Subscribe to Updates
Get the latest creative news from FooBar about art, design and business.
- ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
- ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
- ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
- ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
- ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
- ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
- ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
- ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
Author: admin
ಥಾಣೆ: ಪತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿ ತಡೆಯುವುದು ಬಿಟ್ಟು, ಪತ್ನಿಯೊಬ್ಬಳು ಆತ ಸಾಯುತ್ತಿರುವ ದೃಶ್ಯವನ್ನು ವಿಡಿಯೋ ಮಾಡಿಕೊಂಡಿರುವ ವಿಲಕ್ಷಣ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಯುವತಿ ವಿರುದ್ಧ ಥಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಗ್ಲೆ ಎಸ್ಟೇಟ್ನಲ್ಲಿ ವಾಸಿಸುವ ದಂಪತಿಗಳ ನಡುವೆ ಕೌಟುಂಬಿಕ ಕಲಹವಿದ್ದು, ಆಗಾಗ್ಗೆ ಜಗಳವಾಡುತ್ತಿದ್ದರು. ನವೆಂಬರ್ 20 ರಂದು ಈ ಘಟನೆ ನಡೆದಿದ್ದು, 29 ವರ್ಷ ವಯಸ್ಸಿನ ವ್ಯಕ್ತಿ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವಾಗ್ಗೆ ಎಸ್ಟೇಟ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಘಟನೆ ನಡೆದಾಗ ಆತನ ಪತ್ನಿ ಅಲ್ಲಿಯೇ ಇದ್ದಳು ಮತ್ತು ವ್ಯಕ್ತಿ ನೇಣು ಹಾಕಿಕೊಂಡಾಗ ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೃತನ ತಾಯಿ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದು, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 105(ಕೊಲೆಯಲ್ಲದ ಅಪರಾಧಿ ನರಹತ್ಯೆಗೆ ಶಿಕ್ಷೆ) ಮತ್ತು 108(ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ…
ಬೆಂಗಳೂರು : ಕೆಪಿಎಸ್ ಸಿ ಯು (KPSC) 386 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹುದ್ದೆ ಹೆಸರು : ಭೂ ಮಾಪಕರು ಹೈದರಾಬಾದ್ ಕರ್ನಾಟಕ ವೃಂದದ ಸಂಖ್ಯೆ : 29 ಉಳಿಕೆ ಮೂಲ ವೃಂದದ ಹುದ್ದೆ ಸಂಖ್ಯೆ 296 ಅರ್ಜಿ ಸಲ್ಲಿಸಲು ಆರಂಭ : 25 : 11: 2024 ಅರ್ಜಿ ಸಲ್ಲಿಸಲು ಕೊನೆಯ ದಿನ : 09:12:20204 ಆಸಕ್ತರು ಆಯೋಗದ ವೆಬ್ ಸೈಟ್ https://www.kpsc.kar.nic.in/ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಆಧಾರ್ ಕಾರ್ಡ್ ಎನ್ ಎಸ್ ಎಲ್ ಸಿ ಅಂಕಪಟ್ಟಿ, ಜನ್ಮ ದಿನಾಂಕದ ದಾಖಲೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇಮೇಲ್ ವಿಳಾಸ ಮೊಬೈಲ್ ನಂಬರ್ ಸಹಿ * ಸ್ಪ್ಯಾನ್ ಕಾಪಿ BDFW closed eater https://kpsconline.karnataka.gov.in ವೆಬ್ಬೆಟ್ ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಒಬಿಸಿಗೆ 300…
ಸಂಭಾಲ್: ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಮಸೀದಿ ಸಮೀಕ್ಷೆಯ ವೇಳೆ ನಡೆದ ಹಿಂಸಾಚಾರದಲ್ಲಿ 4 ಜನರು ಸಾವನ್ನಪ್ಪಿದ್ದು, ಘಟನೆಯ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸರ್ವೇಗೆ ನ್ಯಾಯಾಲಯ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ವೇಗೆ ಮುಂದಾಗಿದ್ದ ವೇಳೆ ಉದ್ರಿಕ್ತರು ಕಲ್ಲುತೂರಾಟ ನಡೆಸಿದ್ದರು. ಸ್ಥಳೀಯರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿತ್ತು. ಇದರಿಂದಾಗಿ ಸಾಂಭಾಲ್ ನಲ್ಲಿ ಸಂಪೂರ್ಣ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮಸೀದಿ ಸಮೀಕ್ಷೆಗೆ ಸಂಬಂಧಿಸಿದಂತೆ ಹಿಂಸಾಚಾರದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಶಾಲೆಗಳನ್ನು ಮುಚ್ಚಲಾಗಿದೆ. ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯನ್ನು ಹಿಂದೂ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬ ವಿವಾದಾ ಕಾನೂನು ಹೋರಾಟದ ಕೇಂದ್ರವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಳಗಾವಿ: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಹೊರವಲಯದ ಸುವರ್ಣ ವಿಧಾನ ಸೌಧದ ಬಳಿ ನಡೆದಿದೆ. ಬೆಳಗಾವಿಯಿಂದ ಹುಬ್ಬಳ್ಳಿಗೆ 3 ಜನರ ಪ್ರಯಾಣಿಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಏಕಾಏಕಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಕಾರಿನಲ್ಲಿದ್ದ ಹುಬ್ಬಳ್ಳಿ ಲಕ್ಷ್ಮೀ ನಗರ ನಿವಾಸಿ ಗಿರೀಶ್ ಕುಲಕರ್ಣಿ(24) ಸಾವನ್ನಪ್ಪಿದ್ದರೆ, ಪ್ರಥಮ್ ಎಂಬವರ ಸ್ಥಿತಿ ಗಂಭೀರವಾಗಿದೆ. ಇನ್ನೋರ್ವ ಪ್ರಯಾಣಿಕ ಗಿರೀಶ್ ಎಂಬವರಿಗೂ ಗಾಯಗಳಾಗಿವೆ. ಟ್ರ್ಯಾಕ್ಟರ್ ನಲ್ಲಿ ಮಿತಿಗಿಂತ ಹೆಚ್ಚು ಕಬ್ಬು ಲೋಡ್ ಮಾಡಿರುವುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಿರಿಯ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಗದಗ: ಲಕ್ಕುಂಡಿಯಲ್ಲಿ ಜರುಗುತ್ತಿರುವ ಪ್ರಾಚ್ಯಾವಶೇಷಗಳ ಅನ್ವೇಷಣೆಯಲ್ಲಿ 5 ಬಾವಿ ಹಾಗೂ ಐದು ಶಾಸನಗಳು ಸೇರಿದಂತೆ 600ಕ್ಕೂ ಅಧಿಕ ಪ್ರಾಚ್ಯಾವಶೇಷಗಳು ಲಭ್ಯವಾಗಿವೆ ಎಂದು ಸಚಿವ ಎಚ್.ಕೆ.ಪಾಟೀಲ್ ಅವರು ಹೇಳಿದರು. ಲಕ್ಕುಂಡಿ ಗ್ರಾಮದಲ್ಲಿ ಭಾನುವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಕ್ಕುಂಡಿಯನ್ನು ರಾಷ್ಟ್ರಕೂಟರ ಕಾಲದಲ್ಲಿ ಕಟ್ಟಿದ್ದಾರೆ. ಕಲ್ಯಾಣ ಚಾಲುಕ್ಯರ ಕಾಲದಲ್ಲಿ ವಿಶೇಷ ಅಭಿವೃದ್ಧಿ ಹೊಂದಿ ಕಲಚುರ್ಯರು, ಹೊಯ್ಸಳ ರು, ಕೆಲವು ಕಾಲ ವಿಜಯನಗರದ ಅರಸರು ಆಳಿದ್ದಾರೆ. ಇಂದು ಪ್ರಾಚ್ಯಾವಶೇಷಗಳ ಅನ್ವೇಷಣೆ ಸಂಗ್ರಹಣೆ ಕೆಲಸವೂ ವಿಶೇಷ ಪ್ರಯತ್ನವಾಗಿದ್ದು ಸಾಂಸ್ಕೃತಿಕ, ಐತಿಹಾಸಿಕ, ಕಾಂತ್ರಿಕಾರಿಕ ಹೆಜ್ಜೆ ಎಂದರು. ನವೆಂಬರ್ 22, 23 ಮತ್ತು24 ರಂದು ಪ್ರಾಚ್ಯಾವಶೇಷಗಳ ಅನ್ವೇಷಣೆ ಕೈಗೊಂಡು ಲಕ್ಕುಂಡಿಯಲ್ಲಿ ಈ ಹಿಂದೆ ಇದ್ದ 101 ದೇವಾಲಯಗಳಲ್ಲಿ ಇಂದು 50–60 ಲಭ್ಯವಾಗಿದೆ ಹಾಗೂ 8–10 ದೇವಾಲಯದ ಪಾಯಗಳು ದೊರಕಿವೆ. ಇನ್ನೂ ಉಳಿದ ದೇವಾಲಯಗಳು ಎಲ್ಲೆಲ್ಲಿ ಇದ್ದವು ಎಂದು ಗುರುತಿಸುವ ಬಹು ದೊಡ್ಡ ಕೆಲಸವಾಗಿದೆ ಹಾಗೂ ಹುದುಗಿಹೋದ ದೇವಾಲಯಗಳಲ್ಲಿ ಮರುಸೃಷ್ಟಿಸಬಹುದಾದ ದೇವಾಲಯ ಬಗ್ಗೆ ತಜ್ಞರು ಗಂಭೀರ ಆಲೋಚನೆ ಮಾಡುತ್ತಿದ್ದಾರೆ ಎಂದರು.…
ಪಾವಗಡ: ತಾಲ್ಲೂಕಿನ ಬಂಗಾರನಾಯಕನಬೆಟ್ಟದ ಗ್ರಾಮಸ್ಥರ ನೇತೃತ್ವದಲ್ಲಿ ಭಾನುವಾರ ಒಂದೇ ಸ್ಥಳದಲ್ಲಿ ಮಹರ್ಷಿ ವಾಲ್ಮೀಕಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿ ವಿಶ್ವಕ್ಕೆ ಮಾದರಿಯಾದ ಘಟನೆ ನಡೆದಿದೆ. ಇಲ್ಲಿಯವರೆಗೂ ಒಂದೇ ಸ್ಥಳದಲ್ಲಿ ಈ ಮಹಾನ್ ಚೇತನಗಳ ಮೂರ್ತಿ ನೆಲೆಗೊಂಡಿರಲಿಲ್ಲ. ಆದರೆ ವಿಶೇಷವಾಗಿ ನಾಯಕ ಸಮುದಾಯವೇ ಇರುವ ಗ್ರಾಮದಲ್ಲಿ ವಾಲ್ಮೀಕಿ ಮಹರ್ಷಿ ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಪ್ರತಿಷ್ಠಾಪಿಸಿ ನಾಗರೀಕ ಸಮಾಜದಲ್ಲಿ ಸಮಾನತೆಯನ್ನು ತೋರಿದ್ದಾರೆ. ಜಾತಿ ಜಾತಿಗಳ ಕೋಮು ಸೃಷ್ಟಿಸುವ ಸಮಾಜದಲ್ಲಿ ಈ ಬಂಗಾರನಾಯಕನಬೆಟ್ಟದ ಗ್ರಾಮಸ್ಥರು ತದ್ವಿರುದ್ದವಾಗಿ ನೋಡುಗರನ್ನು ಸೂಜಿಗಲ್ಲಿನಂತೆ ಸೆಳೆದಿದ್ದಾರೆ. ವೈಶಿಷ್ಟ್ಯತೆ, ಭ್ರಾತೃತ್ವಭಾವನೆ, ಸಾಮರಸ್ಯ, ನಾವೆಲ್ಲರೂ ಒಂದು ಎಂಬ ವಿಭಿನ್ನಾತ್ಮಕ ಕಾರ್ಯದ ಮೂಲಕ ಸಾರಿ ಹೇಳಿ ಪ್ರೇರಣೆಯೆನಿಸಿದ್ದಾರೆ. ಈ ಇಬ್ಬರು ಮಹಾನ್ ಪುಣ್ಯ ಪುರುಷರ ಪುತ್ಥಳಿಗಳನ್ನು ಅನಾವರಣಗೊಳಿಸಿದ ನಿಡಗಲ್ ವಾಲ್ಮೀಕಿ ಸಂಸ್ಥಾನದ ಪೀಠಾಧ್ಯಕ್ಷರು ಶ್ರೀ ಸಂಜಯ ಕುಮಾರ ಸ್ವಾಮೀಜಿಯವರು ಆನಂತರ ಮಾತನಾಡಿದರು. ಏಕಸ್ಥಳದಲ್ಲಿ ರಾಮಾಯಣ ಕತೃ ವಾಲ್ಮೀಕಿ ಮಹರ್ಷಿ, ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸಿರುವ ಗ್ರಾಮದ ಜನರು ಪುಣ್ಯವಂತರು. ನಮಗೆ…
ತುಮಕೂರು : ಕ್ರೀಡೆ ನಮ್ಮಲ್ಲಿರುವ ಸ್ಪರ್ಧಾತ್ಮಕ ಗುಣವನ್ನು ಹೆಚ್ಚಿಸುತ್ತದೆ. ಕ್ರೀಡೆಯಿಂದ ಉತ್ತಮ ದೈಹಿಕ ಮತ್ತು ಮಾನಸಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಉತ್ತಮ ಸಾಧನ. ಹಾಗಾಗಿ ಸದಾ ಒತ್ತಡದ ಕಾರ್ಯನಿರ್ವಹಿಸುವ ಪತ್ರಕರ್ತರು ದೈಹಿಕ ಮತ್ತು ಮಾನಸಿಕ ನೆಮ್ಮದಿಗಾಗಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅವಶ್ಯಕ ಎಂದರು. ಲೇಖನಿ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿರುವ ಪತ್ರಕರ್ತರು ಉತ್ತಮ ಬರವಣಿಗೆ ಮುಖೇನ ಸಮಾಜದ ಮೇಲೆ ಪರಿಣಾಮ ಬೀರುವ ಅವಲೋಕನದಲ್ಲಿರಬೇಕು ಎಂದು ಸಲಹೆ ಮಾಡಿದರು. ತುಮಕೂರಿನಲ್ಲಿ 58 ಕೋಟಿ ರೂ.ಖರ್ಚು ಮಾಡಿ ಸುಸಜ್ಜಿತವಾಗಿ ಕ್ರೀಡಾಂಗಣ ನಿರ್ಮಿಸಲಾಗಿದೆ. ಅಥ್ಲೆಟಿಕ್, ಕಬ್ಬಡ್ಡಿ, ಖೋಖೋ ಸೇರಿದಂತೆ ಮುಂತಾದ ಕ್ರೀಡೆಗಳನ್ನು ಜಿಲ್ಲೆಯ…
ತುಮಕೂರು: ಹುಳಿಯಾರಿನ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಸಂಕಲ್ಪ ದೀಪೋತ್ಸವ ಆಚರಿಸಲಾಯಿತು. ಹುಳಿಯಾರು ಪಿಎಸ್ ಐ ಧರ್ಮಾಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನುಷ್ಯ ಇಂದು ಹಣದ ಹಾಗೂ ವಸ್ತುವಿನ ಹಿಂದೆ ಹೋಗುತ್ತಿದ್ದು ನಾನು ಯಾರು ಎಂಬುದು ಅರಿತಿಲ್ಲದಿರುವುದು ವಿಪರ್ಯಾಸ ಎಂದರು. ಕೇಶವ ಶಾಲೆಯ ಮುಖ್ಯೋಪಾಧ್ಯಾಯ ಸನತ್, ಬೆಸ್ಕಾಂ ಎಸ್ ಓ ಉಮೇಶ್ ನಾಯಕ್, ಆಶ್ರಮದ ಸಂಚಾಲಕಿ ಬ್ರಹ್ಮಕುಮಾರಿ ಗೀತಕ್ಕ ಸೇರಿದಂತೆ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ಅಣ್ಣಂದಿರು ಅಕ್ಕಂದಿರು ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಕಾಡು ಪೀರೆ,ಕಾಟು ಪೀರೆ ಎಂದೆಲ್ಲಾ ಹೆಸರಿನಿಂದ ಕಾಡಿನಲ್ಲಿ ಬೆಳೆಯುತ್ತಿದ್ದ ಈ ತರಕಾರಿ ಇದೀಗ ಮಡಾ ಹಾಗಲಕಾಯಿ ಹೈಬ್ರಿಡ್ ತರಕಾರಿ ಇದೀಗ ಮಾರುಕಟ್ಟೆಗೆ ಬಂದಿದೆ. ಈ ಬಳ್ಳಿ ತರಕಾರಿಯನ್ನು ಇಂಗ್ಲೀಷ್ ನಲ್ಲಿ Spiny gourd ಎಂದು ಕರೆಯುತ್ತಾರೆ ,ಇನ್ನೊಂದು ಹೆಸರು Kantola(ಕಂಟೋಲ), ಎಂದು ಹೆಸರಿದೆ. ಬಾಂಗ್ಲಾದಲ್ಲಿ ಕಾಕ್ರೊಲ್ ಎಂದು ಕರೆಯುತ್ತಾರೆ. ಇದರಲ್ಲಿ ಔಷಧೀಯ ಗುಣಗಳು ಹೇರಳವಾಗಿದೆ ವಿಟಮಿನ್ ಸಿ ದೇಹವನ್ನು ಸೋಂಕುಗಳಿಂದ ದೂರವಿಡುತ್ತದೆ ಫೈಬರ್ ,ವಿಟಮಿನ್ ,ಖನಿಜ ಮತ್ತು ಸಮೃದ್ಧವಾದ ಪೌಷ್ಟಿಕ ಪೋಷಕಾಂಶಗಳಿಂದ ಕೂಡಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ ಸಕ್ಕತ್ ಟೇಸ್ಟಿ ಸೂಪರ್ ಟೇಸ್ಟಿ ಪಲ್ಯ, ಸಾಂಬಾರ್, ಮೇಲಾರ (ಹುಳಿ) ಮೆಣಸಿನ ಕಾಯಿ, ಎಳೆಯದಾದರೆ ಪೋಡಿ, ಬಜ್ಜಿ,ಉತ್ತಮ ಆಹಾರ ಉತ್ತಮ ಜೀವನಕ್ಕಾಗಿದೆ. ಮಡಿಕೇರಿಯಲ್ಲಿ ಇದು ಹೆಚ್ಚಾಗಿ ಇದೀಗ ಕಂಡು ಬರುತ್ತದೆ? ಘಟ್ಟದಲ್ಲಿ ಹೆಚ್ಚು ಬೆಳೆಯುತ್ತದೆ ಗಂಡು–ಹೆಣ್ಣು ಹೂ ಬೇರೆ ಬೇರೆ ಬಳ್ಳಿಯಲ್ಲಿ ಇರುತ್ತದೆ. ಗಡ್ಡೆಗಳು ಆಗುತ್ತವೆ ಮತ್ತೆ ಇದರಲ್ಲಿಯೇ ಗಿಡಗಳು ಹುಟ್ಟಿ ಬರುತ್ತವೆ. ಆಗಸ್ಟ್ ,ಸೆಪ್ಟೆಂಬರ್, ಅಕ್ಟೋಬರ್ …
ನವದೆಹಲಿ: 10ನೇ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾರ್ಯದರ್ಶಿಯಾದ ಲಕ್ಕಪ್ಪ ಸಿ.ಬಿ. ಸೆಕ್ರಟರಿಯಟ್ ಸದಸ್ಯರಾದ ಪಲ್ಲವಿ ಮತ್ತು ಭರತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಳುವಳಿಯ ಉದ್ದೇಶ: ನಮ್ಮ ದೇಶದ ನವೋದಯ ಚಳುವಳಿಯ ಮೂಲ ಉದ್ದೇಶ ಎಲ್ಲಾ ಹಳೆಯ ಕಂದಚಾರ, ಮೌಡ್ಯ, ಮತಾಂಧತೆಗಳಿಂದ ಮುಕ್ತಗೊಳಿಸುವುದಾಗಿತ್ತು. ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಅವರು ರಾಜಕೀಯ, ಆರ್ಥಿಕ, ಸಾಂಸ್ಕೃತಿಕ, ಸಾಮಾಜಿಕವಾಗಿ ಮೂಲಭೂತ ಬದಲಾವಣೆ ತರುವ ಕನಸು ಹೊತ್ತು, ಎಲ್ಲರಿಗೂ ಶಿಕ್ಷಣ, ಆರೋಗ್ಯ, ಉದ್ಯೋಗ ಒದಗಿಸಿ, ಯಾವ ಹೆಣ್ಣು ಮಗುವು ಅಭದ್ರತೆಯಿಂದ ಬಳಲದ ಸಮ ಸಮಾಜವನ್ನು ನಿರ್ಮಿಸುವ ಮಹಾನ್ ಧೈಯದೊಂದಿಗೆ ಹೋರಾಡಿದರು. ಭಾರತಕ್ಕೆ ಸ್ವಾತಂತ್ರ್ಯ ದೊರೆತು 77 ವರ್ಷಗಳು ಕಳೆದಿವೆ. ಆದರೆ ಇಂದಿಗೂ ಅಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಕಿತ್ತು ತಿನ್ನುವ ಬಡತನ, ಹಸಿವೆಯಿಂದ ನರಳುತ್ತಿರುವ ಕಂದಮ್ಮಗಳು ಬೀದಿ ಹೆಣವಾಗುತ್ತಿದ್ದಾರೆ. ಬಹುದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಬಾಲ ಕಾರ್ಮಿಕರಾಗಿದ್ದಾರೆ. ಹೀಗೆ ಹತ್ತು ಹಲವು ಸಾಮಾಜಿಕ ಪಿಡುಗುಗಳಿಂದ ದೇಶ…