Subscribe to Updates
Get the latest creative news from FooBar about art, design and business.
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
- ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
- ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
- ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
- ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
Author: admin
ತುಮಕೂರು: ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಹೆಚ್.ಎಂ.ಗಂಗಾಧರಯ್ಯ ಸಭಾಂಗಣದಲ್ಲಿ MSYER, IQAC ಹಾಗೂ ಮನೋವಿಜ್ಞಾನ ವಿಭಾಗಯಿಂದ ಶಕ್ತಿಶಾಲಿ ವ್ಯಕ್ತಿತ್ವ ನಿರ್ಮಾಣದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಮಂಗಳವಾರದಂದು ಮಾಡಲಾಯಿತು. ಕಾರ್ಯಕ್ರಮಕ್ಕೆ ತುಮಕೂರಿನ ಶ್ರೀ ರಾಮಕೃಷ್ಣ ವಿವಕಾನಂದ ಆಶ್ರಮದ ಪರಮಪೂಜ್ಯ ಶ್ರೀ ಸ್ವಾಮಿ ದೀರಾನಂದಾಜೀ ಅವರು, ವಿದ್ಯಾರ್ಥಿ ದೆಸೆಯಿಂದಲೇ ಸ್ವಾಮಿ ವಿವೇಕಾನಂದರ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವುದರ ಮೂಲಕ ಶಕ್ತಿಶಾಲಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು. ಜೊತೆಗೆ ನಮ್ಮ ತಂದೆ ತಾಯಿಗಳಿಗೆ ಗುರು ಹಿರಿಯರಿಗೆ ಗೌರವವನ್ನು ನೀಡಬೇಕು ಎಂದು ತಿಳಿಸಿದರು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ಪಿ.ಹೇಮಲತಾ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ MSYER ಸಂಚಾಲಕರು ಹಾಗೂ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಾಕ್ಷಾಯಿಣಿ, ಮನೋವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶಿಲ್ಪಾಶ್ರೀ ಜಿ.ಸಿ., ಎಲ್ಲಾ ವಿಭಾಗದ ಮುಖ್ಯಸ್ಥರು, ಸಹಾಯಕ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಳಗಾವಿ ಸುವರ್ಣ ವಿಧಾನಸೌಧ: “ಎಸ್.ಎಂ.ಕೃಷ್ಟ ಅವರು ಈ ನಾಡಿನ ಸಾಂಸ್ಕೃತಿಕ ನಾಯಕ.. ದೇವರಾಜು ಅರಸು ಸರಿ ಸಮಾನವಾದ ಮೌಲ್ಯಯುತ ಆಡಳಿತ ನಡೆಸಿದ ಧೀಮಂತ.. ಎಲ್ಲರನ್ನೂ ಒಳಗೊಳ್ಳುವ ರಾಜಕಾರಣ ಮಾಡಿದ ಮುತ್ಸದ್ಧಿ” ಡಿಸೆಂಬರ್ 10ರಂದು ನಡೆದ ಎರಡನೇ ದಿನದ ಅಧಿವೇಶನದಲ್ಲಿ ‘ಚಿಂತಕರ ಚಾವಡಿ’ ಎಂದೇ ಹೆಸರಾದ ಮೇಲ್ಮನೆಯಲ್ಲಿ ಈ ಮೇಲಿನಂತೆ ಎಸ್ ಎಂ ಕೃಷ್ಣ ಅವರ ವ್ಯಕ್ತಿತ್ವವನ್ನು ಬಣ್ಣಿಸಲಾಯಿತು. ಸಂತಾಪ ಸೂಚನೆಯ ನಿರ್ಣಯದ ಪ್ರಕಟಣೆ ಬಳಿಕ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದಸ್ಯರಿಗೆ ಮಾತನಾಡಲು ಅವಕಾಶ ಕಲ್ಪಿಸಿದರು. ಸಮಚಿತ್ತ ಹೊಂದಿದ್ದರು: ವಿಧಾನ ಪರಿಷತ್ ಶಾಸಕರಾದ ಡಾ.ತಿಮ್ಮಯ್ಯ ಅವರು ಮಾತನಾಡಿ, ಡಾ.ರಾಜಕುಮಾರ ಅವರು ಅಪಹರಣವಾದಾಗ ಅವರನ್ನು ರಕ್ಷಣೆ ಮಾಡಿ ನಾಡಿಗೆ ಒಪ್ಪಿಸಿದ ಕೀರ್ತಿ ಎಸ್ ಎಂ ಕೃಷ್ಣ ಅವರಿಗೆ ಸಲ್ಲುತ್ತದೆ ಎಂದರು. ಶಿಸ್ತುಬದ್ಧ ರಾಜಕಾರಣಿ: ಪರಿಷತ್ ಶಾಸಕರಾದ ಎಸ್ ಎಲ್ ಭೋಜೇಗೌಡ ಅವರು ಮಾತನಾಡಿ, ಕೃಷ್ಣ ಅವರು ನಾಲ್ಕು ಸದನಗಳಲ್ಲಿ ಕುಳಿತು ಸೇವೆ ಮಾಡಿದರು. ಶಿಸ್ತುಬದ್ಧವಾದ ರಾಜಕಾರಣಿಯಾಗಿದ್ದರು. ಯಾವುದಕ್ಕು ಧೃತಿ ಗೆಡುತ್ತಿರಲಿಲ್ಲ. ಬೆಂಗಳೂರನ್ನು ಅಂತಾರಾಷ್ಟ್ರೀಯ…
ಬೆಳಗಾವಿ ಸುವರ್ಣ ವಿಧಾನಸೌಧ: ಡಿ.10 ರಂದು ಮುಂಜಾನೆ ನಿಧನರಾದ ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ವಿಧಾನ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಬೆಳಗಾವಿ ಸುವರ್ಣ ಸೌಧದಲ್ಲಿ ಜರುಗುತ್ತಿರುವ ಚಳಿಗಾಲದ ಅಧಿವೇಶನದ ಎರಡನೆ ದಿನವಾದ ಮಂಗಳವಾರ ಸಭಾಧ್ಯಕ್ಷರಾದ ಯು.ಟಿ.ಖಾದರ್ ಸಂತಾಪ ಸೂಚನೆ ನಿರ್ಣಯವನ್ನು ಮಂಡಿಸಿ ಚರ್ಚೆಗೆ ಅವಕಾಶ ನೀಡಿದರು. ಈ ವೇಳೆ ಮಾತನಾಡಿದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಎಸ್.ಎಂ. ಕೃಷ್ಣ ಅವರು 01.05.1932 ರಂದು ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಜನಿಸಿದ್ದರು. ಬಿ.ಎ. ಬಿ.ಎಲ್. ಪದವಿ ಪಡೆದಿದ್ದ ಅವರು ನಂತರ ಟೆಕ್ಸಾಸ್ನಲ್ಲಿ ಎಂ.ಸಿ.ಎಲ್. ಪದವಿ, ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ ನಿಂದಲೂ ಪದವಿ ಪಡೆದಿದ್ದರು. ವೃತ್ತಿಯಲ್ಲಿ ವಕೀಲರಾಗಿದ್ದ ಎಸ್.ಎಂ.ಕೃಷ್ಣ ಅವರು ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿಯೂ ಕಾರ್ಯನಿರ್ವಹಿಸಿದ್ದರು. 1962ರಲ್ಲಿ ಪ್ರಥಮ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದ ಅವರು ನಂತರ 1989ರಲ್ಲಿ 9ನೇ ವಿಧಾನಸಭೆಗೆ 1999 ರಲ್ಲಿ 11ನೇ ವಿಧಾನಸಭೆಗೆ ಹಾಗೂ 2004ರಲ್ಲಿ 12ನೇ ವಿಧಾನಸಭೆಗೆ ಪುನರಾಯ್ಕೆಗೊಂಡಿದ್ದರು. 1968ರಲ್ಲಿ 4ನೇ ಲೋಕಸಭೆಗೆ ಚುನಾಯಿತರಾಗಿದ್ದ ಅವರು 1971ರಲ್ಲಿ 5ನೇ…
ಬೆಳಗಾವಿ: ಸಹನಶೀಲ, ಮೇರು ವ್ಯಕ್ತಿತ್ವದ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆಯು ವೈಯಕ್ತಿಕವಾಗಿ ನನಗೆ ನೋವನ್ನುಂಟು ಮಾಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಬೇಸರ ವ್ಯಕ್ತಪಡಿಸಿದರು. ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ತಮ್ಮದೇ ವ್ಯಕ್ತಿತ್ವದ ಮೂಲಕ ರಾಜ್ಯದಲ್ಲಿ ನಮ್ಮೆಲ್ಲರಿಗೂ ಆದರ್ಶವಾಗಿದ್ದರು. ಯುವಕರನ್ನು ಉತ್ತೇಜಿಸುತ್ತಿದ್ದರು. ಅವರ ರಾಜಕೀಯ ಜೀವನ ಇಂದಿನ ಯುವ ಪೀಳಿಗೆಗೆ ಮಾದರಿ ಎಂದು ಹೇಳಿದರು. ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಪ್ರಮುಖ ವಿಚಾರಗಳಲ್ಲಿ ಅತ್ಯಂತ ಸಹನೆ, ಸಮಚಿತ್ತತೆಯಿಂದ ಸಚಿವ ಸಂಪುಟದಲ್ಲಿ ಎಲ್ಲರ ಅಭಿಪ್ರಾಯಗಳನ್ನು ಪಡೆದು ಸೂಕ್ತ ತೀರ್ಮಾನಗಳನ್ನು ಮಾಡುತ್ತಿದ್ದದ್ದು ಅವರ ರಾಜಕೀಯ ಜೀವನದ ವಿಶೇಷತೆ. ನಾನು ಅವರ ಜೊತೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ತದನಂತರ ಅವರ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವನಾಗಿ ಕೆಲಸ ಮಾಡಿದ್ದೆ. ಬಹಳ ಹತ್ತಿರದಿಂದ ಅವರನ್ನು ನೋಡಿದ್ದೇನೆ ಎಂದರು. ಅವರು ಸುಸಂಸ್ಕೃತಿ, ಸಜ್ಜನ ರಾಜಕಾರಣಿ. ಯಾರನ್ನೆ ಮಾತನಾಡಿಸುವುದರಿಂದ ಹಿಡಿದು, ಜೊತೆಯಲ್ಲಿ ಮಾತನಾಡುವಾಗ, ಚರ್ಚೆ ಮಾಡುವಾಗ,…
ಬೆಂಗಳೂರು: ಕರ್ನಾಟಕ ರಾಜ್ಯದ ಜನಪ್ರಿಯ ಯೋಜನೆಯಾದ ಶಾಲಾ ಮಕ್ಕಳಿಗೆ ಬಿಸಿಯೂಟವನ್ನು ಪರಿಚಯಿಸಿರುವುದು ಆ ಕಾಲದಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ ಅವರು. ಈ ಯೋಜನೆಯ ಹಿಂದೆ ಹಸಿವು ನೀಗಿಸುವ ಉದ್ದೇಶ ಇತ್ತು. ಆದರೆ ಈ ಯೋಜನೆಯನ್ನ ಎಸ್.ಎಂ.ಕೃಷ್ಣ ಅವರು ಜಾರಿಗೆ ತಂದಿರುವುರು ಏಕೆ ಎನ್ನುವುದನ್ನು ತಮ್ಮ ಆತ್ಮಕಥೆ ಸ್ಮೃತಿ ವಾಹಿನಿಯಲ್ಲಿ ತೆರೆದಿಟ್ಟಿದ್ದಾರೆ. ಉತ್ತರ ಕನ್ನಡ ಪ್ರವಾಸದ ವೇಳೆ, ನನ್ನ ಜೊತೆಗೆ ಒಂದಿಬ್ಬರು ಮಿತ್ರರು ಇದ್ದರು. ಸಂಜೆ ಇಳಿಹೊತ್ತು ಶಾಲೆಯಿಂದ ಹೆಣ್ಣುಮಕ್ಕಳು ನಡೆದುಕೊಂಡು ಬರುತ್ತಿದ್ದರು. ಅವರನ್ನು ನಿಲ್ಲಿಸಿ ಅವರು ಮನೆಬಿಟ್ಟ ಸಮಯ ಹಾಗೂ ಶಾಲೆಯಲ್ಲಿ ಏನಾದರೂ ತಿನ್ನಲಿಕ್ಕೆ ಕೊಟ್ಟರಾ, ನೀವು ಎಷ್ಟೊತ್ತಿಗೆ ಮನೆಗೆ ಹೋಗುತ್ತೀರಾ ಮುಂತಾದ ವಿಷಯಗಳನ್ನು ವಿಚಾರಿಸಿಕೊಂಡೆ. ಬೆಳಿಗ್ಗೆ ಒಂದಿಷ್ಟು ಊಟ ಮಾಡಿದ ಮಕ್ಕಳು ಸಂಜೆ 6 ಗಂಟೆಯ ತನಕ ಹಸಿದಿರಬೇಕಾಗುತ್ತದೆ. ಹಸಿದ ಮಕ್ಕಳಿಗೆ ವಿದ್ಯೆಯ ಜೊತೆಗೆ ಹೊಟ್ಟೆಗೂ ಸಮಜಾಯಿಶಿ ಹೇಳಬೇಕೆಂಬುದು ನನ್ನ ಕನಸಾಗಿತ್ತು ಎಂದು ಎಸ್.ಎಂ.ಕೃಷ್ಣ ತಮ್ಮ ಆತ್ಮಕಥೆಯಲ್ಲಿ ತಿಳಿಸಿದ್ದಾರೆ. ಹಿಂದೆ ಅಂಥ ಪ್ರಯತ್ನಗಳು ನಡೆದು ವಿಫಲವಾಗಿದ್ದವು. ಅಕ್ಷರ ದಾಸೋಹ ಕಾರ್ಯಕ್ರಮದ ಹೊರೆ…
ಬೆಂಗಳೂರು: ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ಕೃಷ್ಣರವರ ಸದಾಶಿವನಗರದ ನಿವಾಸಕ್ಕೆ ಗಣ್ಯರ ದಂಡು ಆಗಮಿಸುತ್ತಿದೆ. ಇದೀಗ ಚಿತ್ರರಂಗದಿಂದ ರಮ್ಯಾ, ಸಾರಾ ಗೋವಿಂದು, ಶಿವರಾಜ್ ಕುಮಾರ್ ಬಳಿಕ ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಯುವ ಭೇಟಿ ನೀಡಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಮನೆ ಮಗ ಯುವರಾಜ್ ಕುಮಾರ್ ಜೊತೆಗೆ ಆಗಮಿಸಿದ ಅಶ್ವಿನಿ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಡಿಸೆಂಬರ್ 11 ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರು ಕರ್ನಾಟಕ ಕಂಡಂತ ಮೇರು ವ್ಯಕ್ತಿತ್ವದ ಅಪ್ರತಿಮಾ ರಾಜಕಾರಣಿ, ದೂರದೃಷ್ಟಿಯುಳ್ಳ ಮುತ್ಸದ್ಧಿ ನಾಯಕನನ್ನು ಕಳೆದುಕೊಂಡಿರುವುದು ಅತೀವ ನೋವನ್ನುಂಟು ಮಾಡಿದೆ. ಅವರ ಅಗಲಿಕೆ ರಾಜ್ಯಕ್ಕೆ ತುಂಬಲಾಗದ ನಷ್ಟ. ರಾಜ್ಯದ ಉಪಮುಖ್ಯಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ, ಕೇಂದ್ರದ ಸಚಿವರಾಗಿ ಅವರು ಕೈಗೊಂಡ ಜನಪರ ಕಾರ್ಯಗಳು ಅನನ್ಯ. ಐಟಿ-ಬಿಟಿ ಕ್ಷೇತ್ರದಲ್ಲಿ ಕರ್ನಾಟಕವನ್ನು, ಪ್ರಮುಖವಾಗಿ ಬೆಂಗಳೂರು ನಗರವನ್ನು ವಿಶ್ವಕ್ಕೆ ಪರಿಚಯಿಸಿದರು. ಈ ಮೂಲಕ ರಾಜ್ಯದ ಲಕ್ಷಾಂತರ ಯುವಕರಿಗೆ ಉದ್ಯೋಗ ಕಲ್ಪಿಸಿದರು. ರಾಜ್ಯದ ಅಭಿವೃದ್ಧಿಯ ಬಗ್ಗೆ ದೂರದೃಷ್ಟಿ ಹೊಂದಿದ್ದ ನಾಯಕರಾಗಿದ್ದರು. ಅವರ ರಾಜಕೀಯ ಜೀವನ ನನಗೆ ಅನುಕರಣೀಯ. ಮೃತರ ಆತ್ಮಕ್ಕೆ ಚಿರ ಶಾಂತಿ ಕೊರುತ್ತೇನೆ. ಅವರ ಕುಟುಂಬ ವರ್ಗ, ಅಭಿಮಾನಿಗಳು, ಆಪ್ತರಿಗೆ ದುಃಖ ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ಸಚಿವರು ಸಂತಾಪದಲ್ಲಿ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ಅಂತಿಮ ದರ್ಶನ ಪಡೆದ ಡಿ.ಕೆ.ಶಿವಕುಮಾರ್, ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣ ಅವರ ಕಾಲಿಗೆ ನಮಸ್ಕರಿಸಿ ಕಂಬನಿ ಮಿಡಿದರು. ಎಸ್.ಎಂ.ಕೃಷ್ಣ ಅವರ ಅಗಲಿಕೆಯಿಂದ ತೀವ್ರ ದುಃಖಿತರಾಗಿದ್ದ ಡಿಕೆಶಿ ಬಿಕ್ಕಿ ಬಿಕ್ಕಿ ಅಳುತ್ತಿರುವ ದೃಶ್ಯ ಕಂಡು ಬಂತು. ಇದೇ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಚೆಲುವರಾಯಸ್ವಾಮಿ ಸೇರಿದಂತೆ ಹಲವು ಸಚಿವರು ಶಾಸಕರು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಹಿರಿಯ ನಾಯಕರು ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆ ರಾಜ್ಯ ಸರ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನಡೆಸಲಿದೆ ಎಂದು ಆದೇಶ ಹೊರಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಜಮಖಂಡಿ: ಸದಾ ಸಂಸಾರಿಕ ಹಾಗೂ ವ್ಯವಹಾರದ ಜಂಜಾಟದಿಂದ ಮುಕ್ತಿ ಹೊಂದಲು ಭಜನೆಗಳು ಪೂರಕವಾಗಿವೆ ಎಂದು ಹಿರಿಯ ಸಾಹಿತಿ ಬಿ.ಪಿ.ನ್ಯಾಮಗೌಡ ಅಭಿಪ್ರಾಯ ಪಟ್ಟರು. ಅವರಿಂದು ಬಾಗಲಕೋಟೆ ಜಿಲ್ಲೆ, ಜಮಖಂಡಿಯಲ್ಲಿ ಭಾರತೀಯ ಜೈನ್ ಮಿಲನ್ ವಲಯ ಎಂಟರ ಜಿನ ಭಜನಾಕಾರ್ಯಕ್ರಮದ ಸೀಸನ್ –8 ರ ಜಮಖಂಡಿ ವಲಯ ಮಟ್ಟದ ಜನಭಜನೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಜನೆಯಿಂದ ಮಾನವ ನೆಮ್ಮದಿ ಅಹಿಂಸೆ, ಶಾಂತಿ, ಪಡೆಯಲು ಸಾಧ್ಯ ಇದು ಮಾನವನಿಗೆ ಸುಖ ನೀಡುತ್ತದೆ, ಜಿನ ಭಜನೆಗಳ ಸ್ಪರ್ಧೆಗಳು ಮಾನವನಿಗೆ ಕೇವಲ ಬಹುಮಾನ ಪಡೆಯಲು ಸೀಮಿತವಾಗಬಾರದು, ಸ್ಪರ್ಧಿಸುವುದು ಮುಖ್ಯ ಜಿನ ಭಜನೆ ಸಂಸ್ಕೃತಿ ಸಂಸ್ಕಾರದ ಪ್ರತೀಕವಾಗಿದೆ ಎಂದರು. ಸಾಹಿತಿ ಜೀವoದರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಸ್ಪರ್ಧೆಗಳು ಒಬ್ಬರಿಗೆ ಇದರಲ್ಲಿ ಯಾವುದೇ ಭೇದಭಾವವಿಲ್ಲ ಎಂದರು ಸೀಮಿತವಾಗಿಲ್ಲ. ಕಾರ್ಯಕ್ರಮದಲ್ಲಿ ಭಾರತಿ ಶಹಪುರ, ಸುಶೀಲ್ ಕುಮಾರ್ ಬೆಳಗಲಿ ,ಜನಭಜನೆಯ ಮುಖ್ಯ ಸಂಯೋಜಕ ಮಹಾವೀರ್ ಶಾಹಪುರ್, ದಯಾನಂದ ಶಿರಗಾರ, ನೇಮಿನಾಥ ನರಸಗೊಂಡ, ಪ್ರಶಾಂತ್…