Subscribe to Updates
Get the latest creative news from FooBar about art, design and business.
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
ಬೆಂಗಳೂರು: ಬಿಜೆಪಿಯವರು ಗೋಸುಂಬೆಗಿಂತ ಹೆಚ್ಚು ವೇಗವಾಗಿ ಬಣ್ಣ ಬದಲಿಸುವವರು! ರೈತರಿಗೆ ವಕ್ಫ್ ಬೋರ್ಡ್ ಮಂಡಳಿ ನೋಟಿಸ್ ನೀಡಿದ್ದನ್ನು ರಾಜಕೀಯಕ್ಕೆ ಬಳಸುತ್ತಿರುವ ಬಿಜೆಪಿಗರು ತಮ್ಮ ಸರ್ಕಾರದ ಆಡಳಿತಾವಧಿಯಲ್ಲೂ ರೈತರಿಗೆ ನೋಟಿಸ್ ನೀಡಿದ್ದರು. ವಕ್ಪ್ ಮಂಡಳಿಗೆ ಬಿಜೆಪಿ ಬೆಂಬಲವಾಗಿ ನಿಂತಿತ್ತು, ರೈತರ ಭೂಮಿ ಕಸಿಯಲು ಕುಮಕ್ಕು ನೀಡಿತ್ತು ಎನ್ನುವುದಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾತುಗಳೇ ಸಾಕ್ಷಿ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು “ವಕ್ಫ್ ಭೂಮಿ ಅಲ್ಲಾನಿಗೆ ಸೇರಿದ್ದು, ಅದನ್ನು ಮರಳಿ ಪಡೆಯುವುದರಲ್ಲಿ ಯಾವುದೇ ರಾಜಿ ಬೇಡ, ₹2000 ಕೋಟಿ ಮೊತ್ತದ ವಕ್ಫ್ ಆಸ್ತಿ ಖಾಸಗಿಯವರ ವಶದಲ್ಲಿದೆ, ಅದನ್ನು ಮರಳಿ ಪಡೆಯುವವರೆಗೂ ನೀವು ಸುಮ್ಮನೆ ಕೂರಬಾರದು ನಾವೂ ಸುಮ್ಮನೆ ಕೂರಬಾರದು, ನಿಮ್ಮ ಜೊತೆಗೆ ನಾವಿದ್ದೇವೆ” ಇದು ಅಂದಿನ ಸಿಎಂ ಬೊಮ್ಮಯಿಯವರ ಮಾತು ಎಂದಿದ್ದಾರೆ. ಎರಡು ನಾಲಿಗೆಯ ಬಿಜೆಪಿಯವರಿಗೆ ಒಂದಷ್ಟು ಪ್ರಶ್ನೆಗಳು… ಎಂದು ಪ್ರಿಯಾಂಕ್ ಹಲವು ಪ್ರಶ್ನೆಗಳನ್ನು ಹಾಕಿದ್ದಾರೆ. ವಕ್ಫ್ ಮಂಡಳಿ…
ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಸಾವಿಗೆ ಶರಣಾಗಿರುವುದು ಇಂದು ಬೆಳಕಿಗೆ ಬಂದಿತ್ತು. ಇದೀಗ ಅವರ ಸಾವಿಗೆ ಕಾರಣ ಬಯಲಾಗಿದೆ. ಗುರುಪ್ರಸಾದ್ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದಾಗಿ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ಎರಡನೇ ಮದುವೆ ಆಗಿದ್ದಂತ ನಟ, ನಿರ್ದೇಶಕರ ಗುರುಪ್ರಸಾದ್ ಅವರು ಸಾಲ ಮಾಡಿದ್ದರು. ಸಾಲ ತೀರಿಸಲು ಆಗದೇ ತೊಳಲಾಡುತ್ತಿದ್ದರು. ಇದೇ ಕಾರಣದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಪದೇ ಪದೇ ಸಾಲಗಾರರು ಮನೆಗೆ ಬರ್ತಾರೆ ಅಂತ ಮನೆ ಕೂಡ ಮೂರು ಬಾರಿ ಬೆಂಗಳೂರಲ್ಲಿ ಬದಲಾವಣೆ ಮಾಡಿದ್ದರಂತೆ. ಜಯನಗರ, ಕನಕಪುರ, ಅಶೋಕ ನಗರದಲ್ಲಿ ಮನೆ ಮಾಡಿದ್ದರು. ಕೊನೆ ಕೊನೆಗೆ ಒಂಟಿಯಾಗಿ ಕೂಡ ವಾಸವಾಗಿದ್ದರು ಎನ್ನಲಾಗಿದೆ. ಇದಲ್ಲದೇ ಗುರುಪ್ರಸಾದ್ ಅವರು ಸಾಲದ ಹೊರೆಯ ಬಗ್ಗೆ ನಟ ಜಗ್ಗೇಶ್ ಅವರ ಜೊತೆಗೆ ಹಂಚಿಕೊಂಡಿದ್ದರು. ಈ ವೇಳೆ ಅವರನ್ನು ಸಮಾಧಾನಿಸಿ ಕಳುಹಿಸಿದ್ದಾಗಿ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಮೇರಠ್: ಹಣ ಸುಳಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಗ್ರಾಮಸ್ಥರು ಇಬ್ಬರು ಪೊಲೀಸರನ್ನು ಒತ್ತೆಯಾಳುಗಳಾಗಿರಿಸಿಕೊಂಡು ಥಳಿಸಿದ ಘಟನೆ ಪರೀಕ್ಷಿತ್ಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪರೀಕ್ಷಿತ್ ಗಢ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸತ್ಯೇಂದ್ರ ಹಾಗೂ ಪ್ರಶಿಕ್ಷಣಾರ್ಥಿ ಸಬ್ ಇನ್ ಸ್ಪೆಕ್ಟರ್ ಶಿವಂ ಅವರನ್ನು ಗೋವಿಂದಪುರಿ ಗ್ರಾಮಸ್ಥರು ಶನಿವಾರ ರಾತ್ರಿ ಒತ್ತೆಯಾಳುಗಳಾಗಿರಿಸಿಕೊಂಡು ಥಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ವಿವಿಧ ಪೊಲೀಸ್ ಠಾಣೆಯ ಆರಕ್ಷಕ ಪಡೆ ಸ್ಥಳಕ್ಕೆ ದೌಡಾಯಿಸಿತು ಎಂದು ಅವರು ಮಾಹಿತಿ ನೀಡಿದ್ದಾರೆ. ಈ ವೇಳೆ ಪೊಲೀಸರೊಂದಿಗೆ ಗ್ರಾಮಸ್ಥರು ವಾಗ್ವಾದ ನಡೆಸಿದ್ದಾರೆ. ಸಬ್ ಇನ್ಸ್ಪೆಕ್ಟರ್ ಸತ್ಯೇಂದ್ರ ಅವರು ಅಂಗಡಿ ಮಾಲೀಕರನ್ನು ಹಣ ಕೊಡುವಂತೆ ಹೆದರಿಸುತ್ತಿದ್ದರು. ಕೊಡದಿದ್ದರೆ ಜೈಲಿಗೆ ಕಳುಹಿಸುವ ಬೆದರಿಕೆಯನ್ನೂ ಒಡ್ಡುತ್ತಿದ್ದರು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಕೊನೆಗೆ ಗ್ರಾಮಸ್ಥರನ್ನು ಸಮಾಧಾನ ಪಡಿಸಿದ ವೃತ್ತ ಪೊಲೀಸ್ ಅಧಿಕಾರಿ ನವಿನಾ ಶುಕ್ಲಾ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿ ಇಬ್ಬರನ್ನು ಗ್ರಾಮಸ್ಥರಿಂದ ಬಿಡಿಸಿದ್ದಾರೆ. ಸದ್ಯ ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ನಮ್ಮ ತುಮಕೂರು ಮಾಧ್ಯಮವು ಈ ವರುಷ ತನ್ನ ಮೂರನೇ ವಾರ್ಷಿಕೋತ್ಸವವನ್ನು ಯಶಸ್ವಿಯಾಗಿ ಆಚರಿಸುತ್ತಿದ್ದು, ಈ ಸಾಧನೆ ನಮ್ಮ ಎಲ್ಲಾ ಸಹೋದ್ಯೋಗಿಗಳು, ವೀಕ್ಷಕರು ಮತ್ತು ಓದುಗರ ಬೆಂಬಲದ ಪ್ರತಿಫಲವಾಗಿದೆ. ಮೂರು ವರ್ಷಗಳ ಕಾಲದ ಈ ಪಯಣದಲ್ಲಿ ನಾವು ಹಲವು ಸವಾಲುಗಳನ್ನು ಎದುರಿಸಿದರೂ, ಪ್ರತಿ ಸವಾಲಿನ ನಂತರದ ಯಶಸ್ಸು ನಮ್ಮ ಸೇವೆಗೆ ನಿಮ್ಮೆಲ್ಲರ ಪ್ರೋತ್ಸಾಹದಿಂದಲೇ ಸಾಧ್ಯವಾಯಿತು. ಮಾಧ್ಯಮ ಕ್ಷೇತ್ರದಲ್ಲಿ ಸ್ಪರ್ಧೆ, ಹಲವು ಸವಾಲುಗಳ ನಡುವೆಯೂ, ತಾಜಾ ಸುದ್ದಿಗಳು, ಸತ್ಯಾಸತ್ಯತೆ, ನಿಷ್ಠೆ ಮತ್ತು ಸಾಮಾಜಿಕ ಬದ್ಧತೆಯೊಂದಿಗೆ ಅಪಾರ ಜನರಿಗೆ ತಲುಪಿದ್ದೇವೆ ಎನ್ನುವ ಸಂತೃಪ್ತಿ ನಮಗಿದೆ. ಈ ಮೂರು ವರ್ಷಗಳಲ್ಲಿ ನಮ್ಮತುಮಕೂರು ಮಾಧ್ಯಮ ನೊಂದವರ ಕಣ್ಣು ಒರಸಿದೆ, ಸಾರ್ವಜನಿಕರ ಮೂಲಭೂತ ಸಮಸ್ಯೆಗಳನ್ನು ಪೂರೈಸುವುದು ಸರ್ಕಾರ, ಜಿಲ್ಲಾಡಳಿತದ ಜವಾಬ್ದಾರಿ ಅನ್ನೋದನ್ನ ಸಾರಿ ಹೇಳಿದ್ದೇವೆ. ಸಾಮಾಜಿಕ ಸಂಘಟನೆಗಳ ಹೋರಾಟಕ್ಕೆ ನಮ್ಮತುಮಕೂರು ಮಾಧ್ಯಮ ಬಲವಾಗಿ ಬೆಂಬಲಿಸಿದೆ. ಸಂವಿಧಾನಾತ್ಮಕ ಧ್ಯೇಯಗಳನ್ನು ಮೈಗೂಡಿಸಿಕೊಂಡು ಮಾಧ್ಯಮ, ಕಾನೂನಿಗೆ ಅನುಸಾರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಮೂರು ವರ್ಷದ ಪ್ರಯಾಣದಲ್ಲಿ ಮಾಧ್ಯಮವು ಬೆದರಿಕೆಗಳಿಗೆ ಬಗ್ಗಿಲ್ಲ, ಆಮಿಷಗಳಿಗೆ ಕೈಯೊಡ್ಡಿಲ್ಲ ಎನ್ನುವುದನ್ನು ಹೇಳಲು…
ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಅವರು ಸಾವಿಗೆ ಶರಣಾಗಿದ್ದಾರೆ ಎನ್ನುವ ಆಘಾತಕಾರಿ ಸುದ್ದಿ ಬಂದಿದ್ದು, ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಮೂರು ದಿನಗಳ ಹಿಂದೆ ಗುರುಪ್ರಸಾದ್ ಅವರು ತಮ್ಮ ನಿವಾಸದಲ್ಲೇ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮಾದನಾಯಕಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ಅವರು ಸಾವಿಗೆ ಶರಣಾಗಿದ್ದಾರೆ. ಗುರುಪ್ರಸಾದ್ ಅವರು ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದರು. ತಮ್ಮ 52ನೇ ವಯಸ್ಸಿನಲ್ಲಿ ಜೀವನವನ್ನು ಕೊನೆಗಾಣಿಸಿದ್ದಾರೆ. 3 ದಿನಗಳ ಹಿಂದೆ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಅವರ ಅಪಾರ್ಟ್ ಮೆಂಟ್ ನಲ್ಲಿ ಮೃತದೇಹ ಪತ್ತೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಸರಗೂರು: ತಾಲೂಕಿನ ಪಟ್ಟಣದ ನಾಲ್ಕನೇ ವಾರ್ಡಿನ ನಿವಾಸಿಯಾದ ಆಟೋ ಜೋಗಪ್ಪ ಅಪ್ಪಟ ಕನ್ನಡ ಅಭಿಮಾನಿ. ಇವರು 20 ರಿಂದ 25 ವರ್ಷಗಳಿಂದ ಕನ್ನಡ ರಾಜ್ಯೋತ್ಸವ ದಿನದಂದು ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಿದರು. ಆಟೋ ಗೆ ಶೃಂಗಾರ ಮಾಡಿ ನಂತರ ತಾಯಿ ಭುವನೇಶ್ವರಿ ಪೋಟೋಗೆ ಪುಷ್ಪಹಾರ ಹಾಕಿ ಕನ್ನಡ ರಾಜ್ಯೋತ್ಸವ ಆಚರಿಸಿದ ಅವರು ಬಳಿಕ ಮಾತನಾಡಿ, ಈ ದಿನದಂದು ನನ್ನ ಆಟೋದಲ್ಲಿ ಯಾರೇ ಸಂಚಾರ ಮಾಡಿಕೊಂಡು ಬರುವವರಿಗೆ ಯಾವುದೇ ರೀತಿಯ ಹಣವನ್ನು ಪಡೆಯುವುದಿಲ್ಲ. ಇದರಿಂದ ನಾನು ಕನ್ನಡ ನಾಡಿನಲ್ಲಿ ಹುಟ್ಟಿರುವುದಕ್ಕೂ ಸಾರ್ಥಕ ವಾಗಿದೆ ಎಂದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ನವೆಂಬರ್ 1 ರಂದು ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆವರೆಗೆ ಉಚಿತವಾಗಿ ಸಾರ್ವಜನಿಕರಿಗೆ ಪ್ರಯಾಣ ಹಾಗೂ ಅದರ ಜೊತೆಯಲ್ಲಿ ಶಾಲೆಯ ಮಕ್ಕಳಿಗೆ ಪುಸ್ತಕಗಳು ಮತ್ತು ಇನ್ನೂ ವಿವಿಧ ಸೇವೆ 20, ವರ್ಷದಿಂದ ಮಾಡಿಕೊಂಡು ಬರುತ್ತಿರುತ್ತೇನೆ ಎಂದು ಹೇಳಿದರು. ಈ ದಿನದಂದು ಜನರ ಸೇವೆ ಮಾಡಿದ್ದರಿಂದ ಕನ್ನಡ ನಾಡಿಗೆ ಅಭಿಮಾನಕ್ಕೆ ಕೊಡುವ ಸೇವೆ…
ಮಧುಗಿರಿ: ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು, ಆದರೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಕಾಣೆಯಾಗಿರುವುದನ್ನ ಗಮನಿಸಿದ ಕನ್ನಡಪರ ಸಂಘಟನೆಗಳ ಹೋರಾಟಗಾರರು ಸಿಡಿ ಮಿಡಿಗೊಂಡು ಅಬಕಾರಿ ಕಛೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು. ಈ ಸಂದರ್ಭದಲ್ಲಿ ಗೈರುಹಾಜರಿದ್ದನ್ನು ಡಿವೈಎಸ್ಪಿ ಚಂದ್ರಪ್ಪರನ್ನು ಪ್ರಶ್ನಿಸಿದ್ದಕ್ಕೆ ನಾನು ಮೂರು ದಿನಗಳಿಂದ ಕಛೇರಿಯಲ್ಲಿ ಇರಲಿಲ್ಲ, ಹಾಗಾಗಿ ನಾನು ಬೇರೆ ಇನ್ಸ್ ಪೆಕ್ಟರ್ ಗೆ ಧ್ವಜಾರೋಹಣ ನೇರವೇರಿಸಲು ಸೂಚನೆ ನೀಡಿದ್ದೇನೆ ಎಂದು ಚಂದ್ರಪ್ಪ ಹೇಳಿದ್ದಾರೆ. ಈ ವೇಳೆ ಇನ್ಸ್ಪೆಕ್ಟರ್ ಗೆ ಕರೆ ಮಾಡಿ ವಿಚಾರಿಸಿದಾಗ ನನಗೆ ಕೊರಟಗೆರೆ ಇನ್ ಚಾರ್ಜ್ ನೀಡಿದ್ದು, ನಾನು ರಾಜ್ಯೋತ್ಸವ ಕಾರ್ಯಕ್ರಮದಲ್ಲಿದ್ದೇನೆ. ಮಧುಗಿರಿಯಲ್ಲಿ ಡಿವೈಎಸ್ಪಿ ಚಂದ್ರಪ್ಪ ಅವರೇ ಮಾಡಬೇಕು ಎಂದು ಇನ್ಸ್ಪೆಕ್ಟರ್ ಹೇಳಿದ್ದಾರೆ. ಒಬ್ಬರ ಮೇಲೆ ಒಬ್ಬರು ಆರೋಪ ಮಾಡಿಕೊಂಡು ಅಧಿಕಾರಿಗಳು ಕನ್ನಡಾಂಬೆಗೆ ಅಗೌರವ ತರುತ್ತಿರುವುದಂತೂ ಸುಳ್ಳಲ್ಲ. ಇತ್ತ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನಂತರ ಕನ್ನಡ ಪರ ಸಂಘಟನೆಯವರೆ ಅಬಕಾರಿ ಇಲಾಖೆಯಲ್ಲಿ ದ್ವಜರೋಹಣ ನೇರವೇರಿಸಿರುವುದು ಅಲ್ಲಿನ…
ಮೈಸೂರು: ಸಿದ್ದರಾಮಯ್ಯರಿಗೆ ಈಗ ದೇವರು ಮಠಗಳು ನೆನಪಾಗಿದೆ. ಮುಡಾ ಹಗರಣವಾದ ಮೇಲಂತೂ ಅವರಿಗೆ ಹೆಚ್ಚಿನ ಭಕ್ತಿ ಬಂದಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಪ್ರಭಾವದಿಂದ ದೇವರ ಮೇಲೆ ಭಕ್ತಿ ಬಂದಿದೆ, ಈಗ ಅವರಿಗೆ ಮಠಗಳು ನೆನಪಾಗಿವೆ ಎಂದು ವ್ಯಂಗ್ಯವಾಡಿದ್ದಾರೆ. ಮೊದಲು ಕುಂಕುಮವನ್ನೇ ಹಾಕಿಸಿಕೊಳ್ಳುತ್ತಿರಲಿಲ್ಲ, ಆದರೆ ಈಗ ಹುಡುಕಿಕೊಂಡು ಹೋಗಿ ದೇವರ ದರ್ಶನ ಮಾಡುತ್ತಿದ್ದಾರೆ. ಇದೆಲ್ಲ ಮುಡಾ ಹಗರಣದ ಪ್ರಭಾವ ಅನಿಸುತ್ತೆ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು. ದೀಪಕ್ಕೆ ಸಿಕ್ಕ ಪತಂಗದಂತಾಗಿದೆ ಕಾಂಗ್ರೆಸ್ ಸರ್ಕಾರದ ಸ್ಥಿತಿ, ತಪ್ಪುಗಳ ಮೇಲೆ ತಪ್ಪುಗಳನ್ನು ಮಾಡಿಕೊಳ್ಳುತ್ತಿದೆ. ಒಂದು ತಪ್ಪು ಮುಚ್ಚಿಕೊಳ್ಳಲು ಮತ್ತೊಂದು ತಪ್ಪು ಮಾಡುತ್ತಿದೆ. ಮುಡಾ, ವಕ್ಫ್ ಎಲ್ಲದರಲ್ಲು ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದಾರೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಸರಗೂರು: ‘ಅರ್ಹರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು, ಸಂಬಂಧಿಸಿದವರು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಚನ್ನೀಪುರ ಚೆಲುವರಾಜು ಹೇಳಿದರು. ಸರ್ಕಾರದ ಮಹತ್ವಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಕುರಿತು ಬುಧವಾರ ದಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ತಾಲೂಕಿನ ಸುಮಾರು ಗ್ರಾಮಗಳಿಗೆ ಬಸ್ ವ್ಯವಸ್ಥೆ ಇಲ್ಲ.ಸೋಮವಾರದಿಂದ ಶನಿವಾರರವರಿಗೆ ಬಸ್ ಕಲ್ಪಿಸಿದೆ.ಅದರೆ ಭಾನುವಾರ ಬಂದರೆ ಬಸ್ ವ್ಯವಸ್ಥೆ ಸ್ಥಗಿತಗೊಂಡಿದ್ದಾರೆ. ಶಾಲೆಯ ಮಕ್ಕಳು ಬಸ್ ಸಂಚಾರ ಮಾಡುತ್ತಿದ್ದಾರೆ. ಅದರೆ ಸಣ್ಣ ಮಕ್ಕಳಿಗೆ ಅರ್ಥ ಚಾರ್ಜ್ ತೆಗೆದುಕೊಳ್ಳಬೇಕು ಅಂದರೆ ನಿಮ್ಮ ಕಂಡಕ್ಟರ್ ರವರು ಒಬ್ಬ ವ್ಯಕ್ತಿಗೆ ಯಾವ ಮಟ್ಟಿಗೆ ಚಾರ್ಜ್ ತೆಗೆದುಕೊಳ್ಳುತ್ತಿರಾ? ಅದೇ ರೀತಿ ಮಕ್ಕಳಿಗೆ ತೆಗೆದುಕೊಳ್ಳುತ್ತಿದ್ದಾರೆ ದೂರು ಬಂದಿದೆ. ನಿಮ್ಮ ಸಿಬ್ಬಂದಿಗಳಿಗೆ ಶಾಲೆಯ ಮಕ್ಕಳು ಮತ್ತು ಸಾರ್ವಜನಿಕರಿಗೆ ಅವರಿಗೆ ತಿಳುವಳಿಕೆ ನೀಡಬೇಕು. ಗ್ರಾಮಗಳಿಂದ ಹೆಂಗಸರು ಹಾಗೂ ಮಕ್ಕಳು ನಡೆದುಕೊಂಡು ಬಸ್ ನಿಲ್ದಾಣದಲ್ಲಿ ಇದ್ದರೆ. ಚಾಲಕರು ಬಸ್ ನಿಲ್ಲಿಸುವುದಿಲ್ಲ ಹಾಗೂ…
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಮತ್ತು ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಬೆಳೆಯುತ್ತಿದೆ. ಇದು ನಾಡದ್ರೋಹ. ಈ ರೀತಿ ಹೀಯಾಳಿಸುವವರ ವಿರುದ್ಧ ರಾಜ್ಯ ಸರ್ಕಾರ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಂಠೀರವ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಷ್ಟ್ರಧ್ವಜ ಮತ್ತು ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಕನ್ನಡೇತರರ ಜೊತೆ ಅವರದೇ ಭಾಷೆಯಲ್ಲಿ ಮಾತನಾಡುವ ಬದಲು ಕನ್ನಡ ಕಲಿಸಿ ಕನ್ನಡ ವಾತಾವರಣ ನಿರ್ಮಿಸಿದರೆ ಭಾಷಾ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು. ಸ್ವಾತಂತ್ರ್ಯಾ ನಂತರ ಭಾಷಾವಾರು ಪ್ರಾಂತ್ಯಗಳು ವಿಂಗಡಣೆಯಾದ ಬಳಿಕ ಕರ್ನಾಟಕ ಎಂದು ನಾಮಕರಣಗೊಂಡಿದೆ. ಅದರ 50ನೇ ವರ್ಷದ ವೇಳೆಗೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಆದರೆ ಅವರು ಅದನ್ನು ಆಚರಣೆ ಮಾಡಲಿಲ್ಲ ಎಂದು ಆಕ್ಷೇಪಿಸಿದ ಅವರು, ತಾವು ಮುಖ್ಯಮಂತ್ರಿಯಾದ ಬಳಿಕ ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ ಎಂಬ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ರೂಪಿಸಿದ್ದಾಗಿ ಹೇಳಿದರು. ಕನ್ನಡ ಭಾಷೆಗೆ 2…