Subscribe to Updates
Get the latest creative news from FooBar about art, design and business.
- ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ
- ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ
- ಸಹನಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ವಿವಿಧ ಸ್ಪರ್ಧೆಗಳು, ಬಹುಮಾನ ವಿತರಣೆ
- ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ
- ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ: ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!
- ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ
- ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
- ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
Author: admin
ತುಮಕೂರು: ಅನುಕರಣೆಯೇ ಯುಗಧರ್ಮವಾಗಿರುವ ಕಾಲದಲ್ಲಿ ಜ್ಞಾನ ನಿರ್ಮಾಣಕ್ಕೆ ನೀಡುವ ಪ್ರಾಮುಖ್ಯತೆಯನ್ನು ಮೌಲಿಕವಾದ ವ್ಯಕ್ತಿತ್ವ ನಿರ್ಮಾಣಕ್ಕೂಕೊಡಬೇಕು ಎಂದು ವಿವಿ ಕಲಾ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಹರಿಪ್ರಸಾದ್ ಟಿ.ಎನ್. ಹೇಳಿದರು. ತುಮಕೂರು ವಿವಿಯಲ್ಲಿಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯಲ್ಲಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ‘ಗುಣಾತ್ಮಕ ಶಿಕ್ಷಣಕ್ಕೆ ಉತ್ತೇಜನ’ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮಾನವೀಯತೆಯ ಬೀಜವನ್ನು ಬಿತ್ತುವ, ಬೆಳಗಿಸುವ ನೈತಿಕಗುಣಮಟ್ಟದ ಶಿಕ್ಷಣ ವ್ಯವಸ್ಥೆ ವರ್ತಮಾನದಲ್ಲಿ ಮಾಯವಾಗಿದೆ. ಈವರೆಗೂ ಬಂದಿರುವ ಶಿಕ್ಷಣ ನೀತಿಗಳಿಗೂ ಮೀರಿದ್ದಾಗಿತ್ತು. ನಮ್ಮ ಪ್ರಾಚೀನ ಶಿಕ್ಷಣ ಪದ್ಧತಿ. ಸುಗುಣರನ್ನಾಗಿಸುವ ಶಿಕ್ಷಣ ಕ್ರಮವನ್ನು ಶಿಕ್ಷಣ ನೀತಿಗಳು ಗೊಂದಲ ಸೃಷ್ಟಿಸಿ ಶಕ್ತಿಹೀನವಾಗಿಸಿವೆ ಎಂದು ಬೇಸರ ವ್ಯಕ್ತಪಡಿಸಿದರು. ಮೆಕಾಲೆ ಪರಿಚಯಿಸಿದ ಶಿಕ್ಷಣ ಪದ್ಧತಿಗಿಂತಲೂ ವ್ಯಕ್ತಿತ್ವಕ್ಕೆ ಬೆಳಕು ಚೆಲ್ಲುವ ಭಾರತದ ಶಿಕ್ಷಣಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಗಾಂಧೀಜಿ, ಅಂಬೇಡ್ಕರ್ ಅವರಂತಹ ಉತ್ಕೃಷ್ಟ ವ್ಯಕ್ತಿತ್ವಗಳು, ರಾಜಕೀಯದಲ್ಲಿ ಶುದ್ಧವಾಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಮತ್ತುಎಪಿಜೆಅಬ್ದುಲ್ ಕಲಾಂ ಅವರುಗಳ ಮೌಲಿಕ ಬದುಕೇಗುಣಾತ್ಮಕ ಶಿಕ್ಷಣಕ್ಕೆ ಉತ್ತೇಜನ…
ತುಮಕೂರು: ದೇಶದುದ್ದಕ್ಕೂ ಎಲ್ಲಾ ಜನ ಸಮುದಾಯದಲ್ಲಿ ಸ್ವಾಭಿಮಾನದ ಕಿಚ್ಚು ಹತ್ತಿಸಿ ಸಮ ಸಮಾಜದ ನಿರ್ಮಾಣಕ್ಕೆ ಸಮತೆಯನ್ನು ಬೋಧಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಹಂಪಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ.ಎಸ್.ಚಿನ್ನಸ್ವಾಮಿ ಸೋಸಲೆ ಅಭಿಪ್ರಾಯಪಟ್ಟಿದ್ದಾರೆ. ನಗರದ ಡಾ.ಗುಬ್ಬಿವೀರಣ್ಣ ಕಲಾ ಕ್ಷೇತ್ರದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಅವರು ಮಾತನಾಡಿದರು. ಕರ್ನಾಟಕ ಜನಸಂಸ್ಕೃತಿಯಲ್ಲಿ ಸಮಾನ ಭಾವ ಮೂಡಿಸಿ ವಾಸ್ತವತೆಯನ್ನು ಸಾರಿದ ಶರಣ ಸಾಹಿತ್ಯದ ರೂವಾರಿ ಬಸವಣ್ಣನವರನ್ನು ರಾಜ್ಯ ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ. ಅಂತೆಯೇ ದೇಶದಾದ್ಯಂತ ತಳಸಮುದಾಯಗಳನ್ನು ಸಮತೆಯೆಡೆಗೆ ಸಾಗಲು ಬೆಳಕು ತೋರಿದ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಭಾರತದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಅವಶ್ಯಕತೆಯಿದೆ ಎಂದರು. ಇತಿಹಾಸದಲ್ಲಿ ತಳ ಸಮುದಾಯದ ಓಬವ್ವ ಒಬ್ಬ ಕಾವಲುಗಾರನ ಪತ್ನಿಯಾಗಿ ಸ್ವಾಮಿನಿಷ್ಠೆಗಾಗಿ ಹಾಗೂ ತಮ್ಮ ರಾಜ್ಯದ ಉಳಿವಿಗಾಗಿ ಒನಕೆಯಿಂದ ಶತ್ರುಗಳನ್ನು ಸದೆ ಬಡಿದು ವೀರವನಿತೆಯಾದಳು. ಈ ಮೂಲಕ ಛಲವಾದಿ…
ತುಮಕೂರು: ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮ ವಿಗ್ರಹ ಕೆತ್ತನೆ ಮಾಡಿರುವ ಶಿಲ್ಪಿ ಡಾ.ಅರುಣ್ ಯೋಗಿರಾಜ್ ಅವರನ್ನು ತುಮಕೂರಿನಲ್ಲಿ ಚಿನ್ನ ಬೆಳ್ಳಿ ಕೆಲಸಗಾರರ ಸಂಘದಿಂದ ಅದ್ದೂರಿ ಮೆರವಣಿಗೆ ಮೂಲಕ ಸನ್ಮಾನಿಸಲಾಯಿತು. ಚಿನ್ನ ಬೆಳ್ಳಿ ವರ್ತಕರ ಸಂಘದ 25ನೇ ವರ್ಷದ ರಜತ ಮಹೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮ್ಮಿಲನ ಕಾರ್ಯಕ್ರಮಕ್ಕೆ ತುಮಕೂರು ನಗರದ ಪ್ರಮುಖ ರಸ್ತೆಗಳಲ್ಲಿ ಅದ್ದೂರಿ ಮೆರವಣಿಗೆ ಮೂಲಕ ಡಾ. ಅರುಣ್ ಯೋಗಿರಾಜ್ ಅವರನ್ನು ಕರೆದುಕೊಂಡು ಹೋಗಲಾಯಿತು. ನೂರಾರು ಮಂದಿ ಚಿನ್ನ ಬೆಳ್ಳಿ ವರ್ತಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊರಟಗೆರೆ: ಕೊರಟಗೆರೆಯ ಗ್ರಾಮೀಣ ಭಾಗದ ಬೆಟ್ಟ-ಗುಡ್ಡದ ಸಂಪತ್ತಿನ ಮೇಲೆ ಭೂ ಮಾಫಿಯಾ ಕಣ್ಣು ಬಿದ್ದಿದ್ದು, ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಗಂಟಿಗಾನಹಳ್ಳಿ ಮಣ್ಣು ಮಾಫಿಯಾ ಎಗ್ಗಿಲ್ಲದೇ ನಡೆಯುತ್ತಿದೆ. ತುಮಕೂರಿನ ಜೆಸಿಬಿಗಳು ಮತ್ತು ಲಾರಿಗಳು ಕೊರಟಗೆರೆ ಪಟ್ಟಣದಲ್ಲಿ ಘರ್ಜನೆ ಮಾಡುತ್ತಿವೆ. ಅಧಿಕಾರಿಗಳು ಮನೆಗಳಿಗೆ ಸೇರಿದ ಮೇಲೆ ರಸ್ತೆಗಿಳಿದು ರಾತ್ರಿ ಇಡೀ ಕಾರ್ಯಚರಣೆಗಿಳಿದಿವೆ. ತಡರಾತ್ರಿ 9 ರಿಂದ ಮುಂಜಾನೆ 5ರ ವರೆಗೆ ಸಾವಿರಾರು ಲೋಡು ಮಣ್ಣು ಸರಬರಾಜು ಆಗುತ್ತಿದೆ. ಗಂಟಿಗಾನಹಳ್ಳಿಯ ಬೆಣಸೆ ಬೆಟ್ಟದ ಸಂಪತ್ತು ರಾತ್ರೋರಾತ್ರಿ ಕರಗಿ ಹೋಗ್ತಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಗಂಟಿಗಾನಹಳ್ಳಿ ಬೆಣಸೆ ಬೆಟ್ಟದಿಂದ ಕೊರಟಗೆರೆ ಬೈಪಾಸಿನ ಲೇಔಟ್ ಗೆ ಮಣ್ಣು ಸರಬರಾಜು ಮಾಡಲಾಗ್ತಿದೆ. 1 ಲಾರಿ ಮಣ್ಣು ಲೋಡಿಗೆ 3 ಸಾವಿರ ಬಾಡಿಗೆಯಂತೆ, ಸಾವಿರಾರು ಲೋಡು ಮಣ್ಣು ಸರಬರಾಜಾಗುತ್ತಿದೆ. 8 ಲಾರಿ ಮತ್ತು 2 ಜೆಸಿಬಿಯಿಂದ ರಾತ್ರಿಯಿಡಿ ಬೆಟ್ಟ ಕರಗಿಸುವ ಸಾಹಸಕ್ಕೆ ದಂಡೆಕೋರರು ಮುಂದಾಗಿದ್ದಾರೆ. ಭೂ–ಮಾಫಿಯಾ ದಂಧೆಕೋರರಿಗೆ ಸರಕಾರಿ ಅಧಿಕಾರಿಗಳ ಮೌನವೇ ಶ್ರೀರಕ್ಷೆಯಾಗಿದೆ. ಜೆಸಿಬಿ ಮತ್ತು ಲಾರಿ ಮಾಲೀಕರ…
ತುಮಕೂರು: ನಾಪತ್ತೆಯಾಗಿದ್ದ ತಾಯಿ–ಮಗ ಶವವಾಗಿ ಪತ್ತೆಯಾಗಿರೋ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದ ಕೆರೆಯಲ್ಲಿ ನಡೆದಿದೆ. ಶಶಿಕಲಾ (30), ಹಾಗೂ 6 ವರ್ಷದ ಬಾಲಕ ಮೃತ ದುರ್ದೈವಿಗಳಾಗಿದ್ದಾರೆ. ಒರಗೆರೆಹಳ್ಳಿ ಗ್ರಾಮದವರಾದ ಶಶಿಕಲಾ ಕಳೆದ ಮೂರು ದಿನಗಳಿಂದ ಮಗನ ಜೊತೆ ನಾಪತ್ತೆಯಾಗಿದ್ದರು. ಈ ಘಟನೆ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಶಶಿಕಲಾ ಸಹೋದರ ಮಿಸ್ಸಿಂಗ್ ದೂರು ನೀಡಿದ್ದರು. ಇಂದು ಬೆಳಿಗ್ಗೆ ತುರುವೇಕೆರೆ ಕೆರೆಯಲ್ಲಿ ತಾಯಿ ಮಗನ ಶವ ಪತ್ತೆಯಾಗಿದೆ. ಸಾವಿಗೂ ಮುನ್ನ ಡೇತ್ ನೋಟ್ ಬರೆದಿಟ್ಟು ಮೃತಪಟ್ಟಿದ್ದಾರೆ. ನನ್ನ ಸಾವಿಗೆ ಯಾರು ಕಾರಣರಲ್ಲ, ಸಾರಿ ನನ್ನ ಕ್ಷಮಿಸಿ, ಅಣ್ಣ ನನ್ನ ಗೋಕುಲ್ ನ ಅಪ್ಪ ಅಮ್ಮ ಇರುವ ಜಾಗಕ್ಕೆ ಮಣ್ಣು ಮಾಡಿ ಎಂದು ಡೆತ್ ನೋಟ್ ಬರೆದಿಟ್ಟು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರಿನ: ನಗರದ ಸರಸ್ವತಿಪುರಂ ನಲ್ಲಿರುವ ಶ್ರೀ ಸಿದ್ಧಾರ್ಥ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಜಿ.ವಿ.ಆನಂದಮೂರ್ತಿ ರವರು ಕನ್ನಡ ಭಾಷೆಗೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ, ಈ ಭಾಷೆಗೆ ಕನ್ನಡಗರಲ್ಲದೆ, ಕರ್ನಾಟಕದಲ್ಲಿ ವಾಸಿಸುವ ಎಲ್ಲಾ ಧರ್ಮದವರ ಅಪಾರ ಕೊಡುಗೆ ಇದೆ. ಕನ್ನಡ ಭಾಷೆ ಅಂಧಾಭಿಮಾನ ಬೆಳೆಸುವುದಿಲ್ಲ, ಅದು ವೈಚಾರಿಕ ಪ್ರಜ್ಞೆಯನ್ನು ಬೆಳೆಸುತ್ತದೆ. ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ರವರು, ವಚನಕಾರರು ನಮಗೆ ಮೌಢ್ಯವನ್ನು ಬೆಳೆಸಲಿಲ್ಲ, ವೈಚಾರಿಕತೆಯನ್ನು ಬೆಳೆಸಿದರು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಧ್ಯಾಪಕ ಡಾ.ಮಾರುತಿ ಎನ್.ಎನ್. ರವರು ಕನ್ನಡ ನಮ್ಮೆಲ್ಲರ ಅಹಂನಲ್ಲಿ ಬೆರೆಯಬೇಕು, ಕನ್ನಡವನ್ನು ಬೆಳೆಸೋಣ, ಕಲಿಸೋಣ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು. ಕರ್ನಾಟಕದ ಭೂಪಟವನ್ನು ಚಿತ್ರಿಸಿ 69 ಹಣತೆಗಳನ್ನು ಹಚ್ಚುವುದರ ಮೂಲಕ ವಿಶೇಷವಾಗಿ ಕನ್ನಡ ರಾಜ್ಯೋತ್ಸವಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಸಿದ್ದರಾಜು , ಸಹಾಯಕ…
ತುಮಕೂರು: ದಲಿತ ಬಾಲಕನಿಂದ ಮಲ ಸ್ವಚ್ಚಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ವಿವಿ ವಾವಾ ಅವರನ್ನು ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ನೇತೃತ್ವದ ತಂಡ ಭೇಟಿಯಾಗಿ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಲಾಯಿತು. ತುಮಕೂರಿನ ಖಾಸಗಿ ಹೋಟೆಲ್ ಗೆ ಆಗಮಿಸಿದ ವಿವಿ ವಾವಾ ಅವರಿಗೆ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ನೇತೃತ್ವದ ತಂಡ ಭೇಟಿಯಾಗಿ ದಲಿತ ಬಾಲಕನಿಂದ ಮಲ ಸ್ವಚ್ಚಗೊಳಿಸಿದ ಪ್ರಕರಣ ಕುರಿತಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಒತ್ತಾಯಿಸಿದರು. ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾದ ಓಬಳೇಶ್ ಘಟನೆಯನ್ನ ವಾವಾ ಅವರಿಗೆ ಸವಿಸ್ತಾರವಾಗಿ ವಿವರಿಸಿ ಎಫ್ ಐ ಆರ್ ನಲ್ಲಿನ ಲೋಪದೋಷಗಳನ್ನ ವಿವರಿಸಿದರು. ಜೆಟ್ಟಿ ಅಗ್ರಹಾರ ನಾಗರಾಜು ಮಾತನಾಡಿ, ಪ್ರಕರಣವನ್ನ ಮುಚ್ಚಿಹಾಕುವ ಯತ್ನ ನಡೆದಿದೆ, ಎಫ್ ಐ ಆರ್ ನಲ್ಲಿ ಬಾಲಕಾರ್ಮಿಕ ಆಕ್ಟ್, ಹಾಗೂ ಅಟ್ರಾಸಿಟಿ ಆಕ್ಟ್ ಗಳನ್ನ ಉಲ್ಲೆಖಿಸಿಲ್ಲ, ಸರ್ಕಾರ ಈ ಪ್ರಕಣವನ್ನ ಗಂಭೀರವಾಗಿ ಪರಿಗಣಿಸುತ್ತಿಲ್ಲ ಹಾಗಾಗಿ ದಯವಿಟ್ಟು ತಾವು…
ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 13ರಂದು ಜಿಲ್ಲೆಯ 10 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್ ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ನವೆಂಬರ್ 13ರಂದು ಜಿಲ್ಲೆಯ ಶಿರಾ ತಾಲೂಕಿನ ತರೂರು; ತಿಪಟೂರು ತಾಲೂಕಿನ ಮಣಕೀಕೆರೆ; ಮಧುಗಿರಿ ತಾಲೂಕಿನ ಗೊಂದಿಹಳ್ಳಿ; ತುಮಕೂರು ತಾಲೂಕಿನ ಕೆಸ್ತೂರು ಹಾಗೂ ಓಬಳಾಪುರ; ಕುಣಿಗಲ್ ತಾಲೂಕಿನ ನಾಗಸಂದ್ರ ಹಾಗೂ ಹುತ್ರಿದುರ್ಗ; ಕೊರಟಗೆರೆ ತಾಲೂಕಿನ ವಜ್ಜನಕುರಿಕೆ; ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ; ಗುಬ್ಬಿ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಬೆಸ್ಕಾಂ ಸಿ.ಎಸ್.ಡಿ.-1 ಪಶ್ಚಿಮ ಶಾಖೆಯಲ್ಲಿ ಲೈನ್ ಮೆನ್(ಜ್ಯೂನಿಯರ್ ಪವರ್ ಮ್ಯಾನ್) ಆಗಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 30 ವರ್ಷದ ಕನ್ನಯ್ಯ ಗಸ್ತಿ ಎಂಬ ವ್ಯಕ್ತಿಯು ನವೆಂಬರ್ 4 ರಿಂದ ಕಾಣೆಯಾಗಿದ್ದಾರೆ ಎಂದು ಈತನ ಅಣ್ಣ ಪರುಶರಾಮ್ ತಾನಾಜಿ ಗಸ್ತಿ ಠಾಣೆಗೆ ದೂರು ನೀಡಿದ್ದಾರೆ. ಕಾಣೆಯಾದ ವ್ಯಕ್ತಿಯು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಮೂಗಿನ ಮೇಲೆ ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಚೌಕುಳಿ ಅಂಗಿ, ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದನು. ಈತನ ಬಗ್ಗೆ ಸುಳಿವು ಸಿಕ್ಕವರು ಕೂಡಲೇ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಕುಣಿಗಲ್ ತಾಲ್ಲೂಕು ಕಗ್ಗೆರೆ ತೋಂಟದ ಶ್ರೀ ಸಿದ್ದಲಿಂಗೇಶ್ವರಸ್ವಾಮಿ ತಪೋಕ್ಷೇತ್ರದಲ್ಲಿ ನವೆಂಬರ್ 15ರಂದು ಸಂಜೆ 5:30 ಗಂಟೆಗೆ ಶ್ರೀ ತೋಂಟದ ಶ್ರೀ ಸಿದ್ದಲಿಂಗೇಶ್ವರಸ್ವಾಮಿಗೆ ಏಕಾದಶ ಸಹಸ್ರ ದೀಪೋತ್ಸವ ಸೇವೆ ಹಾಗೂ ರಾತ್ರಿ ಮುತ್ತಿನ ಪಲ್ಲಕ್ಕಿ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ. ಏಕಾದಶ ಸಹಸ್ರ ದೀಪೋತ್ಸವದ ಒಂದು ದೀಪಕ್ಕೆ 40 ರೂ.ಗಳನ್ನು ನಿಗದಿಪಡಿಸಲಾಗಿದೆ. ಭಕ್ತಾಧಿಗಳು ಪುದುವಟ್ ಸೇವಾ ಠೇವಣಿಯಲ್ಲಿ 500 ರೂ.ಗಳನ್ನು ತೊಡಗಿಸಿದಲ್ಲಿ ಪ್ರತಿ ವರ್ಷ ಕಾರ್ತಿಕ ಮಾಸದ ಹುಣ್ಣಿಮೆ ದಿವಸ ಏಕಾದಶ ಸಹಸ್ರ ದೀಪೋತ್ಸವದಂದು ಒಂದು ದೀಪವನ್ನು ಹಚ್ಚಿಸುವ ಸೇವಾ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q