Author: admin

ಕಾಸರಗೋಡು ಸೇರಿದಂತೆ ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ.  ಉತ್ತರ ಒಳನಾಡು ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಶ್ರೀಲಂಕಾ ಕರಾವಳಿಯಲ್ಲಿ ಬೀಡುಬಿಟ್ಟಿರುವ ವಾಯುಭಾರ ಕುಸಿತವು ತಮಿಳುನಾಡು ಕರಾವಳಿ ಮೂಲಕ ಉತ್ತರಕ್ಕೆ ಚಲಿಸುವ ವರದಿಗಳಿದ್ದರೂ, ಚಲಿಸುವ ಪಥದ ನಿಖರತೆ ಇನ್ನೂ ಸ್ಪಷ್ಟವಾಗಿಲ್ಲ. ಕೆಲವು ವರದಿಗಳು ತಮಿಳುನಾಡು ಕರಾವಳಿ ಅಪ್ಪಳಿಸುವ ಸಾಧ್ಯತೆಯನ್ನು ತೋರಿಸುತ್ತಿವೆ. ಹಾಗೇನಾದರೂ ಸಂಭವಿಸಿದರೆ ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ ವಾರ ಮಳೆಯಾಗುವ ಸಾಧ್ಯತೆಗಳಿವೆ. ಈಗಿನಂತೆ ನವೆಂಬರ್ 29ರಿಂದ ದಕ್ಷಿಣ ಒಳನಾಡು ಹಾಗೂ 30ರಿಂದ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. ಈ ಮಳೆಯು ಒಂದು ವಾರದ ಕಾಲ ಇರಬಹುದೆಂದು ಮುನ್ಸೂಚನಾ ನಕ್ಷೆಗಳು…

Read More

ಸರಗೂರು: ಸರಗೂರಿನಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲು 8.50 ಕೋಟಿ ಹಣ ಬಿಡುಗಡೆ ಆಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ತಾಲ್ಲೂಕಿನ ಪಟ್ಟಣದ ಪ.ಪಂ. ಆವರಣದಲ್ಲಿ ಮಂಗಳವಾರದಂದು ವಿನಾಯಕ ರಸ್ತೆ ಬೀದಿ ವ್ಯಾಪಾರಿಗಳ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು. ಸರಗೂರು ತಾಲ್ಲೂಕು ಕೇಂದ್ರವಾದ ಬಳಿಕ ಜನವರಿ ತಿಂಗಳಲ್ಲಿ ಸರಗೂರಿನಲ್ಲಿ ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದರು. ನಮ್ಮ ಕುಟುಂಬಕ್ಕೆ ಮೂರು ಬಾರಿ ತಾಲ್ಲೂಕಿನ ಸೇವೆ ಮಾಡಲು ಅವಕಾಶ ನೀಡಿದ್ದಾರೆ. ನೂರು ಬೆಡ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ. ಪೈರ್ ಬ್ರಿಗೇಡ್ ಕೋರ್ಟ್ ನಿರ್ಮಾಣ, ಹುಣಸೂರು ಮತ್ತು ಬೇಗೂರು ತನಕ ಡಬಲ್ ರಸ್ತೆ ಮಾಡಿಸಲು 70 ಕೋಟಿ ಅನುದಾನವನ್ನು ಯೋಜನೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಗಮನಕ್ಕೆ ತಂದು ಅನುದಾನವನ್ನು ಬಿಡುಗಡೆ ಮಾಡಬೇಕು ತಿಳಿಸಲಾಗುವುದು ಎಂದರು. ನಮ್ಮ ತಂದೆ ದಿ.ಚಿಕ್ಕಮಾದು ಹಾಗೂ ನನ್ನ…

Read More

ಪಾವಗಡ: ಇತ್ತೀಚಿಗೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿತ್ತು, ಇದು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು, ಇದೀಗ ಕಳವಾಗಿರುವಂತಹ ಬೈಕ್ ಗಳನ್ನು ಮತ್ತು ಆರೋಪಿಯನ್ನ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಾವಗಡ ಪೊಲೀಸ್ ಠಾಣೆಯ ಪಿಎಸ್ ಐ ವಿಜಯ್ ಕುಮಾರ್ ತೊಡಗಿದ್ದ ವೇಳೆ ದಿನಾಂಕ 25ರ ಬೆಳಗ್ಗೆ 7 ಗಂಟೆಯ ಸಂದರ್ಭದಲ್ಲಿ ಸಿಬ್ಬಂದಿಯ ಜೊತೆ ಕರ್ನಾಟಕ ಆಂಧ್ರ ಗಡಿ ಸಮೀಪದ ರಾಜವಂತಿ ಹೊರವಲಯದ ರಿಲ್ಯಾಕ್ಸ್ ಬಾರ್ ಸಮೀಪ ಕಳ್ಳತನವಾಗಿದ್ದ AP–02—CJ–5734 ಬಜಾಜ್ ಪಲ್ಸರ್ ಬೈಕ್ ಸಮೇತ ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಪೆನುಗೊಂಡ ತಾಲೂಕಿನ ಮಾವತ್ತೂರು ಗ್ರಾಮಕ್ಕೆ ಸೇರಿದ ಹರೀಶ್ ಎನ್ನುವ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಆರೋಪಿ ಹರೀಶ್ ಅದೇ ತಾಲೂಕಿಗೆ ಸೇರಿದ ಮ್ಯಾಕಲಪಲ್ಲಿ ಗ್ರಾಮದ ಮನೋಹರ್ ಮತ್ತು ಜಾನಕಂಪಲ್ಲಿ ಗ್ರಾಮದ ಸಾಯಿ ಪವನ್ ಎಂಬುವವರು ಜೊತೆ ಸೇರಿ ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ವಿವಿಧಡೆ…

Read More

ತುಮಕೂರು: ರೈಲ್ವೆ ಟ್ರ್ಯಾಕ್ ಮೇಲೆ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿರೋ ಘಟನೆ ತುಮಕೂರು ನಗರದ ಶೆಟ್ಟಿಹಳ್ಳಿ ರೈಲ್ವೆ ಅಂಡರ್ಪಾಸ್ ಬಳಿ ನಡೆದಿದೆ. ಶೆಟ್ಟಿಹಳ್ಳಿ ಅಂಡರ್ಪಾಸ್ ಬಳಿ ಪತ್ತೆಯಾದ ಮೃತದೇಹವು ರುಂಡ–ಮುಂಡ ಬೇರೆ ಬೇರೆಯಾದ ಸ್ಥಿತಿಯಲ್ಲಿ ಬಿದ್ದಿದೆ. ಮೃತ ವ್ಯಕ್ತಿಯ ಎಡ ಕಾಲು ಹಾಗೂ ಬಲಗೈ ಮುರಿದಿದೆ, ಮೃತನ ಹೊಟ್ಟೆ ಭಾಗದಲ್ಲಿ ತರಚಿರುವ ಗುರುತುಗಳಿವೆ. ಸ್ಥಳದಲ್ಲಿ ಮೃತ ವ್ಯಕ್ತಿಯ ಪರ್ಸ್, ಮೊಬೈಲ್ ಪತ್ತೆ ಯಾಗಿದ್ದು ಮೃತ ವ್ಯಕ್ತಿ ಚಿತ್ರದುರ್ಗ ಮೂಲದ ಹೆಮ್ಲಾ ನಾಯಕ್ ಎಂದು ಪತ್ತೆಯಾಗಿದೆ. ಸ್ಥಳಕ್ಕೆ ಯಶವಂತಪುರ ರೈಲ್ವೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಅಕ್ರಮವಾಗಿ ನಾಡಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ತುಮಕೂರು ಜಿಲ್ಲಾ ಪೊಲೀಸರು ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಮಧುಚಂದ್ರ, ಶಿವಕುಮಾರ್, ಮಂಜುನಾಥ, ತಿಮ್ಮರಾಜ, ರವೀಶ್, ಇಮ್ರಾನ್ ಪಾಷ ಎಂಬುವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಆಗಸ್ಟ್ 12ರಂದು ಗುಬ್ಬಿ ತಾಲೂಕಿನ ತಿಪೂರು ಗ್ರಾಮದ ಆರೋಪಿ ಮಧುಚಂದ್ರ ಎಂಬಾತ ಅಕ್ರಮವಾಗಿ ಯಾವುದೇ ಲೈಸೆನ್ಸ್ ಇಲ್ಲದೆ ನಾಡಬಂದೂಕಿನೊಂದಿಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದನು. ಇದನ್ನು ಆಕ್ಷೇಪಿಸಿದ ದರ್ಶನ್ ಎಂಬುವರ ಜೊತೆ ಮಾತಿಗೆ ಮಾತು ಬೆಳೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಂದೂಕು ಕೆಳಗೆ ಬಿದ್ದು ಸ್ಥಳದಲ್ಲಿಯೇ ಇದ್ದ ಚೈತ್ರ ಎಂಬುವರಿಗೆ ಗಾಯವಾಗಿತ್ತು. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಆರೋಪಿ ಹೊಂದಿದ್ದ ಲೈಸೆನ್ಸ್ ಇಲ್ಲದ ಬಂದೂಕಿನ ಬಗ್ಗೆ ತನಿಖೆ ನಡೆಸಿದಾಗ ಜಿಲ್ಲೆಯಲ್ಲಿ ನಾಡ ಬಂದೂಕುಗಳನ್ನು ತಯಾರಿಸಿ 25,000 ರಿಂದ 30,000 ರೂ ಗಳಿಗೆ ಮಾರಾಟ ಮಾಡುತ್ತಿರುವ ಜಾಲ ಬೆಳಕಿಗೆ ಬಂದಿದೆ. ಬಂಧಿತರಾಗಿರೋ ಆರು ಮಂದಿ ಆರೋಪಿಗಳಿಂದ…

Read More

ತುಮಕೂರು: ಮಧುಗಿರಿ ಎಆರ್‌ಟಿಒ ಕಚೇರಿಯ ಮೇಲೆ ಇಂದು ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಕೈಗೊಂಡಿದೆ. ಲೋಕಾಯುಕ್ತ DSP ಉಮಾಶಂಕರ್ ಅವರ ನೇತೃತ್ವದ ಈ ಕಾರ್ಯಾಚರಣೆ ಸಾರ್ವಜನಿಕರಿಂದ ಬಂದ ಭ್ರಷ್ಟಾಚಾರದ ಆರೋಪದ ಹಿನ್ನೆಲೆ ನಡೆದಿದ್ದು, ಕಚೇರಿಯ ಸಿಬ್ಬಂದಿ ಚಟುವಟಿಕೆಗಳು, ಕಡತಗಳ ನಡವಳಿಕೆ, ಮತ್ತು ಸಾರ್ವಜನಿಕ ಸೇವೆ ಪ್ರಕ್ರಿಯೆಗಳ ಪಾರದರ್ಶಕತೆಯ ಬಗ್ಗೆ ತನಿಖೆ ನಡೆದಿದೆ. ದಾಳಿಯ ಸಂದರ್ಭದಲ್ಲಿ ಹಲವು ಪ್ರಮುಖ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಕಚೇರಿಯಲ್ಲಿ ಮುಕ್ತಾಯವಾಗದೆ ಇರುವ ಸಾರ್ವಜನಿಕ ಸಂಬಂಧಿತ ಕಾರ್ಯಗಳು, ಸಾರ್ವಜನಿಕ ದೂರುಗಳು, ಮತ್ತು ಸಿಬ್ಬಂದಿಯ ಕರ್ತವ್ಯದ ನಿರ್ವಹಣೆಯನ್ನು ಗಮನಿಸಲಾಗಿದೆ. ಲೋಕಾಯುಕ್ತ ತಂಡ ಇನ್ನಷ್ಟು ವಿವರಗಳನ್ನು ಪರಿಶೀಲನೆ ಮುಗಿದ ಬಳಿಕ ಬಹಿರಂಗಪಡಿಸಲಿದೆ. ಈ ದಾಳಿಯು ಸವಾಲಿನ ಕೆಲಸಗಳಿಗೆ ಜವಾಬ್ದಾರಿಯನ್ನು ತರುತ್ತದೆ ಎಂಬ ನಿರೀಕ್ಷೆ ಸಾರ್ವಜನಿಕರಲ್ಲಿ ಮೂಡಿಸಿದೆ.ಹೆಚ್ಚಿನ ಮಾಹಿತಿ ಲಭ್ಯವಾದಂತೆ ತಕ್ಷಣವೇ ವರದಿ ನೀಡಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಹೆಚ್.ಡಿ.ಕೋಟೆ: ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿಯ ಆದಿಕರ್ನಾಟಕ ಸಮುದಾಯದ ಹಿತಚಿಂತನ ಸಭೆಯನ್ನು ಪಟ್ಟಣದ ಶಾದಿಮಹಲ್ ನಲ್ಲಿ ಕ್ಷೇತ್ರದ ಸಮುದಾಯದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಡಾ.ಎಸ್.ಮರಿದೇವಯ್ಯ ಮಾತನಾಡಿ, ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಆದಿಕರ್ನಾಟಕ ಸಮುದಾಯದ ಮುಖಂಡರು ಒಗ್ಗಟ್ಟಿನಿಂದ ಪಕ್ಷದ ಸಂಘಟನೆ ಮಾಡಬೇಕು, ನಮ್ಮ ಸಮಾಜ ಕ್ಷೇತ್ರದಲ್ಲಿ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ, ಹಾಗೆಯೇ ಸಮುದಾಯವು1952ರಿಂದ 2024ರವರೆಗೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬರುತ್ತಿದ್ದೇವೆ. ಈ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಲಾಗಿದೆ. ಪ್ರತಿ ಗ್ರಾಮಗಳಲ್ಲೂ ನಮ್ಮ ಸಮಾಜ ಶೇಕಡ 90 ಹೆಚ್ಚು ಮತದಾನವನ್ನು ಮಾಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಿದ್ದೇವೆ, ಸುಮಾರು 72 ವರ್ಷಗಳಿಂದ ಹೆಚ್.ಡಿ.ಕೋಟೆ ತಾಲೂಕಿನ ಆದಿಕರ್ನಾಟಕ ಸಮಾಜಕ್ಕೆ ಕಾಂಗ್ರೆಸ್ ಪಕ್ಷ ಎಂಎಲ್ ಎ ಎಂ ಪಿ ಎಂಎಲ್ಸಿ ಟಿಕೆಟ್ ನೀಡಿರುವುದಿಲ್ಲ, ಹಾಗೆಯೇ ನಿಗಮ ಮಂಡಳಿಯ ಅಧ್ಯಕ್ಷರು…

Read More

ತುಮಕೂರು: ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ನಡೆಯಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಖಡಕ್ ಸೂಚನೆ ನೀಡಿದ್ದಾರೆ. ತುಮಕೂರಿನಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮ ನಿಮಿತ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಸವಲತ್ತು ವಿತರಣೆ ಕಾರ್ಯಕ್ರಮದ ಕುರಿತು ಈಗಾಗಲೇ ಎಲ್ಲಾ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಆಯಾ ಇಲಾಖೆ ಕಾಮಗಾರಿಗಳ ಉದ್ಘಾಟನೆ ಸಂಬಂಧಿಸಿದ ಕಾಮಗಾರಿಗಳು ಶಿಲಾನ್ಯಾಸದ ಫಲಕ ಸೇರಿದಂತೆ ವಿವಿಧ ಸಿದ್ಧತೆಗಳಿಗೆ ಸೂಚನೆ ನೀಡಲಾಗಿದೆ. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲದಂತೆ ಹಾಗೂ ಲೋಪವಾಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಅವರು ಸೂಚಿಸಿದರು. ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಈಗಾಗಲೇ ಮುದ್ರಿಸಿ ಎಲ್ಲಾ ಹಂತದ ಅಧಿಕಾರಿಗಳಿಗೆ ನೀಡಲಾಗಿದೆ. ಸಂಬಂಧಿಸಿದ ಅಧಿಕಾರಿಗಳು ಆಯಾ ಸ್ಥಳೀಯ ಜನಪ್ರತಿನಿಧಿಗಳಿಗೆ…

Read More

ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ)ಗಳ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ತರಬೇತಿ ಪಡೆಯಲಿಚ್ಛಿಸುವವರು ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 30ರೊಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತರಬೇತಿ ಕೇಂದ್ರ ಅಥವಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೇಂದ್ರದ ಪ್ರಾಂಶುಪಾಲರು ಅಥವಾ ಜಾಲತಾಣ https://hfwcom.karnataka.gov.in ಅನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಡಿಹೆಚ್ ಓ ಡಾ: ಚಂದ್ರಶೇಖರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕು ನಾಗಲಮಡಿಕೆ ಗ್ರಾಮದ ಎಸ್.ಆರ್.ಎಂಟರ್ ಪ್ರೈಸಸ್ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಕಳಪೆ ದರ್ಜೆಯ 2 ಜೈವಿಕ ಪ್ರಚೋದಕ(ಜೈವಿಕ/ಸಾವಯವ) ಪರಿಕರಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಪುಟ್ಟರಂಗಪ್ಪ ತಿಳಿಸಿದ್ದಾರೆ. ಜಪ್ತಿ ಮಾಡಲಾದ ಪರಿಕರಗಳಲ್ಲಿ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳಿರುವ ಬಗ್ಗೆ ವಿಶ್ಲೇಷಣಾ ಪ್ರಯೋಗಾಲಯಗಳ ವರದಿಯಿಂದ ದೃಢಪಟ್ಟಿರುವುದರಿಂದ ಕೃಷಿ ಇಲಾಖೆಯ ಜಾರಿದಳ ವಿಭಾಗದಿಂದ ಕಳಪೆ ದರ್ಜೆಯ ಪರಿಕರಗಳನ್ನು ಜಪ್ತಿ ಮಾಡಿ ಇಲಾಖೆ ವಶಕ್ಕೆ ಪಡೆಯಲಾಗಿದೆ. ಕೃಷಿ ಇಲಾಖೆಯ ಜಾರಿದಳ ವಿಭಾಗವು ನವೆಂಬರ್ 25ರಂದು ಎಸ್.ಆರ್.ಎಂಟರ್ ಪ್ರೈಸಸ್ ಮಾರಾಟ ಮಳಿಗೆ ಮೇಲೆ ದಾಳಿ ಮಾಡಿ ನಿಯಮಾನುಸಾರ ಪರಿಶೀಲಿಸಿದಾಗ, ಅಂದಾಜು 29,400 ರೂ. ಮೌಲ್ಯದ 4.90 ಲೀಟರ್ ಪ್ರಮಾಣದ ಹೈದರಾಬಾದ್ ಉತ್ಪಾದಕ ಕಂಪನಿಗಳಾದ ಆಸ್ಕರ್ ಕ್ರಾಪ್ ಕೇರ್ ಹಾಗೂ ವಾಯು ಎಂಬ 2 ಜೈವಿಕ ಪರಿಕರ ಮಾದರಿಗಳನ್ನು ಅನುಮತಿ ಪಡೆಯದೆ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕಳೆದ ಬಾರಿ ಕ್ಷೇತ್ರ ಭೇಟಿ ಸಂದರ್ಭದಲ್ಲಿ ಸಂಶಯಾಸ್ಪದ ಹಿನ್ನೆಲೆಯಲ್ಲಿ ಕೀಟನಾಶಕ ತೇಷಾಂಶ ವಿಶ್ಲೇಷಣೆಗಾಗಿ…

Read More