Subscribe to Updates
Get the latest creative news from FooBar about art, design and business.
- ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
- ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
- ಮಹಿಳಾ ಸುರಕ್ಷತೆಗೆ ಅಕ್ಕಪಡೆ: ತುಮಕೂರಿನಲ್ಲಿ ಜಾಗೃತಿ ಅಭಿಯಾನ
- ಕನ್ನಡಿಗರ ಹೃದಯ ಸಾಮ್ರಾಜ್ಯದ ನಾಡದೊರೆಯಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್: ಎನ್.ಕೆ.ನಿಧಿಕುಮಾರ್
- ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
- ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
- ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
- ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
Author: admin
ಬಳ್ಳಾರಿ: ಜಿಲ್ಲಾ ಆಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಲ್ಲಿ ಐವರು ಬಾಣಂತಿಯರ ಸಾವಾಗಿದ್ದು ,ಘಟನೆ ಕುರಿತಾಗಿ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಅವರು, ಈ ಬಗ್ಗೆ ತಜ್ಞರ ತಂಡ ತನಿಖೆ ಮಾಡಿ ನೀಡಿರುವ ವರದಿಯನ್ನ ಕಾಂಗ್ರೆಸ್ ಸರ್ಕಾರ ಗೌಪ್ಯವಾಗಿ ಮುಚ್ಚಿಟ್ಟಿರುವುದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ನೈತಿಕೆ ಹೊಣೆ ಹೊತ್ತು ಆರೋಗ್ಯ ಸಚಿವದಿನೇಶ್ ಗುಂಡೂರಾವ್,ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ಸರಣಿ ಸಾವಿನ ಬೆನ್ನಲ್ಲೇ, ನ.16ರಂದು ಖಾಸಗಿ ಕಂಪನಿಯೊಂದು ಸರಬರಾಜು ಮಾಡಿರುವ ಔಷಧಿಯನ್ನ ಬಳಕೆ ಮಾಡದಂತೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಸುತ್ತೋಲೆ ಹೊರಡಿಸಿದೆ ಎಂದು ಹೇಳಿದ್ದಾರೆ. ಬಳ್ಳಾರಿಯಲ್ಲಿ ಸಂಭವಿಸಿರುವ ಬಾಣಂತಿಯರ ಸಾವಿಗೂ ಈ ಸುತ್ತೋಲೆಗೂ ಏನಾದರೂ ಸಂಬಂಧವಿದೆಯೇ ,ಈ…
ತುಮಕೂರು: ತುಮಕೂರು ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಮುಂತಾದ ಸಚಿವರು, ಜಿಲ್ಲೆಯ ಎಲ್ಲ ಕ್ಷೇತ್ರಗಳ ಶಾಸಕರು ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು. ಸುಮಾರು ರೂ. 938 ಕೋಟಿ ಮೊತ್ತದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ, 94 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಕಾಮಗಾರಿಗಳ ಉದ್ಘಾಟನೆ. ವಿವಿಧ ಇಲಾಖೆಗಳ 1.50…
ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ಚಂಡಮಾರುತದ (ಪೆಂಗಾಲ್) ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ಶುಶ್ಕ ಹಾಗೂ ಶೀತ ಗಾಳಿ ಸೆಳೆಯಲ್ಪಡುತ್ತಿರುವುದರಿಂದ ಉತ್ತಮ ಛಳಿಯ ವಾತಾವರಣ ಸೃಷ್ಟಿಯಾಗಿದೆ. ಈ ಚಂಡಮಾರುತವು ನವೆಂಬರ್ 30ರಂದು ಉತ್ತರ ತಮಿಳುನಾಡು ಕರಾವಳಿಯ ಮೂಲಕ ಭೂ ಪ್ರವೇಶಿಸುತ್ತಿದ್ದಂತೆಯೆ ರಾಜ್ಯದಲ್ಲಿ ಛಳಿಯ ವಾತಾವರಣವು ಕಡಿಮೆಯಾಗಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಡಿಸೆಂಬರ್ 2 ಅಥವಾ 3ರಂದು ಚಂಡಮಾರುತವು ಕೇರಳದ ಕಾಸರಗೋಡು ಹಾಗೂ ಕಣ್ಣೂರು ಮಧ್ಯೆ ಅರಬ್ಬಿ ಸಮುದ್ರಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಈ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ಇರುವಷ್ಟು ಸಮಯವೂ ( ಬಂಗಾಳಕೊಲ್ಲಿ ಕಡೆಯಿಂದ ಗಾಳಿ ಸೆಳೆಯಲ್ಪಡುವುದರಿಂದ) ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಹಿಂಗಾರು ರೀತಿಯ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸುಮಾರು ಡಿಸೆಂಬರ್ ಮೊದಲ ವಾರ ಪೂರ್ತಿ ಮಳೆಯ ಸಾಧ್ಯತೆ ಇದೆ.…
ತುಮಕೂರು: ನಗರದ ಮಹಾನಗರ ಪಾಲಿಕೆ ಮುಂಭಾಗದಿಂದ ಎಂ.ಜಿ.ರಸ್ತೆ, ಗುಂಚಿ ಚೌಕ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಮಾರ್ಗವಾಗಿ ಗಾಜಿನ ಮನೆಯವರೆಗೂ ಸಮ್ಮೇಳನಾಧ್ಯಕ್ಷರಾದ ಅಗ್ರಹಾರ ಕೃಷ್ಣಮೂರ್ತಿಯವರ ಮೆರವಣಿಗೆ ನಡೆದಿದೆ. ಈ ಸಂದರ್ಭದಲ್ಲಿ ವಿವಿಧ ಕಲಾತಂಡಗಳು ಕನ್ನಡ ಅಭಿಮಾನಿಗಳು ಸೇರಿದಂತೆ ಅಧಿಕಾರಿ ವರ್ಗ ಮೆರವಣಿಗೆ ಜೊತೆ ಹೆಜ್ಜೆ ಹಾಕಿದ್ದು ನೋಡುಗರ ಗಮನ ಸೆಳೆದಿದೆ. ಈ ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳುವ ಜೊತೆಗೆ ತಮ್ಮ ಕೈಯಲ್ಲಿ ಕನ್ನಡ ಬಾವುಟವನ್ನು ಹಿಡಿದು ಕನ್ನಡ ಪ್ರೇಮ ಸಾರಿದ್ದರೆ, ಮಹಿಳೆಯರು ಪೂರ್ಣ ಕುಂಭದೊಂದಿಗೆ ಸ್ವಾಗತ ಕೋರಿದರು. ಅದ್ದೂರಿಯಾಗಿ ತುಮಕೂರಿನಲ್ಲಿ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ವರದಿ : ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ/ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಬಾಡಿಗೆ ಕಟ್ಟಡಗಳು ಅಗತ್ಯವಿದ್ದು, ಕಟ್ಟಡವನ್ನು ಬಾಡಿಗೆಗೆ ನೀಡಲಿಚ್ಛಿಸುವ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ. ಕಟ್ಟಡದಲ್ಲಿ 100–125 ವಿದ್ಯಾರ್ಥಿಗಳು ವಾಸಿಸಲು ಸುಮಾರು 15 ರಿಂದ 20 ವಾಸದ ಕೊಠಡಿಗಳು, ಸ್ನಾನದ ಗೃಹ, ಶೌಚಾಲಯ, ಸ್ವಂತ ಬೋರ್ ವೆಲ್ ನೀರಿನ ವ್ಯವಸ್ಥೆ ಹಾಗೂ ಮತ್ತಿತರ ಮೂಲಭೂತ ಸೌಕರ್ಯಗಳನ್ನೊಳಗೊಂಡಿರುವ ಕಟ್ಟಡಗಳ ಅವಶ್ಯಕತೆಯಿದೆ. ಲೋಕೋಪಯೋಗಿ ಇಲಾಖೆಯವರು ನಿಗದಿಪಡಿಸುವ ಬಾಡಿಗೆಗೆ ಒಪ್ಪುವ ಮಾಲೀಕರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2251736ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲಾ ಮುಖ್ಯ ಶಿಕ್ಷಕರು, ಶಾಲಾ ಆಡಳಿತ ಮಂಡಳಿಯವರು ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಕೈಗೊಳ್ಳುವ ಮುನ್ನ ಪೂರಕ ದಾಖಲೆ/ಮಾಹಿತಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಪ್ರಸ್ತಾವನೆ ಸಲ್ಲಿಸಿ ಕಡ್ಡಾಯವಾಗಿ ಅನುಮೋದನೆ ಪಡೆಯಬೇಕೆಂದು ತುಮಕೂರು ತಾಲೂಕು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹನುಮಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೈಕ್ಷಣಿಕ ಪ್ರವಾಸದಲ್ಲಿ ಇಲಾಖಾ ಮಾರ್ಗಸೂಚಿಯನ್ನು ಮೀರಿ ಪ್ರವಾಸ ಕೈಗೊಂಡು ಸಂಭವಿಸುವ ಯಾವುದೇ ಅವಘಡಗಳಿಗೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಯವರೇ ಜವಾಬ್ದಾರರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಪೋಷಕತ್ವ ಕಾರ್ಯಕ್ರಮದಡಿ ಬಾಲನ್ಯಾಯ ಕಾಯ್ದೆ–2015 ಸೆಕ್ಷನ್–44ರ ಅನ್ವಯ ಪಾಲನೆ ಮತ್ತು ರಕ್ಷಣೆಯ ಅವಶ್ಯಕತೆಯಿರುವ ಮಕ್ಕಳನ್ನು ಅವರ ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ ತಾತ್ಕಾಲಿಕವಾಗಿ ಸಾಕಲು ಕಳುಹಿಸುವ ಅವಕಾಶವಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿಯೊಂದು ಮಗುವಿಗೂ ಕುಟುಂಬದ ವಾತಾವರಣದಲ್ಲಿ ಬೆಳೆಯುವ ಹಕ್ಕಿರುತ್ತದೆ. ಆದರೆ ಕಾರಣಾಂತರಗಳಿಂದ ಕೆಲವು ಮಕ್ಕಳನ್ನು ಸರ್ಕಾರಿ/ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲು ಮಾಡುವ ಅನಿವಾರ್ಯತೆ ಉಂಟಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಮಗುವನ್ನು ಮಗುವಿನ ಸ್ವಂತ ಕುಟುಂಬದಲ್ಲಿ ಇರಿಸಲು ಸಾಧ್ಯವಾಗದಿದ್ದಾಗ ಮಕ್ಕಳ ಬೆಳವಣಿಗೆ ಹಿತದೃಷ್ಠಿಯಿಂದ ಪೋಷಕತ್ವ ಯೋಜನೆಯಡಿ ಇತರೆ ಕುಟುಂಬದಲ್ಲಿ ಬೆಳೆಯಲು ಮಕ್ಕಳ ಕಲ್ಯಾಣ ಸಮಿತಿಯಿಂದ ತೀರ್ಮಾನ ನಿಯಮಾನುಸಾರ ತೆಗೆದುಕೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ತುಮಕೂರಿನ ಬಾಲಮಂದಿರಗಳಲ್ಲಿರುವ 6–18 ವರ್ಷದ ಹೆಣ್ಣು ಮತ್ತು ಗಂಡು ಮಕ್ಕಳನ್ನು ಸಾಕಲು/ನೋಡಿಕೊಳ್ಳಲು ಆಸಕ್ತಿ ಇರುವ ಪೋಷಕರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಮಹಾತ್ಮಗಾಂಧಿ ಕ್ರೀಡಾಂಗಣ, ಮೊದಲನೇ ಮಹಡಿ, ಜಿಲ್ಲಾ ಮಕ್ಕಳ ರಕ್ಷಣಾ…
ತುಮಕೂರು: ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ/ ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿಸೆಂಬರ್ 2ರಂದು ನಗರದ ಜೂನಿಯರ್ ಕಾಲೇಜು ಮೈದಾನಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಫಲಾನುಭವಿಗಳನ್ನು ಕರೆತರುವ ಜವಾಬ್ದಾರಿಯನ್ನು ಅಧಿಕಾರಿಗಳೇ ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗುರುವಾರ ವೀಡಿಯೋ ಕಾನ್ಸರೆನ್ಸ್ ಸಭೆ ನಡೆಸಿ ಮಾತನಾಡುತ್ತಾ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಸವಲತ್ತು ಪಡೆಯಲು ಆಗಮಿಸುವ ಫಲಾನುಭವಿಗಳ ಮಾಹಿತಿಯನ್ನು ಪಡೆದ ಅವರು ಸವಲತ್ತು ಪಡೆಯುವ ಫಲಾನುಭವಿಗಳೊಂದಿಗೆ ಡಿಸೆಂಬರ್ 2ರಂದು ಬೆಳಿಗ್ಗೆ 9:30ಗಂಟೆಗೆ ಕಾರ್ಯಕ್ರಮ ಸ್ಥಳದಲ್ಲಿ ಹಾಜರಿರಬೇಕು ಎಂದು ನಿಯೋಜಿತ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯ ಅಡಿಗಲ್ಲುಗಳನ್ನು ಒಂದೇ ವಿನ್ಯಾಸದಲ್ಲಿ ಸಿದ್ಧಪಡಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ಗೆ ಸೂಚನೆ ನೀಡಿದರು. ಶಿಷ್ಟಾಚಾರದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ…
ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನವೆಂಬರ್ 30ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ 2024–25ನೇ ಸಾಲಿನ ತುಮಕೂರು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಯುವಜನೋತ್ಸವ ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷದೊಳಗಿರುವ ವಿವಿಧ ಸಂಘ ಸಂಸ್ಥೆಗಳ ಯುವಕ/ಯುವತಿಯರು ಹಾಗೂ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ವಿಷಯಾಧಾರಿತ ಸ್ಪರ್ಧೆ: ಸಾಂಸ್ಕೃತಿಕ ಸ್ಪರ್ಧೆಯಡಿ ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಜನಪದ ನೃತ್ಯ(ತಂಡ/ವೈಯಕ್ತಿಕ) ಹಾಗೂ ಜನಪದ ಗೀತೆ(ತಂಡ/ವೈಯಕ್ತಿಕ); ಜೀವನ ಕೌಶಲ್ಯ ಸ್ಪರ್ಧೆಯಡಿ ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಕವಿತೆ ಬರೆಯುವುದು(ವೈಯಕ್ತಿಕ-1000 ಪದಗಳಿಗೆ ಮೀರದಂತೆ), ಕಥೆ ಬರೆಯುವುದು(1000 ಪದಗಳಿಗೆ ಮೀರದಂತೆ), ಚಿತ್ರಕಲೆ(ಂ3 ಅಳತೆ-11.7”x16.5”), ಭಾಷಣ ಸ್ಪರ್ಧೆ(ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿರಬೇಕು) ನಡೆಯಲಿದೆ. ಸ್ಪರ್ಧೆಯೊಂದಿಗೆ ಗುಡಿ ಕೈಗಾರಿಕೆಯ ಕಲಾ ಪ್ರಕಾರ, ನೇಕಾರಿಕೆ/ಜವಳಿ, ಕೃಷಿ ಉತ್ಪನ್ನಗಳ ಪ್ರದರ್ಶನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವಿನ್ಯತೆ ವಿಷಯದಡಿ ಪೂರಕ ಪರಿಕರ/ ಉಪಕರಣಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಸ್ಪರ್ಧಾಳುಗಳು ತಮ್ಮ…
ತುಮಕೂರು: ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಮರ್ಪಣೆ ಮಾಡಬೇಕು ಎಂದು ದಲಿತ ಮುಖಂಡರು ಒತ್ತಾಯಿಸಿದರು. ನಗರದ ಬಾಲ ಭವನ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಮಟ್ಟದ ಪ.ಜಾತಿ ಮತ್ತು ಪ.ಪಂಗಡಗಳ ಕುಂದು–ಕೊರತೆ ಸಭೆಯಲ್ಲಿ ದಲಿತ ಮುಖಂಡರು ಈ ಒತ್ತಾಯವನ್ನು ಮುಂದಿಟ್ಟರು. ಜಿಲ್ಲೆಯ ದಲಿತ ಸಮುದಾಯಗಳು ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮತ್ತು ಜಗಜೀವನ್ ರಾಮ್ ಸಮುದಾಯ ಭವನ ನಿರ್ಮಾಣ ಮಾಡಲು ಅನೇಕ ವರ್ಷಗಳಿಂದ ಸರ್ಕಾರದ ಮುಂದೆ ಬೇಡಿಕೆಯಿಟ್ಟರೂ ಸಹ ಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂಬ ದಲಿತ ಮುಖಂಡರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು, ಬಾಬು ಜಗಜೀವನ್ ರಾಮ್ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ 2 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸಮುದಾಯ ಭವನ ನಿರ್ಮಾಣ ಸ್ಥಳಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣ ಇತ್ಯರ್ಥಗೊಂಡ ತಕ್ಷಣವೇ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಮಹಾನಗರ ಪಾಲಿಕೆ…