Subscribe to Updates
Get the latest creative news from FooBar about art, design and business.
- ತಣ್ಣೇನಹಳ್ಳಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ
- ಜಾಗತಿಕ ಸಮಸ್ಯೆಗಳ ಬಗ್ಗೆ ಸಿದ್ದರಬೆಟ್ಟ ಶ್ರೀಗಳ ಕಳಕಳಿ; ಸಮಾಜದ ಏಳಿಗೆಗೆ ಮೌಲ್ಯಗಳು ಮುಖ್ಯ ಎಂದ ಎಲಿಜಬೆತ್ ಚೆರಿಯನ್
- ಕೊರಟಗೆರೆ: ಡಾ.ಜಿ. ಪರಮೇಶ್ವರ್ 2ನೇ ಬಾರಿಗೆ ಡಿಸಿಎಂ; ಅಭಿಮಾನಿಗಳಿಂದ ಭರ್ಜರಿ ಸಂಭ್ರಮಾಚರಣೆ
- ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
- ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
- ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
- ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
- ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
Author: admin
ಗಯಾನಾ: ಪ್ರಧಾನಿ ನರೇಂದ್ರ ಮೋದಿ ಅವರು ಗಯಾನಾದಲ್ಲಿ ರಾಮ ಭಜನೆ ಮಾಡಿ ಗಮನ ಸೆಳೆದರು. ಐದು ದೇಶಗಳಿಗೆ ಮೂರು ದಿನಗಳ ಪ್ರವಾಸದಲ್ಲಿರುವ ಮೋದಿ ಅವರು ವಿದೇಶ ಪ್ರವಾಸದ ಕೊನೆಯ ದಿನದಂದು ಗಯಾನಾದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಗಯಾನಾದಲ್ಲಿರುವ ಮಹಾತ ಗಾಂಧಿಸಾರಕಕ್ಕೆ ತೆರಳಿ ರಾಷ್ಟ್ರಪಿತನಿಗೆ ನಮನ ಸಲ್ಲಿಸಿದರು ಬಳಿಕ ಭಜನಾಕಾರರೊಂದಿಗೆ ಸೇರಿದ ಮೋದಿ ಅವರು ತಾಳ ಹಾಕುವ ಮೂಲಕ ಭಜನೆ ಮಾಡಿ ಗಮನ ಸೆಳೆದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಗಯಾನಾದ ಜಾರ್ಜ್ಟೌನ್ನಲ್ಲಿರುವ ಭಾರತೀಯ ಸಾರಕಕ್ಕೆ ಭೇಟಿ ನೀಡಿ, ಅಲ್ಲಿ ಸಸಿ ನೆಟ್ಟಿದ್ದಾರೆ. ಕಳೆದ 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಏಕೈಕ ಭಾರತೀಯ ಪ್ರಧಾನಿ ಮೋದಿ ಆಗಿದ್ದಾರೆ. ಗಯಾನಾಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರಿಗೆ ಅಲ್ಲಿನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಪಾವಗಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಿ.ಕೆ.ಪುರ ಘಟಕದ ನೂತನ ಅಧ್ಯಕ್ಷರಾಗಿ ಚಿತ್ತಗಾನಹಳ್ಳಿ ಗ್ರಾಮದ ಸಿದ್ದಗಂಗಪ್ಪನವರು ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಮತ್ತು ಕಾಂಗ್ರೆಸ್ ಮುಖಂಡರು ಇಂದು ಮಾಜಿ ಸಚಿವರಾದ ವೆಂಕಟರಮಣಪ್ಪ ನವರನ್ನು ಭೇಟಿ ಮಾಡಿ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಕೋಟೆ ಪ್ರಭಾಕರ್, ಶಿವಮೂರ್ತಿ, ಬಿಂದು ಮಾಧವ ರಾವ್,ನಾಗೇಂದ್ರ,ನರಸಪ್ಪ , ದೇವರಹಟ್ಟಿ ಶಿವಣ್ಣ, ಸೇರಿದಂತೆ ಇನ್ನಿತರೆ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು. ವರದಿ: ನಂದೀಶ್ ನಾಯ್ಕ್, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ನಗರ ಪೊಲೀಸ್ ಠಾಣೆಯ ಪಿ.ಎಸ್.ಐ. ತಸ್ಲಿಮ್ ಸುಲ್ತಾನಾರವರು Embassy Public School ಮಕ್ಕಳನ್ನು ಠಾಣೆಗೆ ಕರೆಸಿ ಮಕ್ಕಳ ಸಂಬಂಧಿತ ಕಾನೂನುಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಮಕ್ಕಳ ಸಹಾಯವಾಣಿಗಳ ಬಳಕೆ, ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಮೊದಲಾದ ವಿಚಾರಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ಸಂವಿಧಾನ ಅಂಗೀಕಾರ ದಿನಾಚರಣೆ ಹಾಗೂ ಸುಪ್ರೀಂ ಕೋರ್ಟಿನ ತೀರ್ಪಿನಂತೆ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ರಾಜ್ಯ ಸರ್ಕಾರ ಕೂಡಲೇ ಅನುಷ್ಠಾನಕ್ಕೆ ಆಗ್ರಹಿಸಿ ಜಿಲ್ಲಾ ಮಟ್ಟದ ಬೃಹತ್ ಸಮಾವೇಶ ನಡೆಸಲು ಬೀದರ್ ಜಿಲ್ಲೆಯ ದಲಿತ ವಿಮೋಚನಾ ಸೇನೆ ಜಿಲ್ಲಾ ಸಮಿತಿ ಐಬಿಐಯಲ್ಲಿ ನಡೆಸಿದ ಸಭೆಯಲ್ಲಿ ತೀರ್ಮಾನ ಕೈಗೊಂಡಿತು. ನವೆಂಬರ್ 29ರಂದು ಮಧ್ಯಾಹ್ನ 1 ಗಂಟೆಗೆ ನಿಸರ್ಗ ಕಲ್ಯಾಣ ಮಂಟಪ, ಹುಡಗಿ, ತಾಲೂಕು ಹುಮನಾಬಾದನಲ್ಲಿ ಜಿಲ್ಲಾ ಮಟ್ಟದ ಬೃಹತ್ ಸಮಾವೇಶ ಹಮ್ಮಿಕೊಳ್ಳುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ದಯಾನಂದ( ವಕೀಲರು), ಜಿಲ್ಲಾಧ್ಯಕ್ಷರಾದ ಮಾರುತಿ ಸೂರ್ಯವಂಶಿ, ಯುವ ಘಟಕ ರಾಜ್ಯಾಧ್ಯಕ್ಷರಾದ ರಾಜು( ಕಾಣೆ ) ಜಿಲ್ಲಾ ಉಪಾಧ್ಯಕ್ಷರಾದ ಸುನಿಲ್ ಎಸ್. ಹುಡುಗಿ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ (ಮಾಳಗೆ) ಎಲ್ಲ ಪದಾಧಿಕಾರಿಗಳು ಉಪಸಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಚಿತ್ರಕಲಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ, ಪ್ರಥಮ ವರ್ಷದ ಬಿವಿಎ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ವಸಂತಾ ಟಿ.ಡಿ. ಉದ್ಘಾಟಿಸಿದರು. ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ತುಮಕೂರು ಇದರ ಪ್ರಾಂಶುಪಾಲರಾದ ಸಿ.ಸಿ. ಬಾರಕೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ತರನ್ನುಂ ನಿಖತ್ ಎಸ್., ಸ.ಪ್ರ.ದರ್ಜೆ ಕಾಲೇಜಿನ ಗಣಿತ ಶಾಸ್ತ್ರ ಮುಖ್ಯಸ್ಥರಾದ ಯೋಗೀಶ್, ಸರ್ಕಾರಿ ಚಿತ್ರಕಲಾ ಕಾಲೇಜು ತುಮಕೂರು ಇದರ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ನಟರಾಜು ಜಿ.ಎಲ್., ಹಳೆಯ ವಿದ್ಯಾರ್ಥಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಯತೀಶ್ ಕುಮಾರ್, ಖಜಾಂಚಿ ಮಹಮ್ಮದ್ ಗೌಸ್ ಪೀರ್ ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಪಾವಗಡ: ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ಡಾ.ವಿರೇಂದ್ರ ಹೆಗ್ಗಡೆಯವರು ಮಹಿಳೆಯರಿಗೋಸ್ಕರ ವಿಶೇಷ ಕೌಶಲ್ಯ ತರಬೇತಿಗಳನ್ನ ಯೋಜನೆಯಿಂದ ಅನುಷ್ಠಾನ ಮಾಡಿಸುತ್ತಿರುವುದು ಹೆಮ್ಮೆಯ ವಿಷಯ. ನೀವುಗಳು ಶ್ರದ್ದೆಯಿಂದ ತರಬೇತಿ ಪಡೆದುಕೊಂಡು ಸ್ವಂತ ಬದುಕನ್ನ ಕಟ್ಟಿಕೊಳ್ಳಿ ಎಂದು ಸದಸ್ಯರಿಗೆ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ತಿಳಿಸಿದರು. ತಾಲ್ಲೂಕಿನ ನಿಡಗಲ್ ವಲಯದ ಕೆ.ಟಿ.ಹಳ್ಳಿ ಗ್ರಾಮದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಾವಗಡ ತಾಲೂಕಿನ ಯೋಜನಾಧಿಕಾರಿಗಳಾದ ಮಹೇಶ್ ಹೆಚ್. ರವರು ಪೂಜ್ಯ ಖಾವಂದರ ಮಾಗ೯ದಶ೯ನದಂತೆ ತಾಲೂಕು ವ್ಯಾಪ್ತಿಯಲ್ಲಿ ಇದುವರೆವಿಗೂ ಒಟ್ಟು 25 ಜ್ಞಾನ ವಿಕಾಸ ಕೇಂದ್ರ ರಚನೆ ಮಾಡಿ ಒಟ್ಟು 1,500 ಸದಸ್ಯರು ಸೇರ್ಪಡೆ ಆಗಿ, ಇದುವರೆಗೂ ಒಟ್ಟು 2,000 ತರಬೇತಿ ಆಯೋಜನೆ ಮಾಡಿದ್ದು, ಜ್ಞಾನ ವಿಕಾಸ ಹಾಗೂ ಸ್ವಸಹಾಯ ಸಂಘ ಸದಸ್ಯರಿಗೆ ಒಟ್ಟು 6,500 ಜನ ತರಬೇತಿ ಮೂಲಕ ವಿವಿಧ ಮಹಿಳೆಯರಿಗೆ ಸಾಮರ್ಥ್ಯ ತಿಳುವಳಿಕೆ ಹೆಚ್ಚಿಸಿಕೊಳ್ಳಲು ಟೈಲರಿಂಗ್, ಎಂಬ್ರಾಯಿಡಿಂಗ್, ಬ್ಯೂಟಿಪಾರ್ಲರ್, ಸಿರಿಧಾನ್ಯ, ಪೌಷ್ಟಿಕ ಆಹಾರ, ಆರೋಗ್ಯ ತಪಾಸಣೆ ಶಿಬಿರ, ಬೀದಿ ನಾಟಕ ಮೂಲಕ…
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿಯ ಹುಳಿಯಾರು ಹೋಬಳಿ ಕೇಂದ್ರ ತಾಲೂಕು ಕೇಂದ್ರವಾಗಿ ಬೆಳೆಯುತ್ತಿದ್ದ ಇಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡದ ಕಾಮಗಾರಿ ಶಾಲೆಯ ಆವರಣದಲ್ಲಿ ಪೂರ್ಣಗೊಂಡು ವರ್ಷಗಳೇ ಆಗಿದ್ದರೂ ಆರಂಭ ಕಾಲಕ್ಕೆ ಹಿಡಿದ ಗ್ರಹಣ ಇನ್ನೂ ಬಿಟ್ಟಿಲ್ಲ. ಬಡವರಿಗೆ ಕಡಿಮೆ ದರದಲ್ಲಿ ಊಟ ಸಿಗಬೇಕೆಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಶುರು ಮಾಡಿದ್ದರು ಸಿಎಂ ಸಿದ್ದರಾಮಯ್ಯ. ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆ ಅಷ್ಟಕ್ಕೆ ಅಷ್ಟೇ ಆಗಿತ್ತು. ಈಗ ಮತ್ತೆ ಅಧಿಕಾರಕ್ಕೆ ಬಂದಿರೋ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಗೆ ಹೊಸ ರೂಪ ನೀಡೋದಾಗಿ ಹೇಳಿದೆ. ಆದ್ರೇ ಕ್ಯಾಂಟೀನ್ ಬೀಗ ಬಿದ್ದಿದ್ದು, ಆ ಕ್ಯಾಂಟೀನ್ ಅಕ್ರಮ ಚಟುವಟಿಕೆಯ ತಾಣವಾಗಿದೆ. ಇದರಲ್ಲಿ ಹುಳಿಯಾರು ಹೋಬಳಿ ಕೇಂದ್ರದ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಗೆ ವರ್ಷಗಳೇ ಕಳೆದರೂ ಆರಂಭವಾಗಬೇಕಾದ ಇಂದಿರಾ ಕ್ಯಾಂಟೀನ್ ಗೆ ಹಿಡಿದ ಗ್ರಹಣ ಇನ್ನೂ ಬಿಟ್ಟಿಲ್ಲ. ಕಟ್ಟಡ ನಿರ್ಮಾಣವಾದರೂ ಕ್ಯಾಂಟೀನ್ ಆರಂಭವಾಗದೆ, ಪಾಳುಬಿದ್ದ ಕೊಂಪೆಯಾಗಿದ್ದು, ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.…
ತುಮಕೂರು: ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ/ಪಂಗಡದ ಕುಂದು ಕೊರತೆ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಯಲ್ಲಿ ಪರಿಶಿಷ್ಟ ಜಾತಿ/ಪಂಗಡದ ಕುಂದು ಕೊರತೆ ಕುರಿತು ಚರ್ಚಿಸಲಾಗುವುದು. ಕುಂದು ಕೊರತೆಗಳಿದ್ದಲ್ಲಿ ಸಂಬಂಧಿಸಿದವರು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ನವೆಂಬರ್ 26ರೊಳಗಾಗಿ ಲಿಖಿತ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆದವರು ಸ್ವೀಕೃತಿಯೊಂದಿಗೆ ನವೆಂಬರ್ 28ರಂದು ನಡೆಯುವ ಕುಂದು ಕೊರತೆ ಸಭೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಬೆವಿಕಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗದ ವ್ಯಾಪ್ತಿಯಲ್ಲಿ ವಿದ್ಯುತ್ ಗೋಪುರ ನಿರ್ಮಾಣ ಕಾರ್ಯ ಕೈಗೊಂಡಿರುವುದರಿಂದ ನವೆಂಬರ್ 25 ಮತ್ತು 27ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕಾಟನಹಳ್ಳಿ, ಮರಾಠಿ ಪಾಳ್ಯ, ಚಿಂದಿಗೆರೆ, ಎಂ.ಎಂ.ಎ.ಕಾವಲ್, ತಾಳೆಕೊಪ್ಪ, ತೊಣಸನಹಳ್ಳಿ, ಎಣ್ಣೆಕಟ್ಟೆ, ಇರಕಸಂದ್ರ, ಚೇಳೂರು ಟೌನ್, ಜಾಲಗುಣಿ, ಅರಿವೇಸಂದ್ರ, ನಿಂಬೆಕಟ್ಟೆ, ಮಾದೇನಹಳ್ಳಿ, ಇಡಕನಹಳ್ಳಿ, ಸಿ.ಅರಿವೇಸಂದ್ರ, ವಾಟರ್ ಸಪ್ಲೈ ಫೀಡರ್, ನಲ್ಲೂರು, ಕೊಡಿಯಾಲ, ಹೊಸಕೆರೆ, ಹಾಗಲವಾಡಿ, ಅಳಿಲಘಟ್ಟ, ಹೂವಿನಕಟ್ಟೆ, ಮಂಚಲದೊರೆ, ಕಾಳಿಂಗನಹಳ್ಳಿ, ಸೋಮಲಾಪುರ, ಬೋಗಸಂದ್ರ, ಬೆಟ್ಟದಹಳ್ಳಿ, ಹೊಸಹಳ್ಳಿ, ಬಂಡನಹಳ್ಳಿ, ಶಿವಪುರ, ಗಣೇಶಪುರ, ಕಳ್ಳನಹಳ್ಳಿ, ಮತ್ತಿಕೆರೆ, ಕುರೇಹಳ್ಳಿ, ಗುಡ್ಡೇನಹಳ್ಳಿ, ಗೊಲ್ಲಹಳ್ಳಿ, ಕುರಿಕೆಂಪನಹಳ್ಳಿ, ನೆಲಹಾಳ್, ಮಜ್ಜಿಗೆ ಕೆಂಪನಹಳ್ಳಿ, ಮುದ್ದೇನಹಳ್ಳಿ, ಲಿಂಗನಹಳ್ಳಿ, ಚನ್ನೇನಹಳ್ಳಿ, ಮಶಣಾಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ತುಮಕೂರು: ನಗರ ವ್ಯಾಪ್ತಿಯ 9 ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 24ರಂದು ಕೆ-ಸೆಟ್(K–SET) ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ನವೆಂಬರ್ 24ರ ಬೆಳಿಗ್ಗೆ 9 ರಿಂದ ಸಂಜೆ 3 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಝೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ ಆಪ್ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ…