Subscribe to Updates
Get the latest creative news from FooBar about art, design and business.
- ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
- ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
- ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ
- ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್
- ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
- ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
- ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
- ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
Author: admin
ಪಾವಗಡ: ತಾಲೂಕಿನ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಂಡುಬಂದ ತಕ್ಷಣ ಕಾರ್ಯಕ್ರಮದ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್ ಹಾಗೂ ಟಿಟಿ ಚಾಲಕ ಹರೀಶ್ ಜರೂರಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ಕಾರು ಮತ್ತು ಟಿಟಿ ಮೂಲಕ ರವಾನಿಸಿ ಯಾವುದೇ ಬಾರಿ ಅವಘಡ ಆಗದಂತೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇವರ ಕಾರ್ಯಕ್ಕೆ ಆಡಳಿತ ವರ್ಗ ಶ್ಲಾಘನೆ ವ್ಯಕ್ತಪಡಿಸಿದೆ. ಟಿಟಿ ಚಾಲಕ ಹರೀಶ್ ಅವರನ್ನು ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಸಾದ್ ಅವರಿಗೆ ಅಧಿಕಾರಿ ವರ್ಗ ಹಾಗೂ ಗ್ರಾಮಸ್ಥರು ಕೃತಜ್ಞತೆ ತಿಳಿಸಿದ್ದಾರೆ. ಈ ವೇಳೆ ಪಾವಗಡ ತಹಶೀಲ್ದಾರ್ ಡಿ.ಎನ್. ವರದರಾಜು, ಇಓ ಜಾನಕಿ ರಾಮ್, ಬಿಇಓ ಇಂದ್ರಾಣಮ್ಮ, ಅಕ್ಷರ ದಾಸೋಹ ಎ.ಡಿ.ಶಂಕರಪ್ಪ, ಇಸಿಒ ವೇಣು ಗೋಪಾಲ್ ಸೇರಿದಂತೆ ಕೋಣನಕುರಿಕೆ ಗ್ರಾಮಸ್ಥರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಕೊರಟಗೆರೆ: ನೂತನವಾಗಿ ಶ್ರೀ ಬಲಮುರಿ ಗಣಪತಿ ದೇವಸ್ಥಾನದ ಗರ್ಭಗುಡಿಯ ಮುಖ್ಯದ್ವಾರ ಅನಾವರಣಗೊಳಿಸಲಾಯಿತು. ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ (ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನುಪಲು ಗ್ರಾಮದಲ್ಲಿ ಸುಮಾರು 45 ಲಕ್ಷಗಳ ವೆಚ್ಚದಲ್ಲಿ ನೂತನವಾಗಿ ಶ್ರೀ ಬಲಮುರಿ ಗಣಪತಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 60 ವರ್ಷಗಳಿಂದ ಈ ಗ್ರಾಮದಲ್ಲಿ ಒಂದೇ ಒಂದು ದೇವಾಲಯವಿಲ್ಲದೆ ಮೂಲಭೂತ ಸೌಕರ್ಯವಿಲ್ಲದೆ, ಗ್ರಾಮದ ಅಭಿವೃದ್ಧಿ ಇಲ್ಲದೆ ಇದ್ದ ಕುಗ್ರಾಮದಲ್ಲಿ ಇದೀಗ ಸಂತಸದ ವಾತಾವರಣ ನಿರ್ಮಾಣವಾಗಿದೆ. ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮತ್ತು ಎಲೆರಾಂಪುರ ಮಠದ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ರವರ ಮಾರ್ಗದರ್ಶನದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗುತ್ತಿದೆ. ಅಕ್ಕ–ಪಕ್ಕದ ಗ್ರಾಮಸ್ಥರಿಂದ ಸ್ಥಳೀಯ ಜನಪ್ರತಿನಿಧಿಗಳಿಂದ ಸಾರ್ವಜನಿಕರ ಸಹಾಯ ಹಸ್ತದಿಂದ ದೇವಾಲಯ ನಿರ್ಮಾಣ ಮಾಡಲಾಗುತ್ತಿದೆ. ಶ್ರೀ ಬಲಮುರಿ ಗಣಪತಿ ದೇವಾಲಯದ ಅಭಿವೃದ್ದಿಗೆ, ದೇವಾಲಯ ಸಂಪೂರ್ಣವಾಗಿ ನಿರ್ಮಿಸಲು ದಾನಿಗಳು ಹೆಚ್ಚಿನ ಧನ ಸಹಾಯ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.…
ಸರಗೂರು: ಇಂದಿನ ಮಕ್ಕಳು ಬರೀ ಪಠ್ಯ ವಾಚನ ಮಾಡಿದರೆ ಸಾಲದು ಆಟೋಟ, ಪ್ರದರ್ಶನ, ಮನರಂಜನೆ ಕೂಡ ಮುಖ್ಯ ಎಂದು ಜೆಎಸ್ಎಸ್ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಅಂಜುಂಪಾಷ ಎಂದರು. ತಾಲೂಕಿನ ಪಟ್ಟಣದ ಜೆಎಸ್ ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 — 25 ನೇ ಸಾಲಿನ ಶೈಕ್ಷಣಿಕ ವಸ್ತು ಪ್ರದರ್ಶನವನ್ನು ಶುಕ್ರವಾರದಂದು ಏರ್ಪಡಿಸಲಾಗಿತ್ತು. ಸುತ್ತೂರು ಸ್ವಾಮೀಜಿಗಳ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮದ ಉದ್ಘಾಟಿಸಿ ನಂತರ ಮಾತನಾಡಿದರು. ಇಂದಿನ ಪೀಳಿಗೆಗೆ ಇಂತಹ ವಸ್ತು ಪ್ರದರ್ಶನಗಳು ಆಗಿಂದಾಗ್ಗೆ ಏರ್ಪಡಿಸುತ್ತಾ ಬಂದರೆ, ವಿದ್ಯಾರ್ಥಿಗಳಲ್ಲಿ ಅತ್ಯುತ್ಸಾಹ ಉಂಟಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಎಂದರು. ವಸ್ತು ಪ್ರದರ್ಶನಗಳು ಸೀಮಿತ ಅವಧಿಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭವಾಗಿ ಸೀಮಿತಾವಧಿಗೆ ಮುಕ್ತಾಯವಾಗುತ್ತದೆ. ಆದರೆ ತಾತ್ಕಾಲಿಕವಾಗಿ ಏರ್ಪಾಡು ಮಾಡುವ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಪಡೆಯುವ ಜ್ಞಾನ ಶಾಶ್ವತವಾಗಿ ವಿದ್ಯಾರ್ಥಿಗಳ ಮನದಲ್ಲಿ ಉಳಿದುಕೊಳ್ಳುತ್ತದೆ ಎಂದರು. ಪ್ರಾಂಶುಪಾಲರು ಕೆ.ಎಸ್.ಮಹದೇವಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಕ್ರಿಯಾಶೀಲರಾಗಲು ಹಾಗೂ ವೈಜ್ಞಾನಿಕವಾಗಿ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಅನಿವಾರ್ಯವಾಗುತ್ತದೆ. ಇದರಿಂದ…
ಪಾವಗಡ: ತಾಲೂಕಿನ ಕೋಣನಕುರಿಕೆ ಗ್ರಾಮದಲ್ಲಿನ ಪ್ರಾಥಮಿಕ ಪಾಠಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ನಂತರ ಚಿಕ್ಕಿ ಮೊಟ್ಟೆಯನ್ನು ಸೇವಿಸಿದ ಕೆಲವೇ ಕ್ಷಣದಲ್ಲಿ ಮೂರು ನಾಲ್ಕು ಮಕ್ಕಳಿಗೆ ವಾಂತಿ ಮಾಡಿಕೊಂಡಿದ್ದು ತಕ್ಷಣ ಎಚ್ಚೆತ್ತುಕೊಂಡ ಶಿಕ್ಷಕರು ಮತ್ತು ಗ್ರಾಮಸ್ಥರು ಕೂಡಲೇ ವಿಷಯವನ್ನು ಮೇಲಾಧಿಕಾರಿಗಳಿಗೆ ತಿಳಿಸಿ 40 ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ಕರೆತಂದಿರುತ್ತಾರೆ. ವಿಷಯ ತಿಳಿದ ತಹಶೀಲ್ದಾರ್ ವರದರಾಜು, ಕಾರ್ಯನಿರ್ವಾಹಣಾಧಿಕಾರಿ ಜಾನಕಿರಾಮ್, ಶಿಕ್ಷಣಾಧಿಕಾರಿಗಳಾದ ಇಂದ್ರಾಣಮ್ಮ,ಅಕ್ಷರ ದಾಸೋಹ ನಿರ್ದೇಶಕರು, ಮತ್ತು ಬಿ.ಆರ್. ಸಿ ಗಳು ಸಾರ್ವಜನಿಕ ಆಸ್ಪತ್ರೆಗೆ ಬೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ, ವೈದ್ಯರರಿಂದ ಮಾಹಿತಿ ಪಡೆದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ತಹಶೀಲ್ದಾರ್ ವರದರಾಜು, ಮಕ್ಕಳು ಯಾವುದೇ ರೀತಿಯಲ್ಲಿ ಭಯಪಡುವ ಅಗತ್ಯವಿಲ್ಲ, ಊಟ ಸೇವಿಸಿದ ನಂತರ ಕೆಲ ಮಕ್ಕಳು ವಾಂತಿ ಮಾಡಿಕೊಂಡಿದ್ದು ಅದನ್ನು ಕಂಡು ಉಳಿದ ಮಕ್ಕಳು ಆತಂಕಕ್ಕೊಳಗಾಗಿದ್ದಾರೆ ಎಲ್ಲಾ ಮಕ್ಕಳನ್ನು ವೈದ್ಯರು ಪರೀಕ್ಷಿಸಿದ್ದಾರೆ, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದರು. ಆರೋಗ್ಯ ವೈದ್ಯಾಧಿಕಾರಿಗಳಾದ ಬಾಬು ರವರು ಮಾತನಾಡಿ, ಕೋಣನಕುರಿಕೆ ಶಿಕ್ಷಕರು ನಮಗೆ ಕರೆ…
ನೆಲಮಂಗಲ : ಕರ್ನಾಟಕ ರಣಧೀರರ ವೇದಿಕೆ ವತಿಯಿಂದ ಐದನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ತಾಯಿ ಭುವನೇಶ್ವರಿ ಅಬ್ಬ ಹಾಗೂ ಹೊಯ್ಸಳ ವಿಜಿಷ್ಟ ಸೇವಾ ಪುರಸ್ಕಾರ 2024ರ ಸಮಾರಂಭವು ಬಹಳ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಪಡೆದಂತಹ ಶ್ರೀಕ್ಷೇತ್ರ ಕುಂಚಶ್ರೀ ಎಲೆರಾಂಪುರ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಹನುಮಂತನಾಥ ಮಹಾ ಸ್ವಾಮೀಜಿ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಈ ನಮ್ಮ ನಾಡಿನಲ್ಲಿ ಅನೇಕ ಹಾಗೂ ಅನೇಕ ವಿದ್ಯಾ ಸಮೂಹಗಳು ಪ್ರಶಸ್ತಿಗಳನ್ನು ಮಾರಾಟ ಮಾಡುತ್ತಿದ್ದಾರೆ ಆದರೆ ಕರ್ನಾಟಕ ರಣಧೀರರ ವೇದಿಕೆಯವರು ಹಲವು ಕ್ಷೇತ್ರಗಳಲ್ಲಿ ಸಾಧನೆಗೈದ ಹರುಷ ವ್ಯಕ್ತಿಗಳನ್ನು ಗುರುತಿಸಿ ಯಾವುದೇ ಫಲಾಪೇಕ್ಷೆ ಇಲ್ಲದೆ ಗೌರವ ಕೊಡುತ್ತಿರುವುದು ಬಹಳ ಸಂತೋಷವಾಗಿದೆ ಅಲ್ಲದೆ ನಾವು ಗಮನಿಸಿದಂತೆ ರಾಜ್ಯದಲ್ಲಿ ಕರ್ನಾಟಕ ರಣಧೀರರ ವೇದಿಕೆಯು ಬಹಳ ಗಾಂಭೀರ್ಯದಲ್ಲಿ ಸಿಂಹದ ಹೆಜ್ಜೆಯಂತೆ ಹೋರಾಟದ ಹೆಜ್ಜೆಗಳನ್ನಾಕುತ್ತಿರುವುದು ಬಹಳ ಸಂತೋಷವಾಗಿದೆ ಕರ್ನಾಟಕ ರಣಧೀರರ ವೇದಿಕೆ ಹೋರಾಟಕ್ಕೆ ನಾವು ಸದಾ ಬೆಂಬಲಿಸುತ್ತೇವೆ ಎಂದು ಹೇಳಿದರು. ಇದೇ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ರಣಧೀರದ…
ತುಮಕೂರು: ಎನ್ ಪಿಎಸ್ ಬಿಟ್ಟು ಒಪಿಎಸ್ ಮುಂದುವರೆಸಬೇಕು ಬೇಡಿಕೆಯೂ ಸೇರಿದಂತೆ ನೌಕರರ ಎಲ್ಲಾ ಸಮಸ್ಯೆಗಳನ್ನು ಸಮರ್ಥವಾಗಿ ಪರಿಹರಿಸುವ ಹೊಣೆಗಾರಿಕೆ ನನ್ನ ಮೇಲಿದ್ದು. ಇದಕ್ಕೆ ನಿಮ್ಮೆಲ್ಲರ ಸಹಕಾರ ಬೇಕಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಎನ್.ನರಸಿಂಹರಾಜು ಹೇಳಿದರು. ಇಂದು ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ನಡೆದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. ನನ್ನ ಮೇಲೆ ವಿಶ್ವಾಸವಿಟ್ಟು 2ನೇ ಬಾರಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಮಾಡಲು ಸಹಕರಿಸಿದ ಸಂಘದ ತಾಲೂಕು ಅಧ್ಯಕ್ಷರು, ನಿರ್ದೇಶಕರಿಗೆ, ಸರ್ಕಾರಿ ನೌಕರರಿಗೆ ಧನ್ಯವಾದ ತಿಳಿಸಿದ ಅವರು ಪರಸ್ಪರ ಸಹಮತದಿಂದ ಮೂರು ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆಮಾಡಲಾಗಿದ್ದು. ಈ ಮೂಲಕ ಜಿಲ್ಲಾ ಸರ್ಕಾರಿ ನೌಕರರ ಸಂಘ ರಾಜ್ಯದಲ್ಲಿಯೇ ಮಾದರಿ ಸಂಘ ಎಂದು ಹೆಸರು ಮಾಡಿದೆ ಎಂದರು. ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ್, ಕೇಂದ್ರ ರ್ಯೇಲ್ವೆ ್ಯ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಸಹಕಾರ ಸಚಿವ ಕೆ.ಎನ್,ರಾಜಣ್ಣ ಹಾಗೂ…
ತುಮಕೂರು: ಸರ್ಕಾರಿ ಶಾಲೆಯಲ್ಲಿ ವಿತರಣೆ ಮಾಡುವ ಚಿಕ್ಕಿ (ಕಡಲೆಮಿಠಾಯಿ) ತಿಂದು ಶಾಲಾ ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡುಬಂದಿರುವ ಘಟನೆ ಪಾವಗಡ ತಾಲೂಕಿನ ನಿಡಗಲ್ ಹೋಬಳಿಯ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದಿದೆ. ಸುಮಾರು 46 ವಿದ್ಯಾರ್ಥಿಗಳಿಗೆ ಕಾಣಿಸಿಕೊಂಡ ವಾಂತಿ, ಮಧ್ಯಾಹ್ನ ಊಟದ ಜೊತೆಗೆ ಕೊಡುವ ಚಿಕ್ಕಿ ತಿಂದಾಗ ನಡೆದಿದೆ. ಕೂಡಲೇ ಮಕ್ಕಳನ್ನ ಪಾವಗಡ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಘಟನೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಪಾವಗಡ ತಹಶಿಲ್ದಾರ್ ವರದರಾಜು, ಬಿಇಓ ಇಂದ್ರಣಮ್ಮ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿ ಮಾಹಿತಿ ಪಡೆದ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ತುಮಕೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಎನ್.ನರಸಿಂಹರಾಜುಯವರನ್ನು ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ವಿ.ಗೋವಿಂದರೆಡ್ಡಿ, ತಿಳಿಸಿದ್ದಾರೆ. ಶುಕ್ರವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಪರಶಿವಮೂರ್ತಿ ಹಾಗೂ ರಮೇಶ್ ಹೆಚ್.ಇ. ಅವರು ನಾಮಪತ್ರ ಹಿಂಪಡೆದು ಎನ್.ನರಸಿಂಹರಾಜು ಅವರಿಗೆ ಬೆಂಬಲ ನೀಡಿದರು. ಹಿಂದಿನ ಎಲ್ಲಾ ಚುನಾವಣೆಗಳಿಗಿಂತÀ ಅತ್ಯಂತ ಸ್ಪರ್ಧಾತ್ಮಕವಾಗಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುಣಾವಣೆ ತೀವ್ರ ಕುತೂಹಲ ಕೆರಳಿಸಿತ್ತು, ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ, ರಾಜ್ಯ ಪರಿಷತ್ ಸದಸ್ಯ ಸ್ಥಾನ ಮತ್ತು ಖಜಾಂಚಿ ಸ್ಥಾನಕ್ಕೆ ಮಾತ್ರ ಡಿಸೆಂಬರ್ ೪ ರಂದು ಚುನಾವಣೆ ನಡೆಯಬೇಕಿತ್ತು. ಈ ಮೂರು ಸ್ಥಾನಗಳಿಗೆ ತಲಾ ಮೂವರು ನಾಮಪತ್ರ ಸಲ್ಲಿಸಿದ್ದರು, ಕೊನೆಗಳಿಗೆಯಲ್ಲಿ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲ ಸ್ಥಾನಗಳಿಂದಲೂ ಒಬ್ಬೊಬ್ಬರ ಹೊರತಾಗಿ ಉಳಿದೆಲ್ಲಾ ಅಭ್ಯರ್ಥಿಗಳು ಸ್ಪರ್ಧೆಯಿಂದ ಹಿಂದೆ ಸರಿದರು, ಇದರಿಂದ ಚುನಾವಣೆಗೆ ಮೊದಲೇ ಸಂಘದ ಅಧ್ಯಕ್ಷರಾಗಿ ಎನ್.ನರಸಿಂಹರಾಜು, ರಾಜ್ಯ ಪರಿಷತ್ ಸದಸ್ಯರಾಗಿ…
ತಿಪಟೂರು: ಸಾಲ ಬಾಧೆ ತಾಳಲಾರದೇ ಯುವಕನೊಬ್ಬ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಿಪಟೂರು ತಾಲ್ಲೋಕಿನ ಹೊನ್ನವಳ್ಳಿ ಹೋಬಳಿ ಹೆಚ್.ಎಂ.ಪಾಳ್ಯದಲ್ಲಿ ನಡೆದಿದೆ. ತಿಪಟೂರು ತಾಲ್ಲೋಕಿನ ಹೊನ್ನವಳ್ಳಿ ಹೋಬಳಿ ಹೆಚ್.ಎಂ ಪಾಳ್ಯ ನಿವಾಸಿ ಅಡವೀಶ್(39) ಮೃತ ದುರ್ದೈವಿ. ಅಡವೀಶ್ ಫೈನಾನ್ಸ್ ,ಬ್ಯಾಂಕ್, ಸೇರಿದಂತೆ ಹಲವು ಕಡೆ ಕೈ ಸಾಲಮಾಡಿಕೊಂಡಿದ್ದು, ಸಾಲಕೊಟ್ಟವರ ಕಿರುಕುಳ ತಾಳಲಾರದೇ ಸಾವಿಗೆ ಶರಣಾಗಿರುವುದಾಗಿ ಹೇಳಲಾಗಿದೆ. ಮೃತ ಅಡವೀಶ್ ಗೆ ಮದುವೆಯಾಗಿದ್ದು, 3 ವರ್ಷದ ಮಗು ಸಹ ಇದೆ. ಘಟನೆ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಬಗ್ಗೆ ಹಾದಿಬೀದಿಯಲ್ಲಿ ಮಾತನಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಕಾರ್ಯಕರ್ತ ಶಿವಕುಮಾರ್ ಎಂಬುವರು ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದಾರೆ. ಮಂಡ್ಯದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಎಂಬುವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ರಕ್ತದ ಮೂಲಕ ಪತ್ರ ಬರೆದಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ತಕ್ಷಣವೇ ಶಿಸ್ತುಕ್ರಮಕ್ಕೆ ಆಗ್ರಹಿಸಿದ್ದಾರೆ. ಪತ್ರ ಚಳುವಳಿಯನ್ನು ಆರಂಭಿಸಿರುವ ಅವರು, ಯತ್ನಾಳ್ ಹಾಗೂ ಅವರ ತಂಡ ನಡೆಸುತ್ತಿರುವ ಜಾಗೃತಿ ಅಭಿಯಾನಕ್ಕೆ ಕಡಿವಾಣ ಹಾಕಬೇಕು. ಪಕ್ಷದ ವರಿಷ್ಠರು, ರಾಜ್ಯಾಧ್ಯಕ್ಷರ ಅನುಮತಿ ಪಡೆಯದೆ ಪಕ್ಷದ ಚಿಹ್ನೆಯನ್ನು ಬಳಸದೆ ಯಾವ ಆಧಾರದ ಮೇಲೆ ಅಭಿಯಾನ ನಡೆಸಲು ಅವಕಾಶ ಕೊಡಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಪಕ್ಷದ ಒಪ್ಪಿಗೆಯನ್ನು ಪಡೆಯದೆ ನಡೆಸುತ್ತಿರುವ ಈ ಅಭಿಯಾನಕ್ಕೆ ಕೂಡಲೇ ರಾಷ್ಟ್ರದ ನಾಯಕರು ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಬೇಕು ಎಂದು ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…