Author: admin

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ,  ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಆಗಮನಕ್ಕೆ ಪ್ರಕೃತಿ ವಿಕೋಪದ ಬಿಸಿ ತಟ್ಟಿದೆ. ಹೌದು..! ಸಿಎಂ ಆಗಮನಕ್ಕೂ ಫಂಗಲ್ ಚಂಡಮಾರುತದ ಬಿಸಿ ತಟ್ಟಿದೆ.  ಮೋಡಕವಿದ ವಾತಾವರಣವಿರೋದರಿಂದ ಸಿಎಂ ಹೆಲಿಕಾಪ್ಟರ್ ಮೂಲಕ ಆಗಮನ ರದ್ದಾಗಿದೆ. ಮೋಡ ಮುಸುಕಿದ ವಾತವರಣ ಹಿನ್ನೆಲೆ ಹೆಲಿಕಾಪ್ಟರ್ ಜರ್ನಿ ರದ್ದಾದ ಹಿನ್ನೆಲೆ ಬೆಂಗಳೂರಿನಿಂದ ತುಮಕೂರಿಗೆ ರಸ್ತೆ ಮೂಲಕ ಸಿಎಂ ಸಿದ್ದರಾಮಯ್ಯ  ಆಗಮಿಸುತ್ತಿದ್ದಾರೆ. ಮೊದಲಿಗೆ ಪಿ.ಗೊಲ್ಲಹಳ್ಳಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ ನಲ್ಲಿ ಇದ್ದ ಮೂವರು ಮಹಿಳಾ ಪ್ರಯಾಣಿಕರು ಮೃತಪಟ್ಟಿರೋ ಘಟನೆ ಕಳ್ಳಂಬೆಳ್ಳ ಸಮೀಪ ಚಿಕ್ಕನಹಳ್ಳಿ ಸೇತುವೆ ಬಳಿ ನಡೆದಿದೆ. 1 ಮುಂಜಾನೆ 4 ಗಂಟೆಗೆ ಅಪಘಾತ ನಡೆದಿದ್ದು, ಪ್ರಯಾಣಿಕರು ನಿದ್ದೆಯ ಮಂಪರಿನಲ್ಲಿದ್ದರು. ಗೋವಾದಿಂದ — ಬೆಂಗಳೂರಿಗೆ ತೆರಳುತ್ತಿದ್ದ ಬಸ್ ತೆರಳುತ್ತಿತ್ತು. ಬಸ್ ನಲ್ಲಿ ಇದ್ದ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಳುಗಳನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಕೇವಲ ಪದವಿಗಾಗಿ ವಾಣಿಜ್ಯಶಾಸ್ತ್ರ ಅಧ್ಯಯನ ಮಾಡಬೇಡಿ. ವಾಣಿಜ್ಯೋದ್ಯಮಿಗಳಾದರೆ ಇಡೀ ಪ್ರಪಂಚವನ್ನೇ ಆಳಬಹುದು ಎಂದು ಕುಲಸಚಿವೆ ನಾಹಿದಾ ಜಮ್‌ ಜಮ್‌ ಹೇಳಿದರು. ತುಮಕೂರು ವಿವಿ ವಾಣಿಜ್ಯಶಾಸ್ತ್ರ ಅಧ್ಯಯನ ವಿಭಾಗವು ಶನಿವಾರ ಆಯೋಜಿಸಿದ್ದ ಪ್ರಥಮವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು. ಹೊಸ ಕಲ್ಪನೆಗಳು, ಆಲೋಚನೆಗಳಿಂದ ಸಂಪಾದನೆಯನ್ನು ವಿಶಿಷ್ಟ ರೀತಿಯಲ್ಲಿ ಮಾಡಬಹುದು. ಸ್ವಯಂ ಉದ್ಯೋಗದ ಕುರಿತು ವಿಚಾರ ಮಾಡಿ. ಪ್ರತಿ ದಿನಕ್ಕೂ ಬೆಲೆ ಇದೆ. ಮೃದು ಕೌಶಲ್ಯಗಳು, ಸಂವಹನದ ಕಡೆ ಗಮನಹರಿಸಿ ಎಂದು ಕಿವಿಮಾತು ಹೇಳಿದರು. ವಿವಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಅಧ್ಯಕ್ಷ ಪ್ರೊ.ಬಿ.ಶೇಖರ್, ಹಿರಿಯ ಪ್ರಾಧ್ಯಾಪಕರಾದ ಪ್ರೊ.ಪಿ.ಪರಮಶಿವಯ್ಯ, ಪ್ರೊ.ಜಿ.ಸುದರ್ಶನರೆಡ್ಡಿ, ಸಹ ಪ್ರಾಧ್ಯಾಪಕ ಡಾ.ಸುರೇಶ್ ಬಿ.ಕೆ., ಕರ್ನಾಟಕ ಕೇಂದ್ರಿಯ ವಿವಿಯ ಪ್ರಾಧ್ಯಾಪಕ ಪ್ರೊ.ದೇವರಾಜಪ್ಪಎಸ್., ಉಪನ್ಯಾಸಕ ವಿಜಯ್‌ ಎನ್. ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಆಯೋಜಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ / ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ.ಸೋಮಣ್ಣ, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ, ಇಂಧನ ಸಚಿವ ಕೆ.ಜೆ.ಜಾರ್ಜ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಗಣಿ ಮತ್ತು ಭೂವಿಜ್ಞಾನ…

Read More

ಬಳ್ಳಾರಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು ಹಾಗೂ ಒಬ್ಬ ವಕೀಲ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ವಿಡಪನಕಲ್‌ ನಲ್ಲಿ ಇಂದು ಮುಂಜಾನೆ ನಡೆದಿದೆ. ಬಳ್ಳಾರಿಯ ನಿವಾಸಿ ಡಾ.ಗೋವಿಂದರಾಜುಲು, ಡಾ.ಯೋಗೇಶ್‌ ಮತ್ತು ವಕೀಲ ವೆಂಕಟನಾಯ್ಡು (55) ಮೃತಪಟ್ಟವರಾಗಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವೈದ್ಯ ಅಮರೇಗೌಡ ಪಾಟೀಲ್‌ ಸ್ಥಿತಿ ಗಂಭೀರವಾಗಿದೆ. ವಿದೇಶಿ ಪ್ರವಾಸಕ್ಕೆ ತೆರಳಿದ್ದ ಇವರು ಕಳೆದ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಅನಂತಪುರ ಮಾರ್ಗವಾಗಿ ಕಾರಿನಲ್ಲಿ ಬಳ್ಳಾರಿಗೆ ವಾಪಸಾಗುತ್ತಿದ್ದ ವೇಳೆ ಮುಂಜಾನೆ 5.30ರ ಸಂದರ್ಭದಲ್ಲಿ ಅಪಘಾತ ನಡೆದಿದೆ. ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿಯಾಗಿದೆ ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮುಂಬೈ: ಅಶ್ಲೀಲ ಚಲನಚಿತ್ರಗಳ ಅಕ್ರಮ ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾಗೆ ನೋಟಿಸ್ ನೀಡಿದೆ. ಈ ವಾರ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಕುಂದ್ರಾಗೆ ನೋಟಿಸ್ ನೀಡಲಾಗಿದೆ.  ಅಲ್ಲದೇ ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರರಿಗೂ ನೋಟಿಸ್ ಜಾರಿ ಮಾಡಲಾಗಿದೆ. ಕುಂದ್ರಾ ವಿರುದ್ಧದ ಎರಡನೇ ಅಕ್ರಮ ಹಣ ವರ್ಗಾವಣೆ ಪ್ರಕರಣ ಇದಾಗಿದೆ. ಈ ವರ್ಷದ ಆರಂಭದಲ್ಲಿ ಇಡಿ ಕ್ರಿಪ್ರೋಕರೆನ್ಸಿ ಪ್ರಕರಣದಲ್ಲಿ ಕುಂದ್ರಾ ಮತ್ತು ಶೆಟ್ಟಿ ಅವರ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಆದಾಗ್ಯೂ, ದಂಪತಿಗಳು ಈ ಲಗತ್ತು ಆದೇಶದ ವಿರುದ್ಧ ಬಾಂಬೆ ಹೈಕೋರ್ಟ್‌ನಿಂದ ಪರಿಹಾರವನ್ನು ಪಡೆದರು. ಆಪಾದಿತ ಅಶ್ಲೀಲ ಚಿತ್ರಗಳ ದಂಧೆಯಲ್ಲಿ ಬಳಸಲಾದ ಹಾಟ್‌ಶಾಟ್ಸ್ ಅಪ್ಲಿಕೇಶನ್‌ ಅನ್ನು ಕಾನೂನಿನಡಿಯಲ್ಲಿ ಅಪರಾಧದೊಂದಿಗೆ ಸಂಪರ್ಕಿಸುವ ಪ್ರಾಸಿಕ್ಯೂಷನ್‌ (ಮುಂಬೈ ಪೊಲೀಸ್‌‍) ಬಳಿ ಒಂದು ಸಣ್ಣ ಸಾಕ್ಷ್ಯವೂ ಇಲ್ಲ ಎಂದು ಉದ್ಯಮಿ 2021 ರಲ್ಲಿ ಸ್ಥಳೀಯ ಮುಂಬೈ ನ್ಯಾಯಾಲಯಕ್ಕೆ ತಿಳಿಸಿದ್ದರು. ನಮ್ಮತುಮಕೂರಿನ…

Read More

ಪಂಜಾಬ್: ಕುರ್ ಆನ್ ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಎಎಪಿ ಶಾಸಕ ನರೇಶ್‌ ಯಾದವ್‌ ಗೆ ಪಂಜಾಬ್‌ ನ ಮಲೇರ್‌ ಕೋಟ್ಲಾ ಜಿಲ್ಲೆಯ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿದೆ. 2016ರಲ್ಲಿ  ನಡೆದಿದ್ದ ಈ ಪ್ರಕರಣದಲ್ಲಿ ನರೇಶ್‌ ಯಾದವ್‌ ದೋಷಿ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್  ನ್ಯಾಯಾಧೀಶ ಪರ್ಮಿಂದರ್‌ ಸಿಂಗ್‌ ಗ್ರೆವಾಲ್‌ ತೀರ್ಪು ನೀಡಿದ್ದು, ನಿನ್ನೆ ತೀರ್ಪು ಪ್ರಕಟಿಸಿದ್ದಾರೆ. ಶಿಕ್ಷೆ ಪ್ರಕಟವಾದಾಗ ನ್ಯಾಯಾಲಯಕ್ಕೆ ಹಾಜರಾದ ನರೇಶ್‌ ಯಾದವ್‌ಗೆ 11,000 ದಂಡವನ್ನೂ ವಿಧಿಸಲಾಗಿದೆ. ನ್ಯಾಯಾಲಯವು ಇತರ ಇಬ್ಬರಿಗೆ ಎರಡು ವರ್ಷಗಳ ಶಿಕ್ಷೆಯನ್ನು ಎತ್ತಿಹಿಡಿದಿದೆ – ವಿಜಯ್‌ ಕುಮಾರ್‌ ಮತ್ತು ಗೌರವ್‌ ಕುಮಾರ್‌ – ಮತ್ತು ಇನ್ನೊಬ್ಬ ಆರೋಪಿ ನಂದ್‌ ಕಿಶೋರ್‌ ಅವರನ್ನು ಕೆಳ ನ್ಯಾಯಾಲಯವು ಖುಲಾಸೆಗೊಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್‌ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ನಿನ್ನೆಯಿಂದ ತುಂತುರು ಮಳೆ ಆರಂಭವಾಗಿದ್ದು, ಇನ್ನೂ ಮೂರು ದಿನ ಮುಂದುವರೆಯುವ ಮುನ್ಸೂಚನೆಗಳಿವೆ. ಚಂಡಮಾರುತದ ಪರಿಣಾಮದಿಂದ ಆಗಾಗ್ಗೆ ತಂಪಾದ ಮೇಲೈ ಗಾಳಿ ಹಾಗೂ ತುಂತುರು ಮಳೆ ಬೀಳುವುದರಿಂದ ಹಗಲಿನಲ್ಲೂ ಚಳಿಯ ತೀವ್ರತೆ ಹೆಚ್ಚಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ವರದಿ ತಿಳಿಸಿದೆ. ಚಂಡಮಾರುತವು ತಮಿಳುನಾಡಿನ ಕಡಲೂರು, ಪಾಂಡಿಚೇರಿ ಬಳಿ ಇದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣವಾಗಿ ವ್ಯಾಪಕ ಮಳೆಯಾಗಿದೆ. ಕರಾವಳಿಯ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಅಲ್ಲಲ್ಲಿ ಹಗುರ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗ, ಕೋಲಾರ ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿ. 2 ಮತ್ತು 3 ರಂದು ಎಲ್ಲೋ ಅಲರ್ಟ್‌…

Read More

ಮುಂಬೈ: ನಮ್ಮ ಮೇಲಿನ ಪ್ರತಿ ದಾಳಿಯೂ ನಮ್ಮನ್ನು ಹಾಗೂ ನಮ್ಮ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಗೌತಮ್ ಅದಾನಿ ಹೇಳಿದ್ದಾರೆ. ಯುಎಸ್ ಡಿಪಾರ್ಟೆಂಟ್ ಆಫ್ ಜಸ್ಟೀಸ್ ಮತ್ತು ದೋಷಾರೋಪಣೆಯಿಂದ ವಂಚನೆ ಆರೋಪ ಎದುರಿಸುತ್ತಿರುವ ಅವರು,  ನಮ್ಮ ಕಂಪನಿಯು ಅನುಸರಣೆಗೆ ಬದ್ಧವಾಗಿದೆ ಮತ್ತು ಪ್ರತಿ ದಾಳಿಯು ನಮನ್ನು ಬಲಪಡಿಸುತ್ತದೆ ಎಂದು ಹೇಳಿದ್ದಾರೆ. ಎರಡು ವಾರಗಳ ಹಿಂದೆ, ನಾವು ಅದಾನಿ ಗ್ರೀನ್ ಎನರ್ಜಿಯಲ್ಲಿ ಅನುಸರಣೆ ಅಭ್ಯಾಸಗಳ ಬಗ್ಗೆ ಯುಎಸ್ನಿಂದ ಆರೋಪಗಳನ್ನು ಎದುರಿಸಿದ್ದೇವೆ. ನಾವು ಇಂತಹ ಸವಾಲುಗಳನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ. ನಾನು ನಿಮಗೆ ಹೇಳಬಲ್ಲದು ಪ್ರತಿ ದಾಳಿಯು ನಮನ್ನು ಬಲಪಡಿಸುತ್ತದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಾನು ಜೆಡಿಎಸ್ ಪಕ್ಷವನ್ನು ಬಿಡಲಿಲ್ಲ. ನನ್ನನ್ನು ಪಕ್ಷದಿಂದ ಉಚ್ಚಾಟಿಸಲಾಯಿತು. ಅನಂತರ ನನಗೆ ಬೇರೆ ದಾರಿ ಇಲ್ಲದೆ ಅಹಿಂದ ಸಂಘಟನೆ ಮಾಡಿದ್ದೆ. ಈಗ ಹಾಸನದಲ್ಲಿ ಸಮಾವೇಶ ನಡೆಸುತ್ತಿರುವುದರ ಹಿಂದೆ ಇಡೀ ರಾಜ್ಯದ ಜನರಿಗೆ ಕೃತಜ್ಞತೆ ಸಲ್ಲಿಸುವ ಉದ್ದೇಶ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಂಗಲ್ ಹನುಮಂತಯ್ಯ ಅವರ ಪುಣ್ಯಸರಣೆ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿ ಸಂಘಟನೆಗಳು ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ. ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಆಹ್ವಾನಿಸಲಾಗಿದೆ. ಪಕ್ಷ ಸಮಾವೇಶದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ ಎಂದು ಹೇಳಿದರು. ಹಿಂದೆ ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಿದಾಗ ನಾನು ಏನು ಮಾಡಬೇಕಿತ್ತು? ವಿರೋಧ ಮಾಡುವ ಸಲುವಾಗಿ ಅಹಿಂದ ಸಂಘಟನೆ ಮಾಡಬೇಕಾಯಿತು. ಜಾತ್ಯತೀತ ಜನತಾದಳ ಪಕ್ಷ ಕಟ್ಟಿದವರು ನಾವು. ಈಗ ಕೋಮುವಾದಿಗಳ…

Read More