Author: admin

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಜೊತೆಗೆ ಒಣ ಹವೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಹಗುರ ಮೋಡದ ವಾತಾವರಣ ಇರಲಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನವೆಂಬರ್ 30ರಂದು ಉತ್ತರ ತಮಿಳುನಾಡು ಕರಾವಳಿ ಮೂಲಕ ಭೂ ಪ್ರವೇಶಿಸುವ ಸಾಧ್ಯತೆಗಳಿದ್ದು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಮೂಲಕ ನವೆಂಬರ್ 30ರಂದು ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ನವೆಂಬರ್ 30ರಿಂದ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಡಿಸೆಂಬರ್ 1ರಿಂದ ಉಳಿದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ. ಈಗಿನಂತೆ…

Read More

ಬೀದರ್: ನೆರೆ ರಾಜ್ಯಕ್ಕೆ ಅಕ್ರಮವಾಗಿ 16 ಲಕ್ಷ ರೂ. ಮೌಲ್ಯದ ಶ್ರೀಗಂಧ ಸಾಗಿಸುತ್ತಿದ್ದ ಆರೋಪಿಯನ್ನು ಬಸವಕಲ್ಯಾಣ ಅರಣ್ಯ ಇಲಾಖೆ ಮತ್ತು ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ, ಬಸವಕಲ್ಯಾಣ ಅರಣ್ಯ ಇಲಾಖೆ ಮತ್ತು ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ. ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದೆ. ತೆಲಂಗಾಣ ರಾಜ್ಯದ ಶಂಶಾಬಾದ್ ಮೂಲದ ಪಿ.ಕೆ.ಬದ್ರುದ್ದೀನ್ ಬಂಧಿತ ಆರೋಪಿ. ತೆಲಂಗಾಣ ರಾಜ್ಯದಿಂದ ಮಹಾರಾಷ್ಟ್ರದ ಮುಂಬೈಗೆ ಅಕ್ರಮವಾಗಿ ಮಾರಾಟ ಮಾಡಲೆಂದು ಗೋಡ್ಸ್ ವಾಹನದಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಬಸವಕಲ್ಯಾಣ ವ್ಯಾಪ್ತಿಯ ಹೆದ್ದಾರಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಬಸವಕಲ್ಯಾಣ ನಗರ ಠಾಣೆ ಪಿಎಸ್ ಐ ಅಂಬರೀಷ್ ವಾಗ್ಮೋಡೆ‌ ಹಾಗೂ ವಲಯ ಅರಣ್ಯ ಅಧಿಕಾರಿ ಮಹೇಂದ್ರ ಮೌರ್ಯ ನೇತೃತ್ವದ ಅಧಿಕಾರಿಗಳ ತಂಡದ ದಾಳಿಯಲ್ಲಿ 16 ಲಕ್ಷ ರೂ. ಮೌಲ್ಯದ ಒಂದು ಕ್ವಿಂಟಾಲ್ ಶ್ರೀಗಂಧದ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಶಿರಾ: ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿ ಮಾದೇನಹಳ್ಳಿ ಗ್ರಾಮದ ಬಹುಜನರ ಆರಾಧ್ಯ ದೈವವಾದ ಶ್ರೀ  ರೇಣುಕಾ ಎಲ್ಲಮ್ಮ ದೇವಿ  ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಗುರುವಾರದಂದು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಅತ್ಯಂತ ಹಳೆಯದಾಗಿದ್ದ ಶ್ರೀ  ರೇಣುಕಾ ಎಲ್ಲಮ್ಮ ದೇವಿಯ ದೇವಾಲಯವನ್ನು ದೇವಾಲಯದ ಪೂಜಾ ಸಮಿತಿಯ ಪದಾಧಿಕಾರಿಗಳು ಭಕ್ತಾದಿಗಳ ಉದಾರ ಸಹಕಾರವನ್ನು ಪಡೆದು, ದೇವಾಲಯವನ್ನು ವಿಶಾಲವಾಗಿ ನಿರ್ಮಿಸಲಾಗಿದ್ದು,  ದೇವರ ಗರ್ಭಗುಡಿಯನ್ನು ನವೀಕರಿಸಲಾಗಿದ್ದು, ಗುರುವಾರದಂದು ನೂತನ ಗರ್ಭಗುಡಿಯಲ್ಲಿ ಪುನರ್ ಪ್ರತಿಷ್ಠಾಪಿಸಲಾಯಿತು. ದೇವಿಯ ಪುನರ್ ಪ್ರತಿಷ್ಠಾಪನಾ ಕಾರ್ಯದ ಅಂಗವಾಗಿ ಮರಡಿ ಗುಡ್ಡದ ಶ್ರೀ ರಂಗನಾಥಸ್ವಾಮಿ ಸನ್ನಿಧಿಯಲ್ಲಿ ಗಂಗಸ್ನಾನ ಮಾಡಿ ಗಣಪತಿ ಪೂಜೆಯ ನಂತರ ಸಂಜೆ ಐದು ಮೂವತ್ತಕ್ಕೆ ಸರಿಯಾಗಿ ಸುಮಂಗಲರಿಂದ ಗಂಗಾ ಪೂಜೆ ಮಾಡಿ ಆಲಯ ಪ್ರವೇಶ ಮಾಡಲಾಯಿತು. ಗುರುವಾರ ಬೆಳಗ್ಗೆ ಬೆಳಗಿನ ಜಾವ 5ಗೆ ಪ್ರಧಾನ ಕಲಶಾರಾಧನೆ ಸಪ್ತಸೂತ್ರರಾಧನೆ, ನವದುರ್ಗ ಆರಾಧನೆ ನಡೆದು ಬೆಳಗ್ಗೆ 5.30ರಿಂದ  6ಘಂಟೆಗೆ  ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ದೇವಿಯವರ ಸ್ಥಿರಮೂರ್ತಿ ಪ್ರತಿಷ್ಠಾಪನೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ನಂತರ…

Read More

ಮಧುಗಿರಿ:  ಪ್ರತೀ ವರ್ಷದಂತೆ ಈ ವರ್ಷವೂ ನವೆಂಬರ್ 26 ರಂದು ‘ಸಂವಿಧಾನ ದಿನ’ ಆಚರಿಸಲಾಗುತ್ತಿದೆ ,ಅದರ ಜೊತೆಗೆ ಈ  ದಿನ  ಇಲಾಖಾ     ಮಾರ್ಗದರ್ಶನದಂತೆ ‘ಸಮಾಜ ವಿಜ್ಞಾನ ವಿಷಯದ ದಿನ’ ವನ್ನಾಗಿಯೂ ಸಹ ಆಚರಿಸುತ್ತಿದ್ದೇವೆ ಎಂದು ಕಾಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿದ್ದ ಶಾಲಾ ಶಿಕ್ಷಕ ಮಂಜುನಾಥ್ ಹೇಳಿದರು. ಸಮಾಜ ವಿಜ್ಞಾನ ವಿಷಯಕ್ಕೆ ಸಂಬಂದಪಟ್ಟಂತೆ ಹಲವಾರು ಭಾವಚಿತ್ರಗಳು ಮತ್ತು ಭೂಪಟಗಳನ್ನು ಪ್ರದರ್ಶಿಸಲಾಗಿತ್ತು. ಶಾಲಾ ಮಕ್ಕಳು ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ನೆಹರು, ಕಿತ್ತೂರು ರಾಣಿ ಚೆನ್ನಮ್ಮ, ಜಾನಿ ರಾಣಿ ಲಕ್ಷ್ಮೀಬಾಯಿ, ಒನಕೆ ಓಬವ್ವ, ಟಿಪ್ಪು ಸುಲ್ತಾನ್, ಕೆಂಪೇಗೌಡ, ಕನಕದಾಸರು ಇನ್ನೂ ಮುಂತಾದ ಸ್ವಾತಂತ್ರ್ಯ ಹೋರಾಟಗಾರರ, ರಾಷ್ಟ್ರನಾಯಕರ, ದಾರ್ಶನಿಕರ ಮತ್ತು ಸಮಾಜ ಸುಧಾರಕರ ವೇಷಭೂಷಣಗಳನ್ನು ತೊಟ್ಟು ಪಾತ್ರಾಭಿನಯ ಮಾಡಿದರು. ಸದರಿ ಕಾಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಶಿಕ್ಷಣ ಸಂಯೋಜಕರಾದ ಹೇಮಲತಾರವರು ಮಾತನಾಡಿ ಮಕ್ಕಳಿಗೆ ಸಂವಿಧಾನದ ಪೀಠಿಕೆಯಲ್ಲಿನ ಸಮತಾವಾದ, ಜಾತ್ಯಾತೀತತೆ, ಸಮಾಜವಾದಿ ಧರ್ಮನಿರಪೇಕ್ಷತೆಗಳ ಅರ್ಥ ಮತ್ತು ಮಹತ್ವವನ್ನು ತಿಳಸಿದರು. ಶಾಲಾ ಮಕ್ಕಳು ಈ ಎಲ್ಲಾ ಆದರ್ಶ ವ್ಯಕ್ತಿಗಳ ಗುಣಗಳನ್ನು…

Read More

ತುಮಕೂರು: ಗ್ಯಾಂಗ್ ರೇಪ್  ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಎರಡನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯದಿಂದ‌ ತೀರ್ಪು ಹೊರಬಿದ್ದಿದ್ದು, ನ್ಯಾಯಾಧೀಶರಾದ ಹೆಚ್. ಅನಂತ್ ಅವರಿಂದ ಶಿಕ್ಷೆ ಪ್ರಕಟಗೊಂಡಿದೆ. ಇಬ್ಬರು ಆರೋಪಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ತಲಾ 1,62,000 ರೂ. ದಂಡ ವಿಧಿಸಲಾಗಿದೆ. ಆರೋಪಿಗಳಾದ ಮಹಂತೇಶ್, ಶ್ರೀನಿವಾಸ್‌ ಕಾರಿನಲ್ಲಿ ಅತ್ಯಾಚಾರ ಮಾಡಿದ್ದರು. ಅತ್ಯಾಚಾರ ಮಾಡಿದ್ದನ್ನು ವಿಡಿಯೋ ಮಾಡಿಕೊಂಡಿದ್ದರು. ನಿರ್ಭಯಾ ಕೇಸ್‌ ಗೂ ಮೂರು ತಿಂಗಳ ಮೊದಲು ನಡೆದಿದ್ದ ಪ್ರಕರಣ ಇದಾಗಿತ್ತು. ಮೂವರು ಗೆಳತಿಯರ ಪೈಕಿ ಇಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿತ್ತು. ಓರ್ವ ಯುವತಿಯಿಂದ ಮಾತ್ರ ದೂರು ದಾಖಲಾಗಿತ್ತು. ತನಿಖೆಯಿಂದ ಮತ್ತೋರ್ವ ಯುವತಿ ಮೇಲಿನ ಅತ್ಯಾಚಾರ ಬೆಳಕಿಗೆ ಬಂದಿತ್ತು. ಓರ್ವ ಕಾರು ಡ್ರೈವ್ ಮಾಡುತ್ತಿದ್ದರೆ, ಮತ್ತೊಬ್ಬ ಅತ್ಯಾಚಾರ ಮಾಡುತ್ತಿದ್ದನು. ಇವನು ಕಾರು ಓಡಿಸಬೇಕಾದರೆ, ಅವನು ಅತ್ಯಾಚಾರ ಮಾಡುತ್ತಿದ್ದ. ಡ್ರಾಪ್ ಕೊಡುವ ನೆಪದಲ್ಲಿ ಕಾರಿಗೆ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ಮಾಡಿದ್ದ ಆರೋಪಿಗಳು ಕುರಿತು…

Read More

ಸರಗೂರು: ಸಂವಿಧಾನ ಬದಲಾಯಿಸಬೇಕು ಎಂದು ಪೇಜಾವರ ಶ್ರೀ ಮತ್ತು ಸಂಘ ಪರಿವಾರ ನಿಷ್ಠೆಯ ಸ್ವಾಮೀಜಿಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಆತಂಕಕಾರಿ‌ ಹಾಗೂ ಕಳವಳಕಾರಿ ಮಾತ್ರವಲ್ಲ, ಸಂವಿಧಾನಕ್ಕೆ ಬೆದರಿಕೆ ಎಂದು ವಿಧಾನ ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಆಗ್ರಹಿಸಿದರು. ತಾಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ಗುರುವಾರದಂದು  ಪತ್ರಿಕೆ ಪ್ರಕಟನೆಯಲ್ಲಿ ತಿಳಿಸಿ ಮಾತನಾಡಿದರು. ಸಂವಿಧಾನ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಕೈಗೊಳ್ಳಬೇಕು. ಮನುವಾದಿಗಳ ಸಂಖ್ಯೆ ಹೆಚ್ಚದಂತೆ ನೋಡಿಕೊಳ್ಳಬೇಕು. ಮಠಗಳಲ್ಲಿ ಪಂಕ್ತಿಭೇದ ಮಾಡುವವರು ಪ್ರಜೆಗಳನ್ನು ಸಮಾನವಾಗಿ ಕಾಣುವುದಿಲ್ಲ. ಅಸ್ಪೃಶ್ಯತೆ ಪಾಲನೆ, ಮೌಢ್ಯ ಬಿತ್ತುವ ಸ್ವಾಮೀಜಿಗಳು ಸಂವಿಧಾನದ ವಿರುದ್ಧ ಮಾತನಾಡದಂತೆ ತಾಕೀತು ಮಾಡಬೇಕು’ ಎಂದು  ಖಂಡಿಸಿದರು. ಸಮಾಜ ಸುಧಾರಕರ ಆಶಯಗಳು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದಿಂದ ರಚಿತವಾಗಿರುವ ‘ಸರ್ವ ಧರ್ಮ, ಸಹಬಾಳ್ವೆಯ ತಿರುಳಿರುವ ಸಂವಿಧಾನದ ಬದಲಾವಣೆಗೆ ಒತ್ತಾಯಿಸಿರುವ ಪೇಜಾವರ ಶ್ರೀಗಳು, ತಮಗೆ ಗೌರವ ನೀಡುವ ಸಂವಿಧಾನ ಯಾವುದು ಎಂದು ಮೊದಲು ಸ್ಪಷ್ಟಪಡಿಸಲಿ. ನೂರಾರು ಕೋಟಿ ಜನಸಂಖ್ಯೆಯ ಭಾರತದಲ್ಲಿ ಪ್ರತಿಯೊಬ್ಬರು ಸ್ವಾಭಿಮಾನದಿಂದ…

Read More

ಸರಗೂರು :  ಸ್ವಾಮೀಜಿಗಳು ರಾಜಕಾರಣದಿಂದ ದೂರ ಇರಬೇಕು.ವಿವಾದಾತ್ಮಕ ಹೇಳಿಕೆ ಕೊಟ್ಟು ದೇಶದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಮಾಡಬಾರದು ಎಂದು  ಕಾಂಗ್ರೆಸ್ ಟೌನ್ ಅಧ್ಯಕ್ಷ ಹಾಗೂ ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಾಮೀಜಿಗಳು ಹೇಳಿಕೆ ಕೊಟ್ಟಿರುವ ಬಗ್ಗೆ ಬುಧವಾರದಂದು ಪ್ರಕಟಣೆಯಲ್ಲಿ ಪ್ರತಿಕ್ರಿಯಿಸಿದ ಅವರು,  ಮುಸಲ್ಮಾನರ  ಮತದಾನದ ಹಕ್ಕು ಹಿಂಪಡೆಯಬೇಕು ‌ಎಂಬ ಸ್ವಾಮೀಜಿಗಳ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಸ್ವಾಮೀಜಿಗಳು ಇಂತಹ ವಿವಾದಾತ್ಮಕ ಇಂತ ಹೇಳಿಕೆ ನೀಡಬಾರದು. ಸಮಾಜದ ಶಾಂತಿ ಕೆಡಿಸುವ ಕೆಲಸ ಮಾಡಬಾರದು. ಅವರು  ರಾಜಕಾರಣದಿಂದ ದೂರ ಇರೋದು ಒಳ್ಳೆಯದು. ಮತದಾನ ಎಂಬುದು ಸಂವಿಧಾನದ ಮೂಲಕ ಈ ದೇಶದ ಪ್ರತಿಯೊಬ್ಬ ಪ್ರಶ್ನೆಗೂ ಬಂದಿರುವ ಹಕ್ಕು. ಇಲ್ಲಿ ಒಬ್ಬ ವ್ಯಕ್ತಿ ಜನಿಸಿದರೆ ಸಂವಿಧಾನದಿಂದ ಸಿಗುವ ಹಕ್ಕುಗಳಲ್ಲಿ ಇದು ಕೂಡ ಒಂದು ಎಂದು ತಿಳಿಸಿದರು. ಸಾರ್ವಜನಿಕರು ನಿಮ್ಮಗಳ ದೇವರು ಎಂದುಕೊಂಡಿದ್ದಾರೆ ಅದರಂತೆ ತಾವುಗಳು ಇದ್ದಾರೆ ಸಾಕು. ರಾಜಕೀಯ ಮಾಡೋಕ್ಕೆ ಬಂದರೆ ಬನ್ನಿ ಇಲ್ಲಾಂದ್ರೆ ಮಠದಲ್ಲಿ ಸ್ವಾಮೀಜಿ ಪೇಜಾವರ ಶ್ರೀಗಳು ಮಠದಲ್ಲೇ ಇರಿ…

Read More

ತುಮಕೂರು:  ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯನ್ನು ಮುಂದೂಡಿರುವುದಾಗಿ  ಪ್ರಕಟಣೆ ನೀಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿರುವ ಘಟನೆ ನಡೆದಿದ್ದು, ಘಟನೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ನಗರದ ಬಾಲಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆ ಆಯೋಜಿಸಲಾಗಿತ್ತು. ಆದರೆ ಈ ಸಭೆಯನ್ನು ಡಿಸೆಂಬರ್ 7ಕ್ಕೆ ಮುಂದೂಡಲಾಗಿರುವುದಾಗಿಯೂ, ಅಂದು ಬೆಳಗ್ಗೆ 11 ಗಂಟೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ. ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದರು. ಆದರೆ,  ಸಭೆಯನ್ನು ಮುಂದೂಡದೇ ಈ ಹಿಂದೆ ನೀಡಿದ ದಿನಾಂಕ ನವೆಂಬರ್ 28ರಂದೇ ಸಭೆಯನ್ನು ಮಾಡುವ ಮೂಲಕ ಗೊಂದಲ ಸೃಷ್ಟಿ ಮಾಡಿದ್ದಾರೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ…

Read More

ಕೇರಳ: ಕಾಂಗ್ರೆಸ್‌‍ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕೇರಳದ ವಯನಾಡ್‌ನಿಂದ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅವರು,  ಇಂದು ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ತಾಯಿ ಸೋನಿಯಾ ಮತ್ತು ಸಹೋದರ ರಾಹುಲ್‌ ಅವರ ಸಮ್ಮುಖದಲ್ಲಿ ಅವರು ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನಾಂದೇಡ್‌ ಉಪಚುನಾವಣೆಯಲ್ಲಿ ಗೆದ್ದಿರುವ ರವೀಂದ್ರ ಚವಾಣ್‌ (ಕಾಂಗ್ರೆಸ್‌‍) ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದ್ದು, ಅವರು ದೇವರ ಹೆಸರಿನಲ್ಲಿ ಮರಾಠಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ರಾಂಚಿ: ಲೀವ್ ಇನ್ ರಿಲೇಶನ್‌ ಶಿಪ್‌ ನಲ್ಲಿದ್ದವಳನ್ನು ಪ್ರಿಯಕರನೇ ಹತ್ಯೆ ಮಾಡಿ ಮೃತದೇಹವನ್ನು 50 ತುಂಡುಗಳಾಗಿ ಕತ್ತರಿಸಿ ಅರಣ್ಯ ಪ್ರದೇಶದಲ್ಲಿ ಎಸೆದ ಘೋರ ಘಟನೆ ಜಾರ್ಖಂಡ್‌ ನ ಕುಂತಿ ಜಿಲ್ಲೆಯಲ್ಲಿ ನಡೆದಿದೆ. ನರೇಶ್ ಭೇಂಗಾ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಜೋರ್ಡಾಗ್ ಗ್ರಾಮದ ಗಂಗಿ ಕುಮಾರಿ ಹತ್ಯೆಗೀಡಾದ ಬಲಿಪಶುವಾಗಿದ್ದಾಳೆ. ನರೇಶ್ ಗೆ ಮದುವೆಯಾಗಿದ್ದರೂ ಕೂಡ ಆತ  ಗಂಗಿ ಜೊತೆಗೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ.  ಈ ನಡುವೆ  ನರೇಶ್ ಗೆ ವಿವಾಹವಾಗಿರುವುದು ಗಂಗಿ ಕುಮಾರಿಗೆ ತಿಳಿದಿದ್ದು, ಹೀಗಾಗಿ ಇಬ್ಬರ ನಡುವೆ ಬಿರುಕು ಮೂಡಿತ್ತು. ನನ್ನನ್ನು ನಿನ್ನ ಜೊತೆ ಕರೆದುಕೊಂಡು ಹೋಗು, ಇಲ್ಲವಾದರೆ, ನಾನು ನಿನಗೆ ನೀಡಿದ ಹಣವನ್ನು ವಾಪಸ್ ಕೊಡು ಎಂದು ಗಂಗಿ ಕೇಳಿದ್ದಾಳೆ, ಇದರಿಂದ ನರೇಶ್ ಹತ್ಯೆಗೆ ಸಂಚು ಹಾಕಿದ್ದು, ಆಕೆಯನ್ನು ಮನೆಯ ಸಮೀಪವಿರುವ ಅರಣ್ಯಕ್ಕೆ ಕರೆದೊಯ್ದು, ದುಪ್ಪಟ್ಟಾದಿಂದ ಕತ್ತು ಹಿಸುಕಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ನಂತರ 50 ತುಂಡುಗಳಾಗಿ ಕತ್ತರಿಸಿ ಕಾಡು ಪ್ರಾಣಿಗಳಿಗೆ ಎಸೆದಿದ್ದಾನೆ. ನಾಯಿಯೊಂದು ಮೃತದೇಹದ ಭಾಗವನ್ನು…

Read More