Subscribe to Updates
Get the latest creative news from FooBar about art, design and business.
- ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!
- ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
Author: admin
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಪ್ರತಿಸ್ಪರ್ಧಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾಹ್ಯಾರಿಸ್ ಕನಸು ಭಗ್ನಗೊಂಡಿದೆ. ಡೊನಾಲ್ಡ್ ಟ್ರಂಪ್ 277 ಮತ ಗಳಿಸುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೇರಿದ್ದಾರೆ. ಕಮಲಾ ಹ್ಯಾರಿಸ್ 226 ಮತಗಳಿಸಿ ಪರಾಭವಗೊಂಡಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿಗೆ 6,155,379 ಮತಗಳು ಚಲಾವಣೆಯಾಗಿದೆ, ಅಂದರೆ ಶೇಕಡಾ 47.2 ರಷ್ಟು ಮತ ಬಿದ್ದಿವೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರಿಗೆ 6,52,62,256 ಮತಗಳು ಚಲಾವಣೆ ಆಗಿವೆ. ಅಂದರೆ ಶೇ.51.2 ರಷ್ಟು ಮತ ಚಲಾವಣೆ ಆಗಿದೆ. ಕಮಲಾ ಹ್ಯಾರಿಸ್ ಅವರು ನ್ಯೂಯಾರ್ಕ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಾರಿ ಮುನ್ನೆಡೆ ಗಳಿಸಿದ್ದಾರೆ. ಬಹುಮತಕ್ಕೆ ಅಗತ್ಯವಾಗಿರುವ ಮತ ಪಡೆಯುವ ನಿಟ್ಟಿನಲ್ಲಿ ಕಮಲಾ ಹ್ಯಾರೀಸ್ ಅವರಿಗಿಂತ ಡೋನಾಲ್ಡ್ ಟ್ರಂಪ್ ಮುನ್ನೆಡೆ ಸಾಧಿಸಿದ್ದು, ಅಧ್ಯಕ್ಷರಾಗುವ ನಿಟ್ಟಿನಲ್ಲಿ ಹೆಜ್ಜೆ ಹಾಕಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಕೆ.ಎಫ್.ಸಿ.ಎಫ್ ಸಿ ಸಗಟು ಮಳಿಗೆ ವ್ಯವಸ್ಥಾಪಕ ರವಿಕುಮಾರ್ (59)ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುರುವೇಕೆರೆ ಪಟ್ಟಣದ ಮಾಯಸಂದ್ರ ರಸ್ತೆಯ ಒಂಕಾರ್ ಆಸ್ಪತ್ರೆ ಹಿಂಬಾಗದ ಕಟ್ಟಡದಲ್ಲಿ ಬಾಡಿಗೆ ಮನೆಯೊಂದರಲ್ಲಿ ಅನೇಕ ದಿನಗಳಿಂದ ವಾಸವಾಗಿದ್ದರು. ಬೆಳಿಗ್ಗೆ ಪೋನ್ ರಿಸೀವ್ ಮಾಡದ ಕಾರಣ ಮನೆಯ ಬಳಿ ಬಂದು ನೋಡಿದಾಗ ಮನೆಯ ಪ್ಯಾನ್ ಗೆ ಹಗ್ಗದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ. ಪಟ್ಟಣದ ಪೋಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ತುರುವೇಕೆರೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಸರಗೂರು: ಸರಗೂರು ನೂತನ ತಾಲೂಕು ಆಗಿ 10 ವರ್ಷಗಳ ಕಾಲ ಕಳೆಯುತ್ತಾ ಬಂದಿದೆ. ಜನಸಂಖ್ಯೆ ಆಧಾರಕ್ಕೆ ಅನುಗುಣವಾಗಿ ಪಟ್ಟಣ ಪಂಚಾಯಿತಿಯಿಂದ ಸರಗೂರು ಪುರಸಭೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಎಸ್.ಎನ್. ನಾಗರಾಜು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಎಚ್.ಸಿ.ಮಹದೇವಪ್ಪ ನಿಮ್ಮ ಅವಧಿಯಲ್ಲಿ ತಾಲೂಕು ಘೋಷಣೆ ಮಾಡಿದ್ದೀರಿ. ಅದರಂತೆ ಈಗ ಸರಗೂರು ಪುರಸಭೆ ಎಂದು ಘೋಷಣೆ ಮಾಡಿ ಎಂದು ಅವರು ಮನವಿ ಮಾಡಿದರಲ್ಲೇ , ಪುರಸಭೆ ಘೋಷಣೆ ಮಾಡಿದರೆ ಕಾಂಗ್ರೇಸ್ ಸರ್ಕಾರ ಹೆಸರು ಹಾಗೂ ನಿಮ್ಮ ಹೆಸರು ಎಲ್ಲರ ಮನಸ್ಸಿನಲ್ಲಿ ಉಳಿಯುತ್ತದೆ ಎಂದು ಅವರು ಹೇಳಿದರು. ಈ ವಿಚಾರದ ಬಗ್ಗೆ ಶಾಸಕರಾದ ಅನೀಲ್ ಚಿಕ್ಕಮಾದುರವರು ಚಳಿಗಾಲ ಅಧಿವೇಶನದಲ್ಲಿ ಮಾತನಾಡುತ್ತಾರೆ ಎಂದು ವಿಶ್ವಾಸ ಮತ್ತು ನಂಬಿಕೆ ಇದೆ ಎಂದರು. ಪಟ್ಟಣ ಪಂಚಾಯಿತಿಯಲ್ಲಿ 12 ವಾರ್ಡ್ ಗಳು ಇದ್ದು, ಪಟ್ಟಣ ಜನಸಂಖ್ಯೆ 15 ರಿಂದ 20 ಸಾವಿರ ಜನಸಂಖ್ಯೆ…
ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಇಂದು 43ನೇ ವಸಂತಕ್ಕೆ ಕಾಲಿಟ್ಟಿದ್ದಾರೆ ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಹಾಗೂ ಸಿನಿ ತಾರೆಯರು ಶುಭಾಶಯಗಳನ್ನು ತಿಳಿಸಿದ್ದಾರೆ. 2005ರಲ್ಲಿ ತೆರೆಕಂಡ ನಾಗಾರ್ಜುನ ನಟನೆಯ ‘ಸೂಪರ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿ ಜರ್ನಿ ಆರಂಭಿಸಿದ ಇವರು ಬಳಿಕ ‘ಮಹಾನಂದಿ’ ‘ ಅಸ್ತ್ರಮ್’ ‘ವಿಕ್ರಮಾರ್ಕುಡು’ ಸೇರಿದಂತೆ ಬ್ಯಾಕ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವ ಮೂಲಕ ಅನುಷ್ಕಾ ಶೆಟ್ಟಿ ಜನಪ್ರಿಯ ನಟಿಯಾಗಿ ಹೊರಹೊಮ್ಮಿದರು. 2007 ರಂದು ಸುಂದರ್ ನಿರ್ದೇಶನದ ‘ರೆಂದು’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕಳೆದ ವರ್ಷ ‘ಮಿಸ್ ಶೆಟ್ಟಿ ಶ್ರೀ ಪೋಲಿಶೆಟ್ಟಿ’ ನಲ್ಲಿ ಕಾಣಿಸಿಕೊಂಡಿದ್ದ ಇವರು ಇತ್ತೀಚಿಗೆ ‘ಘಾಟಿ’ ಹಾಗೂ ‘ಕಥನಾರ್ – ದಿ ವೈಲ್ಡ್ ಸೋರ್ಸೆರರ್’ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನೂ ಅನೇಕ ಸಾಲು ಸಾಲು ಚಿತ್ರಗಳು ನಟಿ ಅನುಷ್ಕಾ ಶೆಟ್ಟಿ ಅವರ ಕೈಯಲ್ಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಗದಗ: ಕೌಟುಂಬಿಕ ಕಲಹ ಹಾಗೂ ಸಾಲದಿಂದ ಬೇಸತ್ತು ವ್ಯಕ್ತಿಯೊಬ್ಬ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ನಿನ್ನೆ ರಾತ್ರಿ ಮಂಜುನಾಥನ ಅಳಿಯ ವೇದಾಂತನ ಮೃತ ದೇಹ ಪತ್ತೆಯಾಗಿತ್ತು. ಇಂದು ಮಂಜುನಾಥ, ಮಗಳು ಧನ್ಯಾಳ ಹಾಗೂ ಪವನ್ ಮೃತ ದೇಹ ಪತ್ತೆ, ಎರಡು ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿವೆ. ಧನ್ಯಾ ಮೃತ ದೇಹ ಪತ್ತೆಯಾದ 1 ಕಿಲೋಮೀಟರ್ ಅಂತರದಲ್ಲಿ ಪವನ್ ಮೃತ ದೇಹ ಪತ್ತೆಯಾಗಿದೆ. 500 ಮೀಟರ್ ಅಂತರದಲ್ಲಿ ಮಂಜುನಾಥ ಅರಕೇರಿ ಮೃತದೇಹ ಪತ್ತೆಯಾಗಿದೆ ಎಂದು ಅಗ್ನಿಶಾಮಕ ದಳ ಹಾಗೂ ಮೀನುಗಾರರು ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಕಾಲ ನಿರಂತರ ಕಾರ್ಯಾಚರಣೆ ಬಳಿಕ ನಾಲ್ವರ ಶವ ಪತ್ತೆಯಾಗಿವೆ. ತುಂಬಿ ಹರಿಯುವ ನದಿಯಲ್ಲಿ ಎರಡು ಮಷಿನ್ ಬೋಟ್ ಮೂಲಕ ಅಗ್ನಿಶಾಮಕ ಶೋಧಕಾರ್ಯ ನಡೆಸಿದರೆ, ಸ್ಥಳೀಯ ಮೀನುಗಾರರು ತೆಪ್ಪಗಳನ್ನು ಬಳಸಿ ಜಂಟಿ ಶೋಧಕಾರ್ಯಾಚರಣೆ ನಡೆಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಇಂದು ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ನಾಲ್ವರ ಭವಿಷ್ಯ ನಿರ್ಧಾರವಾಗಲಿದೆ. ಪವಿತ್ರಾ ಗೌಡ , ಅನುಕುಮಾರ್. ನಾಗರಾಜ್, ಲಕ್ಷ್ಮಣ್, ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿದ್ದಾರೆ, ಈ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಈಗಾಲೇ ಒಂದು ಬಾರಿ ಪವಿತ್ರಾ ಗೌಡ ಅವರಿಗೆ ಜಾಮೀನು ನಿರಾಕರಿಸಲಾಗಿದೆ. ಎರಡನೇ ಪ್ರಯತ್ನದಲ್ಲಿ ಜಾಮೀನು ಸಿಗುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ. ಈ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಆಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಕುಣಿಗಲ್ ಕೃಷಿ ಸಂಶೋಧನಾಕೇಂದ್ರ, ಕುಣಿಗಲ್ ನಲ್ಲಿ ದಿನಾಂಕ : 06—11–2024ರಂದು ಬೆಂಗಳೂರು, ಕೃಷಿ ವಿಜ್ಞಾನಕೇಂದ್ರ, ಕೊನೆಹಳ್ಳಿ, ಸಿಮಿಟ್ ಹೈದರಾಬಾದ್, ಕುಣಿಗಲ್ ನ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು, ಕೃಷಿಕ ಸಮಾಜ, ಐ.ಡಿ.ಎಫ್ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆ ಮತ್ತು ತುಮಕೂರು ಹಾಲು ಒಕ್ಕೂಟಸಹಯೋಗದಲ್ಲಿಕ್ಷೇತ್ರೋತ್ಸವ ಮತ್ತು ದಶಮಾನೋತ್ಸವ–2024 ಕಾರ್ಯಕ್ರಮವನ್ನುಏರ್ಪಡಿಸಲಾಯಿತು. ಈ ಕಾರ್ಯಕ್ರಮವನ್ನುವಲಯ ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕರಾದ ಡಾ.ಕೇಶವಯ್ಯರವರು ಉದ್ಘಾಟಿಸಿ ಮಾತನಾಡಿ ಕರ್ನಾಟದ ರಾಜ್ಯದ ಕೃಷಿ ಪ್ರದೇಶವು ಮರುಭೂಮಿಯಾಗಿ ಪರಿವರ್ತನೆಯಾಗುತ್ತಿದೆ. ಈ ನಿಟ್ಟಿನಲ್ಲಿ ಖುಷ್ಕಿ ಬೇಸಾಯದ ನಿರ್ವಹಣೆ ಕುರಿತಂತೆ ಎರಡನೇ ಹಸಿರುಕ್ರಾಂತಿ ಯಾಗಬೇಕೆಂದುಕರೆಕೊಟ್ಟುರು. ಮುಂದುವರೆದು, ರೈತರು ಆಹಾರ ಬದ್ದತೆಯ ಜೊತೆಗೆ ಪೌಷ್ಟಿಕತೆ ಭದ್ರತೆಯ ಕಡೆ ಹೆಚ್ಚು ಗಮನ ನೀಡಬೇಕೆಂದುಕರೆಕೊಟ್ಟರು. ತುಮಕೂರು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರಾದ ಡಾ.ರಮೇಶ್ ಮಾತನಾಡಿ, ಪ್ರಸ್ತುತ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ರೈತರ ಅಭಿವೃದ್ದಿಗಾಗಿ ಚಾಲ್ತಿಯಲ್ಲಿರುವ ಯೋಜನೆಗಳ ಬಗ್ಗೆ ತಿಳಿಸಿದರು ಹಾಗೂ ಮುಂದಿನ ದಿನಗಳಲ್ಲಿ ನ್ಯಾನೊಗೊಬ್ಬರ ಬಳಕೆಯ ಪ್ರಾತ್ಯಾಕೆಗಳನ್ನು ಹಮ್ಮಿಕೊಳ್ಳುತ್ತಿದ್ದು ಮತ್ತು ಹಸಿರುಗೊಬ್ಬರ ಬಳಕೆಯ…
ತುಮಕೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಕಳೆದ 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಗಳಿಗೆ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಖಾಲಿ ಇರುವ ಗ್ರೇಡ್–2 ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ಇಂದು ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಕರವಸೂಲಿಗಾರ(ಬಿಲ್ ಕಲೆಕ್ಟರ್) ವೃಂದದಿಂದ ಗ್ರೇಡ್–2 ಕಾರ್ಯದರ್ಶಿ ಹುದ್ದೆಗಳಿಗೆ 13 ಮಂದಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ 8 ಮಂದಿ, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ವೃಂದದಿಂದ ಗ್ರೇಡ್ 2 ಕಾರ್ಯದರ್ಶಿ ಹುದ್ದೆಗೆ 9 ಮಂದಿ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ 9 ಮಂದಿ ಸೇರಿದಂತೆ ಒಟ್ಟು 39 ನೌಕರರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ. ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಡ್ತಿ ನೀಡಲಾಗಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ(ಅಭಿವೃದ್ಧಿ) ಕೆ.ಪಿ. ಸಂಜೀವಪ್ಪ ಮತ್ತು ಸಕ್ಷಮ ಪ್ರಾಧಿಕಾರ ಸಮಿತಿಯ ಸದಸ್ಯರು…
ತುಮಕೂರು: ಜಿಲ್ಲೆಯ ಬಹುತೇಕ ರೈತರು ರಾಗಿ ಬೆಳೆಯನ್ನು ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ರಾಗಿ ಕಟಾವು ಮಾಡಲು ಯಂತ್ರಕ್ಕೆ ಪ್ರತಿ ಗಂಟೆಗೆ 2,700 ರೂ. ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿಂದು ನಡೆದ ಬೆಳೆ ಕಟಾವು ಯಂತ್ರ ಬೆಲೆ ನಿಗದಿ ಪೂರ್ವ ಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ರಾಗಿ ಬೆಳೆ ಕಟಾವಿಗಾಗಿ ಹೆಚ್ಚು ಬಾಡಿಗೆ ದರ ತೆಗೆದುಕೊಳ್ಳುವ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆ 1.67 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ವಿವಿಧ ಭಾಗಗಳಲ್ಲಿ ರಾಗಿ ಬೆಳೆ ಕಟಾವು ಪ್ರಾರಂಭಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಕಟಾವು ಯಂತ್ರಗಳನ್ನು ತರುವ ಮಾಲೀಕರು ಬೆಳೆ ಕಟಾವಿಗೆ ಹೆಚ್ಚಿನ ಮೊತ್ತ ನಿಗಧಿ ಮಾಡಿರುವ ಬಗ್ಗೆ ರೈತರಿಂದ ದೂರು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ…
ತುಮಕೂರು: ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಜಿಲ್ಲೆಯ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಶೀಘ್ರವಾಗಿ ಆದ್ಯತಾ ಪಡಿತರ ಚೀಟಿ(PHH))ಯನ್ನು ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ 1201 ಇ–ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಪಡಿತರ ಚೀಟಿ ವಿತರಣೆ ಮಾಡಲಾಗಿದೆ. ಬಾಕಿ ಉಳಿದ 4,025 ಕಾರ್ಮಿಕರಿಗೆ ತ್ವರಿತವಾಗಿ ಪಡಿತರ ಚೀಟಿ ವಿತರಣೆ ಮಾಡಬೇಕು ಎಂದು ತಿಳಿಸಿದರು. ಇ–ಶ್ರಮ್ ನೋಂದಾಯಿತ ಅರ್ಹ ಕಾರ್ಮಿಕರು ತಮ್ಮ ಹತ್ತಿರದ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಸೇರಿದಂತೆ ವಿವಿಧ ತಾಲ್ಲೂಕುಗಳ ಆಹಾರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…