Subscribe to Updates
Get the latest creative news from FooBar about art, design and business.
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
Author: admin
ಮಧುಗಿರಿ: ಪಟ್ಟಣದ ಬೆಟ್ಟದ ಇಳಿಜಾರಿನ ಕಲ್ಲು ಬಂಡೆಗಳಿಂದ ಕೂಡಿದ ಬಂಡೆಯ ಬುಡದಲ್ಲಿ ಅಪರೂಪದ ನಾಗಾರ್ಜುನ ಸಾಗರ ರೇಸರ್ ಹಾವು ಪತ್ತೆಯಾಗಿದ್ದು, ಉರಗ ಪ್ರೇಮಿಗಳಿಗೆ ಕುತೂಹಲ ಹೆಚ್ಚಾಗಿದೆ ಎಂದು ವನ್ಯಜೀವಿ ಜಾಗೃತಿ ನಿಸರ್ಗ ಸಂಸ್ಥೆಯ ಅಧ್ಯಕ್ಷ ಬಿ.ವಿ.ಗುಂಡಪ್ಪ ತಿಳಿಸಿದ್ದಾರೆ. ಇದು ರಸೆಲ್ ಕುತ್ರಿ ಹಾವನ್ನು ಹೋಲುತ್ತದೆಯಾದರೂ ಮೊನಚಾದ ತಲೆ, ದೇಹದ ಮೇಲಿನ ಹುರುಪೆಗಳು ಹಾಗೂ ಬಣ್ಣದ ಸಹಾಯದಿಂದ ವ್ಯತ್ಯಾಸ ತಿಳಿಯಬಹುದು. ನೀಳ ದೇಹದ ಮೇಲೆ ಮೃದುವಾದ ಹುರುಪೆಗಳು, ಬೆನ್ನಿನ ಭಾಗದಲ್ಲಿ ಗಾಢವಾದ ಬೂದು ಬಣ್ಣದ ಉಂಗುರಾಕಾರದ ರಚನೆಗಳು ದೇಹದ ಅರ್ಧ ಭಾಗದವರೆಗೂ ಕಂಡು ಬರುತ್ತವೆ. ದೇಹದ ನಡು ಭಾಗದಿಂದ ಬಾಲದ ತುದಿಯವರೆಗೆ ಉಂಗುರಾಕಾರದ ರಚನೆಗಳು ಕಂಡು ಬರುವುದಿಲ್ಲ. ದಕ್ಷಿಣ ಭಾರತದ ದಖನ್ ಪ್ರಸ್ಥಭೂಮಿಯಲ್ಲಿ ಮಾತ್ರ ಕಂಡು ಬರುವ ಈ ಹಾವು 1976ರಲ್ಲಿ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ನಾಗಾರ್ಜುನ ಬೆಟ್ಟದಲ್ಲಿ ಕಂಡು ಬಂದಿದ್ದರಿಂದ ಈ ಹಾವಿಗೆ ಈ ಹೆಸರಿಟ್ಟಿದ್ದಾರೆ. ಈ ಹಾವುಗಳು ಶತ್ರುಗಳಿಂದ ರಕ್ಷಿಸಿ ಕೊಳ್ಳಲು ಹಾಗೂ ಆಹಾರ ಜೀವಿಗಳನ್ನು ಹಿಡಿಯಲು ವೇಗ…
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ಮರುಗುವ ಘಟನೆಯೊಂದು ನಡೆದಿದೆ. ಗಂಡನ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದ ನಾಲ್ಕು ತಿಂಗಳ ಗರ್ಭಿಣಿ ಶ್ವೇತಾ (30) ಅವರು ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಶ್ವೇತಾ ಅವರಿಗೆ ಕಳೆದ ಕೆಲವು ಸಮಯದಿಂದ ಅತ್ತೆ–ಮಾವ ಹಾಗೂ ಮನೆಯವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಮಾರ್ಚ್ 29 ರಂದು ಶ್ವೇತಾ ಹೊಡಬಟ್ಟೆಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಇಂದು ಅವರು ಕೊನೆಯುಸಿರೆಳೆದಿದ್ದಾರೆ. “ನಮ್ಮ ಮಗಳು ಹೇಡಿಯಲ್ಲ, ಆಕೆ ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ಆಸ್ತಿ ಮತ್ತು ಮನೆಯ ಜಾಗದ ವಿಚಾರಕ್ಕಾಗಿ ಅತ್ತೆ–ಮಾವ ಹಾಗೂ ಮನೆಯವರು ಆಕೆಗೆ ಸತತವಾಗಿ ಚಿತ್ರಹಿಂಸೆ ನೀಡುತ್ತಿದ್ದರು. ಇದು ಆತ್ಮಹತ್ಯೆಯಲ್ಲ, ಅವರೇ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ” ಎಂದು ಶ್ವೇತಾ ಅವರ ಪೋಷಕರು ಮತ್ತು ಸಂಬಂಧಿಕರು ಗಂಭೀರವಾಗಿ…
ಬೆಂಗಳೂರು: ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡುವ ಬದಲಿಗೆ ಕೇವಲ ‘ಗ್ರೇಡಿಂಗ್’ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ನಿಯಮವನ್ನು ಮರುಪರಿಶೀಲಿಸುವಂತೆ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಭಾಷಾವೈವಿಧ್ಯತೆ, ಜಾಗೃತಿ ಮತ್ತು ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಯಲ್ಲಿ ತೃತೀಯ ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ. ಅಂಕಗಳ ಬದಲಿಗೆ ಗ್ರೇಡ್ ನೀಡುವ ನಿರ್ಧಾರದಿಂದ ಈ ವಿಷಯದ ಶೈಕ್ಷಣಿಕ ಪ್ರಾಮುಖ್ಯತೆ ಕಡಿಮೆಯಾಗುವ ಸಾಧ್ಯತೆ ಇದೆ. ಕೇವಲ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದರೆ ವಿದ್ಯಾರ್ಥಿಗಳಲ್ಲಿ ತೃತೀಯ ಭಾಷೆಯನ್ನು ಕಲಿಯುವ ಆಸಕ್ತಿ ಮತ್ತು ಗಂಭೀರತೆ ಕಡಿಮೆಯಾಗಬಹುದು ಎಂಬ ಆತಂಕವನ್ನು ರಾಜ್ಯಪಾಲರು ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಿರ್ಧಾರದ ಬಗ್ಗೆ ಪೋಷಕರಲ್ಲಿರುವ ಕಳವಳವನ್ನು ಗಮನಿಸಿರುವ ರಾಜ್ಯಪಾಲರು, ಶಿಕ್ಷಣದ ಗುಣಮಟ್ಟದ ಮೇಲೆ ಇದು ಬೀರುವ ಪರಿಣಾಮಗಳ ಬಗ್ಗೆ ಎಚ್ಚರಿಸಿದ್ದಾರೆ.…
ಬೆಂಗಳೂರು: ಕರ್ನಾಟಕದ ಮಾಜಿ ಲೋಕಾಯುಕ್ತ ಹಾಗೂ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರು ಶುಕ್ರವಾರ ನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸಂತೋಷ್ ಹೆಗ್ಡೆ ಅವರು ಭಾಗವಹಿಸಿದ್ದರು. ವೇದಿಕೆಯ ಮೇಲೆ ಪಿ.ಜಿ.ಆರ್. ಸಿಂಧ್ಯಾ ಅವರೊಂದಿಗೆ ಮಾತನಾಡುತ್ತಾ ಕುಳಿತಿದ್ದ ಸಂದರ್ಭದಲ್ಲಿ ಅವರಿಗೆ ತಲೆಸುತ್ತು ಬಂದಂತಾಗಿ ಕುಸಿದು ಬಿದ್ದಿದ್ದಾರೆ. ಅಲ್ಲಿದ್ದವರು ಕೂಡಲೇ ಅವರಿಗೆ ನೀರು ಕುಡಿಸಿ ಉಪಚರಿಸಲು ಪ್ರಯತ್ನಿಸಿದರಾದರೂ, ಅವರು ಚೇತರಿಸಿಕೊಳ್ಳದಿದ್ದಾಗ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಹಾಯಕ್ಕೆ ಬಂದ ಸ್ಪೀಕರ್ ವಾಹನ: ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಕೂಡಲೇ ಸ್ಪಂದಿಸಿ, ತಮ್ಮ ಸರ್ಕಾರಿ ವಾಹನದಲ್ಲೇ ಸಂತೋಷ್ ಹೆಗ್ಡೆ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ರವಾನಿಸಲು ವ್ಯವಸ್ಥೆ ಮಾಡಿದರು. ಸಂತೋಷ್ ಹೆಗ್ಡೆ ಅವರು ಮಧುಮೇಹ (Diabetes)…
ಬಾಗಲಕೋಟೆ: ಉಪಚುನಾವಣೆಯ ಪ್ರಚಾರದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಮತ್ತು ಅಭಿವೃದ್ಧಿ ಶೂನ್ಯವಾಗಿದೆ ಎಂದು ಟೀಕಿಸಿದರು. ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ಪರ ಪ್ರಚಾರಕ್ಕೆ ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸೋಮಣ್ಣ, ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿದ್ದರೂ, ರಾಷ್ಟ್ರೀಯ ನಾಯಕರು ಅದನ್ನು ಸರಿಪಡಿಸುತ್ತಾರೆ. ಪಕ್ಷವು ತಾಯಿಯಂತೆ, ದೇಶ ಮತ್ತು ಪಕ್ಷವೇ ನಮಗೆ ಮೊದಲು ಎಂದು ಅವರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬಂದು ಪ್ರಧಾನಿ ಮೋದಿಯವರ ಕಾರ್ಯವೈಖರಿಯನ್ನು ನೋಡುವಂತೆ ಹಲವು ಬಾರಿ ಹೇಳಿದ್ದೇನೆ, ಆದರೆ ಅವರು ಉಡಾಫೆ ಮಾಡುತ್ತಿದ್ದಾರೆ ಎಂದು ಸೋಮಣ್ಣ ಆರೋಪಿಸಿದರು. ಈ ಸರ್ಕಾರ ಇನ್ನು ಎರಡು ಅಥವಾ ಮೂರು ತಿಂಗಳು ಮಾತ್ರ ಇರಬಹುದು, ಸಿದ್ದರಾಮಯ್ಯನವರು ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಭವಿಷ್ಯ ನುಡಿದರು. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ನೀಡುತ್ತಿರುವ ರೈಲ್ವೆ ಯೋಜನೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಅವರು, ಬಾಗಲಕೋಟೆ–ಕುಡಚಿ ಹೊಸ ರೈಲು ಮಾರ್ಗ,…
ತುಮಕೂರು: ಕಾಯಕ ಯೋಗಿ ಪ್ರಾದೇಶಿಕ ದಿನ ಪತ್ರಿಕೆಯ 9ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ವರದಿಗಾರರಿಗೆ 2026–27 ನೇ ಸಾಲಿನ ಗುರುತಿನ ಚೀಟಿ (ಐ ಡಿ ಕಾರ್ಡ್) ಮತ್ತು ವರದಿಗಾರರ ನೇಮಕಾತಿ ಆದೇಶ ಪತ್ರ ವಿತರಣೆ ಸಮಾರಂಭವು ಸಾಂಸ್ಕೃತಿಕ ನಗರಿ ಮೈಸೂರಿನ ಪಿಡಬ್ಲ್ಯೂಡಿ ಗೆಸ್ಟ್ ಹೌಸ್ ನಲ್ಲಿ ಆಯೋಜನೆ ಮಾಡಲಾಗಿತ್ತು. ತುಮಕೂರು ಜಿಲ್ಲಾ ವರದಿಗಾರರಾದ ಮಂಜುಸ್ವಾಮಿ ಎಂ.ಎನ್. ಅವರ ಉತ್ತಮ ವರದಿಗಾರಿಕೆಗೆ “ಕಾಯಕ ಯೋಗಿ ಪ್ರಾದೇಶಿಕ ದಿನ ಪತ್ರಿಕೆ”ಯ ಸಂಪಾದಕರಾದ ಬಿ.ಕೆ.ಅರುಣ ಜ್ಯೋತಿಯವರು ದ್ವಿತೀಯ ಪ್ರಶಸ್ತಿ ಪ್ರಕಟ ಮಾಡಿ ನಗದು ಬಹುಮಾನ ನೀಡಿ ಗೌರವಿಸಿದ್ದಾರೆ. 2025–26 ನೇ ಸಾಲಿನಲ್ಲಿ ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿ, ಸ್ಥಳೀಯ ಸರ್ಕಾರಿ ಇಲಾಖೆಗಳ ಕಾರ್ಯ ವೈಖರಿ, ಜನೋಪಯೋಗಿ ವರದಿ, ಜಿಲ್ಲೆಯಲ್ಲಿನ ಕುಂದು ಕೊರತೆಗಳ ಬಗ್ಗೆ, ಗ್ರಾಮಿಣ ಭಾಗದ ಅಭಿವೃದ್ಧಿ ಮತ್ತು ಅನಾನುಕೂಲಗಳ ಬಗ್ಗೆ ವಿಶೇಷ ಆಸಕ್ತಿವಹಿಸಿ ಸುದ್ದಿಗಳನ್ನು ಮಾಡಿದ್ದರು. ಸಾಮಾಜಿಕ ಶೈಕ್ಷಣಿಕ ಮಾನವೀಯತೆ ಸುದ್ದಿಗಳನ್ನು ಆದರಿಸಿ “ಕಾಯಕ ಯೋಗಿ ಉತ್ತಮ ವರದಿಗಾರ”…
ಬಾಗಲಕೋಟೆ: ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ. ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ ಎಂದಲ್ಲ, ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಅಷ್ಟೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಕೇಂದ್ರ ಸಚಿವ, ತುಮಕೂರು ಸಂಸದ ವಿ.ಸೋಮಣ್ಣ ಪ್ರಚಾರ ನಡೆಸುತ್ತಿರುವ ಸಂದರ್ಭದಲ್ಲಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲು ನನಗೆ ಇಷ್ಟವಿಲ್ಲ ಎಂದರು. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿದೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪಕ್ಷದಿಂದ ಉಚ್ಛಾಟಿಸಲ್ಪಟ್ಟಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನೇ ಗೋಗರೆದು ಕರೆ ತಂದು ಪ್ರಚಾರ ಕಾರ್ಯಕ್ಕೆ ಇಳಿಸಿದ್ದಾರೆ. ಇದು ಅವರ ದ್ವಂದ್ವ ನೀತಿ, ಕರ್ನಾಟಕದಲ್ಲಿ ಬಿಜೆಪಿ ಎಂಥಾ ಹೀನಾಯ ಸ್ಥಿತಿಯಲ್ಲಿದೆ ಎಂಬುದಕ್ಕಿದು ಸಾಕ್ಷಿ ಅಂತ ಅವರು ತಿರುಗೇಟು ನೀಡಿದರು. ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಪೂರೈಕೆ ಬಗ್ಗೆ…
ದಾವಣಗೆರೆ: ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರ ಮೇಲೆ ಹೇರಿರುವ ಆರ್ಥಿಕ ಹೊರೆಯನ್ನು ತಗ್ಗಿಸಲು ರಾಜ್ಯ ಸರ್ಕಾರ ಸಾಲ ಮಾಡಿದೆ. ಜನಕಲ್ಯಾಣ ಯೋಜನೆಗಳನ್ನು ನೀಡದಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಸಾಲ ಮಾಡಿಲ್ಲವೇ? ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಬೆಲೆ ಏರಿಕೆಯ ಬಿಸಿಯಿಂದ ಜನರನ್ನು ರಕ್ಷಿಸಲು ರಾಜ್ಯ ಸರ್ಕಾರ ‘ಗ್ಯಾರಂಟಿ’ ಯೋಜನೆಗಳ ಮೂಲಕ ಜನರ ಕೈಗೆ ಹಣ ನೀಡುತ್ತಿದೆ. ಕೇಂದ್ರಕ್ಕೆ ಜನರ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಜನರ ಬ್ಯಾಂಕ್ ಖಾತೆಗಳಿಗೆ ತಿಂಗಳಿಗೆ ₹10,000 ಆರ್ಥಿಕ ನೆರವು ನೀಡಲಿ ಎಂದು ಸವಾಲು ಹಾಕಿದರು. ಬಿಜೆಪಿ ಕೇವಲ ಖಾಲಿ ಮಾತುಗಳ ಮೂಲಕ ಜನರನ್ನು ಮರಳು ಮಾಡುತ್ತಿದೆ. ಅಯೋಧ್ಯೆಯಿಂದ ತಂದ ಅಕ್ಷತೆಯ ಬಗ್ಗೆ ಪ್ರಸ್ತಾಪಿಸಿದ ಅವರು, ಅಕ್ಷತೆಯನ್ನು ಮನೆಮನೆಗೆ ತಲುಪಿಸಿದ ರೀತಿಯಲ್ಲೇ ಎಲ್ ಪಿಜಿ ಸಿಲಿಂಡರ್ ಗಳನ್ನು ಏಕೆ…
ತುಮಕೂರು: ಜಿಲ್ಲೆಯಲ್ಲಿ ತೀವ್ರ ಬೇಸಿಗೆಯ ಬಿಸಿ ಏರುತ್ತಿರುವ ಹಿನ್ನೆಲೆಯಲ್ಲಿ, ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ 100 ಹಳ್ಳಿಗಳಿಗೆ ತಕ್ಷಣವೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ನಗರದ ಸ್ಮಾರ್ಟ್ ಸಿಟಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪಾವಗಡ ಹೊರತುಪಡಿಸಿ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ನೀರಿನ ಸಮಸ್ಯೆ ಎದುರಾಗಬಹುದಾದ 100 ಹಳ್ಳಿಗಳನ್ನು ಪಟ್ಟಿ ಮಾಡಲಾಗಿದೆ. ಈ ಹಳ್ಳಿಗಳಿಗೆ ಈಗಾಗಲೇ ಟ್ಯಾಂಕರ್ ಮೂಲಕ ಮತ್ತು ಖಾಸಗಿ ಬೋರ್ ವೆಲ್ ಗಳನ್ನು ಬಾಡಿಗೆಗೆ ಪಡೆಯುವ ಮೂಲಕ ನೀರು ಸರಬರಾಜು ಮಾಡಲು ಕ್ರಮ ವಹಿಸಲಾಗಿದೆ ಎಂದರು. ಟ್ಯಾಂಕರ್ ಅಥವಾ ಖಾಸಗಿ ಮೂಲಗಳಿಂದ ನೀರು ಸಿಗದಿದ್ದಲ್ಲಿ, ತುರ್ತಾಗಿ ಹೊಸ ಬೋರ್ ವೆಲ್ ಕೊರೆಯಲು ಅಧಿಕಾರಿಗಳಿಗೆ ಅನುಮತಿ ನೀಡಲಾಗಿದೆ. ಬೋರ್ ವೆಲ್ ಕೊರೆಸಲು ಬೇಕಾದ ಅನುಮತಿಯನ್ನು ಜಿಲ್ಲಾಧಿಕಾರಿ ಅಥವಾ ಜಿಪಂ ಸಿಇಒ ಅವರು…
ತುಮಕೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ವೇಗವಾಗಿ ಹೆಚ್ಚುತ್ತಿದ್ದು, ಇವುಗಳನ್ನು ನಿಯಂತ್ರಿಸುವುದು ಮತ್ತು ಅಪರಾಧಿಗಳನ್ನು ಪತ್ತೆಹಚ್ಚುವುದು ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿದೆ ಎಂದು ನಿವೃತ್ತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ಅಬ್ದುಲ್ ಖಾದರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಿಎಆರ್ (DAR) ಮೈದಾನದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಪೊಲೀಸ್ ಧ್ವಜ ದಿನಾಚರಣೆ’ಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಪೊಲೀಸ್ ವೃತ್ತಿಯು ಹೆಚ್ಚಿನ ಒತ್ತಡದಿಂದ ಕೂಡಿರುತ್ತದೆ. ಆದಾಗ್ಯೂ, ಸಂಕಷ್ಟದಲ್ಲಿರುವವರು ಮತ್ತು ಅಶಕ್ತರು ಠಾಣೆಗೆ ಬಂದಾಗ ಅವರ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು. ಜನರ ನೋವಿಗೆ ಸ್ಪಂದಿಸಿ ಕೆಲಸ ಮಾಡಿಕೊಡುವುದು ಪ್ರತಿಯೊಬ್ಬ ಪೊಲೀಸ್ ಅಧಿಕಾರಿಯ ಕರ್ತವ್ಯ ಎಂದು ಅವರು ಕಿವಿಮಾತು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, “ಪೊಲೀಸ್ ಧ್ವಜ ದಿನಾಚರಣೆಯು ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರನ್ನು ಸ್ಮರಿಸುವ ವಿಶೇಷ ಸಂದರ್ಭವಾಗಿದೆ. ಧ್ವಜಗಳ ಮಾರಾಟದಿಂದ ಸಂಗ್ರಹವಾಗುವ ಹಣವನ್ನು ಸಂಪೂರ್ಣವಾಗಿ ನಿವೃತ್ತ ಪೊಲೀಸರ ಕ್ಷೇಮಾಭಿವೃದ್ಧಿ ನಿಧಿಗೆ ಬಳಸಲಾಗುತ್ತದೆ. ಕಳೆದ ವರ್ಷ ಜಿಲ್ಲೆಯಲ್ಲಿ ಧ್ವಜ ಮಾರಾಟದಿಂದ ಒಟ್ಟು…