Author: admin

ಸಾಗರ: ಮಾನವನ ಬದುಕಿನ ಜಂಜಾಟ ದಿಂದ ಮುಕ್ತಿ ಪಡೆಯಲು ಸ್ವಾಧ್ಯಾಯದಿಂದ ಮಾನವನ ಆತ್ಮ ಕಲ್ಯಾಣ ಸಾಧ್ಯವಾಗಲಿದೆ, ಧಾರ್ಮಿಕ ಸಾಹಿತ್ಯದಿಂದ ಮಾನವನ ಮನಸ್ಸುಗಳು ಪರಿವರ್ತನೆಯಾಗಲಿವೆ ಎಂದು ಮುನಿಶ್ರೀ ಪಾಯಸಾಗರ ಮಹಾರಾಜ, ತಿಳಿಸಿದರು . ಅವರಿಂದ ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕಿನ ಕೊಳೂರು ಗ್ರಾಮದ ಕಂದ್ರವಳ್ಳಿಯ ಶ್ರೀಮಹಾವೀರ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದ ಪಾವನ ಸಾನಿಧ್ಯವಹಿಸಿ, ಸಾಹಿತಿ ಸ್ವಾಮಿ ರಚಿಸಿದ ಮಹಾನ್ ಸಾಗರತ್ವ ಜೀವನ ಕೃತಿ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು. ಧರ್ಮವನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಂಡಾಗ ಮಾತ್ರ ಜೀವನ ದರ್ಶನವಾಗುತ್ತದೆ. ಅಹಿಂಸೆ, ಶಾಂತಿ ಸಾರಿದ್ದ ಜೈನ ಧರ್ಮ ವಿಶ್ವ ಶ್ರೇಷ್ಠ ಧರ್ಮವಾಗಿದೆ ಎಂದು ಅವರು, ಜೈನ ಧರ್ಮದ ಸಿದ್ಧಾಂತಗಳ ಆಚರಣೆಯಿಂದ ಶಾಂತಿ ನೆಲೆಸಲು ಸಾಧ್ಯ ಎಂದರು. ಈ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಿತ್ಯ ಪಾಲನೆ ಮಾಡಬೇಕು ಇದರ ಆತ್ಮವಲೋಕನ ಮುಖೀನಾ ಸಾರ್ಥಕ ಜೀವನ ಸಾಧ್ಯ ಎಂದರು. ಮಂಗಳ ಆಶೀರ್ವಾದ ನೀಡಿದ ಮಹಾನ್ ಸಾಗರರು ಆಶೀರ್ವದಿಸಿ ತ್ಯಾಗದಿಂದ ಜಗತ್ತಿನಲ್ಲಿ ಶಾಂತಿ ನೆಮ್ಮದಿ ಸಾಧ್ಯ,…

Read More

ಜೆ. ರಂಗನಾಥ, ತುಮಕೂರು ಸುತ್ತಲೂ ಅಚ್ಚಹಸಿರು, ಅಲ್ಲಲ್ಲಿ ಜಲ ರಾಶಿ, ಈ ಮಧ್ಯೆ ಹಾಸು ಹೊಕ್ಕಾದ ಬೃಹತ್ ಕಪ್ಪು ಕಲ್ಲಿನ ಬಂಡೆ, ಈ ನಡುವೆ ಕಂಗೊಳಿಸುವ ಐತಿಹಾಸಿಕ ತಾಣ ಗೊಮ್ಮಟಗಿರಿಯ ಬಾಹುಬಲಿಯ ನಗು ಮೊಗದ ಮನಮೋಹಕ ಮೂರ್ತಿ.ಅಮೃತ ಮಹೋತ್ಸವದ ಮಹಾ ಮಸ್ತಕಾಭಿಷೇಕಕ್ಕೆ ಕ್ಷೇತ್ರ ಸಜ್ಜುಗೊಂಡಿದೆ. ಕನ್ನಡ ನಾಡಿನ ಸಾಂಸ್ಕೃತಿಕ ನಾಡು, ಕಲೆ, ಸಾಹಿತ್ಯ, ಸಂಸ್ಕೃತಿಗಳ ವೈಭವದ ಬೀಡಾದ ಮೈಸೂರು ಜಿಲ್ಲೆಯು ಕಾವೇರಿ ಮಡಿಲಿನ ತಾಣ. ಶಾಂತಿ, ಅಹಿಂಸೆ, ತ್ಯಾಗದ ಬೀಡಾದ ಗೋಮ್ಮಟಗಿರಿ, ಪ್ರಕೃತಿಯ ನಡುವೆ ಹಾಸು ಹೊಕ್ಕದ ಕರಿ ಕಲ್ಲಿನ ಹೆಬ್ಬಂಡೆಯ ಮೇಲೆ 16 ಅಡಿಗಳ ಏಕಶಿಲಾ ಮೂರ್ತಿಗೆ ಈಗ ಅಮೃತ ಮಹೋತ್ಸವದ ಮಹಾಮಸ್ತಕಾಭಿಷೇಕದ ಸಂಭ್ರಮ ಸಡಗರ. ಕನ್ನಡ ನಾಡಿನಲ್ಲಿ ಹತ್ತಾರು ಗುಮ್ಮಟ ಮೂರ್ತಿಗಳಿದ್ದು, ಈ ಪೈಕಿ ಗುಮ್ಮಟಗಿರಿಯ ಶ್ರೀ ಬಾಹುಬಲಿ ಮೂರ್ತಿಯು ಒಂದು. 1949ರಲ್ಲಿ ಮೊಟ್ಟಮೊದಲ ಬಾರಿಗೆ ಈ ಗೊಮ್ಮಟ ಮೂರ್ತಿಗೆ ಮಹಾ ಮಸ್ತಕಾಭಿಷೇಕ ಮಾಡಲಾಯಿತು ಈಗ 75 ನೇ ಮಹಾಮಸ್ತಕಾಭಿಷೇಕ ದ ಅಮೃತ ಮಹೋತ್ಸವಕ್ಕೆ ಕ್ಷೇತ್ರ ಸಜ್ಜುಗೊಂಡಿದೆ. 1948…

Read More

ಬೆಳಗಾವಿ ಸುವರ್ಣಸೌಧ: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ನಮ್ಮತುಮಕೂರಿನ ಕ್ಷಣ…

Read More

ಬೆಳಗಾವಿ ಸುವರ್ಣಸೌಧ: ರಾಜ್ಯದ ನ್ಯಾಯಾಲಯಗಳಲ್ಲಿರುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಹಾಗೂ ನ್ಯಾಯದಾನ ವ್ಯವಸ್ಥೆಯಲ್ಲಿನ ವಿಳಂಬವನ್ನು ತಡೆಗಟ್ಟುವಲ್ಲಿ ಸರ್ಕಾರ ಅನೇಕ ಕ್ರಮ ಕೈಗೊಂಡಿದೆ ಎಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದರು. ಪರಿಷತ್ ನಲ್ಲಿ ಸದಸ್ಯ ಭಾರತಿಶೆಟ್ಟಿ ಅವರ ಪರವಾಗಿ ಸದಸ್ಯ ರವಿಕುಮಾರ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ನ್ಯಾಯಾಲಯದ ಪ್ರಕರಣಗಳಲ್ಲಿ ಆಡಳಿತ ಇಲಾಖೆಗಳಿಂದ ಸಕಾಲದಲ್ಲಿ ಆಕ್ಷೇಪಣಾ ಹೇಳಿಕೆಗಳನ್ನು ದಾಖಲಿಸಲು ಅನುವಾಗುವಂತೆ ಮತ್ತು ನ್ಯಾಯಾಲಯ ಹೇಳಿಕೆಗಳನ್ನು ದಾಖಲಿಸಲು ಅನುವಾಗುವಂತೆ ಮತ್ತು ನ್ಯಾಯಾಲಯ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ, 2023 ಜಾರಿಗೆ ಬಂದಿರುತ್ತದೆ ಹಾಗೂ ನಿಯಮಗಳನ್ನು ರಚಿಸಿದ್ದು, ಅವುಗಳನ್ನು ಸದ್ಯದಲ್ಲೇ ಜಾರಿಗೆ ತರಲಾಗುತ್ತದೆ. ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2023 ದಿನಾಂಕ: 04—03–2024 ರಿಂದ ಜಾರಿಗೆ ಬಂದಿರುತ್ತದೆ ಎಂದು ಅವರು ತಿಳಿಸಿದರು. ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಸರ್ಕಾರದ ಪರ 2021ನೇ ಸಾಲಿನಲ್ಲಿ…

Read More

ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಲಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಪ್ರಸ್ತುತ ವರ್ಷ ದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ ಗೂ ಹೆಚ್ಚು ಮೊತ್ತದ ವಂಚನೆ ಆಗಿದ್ದು, ಅದರಲ್ಲಿ 9.45 ಕೋಟಿ ರೂಗಳನ್ನು ವಶಪಡಿಸಿಕೊಂಡು, 27 ಜನರನ್ನು ಅರೆಸ್ಟ್ ಮಾಡಲಾಗಿದೆ ಎಂದರು. ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ಟೆಲಿಗ್ರಾಂ, ಇತರೆ ಅಂರ್ತಜಾಲ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15…

Read More

ಜೈಪುರ: 160 ಅಡಿ ಆಳದ ಬೋರ್ ವೆಲ್ ಗೆ ಬಿದ್ದಿದ್ದ 5 ವರ್ಷದ ಬಾಲಕನನ್ನು ಮೇಲೆತ್ತಿದರೂ ಬಾಲಕನ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಇಂತಹದ್ದೊಂದು ಘಟನೆ ಜೈಪುರದ ದೌಸಾದಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಲಿಖಾಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. 5 ವರ್ಷದ ಆರ್ಯನ್ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಆಕಸಿಕವಾಗಿ ಮನೆಯ ಎದುರಿನ ಬೋರ್ ವೆಲ್ ಗೆ ಬಿದ್ದಿದ್ದ. ನಂತರ ವಿಷಯ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಬಂದು ಪೊಲೀಸರಿಗೆ ಮಾಹಿತಿ ನೀಡಿದರು ಒಂದು ಗಂಟೆಯ ನಂತರ ರಕ್ಷಣಾ ಕಾರ್ಯಾಚರಣೆ ಆರಂಭವಾಯಿತು. ರಕ್ಷಣಾ ತಂಡ ಅಲ್ಲಿಗೆ ತಲುಪಿದ ತಕ್ಷಣ ಪೈಪ್ ಮೂಲಕ ಆಮ್ಲಜನಕ ಪೂರೈಕೆ ಆರಂಭಿಸಿ ಅವರ ಚಲನವಲನವನ್ನು ಸೆರೆಹಿಡಿಯಲು ಕ್ಯಾಮರಾ ಇರಿಸಲಾಗಿತ್ತು. ಮಗುವನ್ನು ತಲುಪಲು ಸಮಾನಾಂತರ ಹೊಂಡವನ್ನು ಅಗೆಯಲಾಯಿತು. ಆದರೆ, ನೀರಿನ ಮಟ್ಟ ಸುಮಾರು 160 ಅಡಿಗಳಷ್ಟಿತ್ತು ಹೀಗಾಗಿ ಮಗುವಿನ ಯಾವುದೇ ಚಲನವಲನವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುವುದು ಕಷ್ಟಕರವಾಗಿತ್ತು. ಆದರೂ ಕಾರ್ಯಾಚರಣೆ ಮುಂದುವರಿಸಲಾಗಿತ್ತು. ಕೊನೆಗೂ ಮಗುವನ್ನು ಉಳಿಸಲು ಸಾಧ್ಯವಾಗಲಿಲ್ಲ. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು: ಎಸ್.ಎಂ.ಕೃಷ್ಣ ಆಧುನಿಕ ಕರ್ನಾಟಕದ ಮಹಾನ್ ಶಿಲ್ಪಿ, ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಅವರು ಸಹಕಾರ ನೀಡದ ಇಲಾಖೆ, ವರ್ಗ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಣ್ಣಿಸಿದ್ದಾರೆ. ವಿಧಾನಸಭೆಯಲ್ಲಿಂದು ಸಂತಾಪ ನಿರ್ಣಯ ವೇಳೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರು ಕೇವಲ ಐಟಿ–ಬಿಟಿ ವಲಯಕ್ಕೆ ಉತ್ತೇಜನ ನೀಡಲಿಲ್ಲ. ಸಮಗ್ರ ಕರ್ನಾಟಕದ ಅಭಿವೃದ್ಧಿಗೂ ಆದ್ಯತೆ ನೀಡಿದ್ದರು ಎಂದು ಅವರು ತಿಳಿಸಿದರು. ಎಸ್.ಎಂ.ಕೃಷ್ಣ ಅವರು ತಂದೆ ಮಗನನ್ನು ಪೋಷಿಸುವಂತೆ ನನ್ನನ್ನು ಬೆಂಬಲಿಸಿದರು. ನನಗೂ ಅವರಿಗೂ ಒಂದೆರಡು ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿದ್ದವು. ಈಗಲೂ ಆ ನಿರ್ಧಾರಗಳು ಸರಿಯಲ್ಲ ಎಂದು ಹೇಳುತ್ತೇನೆ. ಉಳಿದಂತೆ ನಮ್ಮಿಬ್ಬರ ಸಂಬಂಧ ಅವಿನಾಭಾವದಿಂದಿತ್ತು ಎಂದು ಅವರು ಹೇಳಿದರು. ಎಸ್.ಎಂ.ಕೃಷ್ಣ ಅವರ ಸಾವು ನನಗೆ ದುಃಖ ತಂದಿಲ್ಲ. ಬದಲಾಗಿ ಸಂತೋಷ ತಂದಿದೆ. 92 ವರ್ಷ ತುಂಬಿದ ಜೀವನದಲ್ಲಿ ಮೂರ್ನಾಲ್ಕು ತಿಂಗಳಷ್ಟೇ ಅವರು ಅನಾರೋಗ್ಯದಲ್ಲಿದ್ದರು. ಉಳಿದಂತೆ ಅವರ ಉಡುಪು, ಜೀವನಶೈಲಿ ಎಲ್ಲವೂ ವರ್ಣನೀಯವಾಗಿತ್ತು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ…

Read More

ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್ ನಲ್ಲಿರುವ ಶ್ರೀಮದ್ ರಂಭಾಪುರಿ ಪ್ರೌಢಶಾಲೆ ಆವರಣದಲ್ಲಿ ತಿಪಟೂರು ತಾಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 14ರಂದು ಶನಿವಾರ ನಡೆಯಲಿದ್ದು ಅದಕ್ಕೆ ಎಲ್ಲಾಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಎಂ.ಬಸವರಾಜಪ್ಪ ತಿಳಿಸಿದರು. ಈ ಕಾರ್ಯಕ್ರಮ ಬೆಳಿಗ್ಗೆ 10:30ಕ್ಕೆ ಆರಂಭವಾಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ.ಷಡಕ್ಷರಿ ವಹಿಸಲಿದ್ದು, ಪ್ರಸಿದ್ಧ ಸಾಹಿತಿ ಪ್ರೊಫೆಸರ್ ನಟರಾಜ್ ಬೂದಾಳು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು. ಎರಡು ವಿಚಾರಗೋಷ್ಠಿ ಹಾಗೂ ಕವಿಗೋಷ್ಠಿ ಏರ್ಪಡಿಸಲಾಗಿದ್ದು, ಈ ಸಮ್ಮೇಳನದ ಅಧ್ಯಕ್ಷರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಪ್ರೊಫೆಸರ್ ಕೃಷ್ಣಮೂರ್ತಿ ಬಿಳಿಗೆರೆ ಅವರನ್ನು ಆಯ್ಕೆ ಮಾಡಲಾಗಿದ್ದು,  ಇವರಿಂದ ಧ್ವಜಾರೋಹಣ ನೆರವೇರಿಸಲಾಗುವುದು,  ಜಾನಪದ ಕಲಾ ತಂಡಗಳೊಂದಿಗೆ ಕಾಲೇಜು ವಿದ್ಯಾರ್ಥಿಗಳು ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಯನ್ನು ಹಸಿರು ಸಸ್ಯಗಳೊಂದಿಗೆ ವಿನೂತನವಾಗಿನಡೆಯಲಿದೆ ಎಂದು ತಿಳಿಸಿದರು . ಈ ಸುದ್ದಿಗೋಷ್ಠಿಯಲ್ಲಿ ತಿಪಟೂರು ತಾಲೂಕಿನ ಕ.ಸಾ.ಪ. ತಾಲೂಕು ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ವರದಿ: ಆನಂದ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಬೆಂಗಳೂರು: ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ನು ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ ಮಾಡುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಸೋಮವಾರ ನಡೆದ ಪಂಚಮಸಾಲಿ 2ಎ ಮೀಸಲಾತಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್​ ನಡೆಸಿದ್ದಕ್ಕೆ ಕೆರಳಿರುವ ಸ್ವಾಮೀಜಿ,   ಸಿಎಂ ಸಿದ್ದರಾಮಯ್ಯ ಅನುಮತಿ ಇಲ್ಲದೇ ಲಾಠಿ ಚಾರ್ಜ್​ ಆಗಿದ್ದು ಹೇಗೆ? ಹಾಗೆ ಆಗಿದ್ದೇ ನಿಜವಾದರೆ ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಒತ್ತಾಯಿಸಿದ್ದಾರೆ. ನಮ್ಮ ಜನ ಇನ್ನಷ್ಟು ಪುಟಿದೇಳುತ್ತಾರೆ, ಅಲ್ಲದೆ, ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ನು ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಸರ್ಕಾರ ನಮ್ಮ ಸಮುದಾಯದ ಶಾಸಕರನ್ನು ಗುರಿಯಾಗಿಸಿಕೊಂಡು ನಮಗೆ ಮೀಸಲಾತಿ ನೀಡಲು ನಿರಾಕರಿಸಿದರೆ ನಾವು ಬೇರೆ ದಾರಿ ಹಿಡಿಯಬೇಕಾಗುತ್ತದೆ. ಸಮುದಾಯದ ಮೇಲೆ ದಾಳಿ ಮಾಡುವ ಮೂಲಕ ಈ ಸರ್ಕಾರ ಕೆಟ್ಟ ಹೆಸರು ಗಳಿಸುತ್ತಿದೆ ಎಂದು ಅವರು…

Read More