Author: admin

ತುಮಕೂರು: ರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾ ಪ್ರಭುತ್ವದ ಬಗ್ಗೆ ಜನ ಜಾಗೃತಿ ಮೂಡಿಸಲು ಕಳೆದ ಸೆಪ್ಟೆಂಬರ್ 15ರಂದು ಜಿಲ್ಲೆಯಲ್ಲಿ 90 ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ ನಿರ್ಮಿಸುವ ಮೂಲಕ ಅತೀ ಹೆಚ್ಚು ಸ್ವಯಂ ಸೇವಾ ಸಂಸ್ಥೆಗಳು ಮತ್ತು ಖಾಸಗಿ ಸಂಸ್ಥೆಗಳ ಭಾಗವಹಿಸುವಿಕೆ ವಿಭಾಗದಲ್ಲಿ ಪ್ರಥಮ ಹಾಗೂ ಅತಿ ಹೆಚ್ಚು ಖಾಸಗಿ ಕಂಪನಿಗಳ ಭಾಗವಹಿಸುವಿಕೆ ವಿಭಾಗದಲ್ಲಿ ದ್ವಿತೀಯ ಸೇರಿ 2 ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಬೆಂಗಳೂರಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿಂದು ಕೊಡಮಾಡಿದರು. ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಜಿಲ್ಲೆಗೆ ಪ್ರಶಸ್ತಿ ಲಭಿಸಲು ಕಾರಣರಾದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು, ಸಂಘ ಸಂಸ್ಥೆ, ಸಾರ್ವಜನಿಕರಿಗೆ ಜಿಲ್ಲಾಧಿಕಾರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ನಂತರ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಸಂತಸ ಹಂಚಿಕೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಸರಗೂರು: ಬಂಡಿಪುರ ಅಭಯಾರಣ್ಯ ವ್ಯಾಪ್ತಿಯ ಕಾಡು ಮಧ್ಯದಲ್ಲಿ ಇರುವ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಹಾಲರವಿ ಕೊಂಡೋತ್ಸವ ವಿಜೃಂಭಣೆಯಿಂದ ಶ್ರದ್ಧಾ ಭಕ್ತಿಗಳಿಂದ ನೆರವೇರಿತು. ತಾಲ್ಲೂಕಿನ ಹಾದನೂರು ಗ್ರಾ.ಪಂ. ವ್ಯಾಪ್ತಿಯ ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದ ಸಮೀಪದ ಕೆರೆಯಿಂದ ಹಾಲು ಹರವಿ ಸೇವೆ ತೆಗೆದುಕೊಂಡು. ದೇವರನ್ನು ದೇವಾಲಯದವರೆಗೂ ತರಲಾಗುವುದು, ರಾತ್ರಿ ಎಣ್ಣೆ ಮಜ್ಜನ ಇರಲಿದೆ,ನಂತರ ಕೊಂಡೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಮಹದೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪುಷ್ಪಾಲಂಕಾರ, ಬೆಲ್ಲದಾರತಿ ಮಾಡಲಾಗಿತ್ತು. 11 ಗಂಟೆ ವೇಳೆಗೆ ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿಯೊಂದಿಗೆ ಹೊಳೆ ಮೆಟ್ಟಿಸಲಾಯಿತು.ಅಕ್ಕಪಕ್ಕದ ಗ್ರಾಮಗಳಿಂದ ತೆರುಗಳಿಗೆ ಸಿಂಗಾರಗೊಳಿಸಿ ಮೆರವಣಿಗೆ ನಡೆಸಿ ಮಧ್ಯಾಹ್ನ 12ರ ವೇಳೆಗೆ ಮಹದೇಶ್ವರ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಅಗ್ನಿಕೊಂಡ ಪ್ರವೇಶ ಮಾಡಲಾಯಿತು. ಅರ್ಚಕ ಅಗ್ನಿಕೊಂಡ ಪ್ರವೇಶ ಮಾಡುತ್ತಿದ್ದಂತೆ ಭಕ್ತರು ಜಯಘೋಷ ಮಾಡುವ ಮೂಲಕ ಅಗ್ನಿಕೊಂಡವನ್ನು ಪ್ರವೇಶಿಸಿದರು. ಸಾವಿರಾರು ಭಕ್ತರು ಈ ಬಾರಿ ಅರಣ್ಯ ಇಲಾಖೆ ಅಧಿಕಾರಿಗಳು ವಿವಿಧ ಕಾರ್ಯಕ್ರಮಗಳಿಗೆ ಹಾಗೂ ದೇವಸ್ಥಾನದ ಸುತ್ತಲೂ ಅರಣ್ಯ ಇಲಾಖೆ…

Read More

ಸರಗೂರು: ತಾಲೂಕಿನ ಹಾದನೂರು ಗ್ರಾಪಂ ವ್ಯಾಪ್ತಿಯ ಹಾದನೂರು ಗ್ರಾಮದಲ್ಲಿ ಕಾರ್ತಿಕ ಮಾಸದ ಜಾತ್ರೋತ್ಸವ ಅಂಗವಾಗಿ ಪ್ರತಿವರ್ಷ ಓಂಕಾರ ಸಿದ್ದೇಶ್ವರ ಸ್ವಾಮಿಯ 4 ನೇ ವರ್ಷದ ಜಾತ್ರಾ ಮಹೋತ್ಸವ ಹಾಗೂ ಬೆಳ್ಳಿರಥೋತ್ಸವ ಭಾನುವಾರದಿಂದ ಸೋಮವಾರವರೆಗೆ ವಿಜೃಂಭಣೆಯಿಂದ ನಡೆಯಿತು. ದೇವರಿಗೆ ಎಣ್ಣೆ ಮಜ್ಜನ ಸೇವೆಯೊಂದಿಗೆ ಜಾತ್ರೋತ್ಸವಕ್ಕೆ ಚಾಲನೆ ದೊರೆತಿದ್ದು, ಹತ್ತಾರು ಗ್ರಾಮಗಳ ದೇವರನ್ನು ಕರೆತಂದು ಉತ್ಸವ ನಡೆಸಿ ಕಲಾತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ನಂತರ ರಥೋತ್ಸವ ನಡೆಸಲಾಯಿತು. ದೇವಾಲಯದ ಆವರಣದಿಂದ ವೀರಭದ್ರನ ಕುಣಿತ, ನಂದಿಧ್ವಜ ಕುಣಿತ, ವೀರಗಾಸೆ ಮತ್ತು ಡೊಳ್ಳು ಕುಣಿತ ಹಾಗೂ ಸೋಮನ ಕುಣಿತದೊಂದಿಗೆ ದೇವರ ಮೂರ್ತಿಗಳನ್ನು ಬೆಳ್ಳಿ ರಥದ ಕುರಿಸಿಕೊಂಡು ಉತ್ಸವದಲ್ಲಿ ಕೊಂಡೊಯ್ಯಲಾಯಿತು. ಇದಕ್ಕೂ ಮುನ್ನ ಭಾನುವಾರರಂದು ಸಂಜೆ ಮೂಲದೇವರಿಗೆ ಗ್ರಾಮದ ಕೆರೆಯಲ್ಲಿ ಗಂಗ ಪೂಜೆ ಸಲ್ಲಿಸಿ ಅಭಿಷೇಕ, ಪ್ರಸಾದ ವಿನಿಯೋಗದ ನಂತರ ಹೆಬ್ಬಳಲು ಗ್ರಾಮಸ್ಥರಿಂದ ಕಳಸ ಪೂಜೆ ದೇವಸ್ಥಾನಕ್ಕೆ ತರಲಾಯಿತು. ಮಹಿಳೆಯರು ದೇವರಿಗೆ ತಂಬಿಟ್ಟಿನ ಆರತಿ ಬೆಳಗಿ ಹರಕೆ ಪೂರೈಸಿದರು. ನೆರೆದಿದ್ದ ಎಲ್ಲರಿಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ…

Read More

ಬೀದರ್:  ಜಿಲ್ಲೆಯ ಔರಾದ್ ತಾಲ್ಲೂಕಿನ ಜೀರ್ಗಾ(ಬಿ) ಗ್ರಾಮದ ರಾಷ್ಟ್ರೀಯ ಹೆದ್ದಾರಿ 161ಎ ಯಲ್ಲಿ ಮಂಗಳವಾರ ಬೆಳಗ್ಗೆ 9 ಸುಮಾರಿಗೆ ವಿದ್ಯಾರ್ಥಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ತಾಲೂಕಿನ ಜೀರ್ಗಾ(ಬಿ) ಗ್ರಾಮದ ವಿಕಾಸ ಸೋಪಾನ (14) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಔರಾದ ಕಡೆಯಿಂದ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿ 10 ಅಡಿ ಹಾರಿ ಬಿದ್ದ ಸಿಸಿ ಕ್ಯಾಮೆರಾ ವಿಡಿಯೋ ತುಣುಕು ಇದೀಗ ವೈರಲ್ ಆಗುತ್ತಿದೆ. ಗ್ರಾಮಸ್ಥರ ಪ್ರತಿಭಟನೆ: ಅಪಘಾತ ಸಂಭವಿಸಿದನ್ನು ಖಂಡಿಸಿ ಗ್ರಾಮಸ್ಥರು ದಿಢೀರನೇ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾದ ವಿದ್ಯಾರ್ಥಿಗೆ ಪರಿಹಾರ ಒದಗಿಸಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಹಂಪ್ಸ್‌ ಹಾಕಿರುವುದು , ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿರುವದನ್ನು ಖಂಡಿಸಿ ಗ್ರಾಮಸ್ಥರು ಸುಮಾರು 2 ಗಂಟೆಗಳಿಂದ ಪ್ರತಿಭಟನೆ ನಡೆಸುತ್ತಿರುವ…

Read More

ತುರುವೇಕೆರೆ:   ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಜೈನ ಸಮಾಜ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಡೆಯವರ 76ನೇ ಜನ್ಮದಿನೋತ್ಸವದ ಅಂಗವಾಗಿ ಅಶಕ್ತ ವೃದ್ದರಿಗೆ  ಹೊದಿಕೆಗಳನ್ನ ನೀಡಲಾಯಿತು. ಇದೇ ಸಂದರ್ಭದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳನ್ನು, ಯೋಧ ಶಿವಣ್ಣ ಹಾಗೂ ಆದರ್ಶ ದಂಪತಿಗಳಾದ  ಪತ್ರಕರ್ತ ಸತ್ಯನಾರಾಯಣ ದಂಪತಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆಶಾ ರಾಜಶೇಖರ್, ಕೌಶಲ್ಯ ಅಭಿವೃದ್ಧಿ  ಸಂಸ್ಥೆಯ ಮಾಜಿ ಅಧ್ಯಕ್ಷ ಮುರುಳಿದರ ಹಾಲಪ್ಪ, ಧರ್ಮಸ್ಥಳ ಸಂಸ್ಥೆ ತಾಲೂಕು ನಿರ್ದೇಶಕ ಯಶೋಧರ, ಜೈನ ಸಮಾಜದ ಮುಖಂಡ ತಂ.ಪ. ಚಂದ್ರಕೀರ್ತಿ, ಪತ್ರಕರ್ತ ಸತ್ಯನಾರಾಯಣ, ಸಮಾಜದ ಹಿರಿಯ ಮುಖಂಡರಾದ ರಾಮಚಂದ್ರ ,ಕಾಂತರಾಜು,   ಧನು ಇತರರು ಉಪಸ್ಥಿತರಿದ್ದರು. ವರದಿ: ಜೆ. ರಂಗನಾಥ,  ತುಮಕೂರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಹುಬ್ಬಳ್ಳಿ:   ಇಲ್ಲಿನ ಶ್ರೀ ಪಾರ್ಶ್ವನಾಥ ಬಸದಿಯ  ಕಾರ್ತಿಕ ದೀಪೋತ್ಸವವನ್ನು ಶ್ರೀ ಪದ್ಮಾವತಿ ಮಹಿಳಾ ಮಂಡಲ ವತಿಯಿಂದ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಆರತಿ ತಟ್ಟೆ ಕಾರ್ಯಕ್ರಮ ನಡೆಯಿತು. ಕಾರ್ತಿಕ ದೀಪೋತ್ಸವ ಕಾರ್ಯಕ್ರಮದ ಫಲಿತಾಂಶ ಪ್ರಕಟವಾಗಿದ್ದು, ಮೊದಲ ಬಹುಮಾನವನ್ನು ಕುಸುಮ ಹುಲಿ.  ಎರಡನೇ ಬಹುಮಾನವನ್ನು ನಯನ ತಾಳಿಕೋಟೆ. ಮೂರನೇ ಬಹುಮಾನವನ್ನು ಚೈತ್ರ ಶಿರಗುಪ್ಪಿ.  ಸಮಾಧಾನಕರ ಬಹುಮಾನವನ್ನು ಜಯಶ್ರೀ ಯರಸೀಮೆ ಹಾಗೂ ಜ್ಯೋತಿ ನೆಲವಿಗಿ ಪಡೆದರು. ವರದಿ: ಜೆ. ರಂಗನಾಥ,  ತುಮಕೂರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಸರಗೂರು:  ತಾಲೂಕಿನ ಹಾದನೂರು  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಲದಕುಪ್ಪೇ ಶ್ರೀ ಮಹದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಚೇನ್ ಗೇಟ್ ಮುಂಭಾಗದಲ್ಲಿ ಜಾತ್ರಾ ಮಾಳದ ಸಮೀಪದಲ್ಲಿ ಸೋಮವಾರದಂದು ಜಿಲ್ಲಾ ಪಂಚಾಯತ್ ಮೈಸೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಜಲ ಜೀವನ್ ಮಿಷನ್ ಯೋಜನೆ,  ಜಿಲ್ಲಾ ಪಂಚಾಯತ್ ಮೈಸೂರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೈಸೂರು  ಹಾಗೂ ಹೆಚ್.ಡಿ.ಕೋಟೆ, ತಾಲ್ಲೂಕು ಭಗೀರಥ ಸಂಸ್ಥೆ ಸಹಕಾರದೊಂದಿಗೆ ವಸ್ತು ಪ್ರದರ್ಶನ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ವೃತ್ತ ನಿರೀಕ್ಷಕ ಎಂ.ಲಕ್ಷ್ಮೀ ಕಾಂತ್ ಮಾತನಾಡಿ, ಕಾಡಂಚಿನ ಭಾಗದಲ್ಲಿ ಸಾರ್ವಜನಿಕರು ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಜನೆ ತಂದಿದ್ದೆ.ಅದನ್ನು ಸದ್ಬಳಕೆ ಮಾಡಿಕೊಂಡು ಸಂಸ್ಥೆಗಳಿಗೆ ಸಹಕಾರ ನೀಡಿ ಉಪಯೋಗಿಸಿಕೊಳ್ಳಿ ಎಂದು ಹೇಳಿದರು. ಪ್ರತಿ ಗ್ರಾಮಗಳಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮ ಇಲಾಖೆಯು ಗ್ರಾಮೀಣ ಜನಗಾಗಿ ಜಲ್ ಜೀವನ್ ಮಿಸ್ಸಿಂಗ್ ಯೋಜನೆಯಡಿ ಪ್ರತಿ ಗ್ರಾಮೀಣ ಕುಟುಂಬಗಳಿಗೆ ಕಾರ್ಯಾತ್ಮಕ ನಳ ಹಾಗೂ…

Read More

ಸರಗೂರು: ತಾಲೂಕಿನ ಪಟ್ಟಣದ ನಾಲ್ಕನೇ ವಾರ್ಡಿನ ಡಾ.ಬಿ.ಆರ್ ಅಂಬೇಡ್ಕರ್ ಅವರ ಸಮುದಾಯದ ಭವನದಲ್ಲಿ ಮಂಗಳವಾರದಂದು ಸಂವಿಧಾನ ಸಮರ್ಪಣೆ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.  ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮವನ್ನು ಎಸ್.ಡಿ.ಸಣ್ಣಸ್ವಾಮಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನವೆಂಬರ್ 26, ಸ್ವತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ವದ ದಿನವಾಗಿದೆ. 1949ರ ನವೆಂಬರ್ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳಲಾಯಿತು. ಇದರ ಅಂಗವಾಗಿಯೇ ನಾವು ಇಂದು ಸಂವಿಧಾನ ದಿನವನ್ನು ಆಚರಣೆ ಮಾಡುತ್ತಿದ್ದೇವೆ ಎಂದರು. ಭಾರತದಲ್ಲಿ ಸಂವಿಧಾನ ಅಂಗೀಕಾರವಾಗಿದ್ದು 1949 ರ ನವೆಂಬರ್ 26 ರಂದೇ, ಆದರೂ ಅನುಷ್ಠಾನಕ್ಕೆ ಬಂದಿದ್ದು 1950 ರ ಜನವರಿ 26ರಂದು. ಈ ದಿನವನ್ನು ಗಣರಾಜೋತ್ಸವ ದಿನವಾಗಿ ಆಚರಣೆ ಮಾಡಲಾಗುತ್ತದೆ ಎಂದರು. ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಮಾತನಾಡಿ, ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ. ಭಾರತಕ್ಕೆ ಸಂವಿಧಾನವೇ ದೊಡ್ಡ ಬಲ. ನಮ್ಮ ಸಂವಿಧಾನವು ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ನಮ್ಮ…

Read More

ಸರಗೂರು :  ಶ್ರೀ ಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗಡೆಯವರ 76ನೇ ವರ್ಷದ ಜನ್ಮದಿನದ ಅಂಗವಾಗಿ ಶ್ರೀ ಶ್ರೀ ಶ್ರೀ ಸದ್ಗುರು ಮಹಾದೇವ ತಾತ ಗದ್ದುಗೆ ಸಂಗಮದಲ್ಲಿ ಎಲ್ಲಾ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಹುಲ್ಲಹಳ್ಳಿ ಯೋಜನಾಧಿಕಾರಿ ಗಣೇಶ ನಾಯಕ್, ಮುಳ್ಳೂರು ವಲಯದ ಮೇಲ್ವಿಚಾರಕ ನರಸಿಂಹಮೂರ್ತಿ,ಹಾಗೂ ಯೋಜನಾ ಕಚೇರಿಯ ತಾಲೂಕಿನ ಆಂತರಿಕ ಲೆಕ್ಕಪರಿಶೋಧಕ ಪ್ರದೀಪ್,ಕೃಷಿ ಮೇಲ್ವಿಚಾರಕ ಮಧುಸೂದನ್, ಜ್ಞಾನವಿಕಾಸ ಅಧಿಕಾರಿ ಬೃಂದಾ ಹಾಗೂ ವಿವಿಧ ವಲಯದ ಮೇಲ್ವಿಚಾರಕರುಗಳಾದ ನವೀನ್, ಅಶ್ವಥ್, ಪೂರ್ಣಿಮಾ, ಮಂಜುಳಾ, ಕುಮಾರ್ ಹಾಗೂ ಕಚೇರಿಯ ಸಿಬ್ಬಂದಿಗಳಾದ ಅಕ್ಷತಾ ಪ್ರೀತಿ ಚಾಂದಿನಿ ಯೋಗೀಶ್ ದಿವ್ಯ ನಾಗೇಶ್ ಯತೀಶ್ ಉಪಸ್ಥಿತರಿದ್ದರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಎಚ್.ಎನ್.ಗಂಗಾಧರಯ್ಯ ಸಭಾಂಗಣದಲ್ಲಿ ರಾಜ್ಯಶಾಸ್ತ್ರ ವಿಭಾಗದಿಂದ 75ನೇ ವರ್ಷದ ಸಂವಿಧಾನ ದಿನಾಚರಣೆಯನ್ನು ಮಂಗಳವಾರ ಹಮ್ಮಿಕೊಂಡಿದ್ದು, ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆಯನ್ನು ವಾಚನ ಮಾಡುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೇಮಲತಾ ಪಿ. ಅವರು ಮಾತನಾಡಿ,  ಪ್ರತಿಯೊಬ್ಬ ನಾಗರಿಕರು ಸಂವಿಧಾನಕ್ಕೆ ಬದ್ಧರಾಗಿರಬೇಕು. ದೇಶದ ರಕ್ಷಣೆಗೆ ಸಂವಿಧಾನ ತನ್ನದೇ ಆದ ಪಾತ್ರವನ್ನು ವಹಿಸುತ್ತಿದೆ ಎಂದರು. ಶ್ರೀ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸಿದ್ದರಾಜು ಕೆ. ಎಸ್.ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವಿಸಬೇಕು, ಸಂವಿಧಾನವನ್ನು ಗೌರವಿಸದಿದ್ದರೆ ಸಮಾಜದಲ್ಲಿ ಶಾಂತಿ ನೆಲೆಸುವುದರ ಬದಲು ಅಶಾಂತಿ ಸೃಷ್ಟಿಯಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನವನ್ನು ಪಾಲಿಸಬೇಕೆಂದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತುಮಕೂರಿನ ಸರ್ಕಾರಿ  ಪ್ರಥಮ ದರ್ಜೆ ಕಾಲೇಜಿನ  ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವಯ್ಯ.ಎಂ ಅವರು ಮಾತನಾಡಿ, ಸಂವಿಧಾನವನ್ನ ರಚಿಸುವಂತಹ ಸಂದರ್ಭದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ರವರು ಎದುರಿಸಿದ ಸವಾಲುಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ…

Read More