Subscribe to Updates
Get the latest creative news from FooBar about art, design and business.
- ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
- 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
- ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
- ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
- ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
- ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
- ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
- ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
Author: admin
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೆಮ್ಮೆಯ ಕನ್ನಡ ಸಂಘ ರಾಷ್ಟ್ರಕೂಟ ಗೆಳೆಯರ ಬಳಗ( ನೊಂ)ವಿಜಯನಗರ ಇವರು ಹುಡುಗಿ ಹುಡುಗಿ ಕೊಡ ಮಾಡುವ ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ರಾಜಧಾನಿಯ ಕನ್ನಡ ಪರ ಹಾಗೂ ಸಾಮಾಜಿಕ ಹೋರಾಟಗಾರ, ಮಹಾರಕ್ತದಾನಿ, ಸಾಮಾಜಿಕ ಚಿಂತಕ, ಧರ್ಮ ರಕ್ಷಕ ಪರೋಪಕಾರಿ ಮಾಳ ಹರ್ಷೇಂದ್ರಜೈನ ರವರಿಗೆ ಲಭಿಸಿದೆ. 75 ಬಾರಿ ರಕ್ತದಾನ ಮಾಡಿದ ಉತ್ಸಾಹದ ಚಿಲುಮೆಯಾಗಿರುವ ಇವರಿಗೆ ರಾಷ್ಟ್ರಕೂಟ ಕನ್ನಡ ಬಳಗದಿಂದ ಈ ಪ್ರಶಸ್ತಿ ನೀಡಲಾಗಿದೆ. ಬಿ.ಎಸ್. ಎಂ ಜೈನ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿಯಾಗಿರುವ ಇವರು ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ ಮಾಳ ಗ್ರಾಮದ ಹೆಗ್ಗಡತಿ ಕುಟುಂಬದಲ್ಲಿ ಜನಿಸಿದ ಇವರು, ಬಾಲ್ಯದಿಂದಲೂ ಸಂಘಟನೆ, ಪರೋಪಕಾರ ಹಾಗೂ ಸಮಾಜ ಮುಖಿ ಚಿಂತನೆಗಳಲ್ಲಿ, ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು,ಕಳೆದ ನಾಲ್ಕು ದಶಕಗಳಿಂದ ಬೆಂಗಳೂರಿನಲ್ಲಿ ನೆಲೆಸಿ ಧರ್ಮದ ರಕ್ಷಣೆ ಸಹಕಾರ ಪ್ರವೃತ್ತಿ, ಮುನಿಗಳು ಸೇವೆ ,ಅಹಿತಕರ ಘಟನೆ ನಡೆದಾಗ ಹೋರಾಟ, ಧರ್ಮದ ರಕ್ಷಣೆಯಲ್ಲಿ ಮುಂಚೂಣಿಯಲ್ಲಿದ್ದಾರೆ ,ಕರೋನ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರ ಕರ್ತವ್ಯ ಮೆಚ್ಚಿ ವಿವಿಧ…
ತುಮಕೂರು: ಹೆಚ್ ಐವಿ ಸೋಂಕಿನ ಬಗ್ಗೆ ಯುವ ಜನರಲ್ಲಿ ಜಾಗೃತಿ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ತಿಳಿಸಿದರು. ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 8,197 ಹೆಚ್.ಐ.ವಿ. ಸೋಂಕಿತರಿದ್ದು, ನಿಮ್ಮೊಂದಿಗೆ ಸದಾ ನಾವಿದ್ದೇವೆ ಎಂದು ಸೋಂಕಿತರಿಗೆ ಧೈರ್ಯ ತುಂಬಬೇಕು. ಹೆಚ್ ಐವಿ ಸೋಂಕಿತ ವ್ಯಕ್ತಿಗಳೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಸೋಂಕಿತರನ್ನು ಅಸ್ಪೃಶ್ಯರಂತೆ ಕಾಣಬಾರದು ಎಂದು ತಿಳಿಸಿದರು. ಸೋಂಕಿತ ವ್ಯಕ್ತಿಯನ್ನು ಮುಟ್ಟುವುದರಿಂದಾಗಲಿ/ಮಾತನಾಡಿಸುವುದರಿಂದಾಗಲಿ ಹೆಚ್ ಐವಿ ಸೋಂಕು ಹರಡುವುದಿಲ್ಲ. ದೈಹಿಕ ಸಂಪರ್ಕ ಹೊಂದುವುದರಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ ಎಂದು ತಿಳಿಸಿದರಲ್ಲದೆ, ಹೆಎಚ್ ಐವಿ ಪಾಸಿಟಿವ್ ಇರುವ ರೋಗಿಗಳನ್ನು ಪ್ರೀತಿಯಿಂದ ಮಾತನಾಡಿಸಿ ಅವರ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳುವಂತೆ ನಾವೆಲ್ಲರೂ ಪಣತೊಡಬೇಕು. ಈ ಬಗ್ಗೆ ಜನರಲ್ಲಿ ಹೆಚ್ಚೆಚ್ಚು…
ತುಮಕೂರು: ವಿಶ್ವಕ್ಕೆ ಮಾನವೀಯತೆ ಮತ್ತು ಸಮಾನತೆಯ ಸಂದೇಶ ಸಾರಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಗುಣಗಳುಳ್ಳ ವ್ಯಕ್ತಿಗಳು ಪ್ರತಿ ಮನೆಯಲ್ಲೂ ಜನಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ಜರುಗಿದ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ಯಂತ ಕಡು ಬಡತನದಲ್ಲಿ ಹುಟ್ಟಿ ಅಸ್ಪೃಶ್ಯತೆ, ಅಸಮಾನತೆ, ಮಹಿಳಾ ಅಸಮಾನತೆ ವಿರುದ್ಧ ಹೋರಾಡಿ ಸಮಸಮಾಜ ನಿರ್ಮಾಣ ಮಾಡಲು ತಮ್ಮ ಜೀವನವನ್ನೇ ಸವೆಸಿ ದನಿ ಇಲ್ಲದವರಿಗೆ ದನಿಯಾಗಿದ್ದ ಅಂಬೇಡ್ಕರ್ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ದಿನ-ದಲಿತರಿಗೆ, ನೊಂದವರಿಗೆ ಪ್ರತ್ಯಕ್ಷ ದೇವರಾಗಿ ಕಾಣುವ ಮೂಲಕ ಅವರ ಪುಣ್ಯ ಸ್ಮರಣೆಯನ್ನು ಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತದೆ. ಏಷ್ಯದ ಉಪ ಖಂಡದಂತಿರುವ ನಮ್ಮ ದೇಶದಲ್ಲಿ ಹಲವು ವೈವಿಧ್ಯತೆಗಳನ್ನು ಏಕೀಕರಣಗೊಳಿಸಿ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದ್ದಾರೆ. ತಮ್ಮ ಅನುಭವದ…
ತುಮಕೂರು: ಬೆಸ್ಕಾಂ ಕಂಪನಿಯು ತ್ರೈಮಾಸಿಕ ನಿರ್ವಹಣಾ ಕಾರ್ಯ ನಿರ್ವಹಣೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಉಂಗ್ರ, ಸೋಮಲಾಪುರ, ಕಲ್ಲೂರು ಉಪಸ್ಥಾವರದಿಂದ ಹೊರಹೊಮ್ಮುವ ಎಲ್ಲಾ 11ಕೆವಿ ಪೂರಕಗಳಿಗೆ ಒಳಪಡುವ ಗ್ರಾಮಗಳಲ್ಲಿ ಡಿಸೆಂಬರ್ 7ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಶ್ರವಣಬೆಳಗೊಳ: ಭಾರತೀಯ ಸಾಂಸ್ಕೃತಿಕ– ಸಂಸ್ಕಾರದ ಪರಂಪರೆಯಲ್ಲಿ ಕರ್ಮ ಯೋಗಿ ಶ್ರೀ ಚಾರು ಕೀರ್ತಿ ಭಟ್ಟಾರಕ ಮಹಾಸ್ವಾಮಿಗಳ ದೂರದರ್ಷಿತ್ವಹಾಗೂ ದೂರ ದೃಷ್ಟಿ ಇತಿಹಾಸ ಪರಂಪರೆಯಲ್ಲಿ ಮಹತ್ವದ ಮೈಲುಗಲುಗಳಾಗಿವೆ ಎಂದು ಪದ್ಮಭೂಷಣ ರಾಜ್ಯಸಭಾ ಸದಸ್ಯ ರಾಜರ್ಷಿ, ಶ್ರೀ ಡಾ.ಡಿ ವೀರೇಂದ್ರ ಹೆಗ್ಡೆ ತಿಳಿಸಿದರು. ಅವರಿಂದು ಸ್ವಸ್ತಿ ಶ್ರೀ ಚಾರು ಕೀರ್ತಿ ಭಟ್ಟಾರಕ ಮಹಾಸ್ವಾಮಿಗಳ ಮಂಟಪ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೋಮಟೇಶ್ವರರು ವಿಶ್ವಕ್ಕೆ ಶಾಂತಿ ಬಯಸಿ, ತ್ಯಾಗ ಮೂರ್ತಿಗಳಾಗಿದ್ದರು. ಇದರ ಪ್ರತಿರೂಪವಾಗಿ ಶ್ರೀ ಚಾರು ಕೀರ್ತಿ ಭಟ್ಟಾರಕ ಶ್ರೀಗಳು ತ್ಯಾಗ ಮೂರ್ತಿಗಳಾಗಿದ್ದರು, ಉತ್ತರದಲ್ಲಿ ಎಷ್ಟೇ ವಿಗ್ರಹಗಳು ಸ್ಥಾಪನೆಯಾದರು ಶ್ರೀ ಕ್ಷೇತ್ರದ ಬಾಹುಬಲಿಯ ಎತ್ತರ, ಇತಿಹಾಸ ಮುರಿಯಲು ಸಾಧ್ಯವಿಲ್ಲ, ಜನರ ವಿಶ್ವಾಸ ದೊಡ್ಡದಿದ್ದು, ನಿಷಿದಿಗೆ ಇತಿಹಾಸವಿದೆ ಎಂದರು. ಪೂಜ್ಯರ ಮಾರ್ಗದರ್ಶನದಿಂದ ನಾಲ್ಕು ಮಹಾಮಸ್ತಕ ಅಭಿಷೇಕಗಳನ್ನು ಕಂಡಿದ್ದು, ಹಲವಾರು ಭಟ್ಟಾರಕ ಶ್ರೀಗಳನ್ನು ನಾಡಿಗೆ ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದರು. ಅವರ ತ್ಯಾಗ ಜೀವನದಿಂದ ಸನ್ಯಾಸತ್ವ ಶಿಕ್ಷಣ ನೀಡಿ, ಪಟ್ಟಾಭಿಷೇಕ ಮಾಡಿ ಹಲವಾರು ಭಟ್ಟರಕರು ಗಳನ್ನ ನಾಡಿಗೆ…
ಶಿರಾ: ತಾಲೂಕಿನಲ್ಲಿ ಫ್ಲೋರೈಡ್ ಯುಕ್ತ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರವಾಗಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶುದ್ಧಗಂಗಾ ನೀರಿನ ಘಟಕಗಳನ್ನು ಸ್ಥಾಪಿಸಿ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಆನಂದ್ ಸುವರ್ಣ ತಿಳಿಸಿದರು. ಪ್ರಕೃತಿ ವೈಪರೀತ್ಯದ ಪರಿಣಾಮ ಕಾಲ ಕಾಲಕ್ಕೆ ಉತ್ತಮ ಮಳೆಯಾಗದೇ ಅಂತರ್ಜಲ ಬತ್ತಿರುವ ಕಾರಣ ರಾಜ್ಯದ ಅನೇಕ ಭಾಗಗಳ ಕೊಳವೆ ಬಾವಿಗಳಲ್ಲಿ ಜನ, ಜಾನುವಾರುಗಳು ಕುಡಿಯಲು ಯೋಗ್ಯವಲ್ಲದ ಫ್ಲೋರೈಡ್ ಯುಕ್ತ ನೀರು ಬರುತ್ತಿದೆ ಎಂದು ಅವರು ಹೇಳಿದರು. ಫ್ಲೋರೈಡ್ ಯುಕ್ತ ನೀರನ್ನು ಕುಡಿದ ಅನೇಕ ಜನರು ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಿರುವ ಕಾರಣ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆ ಸಂಸ್ಥೆಯ ಶುದ್ಧಗಂಗಾ ಘಟಕಗಳನ್ನು ನಗರ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಸ್ಥಾಪನೆ ಮಾಡುವ ಮೂಲಕ ಅತ್ಯಂತ ಕಡಿಮೆ ದರದಲ್ಲಿ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಇಂತಹ ಶುದ್ಧಗಂಗಾ…
ಡಾ.ಬಾಬಾಸಾಹೇಬ ಅಂಬೇಡ್ಕರ್ ಎಂಬ ಹೆಸರು ಕೇವಲ ಒಂದು ವ್ಯಕ್ತಿಯ ಹೆಸರು ಮಾತ್ರವಲ್ಲ; ಅದು ಕ್ರಾಂತಿಕಾರಿಯಾದ ಚಿಂತನೆಯ ಸಂಕೇತ. ಅವರು ತಮ್ಮ ಚಿಂತನೆಗಳ ಮೂಲಕ ಭಾರತದ ಸಾಮಾಜಿಕ ಚರಿತ್ರೆಯನ್ನು ಮಾತ್ರವಲ್ಲ, ನಮ್ಮ ದೇಶದ ನಿಟ್ಟುನಿರೀಕ್ಷೆಯನ್ನೂ ಬದಲಾಯಿಸಿದರು. ಬಾಬಾಸಾಹೇಬರ 68ನೇ ಪುಣ್ಯಸ್ಮರಣೆಯಂದು, ಅವರು ತೋರಿಸಿದ ಹಾದಿಯಲ್ಲಿ ಮುನ್ನಡೆಯುವ ಪ್ರತಿಜ್ಞೆ ಮಾಡಬೇಕಿದೆ. ಅಂಬೇಡ್ಕರ್ ಮತ್ತು ಸಂವಿಧಾನದ ಶಕ್ತಿ: ಅಂಬೇಡ್ಕರ್ ಅವರ ಆದರ್ಶಗಳು ಕೇವಲ ಪುಸ್ತಕಗಳಲ್ಲಿ ಸೀಮಿತವಾಗಿರದೆ, ಪ್ರತಿದಿನದ ಜೀವನದ ಒಂದು ಭಾಗವಾಗಬೇಕು. ಬಾಬಾಸಾಹೇಬರ ಸಮಾನತೆಯ ಧರ್ಮವು ಭಾರತೀಯ ಸಂವಿಧಾನದ ರೂಪದಲ್ಲಿದೆ. ಸಂವಿಧಾನವನ್ನು ಇಂದು ತೆಗೆದು ಹಾಕುವ ಮಾತುಗಳು ಕೆಲವರಿಂದ ಕೇಳಿ ಬರುತ್ತಿದೆ. ಹಾಗಾಗಿ ಸಂವಿಧಾನದ ಬಗ್ಗೆ ಹೆಚ್ಚಿನ ಜಾಗೃತಿಯನ್ನ ಸಮಾಜದಲ್ಲಿ ಮೂಡಿಸುವ ಅಗತ್ಯವಿದೆ. ಮಹಿಳಾ ಸಬಲಿಕರಣ, ದಲಿತ ಹಕ್ಕುಗಳು, ಶೋಷಿತ ವರ್ಗಗಳ ಶಕ್ತೀಕರಣ ಎಲ್ಲವೂ ಅಂಬೇಡ್ಕರ್ ಕನಸಿನ ಅಂಶಗಳಾಗಿವೆ. ಇವುಗಳನ್ನು ಸಾಧಿಸಲು ದೇಶವನ್ನು ಆಳುವ ಪಕ್ಷಗಳು ಇಚ್ಛಾಶಕ್ತಿಯನ್ನು ತೋರಬೇಕಿದೆ. ಸರ್ಕಾರಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಬೇಕಿದೆ. ಪ್ರತಿಯೊಬ್ಬನ ಹೊಣೆಗಾರಿಕೆ: ಈ ದೇಶದಲ್ಲಿ ಅಂಬೇಡ್ಕರ್ ತತ್ವಗಳನ್ನು ಜೀವಂತವಾಗಿಡಲು…
ಸರಗೂರು: ನಮ್ಮ ಯೋಜನೆವತಿಯಿಂದ ಮನೆ ನಿರ್ಮಾಣ ಮಾಡಿ, ಅವರ ಕನಸಿನ ಸೂರು ಕಟ್ಟಿಕೊಡುವ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದೇವೆ. ಬಡವರ ಪರವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದಾ ಕಾಲ ಇದೆ. ಈ ನಿಟ್ಟಿನಲ್ಲಿ ಬಡವರ ನೊಂದವರ ಪರವಾಗಿ ನಿಸ್ವಾರ್ಥ ಸೇವೆಯನ್ನು ಈ ಯೋಜನೆಯಿಂದ ನಿರಂತರವಾಗಿ ಮಾಡುತ್ತೇವೆ ಎಂದು ಹುಲ್ಲಹಳ್ಳಿ ಯೋಜನಾಧಿಕಾರಿ ಗಣೇಶ ನಾಯಕ ತಿಳಿಸಿದರು. ತಾಲೂಕಿನ ಕೋತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋತ್ತೇಗಾಲ ಗ್ರಾಮದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಯಿಂದ ಶುಕ್ರವಾರದಂದು ಪುಟ್ಟ ಲಕ್ಷ್ಮಮ್ಮ ರವರಿಗೆ ಕನಸಿನ ವಾತ್ಸಲ್ಯ ಮನೆಯ ಟೆಪ್ ಕತ್ತರಿಸುವ ಮೂಲಕ ಮನೆಯ ಗೃಹಪ್ರವೇಶ ಮಾಡಿ ಮಾತನಾಡಿದರು. ಬಡವರಾದ ಸದಸ್ಯರಿಗೆ ಯೋಜನೆಯಡಿಯ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ರವರ ಹಾಗೂ ಅವರ ಧರ್ಮಪತ್ನಿ ಹೇಮಾವತಿರವರ ಕನಸಿನ ಕೂಸು ಮನೆ ನಿರ್ಮಾಣ ಹಾಗೂ ಕೆರೆ ಅಭಿವೃದ್ಧಿ ಸಾಮಾಜದ ಭವನಗಳು ಅಭಿವೃದ್ಧಿ ಪಡಿಸಲು ಮುಂದಾಗಿ. ಅದರಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳಲ್ಲಿ ಇರುವ ಸದಸ್ಯರಿಗೆ ಕಡುಬಡವರಿಗೆ ಮನೆ ಮತ್ತು ಸಾಲದ ರೂಪದಲ್ಲಿ ನೀಡಲಾಗುತ್ತದೆ. ಬೇರೆ ಸಂಘಗಳು…
ಸರಗೂರು: ಭಾರತ ದೇಶಕ್ಕೆ ಬಹುದೊಡ್ಡ ಸಂವಿಧಾನದ ಕೊಡುಗೆ ನೀಡಿದ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಪುಣ್ಯತಿಥಿ ದಿನ. ಅಂಬೇಡ್ಕರ್ ರವರನ್ನು ಕೇವಲ ಅವರ ಜನ್ಮ ದಿನದಂದು ಮಾತ್ರ ನೆನೆಯದೇ ಅವರ ಪುಣ್ಯ ತಿಥಿ ದಿನವು ಸಹ ನೆನೆದು, ಅವರನ್ನು ಸ್ಮರಿಸಲಾಗುತ್ತದೆ ಎಂದು ತಹಶೀಲ್ದಾರ್ ಮೋಹನಕುಮಾರಿ ತಿಳಿಸಿದರು. ತಾಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರದಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ವರ್ಷದ ಮಹಾ ಪರಿನಿರ್ವಾಣ ದಿನದಂದು ಅಂಬೇಡ್ಕರ್ ಪೋಟೋ ಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು. ಭಾರತದ ಕಾನೂನು ಸುವ್ಯವಸ್ಥೆ, ಅಸ್ಪೃಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ, ಇತರೆ ಹಲವು ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆಗಳು ಎಂದು ಸಹ ಮಾಸುವುದಿಲ್ಲ ಎಂದರು. ಬಿ.ಆರ್.ಅಂಬೇಡ್ಕರ್ ರವರು ಮಧ್ಯಪ್ರದೇಶದ ಮೋವ್ ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದ ಅವರು, ದೇಶಕ್ಕೆ ಹಲವು ಮಹತ್ತರ ಕೊಡುಗೆಗಳನ್ನು ನೀಡಿ, ದೆಹಲಿಯ ತಮ್ಮ ಮನೆಯಲ್ಲಿ ಡಿಸೆಂಬರ್ 6, 1956…
ಸರಗೂರು: ಡಾ.ಬಿ.ಆರ್ ಅಂಬೇಡ್ಕರ್ ಅವರ ಚಿಂತನೆಗಳಿಂದ ನಮಗೆಲ್ಲರಿಗೂ ಕೂಡ ಸ್ಫೂರ್ತಿಯ ಸೆಲೆ, ಆದರ್ಶ ವ್ಯಕ್ತಿ. ಅಸಮಾನತೆ ವಿರುದ್ಧ ಗಟ್ಟಿ ಧ್ವನಿಯೆತ್ತಿದ ಮಾನವತಾವಾದಿ. ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ ಈ ಸಮಾಜಕ್ಕೆ ನೀಡಿದ ಕೊಡುಗಗಳು ಅಗಾಧವಾದದ್ದು ಎಂದು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎಸ್.ಎನ್. ನಾಗರಾಜು ತಿಳಿಸಿದರು. ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಅದಿಕರ್ನಾಟಕ ಮಹಾಸಭಾ ಹಾಗೂ ತಾಲೂಕು ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಶುಕ್ರವಾರದಂದು ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಡಿಸೆಂಬರ್ 6 ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ಪುಣ್ಯ ತಿಥಿ ದಿನವನ್ನು ‘ಮಹಾಪರಿನಿರ್ವಾಣ ದಿನ’ವನ್ನಾಗಿ ಆಚರಿಸಲಾಗುತ್ತಿದ್ದು, ಭಾರತ ಕಂಡ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್. ಯುವ ಸಮುದಾಯಕ್ಕೆ ತನ್ನ ಚಿಂತನೆಗಳಿಂದಲೇ ಸ್ಫೂರ್ತಿ ಹಾಗೂ ಆದರ್ಶ ವ್ಯಕ್ತಿಯೆನಿಸಿಕೊಂಡಿದ್ದಾರೆ. ಸಮಾಜ ಸುಧಾರಕರಾಗಿದ್ದು, ದಲಿತ ಬೌದ್ಧ ಚಳುವಳಿಯನ್ನು ಮುನ್ನಡೆಸುವ ಮೂಲಕ ಪ್ರೇರಣೆಯಾದ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದರು. ಅದಲ್ಲದೇ, ಭೀಮರಾವ್ ರಾಮ್…