು ಬಗೆಹರಿಸಲು ಶ್ರಮಿಸುವ ಮೂಲಕ ಸ್ಪಂದಿಸಿದ್ದೇವೆ. ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತೆರಳಿ ಮಾಡಿಕೊಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು. ಮಂಡ್ಯದಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಾತನಾಡಿ, ಮನೆ ಮನೆ ತೆರಳಿ ಖಾತೆ ಮಾಡಬೇಕು ಎಂಬ ಆದೇಶ ಹೊರಡಿಸಿದ್ದಾರೆ. ಹಲವಾರು ದಿನಗಳಿಂದ ಬಾಕಿ ಇದ್ದಂತಹ ಒಟ್ಟು 15,000 ಪ್ರಕರಣಗಳಲ್ಲಿ 13,000 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.  ಕೇವಲ 1 ವಾರದಲ್ಲಿಯೇ 416 ಪ್ರಕರಣಗಳ  ಸರ್ವೇ ಮಾಡಲಾಗಿದೆ. ಜೊತೆಗೆ ಪೌತಿ ಖಾತೆಗಳನ್ನು ಸರಿಯಾದ ರೀತಿಯಲ್ಲಿ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿರುವ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುತ್ತಿದೆ. 1960- 70 ರಲ್ಲಿ ಮಂಜೂರಾಗಿರುವ ಕಂದಾಯ ಇಲಾಖೆಯ ದರಖಾಸ್ತು ಪೋಡಿ ದುರಸ್ಥಿ ಸರಳೀಕೃತ ಕಾರ್ಯದ ಹೊಸ ಪಹಣೆ ಮತ್ತು…

Read More

ಬೆಂಗಳೂರು: ಪತ್ನಿ ಹಾಗೂ ಮಾವನ ಕಿರುಕುಳದಿಂದ ಮನನೊಂದು ಹೆಡ್ ಕಾನ್ ಸ್ಟೇಬಲ್ ವೊಬ್ಬರು ರೈಲಿಗೆ ತಲೆಕೊಟ್ಟು ಸಾವಿಗೆ ಶರಣಾಗಿರುವ ಘಟನೆ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ತಿಪ್ಪಣ್ಣ (33 ) ಸಾವಿಗೆ ಶರಣಾದವರಾಗಿದ್ದಾರೆ. ಸಾವಿಗೂ ಮುನ್ನ ತನ್ನ ಪತ್ನಿ ಹಾಗೂ ಮಾವನ ವಿರುದ್ಧ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬಿಜಾಪುರ ಮೂಲದ ತಿಪ್ಪಣ್ಣ ಮೂರು ವರ್ಷದ ಹಿಂದೆ ಮದುವೆಯಾಗಿದ್ದರು, ಇತ್ತೀಚಿನ ದಿನಗಳಲ್ಲಿ ಪತ್ನಿ ಹಾಗೂ ಆಕೆಯ ತಂದೆಯ ಕಿರುಕುಳದಿಂದ ಮನನೊಂದಿದ್ದರು. ಇವರಿಬ್ಬರ ವರ್ತನೆಯಿಂದ ಮಾನಸಿಕವಾಗಿ ತಿಪ್ಪಣ್ಣ ಅವರು ಬೇಸತ್ತಿದ್ದರು. ಪತ್ನಿಯ ತಂದೆ ಯಮುನಪ್ಪ ಅವರು ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ. ನೀನು ಸತ್ತು ಹೋಗು ಆಗ ನನ್ನ ಮಗಳು ಚೆನ್ನಾಗಿ ಇರುತ್ತಾಳೆ ಎಂದು ಬೈದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ನವದೆಹಲಿಯ ಅಪೋಲೋ ಆಸ್ಪತ್ರೆಗೆ ಅಡ್ವಾಣಿಯವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆಯೂ ಅಡ್ವಾಣಿ ಅವರನ್ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸುಧಾರಿಸಿದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಜುಲೈ ನಂತರ ಇದು ನಾಲ್ಕನೇ ಬಾರಿಗೆ ಅಡ್ವಾಣಿ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More