Author: admin

ತುಮಕೂರು:  ರೈತರೊಬ್ಬರ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಲಂಚಕ್ಕಾಗಿ ಬೇಡಿಕೆ ಇರಿಸಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದ  ಗ್ರಾಮ ಪಂಚಾಯತ್ ಇಬ್ಬರು ಅಧಿಕಾರಿಗಳಿಗೆ ನ್ಯಾಯಾಲಯ ಆರೋಪಿಗಳಿಬ್ಬರಿಗೆ  ತಲಾ ಮೂರುವರೆ ವರ್ಷ ಕಠಿಣ ಕಾರಾಗೃಹ ಶಿಕ್ಷೆ ದಂಡ ವಿಧಿಸಿ ತೀರ್ಪು ನೀಡಿದೆ. ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ  ರಶ್ಮಿ ಮತ್ತು ಗ್ರಾಮ ಸಹಾಯಕ  ಹೆಚ್.ಎನ್.ಪ್ರಕಾಶ್ ಅವರ ಮೇಲಿನ ಆರೋಪ ಸಾಬೀತಾಗಿದೆ. ಮೊದಲ ಆರೋಪಿಗೆ ಇಪ್ಪತ್ತು ಸಾವಿರ ರೂ. ದಂಡ, ಎರಡನೇ ಆರೋಪಿಗೆ ಹತ್ತು ಸಾವಿರ ರೂ. ದಂಡ ವಿಧಿಸಿದೆ. ಭೀಮಸಂದ್ರ ಗ್ರಾಮದ ವಾಸಿ ದೂರುದಾರರಾದ  ಡಿ.ನಾಗರಾಜು ಎಂಬುವರು ಭೀಮಸಂದ್ರ ಗ್ರಾಮದ ಸರ್ವೆ ನಂಬರ್:32/2ಎ7 ರಲ್ಲಿ 03 ಗುಂಟೆ ಜಮೀನನ್ನು ಕ್ರಯಕ್ಕೆ ಖರೀದಿ ಮಾಡಿದ್ದು, ಈ ಜಮೀನಿನ ಖಾತೆ ಮತ್ತು ಪಹಣಿ ವರ್ಗಾವಣೆ ಮಾಡಿಕೊಡಲು ಹೆಗ್ಗರೆ ಕಂದಾಯ ವೃತ್ತದ ಗ್ರಾಮ ಆಡಳತಾಧಿಕಾರಿಯಾಗಿದ್ದ ರಶ್ಮಿ  12,000/- ರೂ. ಲಂಚದ ಹಣಕ್ಕೆ ಬೇಡಿಕೆ ಇರಿಸಿದ್ದರು. 28/09/2021 ರಂದು ಮದ್ಯಾಹ್ನ ಹೆಗ್ಗೆರೆಯಲ್ಲಿರುವ…

Read More

ಕೊಟ್ಟಿಗೆಹಾರ : ನಾಯಿ ದಾಳಿ ನಡೆಸಿದ ಪರಿಣಾಮ 5 ವರ್ಷದ ಬಾಲಕಿ ಗಾಯಗೊಂಡ ಘಟನೆ ಬಗ್ಗಸಗೋಡು ಗ್ರಾಮದಲ್ಲಿ ನಡೆದಿದೆ. ಮನೆ ಮುಂಭಾಗ ಎಂದಿನಂತೆ ಅಟವಾಡುತ್ತಿದ್ದ ಸಹನಾ ಎಂಬ ಮಗುವಿನ ಮೇಲೆ ನಾಯಿ ದಾಳಿ ನಡೆಸಿದೆ. ನಾಯಿ ದಾಳಿ ನಡೆಸಿದ ಪರಿಣಾಮ ಮಗುವಿನ ಕೆನ್ನೆ ಕಣ್ಣಿನ ಭಾಗದಲ್ಲಿ ಗಾಯವಾಗಿದೆ ಅದೃಷ್ಟವಶಾತ್ ಮಗುವಿನ ಕಿರುಚಾಟ ಕೇಳಿ ಪಾಲಕರು ತಕ್ಷಣಕ್ಕೆ ಬಂದ ಕಾರಣ ನಾಯಿಯಿಂದ ಮಗುವನ್ನು ರಕ್ಷಿಸಿದ್ದಾರೆ. ಆಗಬಹುದಾಗಿದ್ದ ದೊಡ್ಡ ಅನಾಹುತ ದಿಂದ ಮಗು ಪರಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಗುವಿನ ತಂದೆ ಸುಂದ್ರೇಶ್ ಇತ್ತೀಚೆಗೆ ನಾಯಿಗಳ ಉಪಟಳ ಹೆಚ್ಚಾಗಿದೆ ಸಾಕು ನಾಯಿಗಳು ಬೀದಿ ನಾಯಿಗಳು ರಸ್ತೆಯಲ್ಲಿ ಹೋಗುವ ಜನರ ಮೇಲೆ ದಾಳಿ ಮಾಡುತ್ತಿವೆ ದಯಮಾಡಿ ಆದಷ್ಟು ಬೇಗ ನಾಯಿಗಳನ್ನು ಸ್ಥಳಾಂತರಿಸುವ ಕೆಲಸ ಆಗಬೇಕಿದೆ ಮುಂದೆ ಈ ರೀತಿಯ ಘಟನೆ ನಡೆಯದಂತೆ ಜನಪ್ರತಿನಿದಿನಗಳು. ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಮಂಗಳೂರು: ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಮಂಗಳೂರು ನಗರ ಪೊಲೀಸ್ ಸ್ಪೆಷಲ್ ಟಾಸ್ಕ್ ಫೋರ್ಸ್ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ‌ ಮಾಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ಮಂಗಳೂರಿನ ಅತ್ತಾವರದಲ್ಲಿ ಮಂಗಳೂರು ನಗರ ಪೊಲೀಸ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ನೂತನ ಪೊಲೀಸ್ ವಸತಿ ಗೃಹ ಸಮುಚ್ಛಯಗಳು ಹಾಗೂ ಸುಬ್ರಹ್ಮಣ್ಯ ಮತ್ತು ಬಂಟ್ವಾಳ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೊಲೀಸ್ ಇಲಾಖೆಯಲ್ಲಿ ಬಹಳ ಸವಾಲುಗಳಿವೆ. ಸಮಾಜಕ್ಕೆ ಅತ್ಯಂತ ಅಪಾಯಕಾರಿ ಕೋಮುವಾದಿ ಶಕ್ತಿಗಳನ್ನು ಬೆಳೆಯಲು ಬಿಡಬಾರದು.‌ ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ‌ ನೀಡಿದ್ದೇನೆ ಎಂದರು. ಪಕ್ಷವು ಚುನಾವಣಾ ಪ್ರಣಾಳಿಕೆಯನ್ನು ಬರೆಯುವ ಜವಾಬ್ದಾರಿಯನ್ನು ನನಗೆ ವಹಿಸಿದ್ದರು. ಪ್ರತಿ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಮಂಗಳೂರಿಗೆ ಆಗಮಿಸಿದ್ದಾಗ ವಿದ್ಯಾರ್ಥಿಗಳು, ಸಾರ್ವಜನಿಕರು ಭೇಟಿ ಮಾಡಿದ್ದರು. ಮಕ್ಕಳನ್ನು ಓದಿಸಲು ಬೇರೆ ಕಡೆ ಕಳುಹಿಸುವ ಪರಿಸ್ಥಿತಿ ಬಂದಿದೆ. ಉದ್ಯಮಗಳಿಗೆ ಹೂಡಿಕೆ ಮಾಡಲು ಬರುತ್ತಿಲ್ಲ ಎಂಬುದು ಗಮನಕ್ಕೆ…

Read More

ಬೆಂಗಳೂರು: ಮಕ್ಕಳ ವಿಷಯಾಧಾರಿತ ಪುಷ್ಪ ಪ್ರದರ್ಶನವು ಬೆಂಗಳೂರಿನ ಕಬ್ಬನ್‌ ಉದ್ಯಾನದ ಆವರಣದಲ್ಲಿ ಆರಂಭವಾಗಿದ್ದು, ಡಿಸೆಂಬರ್‌ 1ರ ವರೆಗೆ ಇರಲಿದೆ. ಇಲ್ಲಿ ವಿವಿಧ ಬಗೆಯ ಅಲಂಕಾರಿಕ, ದೇಶಿ — ವಿದೇಶಿ ಹೂ ಕುಂಡಗಳು ಗಮನ ಸೆಳೆಯುತ್ತಿದೆ. ಹೂಗಳ ರಾಶಿಯಲ್ಲಿ ಅರಳಿದ ರಾಕೆಟ್‌, ನವಿಲು, ಚಿಟ್ಟೆ ಸೇರಿದಂತೆ ವಿವಿಧ ಕಲಾಕೃತಿಗಳು ಚಿಣ್ಣರನ್ನು ಆಕರ್ಷಿಸುತ್ತಿವೆ. ಬೆಳಗ್ಗೆ 6 ರಿಂದ ಸಂಜೆ 7ರ ವರೆಗೆ ಪ್ರದರ್ಶನ ನಡೆಯಲಿದ್ದು, ಉಚಿತ ಪ್ರವೇಶವಿರಲಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಚಿಕ್ಕಮಗಳೂರು: ಜಲಜೀವನ್ ಮಿಷನ್ ಕಾಮಗಾರಿಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸಿ. ಶೀಘ್ರವಾಗಿ ಸಾರ್ವಜನಿಕರಿಗೆ ಉತ್ತಮ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ವ್ಯಾಪ್ತಿಯ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು. ಕೇಂದ್ರ ಸರ್ಕಾರವು ಹರ್ ಘರ್ ಜಲ್ ಎಂಬ ಘೋಷಣೆಯೊಂದಿಗೆ ದೇಶದ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೆ ಟ್ಯಾಪ್ ಸಂಪರ್ಕಗಳ ಮೂಲಕ ಸುರಕ್ಷಿತ ಹಾಗೂ ಸಮರ್ಪಕ  ಕುಡಿಯುವ ನೀರಿನ ಸಂಪರ್ಕ ಕಲ್ಪಿಸಿ ನೀರಿನ ಸಮಸ್ಯೆಯನ್ನು ಹೋಗಲಾಡಿಸುವ ಉದ್ದೇಶದಿಂದ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯ ಕಾಮಗಾರಿಯನ್ನು ಪ್ರದೇಶಕ್ಕೆ ತಕ್ಕಂತೆ ವೈಜ್ಞಾನಿಕವಾಗಿ ಯೋಜನೆ ಸಿದ್ದಪಡಿಸಿ ಕಾಮಗಾರಿಯನ್ನು ಪೂರ್ಣಗೊಳಿಸಿ ಪ್ರತಿಯೊಂದು ಮನೆಗೆ ನೀರು ಒದಗಿಸಲು ಕ್ರಮವಹಿಸಿ ಎಂದು ತಿಳಿಸಿದರು. ಕಾಮಗಾರಿಗೆ ಬಳಸುವ ಪೈಪ್, ಟ್ಯಾಪ್, ಮೀಟರ್‌ಗಳು ಹಾಗೂ ಇನ್ನಿತರ ವಸ್ತುಗಳ ಗುಣಮಟ್ಟವನ್ನು ಪರಿಶೀಲಿಸಿ ನಂತರ…

Read More

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಇವತ್ತಿನಿಂದ ರಾಜ್ಯದಲ್ಲಿ ಛಳಿಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿಯಲ್ಲಿರುವ ಪೆಂಗಾಲ್ ಚಂಡಮಾರುತವು ಡಿಸೆಂಬರ್ 1ರಂದು ಪಾಂಡಿಚೇರಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಡಿಸೆಂಬರ್ 2 ಹಾಗೂ 3 ರಂದು ತಮಿಳುನಾಡು – ಕರ್ನಾಟಕ ಗಡಿ ಭಾಗಗಳಲ್ಲಿ ಸಾಗಿ ಕೇರಳದ ಕೋಜಿಕ್ಕೊಡು ಮೂಲಕ ಅರಬ್ಬಿ ಸಮುದ್ರ ಸೇರುವ ಲಕ್ಷಣಗಳಿವೆ. ರಾಜ್ಯದಲ್ಲಿ ಡಿಸೆಂಬರ್ 2 ರಿಂದ ಡಿಸೆಂಬರ್ 4ರ ತನಕ ದಕ್ಷಿಣ ಒಳನಾಡು, ಕೊಡಗು, ಹಾಸನ, ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದರೆ ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ಚಂಡಮಾರುತವು ಅರಬ್ಬಿ ಸಮುದ್ರಕ್ಕೆ ಪ್ರವೇಶಿಸಿದ ನಂತರವೂ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ತಾಯಂದಿರು ಮೃತಪಟ್ಟಿರುವ  ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರನ್ನು ತಕ್ಷಣ ಬಂಧಿಸಬೇಕು ಎಂದು ನೈಜ್ಯ ಹೋರಾಟಗಾರರ ವೇದಿಕೆ ಮತ್ತು ಮಾಹಿತಿ ಅಧ್ಯಯನ ಕೇಂದ್ರ ಒತ್ತಾಯಿಸಿದೆ. ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ತಾಯಂದಿರು ಮೃತಪಟ್ಟಿರುವ  ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ನಾವು ಮಾನವ ಹಕ್ಕುಗಳ ಆಯೋಗಕ್ಕೆ ಪ್ರಕರಣ ಸಂಖ್ಯೆ 4637/10/3/2024 ರಲ್ಲಿ ದಿನಾಂಕ ದಂದು ದೂರನ್ನು ಸಲ್ಲಿಸಿದ್ದೇವೆ.   ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ  ಈ ಪ್ರಕರಣದ ಮುಖ್ಯ ಆರೋಪಿಯೆಂದು ನಾವು ಪರಿಗಣಿಸಿದ್ದೇವೆ ಎಂದು ನೈಜ ಹೋರಾಟಗಾರರ ವೇದಿಕೆ ತಿಳಿಸಿದೆ. IV fluid ಔಷಧಿಯನ್ನು 2024 ಮಾರ್ಚ್ ತಿಂಗಳಿಂದ ಸರಬರಾಜು ಮಾಡಲು Paschim Bangs pharmaceutical companyಗೆ  ಔಷಧಿಗಳನ್ನು ಸರಬರಾಜು ಮಾಡುವಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಆದೇಶ ನೀಡಿದ್ದರು. ಆದರೆ  ಸದರಿ ಕಂಪನಿಯವರು  ಸರಬರಾಜು ಮಾಡಿರುವ ಔಷಧಿಯು ಉತ್ತಮ ಗುಣಮಟ್ಟದಿಂದ ಕೂಡಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರದ ಡ್ರಗ್ ಕಂಟ್ರೋಲರ್(…

Read More

ತುಮಕೂರು: ನಗರದ ವಾರ್ಡ್‌ ನಂ.3ರ ಶಿರಾಗೇಟ್‌ ನ 80 ಅಡಿ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ಇದರಿಂದಾಗಿ ಸಾರ್ವಜನಿಕರ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಕೂಡಲೇ ಸರಿಪಡಿಸುವಂತೆ ʼಎಕ್ಸ್‌ʼ ಬಳಕೆದಾರರೊಬ್ಬರು ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗಕ್ಕೆ ಕೋರಿದ್ದರು. ತಕ್ಷಣವೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಹಳೆಯ ಎನ್‌ ಹೆಚ್‌ — 4 ರ ರಸ್ತೆಯ ಎಸ್‌ ಮಾಲ್‌ ಮುಂಭಾಗ ಅಮಾನಿಕೆರೆ ನೀರು ಹರಿಯಲು ಸೇತುವೆ ನಿರ್ಮಾಣಕ್ಕಾಗಿ ರಸ್ತೆಯನ್ನು ಬಂದ್‌ ಮಾಡಲಾಗಿರುತ್ತದೆ. ಈ ಸಂದರ್ಭದಲ್ಲಿ ಎಲ್ಲಾ ವಾಹನಗಳು ಸದರಿ ರಸ್ತೆಯಲ್ಲಿ ಸಂಚರಿಸಿರುವುದರಿಂದ ರಸ್ತೆಯು ಗುಂಡಿ ಬಿದ್ದು ಹಾಳಾಗಿರುತ್ತದೆ. ಜುಲೈ ತಿಂಗಳಲ್ಲೇ ಈ ರಸ್ತೆ ಗುಂಡಿಗಳನ್ನು ಮುಚ್ಚಿಸಲಾಗಿದೆ. ಆದರೆ, ಎಸ್‌ ಮಾಲ್‌ ಬಳಿ ಸೇತುವೆ ಕಾಮಗಾರಿಯು ಮುಕ್ತಾಯಗೊಳ್ಳುವುದು ನಿಧಾನವಾದ್ದರಿಂದ, ಸದರಿ ರಸ್ತೆಯಲ್ಲಿ ಸಂಚರಿಸಬೇಕಾಗಿದ್ದ ಎಲ್ಲಾ ವಾಹನಗಳು ಐಡಿಎಸ್‌ಎಂಟಿ ಮುಖ್ಯರಸ್ತೆಯನ್ನೇ ಬಳಸಿಕೊಂಡು ಸಂಚರಿಸುತ್ತಿರುವುದರಿಂದ ರಸ್ತೆಯು ಹಾಳಾಗಿರುತ್ತದೆ. ಆದ್ದರಿಂದ ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಲು ಪಾಲಿಕೆ ವತಿಯಿಂದ ಟೆಂಡರ್‌ ಆಹ್ವಾನಿಸಿ…

Read More

ತುಮಕೂರು: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ  ಸಂಯುಕ್ತಾಶ್ರಯದಲ್ಲಿ 2024–25 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಶನಿವಾರ  ಉದ್ಘಾಟಿಸಲಾಗಿದೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ, ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಯುವಕರು ಮತ್ತು ಯುವತಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಮನೆಯಲ್ಲಿ ಚಿಕ್ಕ ಚಿಕ್ಕ ವಿಷಯಗಳು ಸಂತೋಷವನ್ನು ನೀಡುತ್ತದೆ ಆಹಾರದ ಬಗ್ಗೆ ಸ್ವಲ್ಪ ಹೊಗಳಿಕೆ ಸಿಕ್ಕಿದರಂತೂ ಬಹಳ ಖುಷಿ ಪಡುವ ನಮ್ಮವರು ಅವರ ಜೊತೆ ಸ್ವಲ್ಪ ಹೆಜ್ಜೆ ಹಾಕಿದರಂತೂ ಸ್ವರ್ಗಕ್ಕೆ ಹೋಗಿ ಬಂದ ಅನುಭವ ಬೇರೆ ತಿನ್ನೋದರಲ್ಲಿ ಬಾಯಿಯ ಕಂಟ್ರೋಲ್ ಯಾಕೆ…! ಇಂತಹ ಸಾತ್ವಿಕ ಆಹಾರ ಸವಿ ಸವಿ ರುಚಿಯ ದಿಡೀರಾಗಿ ಅತಿರಸ ಎಂದಾಗಲೇ ಬಾಯಿಯಲ್ಲಿ ನೀರೂರಿಸುವ ಜನ ಸವಿಯಲು ಅತ್ಯಂತ ರುಚಿಕರವಾದ ತಿಂಡಿ ಸ್ವಾದ ಬಾಯಿ ಚಪ್ಪರಿಸಿ ಸವಿಯೋದಕ್ಕೆ ಬೆಸ್ಟ್ ಫುಡ್ ಸವಿದು ಮೆಚ್ಚಿಗೆ ಸೂಚಿಸಿದ ಜನ ನಾವು ಈಗ ರೆಡಿ ಟು ಈಟ್ ಬಿಸಿ ಸೀಸನ್ ನಲ್ಲಿ ಇರುವ ಜನ ಆಹಾರ ಸವಿ ಸವಿ ಇದು ಆರೋಗ್ಯಕರ ಫುಡ್ ಡಿಫರೆಂಟ್ ಕೈ ರುಚಿ ವಾವ್ ಫೆಂಟಾಸ್ಟಿಕ್… ಸಕ್ಕತ್ ಆಗಿದೆ… ಖಾದ್ಯ ಹಬ್ಬದ ಅಡುಗೆಯಲ್ಲಿ ಈ ವಿಶೇಷವಾದ ಅತಿರಸವನ್ನ  ಮಾಡುವುದು ಹೇಗೆ ಎಂದು ನೋಡೋಣ.. ಬೇಕಾಗುವ ಪದಾರ್ಥಗಳು : ಒಂದು ಕಪ್ಪು ಬೆಳ್ತಿಗೆ ಅಕ್ಕಿ, ಒಂದು ಕಪ್ ಬೆಲ್ಲ, ಕಾಲ್ ಕಪ್…

Read More