Author: admin

ಬೆಳಗಾವಿ:   ಕಾಂಗ್ರೆಸ್ ಪಕ್ಷ ನನಗೆ ಯಾವುದೇ ಕೆಟ್ಟದ್ದು ಮಾಡಿರಲಿಲ್ಲ. ಆದರೆ, ಒಬ್ಬ ವ್ಯಕ್ತಿಯ ಷಡ್ಯಂತ್ರದಿಂದ ನಾನು ಕಾಂಗ್ರೆಸ್ ನಿಂದ  ಹೊರ ಬಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿದ್ದಾಗ ಎಲ್ಲರೂ ಸೇರಿ ಷಡ್ಯಂತರ ಮಾಡಿದರಿಂದ ಕಾಂಗ್ರೆಸ್ ಪಕ್ಷದಿಂದ ಹೊರಬಂದೆ. ಬಳಿಕ ಬಿಜೆಪಿ ಸೇರಿಕೊಂಡೆ ಆದರೆ ಬಿಜೆಪಿಯಲ್ಲಿ ಬೆಳೆಯುತ್ತಿದ್ದಂತೆ ಇಲ್ಲೂ ಕೂಡ ಷಡ್ಯಂತರ ಮಾಡಿದರು. ಅದಕ್ಕೂ ನಾನು ಹೆದರಲಿಲ್ಲ ಎಂದಿದ್ದಾರೆ. ಜನರಿಗೆ ಮೋಸ ಮಾಡಿದ್ದರೆ ಹೆದರುತ್ತಿದ್ದೆ. ಆದರೆ ಸಿಡಿಗೆ ಹೆದರಲ್ಲ ಎಂದು ನನಗೆ ಧೈರ್ಯ ಹೇಳಲು ಬಂದಿದ್ದ ಸ್ವಾಮೀಜಿಗಳಿಗೆ ನಾನು ಹೇಳಿದ್ದೆ. ನನ್ನ ವಿರುದ್ಧ ವೈಯಕ್ತಿಕ ಷಡ್ಯಂತರ ನಡೆದಿದೆ ಅಂತ ಹೇಳಿದ್ದೆ ಎಂದರು. ಒಡೆದು ಆಳುವ ನೀತಿಯಿಂದ ಹಿಂದುಳಿದ ಸಮುದಾಯಗಳಿಗೆ ಧಕ್ಕೆಯಾಗಿದೆ. ಕೊನೆ ಗಳಿಗೆಯಲ್ಲಿ ಹಿಂದುಳಿದ ಸಮುದಾಯ ಒಂದಾಗಿದೆ. ಎಸ್ಟಿ, ಕುರುಬರು ಹಾಗೂ ಉಪ್ಪಾರ ಸೇರಿದಂತೆ ಹಿಂದುಳಿದ ಸಮಾಜ ಶೇಕಡ 74 ರಷ್ಟಿದೆ ಕೇವಲ 26 ಪರ್ಸೆಂಟ್…

Read More

ತುಮಕೂರು: ಹಣ ಅಂತಸ್ತು ಅಥವಾ ಅಧಿಕಾರದಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿಲ್ಲ, ದೇಹವನ್ನು ಸಮತೋಲನದಲ್ಲಿ ಇಟ್ಟುಕೊಂಡಿದ್ದಲ್ಲಿ ಮಾತ್ರ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ  ಎಂದು ಹಿರೇಮಠಾಧ್ಯಕ್ಷರಾದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ಎಸ್ ವಿ ಎಸ್ ಪ್ರಥಮ ದರ್ಜೆ ಕಾಲೇಜಿನ  ವಿದ್ಯಾರ್ಥಿಗಳು, ಎಸ್ ವಿ ಎಸ್ ಕ್ಲಿನಿಕ್ ಹಾಗೂ ಡಾ.ಸುರೇಶ್ ಬಾಬು ಮತ್ತು ಡಾ.ಹೇಮಾವತಿರವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ  ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರದಲ್ಲಿ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಆರೋಗ್ಯ ಶಿಬಿರ ಉದ್ಘಾಟಿಸಿ, ಆರೋಗ್ಯ ಕಾಪಾಡಿಕೊಳ್ಳುವ  ಬಗ್ಗೆ ಜಾಗೃತರಾಗಿ ಎಂದು ಆಶೀರ್ವಚನ ನೀಡಿದರು. ಆಯೋಜಕಾರದ ಡಾ.ಸುರೇಶ್ ಬಾಬು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳು ರಸ್ತೆಗಳಲ್ಲಿ ಮಾರಾಟ ಮಾಡುವ ಅಂಗಡಿ ತಿನಿಸು, ಜಂಕ್ ಫುಡ್ ಸೇವಿಸುವುದನ್ನು ನಿಲ್ಲಿಸಿ, ಮನೆಯ ಆರೋಗ್ಯಕರ ಆಹಾರವನ್ನು ಸೇವಿಸಿ. ಆಟ, ವ್ಯಾಯಾಮ ಗಳಲ್ಲಿ ಹೆಚ್ಚುತೊಡಗಿಸಿಕೊಂಡು ದೇಹವನ್ನು ಸದೃಢವಾಗಿ ಇಟ್ಟುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ  ಎಸ್ ವಿ ಎಸ್ ಕಾಲೇಜಿನ  ಪ್ರಾಂಶುಪಾಲರಾದ ಡಾ.…

Read More

ತುಮಕೂರು:ಏಕಾಗ್ರತೆಯಿಂದ ಯೋಗಾಭ್ಯಾಸ ಮಾಡಿದರೆ ಯೋಗ ಚೇತನವು ಧ್ಯಾನದ ಮೂಲಕ ಆಧ್ಯಾತ್ಮಿಕತೆಯನ್ನು ಬೆಳೆಸಿ, ಆರೋಗ್ಯಕರ ಮತ್ತು ಸುಸ್ಥಿರ ಸಮಾಜರೂಪಿಸಲು ಸಹಕಾರಿಯಾಗಲಿದೆ ಎಂದು ವಿವಿಯ ಕಲಾ ನಿಕಾಯದ ಡೀನ್‌ ಪ್ರೊ.ಎಂ.ಕೊಟ್ರೇಶ್ ತಿಳಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತರ ಕಾಲೇಜು ಯೋಗ ಸ್ಪರ್ಧೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಯೋಗವು ಬದುಕಿನ ಭಾಗವಾಗಬೇಕು. ಯೋಗ ಆತ್ಮವನ್ನು ಶುದ್ಧೀಕರಿಸುತ್ತದೆ ಮತ್ತುದೇಹದ ಕಲ್ಮಶಗಳನ್ನು ಹೋಗಲಾಡಿಸಿ ಹೊಸ ಚೈತನ್ಯವನ್ನು ಸೃಜಿಸುತ್ತದೆ. ದೇಹದಲ್ಲಿನ ಅಸಮತೋಲನವನ್ನು ಸರಿಪಡಿಸಲು ಯೋಗಾಭ್ಯಾಸ ನಿರಂತರವಾಗಿರಬೇಕು ಎಂದರು. ಸೂರ್ಯ ನಮಸ್ಕಾರದ13 ವ್ಯಾಯಾಮಗಳು ಸ್ನಾಯುಗಳು, ಕೀಲುಗಳು ಮತ್ತುಆಂತರಿಕ ಅಂಗಗಳ ಸರಿಯಾದಕಾರ್ಯನಿರ್ವಹಣೆಗೆಸಹಕಾರಿಯಾಗುತ್ತವೆ ಎಂದು ತಿಳಿಸಿದರು. ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ ಮಾತನಾಡಿ, ಯೋಗದಿಂದಆಧ್ಯಾತ್ಮಿಕ ಸತ್ವ ಸಿಗುತ್ತದೆ. ಜೀವನದಲ್ಲಿ ಸಕಾರಾತ್ಮಕ ಮನೋಭಾವನೆಯನ್ನು ಅಳವಡಿಸಿಕೊಳ್ಳಲು ಯೋಗವು ಬದುಕಿನ ದಿನಚರಿಯ ಭಾಗವಾಗಬೇಕು.ಇದರಿಂದ ದೇಹ ಮತ್ತು ಮನಸ್ಸುಎರಡೂ ಶಾಂತವಾಗಿರುತ್ತವೆ. ಯಶಸ್ಸನ್ನು ಸಾಧಿಸಲು ನಮ್ಮನ್ನು ಪ್ರೇರೇಪಿಸುತ್ತದೆ ಎಂದರು. ಸ್ನಾತಕೋತ್ತರ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಬಸವರಾಜ್ ಜಿ. ಮಾತನಾಡಿ, ಸ್ಪರ್ಧೆಗಿಂತ ಭಾಗವಹಿಸುವಿಕೆ ಮೌಲ್ಯವನ್ನು ತಿಳಿಸಿದರು. ಜಿಲ್ಲೆಯ…

Read More

ತುಮಕೂರು :  ಭಾರತೀಯ ಹವಾಮಾನ ಇಲಾಖೆ ವರದಿಯನ್ವಯ ಗುಡುಗು–ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುಂದಿನ 4 ದಿನಗಳ ಕಾಲ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಮುಂಜಾಗ್ರತೆ ವಹಿಸಲು ಅಧಿಕಾರಿ ಸಿಬ್ಬಂದಿಗೆ ಸೂಚನೆ : ಭಾರೀ ಮಳೆಯಿಂದ ಉಂಟಾಗಬಹುದಾದ ಪ್ರವಾಹದಿಂದ ಯಾವುದೇ ಜನ–ಜಾನುವಾರುಗಳ ಜೀವಹಾನಿಯಾಗದಂತೆ ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿ ಹೊಂದಿರಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾರೀ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಮಳೆ ಮುನ್ನಚ್ಚರಿಕೆ ಬಗ್ಗೆ ಪ್ರತಿ ಗ್ರಾಮಗಳಲ್ಲಿ ಡಂಗುರ ಸಾರಬೇಕು ಹಾಗೂ ಮೈಕ್ ಮೂಲಕ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂಭವವಿರುತ್ತದೆ. ಇದರಿಂದ ಸಾವು–ನೋವುಗಳು ಉಂಟಾಗಬಹುದಾದ್ದರಿಂದ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತಿಳಿ ಹೇಳಬೇಕು ಎಂದು ತಿಳಿಸಿದ್ದಾರೆ. ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ, ಸಿಬ್ಬಂದಿ ಕೇಂದ್ರಸ್ಥಾನದಲ್ಲಿದ್ದುಕೊಂಡು ಮಳೆಯಿಂದ ಯಾವುದೇ…

Read More

ತುಮಕೂರು:  ತುಮಕೂರು ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 2ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲೆಯ ಶಾಸಕರು ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸುಮಾರು 938 ಕೋಟಿ ರೂ. ಮೊತ್ತದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ, 94 ಕೋಟಿ ರೂ. ವೆಚ್ಚದಲ್ಲಿ…

Read More

ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಭಾರತ ಚುನಾವಣಾ ಆಯೋಗ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ, ರಸಪ್ರಶ್ನೆ, ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. ತುಮಕೂರಿನ ಗಾಂಧಿ ನಗರದ ಸೆಂಟ್ ಮೇರಿಸ್ ಬಾಲಕಿಯರ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿ ಮಂಜುನಾಥ್, ಶಾಲಾ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ಸುನೀಲ್ ಕುಮಾರ್ ಹಾಗೂ ಮಂಜುನಾಥಾಚಾರ್ ಉದ್ಘಾಟಿಸಿದರು. ಪ್ರಬಂಧ ಸ್ಪರ್ಧೆ(ಕನ್ನಡ)ಯಲ್ಲಿ ಹೊರಪೇಟೆ ಚೇತನಾ ವಿದ್ಯಾ ಮಂದಿರದ ರಾಧಾ ಪಿ, ಪ್ರಬಂಧ ಸ್ಪರ್ಧೆ(ಆಂಗ್ಲ)ಯಲ್ಲಿ ತುರುವೇಕೆರೆ ಎಸ್.ಎ.ಸಿ. ಮಯೂರ ವಿದ್ಯಾಲಯದ ಅನನ್ಯ ಎಂ.ಡಿ. ಹಾಗೂ ಭಿತ್ತಿಚಿತ್ರ ಸ್ಪರ್ಧೆದಲ್ಲಿ ಜಿ.ಜೆ.ಸಿ. ವಿದ್ಯಾಸಂಸ್ಥೆಯ ವೈಷ್ಣವಿ ಬಿ.ಎಸ್, ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಣಿಗಲ್ ತಾಲ್ಲೂಕು ಎಸ್.ಪಿ.ಎಸ್.ಹೆಚ್.ಎಸ್ ಗವಿಮಠದ ಮುನಿರತ್ನ.ಕೆ.ಸಿ. ಹಾಗೂ ಧನಲಕ್ಷ್ಮೀ ಕೆ.ಎನ್. ಅವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದುವ ಮೂಲಕ ಸಂವಿಧಾನ ಪೀಠಿಕೆಯ…

Read More

ಕನ್ನಡ ಸಾಹಿತ್ಯ ಸಮ್ಮೇಳನಗಳಲ್ಲಿ ಮಹಿಳೆ, ದಲಿತ, ರೈತ, ಕಾರ್ಮಿಕ ಚಳವಳಿಗಳ ಬಗ್ಗೆ ಚರ್ಚಿಸುವ ಬದಲು, ಸಾಹಿತ್ಯಕೇಂದ್ರಿತವಾಗಿ ದಲಿತರು, ಪ್ರಗತಿಪರರು, ರೈತರು, ಮಹಿಳೆಯರು, ಕಾರ್ಮಿಕರ ವಿಷಯಗಳನ್ನು ಚರ್ಚಿಸುವ ಮೂಲಕ ಕನ್ನಡದ ವಿವೇಕವನ್ನು ವಿಸ್ತರಿಸುವ ಕೆಲಸವಾಗಬೇಕೆಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ತಿಳಿಸಿದರು. ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮಗ್ರವಾದದು. ಕನ್ನಡ ಸಾಹಿತ್ಯದ ವಿವೇಕ ಬಹಳ ವಿಸ್ತಾರವಾದದು. ಮಾನವೀಯತೆ ಬದಲು ಮತೀಯತೆ ಆವರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಪಂಪನಿಂದ ಇಂದಿನ ದಲಿತ, ಬಂಡಾಯ ಸಾಹಿತ್ಯದವರೆಗೆ ಕನ್ನಡ ಬಹು ದೊಡ್ಡ ವಿವೇಕವನ್ನು ಸಮಾಜಕ್ಕೆ ನೀಡಿದೆ. ಅದನ್ನು ಜನಸಾಮಾನ್ಯರ ಮಧ್ಯೆ ತೆಗೆದುಕೊಂಡು ಹೋಗುವ ಕೆಲಸ ಇಂತಹ ಸಮ್ಮೇಳನಗಳ ಮೂಲಕ ಆಗಬೇಕಾಗಿದೆ ಎಂದು ತಿಳಿಸಿದರು. ಕನ್ನಡ ಭಾಷೆ ಧಾರ್ಮಿಕ, ರಾಜಕೀಯ, ಸಾಹಿತ್ಯಿಕ, ಸಾಮಾಜಿಕ, ಆರ್ಥಿಕ ವಿವೇಕಗಳನ್ನು ಕಲ್ಪಿಸಿರುವ ಭಾಷೆಯಾಗಿದೆ. ಕನ್ನಡ ಸಾಹಿತ್ಯದ ವಿವೇಕ ಬಹಳ ಪ್ರಾಚೀನವಾಗಿದ್ದು, ಪಂಪ-ರನ್ನರ ಕಾಲದಿಂದಲೂ ಹಲವು ವಿಷಯಗಳ ಕುರಿತು ಚರ್ಚಿಸಿಕೊಂಡು ಬರಲಾಗುತ್ತಿದೆ. ಕನ್ನಡ ಸಾಹಿತ್ಯವು…

Read More

ತುಮಕೂರು: ಸ್ವ–ಘೋಷಿತ ರಾಷ್ಟ್ರೀಯ ಭಾಷೆ ಎಂದು ಹೇಳಲಾಗುವ ಹಿಂದಿ ಎಂಬ ಘಟ ಸರ್ಪವು ಕನ್ನಡವನ್ನು ನುಂಗಲು ಬಿಡಬಾರದು ಎಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಡಾ.ಅಗ್ರಹಾರ ಕೃಷ್ಣಮೂರ್ತಿ ಕರೆ ಕೊಟ್ಟರು. ನಗರದ ಅಮಾನಿಕೆರೆಯಲ್ಲಿ ನಡೆದ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಭಾರತದಲ್ಲಿ 11 ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ಪಡೆದರೂ ಸಹ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಬಿಂಬಿಸಲಾಗುತ್ತಿದೆ. ಎಲ್ಲರಿಗೂ ಅವರವರ ಮಾತೃ ಭಾಷೆ ಮಹತ್ವವಾದುದು. ನಮ್ಮ ಭಾಷೆಯನ್ನು ನಾವು ಪ್ರೀತಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ ಎಂದು ತಿಳಿಸಿದರು. ಬಹು ಭಾಷಿಕ, ಬಹು ಸಂಸ್ಕೃತಿ, ಬಹು ಸಂಪ್ರದಾಯಗಳನ್ನು ಹೊಂದಿರುವ ದೇಶದಲ್ಲಿ ಕನ್ನಡ ಭಾಷೆಗೆ ತನ್ನದೇ ಆದ ಸಾವಿರಾರು ವರ್ಷಗಳ ಇತಿಹಾಸವಿದ್ದು, ನಾಡು–ನುಡಿಗಾಗಿ ಹೋರಾಡಿದ ಹೋರಾಟಗಾರರ ಶ್ರಮವನ್ನು ವ್ಯರ್ಥ ಮಾಡಬಾರದು ಎಂದು ತಿಳಿಸಿದರು. ಅಭಿವ್ಯಕ್ತಿಗೆ ಧಕ್ಕೆ : ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಲೇಖಕರು, ಸಾಹಿತಿಗಳು, ಪತ್ರಕರ್ತರು ತಮ್ಮ ಅಭಿಪ್ರಾಯಗಳನ್ನು ಅಭಿವ್ಯಕ್ತಿಗೊಳಿಸಲೂ ಸಹ…

Read More

ತುಮಕೂರು:  ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಆಸಕ್ತ ಪ.ಪಂಗಡದ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 10ರೊಳಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ/ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ/ ಪಾವಗಡ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 35 ವರ್ಷ ಹಾಗೂ ಮಹಿಳೆಯರಿಗೆ 40 ವರ್ಷ ವಯೋಮಿತಿ ನಿಗಧಿಪಡಿಸಲಾಗಿದೆ. ಅಭ್ಯರ್ಥಿಯ ಕುಟುಂಬದ ಆದಾಯ 2.50ಲಕ್ಷ ರೂ.ಗಳನ್ನು ಮೀರಬಾರದು. ಮೂಲಿವಾಸಿ ಮತ್ತು ಅಲೆಮಾರಿ/ಅರೆ ಅಲೆಮಾರಿ ಮತ್ತು ಸೂಕ್ಷ್ಮ/ ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಅಭ್ಯರ್ಥಿಯು ತರಬೇತಿ ನೋಂದಣಿ ಸಮಯದಲ್ಲಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಹಾಗೂ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ತರಬೇತಿ…

Read More

ತುಮಕೂರು:  ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಡಿಸೆಂಬರ್ 2ರಂದು ಮುಖ್ಯಮಂತ್ರಿಗಳಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನೆ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಶುಕ್ರವಾರ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳಿಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಸೇರಿದಂತೆ ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More