Subscribe to Updates
Get the latest creative news from FooBar about art, design and business.
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
ಬೆಂಗಳೂರು: ರಾಜ್ಯಾದ್ಯಂತ ದೀಪಾವಳಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಇದೇ ಸಂದರ್ಭದಲ್ಲಿ ಪಟಾಕಿ ಅವಘಡದಿಂದ ಹಲವರು ಗಾಯಗೊಂಡಿದ್ದಾರೆ. ಪಟಾಕಿ ಕಿಡಿ ತಾಗಿ ಕಣ್ಣಿಗೆ ಗಾಯಮಾಡಿಕೊಂಡಿರುವ 29 ಜನರು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಿಂಟೋ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 15 ಪ್ರಕರಣಗಳು ದಾಖಲಾಗಿವೆ. ಒಟ್ಟು 29 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 8 ಜನರಿಗೆ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ. ವಯಸ್ಕರರು 9 ಜನರು, 9 ಮಕ್ಕಳು, ಅಕ್ಕಪಕ್ಕ ನಿಂತಿದ್ದವರಿಗೆ ಪಟಾಕಿ ಕಿಡಿ ತಗುಲಿ ಗಾಯಗೊಂಡ 8 ಜನ, ಸ್ವತಃ ಪಟಾಕಿ ಹಚ್ಚುವಾಗ ಕಣ್ಣಿಗೆ ಕಿಡಿ ತಗುಲಿ ಗಾಯಗೊಂಡ 7 ಜನರು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಇಬ್ಬರಿಗೆ ಸರ್ಜರಿ ಮಾಡಲಾಗಿದೆ. 15 ಜನರು ಗಂಭೀರವಾಗಿ ಗಾಯಗೊಂಡವರಿದ್ದು, 14 ಜನರು ಸಣ್ಣಪುಟ್ಟ ಗಾಯಗೊಂಡವರಾಗಿದ್ದಾರೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಜನನಿಬಿಡ ಪ್ರದೇಶದಲ್ಲಿ ಲಾಂಗ್ ಹಿಡಿದು ಅಂಗಡಿಯವೊಂದಕ್ಕೆ ನುಗ್ಗಿ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ತುಮಕೂರು ನಗರದ ಮೇಳಕೋಟೆ ಮುಖ್ಯರಸ್ತೆಯಲ್ಲಿರುವ ಮುಬಾರಕ್ ಸಮೋಸ ಸೆಂಟರ್ ನಲ್ಲಿ ಗುಂಪೊಂದು ಯುವಕನ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿದೆ. ತೀವ್ರ ವಾಗಿ ಹಲ್ಲೆ ಮಾಡಿರೋ ಘಟನೆ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಉಪ್ಪಾರಹಳ್ಳಿ ಮೂಲದ ಯುವತಿಯ ವಿಷಯಕ್ಕೆ ಸಂಬಂಧಿಸಿದಂತೆ ಸದಾಶಿವನಗರದ ಹುಸೆನ್ ಎಂಬ ಯುವಕ ಇಸ್ಮಾಯಿಲ್ ನಗರದ ಆಯುಬ್ ಎಂಬ ಯುವಕನಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಜನಿಬಿಡ ಪ್ರದೇಶದಲ್ಲಿ ಪುಂಡರ ಗುಂಪು ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಹಲ್ಲೆಗೊಳಗಾದ ಯುವಕನನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಪಾಯದಿಂದ ಯುವಕಪಾರಾಗಿದ್ದಾನೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ತುಮಕೂರು: ವಕ್ಪ್ ಆಸ್ತಿ ವಿಚಾರ ಯಾಕೆ ಪ್ರಾರಂಭವಾಯಿತು, ಇಷ್ಟು ದಿನ ಯಾಕೇ ಇರಲಿಲ್ಲ. ಇದೀಗ ಕಾಂಗ್ರೆಸ್ ನ ದುರಾಡರಳಿತ ಹೊರಬರಲಿಕ್ಕೆ ಪ್ರಾರಂಭವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಅಕ್ರಮ ಮುಚ್ಚಿಕೊಳ್ಳುವ ಪ್ರಯತ್ನ ಇದು. ಸಂವಿಧಾನ ರಚನೆ ಮಾಡಬೇಕಾದರೆ ಪ್ರತಿ ಕುಟುಂಬದ ಹಕ್ಕು, ನ್ಯಾಯಾಂಗದಲ್ಲಿ ಚರ್ಚೆಗಳು ಆರಂಭವಾಗಿವೆ ಇದಕ್ಕೆ ಜನರ ಉತ್ತರ ಸಿಗಲಿದೆ ಎಂದರು. ಕೇಂದ್ರದ ಮೋದಿಯವರ ಕ್ಯಾಬಿನೆಟ್ ನಲ್ಲಿ ಈ ಕುರಿತು ಯಾವ ರೀತಿ ತೀರ್ಮಾನ ಆಗಬೇಕು ಎಂದು ಚರ್ಚೆ ಆಗಿದೆ. ಕಾನೂನು ವ್ಯಾಪ್ತಿಯಲ್ಲಿ ಇದೆಲ್ಲದಕ್ಕೂ ಅಂತಿಮ ಮಾಡಲಿಕ್ಕೆ ಕಾನೂನು ಬಲಿಷ್ಠ ವಾಗಿದೆ ಎಂದು ಅರ್ಥಮಾಡಿಕೊಳ್ಳಬೇಕು ಎಂದರು. ಇಂದು ಅಮಾವಾಸ್ಯೆ ಕಾರಣ ಚುಂಚನಗಿರಿ ಗೆ ಭೇಟಿ ಬಳಿಕ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಬಿಜೆಪಿಯವರು ಸೇರಿ ಎಲ್ಲರೂ ಜೊತೆಗೂಡಿ ಚನ್ನಪಟ್ಟಣ ಉಪಚುನಾವಣೆ ಸೇರಿದಂತೆ ಮೂರು ಕಡೆ ಕೆಲಸ ಮಾಡಲಾಗುತ್ತಿದೆ ಎಂದರು. ಕಾಂಗ್ರೆಸ್ ಆಡಳಿತ ಯಾವರೀತಿ ಇದೆ, ಕಾಂಗ್ರೆಸ್…
ತುಮಕೂರು: ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮೀಜಿಗಳ ಗದ್ದುಗೆ ದರ್ಶನ ಮಾಡಿದರು. ಕುಮಾರಸ್ವಾಮಿ ಅವರಿಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಾಥ್ ನೀಡಿದರು. ತುಮಕೂರು ಬಿಜೆಪಿ ಶಾಸಕ ಜ್ಯೋತಿಗಣೇಶ್, ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ್ ಗೌಡ, ಚಿಕ್ಕನಾಯಕನಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಜೊತೆಯಲ್ಲಿ ಇದ್ದರು. ರಾಮನಗರ ಸೇರಿದಂತೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಿದ್ದಗಂಗಾ ಮಠದ ಭಕ್ತಾದಿಗಳ ಸಂಖ್ಯೆ ಕೂಡ ಅಪಾರ ಪ್ರಮಾಣದಲ್ಲಿದ್ದಾರೆ. ಹೀಗಾಗಿ ಬಹುತೇಕ ಆ ಭಾಗದಲ್ಲಿ ಚುನಾವಣೆಗಳು ನಡೆದ ಸಂದರ್ಭದಲ್ಲಿ ಅಭ್ಯರ್ಥಿಗಳು ಹಾಗೂ ಮುಖಂಡರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಸ್ವಾಮೀಜಿಯವರ ಆಶೀರ್ವಾದ ಪಡೆಯುವುದು ಸರ್ವೇ ಸಾಮಾನ್ಯವಾಗಿರುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ಜಿಲ್ಲೆಯ ತಿಪಟೂರು ನಗರದ ಕಲ್ಪತರು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಆಯೋಜಿಸಿದ ಕನ್ನಡರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಿಪಟೂರು ಉಪವಿಭಾಗಾಧಿಕಾರಿ ಸಪ್ತಶ್ರೀ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ‘ಕನ್ನಡ’ ಭಾಷೆ ಭಾಷೆಗಳ ರಾಣಿ ಇದ್ದ ಹಾಗೆ ನಮ್ಮ ಭಾಷೆ ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು ಸಾಹಸ ಶೌರ್ಯ, ಔದಾರ್ಯಕ್ಕೆ ಹೆಸರಾಗಿದ್ದು, ನಾಡು ನುಡಿಯ ವಿಷಯದಲ್ಲಿ ನಾವೆಲ್ಲರೂ ಸ್ವಾಭಿಮಾನಿಗಳಾಗಿರಬೇಕು. ವಿಜಯನಗರ ಸಾಮ್ರಾಟ ಕೃಷ್ಣದೇವರಾಯರ ಆದಿಯಾಗಿ ಅನೇಕ ರಾಜಮಹರಾಜರು ಕವಿಗಳು ಶರಣರು ನಾಡಿನ ಕೀರ್ತಿಯನ್ನ ಬೆಳಗಿದ್ದು, ಇಂದು ಅಖಂಡ ಕರ್ನಾಟಕ ಕನ್ನಡಿಗ ಹೆಮ್ಮೆಯಾಗಿದೆ ಎಂದು ತಿಳಿಸಿದರು. ನಾಡಧ್ವಜಾರೋಹಣ ನೆರವೇರಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಕನ್ನಡ ನಾಡು ನುಡಿ, ಅನೇಕ ಮಹನೀಯರ ತ್ಯಾಗ ಪರಿಶ್ರಮದಿಂದ ರೂಪುಗೊಂಡಿದೆ. ಕನ್ನಡಿಗರು ಹೃದಯ ವೈಶಾಲ್ಯಕ್ಕೆ ಹೆಸರಾಗಿದ್ದು ಡ್ಯಾಡಿ ಮಮ್ಮಿ ಸಂಸ್ಕೃತಿ ಬಿಟ್ಟು ಅಪ್ಪ ಅಮ್ಮ ಅನುವ ಸಂಸ್ಕೃತಿ ಬೆಳಸಿಕೊಳ್ಳ ಬೇಕು, ನಮ್ಮ ಭಾಷೆ ನಾಡು ನುಡಿಯನ್ನ ಪ್ರೀತಿಸೋಣ ಬೇರೆ ಭಾಷೆಗಳನ್ನ ಗೌರವಿಸೋಣ, ನಮ್ಮ ನಾಡು ನುಡಿಗೆ ಅಗೌರವ ಉಂಟಾದಾಗ ಸ್ವಾಭಿಮಾನಿಗಳಾಗಿ…
ತುಮಕೂರು: ನವೆಂಬರ್ 1 ಕನ್ನಡರಾಜ್ಯೋತ್ಸವ ಮೆರವಣಿಗೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಚಾಲನೆ ನೀಡಿದರು. ತುಮಕೂರು ಟೌನ್ ಹಾಲ್ ವೃತ್ತದಿಂದ ಆರಂಭವಾದ ಮೆರವಣಿಗೆ, ವಿವಿಧ ಕಲಾತಂಡಗಳೊಂದಿಗೆ ಸಾಗಿತು. ಶಾಲಾ ಮಕ್ಕಳು ಸೇರಿದಂತೆ ವಿವಿಧ ಇಲಾಖೆಯ ಸ್ಥಬ್ದಚಿತ್ರಗಳು ಭಾಗಿಯಾಗಿವೆ. ಸರ್ಕಾರದ ವಿವಿಧ ಯೋಜನೆಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಗಮನ ಸೆಳೆದವು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಾವಿನ ಕಟ್ಟೆ ಕೆರೆಯ ಅಂಗಳದಲ್ಲಿ 42 ಕುಟುಂಬಗಳನ್ನು ಸಾತೇನಹಳ್ಳಿಗೆ ಸ್ಥಳಾಂತರ ಗೊಳಿಸುವ ಕಾರ್ಯ ಕ್ಷಿಪ್ರಗತಿಯಲ್ಲಿ ಕೈಗೆತ್ತಿಕೊಂಡು ಕೆರೆ ಅಂಗಳದಲ್ಲಿ ನರಕ ಯಾತನೆ ಅನುಭವಿಸುತ್ತಿದ್ದ ಕುಟುಂಬಗಳಿಗೆ ನವಚೇತನ ನೀಡಿದ ತಹಶೀಲ್ದಾರ್ ಆರತಿ ಮತ್ತು ಪಟ್ಟಣ ಪಂಚಾಯಿತಿ ಚೀಪ್ ಆಫೀಸರ್ ಮಂಜುಳಾ ದೇವಿ ಅವರ ಕಾರ್ಯವೈಖರಿಗೆ ಹಿರಿಯ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇಂದು ಬಾಬು ಜಗಜೀವನ್ ರಾಮ್ ಭವನದಲ್ಲಿರುವ ನಿರಾಶ್ರಿತರನ್ನು ಮತ್ತು ಪುನರ್ವಸತಿ ಸೌಕರ್ಯ ಕಲ್ಪಿಸಿದ ಸಾತೇನಹಳ್ಳಿಗೆ ನೈಜ ಹೋರಾಟಗಾರರ ವೇದಿಕೆ ಮತ್ತು ಕಾಳಜಿ ಫೌಂಡೇಶನ್ ಸದಸ್ಯರು ಭೇಟಿ ನೀಡಿದರು. ಇಲ್ಲಿನ 42 ಕುಟುಂಬಗಳ ಸದಸ್ಯರೊಂದಿಗೆ ಚರ್ಚಿಸಿ ಅವರನ್ನು ಮುಖ್ಯ ವಾಹಿನಿಗೆ ತರುವಲ್ಲಿ ನೈಜ ಹೋರಾಟಗಾರರ ವೇದಿಕೆ ಮತ್ತು ಕಾಳಜಿ ಫೌಂಡೇಶನ್ ಸದಸ್ಯರು ಮುಖ್ಯ ಪಾತ್ರ ವಹಿಸಿದ್ದರು. ಈ ಸಂಘಟನೆಗಳ ನಿರಂತರ ಹೋರಾಟದಿಂದಾಗಿ ಕಳೆದ ಏಳೆಂಟು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪ್ರಕರಣ ಸುಖಾಂತ್ಯವಾಗಿದೆ. ತಾಲೂಕು ಆಡಳಿತದ ಅಧಿಕಾರಿಗಳು ಸರ್ಕಾರದ ಕೆಲಸ ದೇವರ ಕೆಲಸವೆಂದು ಮಾಡುತ್ತಿರುವುದರ…
ತುಮಕೂರು: ಕೇಂದ್ರ ಸರ್ಕಾರದ ADIP ಯೋಜನೆಯಡಿ ವಿಕಲಚೇತನರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲು ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕೊಠಡಿಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅಲಿಂಕೋ ಸಂಸ್ಥೆಯು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ನವೆಂಬರ್ ಮಾಹೆಯಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ಅವರಿಗೆ ಸೂಚಿಸಿದರು. ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಮೌಲ್ಯಮಾಪನ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗಿದೆ. ಕೇಂದ್ರ ಸರ್ಕಾರದ alimco ಸಂಸ್ಥೆಯ ವತಿಯಿಂದ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು, ಸಾಧನ ಸಲಕರಣೆಗಳನ್ನು ವಿತರಿಸಲು ಜಿಲ್ಲೆಯ 2,460 ವಿಕಲಚೇತನ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ…
ದೀಪಾವಳಿ, ಬೆಳಕಿನ ಹಬ್ಬವೆಂದೇ ಹೆಸರಾಗಿರುವುದು, ಭಾರತೀಯ ಪರಂಪರೆಯಲ್ಲಿ ವೈಶಿಷ್ಟ್ಯತೆಯಿಂದ ಸಂಜ್ಞಾಪಿಸಿದ ಹಬ್ಬವಾಗಿದೆ. ಹೊಸ ಆಶಾವಾದ, ಸಮೃದ್ಧಿ, ಮತ್ತು ಬಾಂಧವ್ಯವನ್ನು ಸ್ಮರಿಸುತ್ತ, ದೀಪಾವಳಿ ಹಬ್ಬವು ಕೇವಲ ಧಾರ್ಮಿಕ ಆಚರಣೆಯಲ್ಲದೆ ಸಮಾಜದಲ್ಲಿ ಸಾಮರಸ್ಯ ಮತ್ತು ಒಗ್ಗಟ್ಟಿನ ಸಂಕೇತವಾಗಿ ಪರಿಗಣಿಸಲಾಗಿದೆ. ಆದರೆ, ದೀಪಾವಳಿಯ ಆಚರಣೆಯ ವಿಧಾನಗಳು ಮತ್ತು ಅದರ ಪರಿಣಾಮಗಳನ್ನು ನಾವೆಲ್ಲರೂ ಪ್ರಸ್ತುತ ಕಾಲಘಟ್ಟದಲ್ಲಿ ಪುನಃ ಪರಿಗಣಿಸುವ ಅಗತ್ಯವಿದೆ. ಹಬ್ಬದ ಪೌರಾಣಿಕ ಹಿನ್ನಲೆ ಮತ್ತು ತತ್ವ ದೀಪಾವಳಿ ಹಬ್ಬದ ಪೌರಾಣಿಕ ಹಿನ್ನೆಲೆಯು ಶ್ರೀರಾಮನವರ 14 ವರ್ಷಗಳ ವನವಾಸ ಮುಗಿಸಿ ಅಯೋಧ್ಯೆಗೆ ಮರಳಿದ ಸಂದರ್ಭವನ್ನು ಸ್ಮರಿಸುತ್ತದೆ. ಅದೆಷ್ಟೇ ಪೌರಾಣಿಕ ಹಿನ್ನೆಲೆಯನ್ನು ಹೊಂದಿದರೂ, ದೀಪಾವಳಿ ಹಬ್ಬವು ಜ್ಞಾನ ಮತ್ತು ನಿರಂತರ ಬೆಳಕು ತರುವ ಸಂಕೇತವಾಗಿದೆ. ನಮ್ಮ ಮನಸ್ಸಿನಲ್ಲಿರುವ ಅಜ್ಞಾನ ಮತ್ತು ಕತ್ತಲನ್ನು ದೂರಮಾಡಿ ಜ್ಞಾನದ ಬೆಳಕನ್ನು ಹಂಚಲು ಇದು ಒಂದು ಅದ್ಭುತ ಅವಕಾಶ. ದೀಪಾವಳಿ, ಕೇವಲ ಬೆಳಕು ಹಚ್ಚುವುದರಲ್ಲಿ ಸೀಮಿತವಾಗಿಲ್ಲದೆ, ಹೊಸ ನಿರೀಕ್ಷೆ ಮತ್ತು ಹೊಸದಾದ ಆರಂಭವನ್ನು ತರುವ ಹಬ್ಬವಾಗಿದೆ. ಪರಿಸರ ಸ್ನೇಹಿ ದೀಪಾವಳಿ: ಸಮಕಾಲೀನ ಅಗತ್ಯತೆ ಪ್ರಸ್ತುತ,…
ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ತಂಡ ಭೇಟಿ ನೀಡಿ, ತಾಲ್ಲೂಕಿನಲ್ಲಿ ಅನುಷ್ಠಾನಗೊಂಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಯೋಜನೆಗಳ ಮೇಲ್ವಿಚಾರಣೆ ನಡೆಸಿದರು. ಕೇಂದ್ರ ತಂಡವು ಕೊರಟಗೆರೆ ತಾಲ್ಲೂಕು ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 17.5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಎನ್ಆರ್ಎಲ್ಎಂ ಸಂಜೀವಿನಿ ಘಟಕಕ್ಕೆ ಭೇಟಿ ನೀಡಿ, ಘಟಕವನ್ನು ವೀಕ್ಷಿಸಿದರು. ನಂತರ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 48 ಮಹಿಳಾ ಸ್ವಸಹಾಯ ಸಂಘಗಳ ಸುಮಾರು 450ಕ್ಕೂ ಅಧಿಕ ಸದಸ್ಯರು ಎನ್ಆರ್ಎಲ್ಎಂ ಸಂಜೀವಿನಿ ಯೋಜನೆಯಡಿ ಈವರೆಗೆ 45 ಲಕ್ಷ ರೂ.ಗಳ ಸಾಲ ಸೌಲಭ್ಯ ಪಡೆದು, 1.27 ಕೋಟಿ ರೂ.ಗಳ ವಹಿವಾಟು ನಡೆಸಿರುವ ಬಗ್ಗೆ ಶ್ರೀ ಕಾವೇರಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಹಾಗೂ ಮಹಿಳಾ ಸ್ವಸಹಾಯ ಸಂಘದ ಸದಸ್ಯರೊಂದಿಗೆ ಸಂವಾದ ನಡೆಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಲಕ್ಷ್ಮೀ…