Author: admin

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ಪಂಚಮಸಾಲಿ ಸಮಾಜದವರನ್ನು 2ಎ ವ್ಯಾಪ್ತಿಗೆ ತರಬೇಕು ಎಂಬ ಅವರ ಬೇಡಿಕೆಯನ್ನು ಯಾವುದೇ ಕಾರಣಕ್ಕೂ ಪರಿಗಣಿಸಬಾರದು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸಿದ್ದರಾಮಯ್ಯನವರಿಗೆ ಮನವಿಯಲ್ಲಿ ತಿಳಿಸಿದ್ದಾರೆ. ಪಂಚಮಸಾಲಿ ಸಮಾಜ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಲಿಷ್ಠ ಸಮುದಾಯವಾಗಿದ್ದು, ಅವರನ್ನು 2ಎ ವ್ಯಾಪ್ತಿಗೆ ತರಬಾರದು ಎಂದು ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಯೆಣ್ಣೆಗೆರೆ ಆರ್.ವೆಂಕಟರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬುಧವಾರ ರಾತ್ರಿಯಿಂದ ಭಾರೀ ಮಳೆಯಾದ ನಂತರ ಶಾಲೆಗಳನ್ನು ಮುಚ್ಚಿ ಆದೇಶ ಹೊರಡಿಸಲಾಗಿದೆ. ಗುರುವಾರ ಬೆಳಗ್ಗೆ 6 ಗಂಟೆಯವರೆಗೆ ನಗರದ ಹಲವು ಭಾಗಗಳಲ್ಲಿ, ವಿಶೇಷವಾಗಿ ಉತ್ತರ ಮತ್ತು ಮಧ್ಯ ಪ್ರದೇಶಗಳಲ್ಲಿ 7 ಸೆಂಟಿಮೀಟರ್‌ ಗಿಂತಲೂ ಹೆಚ್ಚು ಮಳೆಯಾಗಿದೆ ಎಂದು ಚೆನ್ನೈ ಮಹಾನಗರ ಪಾಲಿಕೆಯ ವಲಯವಾರು ಮಳೆ ವರದಿ ತಿಳಿಸಿದೆ. ಚೆನ್ನೈ ನಗರವು ಸರಾಸರಿ 5.3 ಸೆಂ.ಮೀ ಮಳೆಯನ್ನು ಪಡೆದಿದೆ ಮತ್ತು ಕೊಳತ್ತೂರಿನಲ್ಲಿ ಅತಿ ಹೆಚ್ಚು 8.5 ಸೆಂ.ಮೀ ಮಳೆಯಾಗಿದೆ, ನಂತರ ನೆರ್ಕುಂದ್ರಂನಲ್ಲಿ 7.9 ಸೆಂ.ಮೀ.ಮಳೆಯಾಗಿದೆ. ಗ್ರೇಟರ್ ಚೆನ್ನೈ ಕಾರ್ಪೊರೇಷನ್‌ನ ತೊಂಡಿಯಾರ್‌ಪೇಟ್, ಪೆರಂಬೂರ್, ಮಾಧವರಂ, ಬೇಸಿನ್ ಬ್ರಿಡ್ಜ್, ಅಯಪಕ್ಕಂ ಮತ್ತು ಅಮಿಂಜಿಕರೈಗಳಲ್ಲಿನ ಮಳೆ ಮಾಪನ ಕೇಂದ್ರಗಳಲ್ಲಿ 7 ಸೆಂ.ಮೀ ಮಳೆ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆಯು ತಿರುವಳ್ಳೂರು, ರಾಣಿಪೇಟ್, ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಣ್ಣಾಮಲೈ, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಮೈಲಾಡುತುರೈ, ನಾಗಪಟ್ಟಣಂ, ತಿರುವರೂರು, ತಂಜಾವೂರು, ಪುದುಕೊಟ್ಟೈ, ಪುದುಕೊಟ್ಟೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ…

Read More

ತುಮಕೂರು: ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸನ್ನ ಸಾಧಿಸಲು ಸಾಧ್ಯವಾಗುತ್ತದೆ. ಪ್ರಾಮಾಣಿಕವಾಗಿ ನಿರಂತರ ಸಾಧನೆಯಲ್ಲಿ ತೊಡಗಿಸಿಕೊಂಡರೆ ಸಫಲತೆ ಕಾಣಬಹುದು ಎಂದು ಇಸ್ರೋದ ಮಾಜಿ ಪ್ರಾಜೆಕ್ಟ್ ಇಂಜಿನಿಯರ್ ಹಾಗೂ ವಿಜ್ಞಾನಿ ಕೆ.ಟಿ. ಸುಂದರಮೂರ್ತಿ ವಿದ್ಯಾರ್ಥಿಗಳಿಗೆ ಕರೆಕೊಟ್ಟರು. ತುಮಕೂರಿನ ಗೊಲ್ಲಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ 18ನೇ ಬ್ಯಾಚ್‌ ನ ಹಳೆ ವಿದ್ಯಾರ್ಥಿಗಳು ಆಯೋಜಿಸಿದ್ದ ಹಳೆ ವಿದ್ಯಾರ್ಥಿಸಂಘದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ನವೋದಯ ವಿದ್ಯಾಲಯದ ಕಾರ್ಯ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ಸಾಧನೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಜವಾಹರ ನವೋದಯ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಹನುಮಂತ ರೆಡ್ಡಿ ಅವರು ಮಾತನಾಡಿ, ಶಾಲೆಯ ಸುಂದರ ಪರಿಸರವನ್ನು ಅಂದಗೆಡದಂತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಿಸಿದರು. ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಕಲಾರವರು ಪ್ರಾಸ್ತಾವಿಕವಾಗಿ ಮಾತನಾಡಿ, ಹಳೆ ವಿದ್ಯಾರ್ಥಿಗಳ 18 ನೇ ಬ್ಯಾಚಿನ ವಿದ್ಯಾರ್ಥಿಗಳು 2024– 25 ನೇ ಸಾಲಿನಲ್ಲಿ ಹಮ್ಮಿಕೊಂಡ ವೃತ್ತಿ ಮಾರ್ಗದರ್ಶನ ಶಿಬಿರ, ವೈದ್ಯಕೀಯ ಶಿಬಿರ ಮೊದಲಾದ ಸೇವಾ…

Read More

ತುಮಕೂರು: ಸರ್ಕಾರ ಎಷ್ಟೇ ಅನುದಾನ, ಪ್ರೋತ್ಸಾಹ ನೀಡಿದರೂ ಜನಬೆಂಬಲ ಇಲ್ಲದೆ ಯಾವ ಕಲೆಯೂ ಬೆಳೆಯುವುದಿಲ್ಲ. ಜನರೇ ಅವುಗಳ ಶಕ್ತಿ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಡಿ. ವಿ. ಪರಮಶಿವಮೂರ್ತಿ ಅಭಿಪ್ರಾಯಪಟ್ಟರು. ಯಕ್ಷದೀವಿಗೆ ಸಂಸ್ಥೆಯ ದಶಮಾನೋತ್ಸವ ವರ್ಷದ ಉದ್ಘಾಟನೆಯನ್ನು ನಗರದ ಶ್ರೀಕೃಷ್ಣಮಂದಿರದಲ್ಲಿ ನೆರವೇರಿಸಿ ಅವರು ಮಾತನಾಡಿದರು. ಯಕ್ಷಗಾನ ಕಲೆಗೆ ಸುಸಂಸ್ಕೃತ ಕಲಾವಿದರ ಹಿನ್ನೆಲೆ ಇದೆ. ಅದರ ಪ್ರೇಕ್ಷಕರಲ್ಲೂ ಕಲೆಯ ಕುರಿತು ಅಪಾರ ಶ್ರದ್ಧೆ ಹಾಗೂ ಗೌರವ ಇರುತ್ತದೆ. ಅವರು ಕಾಟಾಚಾರಕ್ಕೋ ಕಾಲಹರಣಕ್ಕೋ ಬರುವವರಲ್ಲ. ಯಕ್ಷಗಾನ ಇಷ್ಟು ಜನಪ್ರಿಯವಾಗಿರುವುದಕ್ಕೆ ಕಲಾವಿದರು ಹಾಗೂ ಪ್ರೇಕ್ಷಕರ ಕೊಡುಗೆ ಹೆಚ್ಚಿನದ್ದಾಗಿದೆ ಎಂದರು. ಕಳೆದ ಏಳೆಂಟು ಶತಮಾನಗಳಿಂದ ಯಕ್ಷಗಾನ ಕಲೆ ನಿರಂತರವಾಗಿ ಬೆಳೆದು ಬಂದಿದೆ. ವಿದೇಶೀಯರಿಂದಲೂ ಮೆಚ್ಚುಗೆ ಪಡೆದಿದೆ. ಕಲೆಯೊಳಗಿನ ಅಂತಃಶಕ್ತಿ ಅದನ್ನು ಇಷ್ಟು ಎತ್ತರಕ್ಕೆ ಏರುವಂತೆ ಮಾಡಿದೆ ಎಂದರು. ಕೈಗಾರಿಕೋದ್ಯಮಿ ಹೆಚ್.ಜಿ.ಚಂದ್ರಶೇಖರ್ ಮಾತನಾಡಿ, ಯಕ್ಷಗಾನ ವಾಚಿಕ ಪ್ರಧಾನವಾದ ಕಲೆ. ಯಕ್ಷಗಾನ ಕಲಾವಿದರ ಮಾತಿನ ಮೋಡಿಗೆ ಒಳಗಾಗದವರಿಲ್ಲ. ಅನೇಕ ವಿದ್ವಾಂಸರು ನೂರಾರು ವರ್ಷಗಳಿಂದ ಯಕ್ಷಗಾನದ ಮೂಲಕ ಕನ್ನಡದಲ್ಲಿ…

Read More

ಔರಾದ : ತಾಲೂಕಿನ ಸಂತಪೂರ ಮುರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡುವುದಿಲ್ಲ, ಗ್ರಂಥಾಲಯ, ಪುಸ್ತಕಗಳು, ಆಟದ ಸಲಕರಣೆಗಳು ಸೇರಿದಂತೆ ಹಾಸ್ಟೆಲ್ ಸೌಕರ್ಯಗಳನ್ನು ಸರಿಯಾಗಿ ನೀಡುತ್ತಿಲ್ಲ,‌ಅದನ್ನು ಪ್ರಶ್ನೆ ಮಾಡಿದರೆ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿ ವಾರ್ಡನ್ ವಿರುದ್ಧ ಧಿಕ್ಕಾರ ಕೂಗಿರುವ ಘಟನೆ ಸಂತಪೂರನಲ್ಲಿ ನಡೆದಿದೆ. ನಮಗೆ ನೀಡುವ ಊಟ ಗುಣಮಟ್ಟದಿರುವುದಿಲ್ಲ, ಅನ್ನ ಸಾಂಬಾರನಲ್ಲಿ ಹುಳಗಳು ಬರುತ್ತವೆ. ಇದೇನು ಎಂದು ಪ್ರಶ್ನಿಸಿದರೆ ಅದನ್ನು ತೆಗೆದು ತಿನ್ನು ಎನ್ನುತ್ತಾರೆ ಮಜ್ಜಿಗೆ ಹಾಗೂ ಚಹಾದಲ್ಲಿ ಬರಿ ನೀರು ಇರುತ್ತದೆ.  ಹೀಗಾದ್ರೆ ನಾವು ಎನು ಮಾಡಬೇಕು ಎನ್ನುತ್ತಾರೆ ವಿದ್ಯಾರ್ಥಿಗಳು. ವಾರ್ಡನ್ ಮಾತು ಎತ್ತಿದರೆ ಸಾಕು,  ಬರಿ ನಿಮ್ಮಪ್ಪಾ ನಾ  ಜಾ*** ಬೋ***ಮಗನೆ ಅಂತೆಲ್ಲಾ ಬೈಯ್ದು ಬಿಡುತ್ತಾರೆ. ಬೈ ಬೇಡಿ ಸರ್ ಎಂದಾಗ, ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ ಇಂತಹ ಪರಿಸ್ಥಿತಿಯಲ್ಲಿ ನಾವ್ ಎನ್ ಮಾಡಬೇಕು ಸರ್ ನಾವುಗಳು ಇಲ್ಲಿ ನರಕಯಾತನೆ ಅನುಭವಿಸುತ್ತಿದೇವೆ ಎಂದು ಮಾಧ್ಯಮದ ಮುಂದೆ ಅಳಲನ್ನು…

Read More

ತುಮಕೂರು:  ಚಿರತೆ ದಾಳಿಗೆ 9 ಕುರಿಗಳು ಬಲಿಯಾಗಿರುವ ಘಟನೆ  ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸುರುಗೆನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ ಎಂಬವರಿಗೆ ಸೇರಿದ 9 ಕುರಿಗಳನ್ನ  ಕುರಿ ರೊಪ್ಪದಲ್ಲಿ ಕಟ್ಟಿ ಹಾಕಲಾಗಿತ್ತು. ಮುಂಜಾನೆ  ಕುರಿಗಳ ಮೇಲೆ ಚಿರತೆ  ದಾಳಿ ನಡೆಸಿದೆ. ಘಟನೆಯಿಂದಾಘಿ  80 ಸಾವಿರದಿಂದ ಒಂದು ಲಕ್ಷ ಮೌಲ್ಯದ ಕುರಿಗಳನ್ನು ರೈತ ಕಳೆದುಕೊಂಡಿದ್ದಾರೆ. ಘಟನೆ ಬೆನ್ನಲ್ಲೇ ನಷ್ಟಕ್ಕೊಳಗಾಗಿರುವ ರೈತನಿಗೆ  ಅಧಿಕಾರಿಗಳು ಪರಿಹಾರವನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶುಸಂಗೋಪನ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು): ರಾಜ್ಯದ ಮುಖ್ಯಮಂತ್ರಿಯಾಗಿ ಕೇಂದ್ರದ ವಿದೇಶಾಂಗ ಸಚಿವರಾಗಿ ಮಹಾರಾಷ್ಟ್ರದ ರಾಜ್ಯಪಾಲರಾಗಿ, ರಾಜ್ಯ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ ಪದ್ಮಭೂಷಣ ಎಸ್.ಎಂ.ಕೃಷ್ಣ ಇವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿರುವುದನ್ನು ಮರೆಯಲಾಗದು. ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಜರುಗಿದ ಗುರು-ವಿರಕ್ತರ ಸಮಾವೇಶಕ್ಕೆ ಆಗಮಿಸಿ ಸಮಾರಂಭ ಉದ್ಘಾಟಿಸಿದ್ದು ತಮ್ಮ ಮನದಲ್ಲಿ ಹಸಿರಾಗಿದೆ. ನಂತರದ ದಿನಗಳಲ್ಲಿಯೂ ಸಹ ಅವರು ಶ್ರೀ ಪೀಠಕ್ಕೆ ಆಗಮಿಸಿ ಜಗದ್ಗುರುಗಳ ಆಶೀರ್ವಾದ ಪಡೆದು ಹೋಗಿದ್ದಾರೆ. ಹಲವಾರು ಸಮಾರಂಭಗಳಲ್ಲಿ ಅವರು ಭಾಗವಹಿಸಿದ್ದು ತಮ್ಮ ಮನದಲ್ಲಿ ಹಸಿರಾಗಿದೆ. ಅವರು ಮುತ್ಸದ್ದಿ ರಾಜಕಾರಣಿಯಾಗಿದ್ದರು. ಸರಳತೆ ಮತ್ತು ಸೌಜನ್ಯತೆಯ ನಡವಳಿಕೆ ಹೊಂದಿದ್ದ ಅವರ ಅಗಲಿಕೆ ತಮಗೆ ನೋವನ್ನುಂಟು ಮಾಡಿದೆ. ದಯಾಘನನಾದ ಪರಮಾತ್ಮನು ಅವರ ಅಗಲಿದ ಪವಿತ್ರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೂ ಅವರ ಅಭಿಮಾನಿಗಳಿಗೂ ನೀಡಲಿ…

Read More

ತುಮಕೂರು: ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳಿಗೆ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಜಿಲ್ಲಾ ಮಟ್ಟದ ಕುಂದು ಕೊರತೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಅನೇಕ ಅಲೆಮಾರಿ ಸಮುದಾಯದವರು ಆಧಾರ್ ಕಾರ್ಡ್, ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳಿಲ್ಲದೆ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಲೆಮಾರಿ ಸಮುದಾಯಗಳು ವಾಸಿಸುತ್ತಿರುವ ಗ್ರಾಮಗಳಿಗೆ ತೆರಳಿ ಜನರಲ್ಲಿ ಅರಿವು ಮೂಡಿಸಿ ಅಗತ್ಯ ದಾಖಲೆಗಳನ್ನು ಪಡೆಯುವಂತೆ ಮಾಡಬೇಕು ಎಂದು ಸೂಚಿಸಿದರು. ಪ್ರತಿ 3 ತಿಂಗಳಿಗೊಮ್ಮೆ ತಾಲ್ಲೂಕು ಮಟ್ಟದಲ್ಲಿ ಪ.ಜಾತಿ, ಪ.ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಲೆಮಾರಿ ಸಮುದಾಯಗಳ ಕುಂದು ಕೊರತೆ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.…

Read More

ತುಮಕೂರು: ಡಿಜಿಟಲ್ ಮಾಧ್ಯಮಕ್ರಾಂತಿಯ ಕಾಲ ಇದಾಗಿರುವುದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಮಾಧ್ಯಮ ಕುರಿತ ಸಂಶೋಧನೆಗೆ ವಿಫುಲ ಅವಕಾಶವಿದೆ ಎಂದು ಅಮೇರಿಕದ ಕೊಲರಾಡೊ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕಿ ವೈಭವಿಕೃಷ್ಣ ಜಿ.ಎ. ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ವಿದೇಶದಲ್ಲಿ ಸಂಶೋಧನೆ ಮತ್ತು ಉದ್ಯೋಗಾವಕಾಶಗಳು’ ಕುರಿತು ಮಾತನಾಡಿದ ಅವರು, ಮಾಧ್ಯಮ ಸಂಶೋಧನೆ ಒಂದು ವಿಸ್ತೃತ ಕ್ಷೇತ್ರವಾಗಿದ್ದುಅದು ಸೀಮಾತೀತವಾಗಿದೆ ಎಂದರು. ಅಮೇರಿಕದಂತಹ ದೇಶಗಳ ವಿವಿಗಳಿಗೆ ವಿವಿಧ ದೇಶಗಳಿಂದ ಸಂಶೋಧಕರು ಬರುವುದರಿಂದ ಸಹಭಾಗಿತ್ವದ ಸಂಶೋಧನ ಯೋಜನೆಗಳು ಹೆಚ್ಚಾಗಿರುತ್ತವೆ. ಇದರಿಂದ ಒಂದೇ ವಿಷಯದ ಕುರಿತ ವಿಭಿನ್ನ ದೃಷ್ಟಿಕೋನಗಳು ಗೊತ್ತಾಗುತ್ತವೆ ಎಂದರು. ವಿದೇಶದಲ್ಲಿ ವ್ಯಾಸಂಗ ಹಾಗೂ ಸಂಶೋಧನೆ ಜತೆಜತೆಗೆ ಉದ್ಯೋಗ ಮಾಡುವುದಕ್ಕೂ ಸಾಕಷ್ಟು ಅವಕಾಶವಿದೆ. ಸಂಶೋಧನ ಸಹಾಯಕರೂ ಉತ್ತಮ ಸಂಭಾವನೆ ಪಡೆಯಬಲ್ಲರು. ಆದರೆ ಸರಿಯಾದ ವಿಶ್ವವಿದ್ಯಾನಿಲಯ ಹಾಗೂ ಮಾರ್ಗದರ್ಶಕರ ಆಯ್ಕೆ ಬಹಳ ಮುಖ್ಯಎಂದರು. ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸಂಶೋಧಕರು ಬೋಧನೆಯಲ್ಲಿ ತೊಡಗಿಸಿಕೊಳ್ಳುವುದು ಅಪೇಕ್ಷಣೀಯ. ಇದು ಅವರ ಸಂಶೋಧನ ಫಲಿತಗಳನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಲು ಸಹಕಾರಿಯಾಗುವುದರೊಂದಿಗೆ…

Read More

ತುಮಕೂರು: ಕಾನೂನು ಮತ್ತು ಕಾಯ್ದೆಗಳ ಮಾಹಿತಿ ತಿಳಿದಿದ್ದರೆ, ಅದನ್ನು ಆಯುಧವನ್ನಾಗಿ ಬಳಸಿಕೊಂಡು ಸಮಾಜದಲ್ಲಿ ಘಟಿಸುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಜಿಲ್ಲಾ ವರದಕ್ಷಿಣೆ ವಿರೋಧಿ ವೇದಿಕೆಯ ಉಪಾಧ್ಯಕ್ಷೆ ಬಾ.ಹ.ರಮಾಕುಮಾರಿ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗವು ಜಿಲ್ಲಾ ವರದಕ್ಷಿಣೆ ವಿರೋಧಿ ವೇದಿಕೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ವಿಶ್ವ ಮಾನವ ಹಕ್ಕುಗಳ ದಿನಾಚರಣೆ’ಯಲ್ಲಿ ಮಾತನಾಡಿದರು. ಸಮಾಜದ ಸಮಸ್ಯೆಗಳನ್ನು ಪರಿಹರಿಸಲು ಇರುವ ಆಯುಧವೆಂದರೆ ಮಾಹಿತಿ ಮತ್ತುಜ್ಞಾನ ಸಂಪಾದನೆ. ಈಗಾಗಲೇ ನಡೆದಿರುವ ಅನಾಹುತಗಳಿಗೆ ಪರಿಹಾರವನ್ನು ಕಾನೂನಿನ ಅರಿವಿನ ಮೂಲಕ ಪಡೆಯಬಹುದು ಎಂದರು. ಜಿಲ್ಲಾ ವರದಕ್ಷಿಣೆ ವಿರೋಧಿ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾ.ಚಿ.ರಾಜಕುಮಾರ ಮಾತನಾಡಿ, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಸರ್ಕಾರ ಗಮನಹರಿಸಬೇಕು. ಕಾರ್ಮಿಕರ ಕಾನೂನುಗಳ ಬಗ್ಗೆ ಹೆಚ್ಚುಒತ್ತು ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ, ಮಾನವಹಕ್ಕುಗಳನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳಬೇಕು. ನಕಾರಾತ್ಮಕವಾಗಿ ಬಳಸಿಕೊಂಡು ಸಮಾಜವನ್ನು ಹಾಳು ಮಾಡಬಾರದು ಎಂದು ತಿಳಿಸಿದರು. ಸೋಫಿಯಾ ಕಾನೂನು ಕಾಲೇಜಿನ ಪ್ರಾಂಶುಪಾಲ ರಮೇಶ್…

Read More