Author: admin

ಬೀದರ್: ಒಗ್ಗರಣೆ ಅನ್ನ ಸೇವನೆ ಮಾಡಿದ 50 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೀದರ್ ಜಿಲ್ಲೆ ಹುಮನಾಬಾದ್ ನಲ್ಲಿ ನಡೆದಿದೆ ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಗ್ಗರಣೆ ಅನ್ನ ತಿಂದು 50 ಮಕ್ಕಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾತ್ರಿ ಉಳಿದ ಅನ್ನಕ್ಕೆ ಒಗ್ಗರಣೆ ನೀಡಿ ಮಕ್ಕಳಿಗೆ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹುಮನಾಬಾದ್ ಪಟ್ಟಣದ ಹೊರವಲಯದ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಗೆ ಎಂಎಲ್ ಸಿ ಭೀಮಾರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಾವಗಡ : ಕನ್ನಡ ಬಿಗ್ ಬಾಸ್ ವಿಜೇತ, ಚಲನಚಿತ್ರ ನಟ ಮಂಜು ಪಾವಗಡ ಅವರ ವಿವಾಹ ಸಮಾರಂಭವು ಪಾವಗಡ ತಾಲ್ಲೂಕಿನ ನಾಗಲಮಡಿಕೆ ಗ್ರಾಮದ ವಧುವಿನ ಸ್ವಗೃಹದಲ್ಲಿ ನಡೆಯಿತು. ಶಾಸಕರಾದ ಹೆಚ್.ವಿ.ವೆಂಕಟೇಶ್ ಮತ್ತು ಮಾಜಿ ಸಚಿವರಾದ ವೆಂಕಟರಮಣಪ್ಪರವರು ಭಾಗವಹಿಸಿ ನವ ವಧುವರಾದ ಮಂಜು ಹಾಗೂ ನಂದಿನಿ ದಂಪತಿಗಳಿಗೆ ಶುಭ ಹಾರೈಸಿದರು. ಪುರಸಭಾ ಅಧ್ಯಕ್ಷರಾದ ರಾಜೇಶ್, ಮಾಜಿ ಅಧ್ಯಕ್ಷರಾದ ಶಂಕರ್ ರೆಡ್ಡಿ, ಸದಸ್ಯರಾದ ಎನ್. ರವಿ, ಸ್ಥಳೀಯ ಮುಖಂಡರುಗಳಾದ ಕೆ.ಬಿ.ನಾಗರಾಜ್, ವಧುವಿನ ಸಹೋದರ ನಾಗರಾಜು, ಎನ್.ಮಂಜುನಾಥ್, ಹನುಮಂತರಾಯಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಮಾರಪ್ಪ ನವರು, ಕೆ.ಟಿ.ಹಳ್ಳಿ ಚಿಕ್ಕಣ್ಣ, ಪರಮೇಶ್ವರ್, ಶರ್ಫುದ್ದೀನ್ ಸೇರಿ ಇನ್ನೂ ಮುಂತಾದವರು ಈ ಸಂದರ್ಭದಲ್ಲಿ ಇದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊಡಿಗೇನಹಳ್ಳಿ (ಮಧುಗಿರಿ): ಆಸ್ತಿ ವಿಚಾರದ ನೆಪವೊಡ್ಡಿ ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿ ಓರ್ವ ಮಹಿಳೆಯ ಕೈ ಮೂಳೆ ಮುರಿದಿರುವ ಘಟನೆ ವರದಿಯಾಗಿದೆ. ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಕಲಿದೇವಪುರ ಗ್ರಾಮದಲ್ಲಿ ದಾಯಾದಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ನಾಲ್ವರು ಸೇರಿಕೊಂಡು ಪ್ರಭಾವತಿ (36) ಎಂಬುವರ ಮೇಲೆ ಹಲ್ಲೆ ಮಾಡಿದ್ದು ಎಡಗೈ ಮೂಳೆ ಮುರಿದಿದೆ. ಜತೆಗೆ ಬಿಡಿಸಲು ಬಂದ ವಿಶೇಷಚೇತನ ರಾಮಾಂಜನಪರ ಮೇಲೂ ಹಲ್ಲೆ ಮಾಡಿದ್ದು, ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆ ಮೇರೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಮೇಶ್‌, ನಂಜುಂಡಪ್ಪ, ಅಮೃತ, ಮುದ್ದಮ್ಮ ಎಂಬುವರು ಸೇರಿಕೊಂಡು ಕೊಲೆ ಮಾಡುವ ಉದ್ದೇಶದಿಂದ ನಮ್ಮ ಕುಟುಂಬದ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಗಾಯಾಳು ಮಹಿಳೆ ಪತಿ ಕೊಡಿಗೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಪಾವಗಡ: ತಾಲೂಕಿನ ನಿಡಗಲ್ ಹೋಬಳಿಯ ಗುಜ್ಜನಡು ಗ್ರಾಮದ ಹೊರವಲಯದ ಮುಗದಾಳಬೆಟ್ಟ ಗ್ರಾಮಕ್ಕೆ ಸೇರಿದ ಹೊಸಕೆರೆ ಇತ್ತೀಚೆಗೆ ಸುರಿದ ಮಳೆಗೆ ತುಂಬಿದ್ದು ಕೆರೆಯ ಮಧ್ಯ ಭಾಗದಲ್ಲಿ ಮಂಗೆ ಬಿದ್ದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದು ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ತಳಕ್ಕೆ ಕೆಟಿ ಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಮಂಜುನಾಥ ಭೇಟಿ ನೀಡಿ ಪರಿಶೀಲಿಸಿದ್ದು, ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ಸ್ಥಳಕ್ಕೆ ಬುಧವಾರ ಸಂಜೆ 5 ಗಂಟೆಯಲ್ಲಿ ಪಾವಗಡ ತಹಶೀಲ್ದಾರ್ ಡಿ.ಎನ್.ವರದರಾಜು ಅವರು ಭೇಟಿ ನೀಡಿ ಪರಿಶೀಲಿಸಿದ್ದು, ಪೋಲಾಗುತ್ತಿರುವಂತಹ ನೀರನ್ನು ತಡೆಯಲು ಕ್ರಮವಹಿಸುತ್ತಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಚನ್ನಪಟ್ಟಣ: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆ 7ರಿಂದ 5 ಗಂಟೆಯವರೆಗೆ ಒಟ್ಟು ಶೇ. 84.26 ರಷ್ಟು ಮತಚಲಾವಣೆಗೊಂಡಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 232949 ಮತದಾರರಿದ್ದಾರೆ. ಈ ಪೈಕಿ 112324 ಪುರುಷರು  ಹಾಗೂ 120617 ಮಹಿಳಾ ಮತದಾರರಿದ್ದಾರೆ. ಇತರೆ 8 ಮತದಾರರು ಇದ್ದಾರೆ. ಒಟ್ಟು 232949 ಮತದಾರರ ಪೈಕಿ 196286 ಮತದಾರರು ಮತಚಲಾವಣೆ ಮಾಡಿದ್ದಾರೆ.  ಈ ಪೈಕಿ 93125 ಪುರುಷರು ಹಾಗೂ 103159 ಮಹಿಳಾ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಶೇಕಡಾವಾರು ಮತದಾನ ಶೇ.84.26 ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆದ ಪರಿಣಾಮ ಓರ್ವ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ರಾಜ್ಯ ಹೆದ್ದಾರಿ 33ರಲ್ಲಿರುವ ರಾಜೇಂದ್ರ ಪುರ ಗೇಟ್ ಬಳಿ ನಡೆದಿದೆ. ಮಂಡ್ಯ ಪಟ್ಟಣದ ಚಾಮರಾಜನಗರದ ನಿವಾಸಿ ಆಕರ್ಶ್ (28) ಮೃತ ದುರ್ದೈವಿ ಆಗಿದ್ದಾರೆ. ಕಾರಿನಲ್ಲಿದ್ದ ಶಶಾಂಕ್ ಗೌಡ, ಜ್ಞಾನೇಶ್ವರಿ, ಶಶಾಂಕ್ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಗುದ್ದಿದೆ. ಮಂಡ್ಯ ಮೂಲದ ನಾಲ್ವರು ತುಮಕೂರಿನಲ್ಲಿ ಮದುವೆ ಮುಗಿಸಿ ಮಂಡ್ಯ ಕಡೆಗೆ ತೆರಳುತ್ತಿದ್ರು. ಈ ವೇಳೆ ಕಾರಿನ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನ ಕುಣಿಗಲ್ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡ ಶಶಾಂಕ್ ಗೌಡ…

Read More

ತುಮಕೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ  ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ) ನ್ಯಾಯಾಲಯ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ, ಆರೋಪಿ ಹರಿಕರ ಸುದನ್ ನ ಮನೆಯ ಮುಂದೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಿರಿಯಾನಿ ಕೊಡುತ್ತೇನೆ ಎಂದು ಕರೆದೊಯ್ದು, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ತನಿಖಾಧಿಕಾರಿ  ರಾಧಾಕೃಷ್ಣ ಅವರು ಘನ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿಯಲ್ಲಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ  ನಡೆದಿದ್ದು, ಈ ಪ್ರಕರಣದಲ್ಲಿ ಅಭಿಯೋಜನೆಯ ಪರವಾಗಿ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಆರೋಪಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಲಯದ ನ್ಯಾಯಾಧೀಶರು ಅಪರಾಧಿಗೆ  50 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಮೊತ್ತವನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ವಾದ ಮಂಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ಇತ್ತೀಚೆಗೆ ಅನಂತಪುರದ ಶ್ರೀ ಕೃಷ್ಣದೇವರಾಯ ವಿವಿಯಲ್ಲಿ ನಡೆದ ‘ಸ್ಟಾರ್ಟ್ಅಪ್ ಜಾತ್ರಾ’ನಲ್ಲಿತುಮಕೂರು ವಿವಿಯ ಜೈವಿಕ ತಂತ್ರಜ್ಞಾನ ಮತ್ತು ಸೂಕ್ಷ್ಮ ಜೀವವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಮೊದಲ ಎರಡು ಸ್ಥಾನ ಪಡೆದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆವಿಷ್ಕಾರಗಳನ್ನುಉತ್ತೇಜಿಸಲು ಮತ್ತು ಮಹತ್ವಾಕಾಂಕ್ಷಿ ಉದ್ಯಮಿಗಳಿಗೆ ಅವಕಾಶಗಳನ್ನು ಒದಗಿಸಲು ಹಾಗೂಉತ್ಪನ್ನ ಪ್ರಯೋಗಗಳು, ಮಾರುಕಟ್ಟೆ ಪ್ರವೇಶ ಮತ್ತು ವಾಣಿಜ್ಯೀಕರಿಸಲು ಸ್ಟಾರ್ಟ್ಅಪ್‌ಗಳಿಗೆ ಹಣಕಾಸಿನ ನೆರವು ನೀಡುವಗುರಿಯೊಂದಿಗೆ ನಡೆಸುವ ‘ಸ್ಟಾರ್ಟ್ಅಪ್ ಜಾತ್ರಾ’ನಲ್ಲಿ ಭಾರತದಾದ್ಯಂತ 350 ಕಾಲೇಜುಗಳು ಭಾಗಿಯಾಗಿದ್ದವು. ದೇಶದ ವಿವಿಧ ವಿವಿಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡಗಳು ನೂತನವಾಗಿತಾವು ಆವಿಷ್ಕಾರಗೊಳಿಸಿರುವ ಉತ್ಪನ್ನಗಳನ್ನು ‘ಸ್ಟಾರ್ಟ್ಅಪ್‌ಜಾತ್ರಾ’ಸ್ಪರ್ಧೆಯಲ್ಲಿ ಪ್ರದರ್ಶಿಸಿದರು. ಕೊನೆಯ ಹಂತದಲ್ಲಿ 26 ತಂಡಗಳು ಆಯ್ಕೆಯಾದವು. ತುಮಕೂರು ವಿವಿಯಿಂದ ಒಟ್ಟು 6 ತಂಡಗಳು ಭಾಗವಹಿಸಿದ್ದವು. ಅದರಲ್ಲಿಎರಡು ತಂಡಗಳು ಮೊದಲ ಎರಡು ಸ್ಥಾನಗಳನ್ನು ತಮ್ಮದಾಗಿಸಿಕೊಂಡವು. ತಂಡಗಳಾದ ಡಿವೈನ್ ಹಾರ್ವೆಸ್ಟ್ಶುಂಠಿ ಮತ್ತು ಅರಿಶಿನ ಮಸಾಲೆಗಳಿಗೆ ಜೈವಿಕಗೊಬ್ಬರ ಹಾಗೂಕೋಕೋ–ಕ್ರಾಂತಿ ಸಸ್ಟೈನೆಬಿಲಿಟಿ ತಂಡವು ಬಯೋ ಪ್ಲಾಸ್ಟಿಕ್ ಟೀ ಬ್ಯಾಗ್ಸ್ ಗಳ ಆವಿಷ್ಕಾರಗಳನ್ನು ಜಾತ್ರಾ ಸ್ಪರ್ಧೆಯಲ್ಲಿ ಪ್ರದರ್ಶಿಸಿದರು. ಮುಂದಿನ ಹಂತವಾಗಿ ಧನ ಸಹಾಯಸಂಸ್ಥೆಗಳು ಆರ್ಥಿಕವಾಗಿ ಸಹಾಯ ಮಾಡಿ,…

Read More

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಐ.ಡಿ.ಎಫ್.ಸಿ. ಫಸ್ಟ್ ಭಾರತ್ ಹಾಗೂ ಡಿವೈನ್ ಅಸೋಸಿಯೇಟ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಲುವಾಗಿ ನವೆಂಬರ್ 16ರಂದು ನೇರ ಸಂದರ್ಶನ ನಡೆಯಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಐ.ಟಿ.ಐ, ಡಿಪ್ಲೊಮಾ (ಯಾವುದೇ ಟ್ರೇಡ್) ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 16ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಹತ್ತಿರ, ಮೂಲೆಮನೆ ಹೋಟಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು-572102, ಇಲ್ಲಿ ತಮ್ಮ ಸ್ವಯಂ ವಿವರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9071021143/ 9513136642ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…

Read More

ತುಮಕೂರು: ಜಿಲ್ಲೆಯಲ್ಲಿ 2024–25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಪ್ರವಾಹ/ಅತಿವೃಷ್ಠಿಯಂತಹ ಪ್ರಕೃತಿ ವಿಕೋಪಗಳಿಂದ ಉಂಟಾದ ಹಾನಿಗೆ ಪರಿಹಾರ ಪಾವತಿಗೆ ಸಂಬಂಧಿಸಿದಂತೆ ನವೆಂಬರ್ 13ರಂದು ಬೆಳೆ ಹಾನಿಯಾದ ರೈತರ ಅಂತಿಮ ಪಟ್ಟಿಯನ್ನು ಜಿಲ್ಲಾಧಿಕಾರಿ/ ಉಪವಿಭಾಗಾಧಿಕಾರಿ/ ತಹಶೀಲ್ದಾರ್/ಗ್ರಾಮ ಪಂಚಾಯತಿ ಕಚೇರಿ/ ರೈತರ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More