Subscribe to Updates
Get the latest creative news from FooBar about art, design and business.
- ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
Author: admin
ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 7ರಂದು ಜಿಲ್ಲೆಯ 10 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ನವೆಂಬರ್ 7ರಂದು ಜಿಲ್ಲೆಯ ಶಿರಾ ತಾಲೂಕಿನ ನಾದೂರು; ತಿಪಟೂರು ತಾಲೂಕಿನ ಹಾಲ್ಕುರಿಕೆ; ಮಧುಗಿರಿ ತಾಲೂಕಿನ ಚಿನಕವಜ್ರ; ತುಮಕೂರು ತಾಲೂಕಿನ ಅರೇಗುಜ್ಜನಹಳ್ಳಿ ಹಾಗೂ ಮೈದಾಳ; ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೋರಗೆರೆ ಹಾಗೂ ಗೋಡೆಕೆರೆ; ಕುಣಿಗಲ್ ತಾಲೂಕಿನ ಬಾಗೇನಹಳ್ಳಿ; ಕೊರಟಗೆರೆ ತಾಲೂಕಿನ ಎಲೆರಾಂಪುರ; ಗುಬ್ಬಿ ತಾಲೂಕಿನ ಬಿದರೆ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯು ಬ್ಯಾಟರಿ ಚಾಲಿತ ವೀಲ್ ಛೇರ್, ಶುಲ್ಕ ಮರುಪಾವತಿ, ಪ್ರೋತ್ಸಾಹಧನ ಸೇರಿ ವಿವಿಧ ಸೌಲಭ್ಯ ನೀಡಲು ದೈಹಿಕ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆಯಾ ತಾಲ್ಲೂಕು ಪಂಚಾಯಿತಿಗಳಲ್ಲಿ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್ 30ರೊಳಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖಾ ಕಚೇರಿಗೆ ಸಲ್ಲಿಸಬೇಕು. ಬ್ಯಾಟರಿ ಚಾಲಿತ ವೀಲ್ ಛೇರ್ ಸೌಲಭ್ಯಕ್ಕಾಗಿ ಶೇ.75 ಮತ್ತು ಅದಕ್ಕಿಂತ ಹೆಚ್ಚಿಗೆ ವಿಕಲತೆ (ಈಗಾಗಲೇ ಇಲಾಖೆ ಮತ್ತು ಇತರೆ ಸಂಘ ಸಂಸ್ಥೆಗಳಿಂದ ಯಂತ್ರಚಾಲಿತ ವಾಹನ ಅಥವಾ ಬ್ಯಾಟರಿ ಚಾಲಿತ ವೀಲ್ ಛೇರ್ ಪಡೆಯದಿರುವವರು ಅರ್ಹತೆ ಹೊಂದಿರುತ್ತಾರೆ) ಹೊಂದಿರಬೇಕು. ಅಲ್ಲದೆ, ಎಸ್.ಎಸ್.ಎಲ್.ಸಿ. ಮತ್ತು ನಂತರದ ವ್ಯಾಸಂಗ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ; Cerebral Palsy, Muscular Dystrophy, Parkinsons & Multiple Sclerosis ಅಂಗವಿಕಲತೆ ಹೊಂದಿರುವ ವಿಕಲಚೇತನ ವ್ಯಕ್ತಿಗಳ ಪೋಷಕರು / ಆರೈಕೆದಾರರಿಗೆ ಪ್ರತಿ…
ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2024-25ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಹೊಂದಿರುವ ಇಬ್ಬರು ಅಭ್ಯರ್ಥಿಗಳಿಗೆ ತುಮಕೂರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಕಚೇರಿಯಲ್ಲಿ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಈ ತರಬೇತಿಯು 2025ನೇ ದಿನದರ್ಶಿ(ಕ್ಯಾಲೆಂಡರ್)ಯ ಜನವರಿ ಮಾಹೆಯಿಂದ ಪ್ರಾರಂಭಗೊಂಡು ಡಿಸೆಂಬರ್ 2025ಕ್ಕೆ ಕೊನೆಗೊಳ್ಳಲಿದೆ. ರಾಜ್ಯದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದ, ಕಂಪ್ಯೂಟರ್ ಜ್ಞಾನ ಇರುವ, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಸಂದರ್ಶನದ ಮೂಲಕ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದಂದು 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ…
ತುಮಕೂರು: ತುಮಕೂರು ತಾಲ್ಲೂಕು ಕಸಬಾ ಪೂರ್ವ ಹೋಬಳಿ ಬೆಳಗುಂಬ ಗ್ರಾಮದ ಶ್ರೀ ಗುರುಸಿದ್ದರಾಮೇಶ್ವರ ಮಹಾಸ್ವಾಮಿಯವರ ನೂತನ ದೇವಾಲಯ ಉದ್ಘಾಟನೆ ಹಾಗೂ ವಿಮಾನ ಗೋಪುರ ಕಲಶ ಸ್ಥಾಪನಾ ಕಾರ್ಯಕ್ರಮವು ನವೆಂಬರ್ 8ರಂದು ಜರುಗಲಿದೆ ಎಂದು ತಹಶೀಲ್ದಾರ್ ರಾಜೇಶ್ವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೇವಾಲಯ ಉದ್ಘಾಟನಾ ಕಾರ್ಯಕ್ರಮವನ್ನು ನವೆಂಬರ್ 8ರ ಶುಕ್ರವಾರ ಸಂಜೆ 4.30 ಗಂಟೆಗೆ ಶುಭ ಗೋಧೂಳಿ ಸಮಯದಲ್ಲಿ ಗಂಗಾಪೂಜೆ, ಮಹಾಗಣಪತಿಪೂಜೆ ಮೂಲಕ ಪ್ರಾರಂಭಿಸಲಾಗುವುದು. ನಂತರ ಸಂಜೆ 6 ಗಂಟೆಗೆ ಬೆಳ್ಳಾವಿ ಕಾರದೇಶ್ವರಮಠ ಶ್ರೀಶ್ರೀಶ್ರೀ ಕಾರದ ವೀರಬಸವ ಮಹಾಸ್ವಾಮಿ ದಿವ್ಯಸಾನಿಧ್ಯದಲ್ಲಿ ಧ್ವಜಾರೋಹಣ ಹಾಗೂ ದೇವಾಲಯ ಲೋಕಾರ್ಪಣೆಗೊಳ್ಳಲಿದೆ. ದೇವಾಲಯ ಉದ್ಘಾಟನೆ ಹಾಗೂ ವಿಮಾನ ಗೋಪುರ ಕಲಶ ಸ್ಥಾಪನಾ ಅಂಗವಾಗಿ ನವೆಂಬರ್ 11ರವರೆಗೂ ಅಭಿಷೇಕ, ಹೋಮ, ಪೂರ್ಣಫಲ ಸಮರ್ಪಣೆ ಸೇರಿ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಕಡೆಯ ದಿನ ನವೆಂಬರ್ 11ರ ಬೆಳಿಗ್ಗೆ 11 ಗಂಟೆಗೆ ಪೂಜಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಜರುಗಲಿದೆ. ದೇವಾಲಯ ಉದ್ಘಾಟನೆ…
ತುಮಕೂರು : ಜಿಲ್ಲೆಯ ಮಧುಗಿರಿಯ ವಲಯ ಅಬಕಾರಿ ಇಲಾಖೆಯ ಕಚೇರಿಯಲ್ಲಿ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ದಿನದಂದು ನಾಡ ಧ್ವಜವನ್ನು ಹಾರಿಸದೆ, ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಾಡದೆ ಇರುವುದನ್ನು ಖಂಡಿಸಿ ಸ್ಥಳೀಯ ಕನ್ನಡಪರ ಸಂಘಟನೆಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಿ ಮಧುಗಿರಿ ವಲಯದ ಡಿವೈಎಸ್ಪಿ ಚಂದ್ರಪ್ಪಗೆ ಗೇರಾವ್ ಹಾಕಿದ್ದ ಘಟನೆ ನಡೆದಿತ್ತು. ಕನ್ನಡ ರಾಜ್ಯೋತ್ಸವವು ಕರ್ನಾಟಕದ ನೆಲ ಜಲ ಭಾಷೆ ಸಂಸ್ಕೃತಿ ಪರಂಪರೆಯ ಪ್ರತೀಕ ನಾಡಿನ ಗೌರವ ಸ್ವಾಭಿಮಾನದ ಸಂಕೇತ. ನಮ್ಮ ನಾಡು ನುಡಿಯನ್ನ ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಯುವ ಪೀಳಿಗೆಗೆ ನಮ್ಮ ನಾಡಿನ ಇತಿಹಾಸ ಸಂಸ್ಕೃತಿ ಮತ್ತು ಕಲೆಯ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ರಾಜ್ಯ ಸರ್ಕಾರದ ಸೂಚನೆಯಂತೆ ಈ ಬಾರಿ ವಿಶೇಷವಾಗಿ ಕನ್ನಡ ರಾಜ್ಯೋತ್ಸವವನ್ನು ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳಲ್ಲಿ, ಐಟಿ ಬಿಟಿ ಕಂಪನಿಗಳಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿಯೂ ಸಹ ತಪ್ಪದೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಿ ನಮ್ಮ ಹೆಮ್ಮೆಯ…
ತುಮಕೂರು: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ಅನಿರ್ಬಂಧಿತ ಅನುದಾನದಡಿ ಮೂಲಭೂತ ಸೌಕರ್ಯಕ್ಕೆ ಸಂಬಂಧಿಸಿದಂತೆ 1000 ಕಾಮಗಾರಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದ್ದು, ಎಲ್ಲಾ ಕಾಮಗಾರಿಗಳು ಗುಣಮಟ್ಟದಲ್ಲಿ ಅನುಷ್ಠಾನವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಅಧಿಕಾರಿಗಳಿಗೆ ಸೂಚಿಸಿದರು. ಪಂಚಾಯತ್ ರಾಜ್ ಇಲಾಖೆಗಳ ನಿರ್ವಹಣೆ ಮತ್ತು ದುರಸ್ತಿ, ಕೆರೆಗಳ ವಾರ್ಷಿಕ ನಿರ್ವಹಣೆ ಮತ್ತು ದುರಸ್ತಿ, ಪ್ರಧಾನಮಂತ್ರಿ ಗ್ರಾಮ ಸಡಕ್ ರಸ್ತೆ ಕಾಮಗಾರಿಗಳ ಪರಿಶೀಲನೆ, ಮುಖ್ಯಮಂತ್ರಿಗಳ ವಿಶೇಷ ಅನುದಾನ, ಆರೋಗ್ಯ, ಆಯುಷ್, ಹಿಂದುಳಿದ ವರ್ಗಗಳ ಕಲ್ಯಾಣ, ಕೃಷಿ, ರೇಷ್ಮೆ, ತೋಟಗಾರಿಕಾ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ವಿವಿಧ ಇಲಾಖೆಗಳಿಂದ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನವಾಗುತ್ತಿವೆ. ಈ ಎಲ್ಲಾ ಕಾಮಗಾರಿಗಳು ಉತ್ತಮ ಗುಣಮಟ್ಟದಲ್ಲಿ ಅನುಷ್ಠಾನವಾಗಬೇಕು. ಕಾಮಗಾರಿಗಳ ಗುಣಮಟ್ಟದ ದೃಢೀಕರಣವನ್ನು ಸಂಬಂಧಪಟ್ಟ ಇಲಾಖೆಯವರು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಬೇಕು ಎಂದು ತಿಳಿಸಿದರು. ಮೂಲಭೂತ ಸೌಕರ್ಯಗಳಾದ ಶಾಲೆ, ಅಂಗನವಾಡಿ, ಆರೋಗ್ಯ…
ಕೊರಟಗೆರೆ: ಕಿಟಕಿ ಬಾಗಿಲು ಇಲ್ಲದ ಕೊಠಡಿಯೊಳಗೆ 250ಜನ ವಿದ್ಯಾರ್ಥಿಗಳ ವಾಸ, ಚಳಿಮಳೆ ಗಾಳಿಯ ಭದ್ರತೆಗೆ ವಿದ್ಯಾರ್ಥಿಗಳು ಮಲಗುವ ಚಾಪೆಯೇ ಆಸರೆ, ಸ್ನಾನ ಮಾಡಲು ನೀರು ಬರೋದಿಲ್ಲ ಇನ್ನೂ ಶೌಚಗಳಿಗೆ ದೇವರೇ ಗತಿ, ಇದು ಕೊರಟಗೆರೆ ತಾಲೂಕು ಹಂಚಿಹಳ್ಳಿ ಗ್ರಾಪಂ ಬಜ್ಜನಹಳ್ಳಿ ಏಕಲವ್ಯ ವಸತಿಶಾಲೆಯ ದುಸ್ಥಿತಿ. ಸ್ವೀಚ್ ಬೋರ್ಡು ಪೀಸ್ ಪೀಸ್ ಆಗಿ ಕೊಠಡಿಗಳಿಗೆ ವಿದ್ಯುತ್ ಸಂಪರ್ಕವೇ ಕಡಿತವಾಗಿದೆ. ಸಿಸಿಟಿವಿ ಇಲ್ಲದ ಏಕಲವ್ಯ ವಸತಿ ನಿಲಯಕ್ಕೆ ವಿದ್ಯಾರ್ಥಿಗಳ ಭದ್ರತೆಯೇ ಮರೀಚಿಕೆಯಾಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ಕೊಠಡಿಯಲ್ಲಿ ಮೃತಪಟ್ಟಿದ್ದ ಏಕಲವ್ಯ ವಸತಿಶಾಲೆಯ ದುಸ್ಥಿತಿ ಇದಾಗಿದೆ. ಏಕಲವ್ಯ ವಸತಿಶಾಲೆಗೆ ಕಾಂಪೌಂಡ್ ಇಲ್ಲದೇ ಒಳಗಡೆ ಯಾರು ಬೇಕಾದ್ರು ಬರಬಹುದು. ವಿದ್ಯಾರ್ಥಿಗಳು ಯಾವಾಗ ಬೇಕಾದ್ರು ಹೊರಗಡೆ ಹೋಗುವ ಅವಕಾಶವಿದೆ. ತುಮಕೂರು ಜಿಲ್ಲಾಧಿಕಾರಿ ಭೇಟಿ ನೀಡಿದ ವೇಳೆ ನಿಲಯದ ಪ್ರಾಂಶುಪಾಲ ಮತ್ತು ವಾರ್ಡನ್ ಅವರನ್ನು ತರಾಟೆಗೆತ್ತಿಕೊಂಡರು. 15ದಿನಗಳ ಒಳಗೆ ಮೂಲಭೂತ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದರು. ಪ್ರಾಂಶುಪಾಲ ಮತ್ತು ವಾರ್ಡನ್ ಅಮಾನತಿಗೆ ತುಮಕೂರು ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ವರದಿ:…
ಬೀದರ್: ಕಮಲನಗರ ಪೊಲೀಸರಿಂದ ಬೀಟ್ ಮಟ್ಟದ ರಸ್ತೆ ಸುರಕ್ಷತಾ ಸಪ್ತಾಹ–2024 ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಕಮಲನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಚಾರಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಿಎಸ್ ಐ ಚಂದ್ರಶೇಖರ ತಮ್ಮ ಸಿಬ್ಬಂದಿರವರೊಂದಿಗೆ ಕಮಲ ನಗರದಲ್ಲಿ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಜಿಲ್ಲೆಯಲ್ಲಿ ಅಪಘಾತದ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಬೀದರ ಜಿಲ್ಲಾ ಪೊಲೀಸರು ಸದಾ ಪ್ರಯತ್ನಿಸುತ್ತಿದ್ದು, ಈ ಪ್ರಯತ್ನವು ಪ್ರಸಂಶನಿಯವಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಸಹಕರಿಸಲು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐ.ಪಿ.ಎಸ್. ಕೋರಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಜಿಲ್ಲಾಡಳಿತ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನವೆಂಬರ್ 7 ರಿಂದ 10ರವರೆಗೆ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ಬಾಲಗುರುಮೂರ್ತಿ ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿದ್ದು, ಕ್ರೀಡಾಕೂಟದಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗದಿಂದ 19 ವರ್ಷದೊಳಗಿನ 3000 ವಿದ್ಯಾರ್ಥಿಗಳು ರಾಜ್ಯದ ವಿವಿಧ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳಿಂದ ಆಗಮಿಸಲಿದ್ದಾರೆ. ಕ್ರೀಡಾಕೂಟದ ನಿರ್ಣಾಯಕರಾಗಿ 100 ಅಥ್ಲೆಟಿಕ್ಸ್ ಪರಿಣಿತ ತಾಂತ್ರಿಕ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನವೆಂಬರ್ 7ರಂದು ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು, ಉದ್ಘಾಟನೆ ನಂತರ 1,500 ಮೀಟರ್ ಓಟದ ಸ್ಪರ್ಧೆ ಏರ್ಪಡಿಸಲಾಗಿದೆ. ನಂತರ ನವೆಂಬರ್ 9ರ ಬೆಳಿಗ್ಗೆ 6 ಗಂಟೆಗೆ ನಗರದ ಹೊರವಲಯದ ಊರ್ಡಿಗೆರೆ ರಸ್ತೆ ಸಿದ್ದಗಂಗಾ ಕ್ರಾಸ್ ನಿಂದ ಬಾಲಕಿಯರಿಗೆ…
ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024–25ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಅಂತಿಮ ಹಂತದಲ್ಲಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಯುಜಿಸಿ ಅನುಮೋದಿತ ಸ್ನಾತಕ(ಯು.ಜಿ)/ಸ್ನಾತಕೋತ್ತರ(ಪಿ.ಜಿ) ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದ್ದು, ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ., ಎಂ.ಕಾಂ(Dual Specialization)., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ(AICTE Approved)., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಮೇಲ್ಕಂಡ ಪದವಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಭರ್ತಿಮಾಡಿ ನಂತರ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು. ಪ್ರಥಮ ವರ್ಷದ ಪ್ರವೇಶಾತಿಗೆ 2024ರ ನವೆಂಬರ್ 15 ಕೊನೆಯ ದಿನಾಂಕವಾಗಿದ್ದು, ಈ ಹಿನ್ನೆಲೆಯಲ್ಲಿ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2024ರ ನವೆಂಬರ್…