Subscribe to Updates
Get the latest creative news from FooBar about art, design and business.
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
- ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
- ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
- ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
- ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
Author: admin
ತುಮಕೂರು: ಜಿಲ್ಲೆಯಲ್ಲಿ ಲಿಂಗಾನುಪಾತ ಸುಧಾರಣೆಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆಶಾ ಕಾರ್ಯಕರ್ತೆಯರು ಹಾಗೂ ವೈದ್ಯರಿಗೆ ನಿರಂತರವಾಗಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ.ಚಂದ್ರಶೇಖರ್ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪಿಸಿ & ಪಿಎನ್ ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಲಿಂಗಾನುಪಾತವನ್ನು ಸಮತೋಲನದಲ್ಲಿಡುವ ನಿಟ್ಟಿನಲ್ಲಿ ಭ್ರೂಣಲಿಂಗ ಪತ್ತೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಪಿಸಿ & ಪಿಎನ್ ಡಿಟಿ ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕಾಗಿ ಜಿಲ್ಲಾ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯಿಂದ ಪ್ರತಿ 3 ತಿಂಗಳಿಗೊಮ್ಮೆ ಜಿಲ್ಲೆಯ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಲಾಗುತ್ತಿದೆ. ಕಾಯ್ದೆಯನ್ನು ಉಲ್ಲಂಘನೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣವನ್ನು ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ…
ತುಮಕೂರು: ಭಾಷಾಂತರ, ರೂಪಾಂತರಗಳನ್ನು ಕಂಡಿರುವ ರಾಮಾಯಣದಲ್ಲಿ ಭಾವ ಸತ್ಯವೇ ಕಾವ್ಯ ರೂಪವಾಗಿ ವಾಲ್ಮೀಕಿಯ ಕಲ್ಪನೆಯಲ್ಲಿ ರಸವತ್ತಾಗಿ, ಕವಿಯ ಧ್ವನಿಯಾಗಿ ಮಹಾಕಾವ್ಯವಾಗಿ ಮೂಡಿಬಂದಿದೆ ಎಂದು ಶತಾವಧಾನಿ ಡಾ.ಆರ್.ಗಣೇಶ್ ತಿಳಿಸಿದರು. ತುಮಕೂರು ವಿವಿಯ ಇಂಗ್ಲಿಷ್ ಸಾಹಿತ್ಯ ಅಧ್ಯಯನ ವಿಭಾಗವು ಹಾಗೂ ಡಿವಿಜಿ ಕನ್ನಡ ಅಧ್ಯಯನ ಕೇಂದ್ರವು ಸೋಮವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ‘ವಾಲ್ಮೀಕಿರಾಮಾಯಣದ ಕಾವ್ಯ ಸೌಂದರ್ಯ’ ಕುರಿತು ಮಾತನಾಡಿದರು. ವಾಲ್ಮೀಕಿ ರಚಿಸಿದ ರಾಮಾಯಣದಲ್ಲಿಸಂತೋಷ, ಸತ್ರ್ಪೇರಣೆ, ರಸ, ಧ್ವನಿಯಔಚಿತ್ಯ, ಸಮಾಧಾನ, ಧೈರ್ಯ, ಸಂಕಟ, ಶೋಕ, ಕುಟುಂಬ ವಿಸ್ತರಣೆ, ಕಾರುಣ್ಯ, ಕೃಪೆ, ಪ್ರಕೃತಿಯ ಸೌಂದರ್ಯ, ಉತ್ಪ್ರೇಕ್ಷೆ, ಕಾಲಗಳ ವರ್ಣನೆ, ಜೀವನ ಮೌಲ್ಯ, ಕಲೆ, ಆನಂದವನ್ನುಕಾಣಬಹುದು ಎಂದು ಹೇಳಿದರು. ಹನುಮಂತ ಸೀತೆಗೆ ತುಂಬುವ ಧೈರ್ಯ ಬದುಕಿನದೃಷ್ಟಿಯನ್ನು ಸಕಾರಾತ್ಮವಾಗಿಕಾಣಲು ಸಹಕಾರಿಯಾಗುತ್ತದೆ. ರಾಮಾಯಣ ಕಾವ್ಯದ ದೃಷ್ಟಿಯಲ್ಲಿ ಸಮಾಜವನ್ನು ಬೆಸೆದು ಬಾಳುವ ರಾಮನ ಸರಳತೆಯನ್ನು ಕಾಣಬಹುದು. ನವ್ಯಕಾವ್ಯಗಳಲ್ಲಿ ಕಂಡುಬರುವ ನಿಗೂಢತೆ ರಾಮಾಯಣ ಕಾವ್ಯದಲ್ಲಿ ಇಲ್ಲದಿರುವುದರಿಂದ ಈ ಕಾವ್ಯವನ್ನು ಆಲಿಸಿದಾಗ ಧ್ವನಿಯಾಗುತ್ತದೆ, ಆಸ್ವಾದಿಸಿದಾಗ ರಸವಾಗುತ್ತದೆ ಎಂದರು. ಸೀತೆಯನ್ನು ಅಪಹರಿಸಿದ ರಾವಣನಿಗೆ ಆಕೆಯನ್ನು ಬಲತ್ಕಾರದಿಂದ ಒಲಿಸಿಕೊಂಡು…
ಬೆಳಗಾವಿ: ಕೋವಿಡ್–19 ಸಂದರ್ಭದಲ್ಲಿ ತಾಲ್ಲೂಕು ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ಗಳ ಅಳವಡಿಕೆಯಲ್ಲಿ ಉಂಟಾಗಿರುವ ಅಕ್ರಮದ ಕುರಿತು ನಿವೃತ್ತ ನ್ಯಾಯಮೂರ್ತಿ ಮೈಕಲ್ ಖುನ್ನಾ ಆಯೋಗದ ವರದಿಯ ಶಿಫಾರಸ್ಸಿನಂತೆ ರಾಜ್ಯ ಸರ್ಕಾರ ಕಾನೂನು ಕ್ರಮ ಜರುಗಿಸಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಪರಿಷತ್ನ ಪ್ರಶ್ನೋತ್ತರ ಅವಧಿಯಲ್ಲಿ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಅವರು, ಕೋವಿಡ್ ಸಂದರ್ಭದಲ್ಲಿ ಎಷ್ಟು ಆಕ್ಸಿಜನ್ ಪ್ಲಾಂಟ್ ಗಳನ್ನು ಅಳವಡಿಸಲಾಗಿದೆ. ಅದರ ಸಾಮರ್ಥ್ಯದ ಕುರಿತು ಪ್ರಶ್ನೆ ಮಾಡಿದ್ದರು. ತಾಲ್ಲೂಕು ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಇದುವರೆಗೂ 243 ಆಕ್ಸಿಜನ್ ಪ್ಲಾಂಟ್ಗಳನ್ನು ಅಳವಡಿಸಲಾಗಿದೆ. ಇದರಲ್ಲಿ ಪಿಎಂಕೇರ್ 50, ಎಂಒಪಿಎನ್ಜಿ 51, ರಾಜ್ಯ ನಿರ್ವಹಣೆ 40, ಪಿಎಸ್ ಆರ್ 110, ಜಿಲ್ಲಾ ನಿರ್ವಹಣೆ 1, ರೈಲ್ವೆ ಮಂಡಳಿ 3, ಕಲಿದ್ದಲ್ಲು ಇಲಾಖೆ 6, ವಿದೇಶಿ ನಿರ್ವಹಣೆ 2 ಸೇರಿದಂತೆ 243 ಆಕ್ಸಿಜನ್ ಟ್ಯಾಂಕ್ ಗಳ ಕಾರ್ಯ ನಿರ್ವಹಣೆ ಮಾಡುತ್ತಿವೆ. ಕೋವಿಡ್ ಮುಂಚೆ ರಾಜ್ಯದಲ್ಲಿ ಯಾವುದೇ ಸಿಎಫ್ ಎ ಆಕ್ಸಿಜನ್ ಪ್ಲಾಂಟ್ಗಳು…
ರಾಯಚೂರು: ವಿದ್ಯಾರ್ಥಿನಿಯರು, ಮಹಿಳೆಯರನ್ನು ಹಿಂಬಾಲಿಸಿ ಪ್ಯಾಂಟ್ ಜೀಪ್ ಬಿಚ್ಚಿ ವಿಕೃತವಾಗಿ ವರ್ತಿಸುತ್ತಿದ್ದ ಪುಂಡನಿಗೆ ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ಪಟ್ಟಣದ ಸಾಯಿಬಾಬಾ ದೇವಾಲಯದ ರಸ್ತೆಯಲ್ಲಿ ನಡೆದಿದೆ. ಕಾಲೇಜಿಗೆ ಹೋಗಿ ಬರುವ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರನ್ನ ಹಿಂಬಾಲಿಸುತ್ತಿದ್ದ ಕಾಮುಕ, ಅವರ ಗಮನ ಸೆಳೆದು ಪ್ಯಾಂಟ್ ಜಿಪ್ ತೆಗೆದು ವಿಕೃತವಾಗಿ ವರ್ತಿಸುತ್ತಿದ್ದ, ಈ ದೃಶ್ಯವನ್ನು ಸೆರೆ ಹಿಡಿದ ಸ್ಥಳೀಯರು ಹಿಗ್ಗಾ ಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ರಾಯಚೂರು ಪಶ್ಚಿಮ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಳಗಾವಿ: ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ “ಕಾಂಗ್ರೆಸ್ ಅಧಿವೇಶನ” ದ ಶತಮಾನೋತ್ಸವ ಆಚರಣೆಯ ಪೂರ್ವಸಿದ್ಧತೆಗಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ(ಡಿ.9) ಬೆಳಗಾವಿಯ ಪೀರನವಾಡಿಯಲ್ಲಿರುವ ಗಾಂಧಿ ಭವನವಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಆಸಿಫ್(ರಾಜು) ಸೇಠ್, ಮಾಜಿ ಶಾಸಕರಾದ ಅಂಜಲಿ ನಿಂಬಳ್ಕರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೆಚ್ಚಳ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ.ಧನಂಜಯ ಸರ್ಜಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ನೇಮಕ ಮಾಡುವ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆಯನ್ನು ಅನುಕ್ರಮವಾಗಿ 15000/- ಹಾಗೂ ರೂ.16000/- ಪರಿಷ್ಕರಿಸಲು ಆರ್ಥಿಕ ಇಲಾಖೆಗೆ ಪುಸ್ತಾವನೆ ಸಲ್ಲಿಸಲಾಗಿತ್ತು. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ಮೊತ್ತವನ್ನು ಆರ್ಥಿಕ ಇಲಾಖೆಯು ದಿನಾಂಕ.13.6.2022 ರಲ್ಲಿ ಪರಿಷ್ಕರಿಸಲು ಸಹಮತಿ ನೀಡಿರುವುದರಿಂದ ಗೌರವ ಸಂಭಾವನೆ ಯನ್ನು ಪರಿಷ್ಕರಿಸಲು ಸಾಧ್ಯವಿಲ್ಲವೆಂದು ದಿನಾಂಕ.25.3.2024 ರಂದು…
ತುಮಕೂರು: ಬೆಸ್ಕಾಂ ಕಂಪನಿಯು ಜಂಪ್ ಬದಲಿಸುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಟಿ.ಎಂ.ಟಿ.ಪಿ., ಕೋರಾ, ಅಂಕಸಂದ್ರ, ಹೊಸಕೆರೆ, ಹಾಗಲವಾಡಿ, ನಂದಿಹಳ್ಳಿ ಕ್ರಾಸ್, ಚೇಳೂರು ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ಡಿಸೆಂಬರ್ 11ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಕಡಿತ ಉಂಟಾಗಲಿದೆ. ಅದೇ ರೀತಿ ಡಿಸೆಂಬರ್ 13, 17, 19ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಟಿ.ಎಂ.ಟಿ.ಪಿ., ಕೋರಾ, ಅಂಕಸಂದ್ರ ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಗುಬ್ಬಿ : 6 ದಿನಗಳ ಕಾಲ ವಿದ್ಯುತ್ ಕಡಿತ ತುಮಕೂರು: ಬೆಸ್ಕಾಂ ಗುಬ್ಬಿ ಉಪವಿಭಾಗ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಕಲ್ಲೂರು, ಬಂಡಿಹಳ್ಳಿ, ಬೆನಕನಗೊಂದಿ, ಕೆ.ಕಲ್ಲಹಳ್ಳಿ, ಪೆದ್ದನಹಳ್ಳಿ, ಮಾದಪಟ್ಟಣ, ಪಡುಗುಡಿ, ಹಿಂಡಿಸಿಗೆರೆ, ಹುಲ್ಲೇಕೆರೆ, ಬಿಟ್ಟಗೊಂಡನಹಳ್ಳಿ, ಶನಿವಾರನಪಾಳ್ಯ, ವರಹಸಂದ್ರ, ಬೋಚಿಹಳ್ಳಿ ಪ್ರದೇಶಗಳಲ್ಲಿ ಡಿಸೆಂಬರ್ 9, 11, 13,…
ತುಮಕೂರು: ಪಿಡಿಓ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಸಿನಿಮಾ ರೀತಿಯಲ್ಲಿ ಕಾಪಿ ಹೊಡೆಯಲು ಹೋಗಿ ಸಿಕ್ಕಿಬಿದ್ದ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಬೆಂಗಳೂರಿನ ರಾಮಮೂರ್ತಿ ನಗರ ಮೂಲದ ಧರ್ಮೆಂದ್ರ (33) ಎಂಬ ಯುವಕ ಪಿಡಿಓ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಪರೀಕ್ಷಾರ್ಥಿಯಾಗಿದ್ದು, ಪರೀಕ್ಷಾ ಮೇಲ್ವಿಚಾರಕರ ಕಣ್ತಪ್ಪಿಸಿ ಬಟನ್ ಕ್ಯಾಮರಾ, ಡಿವೈಸ್ ಡಾಂಗಲ್, ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಪರೀಕ್ಷಾ ಮೇಲ್ವಿಚಾರಕರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ತುಮಕೂರು ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಘಟನೆ ನಡೆದಿದ್ದು, ಪರೀಕ್ಷಾ ಮೇಲ್ವಿಚಾರಕಿಯಾಗಿದ್ದ ಶ್ಯಾಮಾ ಸೈಯದಿ ಅವರಿಂದ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಧರ್ಮೆಂದ್ರನನ್ನ ವಶಕ್ಕೆ ಪಡೆದ ತಿಲಕ್ ಪಾರ್ಕ್ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಅಂದಹಾಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿಯಿದ್ದ 150 ಪಿಡಿಓ ಗಳಿಗೆ ನೇಮಕಾತಿ ಪರೀಕ್ಷೆ ನಡೆಸಲಾಗಿದ್ದು, ಇಂದು ತುಮಕೂರು…
ತುಮಕೂರು: ಸಿದ್ದಗಂಗಾ ಮಠದ ಆವರಣದಲ್ಲಿ ಚಿರತೆಯೊಂದು ರಾತ್ರಿ ಪ್ರತ್ಯಕ್ಷವಾಗಿರುವ ದೃಶ್ಯ ಆತಂಕ ಮೂಡಿಸಿದೆ. ತುಮಕೂರಿನ ಕ್ಯಾತಸಂದ್ರದಲ್ಲಿ ಇರುವ ಸಿದ್ದಗಂಗ ಮಠದ ಹಳೆಮಠದ ಆವರಣದಲ್ಲಿ ಕಾಣಿಸಿಕೊಂಡ ಚಿರತೆ ಅಲ್ಲಿದ್ದ ನಾಯಿಗಳನ್ನು ಅಟ್ಟಾಡಿಸಿದೆ. ಚಿರತೆ ಮಠದ ಆವರಣದಲ್ಲಿ ಓಡಾಡುತ್ತಿರುವಂತಹ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಶನಿವಾರ ರಾತ್ರಿ 11:30 ಸಂದರ್ಭದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ನಾಯಿಗಳನ್ನ ಬೇಟೆಯಾಡಲು ಯತ್ನಿಸುತ್ತಿರುವ ದೃಶ್ಯ ಕಂಡು ಬಂತು. ಮಠದ ಮಕ್ಕಳಲ್ಲಿ ಚಿರತೆ ಓಡಾಟ ಆತಂಕ ಮೂಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಪ್ರತಿ ವರ್ಷ ಡಿಸೆಂಬರ್ 9 ರಂದು ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಮುಖ್ಯ ಉದ್ದೇಶವೇ ಭ್ರಷ್ಟಾಚಾರದ ವಿರುದ್ಧವಾಗಿ ಜಾಗೃತಿ ಮೂಡಿಸುವುದು ಮತ್ತು ಸಮರ್ಥ, ಪಾರದರ್ಶಕ ಆಡಳಿತವನ್ನು ಉತ್ತೇಜಿಸುವುದು. ಭ್ರಷ್ಟಾಚಾರವು ಯಾವುದೇ ದೇಶದ ಅಭಿವೃದ್ಧಿಗೆ ದೊಡ್ಡ ಅಡಚಣೆ. ಇದು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರಗತಿಯನ್ನು ಹಿಮ್ಮುಖಗೊಳಿಸುವ ಕ್ರಿಯೆಯಾಗಿದ್ದು, ಅಸಮಾನತೆ, ದಾರಿದ್ರ್ಯ, ಮತ್ತು ನ್ಯಾಯದ ಕೊರತೆಯನ್ನು ಹೆಚ್ಚಿಸುತ್ತದೆ. ಭಾರತದಂಥ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಭ್ರಷ್ಟಾಚಾರದ ಪ್ರಭಾವವನ್ನು ಕಡಿಮೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಹೊಣೆಗಾರಿಕೆಯಾಗುತ್ತದೆ. ತುಮಕೂರಿನಂತಹ ಪ್ರಗತಿಶೀಲ ಜಿಲ್ಲೆಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸುವಲ್ಲಿ ನಮ್ಮತುಮಕೂರು ಮಾಧ್ಯಮ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದು, ನಾಗರಿಕರಲ್ಲಿ ಜಾಗೃತಿ ಮೂಡಿಸುತ್ತಿದೆ. ಭ್ರಷ್ಟಾಚಾರ ನಿರ್ಮೂಲನೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾದಾಗ, ಅದರ ನಿರ್ಮೂಲನೆ ಸಾಧ್ಯವಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಲಂಚಕೊಡುವುದಿಲ್ಲ ಎನ್ನುವ ಪ್ರತಿಜ್ಞೆಯನ್ನ ನಾಗರಿಕರು ಮಾಡಬೇಕಿದೆ. ಜೊತೆಗೆ ಅಧಿಕಾರಿಗಳು ಕೂಡ ಲಂಚ ಸ್ವೀಕರಿಸದೇ ನಾಗರಿಕರ ಕೆಲಸಗಳನ್ನ ಮಾಡಿಕೊಡುತ್ತೇವೆ ಎನ್ನುವ ಪ್ರತಿಜ್ಞೆ ಮಾಡಬೇಕಿದೆ. ಶಾಲಾ ಕಾಲೇಜು ಮಟ್ಟದಲ್ಲಿ ಭ್ರಷ್ಟಾಚಾರದ ಬಗ್ಗೆ ವಿದ್ಯಾರ್ಥಿಗಳಲ್ಲಿ…