Subscribe to Updates
Get the latest creative news from FooBar about art, design and business.
- ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ
- ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
- ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
Author: admin
ಲಕ್ನೋ: ಉತ್ತರ ಪ್ರದೇಶ ರಾಜ್ಯದಲ್ಲಿ ಮಹತ್ವದ ಆದೇಶವೊಂದನ್ನು ತರಲಾಗಿದ್ದು, ಬೊಟಿಕ್ ಸೆಂಟರ್ ಗಳಲ್ಲಿ ಮಹಿಳೆಯರ ಬಟ್ಟೆಗಳ ಅಳತೆಯನ್ನು ಪುರುಷರ ಬದಲಿಗೆ ಮಹಿಳೆಯರೇ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಈ ಬಗ್ಗೆ ಎಲ್ಲ ಜಿಲ್ಲೆಗಳಿಗೂ ಆದೇಶ ಹೊರಡಿಸಲಾಗುದ್ದು, ಪುರುಷ ಟೈಲರ್ಗಳು ಮಹಿಳೆಯರ ಅಳತೆಗಳನ್ನು ತೆಗೆಯೋಹಾಗಿಲ್ಲ ಎಂದು ಕಟ್ಟನಿಟ್ಟಾಗಿ ಸೂಚನೆ ನೀಡಲಾಗಿದೆ. ಟೈಲರ್ ಅಂಗಡಿಯಲ್ಲಿ ಮಹಿಳೆಯರ ಅಳತೆಗಳನ್ನು ತೆಗೆದುಕೊಳ್ಳಲು ಮಹಿಳಾ ಟೈಲರ್ ಗಳನ್ನು ನೇಮಿಸಬೇಕಾಗುತ್ತದೆ. ಇಷ್ಟು ಮಾತ್ರವಲ್ಲದೇ ಅಂಗಡಿಯಲ್ಲಿ ಸಿಸಿಟಿವಿ ಅಳವಡಿಸಬೇಕು ಎಂದು ಸೂಚನೆ ನೀಡಲಾಗಿದೆ. ಮಹಿಳೆಯರಿಗಾಗಿ ವಿಶೇಷ ಬಟ್ಟೆಗಳನ್ನು ಮಾರಾಟ ಮಾಡುವ ಮಳಿಗೆಗಳು ಗ್ರಾಹಕರಿಗೆ ಸಹಾಯ ಮಾಡಲು ಮಹಿಳಾ ಉದ್ಯೋಗಿಗಳನ್ನು ನೇಮಿಸಬೇಕಾಗುತ್ತದೆ. ಕೋಚಿಂಗ್ ಸೆಂಟರ್ ನಲ್ಲಿಯೂ ಮಹಿಳೆಯರಿಗೆ ಸಿಸಿಟಿವಿ ಮತ್ತು ಶೌಚಾಲಯಗಳನ್ನು ಹೊಂದಿರುವುದು ಅವಶ್ಯಕ. ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಎಲ್ಲಾ ನಿಯಮಗಳನ್ನು ನಿರ್ಧರಿಸಲಾಗಿದೆ ಎಂದು ಸೂಚಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಖ್ಯಾತ ನಟ ಹರೀಶ್ ರಾಯ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಯಾಂಡಲ್ ವುಡ್ ನಲ್ಲಿ ಖ್ಯಾತ ಪೋಷಕ ನಟರಾಗಿರುವ ಹರೀಶ್ ರಾಯ್ ಅವರು ಹಲವಾರು ವರ್ಷಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಥೈರಾಯ್ಡ್ ಕ್ಯಾನ್ಸರ್ ನಟ ಹರೀಶ್ ರಾಯ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಕನ್ನಡದ ಖ್ಯಾತ ಖಳ ನಟರಾಗಿ, ಪೋಷಕ ನಟರಾಗಿ ಹರೀಶ್ ರಾಯ್ ಜನಪ್ರಿಯರಾಗಿದ್ದಾರೆ. ಅವರ ಅನಾರೋಗ್ಯ ಅಭಿಮಾನಿಗಳಿಗೆ ಆತಂಕವನ್ನುಂಟು ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಿಜಯಪುರ: ವಕ್ಫ್ ವಿಚಾರದಲ್ಲಿ ಅಸತ್ಯವನ್ನು ಸತ್ಯ ಮಾಡುವ ಕೆಲಸ ನಡೆದಿದೆ. ಸುಳ್ಳು ಪ್ರಚಾರ ನಡೆದಿದೆ ಎಂದು ಸಚಿವ ಡಾ.ಎಂ.ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದೊಂದು ವಾರದಿಂದ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ವಕ್ಫ್ ವಿಚಾರ ಸದ್ದು ಮಾಡಿದೆ. ಈಗಾಗಲೇ ಸ್ಪಷ್ಟವಾಗಿ ಹೇಳಿದಂತೆ ಒಂದೇ ಒಂದು ಇಂಚು ರೈತರು, ಧಾರ್ಮಿಕ ಸಂಸ್ಥೆಗಳ ಜಮೀನು ವಕ್ಫ್ ಗೆ ಹೋಗಲು ಬಿಡಲ್ಲ. ಸಿಎಂ ಸಿದ್ದರಾಮಯ್ಯ ಅವರು ಸಹ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಅವರು ಹೇಳಿದರು. 12 ಸಾವಿರ ಎಕರೆ ಜಮೀನು ಇನಾಂ ಮತ್ತು ಭೂ ಸುಧಾರಣೆ ಕಾಯ್ದೆಯಡಿ ಹಂಚಿದ್ದು, ಅದನ್ನು ಯಾರೂ ಹಿಂಪಡೆಯಲ್ಲ ಎಂದು ಘಂಟಾಘೋಷವಾಗಿ ಹೇಳಲಾಗಿದೆ. ಟಾಸ್ಕ್ ಫೋರ್ಸ್ ಸಭೆಯಲ್ಲಿ ಸಹ ಅಧಿಕಾರಿಗಳಿಗೆ ಸೂಚನೆ ನೀಡಿ ನೊಟೀಸ್ ಹಿಂಪಡೆಯಲಾಗಿದೆ ಎಂದು ತಿಳಿಸಲಾಗಿದೆ. ಇಷ್ಟೆಲ್ಲ ಸತ್ಯ ಹೇಳಿದರೂ ಅನವಶ್ಯಕವಾಗಿ ಗೊಂದಲ ಸೃಷ್ಠಿಸಲಾಗುತ್ತಿದೆ ಎಂದರು. ಬಿಜೆಪಿಯ ನಾಟ್ಯ ಮಂಡಳಿ ಆಂತರಿಕ ಯಡಿಯೂರಪ್ಪ ವರ್ಸೆಸ್ ಅದರ್ಸ್ ತಿಕ್ಕಾಟವನ್ನು ವಕ್ಫ್ ಕಡೆ ಒಯ್ಯಲಾಗಿದೆ. ವಿಜಯೇಂದ್ರ, ಅಶೋಕ ಟೀಮ್ ಬಂದಿಲ್ಲ. ಧಾರ್ಮಿಕ…
ಸಂಡೂರು: ಬಿಜೆಪಿ ಸೋಲಿಸಿ ಬಳ್ಳಾರಿ ಉಳಿಸಿ ಎಂದು ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಮತದಾರರಿಗೆ ಕರೆ ನೀಡಿದ್ದಾರೆ. ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು. ದೇವಸ್ಥಾನದ ಬಾಗಿಲಲ್ಲಿ ಒಬ್ನೇ ನಿಂತು ಭಾಷಣ ಮಾಡಿ ಹೋಗಿದ್ದೆ. ಒಂದು ಮನೆಗೆ ಹೋಗಿ ಕುಡಿಯೋಕೆ ನೀರು ಕೇಳಿದ್ರೂ ನನಗೆ ನೀರು ಕೊಡೋಕೂ ಜನ ಭಯ ಬೀಳ್ತಿದ್ರು ಎಂದು ರೆಡ್ಡಿ ದರ್ಬಾರ್ ಅವಧಿಯ ಘಟನೆಗಳನ್ನು ಸಿದ್ದರಾಮಯ್ಯ ನೆನಪಿಸಿಕೊಂಡರು. ಅಕ್ರಮ ಗಣಿಗಾರಿಕೆ ವಿರುದ್ಧ, ರೆಡ್ಡಿ ಬ್ರದರ್ಸ್ ಬಳ್ಳಾರಿಯನ್ನು ಹಾಳು ಮಾಡಲು ಬಿಡಬಾರದು ಎಂದು ನಾನು ಬೆಂಗಳೂರಿನಿಂದ ಪಾದಯಾತ್ರೆ ಮಾಡಿದೆ. ಬಳ್ಳಾರಿ ಜನರನ್ನು ಭಯಮುಕ್ತಗೊಳಿಸಿದ್ದು ಕಾಂಗ್ರೆಸ್ ಎಂದು ಸಿದ್ದರಾಮಯ್ಯ ಹೇಳಿದರು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಜಿಂದಾಲ್ ಗೆ ಕಾಲಿಟ್ಟರೂ ಜಿಲ್ಲಾ ಮಟ್ಟದ ಅಧಿಕಾರಿಗಳೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಣಲು ಬರಲಿಲ್ಲ. ಆ ಮಟ್ಟದಲ್ಲಿ ಅಧಿಕಾರಿಗಳಲ್ಲಿ ಭಯ, ಭೀತಿ ಸೃಷ್ಟಿ ಮಾಡಿದ್ದರು. ನಾನು ಇಬ್ರಾಹಿಂ ಚುನಾವಣಾ…
ಶಿವಮೊಗ್ಗ: ಬೈಕ್ ಸ್ಕಿಡ್ ಆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಹೊರವಲಯದ ಹರಕೆರೆ ಬಳಿಯ ಕಾನೆಹಳ್ಳ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನ ನಿಸಾರ್ (20) ಮತ್ತು ಯಶವಂತ್ (20) ಎಂದು ಗುರುತಿಸಲಾಗಿದೆ. ವೇಗವಾಗಿ ಬೈಕ್ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಗಳು ದಿಢೀರನೆ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ. ಕೆಟಿಎಂ ಬೈಕ್ ನಲ್ಲಿ ವಿದ್ಯಾರ್ಥಿಗಳು ಸಂಚರಿಸುತ್ತಿದ್ದರು. ಬೈಕ್ ನಿಂದ ಎಸೆಯಲ್ಪಟ್ಟ ವಿದ್ಯಾರ್ಥಿಗಳು ಮರ ಹಾಗೂ ಕಲ್ಲುಗಳಿಗೆ ಅಪ್ಪಳಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ ಕುರಿತಂತೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಿಕ್ಕಬಳ್ಳಾಪುರ/ಶಿಡ್ಲಘಟ್ಟ: ಅಕ್ರಮ ಸಂಬಂಧದ ಅನುಮಾನದಲ್ಲಿ ಗಂಡನ ಪ್ರಿಯತಮೆಯ ಕೊಲೆಗೆ ಸುಪಾರಿ ನೀಡಿದ್ದ ಮಹಿಳೆ ಸೇರಿ ಒಟ್ಟು 6 ಮಂದಿ ಆರೋಪಿಗಳನ್ನು ಜಿಲ್ಲೆಯ ಶಿಡ್ಲ ಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯೋಗ ಶಿಕ್ಷಕಿಯಾಗಿರುವ ಅರ್ಚನಾ ಕೋಂ ವಿಶ್ವನಾಥ (34) ಎಂಬ ಮಹಿಳೆ ದೇವನಹಳ್ಳಿ ತಾಲೂಕಿನ ಎಲೆಯೂರು ಗ್ರಾಮದ ನಿವಾಸಿ ವಿಶ್ವನಾಥ ಬಿನ್ ಅಂಜಿನಪ್ಪ ಅವರೊಂದಿಗೆ 13 ವರ್ಷಗಳ ಹಿಂದೆ ವಿವಾಹ ಆಗಿದೆ. ಆದರೆ, ಎರಡು ವರ್ಷದಿಂದ ಪ್ರತ್ಯೇಕವಾಗಿ ಬೆಂಗಳೂರಿನ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದಳು. 2021ರಲ್ಲಿ ಪತಿಗೆ ಅಪಘಾತವಾದಾಗ ಗಂಡನ ಸ್ನೇಹಿತ ಸಂತೋಷ್ಕುಮಾರ್ ಎಂಬಾತ ಪರಿಚಯವಾಗಿದ್ದ. ಅರ್ಚನಾ ಜೊತೆ ಸಲುಗೆಯಿಂದ ಮಾತನಾಡುತ್ತಿದ್ದ. ಇದನ್ನು ಗಮನಿಸಿದ ಸಂತೋಷ್ ಕುಮಾರ್ ಪತ್ನಿ ಬಿಂದು, ಅರ್ಚನಾಳನ್ನು ಕೊಲೆ ಮಾಡುವ ಸಲುವಾಗಿ ಅರ್ಚನಾರ ಬಳಿ ಯೋಗ ತರಬೇತಿ ಪಡೆಯಲು ಹೋಗುತ್ತಿದ್ದ ಆಂಧ್ರದ ಮಡಕಶಿರ ಮೂಲದ ಸತೀಶ್ ರೆಡ್ಡಿಗೆ ಕೊಲೆ ಸುಪಾರಿ ನೀಡಿದ್ದಳು. ಸತೀಶ್ ರೆಡ್ಡಿ ಗನ್ ತರಬೇತಿ ಕೊಡುವ ನೆಪದಲ್ಲಿ ಅರ್ಚನಾಳನ್ನು ಕರೆದಿದ್ದು ಅದನ್ನು ನಂಬಿ ಅರ್ಚನಾ…
ತುಮಕೂರು: ಕಾಣೆಯಾಗಿದ್ದ ಇಬ್ಬರು ಮಕ್ಕಳು ತಿಪಟೂರು ತಾಲೂಕಿನ ಹುಚ್ಚನಹಟ್ಟಿ ಗ್ರಾಮದ ಸಮೀಪ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಎರಡನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಯದುವೀರ್, ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಮನೋಹರ್ ಮೃತ ದುರ್ದೈವಿಯಾಗಿದ್ದಾರೆ. ಇಬ್ಬರೂ ನೆನ್ನೆ ಸಂಜೆ 7ಯಿಂದ ಕಾಣೆಯಾಗಿದ್ದರು. ಇಂದು ಬೆಳಗ್ಗೆ ಇಬ್ಬರ ಮೃತದೇಹ ಎತ್ತಿನಹೊಳೆ ಕಾಮಗಾರಿ ಮಾಡುತ್ತಿರುವ ಗುಂಡಿಯಲ್ಲಿ ಪತ್ತೆಯಾಗಿದೆ. ಇದರಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಹಾಗೂ ಕುಟುಂಬದವರು ಸ್ಥಳದಲ್ಲಿಯೇ ಶವಗಳನ್ನು ಇಟ್ಟು ಪ್ರತಿಭಟನೆ ಮಾಡಿ, ಕಾಮಗಾರಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲೆ ಕೊರಟಗೆರೆ ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯದ ಗುಂಡಿ ತುಂಬಿ ಹರಿಯುತ್ತಿದ್ದನ್ನು ಪರಿಶಿಷ್ಟ ಪಂಗಡದ ಬಾಲಕನಿಂದ ಮಲವನ್ನು ಸ್ವಚ್ಛ ಗೊಳಿಸುತ್ತಿರುವ ವಿಷಯದ ಬಗ್ಗೆ ನೈಜ ಹೋರಾಟಗಾರರ ವೇದಿಕೆ ಬೆಂಗಳೂರು, ಮಾನವ ಹಕ್ಕುಗಳ ಆಯೋಗಕ್ಕೆ ಇ–ಮೇಲ್ ಮೂಲಕ ದೂರು ನೀಡಿದೆ. ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಶೌಚಾಲಯದ ಗುಂಡಿ ತುಂಬಿ ಹರಿಯುತ್ತಿದ್ದನ್ನು ಪರಿಶಿಷ್ಟ ಪಂಗಡದ ಬಾಲಕನೂರ್ನಿಂದ ಮಲವನ್ನು ಸ್ವಚ್ಛ ಗೊಳಿಸುತ್ತಿರುವ ವಿಷಯದ ಬಗ್ಗೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಸುದ್ದಿ ಪ್ರಸಾರವಾಗಿದೆ. ನಾವು 21ನೇ ಶತಮಾನಕ್ಕೆ ಅಭಿವೃದ್ಧಿ ಹೊಂದಿದ ದೇಶಗಳ ಜೊತೆ ಮೊದಲ ಸಾಲಿನಲ್ಲಿ ನಿಂತಿರುವ ಭಾರತದಂತಹ ಬಹುದೊಡ್ಡ ಪ್ರಜಾಪ್ರಭುತ್ವ ದೇಶದಲ್ಲಿ ಇಂಥ ಹೀನಾಯ ವಾದ ಕೃತ್ಯ ಕರ್ನಾಟಕ ರಾಜ್ಯ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತುಮಕೂರು…
ಹುಣಸೂರು: ತಾಲೂಕಿನ ಇತಿಹಾಸ ಪ್ರಸಿದ್ಧ ಗೊಮ್ಮಟಗಿರಿಯ ಬಾಹುಬಲಿ ಬೆಟ್ಟದ ಕೆಳಗೆ ಬಾಹುಬಲಿಗೆ ಅಭಿಮುಖವಾಗಿ ನೂತನ ಬ್ರಹ್ಮಸ್ಥಂಭ ಹಾಗೂ ಅದರ ಮೇಲೆ ಬ್ರಹ್ಮ ಯಕ್ಷರ ಪ್ರತಿಷ್ಠಾಪನೆ ಇಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು. ಬೆಳಗ್ಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳು, ಆರಾಧನೆಗಳು ನಡೆದವು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟರಕ ಶ್ರೀಗಳು, ಶ್ರೀಕ್ಷೇತ್ರ ಆರತಿಪುರ ದಿಗಂಬರ ಜೈನಮಠದ ಸ್ವಸ್ತಿ ಶ್ರೀ ಸಿದ್ಧಾಂತಕೀರ್ತಿ ಭಟ್ಟರಕ ಶ್ರೀಗಳು ಪಾವನ ಸಾನಿಧ್ಯವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಮೈಸೂರಿನ ಪದ್ಮಶ್ರೀ ಜೈನ ಮಹಿಳಾ ಸಮಾಜದ ಅಧ್ಯಕ್ಷರಾದ ಲತಾಸುದರ್ಶನ್, ಪ್ರಸನ್ನ ಕುಮಾರ್, ಗುಮ್ಮಟಗಿರಿ ಸೇವಾ ಸಮಿತಿಯ ಅಧ್ಯಕ್ಷ ಮನ್ಮಥರಾಜು ಇನ್ನಿತರ ಪದಾಧಿಕಾರಿಗಳು ಭಾಗವಹಿಸಿದ್ದರು. ಪ್ರತಿ ಪ್ರತಿಷ್ಠಾಪನಾಚಾರ್ಯ ಬಜಗೋಳಿಯ ವರ್ಧಮಾನ ಇಂದ್ರರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಬ್ರಹ್ಮ ಯಕ್ಷರ ಹಾಗೂ ಬ್ರಹ್ಮಸ್ತಂಬದ ದಾನಿಗಳಾದ ಹಾಸನ ಜಿಲ್ಲೆ ಅಡಗೂರಿನ ಪದ್ಮಾವತ್ತಮ್ಮ ಎ.ಬಿ.ನಾಗೇಂದ್ರಯ್ಯಾ ಮತ್ತು ಮಕ್ಕಳು, ಮೈಸೂರಿನ ಎ.ಎನ್. ಧರಣೇಂದ್ರ …
ಬೆಂಗಳೂರು: ಪುರಾತನವಾದ ಜೈನ ಧರ್ಮ ರಾಷ್ಟ್ರದ ಅಲ್ಪಸಂಖ್ಯಾತ ಧರ್ಮವಾಗಿದ್ದು ರಾಜ್ಯ ಸರ್ಕಾರ ಸರಿಯಾದ ಸವಲತ್ತುಗಳನ್ನು ನೀಡದೆ ಜೈನ ಧರ್ಮವನ್ನು ವಂಚಿಸುತ್ತಿದೆ. ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಿ ಸುಮಾರು ವಾರ್ಷಿಕವಾಗಿ 200 ಕೋಟಿ ರೂ.ಗಳನ್ನು ಮೀಸಲಿಡುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಶ್ರೀ ದಿಗಂಬರ್ ಜೈನ ಗ್ಲೋಬಲ್ ಮಹಾಸಭಾ ಅಧ್ಯಕ್ಷ ಮಹೇಶ್ ಜೈನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿವರ್ಷ ಜೈನ ಧರ್ಮದ ಅಲ್ಪಸಂಖ್ಯಾತರಿಗೆ 200 ಕೋಟಿ ರೂಗಳನ್ನು ಮೀಸಲಿಡಬೇಕು, ಸರ್ಕಾರ ರಾಜ್ಯದಲ್ಲಿರುವ 414 ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದರಂತೆ ಅಥವಾ ಜೈನ ಜನಸಂಖ್ಯೆಗೆ ಅನುಗುಣವಾಗಿ ಎರಡು ವಿದ್ಯಾರ್ಥಿ ನಿಲಯಗಳು ಜೈನ ಸಮುದಾಯಕ್ಕೆ ಮೀಸಲಿಡಬೇಕು, ಸಸ್ಯಾಹಾರಿ ವಿದ್ಯಾರ್ಥಿ ನಿಲಯಗಳು ಇದ್ದಲ್ಲಿ ಶೇಕಡ 50ರಷ್ಟು ಮೀಸಲಾತಿ ಜೈನ ವಿದ್ಯಾರ್ಥಿಗಳಿಗೆ ಇಡಬೇಕು ಎಂದರು. ಇಲ್ಲಿಯವರೆಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ಜೈನ ಸಮದಾಯಕ್ಕೆ ಸಿಕ್ಕಿಲ್ಲ ಈವರೆಗೆ…