Author: admin

ಬೆಂಗಳೂರು: ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಮುಂದಿನ ಫೆಬ್ರವರಿ ವೇಳೆಗೆ ತಯಾರಿ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಮತದಾರರ ಪಟ್ಟಿ ಕೂಡ ಸಿದ್ಧಗೊಳ್ಳುತ್ತಿದೆ. ಚುನಾವಣೆಯನ್ನಂತು ನಿಲ್ಲಿಸಲು ಸಾಧ್ಯವಿಲ್ಲ. ಫೆಬ್ರವರಿಯಲ್ಲಿ ಮತದಾನದ ಸಾಧ್ಯತೆ ಇದೆ ಎಂದರು. ಸಚಿವ ಸಂಪುಟ ಪುನರ್ ರಚನೆ ಚರ್ಚೆಯೇ ಇಲ್ಲ. ಅದರ ಅವಶ್ಯಕತೆಯೂ ಇಲ್ಲ. ಸಂಪುಟದಲ್ಲಿ ಒಂದು ಸ್ಥಾನ ಮಾತ್ರ ಖಾಲಿ ಇದೆ. ಬೆಳಗಾವಿಯ ಅಧಿವೇಶನದ ಬಳಿಕ ಅದನ್ನು ಭರ್ತಿ ಮಾಡುವ ಬಗ್ಗೆ ಪರಿಶೀಲಿಸಲಾಗುತ್ತಿದೆ.ಸಂಪುಟ ಪುನರ್ ರಚನೆಯಂತೂ ಸದ್ಯಕ್ಕಿಲ್ಲ ಎಂದು ಹೇಳಿದರು. ರಾಜ್ಯ ಸರ್ಕಾರದ ಸಚಿವರ ಕಾರ್ಯವೈಖರಿ ನಡವಳಿಕೆಗಳ ಮೇಲೆ ನಿಗಾ ವಹಿಸಲು ಹೈಕಮಾಂಡ್ ತನ್ನದೇ ಆದ ವ್ಯವಸ್ಥೆಯನ್ನು ಹೊಂದಿದೆ. ನಾನು ಈ ಕುರಿತು ವರದಿ ನೀಡುವ ಅಗತ್ಯವಿಲ್ಲ ಎಂದರು. ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಇತಿಹಾಸವಿದೆ.…

Read More

ತುಮಕೂರು: ತುಮಕೂರಿನಲ್ಲಿ ಡಿಸೆಂಬರ್ 2ರಂದು ನಡೆಯಲಿರುವ  ಮುಖ್ಯಮಂತ್ರಿ ಕಾರ್ಯಕ್ರಮದ ಸಮಾವೇಶದಲ್ಲಿ ‘ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದ್ರೆ 1ಲಕ್ಷ ಬಹುಮಾನ ಕೊಡ್ತೀನಿ.’ ಅಲ್ಲದೆ ಒಟ್ಟು 10 ಲಕ್ಷ ರೂ.ಗಳನ್ನು ಇದಕ್ಕಾಗಿ ತೆಗೆದಿರಿಸಿದ್ದೇನೆ ಎಂದು ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಆಡಿಯೋ ಬಾರಿ ವೈರಲ್ ಆಗಿದ್ದು ಇದಕ್ಕೆ ಮಾಜಿ ಶಾಸಕ ಗೌರಿಶಂಕರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸುರೇಶ ಗೌಡ ಬಹುಮಾನ ಘೋಷಣೆ ಮಾಡಿದ್ದಾರೆ ಎಂದು ಸುರೇಶ್ ಗೌಡ ಮಾತನಾಡಿದ ಆಡಿಯೋವನ್ನು  ಮಾಜಿ ಶಾಸಕ ಗೌರಿಶಂಕರ್ ಬಿಡುಗಡೆ ಮಾಡಿದ್ದಾರೆ. ಅನುದಾನ ತಾರತಮ್ಯ ವಿರೋಧಿಸಿ ಸಿಎಂ ವಿರುದ್ಧ ಬಿಜೆಪಿ ಜೆಡಿಎಸ್ ಶಾಸಕರು ಪ್ರತಿಭಟನೆಗೆ ಮುಂದಾಗಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ ವೇಳೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದರು. ಸಿಎಂ ಸಿದ್ದರಾಮಯ್ಯ ಸಮಾರಂಭಕ್ಕೆ ಬಿಜೆಪಿ ಧಿಕ್ಕಾರ ಕೂಗಿ ತಡೆಯೊಡ್ಡಲು ಪ್ಲಾನ್ ಮಾಡಿದೆ. ಈ ನಡುವೆ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ ಮಾತಾನಾಡಿರುವ…

Read More

ಪಾವಗಡ: ತಾಲ್ಲೂಕಿನ ನಿಡಗಲ್ ವಲಯದ‌ ಮದ್ದೆ ಗ್ರಾಮದಲ್ಲಿ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ ಹಾಗೂ ಧಾಮಿ೯ಕ  ಸಭಾ ಕಾರ್ಯಕ್ರಮವನ್ನ‌‌ ಕೆ.ಎಂ.ಪ್ರಭಾಕರ ಪಾವಗಡ  ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,  ಸವ೯ಜನಾಂಗಗಳ ಎಲ್ಲಾ ವಗ೯ಗಳ‌ ಜನರು ಕೂಡಿಕೊಂಡು ಸರಳ ಸಾಮೂಹಿಕ‌ ಸತ್ಯನಾರಾಯಣ ಪೂಜೆ‌ಗೆ ಅವಕಾಶ ಮಾಡಿ ಕೊಟ್ಟಂತಹ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರಿಗೆ ನಿಮ್ಮೆಲ್ಲರ ಪರವಾಗಿ‌ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆಂದು ತಿಳಿಸಿದರು. ಪಾವಗಡ ತಾಲೂಕಿನ ಮಾನ್ಯ ತಾಲೂಕು ಯೋಜನಾಧಿಕಾರಿಗಳಾದ ಮಹೇಶ್ ರವರು ಪೂಜ್ಯರ ದೂರದೃಷ್ಠಿ‌ ಆಶಯದಂತೆ‌ ನಮ್ಮ ತಾಲ್ಲೂಕಿನಲ್ಲಿ ಸ್ವ –ಸಹಾಯ ಸಂಘಗಳ ಮೂಲಕ ಯೋಜನೆಯಿಂದ ಅನುಷ್ಠಾನಗೊಳ್ಳುವ ಅನೇಕ ಜನಪರ ಕಾಯ೯ಕ್ರಮಗಳ  ನಮ್ಮೂರ ನಮ್ಮ ಕೆರೆ ಜ್ಞಾನವಿಕಾಸ ಕಾರ್ಯಕ್ರಮಗಳು ಲಾಭಾಂಶ ವಿತರಣೆ, ಸುಜ್ಞಾನ ಶಿಷ್ಯ ವೇತನ  ಜ್ಞಾನದೀಪ. ಶಿಕ್ಷಕರ ನಿಯೋಜನೆ ಸಿ ಎಸ್ ಸಿ ಕಾರ್ಯಕ್ರಮಗಳು ಇನ್ನೂ  ಇತ್ಯಾದಿ ವಿಷಯಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ‌‌ ಆಶೀವ೯ಚನ ನೀಡಿ ಮಾತನಾಡಿದ ಕೊರಟಗೆರೆ ಪೂಜ್ಯ ಬಸವಮಹಾಲಿಂಗ ಮಹಾಸ್ವಾಮಿಗಳು, ‌ ಧಮ೯ಸ್ಥಳದ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರ ಮಾಗ೯ದಶ೯ನದಲ್ಲಿ ಸಾವ೯ಜನಿಕರ ಸಹಭಾಗಿತ್ವದಲ್ಲಿ…

Read More

ಪಾವಗಡ: ಕೆ.ಟಿ.ಹಳ್ಳಿ ಗ್ರಾಮ ಪಂಚಾಯಿತಿ  ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ನರಸಿಂಹಮೂರ್ತಿ (ಸಣ್ಣಪ್ಪ)ರವರು ಆಯ್ಕೆಯಾಗಿದ್ದಾರೆ. ಕೆ.ಟಿ‌.ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ್ ರವರು ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಸ್ಥಾನವು ತೆರವುಗೊಂಡಿತ್ತು.  ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 16 ಜನ ಸದಸ್ಯರಿದ್ದು ಅದರಲ್ಲಿ ಜೆಡಿಎಸ್ ಬೆಂಬಲಿತ 11 ಕಾಂಗ್ರೆಸ್ ಬೆಂಬಲಿತ ಐದು ಜನ ಗ್ರಾಮ ಪಂಚಾಯಿತಿ ಸದಸ್ಯರಿದ್ದರು ಇಂದು ನಡೆದ ಚುನಾವಣೆಯಲ್ಲಿ ಒಟ್ಟು 15 ಜನ ಸದಸ್ಯರ ಭಾಗವಹಿಸಿದ್ದು  ಭಾಗವಹಿಸಿದ್ದು ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಜುನಾಥ್ ಅವರಿಗೆ ಮೂರು ಮತಗಳ ಲಭಿಸಿದ್ದು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನರಸಿಂಹಮೂರ್ತಿ (ಸಣ್ಣಪ್ಪ) ಅವರಿಗೆ 12 ಮತಗಳನ್ನು ಪಡೆದು ಅಧ್ಯಕ್ಷ ಸ್ಥಾನಕ್ಕೆ ಜಯಶೀಲರಾದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಮ್. ತಿಮ್ಮರಾಯಪ್ಪ ಮಾತನಾಡಿ, ನಿರೀಕ್ಷೆ ಅಂತೆ ನಮ್ಮ ಪಕ್ಷದ ಅಭ್ಯರ್ಥಿ ಜಯಗಳಿಸಿದ್ದು, ನಮ್ಮ ಪಕ್ಷದ ಸದಸ್ಯರು ಹಾಗೂ ಅಧ್ಯಕ್ಷರು ಗ್ರಾಮ ಪಂಚಾಯಿತಿಯಲ್ಲಿ ಜನರಿಗೆ ಉತ್ತಮ ಆಡಳಿತ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ…

Read More

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅನ್ಯಭಾಷಿಗರೊಂದಿಗಿನ ಪ್ರೀತಿ ಪ್ರೇಮದ ಬಗ್ಗೆ  ಮಾತನಾಡಿದ್ದು, ಪ್ರೇಮಿಗಳಿಗೆ ವಿಶೇಷ ಸಲಹೆ ನೀಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರು, ಬೇರೆ ಭಾಷೆಯವರೊಂದಿನ ಕನ್ನಡಿಗರ ಪ್ರೀತಿ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಬೇರೆ ಭಾಷೆಯ ಹುಡುಗಿಯರನ್ನು ಪ್ರೀತಿ ಮಾಡುವ ಕನ್ನಡದ ಹುಡುಗರು, ಮೊದಲು ಅವರು ಕನ್ನಡವನ್ನು ಪ್ರೀತಿಸುವಂತೆ ಕೇಳಬೇಕು, ಬಳಿಕ ನೀವು ಅವರನ್ನು ಪ್ರೀತಿ ಮಾಡುವುದಾಗಿ ಹೇಳಿ ಎಂದು ಸಲಹೆ ಕೊಟ್ಟಿದ್ದಾರೆ. ಈ ವಿಚಾರದಲ್ಲಿ ಯಾರಿಗೂ ಹೆದರಬೇಡಿ. ನಿಮ್ಮ ಪ್ರೀತಿಯು ಕನ್ನಡದ ಮುಖೇನವಾಗಿಯೇ ಸಾಗಲಿ ಎಂದು ಹೇಳಿದ್ದಾರೆ. ಕನ್ನಡವನ್ನು ಯಾರು ಪ್ರೀತಿಸುತ್ತಾರೋ ಅವರನ್ನು ಕನ್ನಡಿಗರೂ ಪ್ರೀತಿಸುತ್ತಾರೆ ಎಂದು ಟಿ.ಎ.ನಾರಾಯಣಗೌಡರು ಒತ್ತಿ ಹೇಳಿದ್ದಾರೆ. ಮಾಸ್ತಿಯವರ ಮಾತೃಭಾಷೆ ತಮಿಳು,  ದ.ರಾ.ಬೇಂದ್ರೆಯವರ ಮಾತೃಭಾಷೆ ಮರಾಠಿ, ಟಿ.ಪಿ.ಕೈಲಾಸಂ ಅವರ ಮಾತೃಭಾಷೆ ತಮಿಳು, ಈ ಕನ್ನಡದ ಶಾಲು ಕೊಟ್ಟ ಮ.ರಾಮಮೂರ್ತಿ ಅವರ ಮಾತೃಭಾಷೆ ತೆಲುಗು. ಅವರೆಲ್ಲ ಕನ್ನಡವನ್ನು ಪ್ರೀತಿಸಿದರು, ಕನ್ನಡಿಗರೂ…

Read More

ಗುಜರಾತ್: ನ್ಯಾಯಮೂರ್ತಿಗಳಿಗೆ ಲಂಚ ಕೊಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿರುವ ಘಟನೆಯೊಂದು ಗುಜರಾತ್ ನಲ್ಲಿ ನಡೆದಿದ್ದು, ಆರೋಪಿಯು ಮುಚ್ಚಿದ ಲಕೋಟೆಯಲ್ಲಿ ನ್ಯಾಯಮೂರ್ತಿಗೆ ಲಂಚ ನೀಡಿದ್ದು,  ತಕ್ಷಣವೇ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಗುಜರಾತ್‌ ನ ಗೋಧ್ರಾದಲ್ಲಿ ವಿಚಾರಣೆಯ ವೇಳೆ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಿಗೆ ಆರೋಪಿ ಬಾಪುಭಾಯಿ ಸೋಲಂಕಿ  35,000 ರೂಪಾಯಿ ಲಂಚ ನೀಡಲು ಮುಂದಾಗಿದ್ದಾನೆ. ತನ್ನ ಪ್ರಕರಣದ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಲಂಚ ನೀಡುವ ಮೂಲಕ ಆರೋಪಿ ಕೇಳಿಕೊಂಡಿದ್ದ. ಮಹಿಸಾಗರ ಜಿಲ್ಲೆಯ ವೀರ್‌ಪುರ ತಹಸಿಲ್‌ನ ಸರಡಿಯಾ ಗ್ರಾಮದ ನಿವಾಸಿ ಸೋಲಂಕಿ 2023 ರಿಂದ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ಎದುರಿಸುತ್ತಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪನಮ್ ಯೋಜನೆಯಡಿ ಭದರ್‌ ಕಾಲುವೆ ವಿತರಣಾ ಉಪವಿಭಾಗದ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಈ ಪ್ರಕರಣದ ವಿಳಂಬದಿಂದ ಹತಾಶೆಗೊಂಡು ಶೀಘ್ರವೇ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ವಿಚಾರಣೆಯ ಸಮಯದಲ್ಲಿ, ಸೋಲಂಕಿ ಲಕೋಟೆಯೊಂದಿಗೆ ನ್ಯಾಯಾಧೀಶರನ್ನು ಸಂಪರ್ಕಿಸಿ ತ್ವರಿತ ವಿಚಾರಣೆಗೆ ವಿನಂತಿಸಿದ್ದ. ನ್ಯಾಯಾಧೀಶರು ಲಕೋಟೆಯನ್ನು ಸ್ವೀಕರಿಸಲು ನಿರಾಕರಿಸಿ ಅದನ್ನು ತೆರೆದು ತೋರಿಸುವಂತೆ ಸೋಲಂಕಿಗೇ ಸೂಚಿಸಿದಾಗ ಅದರಲ್ಲಿ ನಗದು ಇದ್ದದ್ದು…

Read More

ಬೀದರ್: ಶಾಲಾ ವಿದ್ಯಾರ್ಥಿಗಳಿಗೆ ತುರ್ತು ಸಂದರ್ಭಗಳಲ್ಲಿ ತಕ್ಷಣ ಸಂಪರ್ಕಿಸಲು ಮಕ್ಕಳ ಸಹಾಯವಾಣಿ, ಪೊಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಮತ್ತಿತರ ವಿಷಯಗಳ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಚಿಂತಾಕಿ ಪೊಲೀಸರು ತೆರೆದ ಮನೆ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಿದರು. ಚಿಂತಾಕಿ ಪೊಲೀಸ್ ಠಾಣೆಯ ಪಿಎಸ್ ಐ ಬಸವರಾಜ ಕೋಟೆ  ತಮ್ಮ ಠಾಣೆಯ ಸಿಬ್ಬಂದಿರವರೊಂದಿಗೆ ಶ್ರೀ ಗುರುಪಾದಪ್ಪ ನಾಗಮಾರಪಳ್ಳಿ ಪ್ರೌಢ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಚಿಂತಾಕಿ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ರವರ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಪಟ್ಟಣದ ಕೆಂಪೇಗೌಡ ರಸ್ತೆಯ ಅಮರಾಜ್ಯೋತಿನಗರದಲ್ಲಿ ಇರುವ ಶ್ರೀಶನೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಸತತ 14ನೇ ವರ್ಷದ ಲಕ್ಷದೀಪೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಕ್ತಾದಿಗಳು ಆಗಮಿಸಿ ದೀಪ ಹಚ್ಚಿ ಶ್ರೀ ಶನೇಶ್ವರ ಸ್ವಾಮಿರವರನ್ನು ಪ್ರಾರ್ಥಿಸಿದರು. ಶ್ರೀ ಶನೇಶ್ವರ ಸ್ವಾಮಿ ರವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು . ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಪಾವಗಡ: ಪಟ್ಟಣದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಿಸಿರುವ ಪಾವನಗಂಗಾ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಕ್ರೀಡಾಕೂಟದ ಮೈದಾನಕ್ಕೆ ಶನಿವಾರದಂದು ಸ್ವಾಮಿ ಜಪಾನಂದ ಹಾಗೂ ಸ್ಥಳೀಯ  ಶಾಸಕರಾದ ಹೆಚ್.ವಿ.ವೆಂಕಟೇಶ್  ಉದ್ಘಾಟನೆ ನೆರವೇರಿಸಿ ಚಾಲನೆ ನೀಡಿದರು. ಇದೇ ವೇಳೆ NSS ಶಿಬಿರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ಶಾಸಕರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೇಶ್ ಬಾಬು, ಪುರಸಭಾ ಅಧ್ಯಕ್ಷರಾದ ರಾಜೇಶ್, ಮಾಜಿ ಅಧ್ಯಕ್ಷರಾದ ಶಂಕರ್ ರೆಡ್ಡಿ, ಸದಸ್ಯ ಎನ್. ರವಿ, ಸಮಾಜ ಸೇವಕರಾದ ಬತ್ತಿನೇನಿ ನಾಗೇಂದ್ರ ರಾವ್, ಶ್ರೀನಿವಾಸ್ ನಾಯಕ್, ಪ್ರಾಂಶುಪಾಲ ಶಿವಾನಂದಯ್ಯ,  ನಿಕಟ ಪೂರ್ವ ಪ್ರಾಂಶುಪಾಲ ಮಾರಪ್ಪ ಕೆ.ಓ., ಜಿ.ಸಿ. ದೇವರಾಜ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳಾದ ಮೈಲಾಪ್ಪ, ಜಯರಾಮಪ್ಪ, ಮಂಜುಳಾ, ರಂಗನಾಥ್ ಎಂ, ಸ್ಟುಡಿಯೋ ಅಮರ್ ,ಅಶೋಕ್  ಸೇರಿ ಇನ್ನೂ ಮುಂತಾದವರು ಇದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಕೊಡಗು, ಮಡಿಕೇರಿ ಲಯನ್ಸ್ ಸಂಸ್ಥೆ, ರೋಟರಿ ಸಂಸ್ಥೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಫ್‍ಎಂಕೆಎಂಸಿ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್, 02 ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಹಕ್ಕುಗಳನ್ನು ಪಡೆಯಲು ಸರಿಯಾದ ಮಾರ್ಗ ಅನುಸರಿಸೋಣ, ನನ್ನ ಆರೋಗ್ಯ ನನ್ನ ಹಕ್ಕು’ ಎಂಬ ಘೋಷವಾಕ್ಯದೊಂದಿಗೆ ‘ವಿಶ್ವ ಏಡ್ಸ್ ದಿನದ’ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ ನಡೆಯಲಿದೆ. ಜಾಥಾಗೆ ಪ್ರಧಾನ ಜಿಲ್ಲಾ ಮತ್ತು…

Read More