Author: admin

ತುಮಕೂರು: ರಾಷ್ರೀಯ ಹಾಗೂ ರಾಜ್ಯಹಬ್ಬಗಳ ಆಚರಣೆಯ ದಿನಗಳನ್ನುರಜಾ ದಿನವೆಂದು ಪರಿಗಣಿಸದೆ, ದೇಶ, ನಾಡು-ನುಡಿಗಾಗಿ ಶ್ರಮಿಸುವ ಕರ್ತವ್ಯ ದಿನವೆಂದು ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯವು ಆಯೋಜಿಸಿದ್ದ 69ನೆಯ ಕನ್ನಡರಾಜ್ಯೋತ್ಸವ ಆಚರಣೆಯಲ್ಲಿ ಮಾತನಾಡಿದ ಅವರು ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಕನ್ನಡ ಭಾಷೆ ಆಡಳಿತ ಭಾಷೆಯಾಗಬೇಕು.‘ಕನ್ನಡ ಮಾತನಾಡಿ, ಕನ್ನಡದಲ್ಲೇ ವ್ಯವಹರಿಸಿ’ಎಂದುಕಡ್ಡಾಯ ಮಾಡುವ ಕಾಲದಲ್ಲಿ ನಾವಿರುವುದು ಬೇಸರದ ಸಂಗತಿ,ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ ಎಂದರು. ಒತ್ತಾಯಪೂರ್ವಕವಾಗಿಯಾವುದೇ ಭಾಷೆಯನ್ನುಯಾರ ಮೇಲೂ ಹೇರುವ ಬದಲು,ಕನ್ನಡದ ನೆಲ, ಜಲ, ಗಾಳಿಯ ಮಹತ್ವ ತಿಳಿದು, ಭಾಷೆಯನ್ನು ಬಳಸಿ, ಉಳಿಸಿದರೆ ಅವರೂ ಕನ್ನಡತಾಯಿಯ ಮಕ್ಕಳು.ಕರ್ನಾಟಕದಗಡಿ ಭಾಗಗಳಲ್ಲಿ ಕನ್ನಡ ಭಾಷೆ ಮಾಯವಾಗುತ್ತಿರುವುದು ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು. ವಿವಿ ಕುಲಸಚಿವೆ ನಾಹಿದಾ ಜಮ್ ಜಮ್, ರಾಷ್ರೀಯ ಹಬ್ಬಗಳ ಆಚರಣೆ ಸಂಯೋಜಕ ಡಾ.ಎ.ಎಂ.ಮಂಜುನಾಥ, ಹಣಕಾಸು ಅಧಿಕಾರಿ ನರಸಿಂಹಮೂರ್ತಿ ಹಾಗೂ ವಿವಿಯ ಬೋಧಕ–ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು :ನವದೆಹಲಿಯ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ರೈಲ್ವೆ ಮತ್ತು ಜಲ ಶಕ್ತಿ ಸಚಿವ ವಿ. ಸೋಮಣ್ಣ ಭಾಗವಹಿಸಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶದ ರಾಜಧಾನಿ ನವದೆಹಲಿಯಲ್ಲಿ ತಾಯಿ ಕನ್ನಡಾಂಬೆಯ ಪೂಜೆ ಮತ್ತು ಧ್ವಜಾರೋಹಣ ನೆರವೇರಿಸುವ ಸದಾವಕಾಶ ನನಗೆ ಲಭ್ಯವಾಗಿದೆಯೆಂದು ಅವರು ಹರ್ಷ ವ್ಯಕ್ತ ಪಡಿಸಿದರು. ದೆಹಲಿ ಕರ್ನಾಟಕ ಸಂಘದಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿದ್ದ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರು ಹಾಗೂ ಇತರ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿ, ಇನ್ನು ಮುಂದೆಯೂ ಕನ್ನಡ ಪರ ಹತ್ತಾರು ಕಾರ್ಯಕ್ರಮಗಳನ್ನು ವಿಶೇಷ ರೀತಿಯಿಂದ ಆಯೋಜಿಸುವಂತೆ ಸಲಹೆ ನೀಡಿದರು. ಕರ್ನಾಟಕ ಏಕೀಕರಣಕ್ಕೆ ಹೋರಾಡಿದ ಮಹನೀಯರ ವ್ಯಕ್ತಿತ್ವವನ್ನು ರಾಷ್ಟ ಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಅವರ ಬಗ್ಗೆ ಇಂಗ್ಲೀಷ್ ಮತ್ತು ಹಿಂದಿ ಭಾಷೆಗಳಲ್ಲಿ ಪ್ರಕಟಣೆಗಳನ್ನು ಹೊರತರುವಂತೆ ಸಲಹೆ ನೀಡಿದರು. ರಾಷ್ಟç ರಾಜಧಾನಿ ದೆಹಲಿಯಲ್ಲಿ ಕನ್ನಡ ಮತ್ತು ಕನ್ನಡ ಸಂಘಟನೆಗಳ ಅಸ್ತಿತ್ವವನ್ನು ಕಾಯ್ದುಕೊಳ್ಳಲು ದೆಹಲಿ ಕನ್ನಡಿಗರೆಲ್ಲರೂ ಸಮಾನ…

Read More

ಇಂಫಾಲ: ಸಬ್‌ ಇನ್‌ಸ್ಪೆಕ್ಟರ್‌ ಒಬ್ಬರನ್ನು ಪೊಲೀಸ್ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಣಿಪುರದಲ್ಲಿ ನಡೆದಿದೆ. ಮಣಿಪುರ ಪೊಲೀಸ್‌‍ ಪೇದೆಯೊಬ್ಬರು ಮಾತಿನ ಚಕಮಕಿಯ ನಂತರ ತನ್ನ ಹಿರಿಯ ಸಹೋದ್ಯೋಗಿ, ಸಬ್‌ ಇನ್‌ಸ್ಪೆಕ್ಟರ್‌ ಶ್ರೇಣಿಯ ಪೊಲೀಸ್‌‍ ಅಧಿಕಾರಿಯ ಮೇಲೆ ಮಾರಣಾಂತಿಕವಾಗಿ ಗುಂಡು ಹಾರಿಸಿದ್ದಾರೆ. ಕಾನ್ಸ್ ಟೇಬಲ್‌ ಬಿಕ್ರಿಮ್‌ಜಿತ್‌ ಸಿಂಗ್‌ ಅವರಿಂದ ಕೊಲೆಯಾದ ಎಸ್ ಐ ಅನ್ನು ಪಹಜಹಾನ್‌ ಎಂದು ಗುರುತಿಸಲಾಗಿದೆ. ಮಣಿಪುರದ ಹಿಂಸಾಚಾರ ಪೀಡಿತ ಜಿರಿಬಾಮ್‌ ಜಿಲ್ಲೆಯಲ್ಲಿ ಇಬ್ಬರ ನಡುವೆ ಸಂಭವಿಸಿದ ಜಗಳದ ಕಾರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಕ್ಷಣ ಆರೋಪಿ ಕಾನ್ ಸ್ಟೆಬಲ್‌ನನ್ನು ಇತರ ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಂಡೀಗಢ: ಪಂಜಾಬ್ ನ ಫತೇಘರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್ ರೈಲ್ವೆ ನಿಲ್ದಾಣದ ಬಳಿ ಹೌರಾ ಮೇಲ್ನ ಜನರಲ್ ಕೋಚ್‌ನಲ್ಲಿ ಪಟಾಕಿ ಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ನಾಲ್ವರು ಪ್ರಯಾಣಿಕರಿಗೆ ಗಾಯವಾಗಿದೆ. ಶನಿವಾರ ರಾತ್ರಿ 10:30ರ ಸುಮಾರಿಗೆ ರೈಲು ಅಮೃತಸರದಿಂದ ಹೌರಾಕ್ಕೆ ತೆರಳುತ್ತಿದ್ದಾಗ ಪಟಾಕಿಗಳನ್ನು ತುಂಬಿದ್ದ ಪ್ಲಾಸ್ಟಿಕ್ ಬಕೆಟ್ ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರನ್ನು ಫತೇಘರ್ ಸಾಹಿಬ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಗಮೋಹನ್ ಸಿಂಗ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚನ್ನಪಟ್ಟಣ: ನಮ್ಮದು ಅಭಿವೃದ್ಧಿ ರಾಜಕಾರಣ ಎದುರಾಳಿಗಳ ಸ್ಟಾಟರ್ಜಿ ಏನೇ ಆಗಿರಲಿ. ನಾನು ಯಾವುದಕ್ಕೂ ಪ್ರವೋಕ್ ಆಗೋದಿಲ್ಲ ಎಂದು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು. ಚನ್ನಪಟ್ಟಣ ಕ್ಷೇತ್ರದ ಅಕ್ಕೂರು ಹೊಸಹಳ್ಳಿಯಿಂದ ಪ್ರಚಾರ ಆರಂಭಿಸಿದ ನಿಖಿಲ್ ಕುಮಾರಸ್ವಾಮಿ ಅಕ್ಕೂರು, ಸಾದರಹಳ್ಳಿ ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆದರು. ಇದೇ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮುಖಂಡರು ನನ್ನ ಜತೆ ಹೆಜ್ಜೆ ಹಾಕುತಿದ್ದಾರೆ. ಯಡಿಯೂರಪ್ಪ ಅವರೇ ನನ್ನ ಹೆಸರು ಘೋಷಣೆ ಮಾಡಿದ್ದಾರೆ. ದೇವೆಗೌಡರು ನಾಳೆಯಿಂದ ಗ್ರಾಮಪಂಚಾಯತಿ ಮಟ್ಟದಿಂದ ಪ್ರಚಾರ ಮಾಡಬೇಕಿತ್ತು. ಆದರೆ ಆರೋಗ್ಯ ಸ್ವಲ್ಪ ಸರಿ ಇಲ್ಲ ಎಂದು ತಿಳಿಸಿದರು. ಇವತ್ತು 25 ಹಳ್ಳಿಗೆ ಹೋಗ್ತಾ ಇದ್ದೇನೆ 107 ಹಳ್ಳಿಗೆ ಇನ್ನೂ ಹೋಗುವುದು ಬಾಕಿ ಇದೆ ನಿಮ್ಮೆಲರ ಆಶೀರ್ವಾದ ಯುವಕ ನಿಖಿಲ್ ಮೇಲೆ ಇರಲಿ ಎಂದು ಮನವಿ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಹಿನ್ನೆಲೆ ಮಾದನಾಯನಹಳ್ಳಿಯ ಅಪಾರ್ಟ್ ಮೆಂಟ್ ಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಅಪಾರ್ಟ್ಮೆಂಟ್ ಗೆ ಹೋಗೋದು, ಬರುವುದನ್ನು ಮಾಡುತ್ತಿದ್ದರು. ಕಳೆದ ಐದಾರು ದಿನಗಳಿಂದ ಗುರುಪ್ರಸಾದ್ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿರಲಿಲ್ಲ. ಸ್ಥಳೀಯ ನಿವಾಸಿಗಳು ಹೇಳುವ ಪ್ರಕಾರ ಅವರು ಐದಾರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಕೆಲವು ವಿಚಾರಗಳ ಬಗ್ಗೆ, ಹಣಕಾಸು ವಿಚಾರವಾಗಿಯೂ ಗುರುಪ್ರಸಾದ್ ಬೇಸರದಲ್ಲಿದ್ದರು ಎನ್ನುವ ಮಾಹಿತಿ ಗೊತ್ತಾಗಿದೆ. ಫ್ಲ್ಯಾಟ್ ಬಾಗಿಲು ತೆಗೆದು ತಜ್ಞರ ತಂಡ ಪರಿಶೀಲನೆ ನಡೆಸಿದೆ. ಘಟನೆಯ ಬಗ್ಗೆ ಮಾದನಾಯಕನಹಳ್ಳಿ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ನಾವು ಬಿಡುಗಡೆ ಮಾಡುತ್ತೇವೆ ಎಂದು ಸಿಎಂ ಸಿದ್ದದರಾಮಯ್ಯ ಹೇಳಿದ್ದಾರೆ. ವಿಜಯೇಂದ್ರ ಅವರೇ, ಪ್ರಧಾನಿ ನರೇಂದ್ರ ಮೋದಿ ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ ಎಂದರು. ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು ಬಿಜೆಪಿ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ…

Read More

ತಿರುವನಂತಪುರ: ಕಳೆದ ಏಪ್ರಿಲ್ ನಲ್ಲಿ ನಡೆದ ತ್ರಿಶೂರ್ ಪೂರಂ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸಚಿವ ಸುರೇಶ್ ಗೋಪಿ ಮತ್ತು ಇತರ ಇಬ್ಬರ ವಿರುದ್ಧ ಆಂಬ್ಯುಲೆನ್ಸ್ ದುರುಪಯೋಗಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಮತ್ತು ಆಂಬ್ಯುಲೆನ್ಸ್ ಚಾಲಕನ ವಿರುದ್ಧ ತ್ರಿಶೂರ್ ಪೂರ್ವ ಪೊಲೀಸರು ಭಾನುವಾರ ಎಫ್ ಐಆರ್ ದಾಖಲಿಸಿದ್ದಾರೆ. ಕೇಂದ್ರ ಸಚಿವರ ವಿರುದ್ಧ ಐಪಿಸಿಯ ಸೆಕ್ಷನ್ 279 (ಸಾರ್ವಜನಿಕ ಮಾರ್ಗದಲ್ಲಿ ದುಡುಕಿನ ಚಾಲನೆ ಅಥವಾ ಸವಾರಿ) ಮತ್ತು 34 (ಸಾಮಾನ್ಯ ಉದ್ದೇಶಕ್ಕಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 179, 184, 188 ಮತ್ತು 192 ನ್ನು ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. . ಎಫ್‌ಐಆರ್ ಪ್ರಕಾರ, ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಅಂದಿನ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿದ್ದ ಸುರೇಶ್ ಗೋಪಿ ಮತ್ತು ಇತರ…

Read More

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅದಿದೇವತೆ ಹಾಸನಾಂಬೆ ದೇವಾಲಯದ ಬಾಗಿಲು ಇಂದು ಶಾಸ್ತ್ರೋಕ್ತವಾಗಿ ಮುಚ್ಚಲಾಗಿದೆ. ಈ ಮೂಲಕ ಈ ವರ್ಷ ದೇವಿಯ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಮುಂದಿನ ವರ್ಷ ಮತ್ತೆ ದೇವಾಲಯದ ಬಾಗಿಲು ತೆರೆಯಲಿದೆ. ಹಾಸನಂಬೆ ದೇವಿಗೆ ವಿಶೇಷ ಪೂಜೆ, ಸ್ವಚ್ಛತೆ, ಸಿಂಗಾರ ಪೂಜಾ ಕೈಂಕೈರ್ಯದ ಬಳಿಕ ಶಾಸ್ತ್ರೋಕ್ತವಾಗಿ ದೇವಾಲಯದ ಬಾಗಿಲು ಮುಚ್ಚಲಾಯಿತು. ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರ ಅನುಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ಬಾಗಿಲು ಮುಚ್ಚಲಾಯಿತು. ಮುಂದಿನ ವರ್ಷ ಅಕ್ಟೋಬರ್ 9ರಂದು ಮತ್ತೆದೇವಾಲಯದ ಬಾಗಿಲು ತೆರೆಯಲಿದೆ. ಈ ವರ್ಷ ಅ.25ರಿಂದ ನವೆಂಬರ್ 3ರವರೆಗೆ ಹಾಸನಾಂಬ ದೇವಾಲಯದ ಬಾಗಿಲು ತೆರೆದಿತ್ತು. ಇಂದು ಬೆಳಿಗ್ಗೆ 6ಗಂಟೆಯವರೆಗೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ಬಾರಿ 18 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದು ಪುನೀತರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಕನ್ನಡ ಚಿತ್ರರಂಗದ ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಕಿವಿ ಮಾತನ್ನೂ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ಅವರು, ‘ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವುದು ತುಂಬಾ ದು:ಖದ ವಿಷಯ. ಉತ್ತಮ ನಿರ್ದೇಶಕನನ್ನು ಕಳೆದುಕೊಂಡಿದ್ದು ಮನಸ್ಸಿಗೆ ನೋವು ಉಂಟುಮಾಡಿದೆ ಎಂದರು. ಈ ಘಟನೆಯನ್ನು ಯಾರೂ ಕೂಡ ನಿರೀಕ್ಷೆ ಮಾಡಿರಲಿಲ್ಲ. ಅವರ ಕುಟುಂಬಸ್ಥರಿಗೆ ಗುರುಪ್ರಸಾದ್ ಅವರನ್ನು ಕಳೆದುಕೊಂಡಿರುವ ದು:ಖ ಭರಿಸುವಂತಹ ಶಕ್ತಿ ಆ ಭಗವಂತ ಕರುಣಿಸಲಿ. ಜೊತೆಗೆ ಕನ್ನಡ ಚಿತ್ರರಂಗ ಬೇರೆ ಭಾಷೆಗಳ ಹೊಡೆತಕ್ಕೆ ಸಿಲುಕಿದೆ. ಯಾರೇ ಆಗಲಿ ನಿರ್ದೇಶಕ ಹಾಗೂ ನಿರ್ಮಾಪಕರಾಗಲಿ ಎಂಥಹ ಸಂದರ್ಭವೇ ಬರಲಿ ಧೈರ್ಯದಿಂದ ಎದುರಿಸಬೇಕು’ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More