Author: admin

ತುಮಕೂರು:  ಮಾರಕಾಸ್ತ್ರಗಳಿಂದ ಯುವಕನ ಕೊಲೆ ನಡೆದಿರೋ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದ ಹೊರವಲಯದಲ್ಲಿ ನಡೆದಿದೆ. ತಿಪಟೂರು ತಾಲ್ಲೂಕಿನ ಈಡೇನಹಳ್ಳಿ ಪಾಳ್ಯ ನಿವಾಸಿ ಎನ್.ಚೇತನ್ (35) ಎಂಬ ಯುವಕ ಕೊಲೆಯಾದ ದುರ್ದೈವಿ ಆಗಿದ್ದಾನೆ. ತಿಪಟೂರು ನಗರದ ಹಾಲ್ಕುರಿಕೆ ರಸ್ತೆ ಧನಲಕ್ಷ್ಮಿ ಕೋಕೋ ನೆಟ್ ಫ್ಯಾಕ್ಟರಿ ಬಳಿ ಚೇತನ್ ನ ಮೃತದೇಹ ಪತ್ತೆಯಾಗಿದೆ. ತಿಪಟೂರು ಡಿವೈಎಸ್ಪಿ ವಿನಾಯಕ ಶೆಟ್ಟಿಗೇರಿ, ಗ್ರಾಮಾಂತರ ವೃತ್ತನಿರೀಕ್ಷಕ ಸಿದ್ದರಾಮೇಶ್ವರ್,ಹೊನ್ನವಳ್ಳಿ ಸಬ್ ಇನ್ಪೆಕ್ಟರ್ ರಾಜೇಶ್. ಹಾಗೂ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಸಂಬಂಧ ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಶವವನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿದ್ದಾರೆ. ಹಿನ್ನೆಲೆ : ಪೊಲೀಸ್ ಮಾಹಿತಿ ಪ್ರಕಾರ ತಿಪಟೂರು ಈಡೇನಹಳ್ಳಿ ಪಾಳ್ಯ ನಿವಾಸಿ ಚೇತನ್, ತಿಪಟೂರು ನಗರದ ಗುಬ್ಬಿ ಲೇಔಟ್ ವಾಸಿಸುತ್ತಿದ್ದನು. ಚೇತನ್ ಈ ಹಿಂದೆ ಶಿವಮೊಗ್ಗ ಮೂಲದ ನಂದಿನಿ ಎಂಬ ಮಹಿಳೆಯೊಂದಿಗೆ ಮದುವೆಯಾಗಿದ್ದು, ಕೌಟುಂಬಿ…

Read More

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ—ಜೆಡಿಎಸ್ ಮೈತ್ರಿ ಅಭ್ಯರ್ಥಿ  ನಿಖಿಲ್ ಕುಮಾರಸ್ವಾಮಿ ಸೋಲನ್ನಪ್ಪಿದ್ದಾರೆ. ಇದೇ ಸಂದರ್ಭದಲ್ಲಿ ನಿಖಿಲ್ ಸೋಲಿನಿಂದ ನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ಕೂಡೂರು ಸಮೀಪ ಶ್ರೀರಾಮಪುರದಲ್ಲಿ ನಿಖಿಲ್ ಅಭಿಮಾನಿ ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತ ಮಂಜುನಾಥ ಅಲಿಯಾಸ್ ಅಭಿ(35) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ತರಾಗಿರುವ ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಕರ್ನಾಟಕದ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿತ್ತು. ಶನಿವಾರ ಚುನಾವಣಾ ಫಲಿತಾಂಶ ಹೊರ ಬಿದ್ದಿತ್ತು. ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕಡೆಗಳಲ್ಲೂ ಬಿಜೆಪಿಗೆ ಹೀನಾಯ ಸೋಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು: ವಿರೋಧ ಪಕ್ಷಗಳಿಗೆ ಸೆಡ್ಡು ಹೊಡೆಯಲು ಸಿಎಂ ಸಿದ್ದರಾಮಯ್ಯ ದೇವೇಗೌಡರ ತವರಿನಲ್ಲೇ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಡಿಸೆಂಬರ್ 5 ರಂದು ಸಿದ್ದರಾಮಯ್ಯ ಅಭಿಮಾನಿಗಳ ಸ್ವಾಭಿಮಾನಿ ಸಮಾವೇಶ ನಡೆಯಲಿದೆ. ಹಾಸನ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳನ್ನು ಒಗ್ಗೂಡಿಸಿ ಸಚಿವರು ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಡಾ.ಹೆಚ್‌.ಸಿ. ಮಹಾದೇವಪ್ಪ, ಕೆ.ಎನ್‌. ರಾಜಣ್ಣ, ಬೋಸರಾಜು ಮತ್ತು ಕೆ. ವೆಂಕಟೇಶ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ ಎಂದು ವರದಿಯಾಗಿದೆ. ಉಪಚುನಾವಣೆ ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ಪಾಳೆಯಕ್ಕೆ ಚೈತನ್ಯ ತುಂಬಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಹಾಸನದಲ್ಲಿ ಯತೀಂದ್ರ ಹಾಗೂ ನಾಲ್ವರು ಸಚಿವರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಸಲಾಗಿದೆಯಂತೆ.  ಆರು ಜಿಲ್ಲೆಗಳ ಬೆಂಬಲಿಗರ ಸಮ್ಮುಖದಲ್ಲಿ ಶಕ್ತಿ ಪ್ರದರ್ಶನಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ ಈ ಮೂಲಕ ವಿರೋಧ ಪಕ್ಷಗಳಿಗೆ ಸಂದೇಶ ರವಾನೆ ಮಾಡಲು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸಜ್ಜಾಗಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಚಿಂತಾಮಣಿ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ  ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಂತಾಮಣಿ-ಮದನಪಲ್ಲಿ ರಾಜ್ಯ ಹೆದ್ದಾರಿಯ ದಂಡುಪಾಳ್ಯ ಗೇಟ್ ಸಮೀಪ ಶನಿವಾರ ನಡೆದಿದೆ. ಚಿಂತಾಮಣಿಯ ಗಾಂಧಿನಗರದ ದೇವರಾಜ್ (30) ಮೃತಪಟ್ಟವರಾಗಿದ್ದಾರೆ. ಅಪಘಾತದ ತೀವ್ರತೆಗೆ  ಬೈಕ್ ಸುಟ್ಟು ಕರಕಲಾಗಿದೆ. ಬೆಂಗಳೂರಿನಿಂದ ಕಡಪಾ ಕಡೆಗೆ ಹೋಗುತ್ತಿದ್ದ ಕಾರು ದಂಡುಪಾಳ್ಯದ ಗೇಟ್ ಸಮೀಪದಲ್ಲಿ ಎದುರುಗಡೆಯಿಂದ ಚಿಂತಾಮಣಿಗೆ ಬರುತ್ತಿದ್ದ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರ ದೇವರಾಜ್ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟರೆ, ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಡಿವೈಎಸ್ಪಿ ಮುರಳೀಧರ್ ಮತ್ತು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ವಾಹನಗಳನ್ನು ಪಕ್ಕಕ್ಕೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ವಿಜಯಪುರ: ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಾಗಿದೆ. ಇದೇ ಸಂದರ್ಭದಲ್ಲಿ ಪಟ್ಟಣದ ಬಿಜೆಪಿ ಮುಖಂಡ ವೀರಭದ್ರಪ್ಪ ಬಾಗಿ ಫಲಿತಾಂಶ ವೀಕ್ಷಿಸುತ್ತಿದ್ದ ಟಿವಿಯನ್ನೇ ಆಕ್ರೋಶದಿಂದ ಒಡೆದು ಹಾಕಿದ ಘಟನೆ ನಡೆದಿದೆ. ಬಿಜೆಪಿಯ ಕಟ್ಟಾ ಅಭಿಮಾನಿಯಾಗಿರುವ ವೀರಭದ್ರಪ್ಪ ಬಾಗಿ ಪಟ್ಟಣದ 4ನೇ ವಾರ್ಡಿನ ತಮ್ಮಮನೆಯಲ್ಲಿ ಉಪಚುನಾವಣೆಯ ಫಲಿತಾಂಶ ವೀಕ್ಷಣೆ ಮಾಡುತ್ತಿದ್ದರು.  ಮೂರೂ ಕ್ಷೇತ್ರಗಳಲ್ಲಿ ಸೋಲು ಕಂಡಿರುವುದು ತಿಳಿದು, ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಹಾಗೂ ರಾಜ್ಯ ನಾಯಕರ ನಡೆಗೆ ಆಕ್ರೋಶಗೊಂಡು ಟಿವಿಯ ಎತ್ತಿ ತಂದು ಹೊರ ಬಿಸಾಡಿ ಒಡೆದು ಹಾಕಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ಬಿಜೆಪಿ ನಾಯಕರಲ್ಲಿ ಹೊಂದಾಣಿಕೆ ಇಲ್ಲದ ಕಾರಣ ನಮಗೆ ಸೋಲಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಇತರ ನಾಯಕರಲ್ಲಿ ಹೊಂದಾಣಿಕೆಯ ಕೊರತೆಯಿಂದ ಇಂತಹ ದುಃಸ್ಥಿತಿ ಬಂದಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಬಿಜೆಪಿ—ಜೆಡಿಎಸ್ ಗೆ ಆಘಾತವನ್ನುಂಟು ಮಾಡಿದೆ. ಈ ನಡುವೆ ಕಾಂಗ್ರೆಸ್ ಗೆಲುವಿನ ಸಂಭ್ರಮದಲ್ಲಿದೆ. ಇದೇ ವೇಳೆ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ಗಮನ ಸೆಳೆದಿದೆ. ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿಯೂ ಗೆಲುವು ನೀಡಿದ್ದಕ್ಕೆ ಕಾಂಗ್ರೆಸ್ ಸಂತಸದಲ್ಲಿ ತೇಲಾಡಿದೆ. “ಅಭಿವೃದ್ಧಿಗೆ ಒಲವು, ಗ್ಯಾರೆಂಟಿಗೆ ಗೆಲುವು” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ವಿಪಕ್ಷಗಳಿಗೆ ತಿರುಗೇಟು ನೀಡಿದೆ. ಸಂಡೂರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದರೆ, ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್‌ ಹಾಗೂ ಶಿಗ್ಗಾಂವಿಯಲ್ಲೂ ಯಾಸಿರ್‌ ಖಾನ್‌ ಪಠಾಣ್‌ ಗೆಲುವಿನ ನಗೆ ಬೀರಿದ್ದಾರೆ. ಫಲಿತಾಂಶಕ್ಕೂ ಮುನ್ನ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಸಿಎಂ, ಡಿಸಿಎಂ ಸೇರಿದಂತೆ ಅನೇಕ ‘ಕೈ’ ನಾಯಕರು ಭವಿಷ್ಯ ನುಡಿದಿದ್ದರು. ಅದರಂತೆ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ಉಪ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಕೂಟಕ್ಕೆ ಭಾರೀ ಮುಖಭಂಗವಾಗಿದೆ. ಜೆಡಿಎಸ್-ಬಿಜೆಪಿಯ ಮೈತ್ರಿಕೂಟದ ವಿಚಾರವಾಗಿ ಜನರ ಅಸಹನೆ ಈ ಚುನಾವಣೆಯಲ್ಲಿ ಪ್ರದರ್ಶನವಾಗಿದೆ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಶಿಗ್ಗಾಂವಿ ಮತ್ತು ಸಂಡೂರು ಬಿಜೆಪಿ ಉಳಿಸಿಕೊಂಡು ಚನ್ನಪಟ್ಟಣವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿತ್ತು. ಚುನಾವಣಾ ಕಾಲದಲ್ಲಿ ಅಭಿವೃದ್ಧಿ ಯೋಜನೆಗಳಿಗಿಂತಲೂ ಭಾವನಾತಕ ಚರ್ಚೆಗಳೇ ಜಾಸ್ತಿ ನಡೆದವು. ಬಿಜೆಪಿ ವಕ್ಫ್ ವಿಚಾರವನ್ನು ಪ್ರಮುಖವಾಗಿ ಮುಂದಿಟ್ಟುಕೊಂಡಿದ್ದರೆ, ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಜಾತಿ ಅಸ್ತ್ರವನ್ನು ಪ್ರಯೋಗಿಸಿತ್ತು.  ಆದರೆ ಇದ್ಯಾವುದಕ್ಕೂ ಜನರು ಮಣೆ ಹಾಕಲಿಲ್ಲ. ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಗೆ  ಸೇರ್ಪಡೆಯಾದ ಸಿ.ಪಿ.ಯೋಗೇಶ್ವರ್ ಸದ್ದುಗದ್ದಲವಿಲ್ಲದೆ ಪ್ರಚಾರ ನಡೆಸಿದರು. ಚನ್ನಪಟ್ಟಣವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಷ್ಠೆಯನ್ನಾಗಿ ಪರಿಗಣಿಸಿದ್ದರು.  ಯೋಗೇಶ್ವರ್ ಗೆ ಡಿಕೆ ಬ್ರದರ್ಸ್ ಬೆಂಬಲ ಗೆಲುವಿಗೆ ಕಾರಣವಾಗಿದೆ ಅಂತ ಹೇಳಲಾಗುತ್ತಿದೆ. ಸಂಡೂರಿನಲ್ಲಿ ಗಣಿದಣಿ ಜನಾರ್ಧನರೆಡ್ಡಿ ಮತ್ತು ಸ್ಥಳೀಯ ನಾಯಕರ ಅಬ್ಬರದ ಪ್ರಚಾರದ ನಡುವೆಯೂ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಗೆಲುವು ಸಾಧಿಸಿದ್ದಾರೆ.…

Read More

ತುಮಕೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸದೃಢಗೊಂಡಿದೆ ಎಂದು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಹೇಳಿದರು. ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿನ ಹಿನ್ನಲೆಯಲ್ಲಿ ಹುಳಿಯಾರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ನಡೆದ ಮೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅದ್ಭುತ ಪೂರ್ವ ಗೆಲುವು ಸಾಧಿಸುವದರ ಮೂಲಕ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದ್ದು, ಇದು ಕಾಂಗ್ರೆಸ್ ಪಕ್ಷದ ಯೋಜನೆ ಹಾಗೂ ಸಿದ್ದರಾಮಯ್ಯನವರ ಆಡಳಿತದ ಬಗ್ಗೆ ಜನ ನೀಡಿರುವ ತೀರ್ಪಾಗಿದೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತಿಪಟೂರು: ಶಾಖಾ ಗ್ರಂಥಾಲಯದಲ್ಲಿ, ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ, ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ಸೋಮಶೇಖರ್, ಗ್ರಂಥಾಲಯ ದ ಮಹತ್ವ ತಿಳಿಸಿದರು. ಹಾಗೂ ಸವಿತಾ ಸಮಾಜದ ಮುಖಂಡರು ಆದ ಗೋವಿಂದ ರಾಜು ಮಾತನಾಡಿ ವಿದ್ಯಾರ್ಥಿಗಳಿಗೆ, ಗ್ರಂಥಾಲಯಕ್ಕೆ ನೀವು ಬನ್ನಿ, ನಿಮ್ಮವರನ್ಮು ಕರೆತನ್ನಿ, ಎಂಬ ಘೋಷವಾಕ್ಯದೊಂದಿಗೆ ಕರೆ ಕೊಟ್ಟರು. ಮಹಾಲಿಂಗಪ್ಪ ನಿವೃತ್ತ ಶಿಕ್ಷಕರು, ಮತ್ತು GGHPS ಶಾಲೆಯ ಲೋಕೇಶ್ ಶಿಕ್ಷಕರು, ಪ್ರಭಾರದಾರಕರದ DS, ಚಂದ್ರಶೇಖರ, ಕವಿತಾ, ಶೋಭಾ H.T. ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪ್ರೇಮಾಂಜಲಿ ಕನ್ನಡ ಪ್ರೌಢಶಾಲೆ, ಉಜನಿ ವತಿಯಿಂದ ಹಮ್ಮಿಕೊಂಡಿದ್ದ ಅಂತರ್ ಶಾಲಾ ಸಾಂಸ್ಕೃತಿಕ ಮತ್ತು ಸಾಹಿತ್ಯ ಉತ್ಸವ ಮತ್ತು ಸ್ಪೋರ್ಟ್ ಕಾರ್ಯಕ್ರಮದಲ್ಲಿ 10 ಶಾಲೆಗಳಿಂದ 500 ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ತಿರಂಗಾ ಕಾರ್ಯಕ್ರಮದಲ್ಲಿ ಅಂತರ್ ಶಾಲಾ ಕ್ರೀಡೋತ್ಸವ, ಸಾಂಸ್ಕೃತಿಕ, ಸಾಹಿತ್ಯಿಕ ಮತ್ತು ಕ್ರೀಡಾ ವಿಭಾಗಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಎಸ್ ಎಲ್ ಸಿ ನೋಡಲ್ ಅಧಿಕಾರಿ ECO ಬಲ ಭೀಮ್ ಕುಲಕರ್ಣಿ ಮಾತನಾಡಿ, ಕಾರ್ಯಕ್ರಮವು ಸಹಯೋಗ ತತ್ವ, ಸಕಾರಾತ್ಮಕ ಮನೋಭಾವ, ಕೌಶಲ ಪ್ರದರ್ಶನ, ಆರೋಗ್ಯಕರ ಸ್ಪರ್ಧೆ, ಸಹಿಷ್ಣುತೆ, ಸಂಯಮ, ಬುದ್ಧಿವಂತಿಕೆ, ಶಕ್ತಿ ಪ್ರದರ್ಶನ, ಕ್ರೀಡಾ ಮನೋಭಾವ, ಎಲ್ಲದಕ್ಕಿಂತ ಹೆಚ್ಚಾಗಿ ಸೌಹಾರ್ದ ಮನೋಭಾವಕ್ಕೆ ಸಾಕ್ಷಿಯಾಗಿತ್ತು ಎಂದು ಹೇಳಿದರು. ಅದೇ ರೀತಿ ದೈಹಿಕ ಶಿಕ್ಷಣ ಪರಿವಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ TPO ಜೋಯಲ್ ಜಯರಾಜ್ ಇವರು ಮಾತನಾಡಿ, ಮಕ್ಕಳಿಗೆ ದೈಹಿಕ ಆಟಗಳ ಬಗ್ಗೆ ಮಾರ್ಗದರ್ಶನವನ್ನು ನೀಡಿದರು ಹಾಗೂ ಆಟಗಳು ಆಧುನಿಕಯುಗದಲ್ಲಿ ಬಹಳಷ್ಟು ಮಹತ್ವ ಎಂದು ಈ ರೀತಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಂಪನ್ಮೂಲ…

Read More