Subscribe to Updates
Get the latest creative news from FooBar about art, design and business.
- ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ
- ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ
- ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
- ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ: ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
- ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್ ಐಆರ್ ದಾಖಲಿಸಲು ಒತ್ತಾಯ
- ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್ ಬಾಬು ಕರೆ
- ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
- ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
Author: admin
ತುಮಕೂರು: ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಅನುಷ್ಟಾನಗೊಳಿಸುವಲ್ಲಿ ಪೊಲೀಸ್ ಇಲಾಖೆ ಸಹಕಾರ ಅಗತ್ಯ ಎಂದರು. ತಂಬಾಕಿನಿಂದ ತಯಾರಿಸಿದ ಉತ್ಪನ್ನಗಳನ್ನು ಬಳಕೆ ಮಾಡಿದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಬಗ್ಗೆ ಯುವ ಜನರಲ್ಲಿ ಅರಿವು ಮೂಡಿಸಬೇಕು. ತಂಬಾಕಿನ ಚಟದಿಂದ ಹಲವಾರು ಕುಟುಂಬಗಳು ಬಡತನ ರೇಖೆಗಿಂತ ಕೆಳಗೆ ಬರುತ್ತಿವೆ. ಈ ನಿಟ್ಟಿನಲ್ಲಿ ತಂಬಾಕು ನಿಯಂತ್ರಣಕ್ಕಾಗಿ ತಂಬಾಕು ನಿಷೇಧ ಕಾಯ್ದೆಯ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಪೊಲೀಸ್, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮತ್ತಿತರ ಇಲಾಖೆಗಳು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ…
ತುಮಕೂರು: ನಗರದ ಚಿಕ್ಕಪೇಟೆಯ ಗಾರ್ಡನ್ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಂಡಲ ಪೂಜೆ ಹಾಗೂ ಮಕರ ಜ್ಯೋತಿ ಪೂಜಾ ಕಾರ್ಯಕ್ರಮ ನ.15 ರಿಂದ ಜನವರಿ 14ರವರೆಗೆ ನಡೆಯಲಿದೆ. ನ. 15 ರಂದು ಸಂಜೆ 6:30ಕ್ಕೆ ಮಂಡಲ ಪೂಜೆ ಉದ್ಘಾಟನೆಗೆ ಹಿರೇಮಠಾಧ್ಯಕ್ಷರಾದ ಡಾ.ಶ್ರೀಶಿವಾನಂದ ಶಿವಾಚಾರ್ಯ ಸ್ವಾಮೀಜಿ ಆಗಮಿಸಲಿದ್ದಾರೆ. ಪೂಜಾ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಟಿ.ಬಿ.ಶೇಖರ್ ಮನವಿ ಮಾಡಿದ್ದಾರೆ. ವ್ರತ ಪ್ರಾರಂಭಿಸುವ, ಯಾತ್ರೆ ಮಾಡುವ ಭಕ್ತಾದಿಗಳಿಗೆ ನ.15 ರಿಂದ ದೇವಾಲಯದಲ್ಲಿ ಮಾಲೆ ಹಾಕುವ, ಇರುಮುಡಿ ಕಟ್ಟುವ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹೂವಿನ ಹಡಗಲಿ: ವಿಜಯನಗರ ಜಿಲ್ಲೆ ಹೂವಿನ ಹಡಗಲಿಗೆ ಶ್ರೀ ವಿಶುದು ಸಾಗರ್ ಮುನಿ ಮಹಾರಾಜರ ನೇತೃತ್ವದ ಜೈನ ಮುನಿಗಳ ಪ್ರವೇಶ ಮಾಡಿತು. ಈ ಸಂದರ್ಭದಲ್ಲಿ ಹೂವಿನ ಹಡಗಲಿ ಜೈನ ಬಾಂಧವರು ,ಬಾರಿ ಮಳೆ ನಡುವೆ ಮಹಿಳಾ ಸಂಘಟನೆಗಳು ಪೂರ್ಣ ಕುಂಭಗಳೊಂದಿಗೆ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು .ನಂತರ ಮುನಿಗಳು ಶ್ರೀ ಪಾರ್ಶ್ವನಾಥ ಜಿನ ಮಂದಿರಕ್ಕೆ ಭೇಟಿ ನೀಡಿ ತೀರ್ಥಂಕರರ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ಪೂಜಾ ಅಭಿಷೇಕ ,ಆರಾಧನೆ,ಕಾರ್ಯಕ್ರಮಗಳು ನೆರವೇರಿದವು. ಈ ಸಂದರ್ಭದಲ್ಲಿ ವಿಶುದ್ಧ ಸಾಗರ್ ಮುನಿ ಮಹಾರಾಜರ ಮುನಿಗಳ ತಂಡದೊಂದಿಗೆ ಹೂವಿನ ಹಡಗಲಿಯ ಜೈನ ಬಾಂಧವರು, ನಾಂದಿನಿ ಮಠದ ಸ್ವಸ್ತಿ ಶ್ರೀ ಜಿನ ಸೇನಾ ಭಟ್ಟಾರಕ ಶ್ರೀಗಳು ಉಪಸ್ಥಿತರಿದ್ದರು . ಈ ಕಾರ್ಯಕ್ರಮದಲ್ಲಿ ಶ್ರೀ ಪಾರ್ಶ್ವನಾಥ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಚ್.ಎಸ್. ಪ್ರಶಾಂತ್, ಪುರಸಭಾ ಸದಸ್ಯ ಹಾಗೂ ಮಹಾವೀರ ಬ್ಯಾಂಕ್ ನ ಉಪಾಧ್ಯಕ್ಷ ಮಂಜುನಾಥ ಜೈನ್, ಜೈನ ಸಮಾಜದ ಉಪಾಧ್ಯಕ್ಷ ವಿಜಯಕುಮಾರ್, ಜ್ವಾಲಾ ಮಾಲಿನಿ ಮಹಿಳಾ ಸಂಘದ ಅಧ್ಯಕ್ಷ ಎಂ.ಡಿ.ಪದ್ಮಾವತಿ…
ಪಾವಗಡ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮಹೇಶ್ ಅವರು, ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಆರ್.ಡಿ.ರೋಪ್ಪ ಗ್ರಾಮಕ್ಕೆ ಭೇಟಿ ನೀಡಿದರು. ಇದೇ ವೇಳೆ ಶ್ರೀ ಚಿಕ್ಕ ಪಾಲವಾಯಪ್ಪ ಸ್ವಾಮಿ ಮತ್ತು ಎಲ್ಲಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಸೇವಾ ಟ್ರಸ್ಟ್ ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ಮಂಜೂರು ಮಾಡಲಾದ 2 ಲಕ್ಷ ರೂಪಾಯಿಗಳ ಡಿಡಿಯನ್ನು ಕಮಿಟಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಊರಿನ ಗಣ್ಯರ ಸಮ್ಮುಖದಲ್ಲಿ ವಿತರಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅದರಲ್ಲಿ ದೇವಸ್ಥಾನಗಳ ಅಭಿವೃದ್ಧಿ ಕೂಡ ಸೇರಿದೆ. ಪಾವಗಡ ತಾಲೂಕಿನ ದೇವಸ್ಥಾನಗಳ ಅಭಿವೃದ್ಧಿಗೆ ಸುಮಾರು 1.47 ಕೋಟಿ ಅನುದಾನ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಇದಲ್ಲದೆ ವಿದ್ಯಾರ್ಥಿಗಳಿಗೆ ಶಿಷ್ಯವೇತನ(ಸುಜ್ಞಾನ ನಿಧಿ), ನಿರ್ಗತಿಗಳಿಗೆ ಮಾಶಾಸನ, ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ವದಗನೆ, ಕುಡಿಯ ನೀರಿನ ಸಮಸ್ಯೆ ನಿವಾರಿಸಲು ಶುದ್ಧ ನೀರಿನ ಘಟಕ ಇನ್ನೂ ಅನೇಕ ಜನಪರ ಕಾರ್ಯಕ್ರಮಗಳು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನೀಡಲಾಗಿದೆ ಎಂದು…
ಪಾವಗಡ: ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯಲ್ಲಿ ಭಾರತ ರತ್ನ ಜವಾಹರ ಲಾಲ್ ನೆಹರು ರವರ 135 ನೇ ಜನ್ಮದಿನಾಚರಣೆಯನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಿದರು. ಈ ಸಂದರ್ಭದಲ್ಲಿ ನೆಹರೂ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು. ದಲ್ಲಿ ಶಾಲಾ ಸಂಸತ್ತಿನ ಎಲ್ಲಾ ಪ್ರತಿನಿಧಿಗಳನ್ನು ಸಭೆಯಲ್ಲಿ ಕೂರಿಸಿ ಅವರುಗಳಿಂದಲೇ ವಿನೂತನವಾಗಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮಕ್ಕಳ ದಿನಾಚರಣೆ ಪ್ರಯುಕ್ತ ಜವಾಹರಲಾಲ್ ನೆಹರೂ ಬಗ್ಗೆ ಭಾಷಣ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಹಿಂದಿನ ದಿನ ಶಿಕ್ಷಕರುಗಳಿಂದ ವಿದ್ಯಾರ್ಥಿಗಳಿಗೆ ಕೆಲವು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಅದರಲ್ಲಿ ಪ್ರಮುಖವಾಗಿ ಮ್ಯೂಜಿಕಲ್ ಚೇರ್, ನದಿ–ದಡ ಎಂಬ ಸ್ಪರ್ಧೆಗಳನ್ನು ಆಯೋಜಿಸುವುದರ ಮೂಲಕ ಸಾರ್ಥಕವಾದ ಮಕ್ಕಳ ದಿನಾಚರಣೆಯನ್ನು ಆಚರಿಸಿ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರೇಣುಕರಾಜ್ .ಜಿ.ಹೆಚ್., ಮಕ್ಕಳ ದಿನಾಚರಣೆಯ ಮಹತ್ವ, ಹಿನ್ನೆಲೆ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಪ್ರಜೆಗಳಾಗಿ ರೂಪುಗೊಂಡು ತಂದೆ ತಾಯಿಗಳಿಗೆ ಕೀರ್ತಿಯನ್ನು ತನ್ನಿ ಎಂಬ ಕಿವಿ ಮಾತನ್ನು ಹೇಳಿದರು.…
ತುಮಕೂರು: ಅಕ್ಷಯ ಬಯೋಟೆಕ್ ಕಂಪನಿಯಿಂದ ಹೋಬಳಿ ಮಟ್ಟದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಹೊಸ ಅವಕಾಶಗಳಿವೆ. ಯುವಜನರಿಗಾಗಿ ಉದ್ಯೋಗಾವಕಾಶವನ್ನು ಒದಗಿಸುವ ನಿಟ್ಟಿನಲ್ಲಿ, ಅಕ್ಷಯ ಬಯೋಟೆಕ್ ಸಂಸ್ಥೆಯು ಹೋಬಳಿಯ ವಿವಿಧ ಕ್ಷೇತ್ರಗಳಲ್ಲಿ ಫೀಲ್ಡ್ ಆಫೀಸರ್ ಮತ್ತು ಟೀಮ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುತ್ತಿದೆ. ಈ ಹೊಸ ಹುದ್ದೆಗಳಿಗಾಗಿ ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ಹೊಂದಿರಬೇಕು. ವೇತನ ಮತ್ತು ಸೌಲಭ್ಯಗಳು: ಅಕ್ಷಯ ಬಯೋಟೆಕ್, ಆಯ್ಕೆಯಾದ ಅಭ್ಯರ್ಥಿಗಳಿಗೆ ₹13,500 ರಿಂದ ₹21,000 ವೇತನದೊಂದಿಗೆ ಪ್ರೋತ್ಸಾಹ ಧನದ ಅನುಕೂಲ ಕಲ್ಪಿಸುತ್ತದೆ. ವಸತಿ ಸೌಲಭ್ಯ, ಇಎಸ್ ಐ, ಪಿಎಫ್, ಮತ್ತು ಪೆಟ್ರೋಲ್ ಅಲಯನ್ಸ್ ಸೌಲಭ್ಯಗಳು ಸಹ ಈ ಹುದ್ದೆಗಳೊಂದಿಗೆ ಲಭ್ಯವಿರುತ್ತವೆ. ಸಂದರ್ಶನದ ವಿವರಗಳು: ಅಭ್ಯರ್ಥಿಗಳಿಗೆ ನೇರ ಸಂದರ್ಶನವು ದಿನಾಂಕ:18—11–2024 ರಂದು ವಿವಿಧ ಹೋಬಳಿ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ಹೋಬಳಿ ಮಟ್ಟದ ಸಂಪರ್ಕ ಮಾಹಿತಿ: ಅಭ್ಯರ್ಥಿಗಳು ತಮ್ಮ ಹೋಬಳಿ ಕೇಂದ್ರಕ್ಕೆ ಅನುಗುಣವಾಗಿ ಸಂಪರ್ಕಿಸಲು ಈ ಕೆಳಗಿನ ಸಂಖ್ಯೆಗಳ ಮೂಲಕ ಮಾಹಿತಿಯನ್ನು ಪಡೆಯಬಹುದು: ಶಿರಾ –…
ಶಿರಾ: ಖಾಸಗಿ ಶಾಲೆಗಳ ಭರಾಟೆಯಲ್ಲಿ ಸರ್ಕಾರಿ ಕನ್ನಡ ಶಾಲೆಗಳು ಉಳಿಯುವುದೇ ಕಷ್ಟ ಅವುಗಳಿಗೆ ಮಕ್ಕಳು ಸೇರುವುದೇ ಕಷ್ಟ ಎಂಬುವಂತಹ ಕಾಲದಲ್ಲಿ ಇಲ್ಲೊಂದು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಅರ್ಧ ಶತಮಾನ ಕಳೆದರೂ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾ ಸಾಗಿದೆ. ಅದು ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಕರೆ ಮಾದೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆದರೆ ಇಲ್ಲಿನ ಮಕ್ಕಳಿಗೆ ಕುಳಿತುಕೊಳ್ಳಲು ಸರಿಯಾದ ಕೊಠಡಿಯ ವ್ಯವಸ್ಥೆಗಳೆಲ್ಲ ಇರುವ ಕೊಠಡಿಗಳು ಶೀತಲ ಅವಸ್ಥೆಯಲ್ಲಿದ್ದು ಮಳೆ ಬಂದರೆ ಸೋರುವ ಹಾಗೂ ಬಿದ್ದು ಹೋಗುವ ಸ್ಥಿತಿಯಲ್ಲಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ, ಕರೆ ಮಾದೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಸುಮಾರು 90 ಜನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಎಲ್ಲಾ ತರಗತಿಗಳು ನಡೆಯಲು ಇಲ್ಲಿ ಕೊಠಡಿ ವ್ಯವಸ್ಥೆಗಳಿಲ್ಲ. ಕೇವಲ ನಾಲ್ಕು ಕೊಠಡಿಗಳಿಗೆ ಮಾತ್ರ ಇವೆ ನಾಲ್ಕರಲ್ಲಿ ಒಂದು ಶಿಥಿಲಗೊಂಡಿದ್ದು, ಒಂದು ಕೊಠಡಿಯಲ್ಲಿ ಆಫೀಸ್…
ತುಮಕೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿ ಎಸ್ ಸಿ(ಪೋಕ್ಸೋ) ನ್ಯಾಯಾಲಯವು 20 ವರ್ಷಗಳ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ತುಮಕೂರು ಮಹಿಳಾ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ಘಟನೆ ನಡೆದಿತ್ತು. ರಾಕೇಶ್ ಅಲಿಯಾಸ್ ರೇವಂತ್ ಎಂಬಾತ 13ವರೆ ವರ್ಷದ ನೊಂದ ಬಾಲಕಿಯನ್ನು ಪರಿಚಯ ಮಾಡಿಕೊಂಡು ಆಕೆಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ, ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಅಲ್ಲದೇ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ, ತಂದೆ ತಾಯಿಯನ್ನು ಸಾಯಿಸುವುದಾಗಿ ಬೆದರಿಕೆ ಹಾಕಿದ್ದ. ರಾಕೇಶ್ ನಡೆಸಿದ ಲೈಂಗಿಕ ದೌರ್ಜನ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಸಂಬಂಧ ದಾಖಲಾದ ಪ್ರಕರಣದ ತನಿಖಾಧಿಕಾರಿ ಡಾ.ನವೀನ್ ಕುಮಾರ್ ಎಂ.ಬಿ. ಅವರು ಘನ ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿ ಸಲ್ಲಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಆರೋಪಿ ರಾಕೇಶ್ ಅಲಿಯಾಸ್…
ತುಮಕೂರು: ಇದೇ ಪ್ರಥಮ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ದಸರಾ ಉತ್ಸವದಲ್ಲಿ ಭಾಗವಹಿಸಿದ್ದ ಸ್ಥಳೀಯ ಕಲಾವಿದರು ಹಾಗೂ ಕಲಾ ತಂಡಗಳಿಗೆ ಈವರೆಗೂ ಸಂಭಾವನೆಯನ್ನೇ ಬಿಡುಗಡೆ ಮಾಡಿಲ್ಲ ಎಂದು ಕರ್ನಾಟಕ ಸಾಂಸ್ಕೃತಿಕ ಸಂಘಟನೆಗಳ ರಾಜ್ಯ ಮಹಾ ಒಕ್ಕೂಟದ ಅಧ್ಯಕ್ಷ ವೀರೇಶ್ ಪ್ರಸಾದ್ ತಿಳಿಸಿದ್ದಾರೆ. ದಸರಾ ಆಚರಣೆ ಅದ್ದೂರಿಯಾಗಿ ನಡೆಯಬೇಕು, ಯಾವುದೇ ಕಾರಣಕ್ಕೂ ಕೊರತೆಯಾಗಬಾರದು, ಸ್ಥಳೀಯ ಕಲಾವಿದರನ್ನು ಬಳಸಿಕೊಂಡು ಕಾರ್ಯಕ್ರಮಕ್ಕೆ ಮೆರುಗು ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಜಿಲ್ಲಾಡಳಿತ ಹೇಳಿತ್ತು. ಜಿಲ್ಲಾಡಳಿತದ ಕಾರ್ಯಕ್ರಮವಾದ ಕಾರಣ ಕಲಾವಿದರು ಹಾಗೂ ಕಲಾತಂಡಗಳು ಸಹ ಉತ್ಸಾಹದಿಂದ ಭಾಗವಹಿಸಿದ್ದೆವು. ತಮ್ಮ ಕಲಾ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಆದರೆ ದಸರಾ ಮುಗಿದು ಒಂದು ತಿಂಗಳು ಕಳೆದರೂ ಸಹ ಕಲಾವಿದರಿಗೆ ಸಂಭಾವನೆ ನೀಡಲು ಜಿಲ್ಲಾಡಳಿತ ಮನಸ್ಸು ಮಾಡಿಲ್ಲ ಎಂದು ಅವರು ಹೇಳಿದ್ದಾರೆ. ಯುವ ದಸರಾದಲ್ಲಿ ಭಾಗವಹಿಸಿದ್ದ 16 ತಂಡಗಳ ಸಂಭಾವನೆ 5 ಲಕ್ಷ, ಧಾರ್ಮಿಕ ವಿಧಿ ವಿಧಾನದ 27 ತಂಡಗಳಿಗೆ 5 ಲಕ್ಷ, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ…
ತುಮಕೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಹಂತದ ತಂಬಾಕು ಮುಕ್ತ ಯುವ ಅಭಿಯಾನ ಹಾಗೂ ಗುಲಾಬಿ ಆಂದೋಲನ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಅಭಿಯಾನದ ಅಂಗವಾಗಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಸುಮಾರು 3 ಲಕ್ಷ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ಗುಲಾಬಿ ನೀಡುವ ಮೂಲಕ ತಂಬಾಕು ದುಷ್ಪರಿಣಾಮಗಳು ಹಾಗೂ ತಂಬಾಕು ಚಟದಿಂದ ಮುಕ್ತಿ ಹೊಂದುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಸ್ಥಾನಿಕ ವೈದ್ಯಾಧಿಕಾರಿ ಡಾ.ಚೇತನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಲಕ್ಷ್ಮೀಕಾಂತ್, ಸರ್ಕಾರಿ ನರ್ಸಿಂಗ್ ಕಾಲೇಜು ಪ್ರಾಂಶುಪಾಲ ಹೆಚ್. ಬಿ. ಪ್ರಕಾಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಿದಾನಂದಪ್ಪ, ಎನ್ ಸಿಸಿ,…