Author: admin

ಹೈದರಾಬಾದ್: ಜೈಲಿಂದ ಹೊರಬಂದ ಅಲ್ಲು ಅರ್ಜುನ್ ಅವರನ್ನು ಶನಿವಾರ ರಿಯಲ್ ಸ್ಟಾರ್ ಉಪೇಂದ್ರ ಭೇಟಿಯಾಗಿದ್ದು, ತಮ್ಮ ಯುಐ ಸಿನಿಮಾ ಪ್ರಮೋಷನ್ ಗೆ ತೆರಳಿದ್ದ ವೇಳೆ ಉಪೇಂದ್ರ, ಅಲ್ಲು ಅರ್ಜುನ್ ಅವರನ್ನ ಭೇಟಿಯಾದರು. ಉಪೇಂದ್ರ ಅವರನ್ನು ಕಂಡೊಡನೆ ಅಲ್ಲು ಅರ್ಜುನ್ ಅಪ್ಪಿಕೊಂಡು ಸ್ವಾಗತಿಸಿದರು. ಬಳಿಕ ಕುಶಲೋಪರಿ ವಿಚಾರಿಸಿದರು. ಈ ಹಿಂದೆ ಸನ್ ಆಫ್ ಸತ್ಯಮೂರ್ತಿ ಚಿತ್ರದಲ್ಲಿ ಉಪೇಂದ್ರ ಹಾಗೂ ಅಲ್ಲು ಅರ್ಜುನ್ ಜೊತೆಯಾಗಿ ನಟಿಸಿದ್ದರು. ಇದೀಗ ಯುಐ ಚಿತ್ರ ಪ್ರಮೋಷನ್ ಗೆ ಅಲ್ಲು ಅರ್ಜುನ್ ಅವರಿಗೆ ಮನವಿ ಮಾಡಲಾಗಿದೆ ಎನ್ನಲಾಗಿದೆ. ಡಿ.20 ಕ್ಕೆ ವಿಶ್ವದಾದ್ಯಂತ ಅಬ್ಬರಿಸೋಕೆ ಯುಐ ಸಿನಿಮಾ ಸಿದ್ಧವಾಗಿದೆ. ಬಾಲಿವುಡ್ ನಲ್ಲಿ ಆಮೀರ್ ಖಾನ್ ಯುಐ ಚಿತ್ರದ ಪ್ರಮೋಷನ್ ಮಾಡಿದ್ದಾರೆ. ತೆಲುಗಿನಲ್ಲಿ ಅಲ್ಲು ಅರ್ಜುನ್ ಸಾಥ್ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೀದರ್: ಜಿಲ್ಲೆಯ ಖಟಕ ಚಿಂಚೋಳಿ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ, ಖಟಕ ಚಿಂಚೋಳಿ ಪೊಲೀಸ್ ಠಾಣೆಯ ಪಿ.ಎಸ್.ಐ.ಸುದರ್ಶನ್ ರೆಡ್ಡಿ ಅವರು ತಮ್ಮ ಸಿಬ್ಬಂದಿಯೊಂದಿಗೆ ಠಾಣಾ ವ್ಯಾಪ್ತಿಯ ಚಳಕಾಪೂರ ಗ್ರಾಮದಲ್ಲಿ ಅಪರಾಧ ತಡೆಯಲು ಸಾರ್ವಜನಿಕರು ಯಾವ ರೀತಿ ಸಜ್ಜರಾಗಬೇಕು ಮತ್ತು ಪೋಕ್ಸೊ ಕಾಯ್ದೆ ಬಗ್ಗೆ ಹಾಗೂ ಇತರೆ ಕಾನೂನುಗಳ ಬಗ್ಗೆ ಗ್ರಾಮದ ಶಾಲಾ ಮಕ್ಕಳಿಗೆ ಮತ್ತು ಗ್ರಾಮದ ಬಸವೇಶ್ವರ ವೃತ್ತದ ಹತ್ತಿರ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತೀ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಖಟಕ ಚಿಂಚೋಳಿ ಪೊಲೀಸರು ಸಾರ್ವಜನಿಕರಲ್ಲಿ ಉತ್ತಮ ಜ್ಞಾನವನ್ನು ಮೂಡಿಸುವ ಮಹತ್ವದ ಕಾರ್ಯದಲ್ಲಿ ತೊಡಗಿದ ಅಧಿಕಾರಿ, ಸಿಬ್ಬಂದಿರವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಹೈದರಾಬಾದ್: ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಶನಿವಾರ ಬಿಡುಗಡೆಯಾಗಿದ್ದಾರೆ. ರಿಲೀಸ್ ಬಳಿಕ ಚಂಚಲಗೂಡ ಸೆಂಟ್ರಲ್ ಜೈಲಿನ ಹಿಂಬದಿ ಗೇಟ್ ನಿಂದ ಬಿಗಿಪೊಲೀಸ್ ಬಂದೋಬಸ್ತ್ ನಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಕರೆತರಲಾಗಿದೆ. ಅಲ್ಲು ಅರ್ಜುನ್ ಗೆ ಕೆಳ ಹಂತದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದರೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಕೋರ್ಟ್ ಪ್ರತಿ ಜೈಲು ಸೇರದ ಹಿನ್ನೆಲೆಯಲ್ಲಿ ಅವರ ಬಿಡುಗಡೆ ತಡವಾಗಿತ್ತು. ಹೀಗಾಗಿ ನಿನ್ನೆಯೇ ಬೇಲ್ ಸಿಕ್ಕರೂ ಕೂಡ ಅಲ್ಲು ಅರ್ಜುನ್ ಜೈಲಿನಲ್ಲಿ ಒಂದು ರಾತ್ರಿ ಕಳೆಯುವಂತಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ನವದೆಹಲಿ: ದೆಹಲಿ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ಆರ್.ಕೆ. ಪುರಂನಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವು ಶಾಲೆಗಳಿಗೆ ಇಂದು ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿವೆ. ಈ ಬಗ್ಗೆ ಕೂಡಲೇ ತನಿಖೆ ಮಾಡಿರುವ ಪೊಲೀಸರು ಇದು ಹುಸಿ ಬಾಂಬ್ ಬೆದರಿಕೆ ಎಂದು ಹೇಳಿದ್ದಾರೆ. ದೆಹಲಿಯಾದ್ಯಂತ 30 ಶಾಲೆಗಳು ನಕಲಿ ಬಾಂಬ್ ಬೆದರಿಕೆ ಸ್ವೀಕರಿಸಿವೆ ಎಂದು ಆಗ್ನೇಯ ದೆಹಲಿ ಪೊಲೀಸ್ ಉಪ ಆಯುಕ್ತ ರವಿಕುಮಾರ್ ಸಿಂಗ್ ನಿನ್ನೆ ಹೇಳಿದ್ದರು. ಇದಾದ ನಂತರ ಇಂದು ಮತ್ತೆ ಬೆದರಿಕೆ ಬಂದಿದೆ. ಈ ವಾರದಲ್ಲಿ ಇದು ಮೂರನೇಯ ಘಟನೆಯಾಗಿದೆ. ಡಿಸೆಂಬರ್ 9 ರಂದು, ದೆಹಲಿಯ ಕನಿಷ್ಠ 40 ಶಾಲೆಗಳಿಗೆ ಬಾಂಬ್ ಬೆದರಿಕೆ ಇ–ಮೇಲ್ ಕಳುಹಿಸಲಾಗಿತ್ತು, ಪಶ್ಚಿಮ ವಿಹಾರ್ ಮತ್ತು ಡಿಪಿಎಸ್ ಆರ್ ಕೆ ಪುರಂನಲ್ಲಿರುವ ಜಿಡಿ ಗೋಯೆಂಕಾ ಶಾಲೆಯಿಂದ ಬೆದರಿಕೆಗಳು ಬಂದಿದ್ದವು. ಮದರ್ ಮೇರಿಸ್ ಸ್ಕೂಲ್, ಬ್ರಿಟಿಷ್ ಸ್ಕೂಲ್, ಸಲ್ವಾನ್ ಪಬ್ಲಿಕ್ ಸ್ಕೂಲ್, ಕೇಂಬ್ರಿಡ್ಜ್ ಸ್ಕೂಲ್ ನಂತಹ ಹಲವಾರು ಶಾಲೆಗಳಿಗೂ ಬಾಂಬ್…

Read More

ತುಮಕೂರು: ಸೋಡಿಯಂ ಮೆಟಲ್ ಬಳಸಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಧುಗಿರಿ ನ್ಯಾಯಾಧೀಶರ ಬಳಿ ಹೆಚ್ಚಿನ ವಿಚಾರಣೆ ಮನವಿ ಹಿನ್ನಲೆ ಡ್ರೋನ್ ಪ್ರತಾಪ್ ಗೆ 3 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬಿಗ್ ಬಾಸ್ ಖ್ಯಾತಿ ಡ್ರೋನ್ ಪ್ರತಾಪ್ ಸೇರಿ ಮೂವರ ಮೇಲೆ ಎಫ್ ಐಆರ್ ದಾಖಲಾಗಿತ್ತು. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರಿಂದ ಸುಮೋಟೋ ಕೇಸ್ ದಾಖಲಿಕೊಂಡು ಎಫ್ ಐಆರ್ ದಾಖಲಾಗಿತ್ತು. ಬಳಿಕ ಬೆಂಗಳೂರಿನಲ್ಲಿ ಡ್ರೋನ್ ಪ್ರತಾಪ್ ನ್ನು ಬಂಧಿಸಲಾಗಿತ್ತು. ರೈತರ ಕೃಷಿಹೊಂಡದಲ್ಲಿ ಸೋಡಿಯಂ ಬಾಂಬ್ ಬ್ಲಾಸ್ಟ್ ಬಳಿಕ ಯೂಟ್ಯೂಬ್ ನಲ್ಲಿ ಪ್ರತಾಪ್ ವಿಡಿಯೋ ಅಪ್ಲೋಡ್ ಮಾಡಿದ್ದ. ವಿಡಿಯೋ ಆಧರಿಸಿ ಸುಮೊಟೊ ಕೇಸ್ ನಲ್ಲಿ ಎಫ್ ಐಆರ್ ದಾಖಲಾಗಿತ್ತು. ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ರಾಯರ ಬೃಂದಾವನ ಫಾರಂ ಹೌಸ್ ನ ಕೃಷಿ ಹೊಂಡದಲ್ಲಿ ಪ್ರತಾಪ್ ಈ ಪ್ರಯೋಗ ಮಾಡಿದ್ದ. ದೊಡ್ಡ ಮಟ್ಟದಲ್ಲಿ ಸೋಡಿಯಂ ಬಳಸಿ ಈ ಪ್ರಯೋಗ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ಕರ್ನಾಟಕರಾಜ್ಯದಕುರಿತುಕನ್ನಡಿಗರಲ್ಲಿ ಸ್ವೀಕೃತ ಕಲ್ಪನೆಯಿದೆ. ಕವಿರಾಜ ಮಾರ್ಗದಲ್ಲಿ ಕನ್ನಡ ರಾಜ್ಯದ ಕುರಿತು, ಕನ್ನಡಿಗರ ಬಗ್ಗೆ ಉಲ್ಲೇಖವಿದ್ದರೂ ಕರ್ನಾಟಕ ಏಕೀಕರಣದ ನಂತರವೇ ಕನ್ನಡ ಸಮುದಾಯಗಳು ಒಂದೇ ಸೂರಿನಡಿ ನೆಲೆಕಂಡಿದ್ದುಎಂದು ಲೇಖಕ ಪ್ರೊ.ರಾಜೇಂದ್ರಚೆನ್ನಿ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯಸಂತ ಶಿಶುನಾಳ ಶರೀಫಅಧ್ಯಯನ ಪೀಠವು ಶುಕ್ರವಾರ ಆಯೋಜಿಸಿದ್ದ ‘ಸ್ಟೇಟ್ ಮ್ಯಾಟರ್ಸ್: ಕನ್ನಡ ಸಬ್–ನ್ಯಾಷನಲಿಸಂಅಂಡ್ ಸ್ಟೇಟ್ಫಾರ್ಮೆಷನ್’ ಪುಸ್ತಕದಕುರಿತು ಮಾತನಾಡಿದರು. ಕರ್ನಾಟಕ ಏಕೀಕರಣಕ್ಕೂ ಮುನ್ನಕನ್ನಡ ಮಾತನಾಡುವ ಸಮುದಾಯಗಳು 30 ತುಂಡುಗಳಾಗಿದ್ದವು. ಸಮುದಾಯಗಳನ್ನು ತುಂಡರಿಸಿ ಬ್ರಿಟಿಷ್ ಸರ್ಕಾರ ಆಡಳಿತ ನಡೆಸುತ್ತಿತ್ತು. ಈ ನಡೆಯಿಂದ ಕನ್ನಡಿಗರು ಒಗ್ಗೂಡಿ ಬಾಳಲು ಸಾಧ್ಯವಾಗಿರಲಿಲ್ಲ. ಏಕೀಕರಣದ ಏಕರೂಪ ಚಳುವಳಿ ವಿರೋಧಾಭಾಸದ ವೈರುಧ್ಯಗಳಿಂದ ಕೂಡಿ ಕರ್ನಾಟಕ ರಾಜ್ಯವಾಯಿತು ಎಂದು ತಿಳಿಸಿದರು. ಒಕ್ಕಲಿಗರ ಪ್ರಾಬಲ್ಯ ಹೊಂದಿದ್ದಅಂದಿನ ಮೈಸೂರು ರಾಜ್ಯ ಏಕೀಕರಣವನ್ನು ವಿರೋಧಿಸಿತು. ಮೇಲ್ಜಾತಿಯವರ, ದಲಿತರ, ಇತರೆ ಸಮುದಾಯಗಳ ಭಾಗವಹಿಸುವಿಕೆ ಅನುಸಂಧಾನ ಮಾರ್ಗವನ್ನುಕಂಡಿತು. ಆಧುನಿಕ ಮುದ್ರಣ ಯಂತ್ರಗಳ ಸಹಾಯದಿಂದ ಬ್ರಿಟಿಷರು ಧಾರ್ಮಿಕ ವಲಯದಿಂದ ಪುಸ್ತಕಗಳನ್ನು ಜಾತ್ಯತೀತ ವಲಯಕ್ಕೆ ತಂದರು. ಕ್ರಿಶ್ಚಿಯನ್ ಮಿಷನರಿಗಳಲ್ಲಿ ಕನ್ನಡದ ಅರಿವನ್ನು ಮೂಡಿಸುವ ಕಾರ್ಯಗಳು ಚುರುಕುಗೊಂಡವು ಎಂದು ತಿಳಿಸಿದರು.…

Read More

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಯುವಜನ ಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳನ್ನು ಭಾಗವಹಿಸಲು ಉತ್ತೇಜಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಕಲಾ ಪ್ರಕಾರಗಳ ಜಾನಪದ ತರಬೇತಿ ಶಿಬಿರಕ್ಕೆ ಪರಿಶಿಷ್ಟ ಜಾತಿ ಯುವಜನರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಯುವಜನರು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 18ರೊಳಗಾಗಿ ನಿಗದಿತ ನಮೂನೆಯೊಂದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9741691379ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2023ನೇ ಸಾಲಿನಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಕ್ರೀಡಾಪಟುಗಳು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 20ರೊಳಗಾಗಿ ನಿಗಧಿತ ನಮೂನೆಯೊಂದಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9741691379ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರವು ರೈತರಿಗೆ ಆಧುನಿಕ ಹಸು ಸಾಕಾಣಿಕೆ ಕುರಿತು ಡಿಸೆಂಬರ್ 16 ಮತ್ತು 17ರಂದು ಬೆಳಿಗ್ಗೆ 10 ಗಂಟೆಗೆ ಉಚಿತ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತರು ನಿಗದಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ. ತರಬೇತಿಯನ್ನು ಕುಣಿಗಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ನೀಡಲಾಗುವುದು. ತರಬೇತಿಗೆ ಹಾಜರಾಗಲಿಚ್ಛಿಸುವವರು ಇತ್ತೀಚಿನ ತಮ್ಮ 2 ಪಾಸ್ಪೋರ್ಟ್ ಅಳತೆ ಭಾವಚಿತ್ರ, ರೈತರ ಫ್ರೂಟ್ ಐಡಿ ಸಂಖ್ಯೆ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ)ವನ್ನು ಕಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ ದೂರವಾಣಿ ಸಂಖ್ಯೆ 0816–2251214ನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪಾವಗಡ: ಶುಕ್ರವಾರ ಮಧ್ಯ ರಾತ್ರಿ 1 ಗಂಟೆಯ ಸಂದರ್ಭದಲ್ಲಿ ಪಟ್ಟಣದ ಶ್ರೀನಿವಾಸ ನಗರದಲ್ಲಿ ವಿಶ್ವಮೋಹನ್ ಗುಪ್ತಾ ಎನ್ನುವರು ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕಳೆದ ಎರಡು ದಿನಗಳಿಂದ ವಿಶ್ವಮೋಹನ್ ಗುಪ್ತಾ ಕುಟುಂಬ ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿನಲ್ಲಿತ್ತು, ಇದರ ಸುಳಿವು ಪಡೆದುಕೊಂಡ ಕಳ್ಳರು ಶುಕ್ರವಾರ ರಾತ್ರಿ ಶ್ರೀನಿವಾಸನಗರದಲ್ಲಿ ಇರುವಂತಹ ವಿಶ್ವ ಮೋಹನ ಗುಪ್ತಾ ಅವರ ಮನೆಯ ಡೋರ್ ಲಾಕ್ ಕತ್ತರಿಸಿ ಮನೆಗೆ ನುಗ್ಗಿ ಮನೆಯಲ್ಲಿದ್ದ ಲಾಕರ್ ಗಳನ್ನು ತೆಗೆದು ಚಿನ್ನಾಭರಣ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನು ಇದೇ ಮನೆಯ ಮೇಲ್ಭಾಗದ ಕೊಠಡಿಯಲ್ಲಿ ವಿಶ್ವ ಮೋಹನ ಗುಪ್ತಾ ಅವರ ಅಂಗಡಿಯಲ್ಲಿ ಕೆಲಸ ಮಾಡುವಂತಹ ವ್ಯಕ್ತಿಯೊಬ್ಬರು ವಾಸವಿದ್ದರೂ ಅವರ ಕೊಠಡಿಯ ಹೊರಭಾಗದಲ್ಲಿ ಲಾಕ್ ಮಾಡಿ ಕೃತಕ್ಕೆ ಮುಂದಾಗಿದ್ದಾರೆ ಎಂದು ಬೆಳಕಿಗೆ ಬಂದಿದ್ದು, ನಂತರ ಸ್ಥಳೀಯರಿಗೆ ಕರೆ ಮಾಡಿ ಲಾಕ್ ಓಪನ್ ಮಾಡಿಸಿ ಹೊರ ಬಂದ ಬಳಿಕ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ ಕೂಡಲೇ ಮನೆ ಯಜಮಾನರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದು, ಸದ್ಯ ಪಾವಗಡ…

Read More