Subscribe to Updates
Get the latest creative news from FooBar about art, design and business.
- ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ
- ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
- ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
Author: admin
ಕುಂದಗೋಳ: ಭರತ ಖಂಡದಲ್ಲಿ ಜೈನ ಧರ್ಮ ಪುರಾತನವಾದ ಧರ್ಮವಾಗಿದ್ದು ಅದರ ಸಂಸ್ಕೃತಿ –ಸಂಸ್ಕಾರಗಳು ಪ್ರಾಚೀನವಾಗಿದ್ದು, ಇಂತಹ ಜಿನಬಿಂಬದ ದರ್ಶನ ಹಾಗೂ ಮಾನ ಸ್ತಂಭದ ಪ್ರತಿಷ್ಠಾಪನೆಯಿಂದ ಆತ್ಮ ಶುದ್ಧಿ ಸಾಧ್ಯವಾಗಲಿದೆ ಎಂದು ಶ್ರೀ ಕ್ಷೇತ್ರ ನರಸಿಂಹರಾಜಪುರ ಸಿಂಹನ ಗದ್ದೆ ಬಸ್ತಿ ಮಠದ ಪೀಠಾಧ್ಯಕ್ಷರಾದ ಸ್ವಸ್ತಿ ಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಅವರಿಂದು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಶ್ರೀ ಶಾಂತಿನಾಥ ಸ್ವಾಮಿ ಜೈನ್ ಟ್ರಸ್ಟ್ ವತಿಯಿಂದ ನೂತನ ಮಾನ ಸ್ತಂಭ ಪ್ರತಿಷ್ಠಾಪನ ಕಾರ್ಯಕ್ರಮದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಜೈನ ಬಸದಿ ಎದುರು ಮಾನಸ್ತಂಭ ನಿರ್ಮಾಣ ಮಾಡುವ ಉದ್ದೇಶ ಮಾನ ಕಷಾಯದಿಂದ ಮುಕ್ತಗೊಂಡು ಜಿನಬಿಂಬದ ದರ್ಶನ ಮಾಡಿದಾಗ ಆತ್ಮಶುದ್ಧಿಗೊಳ್ಳುತ್ತದೆ. ಈ ಹಿಂದೆ ಗುಡಿಗೇರಿ ಸುತ್ತಮುತ್ತಲ ಪ್ರದೇಶದಲ್ಲಿ 72 ಜಿನಮಂದಿರಗಳಿದ್ದವು ಈಗ ನಶಿಸಿ ಹೋಗಿವೆ ಜಿನಮಂದಿರ ನಿರ್ಮಾಣ ಕಾರ್ಯ ಸಂತಸ ತಂದಿದೆ ಎಂದರು. ನಾನು ಎಂಬ ಅಹಂ ತೊರೆದಾಗ ಆತ್ಮ ಶುದ್ಧ ಗೊಳ್ಳುತ್ತದೆ. ಪ್ರತಿಯೊಬ್ಬರು ಧರ್ಮ ರಕ್ಷಣೆ…
ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದು ಕರ್ನಾಟಕದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಶಾಲಾ ಮತ್ತು ಸಾಕ್ಷರತಾ ಇಲಾಖೆ, ಬೆಂಗಳೂರು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ 2009 ರ ಪರಿಣಾಮಕಾರಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯಾಗಾರದಲ್ಲಿ ಮಕ್ಕಳ ರಕ್ಷಣಾ ಆಯೋಗ ತಿಪ್ಪೇಸ್ವಾಮಿ ಕೆ.ಟಿ. ಭಾಗವಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಉಪ ಕಾರ್ಯದರ್ಶಿ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀಧರ್ , ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ, ಕಾರ್ಯದರ್ಶಿ ವಾಸಂತಿ ಉಪ್ಪಾರ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗೌರವಾನ್ವಿತ ಸದಸ್ಯರುಗಳಾದ ವೆಂಕಟೇಶ್, ಶಶಿಧರ್ ಕೋಸಂಬೆ ಹಾಗೂ ಮಂಜು ಆನಂದ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಕನಿಷ್ಟ ಬೆಂಬಲ ಯೋಜನೆಯಡಿ ರಾಗಿ ಖರೀದಿಸಲು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ 2 ಖರೀದಿ ಕೇಂದ್ರ ಹಾಗೂ ತುಮಕೂರು, ಶಿರಾ, ಮಧುಗಿರಿ, ಚಿಕ್ಕನಾಯಕನಹಳ್ಳಿ, ಹುಳಿಯಾರು, ತಿಪಟೂರು, ತುರುವೇಕೆರೆ, ಗುಬ್ಬಿ ತಾಲೂಕು ಸೇರಿ ಒಟ್ಟು 10 ರಾಗಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಕ್ವಿಂಟಾಲ್ ರಾಗಿಗೆ 4,290 ರೂ.ಗಳ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದೆ. ರಾಗಿ ಖರೀದಿ ಪ್ರಕ್ರಿಯೆ ಕಾರ್ಯವನ್ನು 2025ರ ಜನವರಿ 1 ರಿಂದ ಮಾರ್ಚ್ 31ರ ಅವಧಿಯವರೆಗೆ ಕೈಗೊಳ್ಳಬೇಕು ಎಂದು ಹೇಳಿದರು. ರಾಗಿ ಖರೀದಿಗಾಗಿ ರೈತರ ನೋಂದಣಿ ಪ್ರಕ್ರಿಯೆ ಡಿಸೆಂಬರ್ 1ರಿಂದ ಪ್ರಾರಂಭವಾಗಲಿದ್ದು, ನೋಂದಣಿಗಾಗಿ ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ಐಡಿ, ಆಧಾರ್ ಕಾರ್ಡ್ ಹಾಜರುಪಡಿಸಬೇಕು ಎಂದು ಸೂಚನೆ ನೀಡಿದರು. ರಾಗಿ ಖರೀದಿ ಹಂತದಲ್ಲಿ ಎಫ್.ಎ.ಕ್ಯೂ. ಗುಣಮಟ್ಟವನ್ನು ಪರಿಶೀಲಿಸಿ ದೃಢೀಕರಿಸಲು ಪ್ರತಿ ಖರೀದಿ ಕೇಂದ್ರಕ್ಕೆ…
ತುಮಕೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನವೆಂಬರ್ 9ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ರಾಷ್ಟ್ರೀಯ ಕಾನೂನು ಸೇವೆಗಳ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ. ಜಯಂತ್ ಕುಮಾರ್ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಗೌರವಾನ್ವಿತ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹೆಚ್. ಅನಂತ, ಕೌಟುಂಬಿಕ ನ್ಯಾಯಾಲಯದ ಗೌರವಾನ್ವಿತ ಪ್ರಧಾನ ನ್ಯಾಯಾಧೀಶರಾದ ಮುನಿರಾಜು ಎನ್., ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪರಾಜಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ನವೆಂಬರ್ 11ರಂದು ಬೆಳಿಗ್ಗೆ 11:30 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಒನಕೆ ಓಬವ್ವ ಜಯಂತ್ಯುತ್ಸವ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಉದ್ಘಾಟಿಸಲಿದ್ದು, ನಗರ ಶಾಸಕ ಜ್ಯೋತಿ ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣ, ನವದೆಹಲಿ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಹಾಗೂ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ನಗರದ ಬಿ.ಜಿ.ಎಸ್. ವೃತ್ತದಿಂದ ಎಂ.ಜಿ.ರಸ್ತೆ, ಗುಂಚಿ ಚೌಕ, ಚರ್ಚ್ ವೃತ್ತ, ಅಶೋಕ ರಸ್ತೆ ಮೂಲಕ ಡಾ: ಗುಬ್ಬಿ…
ಸಂಡೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಗಲಭೆ ಕೋರರ ಮೇಲಿನ ಕೇಸ್ ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಸಂಡೂರು ವಿಧಾನಸಭಾ ಕ್ಷೇತ್ರದ ತೋರಣಗಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಮುಸ್ಲಿಂ ತುಷ್ಟೀಕರಣದ ರಾಜಕರಣ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಹಳೇ ಹುಬ್ಬಳ್ಳಿ ಗಳಭೆಕೋರರ ಮೇಲಿನ ಕೇಸ್ ರದ್ದುಪಡಿಸಿತು. ಇದೀಗ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಮುಸ್ಲಿಮರ ಮೇಲಿನ ಕೇಸ್ ಹಿಂಪಡೆಯಲು ತಯಾರಿ ನಡೆಸಿದೆ ಎಂದು ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣ ಹಿಂಪಡೆಯಲು ಎಲ್ಲಾ ತಯಾರಿ ನಡೆಸಿರುವ ಬಗ್ಗೆ ತಮಗೆ ಪಕ್ಕಾ ಮಾಹಿತಿ ಬಂದಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಸರಗೂರು: ತಾಲೂಕಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳು ಶುಕ್ರವಾರದಂದು ಮೈಸೂರು ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪರವರನ್ನು ಮನೆಯಲ್ಲಿ ಭೇಟಿ ಮಾಡಿತು. ಇದೇ ವೇಳೆ ಸಮುದಾಯದ ಭವನಕ್ಕೆ ಅನುದಾನವನ್ನು ನೀಡಿ ಎಂದು ಪದಾಧಿಕಾರಿಗಳು ಮನವಿ ಮಾಡಿದರು. ನಂತರ ಮಾತನಾಡಿದ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ವೀರಭದ್ರಪ್ಪ ಅವರು, ತಾಲೂಕಿನ ನಮ್ಮ ಸಮಾಜದ ವತಿಯಿಂದ ಎಲ್ಲಾ ಗ್ರಾಮಗಳಲ್ಲಿ ಚಂದ ವಸೂಲಾತಿ ಮಾಡಿಕೊಂಡು ಪಟ್ಟಣದಲ್ಲಿ ಒಂದು ಜಾಗವನ್ನು ತೆಗೆದುಕೊಂಡು ಅದರಲ್ಲಿ ಬಸವ ಭವನವನ್ನು ನಿರ್ಮಾಣ ಮಾಡಲು ಮುಂದಾಗಿದ್ದೇವೆ. ಅದರಿಂದ ಭವನಕ್ಕೆ ಅಂದಾಜು ವೆಚ್ಚ 8 ರಿಂದ 10 ಕೋಟಿ ಅನುದಾನ ಬೇಕಾಗಿದೆ. ಆದರಿಂದ ಸರ್ಕಾರ ಮಟ್ಟದಲ್ಲಿ ಪ್ರಸ್ತಾವನೆ ಮಾಡಿ ನಮ್ಮ ಸಮಾಜಕ್ಕೆ ಶಾಸಕ ಅನಿಲ್ ಚಿಕ್ಕಮಾದುರವರನ್ನು ಒಳಗೊಂಡು ಬಸವ ಭವನಕ್ಕೆ ಅನುದಾನವನ್ನು ಬಿಡುಗಡೆ ಮಾಡಿಕೊಡಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇವೆ ಎಂದರು. ನಂತರ ಮಾತನಾಡಿ ಮೈಸೂರು ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ…
ಪಾವಗಡ: ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ವತಿಯಿಂದ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಯಿತು. ಶಿಬಿರದಲ್ಲಿ ಕಣ್ಣಿಗೆ ಸಂಬಂಧ ಪಟ್ಟ ತೊಂದರೆಗಳಿಗೆ ಪರೀಕ್ಷೆಗಳನ್ನು ನಡೆಸಲಾಯಿತು. ಶಿಬಿರದಲ್ಲಿ ಕಣ್ಣಿಗೆ ಸಂಬಂಧಪಟ್ಟ ತೊಂದರೆಗಳಿಗೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದ 60 ರೋಗಿಗಳಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಶಿಬಿರದ ಕಾರ್ಯಕ್ರಮಕ್ಕೆ ಸುರಪನೆನಿ ವಿದ್ಯಾ ಸಂಸ್ಥೆಯ ವಿದ್ಯಾ ಸಾಗರ್ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಸೇವಾ ಟ್ರಸ್ಟಿನ ಶ್ರೀಮತಿ ಸಂದ್ಯಾ, ಶಂಕರ ಕಣ್ಣಿನ ಆಸ್ಪತ್ರೆ ವೈದ್ಯರಾದ ರವಿಕುಮಾರ್, ಶಿಬಿರದ ಮೇಲ್ವಿಚಾರಕರಾದ ಹರೀಶ್ ಕುಮಾರ್, ಸೇವಾ ಟ್ರಸ್ಟ್ ನಿರ್ದೇಶಕರಾದ ನರಸಿಂಹಮೂರ್ತಿ, ಮಾನಂ ಗೌತಮ, ಶಂಕರ್ ಆಸ್ಪತ್ರೆ ಸಿಬ್ಬಂದಿ , ಸಾರ್ವಜನಿಕ ಆಸ್ಪತ್ರೆಯ, ಸಿಬ್ಬಂದಿ ವರ್ಗದವರು ಮತ್ತು ಮುಂತಾದವರಿದ್ದರು. ವರದಿ: ನಂದೀಶ್ ನಾಯ್ಕ ಪಿ.
ಕೊರಟಗೆರೆ: ಏಕಲವ್ಯ ವಸತಿ ಶಾಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿತ್ತೂರುರಾಣಿ ಚೆನ್ನಮ್ಮ, ಮುರಾರ್ಜಿ ದೇಸಾಯಿ ಮತ್ತು ಏಕಲವ್ಯ ವಸತಿ ಶಾಲೆಗಳಿಗೆ ದಿಢೀರ್ ಭೇಟಿ ನೀಡಿದರು. ಇದೇ ವೇಳೆ ವಸತಿ ಶಾಲೆಯ ಮೂಲ ಸೌಲಭ್ಯದ ದುಸ್ಥಿತಿ ಕಂಡು ಕೆಂಡಮಂಡಲವಾದ ಸಚಿವರು ಶಾಲೆಯ ಪ್ರಾಂಶುಪಾಲ ಮತ್ತು ವಾರ್ಡನ್ ಗಳನ್ನು ತರಾಟೆಗೆತ್ತಿಕೊಂಡರು. ನಾನೇ ಜಾಗ ಗುರುತಿಸಿ ಕಟ್ಟಿಸಿದ ಏಕಲವ್ಯ ವಸತಿ ಶಾಲೆಯಲ್ಲಿ ಇಂತಹ ದುಸ್ಥಿತಿಯೇ ಎಂದು ಬೇಸರ ವ್ಯಕ್ತಪಡಿಸಿದ ಅವರು, ಗ್ರಾಮೀಣ ಭಾಗದ ಬಡ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾದ್ರೇ ಸಹಿಸೋದಿಲ್ಲ ಎಂದು ಎಚ್ಚರಿಕೆ ನೀಡಿದರು. ಅನುದಾನದ ಬಗ್ಗೆ ಎರಡು ವರ್ಷದಿಂದ ನನ್ನ ಗಮನಕ್ಕೆ ಏಕೆ ತಂದಿಲ್ಲ ಎಂದು ಗೃಹ ಸಚಿವರು ಪ್ರಶ್ನಿಸಿದರು. ವಿದ್ಯಾರ್ಥಿಗಳಿಗೆ ಅನಾರೋಗ್ಯ ಆದ್ರೇ ತಕ್ಷಣ ಅವರ ಪೋಷಕರ ಗಮನಕ್ಕೆ ತರುವಂತೆ ಸೂಚಿಸಿದ ಅವರು, ಮಕ್ಕಳ ಆರೋಗ್ಯದ ಬಗ್ಗೆ ದಾಖಲೆ ಮತ್ತು ವಿಶೇಷ ಕಾಳಜಿ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಲೆಯಲ್ಲಿ ಊಟ ಸವಿದು ಮತ್ತು ಮಕ್ಕಳ…
ಔರಾದ: ಭೀಮವಾದ ದಲಿತ ಸಂಘರ್ಷ ಸಮಿತಿ ತಾಲೂಕು ಸಮಿತಿ ರಚನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಸಭೆ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ತಾಲೂಕು ಪ್ರವಾಸ ಮಂದಿರದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾ ಸಂಘಟನಾ ಸಂಚಾಲಕರಾದ ಸಂಜೀವ ಕುಮಾರ್ ಮೇತ್ರೆ, ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಬೀದರ ಜಿಲ್ಲೆಯ ಎಲ್ಲಾ ತಾಲೂಕಿನ, ಗ್ರಾಮಗಳಲ್ಲಿರುವ ದಲಿತ, ಹಿಂದುಳಿದವರು, ಸಂವಿಧಾನಾತ್ಮಕವಾದ ಹಕ್ಕುಗಳನ್ನು ಪಡೆಯಲು ನಿರಂತರ ಹೋರಾಟ ನಡೆಸಬೇಕು, ಯುವಕರನ್ನು ಸಂಘಟಿಸುವ ಉದ್ದೇಶದಿಂದ ಇಂದು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದರು. ಔರಾದ ತಾಲೂಕು ಸಂಚಾಲಕರಾಗಿ ತುಕಾರಾಮ ಹಸನ್ಮುಖಿ, ತಾಲೂಕು ಸಂಘಟನಾ ಸಂಚಾಲಕರಾಗಿ ಬಸವರಾಜ್ ಅಲ್ಲಾಪುರ, ಮಲ್ಲಿಕಾರ್ಜುನ ಜೋನ್ನೇಕೆರಿ ಹಾಗೂ ತಾಲೂಕು ಖಜಾಂಚಿಯಾಗಿ ಘಾಳ್ಳೇಪ್ಪಾ ಸೇಂಬೆಳ್ಳಿ ಇವರುಗಳನ್ನು ರಾಜ್ಯ ಸಂಚಾಲಕ ಬಿ.ಎನ್. ವೆಂಕಟೇಶ್ ರವರ ಆದೇಶ ಮೇರೆಗೆ ನೇಮಕ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭೀಮವಾದ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಸಂಜುಕುಮಾರ್ ಮೇತ್ರೆ, ಡಿ.ಜೆ. ಬಂದಿ, ಸುಧಾಕರ್ ಅಲ್ಲಾಪುರೆ, ಗಣಪತಿ ಸೇಂಬೆಳ್ಳಿ, ಸಂಜುಕುಮಾರ್ ಲಾಧ, ಸುನಿಲ್ ಮಿತ್ರ,ದತ್ತಾತ್ರಿ…