Author: admin

ವೈ.ಎನ್.ಹೊಸಕೋಟೆ : ಕನ್ನಡದ ಉಳಿವಿಗೆ ಕನ್ನಡವೇ ಪ್ರತಿಯೊಬ್ಬರ ಮನೋಧರ್ಮವಾಗಬೇಕು ಎಂದು ಗಡಿನಾಡು ಚಿಂತಕ ಡಾ.ಹೆಚ್.ಕೆ.ನರಸಿಂಹಮೂರ್ತಿ ತಿಳಿಸಿದರು. ಕನ್ನಡ ಕಲಾ ಮತ್ತು ಸಾಂಸ್ಕöÈತಿಕ ಮಂಡಲಿಯು ೬೯ನೇ ಕನ್ನಡ ರಾಜ್ಯೋತ್ಸವ ಮತ್ತು ಮಂಡಲಿಯ ೩೮ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ನಮ್ಮೂರ ಕನ್ನಡಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶಾಲವಾಗಿ ಹಬ್ಬಿ ಹರಡಿ ಸಮೃದ್ಧವಾಗಿರುವ ಕನ್ನಡ ಸಂಸ್ಕೃತಿಯು ಮತ್ತಷ್ಟು ಪ್ರಬಲವಾಗಲು, ಕನ್ನಡದ ಹೆಮ್ಮೆಯ ಕುವರರು ಹೇಳುವಂತೆ ಕನ್ನಡಿಗರು ವಿಶ್ವಮಾನವರಾಗಬೇಕು. ಜಾತಿ, ಪಕ್ಷ, ಪಂಥ, ಮತಗಳನ್ನು ಮೀರಿ ಕನ್ನಡವೇ ಮನೋಧರ್ಮವಾಗಬೇಕು. ವಿಶೇಷವಾಗಿ ಗಡಿನಾಡಿನಲ್ಲಿ ಭಾಷಾ ಅಸ್ಮಿತೆಯನ್ನು ಉಳಿಸಿಕೊಂಡು ಉಲುಸಾಗಿ ಬೆಳೆಯಲು ಕನ್ನಡ ಕಲಿಯುವುದು ಜೊತೆಗೆ ಕನ್ನಡ ಉಲಿಯುವುದು ಪ್ರತಿಯೊಬ್ಬರ ಅಂತರಾಳದಲ್ಲಿ ಬೇರೂರಬೇಕು ಎಂದು ತಿಳಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಎನ್.ಆರ್.ಅಶ್ವಥ್ ಕುಮಾರ್ ಮಾತನಾಡಿ, ತೆಲುಗುಮಯವಾಗಿದ್ದ ಈ ಗಡಿಭಾಗದಲ್ಲಿ ಕನ್ನಡ ಕಂಪನ್ನು ಹರಡಿಸಲು ನಿರಂತರ ಕನ್ನಡ ಕಾರ್ಯಕ್ರಮಗಳು ನಡೆಯಬೇಕು. ಸರ್ಕಾರಗಳು ಗಡಿಭಾಗಗಳಿಗೆ ಹೆಚ್ಚು ಒತ್ತು ನೀಡಬೇಕು. ಇಂತಹ ಕಾರ್ಯವನ್ನು ಸ್ಥಳೀಯ ಸಂಘಟನೆ ನಿರಂತರವಾಗಿ ಮಾಡುತ್ತಾ ಬರುತ್ತಿರುವುದು ಹೆಮ್ಮೆಯ ಸಂಗತಿ. ಅದರ…

Read More

ಕಾರವಾರ: ಕರ್ನಾಟಕ ಭೂಕಂದಾಯ ಅಧಿನಿಯಮ 1964ರ ಕಲಂ 94–ಎ(4) ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ನಮೂನಾ ನಂ.57 ರಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಬಗರ್ ಹುಕುಂ ತಂತ್ರಾಂಶದ ಮೂಲಕ ನಿರ್ವಹಿಸಲಾಗುತ್ತಿದ್ದು, ಈ ಪ್ರಕ್ರಿಯೆಯು ರಾಜ್ಯದಲ್ಲಿ ಪ್ರಥಮ ಬಾರಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ, ಅರ್ಜಿಯ ಪ್ರಾರಂಭದಿಂದ ಕೊನೆವರೆಗೆ ಎಲ್ಲ ಹಂತಗಳು ಪೂರ್ಣವಾಗಿ ಆನ್ಲೈನ್ ಮೂಲಕ ನಿರ್ವಹಿಸಲಾಗಿದ್ದು, ಶಿರಸಿ ತಾಲೂಕಿನಲ್ಲಿ 4 ಜನ ರೈತರಿಗೆ ಮಂಜೂರಾತಿ ಪತ್ರ, ಸಾಗುವಳಿ ಚೀಟಿ, ಪಹಣಿ ಪತ್ರಿಕೆ, ಮ್ಯುಟೇಷಂನ್, ಪೋಡಿ ದಾಖಲೆಗಳನ್ನು ಯಶಸ್ವಿಯಾಗಿ ವಿತರಿಸಲಾಗಿದೆ. ಸದರಿ ಪ್ರಕ್ರಿಯೆಯು ಗ್ರಾಮ ಆಡಳಿತಾಧಿಕಾರಿಗಳಿಂದ ಮೊಬೈಲ್ ತಂತ್ರಾಂಶದ ಮೂಲಕ ಕ್ಷೇತ್ರ ಪರಿಶೀಲನದಿಂದ ಆರಂಭವಾಗಿ, ತದನಂತರ ಕಂದಾಯ ನಿರೀಕ್ಷಕರು, ಶಿರಸ್ತೇದಾರರು, ತಹಶೀಲ್ದಾರರ ಲಾಗಿನ್ ನ ಮೂಲಕ ಬಗರ್ ಹುಕುಂ ಸಮಿತಿಗೆ ತಂತ್ರಾಂಶದ ಮೂಲಕ ಅರ್ಜಿಯು ವರ್ಗಾವಣೆಗೊಳ್ಳುತ್ತದೆ. ನಂತರ ಸಮಿತಿಯ ತಾತ್ಕಾಲಿಕ ಮಂಜೂರಾತಿ ಶಿಫಾರಸ್ಸಿನೊಂದಿಗೆ 15 ದಿನಗಳ ತಕರಾರು ಅವಧಿ ಮುಕ್ತಾಯಗೊಂಡ ನಂತರ ಸರ್ವೆಯಿಂದ ಮಂಜೂರಿ ಪೂರ್ವ ನಕಾಶೆಯೊಂದಿಗೆ ಪುನಃ ಸಮಿತಿಯಲ್ಲಿ ಮಂಡಿಸಿ ಬಗರ…

Read More

ಜೆ.ರಂಗನಾಥ, ತುಮಕೂರು ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಮಾದಿಹಳ್ಳಿ  ಹೋಬಳಿ ಗೆ ಸೇರಿದ  ಜೈನರ ಗುತ್ತಿಯ  ಜಿನ ಬಿಂಬ ಪಂಚ ಕಲ್ಯಾಣ ಪ್ರತಿಷ್ಠಾಪನ ಮಹೋತ್ಸವ– 2024ರ ನಂಬರ್ 29ರ ಶುಕ್ರವಾರ ದಿಂದ 2024ರ ಡಿಸೆಂಬರ್ 4ರವರೆಗೆ  ಮುನಿಶ್ರೀ ವೀರ ಸಾಗರ  ಮಹಾರಾಜರ  ನೇತೃತ್ವದಲ್ಲಿ ಹಾಗೂ ಆಚಾರ್ಯ ವಿಶುದ್ಧ ಸಾಗರ್ ಮುನಿ ಮಹಾರಾಜರ ಸಂಘ, ಶ್ರೀ ಚಂದ್ರಸಾಗರ ಮುನಿ ಮಹಾರಾಜರ ಮಾರ್ಗದರ್ಶನದಲ್ಲಿ ವೈಭವದಿಂದ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ಗರ್ಭಕಲ್ಯಾಣಕ ಪೂರ್ವ ಕ್ರಿಯೆ,  ಗರ್ಭ ಕಲ್ಯಾಣಕ ಉತ್ತರಕ್ರಿಯೆ, ಜನ್ಮ ಕಲ್ಯಾಣಕ ,ತಪಕ ಕಲ್ಯಾಣಕ, ಕೇವಲ ಜ್ಞಾನ ಕಲ್ಯಾಣಕ ಹಾಗೂ ಮೋಕ್ಷ ಕಲ್ಯಾಣಕ ಕಾರ್ಯಕ್ರಮಗಳು ಜರುಗಿದವು. ಈ ಅಂಗವಾಗಿ  ಬೆಳಗ್ಗೆ ಸುಪ್ರಭಾತ, ಮಂಗಳವಾದ್ಯ,  ಆಚಾರ್ಯ ಶ್ರೀಗಳ ಸಂಘ ಪರಿವಾರ, ಧ್ವಜಾರೋಹಣ, ಮಂಟಪ ಉದ್ಘಾಟನೆ, ಮಂಗಳ ಕಳಸ ಸ್ಥಾಪನೆ, ಜಿನೇಂದ್ರ ಅಭಿಷೇಕ ಶಾಂತಿದಾರ ಮಂಟಪ, ಹೋಮಗಳು, ಹವನಗಳು, ಮಂಗಳ ಪ್ರವಚನಗಳು,  ದಾಮ ಸಂಪ್ರೋಕ್ಷಣಗಳು, ಆರತಿಗಳು, ಮಂಗಳ ವಾದ್ಯಗಳು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಅಂತಿಮ ದಿನ ಧ್ವಜಾರೋಹಣ…

Read More

ತುಮಕೂರು: ನಗರದ ಹೊರವಲಯದ ಹಿರೇಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಶಾರದ ಆಗ್ರೋಟೆಕ್ ಕೀಟನಾಶಕ ಉತ್ಪಾದನಾ ಘಟಕದ ಗೋದಾಮಿನಲ್ಲಿ ನಿಯಮ ಉಲ್ಲಂಘಿಸಿ ಲೇಬಲ್ ನಮೂದಿಸಿದ ಮ್ಯಾಂಕೊಜೆಟ್–75% ಡಬ್ಲ್ಯೂ.ಪಿ. ಮತ್ತು ಮೆಲಾಥಿಯಾನ್–5% ಡಿ.ಪಿ. ಸೇರಿ 4353 ಕೆ.ಜಿ. ಕೀಟನಾಶಕವನ್ನು ಉಪ ಕೃಷಿ ನಿರ್ದೇಶಕ ಹಾಗೂ ಕೀಟನಾಶಕ ಪರಿವೀಕ್ಷಕ ಹೆಚ್. ಹುಲಿರಾಜ ಅವರ ತಂಡ ಜಪ್ತಿ ಮಾಡಿದೆ. ಸೀಬೆ, ಜೋಳ ಮತ್ತು ಮಾವು ಬೆಳೆಗಳಿಗೆ ಮ್ಯಾಂಕೊಜೆಟ್–75% ಡಬ್ಲ್ಯೂ.ಪಿ. ಮತ್ತು ಮೆಲಾಥಿಯಾನ್–5% ಡಿ.ಪಿ. ಕೀಟನಾಶಕವನ್ನು ನಿಷೇಧ ಮಾಡಿದ್ದರೂ ಸಹ ಕೀಟನಾಶಕಗಳನ್ನು ಉತ್ಪಾದಿಸಿ ಮಾರಾಟ ಮಾಡಲು ದಾಸ್ತಾನು ಮಾಡಲಾಗಿದ್ದ 3,22,000 ರೂ. ಮೌಲ್ಯದ ಕೀಟನಾಶಕವನ್ನು ಪಂಚರ ಸಮಕ್ಷಮದಲ್ಲಿ ಮಹಜರ್ ಮೂಲಕ ಜಪ್ತಿ ಮಾಡಲಾಗಿದೆ. ಕಳೆದ ಬಾರಿ ಕ್ಷೇತ್ರ ಭೇಟಿ ಸಂದರ್ಭದಲ್ಲಿ ಕೀಟನಾಶಕ ಮಾರಾಟ ತಡೆ ಆದೇಶ ಜಾರಿ ಮಾಡಿ ಸಮಜಾಯಿಷಿ ನೀಡಲು ನೋಟೀಸ್ ಮೂಲಕ ತಿಳುವಳಿಕೆ ಪತ್ರ ಜಾರಿ ಮಾಡಲಾಗಿತ್ತು. ಕೀಟನಾಶಕಗಳ ಉತ್ಪಾದಕ ಕಂಪನಿಯು ಸೂಕ್ತ ದಾಖಲಾತಿಗಳ ನಿರ್ವಹಣೆ, ಇಲಾಖೆ ಅನುಮತಿ ಇಲ್ಲದೆ, ಸಮಜಾಯಿಷಿ ನೀಡದಿರುವ ಕಾರಣ ಕೀಟನಾಶಕ…

Read More

ತುಮಕೂರು: ವಿಶ್ವ ಏಡ್ಸ್ ದಿನದ ಅಂಗವಾಗಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ವತಿಯಿಂದ ಡಿಸೆಂಬರ್ 6ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಿಂದ ಟೌನ್ ಹಾಲ್, ಅಶೋಕ ರಸ್ತೆ ಮಾರ್ಗವಾಗಿ ಚರ್ಚ್ ಸರ್ಕಲ್, ಕೋಟೆ ಆಂಜನೇಯ ಸ್ವಾಮಿ ಸರ್ಕಲ್ ಮೂಲಕ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಕಚೇರಿವರೆಗೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಾಥಾ ಕಾರ್ಯಕ್ರಮದಲ್ಲಿ ಬಸ್‌ನಿಲ್ದಾಣ, ಮಾರುಕಟ್ಟೆ, ರೈಲ್ವೆ ನಿಲ್ದಾಣಗಳಲ್ಲಿ ಏಡ್ಸ್ ನಿಯಂತ್ರಣದ ಬಗ್ಗೆ ಅರಿವು ಮೂಡಿಸಲು ಕರಪತ್ರ ಹಂಚಲಾಗುವುದು. ಏಡ್ಸ್ ದಿನಾಚರಣೆ ಪ್ರಯುಕ್ತ ಸಂಜೆ 6 ಗಂಟೆಗೆ ನಗರದ ಡಿ.ದೇವರಾಜು ಅರಸು ಬಸ್ ನಿಲ್ದಾಣದಲ್ಲಿ ಕ್ಯಾಡಲ್ ಲೈಟ್ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಆರ್.ವಿ.ಮೋಹನ್ ದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಶಿಕ್ಷಣ ಅಂಕಪಟ್ಟಿಗೆ ಸೀಮಿತವಾಗಬಾರದು. ಉದ್ಯೋಗ ಜಗತ್ತಿಗೆ ಸೂಕ್ತವಾದ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ವಿವಿಯ ಉದ್ಯೋಗಾಧಿಕಾರಿ ಪ್ರೊ.ಪರಶುರಾಮ ಕೆ.ಜಿ. ತಿಳಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಉದ್ಯೋಗ ಮಾರ್ಗದರ್ಶನ ಮತ್ತು ನೇಮಕಾತಿ ಘಟಕ ಹಾಗೂ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿರುವ ಒಂದು ವಾರದ ವೃತ್ತಿಕೌಶಲ್ಯತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮದ ಉದ್ಘಾಟನೆಯನ್ನು ಗುರುವಾರ ನೆರವೇರಿಸಿ ಮಾತನಾಡಿದರು. ಪ್ರತಿ ವರ್ಷ ಪದವಿ ಪೂರ್ಣಗೊಳಿಸುತ್ತಿರುವ ಸಾವಿರಾರು ಮಂದಿಯಲ್ಲಿಉನ್ನತ ಶಿಕ್ಷಣದ ಮೆಟ್ಟಿಲೇರುತ್ತಿರುವವರ ಸಂಖ್ಯೆ ಬೆರಳೆಣಿಕೆಯಷ್ಟಿರುವುದು ಬೇಸರದ ಸಂಗತಿ. ಶಿಕ್ಷಣ ಉದ್ಯೋಗ, ಉನ್ನತ ಶಿಕ್ಷಣ, ಸ್ವಯಂಉದ್ಯೋಗಕ್ಕೆ ದಾರಿದೀಪವಾಗಬೇಕೇ ಹೊರತು ನಿರುದ್ಯೋಗ ಸಮಸ್ಯೆ ಸೃಷ್ಟಿಸಬಾರದು. ಶಿಕ್ಷಣವೆಂದರೆ ಜ್ಞಾನ ಮತ್ತು ಸಾಕ್ಷರತೆಗಾಗಿ ಹೋರಾಟ. ಶಿಕ್ಷಣವನ್ನು ಕೌಶಲ್ಯವಾಗಿ ಪರಿವರ್ತಿಸಿ ಪ್ರತಿಭೆಗಳ ಅನಾವರಣವಾಗಬೇಕುಎಂದು ತಿಳಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವಿ ಕಲಾ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ.ರವಿ ಸಿ. ಎಂ.,ಕೃತಕ ಬುದ್ಧಿಮತ್ತೆಯ ಸ್ಪರ್ಧಾಯುಗದಲ್ಲಿಉದ್ಯೋಗ ಬಯಸುವ ಕೌಶಲ್ಯಗಳಲ್ಲಿ ನಿಪುಣತೆ ಹಾಗೂ ಪರಿಣಿತಿ ಹೊಂದಿರಬೇಕು. ಮಾರುಕಟ್ಟೆ ಬಯಸುವ ಕೌಶಲ್ಯಗಳನ್ನು ಕರಗತ…

Read More

ಪಾವಗಡ: ತಾಲೂಕು ವೆಂಕಟಾಪುರ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ರಾಧಮ್ಮರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಅಧ್ಯಕ್ಷರ ಸ್ಥಾನಕ್ಕೆ ಅಭ್ಯರ್ಥಿಯಾಗಿ ವೆಂಕಟರಮಣಪ್ಪ ಉಪಾಧ್ಯಕ್ಷರ ಸ್ಥಾನಕ್ಕೆ ವರಲಕ್ಷ್ಮಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ಗ್ರೇಡ್ 2 ತಹಸೀಲ್ದಾರ್ ಚಂದ್ರಶೇಖರ್ ರವರು ಕಾರ್ಯನಿರ್ವಹಿಸಿದರು. ಒಟ್ಟು 12 ಜನ ಸದಸ್ಯರಿದ್ದು, ಕಾಂಗ್ರೆಸ್ ಆರು ಜೆಡಿಎಸ್ ಐದು ಹಾಗೂ ಬಿಜೆಪಿ ಒಬ್ಬರು ಸದಸ್ಯರಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಆರು ಬಿಜೆಪಿ ಒಂದು ಜೆಡಿಎಸ್ ಒಬ್ಬ ಸದಸ್ಯರು ಇದ್ದರು. ಜೆಡಿಎಸ್ ನ ನಾಲ್ಕು ಜನ ಸದಸ್ಯರು ಗೈರು ಹಾಜರಾಗಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಮಾಜಿ ಅಧ್ಯಕ್ಷರಾದ ಅಂಜಿ ಗೌಡ ನಾರಾಯಣಪ್ಪ, ವೆಂಕಟೇಶ್, ರಂಜಿತ್ ಯು, ನರಸಿಂಹಪ್ಪ, ಶಂಕರಪ್ಪ, ವರ್ದರಾಜುಲು. ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಕರಾವಳಿ:  ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಡಿಸೆಂಬರ್ 9ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಜೊತೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಡಿಸೆಂಬರ್ 10ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ಒಳನಾಡು : ಉತ್ತರ ಒಳನಾಡಿನ, ಹಾವೇರಿ, ಗದಗ, ದಾವಣಗೆರೆ ಜಿಲ್ಲೆಗಳ…

Read More

ಬೆಂಗಳೂರು:  ಮಣ್ಣಿನ ಆರೋಗ್ಯ, ಮಣ್ಣಿನ ಫಲವತ್ತತೆ, ಮಣ್ಣಿನ ಉತ್ಪಾದಕತೆ ಕುರಿತು ರೈತರು ಹಾಗೂ ಸಾರ್ವಜನಿಕರಲ್ಲಿ ಮಣ್ಣಿನ ಮಹತ್ವದ ಬಗ್ಗೆ ಅರಿವುಮೂಡಿಸಲು ಪ್ರತಿ ವರ್ಷ ಡಿಸೆಂಬರ್ 5 ರಂದು “ಜಾಗತಿಕ ಮಣ್ಣಿನ ದಿನ”ವೆಂದು ಆಚರಿಸಲಾಗುತ್ತದೆ ಎಂದು ಕೃಷಿ  ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಕೃಷಿ ಇಲಾಖೆ ಹಾಗು ಜಲಾನಯನ ಅಭಿವೃಧ್ದಿ ಇಲಾಖೆ ವತಿಯಿಂದ ಬೆಂಗಳೂರಿನ ಕೃಷಿ ಆಯುಕ್ತಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು,  “ಜಗವೇ ನಿಂತಿದೆ-ನೇಗಿಲ ಆಳದ ಮಣ್ಣಿನ ಮೇಲೆ”, “ಮಣ್ಣು ಬರಿದಾದರೆ-ಕಣ್ಣು ಕುರುಡಾದೀತು”, “ನಾವು ಸತ್ತರೇ ಮಣ್ಣಿಗೆ–ಮಣ್ಣೇ ಸತ್ತರೇ ಇನ್ನೆಲ್ಲಿಗೆ” ಮತ್ತು “ಮಣ್ಣೇ ಮಾಣಿಕ್ಯ” ಎಂಬ ನಾನ್ನುಡಿಗಳು ಮಣ್ಣಿನ ಮಹತ್ವವನ್ನು ಸಾರುತ್ತವೆ. ಮನುಷ್ಯರು ಆರೋಗ್ಯವಾಗಿರಬೇಕೆಂದರೆ ಆರೋಗ್ಯಕರ ಆಹಾರ ಸೇವನೆ ಮಾಡಬೇಕು. ಆರೋಗ್ಯಕರವಾದ ಆಹಾರವು ಆರೋಗ್ಯಕರ ಮಣ್ಣಿನಲ್ಲಿ ಬೆಳೆಯುತ್ತದೆ, ಆದ್ದರಿಂದ ಮನುಷ್ಯರ ಆರೋಗ್ಯಕ್ಕೂ ಮಣ್ಣಿನ ಆರೋಗ್ಯಕ್ಕೂ ನೇರವಾದ ಸಂಬಂಧವಿದೆ ಎಂದು ತಿಳಿಸಿದರು. ಜಾಗತಿಕವಾಗಿ ಶೇಕಡಾ 95 ರಷ್ಟು ಆಹಾರವನ್ನು ಮಣ್ಣಿನಿಂದಲೇ ಬೆಳೆಯಲಾಗುತ್ತದೆ, ಹಾಗೂ ಬೆಳೆಗಳಿಗೆ ಬೇಕಾಗುವ 15 ಅಗತ್ಯ ಪೋಷಕಾಂಶಗಳನ್ನೂ ಕೂಡಾ ಮಣ್ಣೇ…

Read More

ಹಾಸನ: ಕಾಂಗ್ರೆಸ್ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸುತ್ತಿದೆ. ಆದರೆ ಇದನ್ನು ಸಹಿಸದ ಬಿಜೆಪಿಗರು ರಾಜ್ಯ ಸರ್ಕಾರದ ಮೇಲೆ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಹಾಸನದಲ್ಲಿ ಆಯೋಜಿಸರುವ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಾಸನದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿರುವುದು ನಿಜಕ್ಕೂ ಸಂತಸ ತಂದಿದೆ. ಕರ್ನಾಟಕದಲ್ಲಿ ಮತ್ತು ಹಾಸನದಲ್ಲಿ ಸ್ವಾಭಿಮಾನಕ್ಕೆ, ಸಂವಿಧಾನಕ್ಕೆ ಆದ್ಯತೆ ನೀಡಿರುವುದು ನಮಗೆಲ್ಲ ಹೆಚ್ಚಿನ ಶಕ್ತಿ ತುಂಬಿದೆ ಎಂದರು. ಉತ್ತರ ಭಾರತದ ರಾಜ್ಯಗಳು ಸಹ ಕರ್ನಾಟಕದ ಗ್ಯಾರಂಟಿಗಳ ಬಗ್ಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಹೆಚ್ಚಿನ ಅಭಿವೃದ್ಧಿಯೊಂದಿಗೆ ಗ್ಯಾರಂಟಿಗಳನ್ನು ಸಹ ಮನೆಬಾಗಿಲಿಗೆ ತಲುಪಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಮ್ಮ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯೊಂದಿಗೆ ನವ ಕರ್ನಾಟಕ ನಿರ್ಮಾಣ ಮಾಡುವುದಕ್ಕೆ ಪ್ರತಿಯೊಬ್ಬರಿಗೂ ಸಾಮಾಜಿಕವಾಗಿ, ಆರ್ಥಿಕವಾಗಿ, ಸ್ವಾಭಿಮಾನದ ಬದುಕು ಕಟ್ಟಿಕೊಡುವುದಕ್ಕೆ ಮುಂದಾಗಿದೆ ಎಂದರು. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಪ್ರಗತಿಪರ ಆಲೋಚನೆಗಳು ಇರುತ್ತೇವೆ. ಆದರೆ ಬಿಜೆಪಿ ಸರ್ಕಾರದಲ್ಲಿ ಇದ್ಯಾವುದು ಇರುವುದಿಲ್ಲ…

Read More