Subscribe to Updates
Get the latest creative news from FooBar about art, design and business.
- ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
Author: admin
ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 5ರಂದು ಜಿಲ್ಲೆಯ 13 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ನವೆಂಬರ್ 5ರಂದು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಬಾಣಗೆರೆ; ತುರುವೇಕೆರೆ ತಾಲೂಕಿನ ಮಾವಿನಕೆರೆ; ತಿಪಟೂರು ತಾಲೂಕಿನ ಬಜಗೂರು; ಮಧುಗಿರಿ ತಾಲೂಕಿನ ಚಂದ್ರಗಿರಿ; ತುಮಕೂರು ತಾಲೂಕಿನ ಗಳಿಗೇನಹಳ್ಳಿ ಹಾಗೂ ನಿಡುವಳಲು; ಚಿಕ್ಕನಾಯಕನಹಳ್ಳಿ ತಾಲೂಕಿನ ಯಳನಡು ಹಾಗೂ ಬೆಳಗುಲಿ; ಕುಣಿಗಲ್ ತಾಲೂಕಿನ ಅಮೃತೂರು ಹಾಗೂ ತರೆದಕುಪ್ಪೆ; ಕೊರಟಗೆರೆ ತಾಲೂಕಿನ ಹಂಚಿಹಳ್ಳಿ; ಪಾವಗಡ ತಾಲೂಕಿನ ಕೆ.ಟಿ. ಹಳ್ಳಿ; ಗುಬ್ಬಿ ತಾಲೂಕಿನ ಹಾಗಲವಾಡಿ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ಜಿಲ್ಲೆಯಲ್ಲಿ ಪರಿಭಾವಿತ ಅರಣ್ಯಕ್ಕಾಗಿ ಗುರುತಿಸಲಾಗಿರುವ 13,000 ಹೆಕ್ಟೇರ್ ಪ್ರದೇಶವನ್ನು ಅರಣ್ಯ, ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಗಳು ಜಂಟಿಯಾಗಿ ಸರ್ವೇ ನಡೆಸಿ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 13,000 ಹೆಕ್ಟೇರ್ ಪ್ರದೇಶವನ್ನು ಪರಿಭಾವಿತ ಅರಣ್ಯ ಪ್ರದೇಶವೆಂದು ಗುರುತಿಸಲಾಗಿದೆ. ಗುರುತಿಸಲಾಗಿರುವ ಪ್ರದೇಶಗಳಲ್ಲಿ ಸರ್ಕಾರಿ/ಖಾಸಗಿ ಪ್ರದೇಶಗಳನ್ನು ಪ್ರತ್ಯೇಕಿಸಬೇಕೆಂದು ತಿಳಿಸಿದರು. ಕಂದಾಯ ಇಲಾಖೆ ವ್ಯಾಪ್ತಿಗೆ ಬರುವ ಸಾಗುವಳಿ ಚೀಟಿ, ಬಗರ್ ಹುಕುಂ, ಆಧಾರ್ ಸೀಡಿಂಗ್, ಪಿಂಚಣಿ, ಜನತಾ ದರ್ಶನ, ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವ ಮೂಲಕ ಜಿಲ್ಲೆಯಲ್ಲಿ ಜನಸ್ನೇಹಿ ಆಡಳಿತವನ್ನು ಬಲ ಪಡಿಸಬೇಕು ಎಂದು ತಿಳಿಸಿದರು. ತಹಶೀಲ್ದಾರ್ಗಳು ತಮ್ಮ ವ್ಯಾಪ್ತಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಟ್ಟಿಗೆ ಪ್ರತಿದಿನ ಪ್ರಗತಿ ಪರಿಶೀಲನಾ ಸಭೆ ಕೈಗೊಂಡು ಬಗರ್ ಹುಕುಂ ಸಂಬಂಧಿಸಿದಂತೆ ಪ್ರಗತಿ ಸಾಧಿಸಬೇಕು…
ತುಮಕೂರು: ರೈತರಿಗೆ ವಕ್ಫ್ ಬೋರ್ಡ್ ಕಿರುಕುಳ ಕೊಡುತ್ತಿದ್ದು ತಕ್ಷಣ ವಕ್ಫ್ ಬೋರ್ಡ್ ವಜಾಗೊಳಿಸುವಂತೆ ಆಗ್ರಹಿಸಿ ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನ ಧರಣಿ ನಡೆಸಲಾಯಿತು. ಬಿಜೆಪಿ ಶಾಸಕರಾದ ಜ್ಯೋತಿಗಣೇಶ ಹಾಗೂ ಸುರೇಶ ಗೌಡ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿತ್ತು. ತಕ್ಷಣವೇ ವಕ್ಫ್ ಬೋರ್ಡ್ ವಜಾಗೊಳಿಸಬೇಕು ಅಲ್ಲದೆ ಈ ರೀತಿಯ ಗೊಂದಲಕ್ಕೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕು. ಸಚಿವ ಜಮೀರ್ ಅಹ್ಮದ್ ಕೂಡ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
1) ಜಾನಪದ ಲೋಕೋತ್ಸವ ಪ್ರಶಸ್ತಿ –2015, 2) ಜಾನಪದ ತಜ್ಞ — ನಾಡೋಜ ಎಚ್.ಎಲ್.ನಾಗೇಗೌಡ ಜನ್ಮ ಶತಮಾನೋತ್ಸವ ಜಾನಪದ ಲೋಕ ಪ್ರಶಸ್ತಿ-2018,. 3) ಅಂತರರಾಷ್ಟ್ರೀಯ ಮಹಿಳಾ ಪ್ರಶಸ್ತಿ–2015 (ತುಮಕೂರು ವಿವಿ), 4) ವೀಚಿ ಸಾಹಿತ್ಯ ಪ್ರಶಸ್ತಿ –2017, 5) ಬೆಂಗಳೂರು ಸೃಷ್ಟಿಕಲಾ ಮಂದಿರದ ಸೃಷ್ಟಿ ಕಲಾ ಗೌರವ ಪುರಸ್ಕಾರ– 2018, 6) ಭೀಮಪುತ್ರಿ ಬ್ರಿಗೇಡ್ ‘ಅಕ್ಷರದವ್ವ ಸಾವಿತ್ರಿಬಾ ಫುಲೆ ಪ್ರಶಸ್ತಿ –2021, 7) ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ತಾಯಮ್ಮ ಎಸ್.ಸಿ.ಮಲ್ಲಯ್ಯ ಜಾನಪದ ದತ್ತಿ ಪ್ರಶಸ್ತಿ –2023 8) ತುಮಕೂರು ಜಿಲ್ಲಾ 2024 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಇನ್ನೂ ಹಲವಾರು ಪ್ರಶಸ್ತಿ- ಗೌರವಗಳನ್ನು ಪಡೆದಿರುವ ಜಾನಪದ ಹಾಡುಗಾರ್ತಿ- ಕಲಾವಿದೆ ವಡ್ಡಗೆರೆ ಕದರಮ್ಮ ಅವರ ಸಾಧನೆಯನ್ನು ಕುರಿತು ಪ್ರಜಾವಾಣಿ ಪತ್ರಿಕೆಯು, ‘ಅಂತರರಾಷ್ಟ್ರೀಯ ಗ್ರಾಮೀಣ ಮಹಿಳಾ ದಿನ’ದ ಪ್ರಯುಕ್ತ 15–10–2018 ರ ‘ಸಾಧಕಿಯರಿಗೆ ಸಲಾಂ’ ಎಂಬ ವಿಶೇಷ ವ್ಯಕ್ತಿಚಿತ್ರ ಲೇಖನ ಪ್ರಕಟಿಸಿತ್ತು. ಉದ್ಯಮಶೀಲ ಮಹಿಳೆಯರ ಅಂತರ್ಜಾಲ ಮಾಸಿಕ ‘ಸುನೀತಾ’ ವಡ್ಡಗೆರೆ ಕದರಮ್ಮ…
ಚಿಕ್ಕನಾಯಕನಹಳ್ಳಿ: ಹೇಮಾವತಿ ನೀರಿಗಾಗಿ ರೈತರು ಬೀದಿಗಿಳಿದಿದ್ದಾರೆ. ಸರ್ಕಾರಕ್ಕೆ 15 ದಿನಗಳ ಗಡುವನ್ನು ರೈತರು ನೀಡಿದ್ದಾರೆ. ತಾಲೂಕಿನ 26 ಕೆರೆಗಳಿಗೆ ನೀರು ಬಿಡಲೇಬೇಕೆಂದು ರೈತರು ಒತ್ತಾಯಿಸಿದರು. ತಾಲೂಕಿನ ರೈತರು ಹಾಗೂ ದಲಿತ ಪರ ಸಂಘಟನೆಗಳು, ಕನ್ನಡ ರಕ್ಷಣಾ ವೇದಿಕೆ ಮತ್ತು ವಿವಿಧ ಸಂಘಟನೆಗಳು ಸೇರಿ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ನೂರಾರು ಸಂಖ್ಯೆಯಲ್ಲಿ ರೈತರು ಪಾಲ್ಗೊಂಡು ರೈತ ಮಹಿಳೆಯರು ಖಾಲಿ ಬಿಂದಿಗೆ ಹಿಡಿದುಕೊಂಡು ಪ್ರತಿಭಟನೆಗೆ ಇಳಿದರು. ರಸ್ತೆ ತಡೆಯಲು ಮುಂದಾದ ರೈತರನ್ನು ಪೊಲೀಸರು ಅಡ್ಡಗಟ್ಟಿ ಸ್ವಲ್ಪ ಸಮಯ ನೆಹರೂ ಸರ್ಕಲ್ ನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು. ನಂತರ ತಹಶೀಲ್ದಾರ್ ಕಛೇರಿಗೆ ಪಾದಯಾತ್ರೆಯೊಂದಿಗೆ ಬಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ರಾಮನಗರ: ಕಾಂಗ್ರೆಸ್ ಸರ್ಕಾರವನ್ನು ಮುಂದಿನ ಎಂಟೂವರೆ ವರ್ಷಗಳ ಕಾಲ ಯಾರೂ ಅಲುಗಾಡಿಸಲು ಆಗುವುದಿಲ್ಲ. ಕುಮಾರಸ್ವಾಮಿ ಮತ್ತೊಂದು ಜನ್ಮ ಎತ್ತಿ ಬಂದರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎಲೆ ತೋಟದ ಹಳ್ಳಿ, ಅಕ್ಕೂರು ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಾಲ್ಕೈದು ದಿನವಿರುವಾಗ ಜನರ ಬಳಿಗೆ ಬರುವ ಕುಮಾರಸ್ವಾಮಿ ಅವರೇ, ನಿಮ್ಮ ಈ ಧೋರಣೆಯನ್ನು ಇನ್ನೆಷ್ಟು ದಿನ ಮುಂದುವರಿಸಿಕೊಂಡು ಹೋಗುತ್ತೀರಿ ಎಂದು ಪ್ರಶ್ನಿದರು. ರಾಮನಗರದಿಂದ ಕುಮಾರಸ್ವಾಮಿ ಶಾಸಕ, ಮುಖ್ಯಮಂತ್ರಿ, ಸಂಸದರಾಗಿದ್ದರು. ಅವರ ತಂದೆ ಅದೇ ಕ್ಷೇತ್ರದಿಂದ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯಾಗಿದ್ದರು. ಅವರು ಕ್ಷೇತ್ರದಲ್ಲಿ ಕೆಲಸ ಮಾಡಿದ್ದರೆ ನಿಖಿಲ್ ಏಕೆ ಸೋಲುತ್ತಿದ್ದರು? ಇನ್ನೆಷ್ಟು ದಿನ ಈ ರಾಮನಗರ ಹಾಗೂ ಚನ್ನಪಟ್ಟಣ ಜನರಿಗೆ ಟೋಪಿ ಹಾಕಲು ಸಾಧ್ಯ ಎಂದು ಅವರು ಪ್ರಶ್ನಿಸಿದರು. ಕಮಲ ಕೆರೆಯಲ್ಲಿ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಇದನ್ನು ಯೋಗೇಶ್ವರ್ ಅವರು ಅರಿತುಕೊಂಡು ಕಾಂಗ್ರೆಸ್ ಸರ್ಕಾರದ…
ತುಮಕೂರು: ಕನ್ನಡ ನಾಡು–ನುಡಿಗಾಗಿ ಶ್ರಮಿಸಿದ ಹೆಸರಾಂತ ಸಾಹಿತಿಗಳ ವಸ್ತು ಸಂಗ್ರಹಾಲಯ ಹಾಗೂ ಕಲಾಮಂದಿರದ ನಿರ್ಮಾಣ ಮಾಡುವ ಚಿಂತನೆಯಿದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ತಿಳಿಸಿದರು. ಜಿಲ್ಲಾಡಳಿತ ವತಿಯಿಂದ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು-ನುಡಿ ಕುರಿತು ಶುಕ್ರವಾರ ಆಯೋಜಿಸಿದ್ದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಹಿತಿಗಳು, ವಿಚಾರವಾದಿಗಳು, ಚಿಂತಕರು, ವಿಮರ್ಶಕರು, ವಿಶ್ಲೇಷಕರು ಒಂದೆಡೆ ಸೇರಿ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಬೇಕು. ಸಾಹಿತ್ಯ ಕ್ಷೇತ್ರ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚಿಂತನೆ, ಚರ್ಚೆ, ವಿಮರ್ಶೆ, ಟೀಕೆ–ಟಿಪ್ಪಣಿಗಳು ನಡೆಯಬೇಕು. ಶಿಕ್ಷಣ ಕ್ಷೇತ್ರದಲ್ಲಿರುವ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆಗಳಾಗಬೇಕು ಎಂದು ತಿಳಿಸಿದರಲ್ಲದೆ ನಮ್ಮ ಕಾಲದಲ್ಲಿ ಶಾಲಾ–ಕಾಲೇಜು, ವಿಶ್ವವಿದ್ಯಾನಿಲಯಗಳಿಂದ ಚರ್ಚಾ ಸ್ಪರ್ಧೆಗಳನ್ನು ಏರ್ಪಡಿಸಿ ಗಂಭೀರ ವಿಷಯಗಳ ಬಗ್ಗೆ ಪರ–ವಿರೋಧದ ಚರ್ಚೆಗಳಾಗುತ್ತಿದ್ದವು. ಆದರೆ ಇತ್ತೀಚಿನ ದಿನಗಳಲ್ಲಿ ವಿಶ್ವವಿದ್ಯಾನಿಲಯಗಳಲ್ಲಿಯೂ ಚರ್ಚೆಗಳು ನಡೆಯದಿರುವುದು…
ತುಮಕೂರು: ಇತ್ತೀಚಿನ ದಿನಗಳಲ್ಲಿ ತುಮಕೂರು ಜಿಲ್ಲೆಯಾದ್ಯಂತ ಹಲವಾರು ಅಪರಾಧ ಕೃತ್ಯಗಳು ನಿರಂತರವಾಗಿ ನಡೆಯುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ಪೊಲೀಸ್ ವ್ಯವಸ್ಥೆ ವಿಫಲವಾಗಿದೆ ಎನ್ನುವ ಮಾತು ಕೇಳಿ ಬಂದಿದೆ. ಕಳ್ಳರು ಬೈಕ್ ಕಳ್ಳತನ ಮಾಡಲು ಬಂದಾಗ ಮನೆಯವರಿಗೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಪರಾಧಕ್ಕೆ ಕುಮಕ್ಕು ನೀಡುತ್ತಿದ್ದ ಪೊಲೀಸರು ಸಸ್ಪೆಂಡ್ ಆಗಿದ್ದಾರೆ. ಹೀಗೆ ಹತ್ತು ಹಲವು ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ವಿಫಲರಾಗಿದ್ದಾರೆ. ಈ ನಿಷ್ಕ್ರಿಯಕ್ಕೆ ಮೂಲ ಕಾರಣವನ್ನು ಹುಡುಕಿದರೆ ಜನಸಂಖ್ಯೆಗನುಗುಣವಾಗಿ ಪೋಲಿಸ್ ಸಿಬ್ಬಂದಿ ಇಲ್ಲದಿರುವುದು ಮತ್ತು ಪೊಲೀಸ್ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರದಿಂದ ನಾಗರಿಕರು ತಲ್ಲಣಗೊಂಡಿರುವುದು ಎನ್ನುವ ಅಭಿಪ್ರಾಯ ಕೇಳಿ ಬಂದಿದೆ. ತಿಪಟೂರಿನಲ್ಲಿ ನಡೆದ ಘಟನೆ: ಮುಂಜಾನೆ ತಿಪಟೂರಿನಲ್ಲಿ ನಾಲ್ಕು ಮೂವತ್ತರ ಸುಮಾರಿಗೆ ಕಳ್ಳ ಮನೆಗೆ ನುಗ್ಗಲು ಯತ್ನಿಸಿದ ಸಂದರ್ಭದಲ್ಲಿ ಮನೆ ಮಾಲೀಕರು ಲೈಟ್ ಗಳನ್ನು ಹಾಕಿ ಕೂಗಾಡಿದರು ಆಗ ಕಳ್ಳ ತಕ್ಷಣ ಓಡಿ ಹೋಗಿದ್ದಾನೆ. ಈ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ . ಪೊಲೀಸರ ಭಯವಿಲ್ಲ!! ತವರು ಜಿಲ್ಲೆಯ ಜನಪ್ರತಿನಿಧಿ ಗೃಹ ಸಚಿವರಾಗಿರುವುದರಿಂದ ಜಿಲ್ಲೆಯ …
ತುಮಕೂರು: ನಟ ದರ್ಶನ್ ಅವರು ಗುರು ರಾಘವೇಂದ್ರ ಸನ್ನಿದಾನದಲ್ಲಿ ಗೋಮಾತೆ ಪೂಜೆ ನೆರವೇರಿಸಿದರೆ ದೋಷ ನಿವಾರಣೆ ಆಗಲಿದೆ ಎಂದು ತುಮಕೂರಿನ ಮೂಕಾಂಬಿಕೆ ದೇವಿಯ ಉಪಾಸಕರಾಗಿರುವ ಡಾ.ಲಕ್ಷ್ಮೀಕಾಂತ ಆಚಾರ್ಯ ಭವಿಷ್ಯ ನುಡಿದಿದ್ದಾರೆ. ದರ್ಶನ್ ಜಾಮೀನು ಬಗ್ಗೆ ಭವಿಷ್ಯ ಹೇಳಿದ್ದ ಮೂಕಾಂಬಿಕೆ, ಮೂಕಾಂಬಿಕೆ ಭವಿಷ್ಯ ನುಡಿದ ದಿನವೇ ದರ್ಶನ್ ಗೆ ಜಾಮೀನು ಸಿಕ್ಕಿತ್ತು. ರಾಯರ ದರ್ಶನ ಮಾಡಿದ್ರೆ ಒಳಿತು.ದರ್ಶನ್ ಗೆ ರಾಯರ ಅನುಗ್ರಹವಾಗಬೇಕಿದೆ ಎಂದಿದ್ದಾರೆ. ಈ ವಿಚಾರದಲ್ಲಿ ದರ್ಶನ್ ನಿರ್ಲಕ್ಷ್ಯ ಮಾಡಬಾರದು. ರಾಯರ ಸನ್ನಿದಿಯಲ್ಲಿ ಗೋಪೂಜೆ ಮಾಡಿದ್ರೆ ಆರೋಗ್ಯ ಸರಿ ಹೋಗುತ್ತೆ. 2027ರವರೆಗೂ ದರ್ಶನ್ ಗೆ ತೊಂದರೆ ತಪ್ಪಿದಲ್ಲ. 2027ರ ನಂತರ ಬದಲಾವಣೆ ಆಗಲಿದೆ ಎಂದಿದ್ದಾರೆ. ಸಿನಿಮಾ ಕೆರಿಯರ್ ಬಗ್ಗೆ ಸ್ವಲ್ಪದಿನ ಕಾಯಬೇಕಿದೆ ಎಂದಿದ್ದಾರೆ. ನಟ ದರ್ಶನ್ ಗೆ ಗುರುದೋಷ ಇದೆ. ದೋಷ ನಿವಾರಣೆ ಮಾಡಿಕೊಂಡ್ರೆ ಮಾತ್ರ ಆರೋಗ್ಯ ಸುಧಾರಣೆ ಆಗಲಿದೆ. ದರ್ಶನ್ ಗೆ ಗುರು ರಾಯರ ಆಶೀರ್ವಾದ ಬೇಕಿದೆ. ದರ್ಶನ್ ಆರೋಗ್ಯದ ಬಗ್ಗೆ ಮೂಕಾಂಬಿಕೆ ದೇವಿ ಸೂಚನೆ ನೀಡಿತ್ತು. ಈಗ ದರ್ಶನ ಆರೋಗ್ಯ…
ಬೀದರ್: 30 ಗ್ರಾಂ.ನ ಚಿನ್ನದ ಸರ ಕಳೆದುಕೊಂಡ ಮಹಿಳೆಗೆ ಪೊಲೀಸರು ತಕ್ಷಣವೇ ಸ್ಪಂದಿಸಿ, ಚಿನ್ನದ ಸರವನ್ನು ಪತ್ತೆ ಮಾಡಿ ಹಸ್ತಾಂತರಿಸಿರುವ ಘಟನೆ ಬಸವಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸವಕಲ್ಯಾಣದ ಮಹಿಳಾ ಗ್ರಾಹಕರೊಬ್ಬರು ದೀಪಾವಳಿ ಹಬ್ಬದ ಪ್ರಯುಕ್ತ ವಸ್ತುಗಳನ್ನು ಖರೀದಿಸಲು ಅಂಗಡಿಗಳಿಗೆ ಬಂದಿದ್ದು, ಬೇರೆ, ಬೇರೆ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸಿದ್ದರು, ಬಳಿಕ ಮನೆಗೆ ಹೋಗುವ ಸಮಯದಲ್ಲಿ 30 ಗ್ರಾಂ. ಬಂಗಾರದ ಆಭರಣವನ್ನು ಕಳೆದುಕೊಂಡಿರುತ್ತಾರೆ. ಎಷ್ಟು ಹುಡುಕಾಡಿದರೂ ಸಿಗದ ಕಾರಣ ಅವರು ಬಸವಕಲ್ಯಾಣದ ಪೊಲೀಸ್ ಠಾಣೆಗೆ ಬಂದು ಮಾಹಿತಿ ನೀಡಿದ್ದರು. ತಕ್ಷಣ ಕಾರ್ಯ ಪ್ರವರ್ತರಾದ ಪಿ.ಎಸ್.ಐ ಅಂಬರೀಶ ರವರು ತಮ್ಮ ಠಾಣೆಯ ನಿಪೂಣ ಅಪರಾಧ ವಿಭಾಗದ ಸೀಮನ್, ಅಶೋಕ, ಗೌಸುದ್ದಿನ್, ಫ್ರಾನ್ಸಿಸ್, ವಿನೋದ ರವರ ಒಂದು ತಂಡವನ್ನು ರಚಿಸಿದ್ದು, ತಂಡವು ಕಾರ್ಯ ಪ್ರವರ್ತಗೊಂಡಿದ್ದು, ಸಿಬ್ಬಂದಿಯವರು ಮಹಿಳೆಯು ಯಾವ ಯಾವ ಅಂಗಡಿಗಳಲ್ಲಿ ಖರೀದಿಸಿದ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿಯಲ್ಲಿರುವ ಸಿ.ಸಿ ಟಿ.ವಿಯನ್ನು ಪರಿಶೀಲಿಸಿ ಬಂಗಾರವು ಬಿದ್ದಿದ್ದನ್ನು ಗಮನಿಸಿ ಚಿನ್ನದ ಸರವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.…