Author: admin

​ಪಾವಗಡ: ತಾಲ್ಲೂಕಿನ ಗಂಗಸಾಗರ ಗೇಟ್ ಬಳಿ ಮಂಗಳವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಶಿವಣ್ಣ (33) ಎಂಬುವರು ಮೃತಪಟ್ಟಿದ್ದು, ದ್ವಿಚಕ್ರ ವಾಹನದಲ್ಲಿದ್ದ ಹನುಮಂತ ರಾಯಪ್ಪ(43) ಮತ್ತು ವಿದ್ಯಾರ್ಥಿ ಉಮೇಶ್(16) ಗೆ ತೀವ್ರ ಗಾಯಗಳಾಗಿವೆ. ಮೃತ ವ್ಯಕ್ತಿ ತಾಲ್ಲೂಕಿನ ಮರಿದಾಸನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ದ್ವಿಚಕ್ರ ವಾಹನ ಸವಾರ ಪಾವಗಡದಿಂದ ಮರದಾಸನಹಳ್ಳಿಗೆ ಹೋಗುವಾಗ ಅಪರಿಚಿತ ವಾಹನ ಗಂಗಸಾಗರದ ಗೇಟ್ ಬಳಿ ಡಿಕ್ಕಿಯಾಗಿದೆ. ನಂತರ ಸ್ಥಳೀಯರು ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಮೃತ ವ್ಯಕ್ತಿಯನ್ನು ಮತ್ತು ಗಾಯಗಳನ್ನು ದಾಖಲಿಸಿದ್ದಾರೆ. ಪ್ರಥಮ ಚಿಕಿತ್ಸೆಯ ನಂತರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ವಿಷಯ ತಿಳಿದ ನಂತರ ಪಾವಗಡ ಠಾಣೆಯ ಎಸ್ ಐ ಗುರುನಾಥ್ ಮತ್ತು ಸಿಬ್ಬಂದಿ ದೀಪಕ್ ಕುಮಾರ್ ಇತರರು ಆಸ್ಪತ್ರೆಗೆ ಭೇಟಿ, ಪರಿಶೀಲಿಸಿ ಪಾವಗಡ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ. ವರದಿ: ನಂದೀಶ್ ನಾಯ್ಕ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಹಳಿಯಾಳ:  ಕೊಲ್ಲಾಪುರ ಜೈನ ಮಠದ ಸ್ವಸ್ತಿ ಶ್ರೀ ಲಕ್ಷ್ಮೀಸೇನ ಭಟ್ಟರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ಇಂದು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ  ಹವಗಿ ಗ್ರಾಮದ ಶ್ರೀ ಪಾರ್ಶ್ವನಾಥ  ಜಿನ ಮಂದಿರಕ್ಕೆ ಭೇಟಿ ನೀಡಿ ಪೂಜೆ, ಅಭಿಷೇಕ, ಆರಾಧನೆಗಳಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಗ್ರಾಮದ ಸುಳಜಾ ಭವಾನಿ ದೇಗುಲಕ್ಕೆ ಭೇಟಿ ನೀಡಿದರು ಗ್ರಾಮದ ಪುರ ಪ್ರವೇಶದ ಸಂದರ್ಭದಲ್ಲಿ ಗ್ರಾಮದ ಜನ ಬಂದುಗಳು ಅವರಿಗೆ ಪೂರ್ಣ ಕುಂಭಗಳೊಂದಿಗೆ ಭವ್ಯ ಸ್ವಾಗತ ನೀಡಿದರು. ಹಳಿಯಾಳ ಕ್ಷೇತ್ರ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ   ಶ್ರೀ ಲಕ್ಷ್ಮಿ  ಸೇನಾ ಭಟ್ಟರಕ ಶ್ರೀಗಳ ಆಶೀರ್ವಾದ ಪಡೆದರು. ಕಾರ್ಯಕ್ರಮದಲ್ಲಿ ಜೈನ ಬಂಧುಗಳು ಶ್ರಾವಕ -ಶ್ರಾವಕಿಯರು ಭಾಗವಹಿಸಿದ್ದರು. ವರದಿ:  ಜೆ.ರಂಗನಾಥ,  ತುಮಕೂರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪೆರ್ನಾಜೆ: ಕೃಷಿಗೆ ಒಂದೆಡೆ ಕಾಡುಪ್ರಾಣಿಗಳ ಹಾವಳಿಯಾದರೆ ಮಳೆಯ ಚೆಲ್ಲಾಟ, ಪುತ್ತೂರು ತಾಲೂಕು ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ ಎಂಬಲ್ಲಿ ಕಾಸರಗೋಡಿನ ಪರಪೆಯಿಂದ ಮುಗೇರುಯರು ಸುಳ್ಯ ತಾಲೂಕು ಕನಕಮಜಲು  ರಕ್ಷಿತಾ ಅರಣ್ಯದಿಂದ ಕೂಡಿದ್ದು ಈಗಾಗಲೇ ಹಲವು ಬಾರಿ ಕುಮಾರ  ಪೆರ್ನಾಜೆ ಮೂರು ದಿನಗಳಿಂದ ಗಜರಾಜ ಬಾಳೆ ತೋಟವನ್ನು ಚಿದ್ರಗೊಳಿಸುತ್ತಿದ್ದು 25ಕ್ಕೂ ಮಿಕ್ಕಿ ಬಾಳೆ ಗಿಡಗಳನ್ನು ನಾಶ ಮಾಡಿದ್ದು ಅಡಿಕೆ ಗಿಡವು ಬಹಳಷ್ಟು ಹಾನಿಯಾಗಿದೆ . ಕೃಷಿಕರನ್ನು ಕಾಡಾನೆ ಹೈರಾಣ ಮಾಡಿಸುತ್ತಿದ್ದು. ಅಲ್ಲದೆ ಇದಕ್ಕೆಲ್ಲ ಸರಕಾರ ಸೂಕ್ತ ಪರಿಹಾರ ನೀಡುವುದು ಮಾತ್ರವಲ್ಲದೆ ಕಾಡಾನೆಗಳನ್ನು ಇಲ್ಲಿಂದ ತೆರವು ಮಾಡುವ ಕಾರ್ಯ ಆಗಬೇಕಾಗಿ ಊರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಇಷ್ಟು ವರ್ಷಗಳಿಂದ ಎಲ್ಲೂ ಇಲ್ಲದ ಆನೆಗಳು ಇದೀಗ ಎಲ್ಲೆಡೆ ರಾಜಾರೋಶವಾಗಿ ಹೇಗೆ ತುಂಬಿತು. ಎಂಬುದೇ ಎಲ್ಲರ ಯಕ್ಷಪ್ರಶ್ನೆಯಾಗಿದೆ. ಒಂದೆಡೆ ಕೂಲಿ ಆಳುಗಳ ಸಮಸ್ಯೆ ಇನ್ನೊಂದೆಡೆ ಅಡಿಕೆಗೆ ಎಲೆ ಚುಕ್ಕಿ ರೋಗ ಮತ್ತೊಂದೆಡೆ ಅಡಿಕೆಗೆ ಕ್ಯಾನ್ಸರ್ ಕಾರಕ ವರದಿಯಿಂದ ಕಂಗೆಟ್ಟ ರೈತ. ಪ್ರಕೃತಿಯ ಮುನಿಸು ಎಲ್ಲವನ್ನು ರೈತ ನಿಭಾಯಿಸಬೇಕಾಗಿದೆ. ನಮ್ಮತುಮಕೂರಿನ…

Read More

ಬೆಂಗಳೂರು: ಭವಿಷ್ಯದ ದೃಷ್ಠಿಯಿಂದ ಸ್ಟಾರ್ಟ್ ಅಪ್ ಗಳ ಬೆಳವಣಿಗೆಯನ್ನು ಮತ್ತಷ್ಟು ವೇಗಗೊಳಿಸಲು ಇಂತಹ ಕಾರ‍್ಯಕ್ರಮಗಳನ್ನು ಆಯೋಜಿಸುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ. ಈ ನಮ್ಮ ಪರಿಸರದ ವ್ಯವಸ್ಥೆಯೊಳಗೆ ಸ್ಟಾರ್ಟ್ ಅಪ್ ಕಾನ್ಕ್ಲೇವ್ ಕೃಷಿಯಲ್ಲಿ ನಾವೀನ್ಯತೆಯ ಸಹಯೋಗ ಮತ್ತು ಸ್ಟಾರ್ಟ್ ಅಪ್ ಗಳ ವೇಗವರ್ಧನೆ ಮಾಡುವ ಗುರಿಯನ್ನು ಈ ಕಾನ್ಕ್ಲೇವ್ ಹೊಂದಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯವ್ಯಕ್ತಪಡಿಸಿದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಕೃಷಿ ನಾವೀನ್ಯತೆ ಮತ್ತು ಉದ್ಯಮ ಶೀಲತೆಯನ್ನು ಉತ್ತೇಸುವ ಸಲುವಾಗಿ ಅಗ್ರಿ ಸ್ಟಾರ್ಟ್ ಅಪ್ ಕಾನ್ ಕ್ಲೇವ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಈ ಸ್ಟಾರ್ಟ್ ಅಪ್ ಕಾನ್ಕ್ಲೇವ್ ಜ್ಞಾನ ವಿನಿಮಯಕ್ಕೆ ವೇದಿಕೆಯನ್ನು ಸೃಷ್ಟಿಸುತ್ತದೆ. ಅಲ್ಲದೇ ಬೆಂಗಳೂರು ಸ್ಟಾರ್ಟ್ ಅಪ್ ಗಳ ಹಬ್ ಎಂದು ತಿಳಿಸಿದರು. ಇಂತಹ ಸಮ್ಮೇಳದ ಮೂಲಕ ಕೃಷಿಯನ್ನು ಮರು ರೂಪಿಸುವುದಲ್ಲದೇ ಅತ್ಯಾಧುನಿಕ ಕೃಷಿ ತಂತ್ರಜ್ಞಾನಕ್ಕೆ ಪರಿಹಾರ ಸೂಚಿಸುವಲ್ಲಿಯೂ ಪ್ರಮುಖ ಪಾತ್ರವಹಿಸುತ್ತದೆ ಎಂದು ತಿಳಿಸಿದ ಸಚಿವರು, ಸ್ಟಾರ್ಟ್ ಅಪ್ ಗಳು ಹೂಡಿಕೆದಾರರ, ಕಾರ್ಪೋರೇಟ್ ಗಳ ಮತ್ತು…

Read More

ಬೆಂಗಳೂರು: ವಿಕಲಚೇತನರಿಗೆ ಸಹಾಯ ಮಾಡುವುದರಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ; ವಿಕಲಚೇತನರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಎಲ್ಲರಿಗೂ ಎಲ್ಲ ರೀತಿಯ ಅನುಕೂಲ ಕಲ್ಪಿಸಲು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಕಂಠೀರವ ಒಳಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶಾಲಯ ವತಿಯಿಂದ ಅಯೋಜಿಸಿದ್ದ ವಿಕಲಚೇತನ ದಿನಾಚರಣೆ– 2024, ಆರೈಕೆದಾರರಿಗೆ ಮಾಸಿಕ ಭತ್ಯೆ ಯೋಜನೆಗೆ ಚಾಲನೆ ಹಾಗೂ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆರೈಕೆದಾರರಿಗೆ ಮಾಸಾಶನ ದೇಶದಲ್ಲೇ ಮೊದಲು: ವಿಕಲಚೇತನರು ಸಮಾಜದಲ್ಲಿ ಎಂದೂ ಶಕ್ತಿಹೀನರಲ್ಲ, ಶಕ್ತಿವಂತರು. ವಿಕಲಚೇತನರ ಬಗ್ಗೆ ಅಷ್ಟೆ ಅಲ್ಲ. ಅವರನ್ನು ನೋಡಿಕೊಳ್ಳುವ ಆರೈಕೆದಾರರ ಬಗ್ಗೆಯೂ ಸರ್ಕಾರ ವಿಶೇಷ ಕಾಳಜಿ ಹೊಂದಿದೆ. ಆರೈಕೆದಾರರಿಗೆ ಒಂದು ಸಾವಿರ ರೂಪಾಯಿ ಮಾಸಾಶನ ನೀಡಲು ತೀರ್ಮಾನಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ವಿಕಲಚೇತನರ ಆರೈಕೆದಾರರಿಗೆ ಮಾಸಾಸನ ನೀಡಿದ ಹೆಗ್ಗಳಿಕೆ ಹೊಂದಿದೆ ಎಂದರು. ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತರಿದ್ದಾರೆ, ಅವರನ್ನು…

Read More

ಬೆಂಗಳೂರು: ರಾಜ್ಯದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುತ್ತಿದ್ದು, ರಾಜ್ಯ ಸರ್ಕಾರ ವಿಕಲಚೇತನರ ಪಾಲಿಗಂತೂ ಹೃದಯವಂತ ಸರ್ಕಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶಾಲಯ ವತಿಯಿಂದ ಅಯೋಜಿಸಿದ್ದ ವಿಕಲಚೇತನ ದಿನಾಚರಣೆ- 2024, ಆರೈಕೆದಾರರಿಗೆ ಮಾಸಿಕ ಭತ್ಯೆ ಯೋಜನೆಗೆ ಚಾಲನೆ ಹಾಗೂ ವಿಶ್ವ ಆರೈಕೆದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ಇಂದು ಸರ್ಕಾರ ಬಹಳಷ್ಟು ಕಾರ್ಯಕ್ರಮಗಳನ್ನು ನಮ್ಮ ಇಲಾಖೆ ವತಿಯಿಂದ ವಿಕಲಚೇತನರಿಗೆ ಕೊಟ್ಟಿದೆ. ನಮ್ಮ ಉದ್ದೇಶ; ಗುರಿ ಇಷ್ಟೇ, ವಿಶೇಷಚೇತನರ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು. ದೇಶದಲ್ಲಿ ಎಲ್ಲರಿಗೂ ಸಂವಿಧಾನಬದ್ಧವಾದ ಹಕ್ಕುಗಳಿವೆ. ಎಲ್ಲರಿಗೂ ಸಮಾನವಾದ ಅವಕಾಶಗಳಿವೆ. ಅದರಲ್ಲೂ ವಿಶೇಷವಾಗಿ ವಿಶೇಷಚೇತನರಿಗೂ ಅನ್ವಯಿಸುತ್ತವೆ. ಸರ್ಕಾರ ಎಲ್ಲರಿಗೂ ಸಮಾನವಾದ ಅವಕಾಶಗಳನ್ನು ಕಲ್ಪಿಸಲು ಮುಂದಾಗಿದೆ ಎಂದರು. ಸಂವಿಧಾನಬದ್ಧವಾದ ಹಕ್ಕನ್ನು ಎಲ್ಲರಿಗೂ ಸಮಾನವಾದ ಅಧಿಕಾರಗಳು, ಸಮಾನವಾದ ಅವಕಾಶಗಳನ್ನು, ಅದರಲ್ಲೂ ವಿಶೇಷವಾಗಿ ವಿಕಲಚೇತನರಿಗೂ ನೀಡುವುದೇ…

Read More

ತುರುವೇಕೆರೆ: ಕಾನೂನಾನತ್ಮಕವಾಗಿ ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಅಫಿಲಿಯೇಟೆಡ್ ಕಾಲೇಜುಗಳೆಂದು ಅನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಒದಗಿಸಲಾಗಿದ್ದು, 57 ವರ್ಷಗಳ ನಂತರ ರಾಜ್ಯದಲ್ಲಿ ಮೊಟ್ಟ ಮೊದಲ ಖಾಸಗಿ ಕೃಷಿ ಕಾಲೇಜು ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ತುರುವೇಕೆರೆ ತಾಲೂಕಿನ ಮಾಯಸಂದ್ರದಲ್ಲಿರುವ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನವರ ನೂತನ ಕೃಷಿ ಮಹಾವಿದ್ಯಾಲಯ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವರು, ಉತ್ತಮ ಗುಣಮಟ್ಟದ ಕೃಷಿ ಶಿಕ್ಷಣ ನೀಡಲು ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆ ಮುಂದೆ ಬಂದಿರುವುದು ಮೌಲ್ಯಯುತ ಶಿಕ್ಷಣ ನೀಡುವುದಕ್ಕೆ ಇದು ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು. 2023ರಲ್ಲಿ ಐ.ಸಿ.ಎ.ಆರ್. ರವರು ಖಾಸಗಿ ಕೃಷಿ ಕಾಲೇಜುಗಳನ್ನು ಪ್ರಾರಂಭಿಸಲು ಇತ್ತೀಚಿಗೆ ಪರಿಷ್ಕೃತ ಮಾನದಂಡಗಳನ್ನು ಪ್ರಕಟಿಸಿದ್ದು, ಸರ್ಕಾರದಿಂದ ಮಾನ್ಯತೆ ಪಡೆದ ಕೃಷಿ ವಿಶ್ವವಿದ್ಯಾಲಯಗಳು ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಪ್ರಾರಂಭಿಸಲು ಅರ್ಜಿ ಕರೆದು ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಸ್ಥಳೀಯ ವಿಚಾರಣಾ ಸಮಿತಿ ಮಾಡಿ ಖಾಸಗಿ ಮಹಾವಿದ್ಯಾಲಯವನ್ನು ಪ್ರಾರಂಭಿಸಲು ಅರ್ಜಿ ಹಾಕಿರುವ ಟ್ರಸ್ಟ್ ಅಥವಾ…

Read More

ಶ್ರವಣಬೆಳಗೊಳ: ಇಲ್ಲಿನ ದಿಗಂಬರ ಜೈನ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧ್ಯಕ್ಷರಾಗಿದ್ದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರ ನಿಷಿಧಿ ಮಂಟಪ ಲೋಕಾರ್ಪಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳವಾರ ಪಟ್ಟಣದ ಶ್ರೀ ಕಾನಜಿ ಭವನದಲ್ಲಿ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಪಂಡಿತಾಚಾರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ಜತೆ ಶಾಸಕ ಸಿ.ಎನ್.ಬಾಲಕೃಷ್ಣ ಪೂರ್ವಭಾವಿ ಸಭೆ ನಡೆಸಿ, ನಿಷಿಧಿ ಮಂಟಪ ಹಾಗೂ ವೇದಿಕೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಎನ್.ಬಾಲಕೃಷ್ಣ ಮಾತನಾಡಿ, ಪೂಜ್ಯ ಚಾರುಶ್ರೀಗಳವರು ಐದು ದಶಕಗಳ ಕಾಲ ಶ್ರೀಕ್ಷೇತ್ರದ ಪೀಠಾಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ಕ್ಷೇತ್ರದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಅವಿರತ ಶ್ರಮಿಸಿದ್ದರು. ಶ್ರವಣಬೆಳಗೊಳ ಧಾರ್ಮಿಕ ಕೇಂದ್ರವನ್ನು ಜೈನಕಾಶಿ ಎಂದು ವಿಶ್ವ ಪ್ರಸಿದ್ದಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅಭಿನವ ಚಾರುಶ್ರೀಗಳವರು ಹಿಂದಿನ ಹಿಂದಿನ ಸ್ವಾಮೀಜಿಯವರ ಸ್ಮರಣೆಯನ್ನು ಶಾಶ್ವತಗೊಳಿಸಲು ಶಿಲಾಮಯ ನಿಷಿಧಿ ಮಂಟಪವನ್ನು ಸ್ಥಾಪಿಸಿ, ಅಲ್ಲಿ ಪೂಜ್ಯರ ಶ್ರೀಚರಣ ಪಾದುಕೆ ಹಾಗೂ ಸ್ಮರಣ ಶಾಸನವನ್ನು ಪ್ರತಿಷ್ಠಾಪಿಸುತ್ತಿರುವುದು ಗುರುಭಕ್ತಿಯ…

Read More

ತುಮಕೂರು: ಭರತನಾಟ್ಯವು ಅತ್ಯಂತ ಜನಪ್ರಿಯ ಶಾಸ್ತ್ರೀಯ ನೃತ್ಯಗಳಲ್ಲಿ ಒಂದಾಗಿದ್ದು, ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಹೆಚ್ಚು ಜನಪ್ರಿಯವಾಗಿದೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಹೇಳಿದರು. ನಗರದ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನೀಲಾಲಯ ನೃತ್ಯ ಕೇಂದ್ರ ಹಾಗೂ ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ 23ನೇ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ್ದ ನೃತ್ಯ ನೀರಾಜನಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿವ ಮತ್ತು ಶಿವೆಯರಿಂದ ಪ್ರದರ್ಶಿಸಲ್ಪಟ್ಟ ಈ ದೈವ ಕಲೆ ಕಾಲಕ್ರಮೇಣ ಭರತಮುನಿಯಿಂದ ಭರತ ಭೂಮಿಯಲ್ಲಿ ಪಸರಿಸಿತು. ನಮ್ಮ ಪೋಷಕರು ಮತ್ತು ಗುರುಗಳು ಎಂದೊ ಹೇಳಿದ್ದ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದರು. ಹರಿಕಥಾ ವಿದ್ವಾನ್ ಡಾ.ಲಕ್ಷ್ಮಣ್ದಾಸ್ ಮಾತನಾಡಿ, ದೇಸಿ ಕಲೆಯನ್ನು ಬೆಳೆಸುವ ಈ ಕೆಲಸ ಬಾಲ ವಿಶ್ವನಾಥ್ ರವರು ಸದಾ ಮಾಡುತ್ತಾ ಬಂದಿದ್ದಾರೆ. ಇಂತಹ ಕಾರ್ಯಕ್ರಮಗಳು ಇನ್ನೂ ಹೆಚ್ಚಾಗಿ ಮೂಡಿ ಬರಬೇಕು ಎಂದರು. ನೀಲಾಲಯ ನೃತ್ಯ ಕೇಂದ್ರದ ಗುರುಗಳಾದ ಬಾಲಾ ವಿಶ್ವನಾಥ್ ರವರು ಶಾರದೆ…

Read More

ತುಮಕೂರು:  ಫೇಕ್‌ ನೋಟಿಸ್‌ ಎಂದು ಹೇಳುತ್ತಿರುವ ಬಿಜೆಪಿಯ ಕೆಲ ನಾಯಕರು ಹೇಳುತ್ತಿರುವುದರಲ್ಲಿ ಅರ್ಥವಿದೆಯೇ? ನಿನ್ನೆ ವಿಜಯೇಂದ್ರ ಸಹಿ ಮಾಡಿರುವುದು ಫೇಕ್‌ ನೋಟಿಸ್‌ ಗೆ ಎಂದು ಹೇಳುತ್ತಿರುವುದು ಮತ್ತು ಸಹಿ ಮಾಡುವುದು ಹುಡುಗಾಟವೇ ಅನಗತ್ಯವಾಗಿ ಮಾತನಾಡಬಾರದು ಎಂದು ಬಿಜೆಪಿ ಮುಖಂಡ ರೇಣುಕಾಚಾಯ ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಯಡಿಯೂರಿನ ಸಿದ್ದಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಿ ಪತ್ರಕತರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಪಕ್ಷಕ್ಕೆ ಒಳ್ಳೆಯದಾಗಲಿ ಎಂದು ಕಣ್ಣೀರು ಹಾಕಿದ್ದಾರೆ. ಅವರು ತ್ಯಾಗ ಮಾಡಿದ್ದರಿಂದಲೇ ಬಿಜೆಪಿ ಶಾಸಕರು, ಮತ್ತು ಸಚಿರಾಗಿದ್ದೆವು. ಅನಗತ್ಯವಾದ ಟೀಕೆಗೆ  ಜಗ್ಗಲ್ಲ ಬಗ್ಗಲ್ಲ, ವಿಜಯೇಂದ್ರ ನೇತೃತ್ವದಲ್ಲಿ ನಾವು ಚುನಾವಣೆಗೆ ಹೋಗುತ್ತೇವೆ ಎಂದರು. 2024ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಕಾಂಗ್ರೆಸ್‌ ವಿರುದ್ಧ ಹೋರಾಟ ಮಾಡಬೇಕಿದೆ. ಅನಗತ್ಯವಾಗಿ ಯಡಿಯೂರಪ್ಪ ಮತ್ತು ವಿಜೇಂದ್ರ ವಿರುದ್ಧ ಟೀಕೆ ಮಾಡಿದರೆ ದೊಡ್ಡವರಾಗುತ್ತೇವೆ ಎಂದು ಕೊಂಡಿದ್ದಾರೆ ಎಂದು ಟೀಕಿಸಿದರು. ಕುಮಾರಬಂಗಾರಪ್ಪ ಅವರನ್ನು ರಾಜಕೀಯವಾಗಿ ಪುನರ್‌ ವಸತಿ ತಂದು ಕೊಟ್ಟದ್ದು ಯಡಿಯೂರಪ್ಪ ಅವರು, ವಿಜೇಂದ್ರ ಅವರೇ ರಾಜ್ಯದ ಅಧ್ಯಕ್ಷರಾಗಿ ಮುಂದುವರೆಯಲಿದ್ದು ಅವರ…

Read More