Author: admin

ತುಮಕೂರು: ಜಿಲ್ಲೆಯ ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಹೂಯಿಲ್ ದೊರೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಗೆ ರಾಜಮ್ಮ ಚಂದ್ರ ನಾಯಕ ಕೆ.ಜಿ. ರವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮಿ ತಿಮ್ಮಯ್ಯರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಮತ್ತು ಅಧ್ಯಕ್ಷರಾಗಿ ಯಾರೊಬ್ಬರೂ ಸಹ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಇವರಿಬ್ಬರನ್ನು ಚುನಾವಣಾ ಅಧಿಕಾರಿಯಾಗಿ ಆಗಮಿಸಿದ ಶಿರಾ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ ರವರು ವಿಜಯಿಗಳೆಂದು ಘೋಷಣೆ ಮಾಡಿದರು/ ಈ ಮೂಲಕ ಕಳೆದ ಬಾರಿಯಂತೆ ಈ ಬಾರಿಯೂ ಮಹಿಳಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರೇ ಆಯ್ಕೆಯಾಗಿ ಮಹಿಳೆಯರ ಪಾರುಪತ್ಯ ಮುಂದುವರೆಯಿತು. ಕಂದಾಯ ಅಧಿಕಾರಿ ಉಮೇಶ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಶಂಕರ್ ಗ್ರಾಮಲೆಕ್ಕಿಗ ಪವನ್ ಸೇರಿದಂತೆ ಹೂಯಿಲ್ ದೊರೆ ಗ್ರಾಮ ಪಂಚಾಯತಿ ಸದಸ್ಯರು ಮುಖಂಡರುಗಳು ಗ್ರಾಮಸ್ಥರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 170 ಕೋಟಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಹಾಗೆಯೇ 49 ಕೋಟಿ ರೂ ವೆಚ್ಚದ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ 3,4 ನೇ ಅಂತಸ್ತಿನ ಕಟ್ಟಡ ಹಾಗೂ ವಸತಿ ನಿಲಯದ 3 ನೇ ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ, ಡಾ.ತಿಮ್ಮಯ್ಯ, ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತಿಪಟೂರು: ನಗರ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ನವಂಬರ್ 14ರಂದು ಇನ್ನರ್  ವೀಲ್ ಕ್ಲಬ್  ವತಿಯಿಂದ ತಾಲೂಕು ಪ್ರೌಢಶಾಲೆ ಮಟ್ಟದ ಜನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಕ್ಲಬ್ ನ ಅಧ್ಯಕ್ಷೆ ಸುಮಿತ್ರ ಹೇಳಿದರು. ಈ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ ಬೆಳಗ್ಗೆ 10:30 ಕ್ಕೆ ಶಾಸಕ ಕೆ.ಷಡಕ್ಷರಿ ಅವರು ಉದ್ಘಾಟಿಸುವರು ಡಾ. ಶ್ರೀಧರ್ ಬಿಜೆಪಿ ಮುಖಂಡರಾದ ಲೋಕೇಶ್ವರ್ ನಗರಸಭಾಧ್ಯಕ್ಷ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಮಕ್ಕಳಲ್ಲಿ ಜನಪದ ಕಲೆ ಮತ್ತು ನೃತ್ಯದಲ್ಲಿ ಆಸಕ್ತಿ ಮೂಡಿಸುವ ಸಲುವಾಗಿ ಜನಪದ ನೃತ್ಯ ಸ್ಪರ್ಧೆ ಆಯೋಜಿಸಲಾಗಿದ್ದು, ತಾಲೂಕಿನ ಸುಮಾರು 20 ಶಾಲೆಗಳು 130ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಲಿದ್ದಾರೆ. ಆದರೆ ಸಿನಿಮಾ ಹಾಡು ಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು. ಪ್ರಥಮ ಸ್ಥಾನ ಪಡೆದ ಮಕ್ಕಳಿಗೆ 5,000 ದ್ವಿತೀಯ ಬಹುಮಾನ 3,000 ಮೂರನೇ ಬಹುಮಾನ 25 ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. ಈ ಸಂಸ್ಥೆಯ ಎಡಿಟರ್ ರೇಖಾ ಸುಜಾತ, ಮಾಜಿ ಅಧ್ಯಕ್ಷ ಭಾಗೃಮೂರ್ತಿ ಇನ್ನಿತರರು ಉಪಸ್ಥಿತರಿದ್ದರು ವರದಿ:…

Read More

ತುಮಕೂರು:  ಬೆವಿಕಂ ಗ್ರಾಮೀಣ ಉಪ ವಿಭಾಗ–1ರ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್ 13 ಮತ್ತು 14ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಚಿನಗಿರಿಪಾಳ್ಯ, ಬೆಳಧರ, ಅಗ್ರಹಾರ, ಚಿನಿವಾರನಹಳ್ಳಿ, ಎ.ಡಿ.ಎಸ್.ಪಾಳ್ಯ, ಮಲ್ಲೇನಪಾಳ್ಯ, ಗೌಡನಕಟ್ಟೆ, ಜಕ್ಕೇನಹಳ್ಳಿ, ಚೆನ್ನಮುದ್ದೇನಹಳ್ಳಿ, ಗೊಲ್ಲರಹಟ್ಟಿ, ಅಮಲಾಪುರ ಗ್ರಾಮ ಹಾಗೂ ಓಬಳಾಪುರ ಮತ್ತು ಬೆಳಧರ ಗ್ರಾಮ ಪಂಚಾಯತಿ ವ್ಯಾಪ್ತಿಯ ಇತರೆ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಿಂದ ಸುಮಾರು 30,000 ಫಲಾನುಭವಿಗಳ ಪೌತಿಖಾತೆ, ಹಕ್ಕು ಪತ್ರ ವಿತರಣೆ, ಪಿಂಚಣಿ ಸೌಲಭ್ಯಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್  ತಿಳಿಸಿದರು. ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.40ಕ್ಕೂ ಹೆಚ್ಚು ಮಳೆಯಾಗಿದೆ. ಅಧಿಕ ಮಳೆಯಿಂದ 3 ಮಂದಿ ಮರಣ ಹೊಂದಿದ್ದು, ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಮರಣ ಹೊಂದಿರುವವರ ಕುಟುಂಬಕ್ಕೆ ಈಗಾಗಲೇ ತಲಾ 5ಲಕ್ಷ ರೂ.ಗಳ ಪರಿಹಾರ ನೀಡಲಾಗಿದೆ. ಪ್ರಾಣ ಹಾನಿಯಾದ ಜಾನುವಾರು ಮಾಲೀಕರಿಗೂ ಪರಿಹಾರ ಹಣ ವಿತರಿಸಲಾಗಿದ್ದು, ಯಾವುದೇ ಪರಿಹಾರ ಹಣ ಬಾಕಿ ಇರುವುದಿಲ್ಲವೆಂದು ತಿಳಿಸಿದರು. ಜಿಲ್ಲೆಯಲ್ಲಿ ಹಿಂಗಾರು ಮಳೆಯಿಂದ 200 ಹೆಕ್ಟೇರ್ ಪ್ರದೇಶದ 327 ರೈತರ ಬೆಳೆ ಹಾನಿಯಾಗಿದೆ. ಈಗಾಗಲೇ ಬೆಳೆ ಹಾನಿಗೊಳಗಾದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪರಿಹಾರಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಜಿಲ್ಲೆಯ 1.30ಲಕ್ಷ…

Read More

ತುಮಕೂರು: ಮುಖ್ಯಮಂತ್ರಿಗಳ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷವಾಗದಂತೆ ಕ್ರಮವಹಿಸಬೇಕೆಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಧಿಕಾರಿಗಳಿಗೆ ತಾಕೀತು ಮಾಡಿದರು. ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಲು ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಕಟ್ಟಡದ ತಾರಸಿ ಮೇಲ್ಭಾಗದಲ್ಲಿ ಮರದ ಎಲೆಗಳು ಬಿದ್ದು ಸ್ವಚ್ಛಗೊಳಿಸದೆ ಮಳೆ ನೀರು ನಿಂತು ಕಟ್ಟಡಗಳ ಮೇಲ್ಚಾವಣಿ ಬೀಳುವ ದುಸ್ಥಿತಿಗೆ ತಲುಪುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡು ಅಭಿಯಾನದಡಿ ಕಚೇರಿ ಕಟ್ಟಡಗಳ ಮೇಲ್ಚಾವಣಿ ಹಾಗೂ ಸುತ್ತಮುತ್ತಲೂ ಸ್ವಚ್ಛತೆ ಕಾಪಾಡಬೇಕು ಎಂದು ನಿರ್ದೇಶನ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಡಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಕೊರಟಗೆರೆ ತಾಲ್ಲೂಕು ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವುದು ಅಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ. ಕಚೇರಿಯಲ್ಲಿ ಕುಳಿತು ಪತ್ರಗಳಿಗೆ ಸಹಿ ಹಾಕಲಷ್ಟೇ ತಮ್ಮ ಕರ್ತವ್ಯಗಳನ್ನು ಸೀಮಿತಗೊಳಿಸದೆ ಶಾಲಾ-ಕಾಲೇಜು, ಆಸ್ಪತ್ರೆ, ವಿದ್ಯಾರ್ಥಿ ನಿಲಯಗಳಿಗೆ ತಿಂಗಳಿಗೊಮ್ಮೆಯಾದರೂ ಭೇಟಿ ನೀಡಿ ಪರಿಶೀಲಿಸಬೇಕು. ಅವ್ಯವಸ್ಥೆಗಳು ಕಂಡು ಬಂದರೆ ಕೂಡಲೇ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮಾತಿನ ಚಾಟಿ ಬೀಸಿದರು. ವಿದ್ಯಾರ್ಥಿ ನಿಲಯಗಳಲ್ಲಿರುವ ಶೌಚಾಲಯಗಳಿಗೆ ಬಾಗಿಲುಗಳೇ ಇಲ್ಲ. ವಿದ್ಯಾರ್ಥಿನಿಯರು ವ್ಯಾಸಂಗ ಮಾಡುವ ಸ್ಥಳದಲ್ಲಿ ಇಂತಹ ಅವ್ಯವಸ್ಥೆಗಳನ್ನು ನಾನು ಸಹಿಸುವುದಿಲ್ಲ. ಕೂಡಲೇ ವಸತಿ ನಿಲಯಗಳಿಗೆ ಅಗತ್ಯ ಮೂಲ ಸೌಕರ್ಯಗಳ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು.…

Read More

ಮಂಡ್ಯ: ಕಾರ್ತಿಕ ಸೋಮವಾರವಾದ ಹಿನ್ನೆಲೆಯ ಕುಟುಂಬದೊಂದಿಗೆ ದೇವಸ್ಥಾನಕ್ಕೆ ತೆರಳಿದ್ದ ಮಗು ತಲೆಯ ಮೇಲೆ ದೇವಸ್ಥಾನದ ಗೇಟ್ ಬಿದ್ದ ಪರಿಣಾಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ  ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆಯಲ್ಲಿ ನಡೆದಿದೆ. ಹೆಚ್​.ಎಸ್​. ಜಿಷ್ಣು(5) ಮೃತಪಟ್ಟ ಬಾಲಕನಾಗಿದ್ದಾನೆ. ಗ್ರಾಮದ ಚೆನ್ನಕೇಶವ ದೇಗುಲದ ಗೇಟ್ ಮಗುವಿನ ತಲೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಪೋಷಕರು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಅರಕೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೇಟು ಮುರಿದು ಸಾಕಷ್ಟು ದಿನಗಳಾದರೂ ಕೂಡ ದುರಸ್ತಿ ಮಾಡದೇ ಇರುವುದೇ ಈ ಘಟನೆಗೆ ಕಾರಣವಾಗಿದೆ ಎನ್ನುವ ಆಕ್ರೋಶ ವ್ಯಕ್ತವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More

ತುಮಕೂರು:  ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಜಿಲ್ಲಾ ಅಧಿಕ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(ಪೋಕ್ಸೋ) 20 ವರ್ಷಗಳ ಶಿಕ್ಷೆ ಹಾಗೂ 1.50 ಲಕ್ಷ ರೂಪಾಯಿಗಳ ದಂಡ ವಿಧಿಸಿದೆ. ಈ ಘಟನೆ ಅಮೃತೂರು ಪೊಲೀಸ್ ಠಾಣೆ ಸರಹದ್ದಿನಲ್ಲಿ ನಡೆದಿತ್ತು.  ಕರೆಚಿತ್ತಪ್ಪ ಅಲಿಯಾಸ್ ಚಿತ್ತಪ್ಪ ಎಂಬಾತ ಶಿಕ್ಷೆಗೊಳಗಾದವನಾಗಿದ್ದಾನೆ. ಈತನಿಗೆ ವಿವಾಹವಾಗಿ ಇಬ್ಬರು ಗಂಡು ಮಕ್ಕಳಿದ್ದರೂ ಸಹ, 15 ವರ್ಷದ ಬಾಲಕಿಯನ್ನು ಪ್ರೀತಿ ಪ್ರೇಮ ಎಂದು  ಪುಸಲಾಯಿಸಿ  ಆಕೆಯ ಜೊತೆಗೆ ಬಾಲ್ಯವಿವಾಹ ಮಾಡಿಕೊಂಡಿದ್ದು, ನಂತರ ಬೆಂಗಳೂರಿನಲ್ಲಿರುವ ತನ್ನ ಬಾಡಿಗೆ ಮನೆಗೆ ಕರೆದೊಯ್ದು ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಕುಣಿಗಲ್ ನ ಸರ್ಕಲ್ ಪೊಲೀಸ್ ಇನ್ಸ್ ಪೆಕ್ಟರ್ ಗುರುಪ್ರಸಾದ್ ವಿ.ಎಂ. ಅವರು ಘನ ನ್ಯಾಯಾಲಯಕ್ಕೆ  ಪ್ರಕರಣ ಸಂಬಂಧ ದೋಷಾರೋಪಣಾಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಅಭಿಯೋಜನೆಯ ಪರ ವಿಚಾರ ಮಾಡಲಾದ ಸಾಕ್ಷಿಗಳಿಂದ  ಆರೋಪಿಯ ಮೇಲಿನ ಆರೋಪ ಸಾಬೀತಾದ ಕಾರಣ, ಅಪರಾಧಿ ಕರೆಚಿತ್ತಪ್ಪನಿಗೆ 20  ವರ್ಷ ಜೈಲು ಶಿಕ್ಷೆ ಮತ್ತು…

Read More

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಸಾಧ್ಯತೆಗಳಿವೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 13ರಿಂದ ಹಿಂಗಾರು ಚುರುಕಾಗಿ ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಈಗಿನಂತೆ ನವೆಂಬರ್ 13ರಿಂದ ಹಿಂಗಾರು ಚುರುಕಾಗಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಒಳನಾಡು : ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ (ಕೊಳ್ಳೇಗಾಲ ಭಾಗಗಳಲ್ಲಿ), ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ…

Read More