Author: admin

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಹಾಗೂ ಪಾಲಿಕೆ ಕಚೇರಿಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಹಾಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಬಿ.ವಿ. ಅಶ್ವಿಜ ತಿಳಿಸಿದ್ದಾರೆ. ನಗರದ ಅರ್ಹ ಮತದಾರರು ಸಂಬಂಧಿಸಿದ ಮತಗಟ್ಟೆಗಳಿಗೆ ಭೇಟಿ ನೀಡಿ ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್ ಓ)ಯ ಮೂಲಕ ಪ್ರಕಟಿತ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿಯಾಗಿರುವ ಬಗ್ಗೆ ಪರಿಶೀಲಿಸಿ ಖಚಿತ ಪಡಿಸಿಕೊಳ್ಳಬೇಕು ಅಥವಾ ಮತದಾರರು ಸ್ವತಃ ಆನ್‌ಲೈನ್ ಮೂಲಕ ಗೂಗಲ್ ಪ್ಲೇ ಸ್ಟೋರ್‌ನಲ್ಲಿ VHA– Voter Helpline App ಅನ್ನು ಡೌನ್ ಲೋಡ್ ಮಾಡಿಕೊಂಡು ನೇರವಾಗಿ ಪರಿಶೀಲಿಸಿಕೊಳ್ಳಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರು ನೋಂದಣಿಯಾಗದೇ ಇದ್ದಲ್ಲಿ ನಿಗಧಿತ ನಮೂನೆ–6, ಕೈಬಿಡತಕ್ಕ ಪ್ರಕರಣ ಇದ್ದಲ್ಲಿ ನಿಗಧಿತ ನಮೂನೆ–7 ಮತ್ತು ತಿದ್ದುಪಡಿ ಅಗತ್ಯವಿದ್ದಲ್ಲಿ ನಮೂನೆ–8ನ್ನು ಭರ್ತಿ ಮಾಡಿ ಸಂಬಂಧಿಸಿದ ಬಿಎಲ್ ಓಗಳಿಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ಈ…

Read More

ತುಮಕೂರು: ದೀಪಾವಳಿ ಆಚರಣೆ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹಚ್ಚಲು/ಸಿಡಿಸಲು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶವಿದ್ದು, ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಹಸಿರು ಪಟಾಕಿಯ ಚಿಹ್ನೆ. ಕ್ಯೂಆರ್ ಕೋಡ್ ಇರುವಂತಹ ಪಟಾಕಿಗಳನ್ನು ಮಾತ್ರ ಬಳಸಬೇಕು. ನಗರದ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸೇರಿದಂತೆ ಯಾವುದೇ ನಿಷೇಧಿತ ಪ್ರದೇಶಗಲ್ಲಿ ಪಟಾಕಿಗಳನ್ನು ಸಿಡಿಸಬಾರದು ಎಂದು ತಿಳಿಸಿದ್ದಾರೆ. ಪಟಾಕಿ ಬಳಸುವ ಸಂದರ್ಭದಲ್ಲಿ ಇಯರ್ ಪ್ಲಗ್/ಗಾಗಲ್ಸ್(Ear plug/Goggles)ನಂತಹ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಪಟಾಕಿ ಸಿಡಿಸಿದ ನಂತರ ಉಂಟಾದ ತ್ಯಾಜ್ಯವನ್ನು ಪಾಲಿಕೆ ವಾಹನಗಳಿಗೆ ಕಸ ವಿಂಗಡಣೆ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು: ಬೆಸ್ಕಾಂ ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್ 3ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ದಿಬ್ಬೂರು, ಬಿ.ಜಿ.ಪಾಳ್ಯ ಸರ್ಕಲ್, ಗುಬ್ಬಿಗೇಟ್, ಕಾಲ್ ಟೆಕ್ಸ್ ಸರ್ಕಲ್, ಕುಂಟಮ್ಮನತೋಟ, ಗುಬ್ಬಿಗೇಟ್ ರಿಂಗ್ ರಸ್ತೆ, ಪಿಜಿ ಲೇಔಟ್, ವಿನೋಬನಗರ, ಹೆಗ್ಗಡೆ ಕಾಲೋನಿ, ಜಯಪುರ, ಹೌಸಿಂಗ್ ಬೋರ್ಡ್, ಕುರಿಪಾಳ್ಯ ಪ್ರದೇಶಗಳಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9449844296ನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296Power outage in these areas on November 3

Read More

ತುಮಕೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಸಲು ಜಿಲ್ಲೆಯ ಶಿರಾ, ತುಮಕೂರು, ಪಾವಗಡ, ಮಧುಗಿರಿ ತಾಲ್ಲೂಕು ಸೇರಿ 4 ಕಡೆ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಪಡೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ರೈತರ ಹಿತದೃಷ್ಠಿಯಿಂದ ಶೇಂಗಾ ಬೆಳೆಯನ್ನು ಹೆಚ್ಚಾಗಿ ಬೆಳೆಯುವ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಖರೀದಿ ಕೇಂದ್ರಗಳನ್ನು ಆಯಾ ತಾಲ್ಲೂಕುನ ಎಪಿಎಂಸಿ ಆವರಣದಲ್ಲಿ ತೆರೆಯಬೇಕು. ಶೇಂಗಾ ಖರೀದಿಗಾಗಿ ಕೇಂದ್ರ ಸರ್ಕಾರದ ನಫೆಡ್ ಮತ್ತು ರಾಜ್ಯ ಸರ್ಕಾರದ ಕೆ.ಓ.ಎಫ್.ಅನ್ನು ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ. ಎಫ್.ಎ.ಕ್ಯೂ ನಿಯಾಮಾನುಸಾರ ಪ್ರತಿ ಎಕರೆಗೆ ಒಬ್ಬ ರೈತನಿಂದ 3 ಕ್ವಿಂಟಾಲ್ನAತೆ ಗರಿಷ್ಠ 15 ಕ್ವಿಂಟಾಲ್ ಶೇಂಗಾ ಬೀಜವನ್ನು ಖರೀದಿಸಬೇಕು. ಪ್ರತಿ ಕ್ವಿಂಟಾಲ್ ಶೇಂಗಾ ಬೀಜಕ್ಕೆ 6,783 ರೂ.ಗಳ ಬೆಂಬಲ ಬೆಲೆಯನ್ನು ನಿಗಧಿಪಡಿಸಲಾಗಿದೆ ಎಂದು ತಿಳಿಸಿದರು. ಶೇಂಗಾ ಖರೀದಿ ಕೇಂದ್ರಗಳಲ್ಲಿ ನವೆಂಬರ್ 4 ರಿಂದ ನೋಂದಣಿ…

Read More

ತುಮಕೂರು: ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನವೆಂಬರ್ 4ರಂದು ಜಿಲ್ಲೆಯ 6 ಗ್ರಾಮ ಪಂಚಾಯತಿಗಳಲ್ಲಿ ಪಿಂಚಣಿ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಈ ಅದಾಲತ್‌ನಲ್ಲಿ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳ ಕುಂದು–ಕೊರತೆಗಳನ್ನು ಆಲಿಸಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ನವೆಂಬರ್ 4ರಂದು ಜಿಲ್ಲೆಯ ತಿಪಟೂರು ತಾಲೂಕಿನ ಗುರುಗದಹಳ್ಳಿ; ತುಮಕೂರು ತಾಲೂಕಿನ ಗಂಗೋನಹಳ್ಳಿ ಹಾಗೂ ಸಿರಿವರ; ಕುಣಿಗಲ್ ತಾಲೂಕಿನ ಉಜ್ಜಿನಿ; ಕೊರಟಗೆರೆ ತಾಲೂಕಿನ ಕುರಂಕೋಟೆ; ಗುಬ್ಬಿ ತಾಲೂಕಿನ ಚಂಗಾವಿ ಗ್ರಾಮ ಪಂಚಾಯಿತಿಗಳಲ್ಲಿ ಪಿಂಚಣಿ ಅದಾಲತ್ ನಡೆಯಲಿದ್ದು, ಪಿಂಚಣಿದಾರರು ಅದಾಲತ್‌ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಬೆಸ್ಕಾಂ ವಿಭಾಗದ ವ್ಯಾಪ್ತಿಯಲ್ಲಿ ಕೃಷಿ ಪಂಪ್ ಸೆಟ್ ಗಾಗಿ 50 ರೂ. ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಂಡಿರುವ ರೈತರು ಸಕ್ರಮಕ್ಕಾಗಿ ಉಳಿದ ನಿಗಧಿತ ಶುಲ್ಕ 10,000 ರೂ.ಗಳನ್ನು ಪಾವತಿಸಿ ಅಗತ್ಯ ದಾಖಲೆಗಳನ್ನು ನವೆಂಬರ್ 10ರೊಳಗಾಗಿ ಸಂಬಂಧಿಸಿದ ಶಾಖಾ ಕಚೇರಿ ಅಥವಾ ಉಪವಿಭಾಗ ಕಚೇರಿಗಳಿಗೆ ಸಲ್ಲಿಸಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ರೈತರಲ್ಲಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಕೃಷಿ ಇಲಾಖೆಯು ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ–2025ರ ಪ್ರಯುಕ್ತ ನವೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಿದೆ. ಈ ಸ್ಪರ್ಧೆಯಲ್ಲಿ ಕೃಷಿ ಇಲಾಖೆ ಅಧಿಕಾರಿ/ಸಿಬ್ಬಂದಿ, ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಭಾಗವಹಿಸಬಹುದಾಗಿದ್ದು, ಭಾಗವಹಿಸುವವರು ತಮ್ಮ ಅರ್ಜಿಯಲ್ಲಿ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯದ ಬಗ್ಗೆ ಮಾಹಿತಿ ನೀಡಬೇಕು. ಅರ್ಜಿ ನಮೂದಿಸಿದ ತಿನಿಸನ್ನು ಮನೆಯಲ್ಲಿಯೇ ತಯಾರಿಸಿ ನವೆಂಬರ್ 15ರಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಪ್ರದರ್ಶಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ಸ್ಪರ್ಧಿಗೆ ಒಂದೇ ಸಸ್ಯಹಾರಿ ತಿನಿಸು(ಸಿಹಿ ಅಥವಾ ಖಾರ ಅಥವಾ ಮರೆತು ಹೋದ ಖಾದ್ಯ) ತಯಾರಿಸಲು ಅವಕಾಶವಿರುತ್ತದೆ. ಸ್ಪರ್ಧೆಯಲ್ಲಿ ಆಯ್ಕೆಯಾದವರಿಗೆ ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತು ಹೋದ ಖಾದ್ಯಗಳ ತಿನಿಸಿಗೆ ಜಿಲ್ಲಾ ಮಟ್ಟದಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ…

Read More

ತುಮಕೂರು:   ಗೃಹ ಸಚಿವರನ್ನು ಮೆಚ್ಚಿಸಲು ಸಾರ್ವಜನಿಕ ಜೀವನದ ಜೊತೆಗೆ ಎತ್ತಿನಹೊಳೆ  ಅಧಿಕಾರಿಗಳು ಚೆಲ್ಲಾಟ ವಾಡುತ್ತಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಜಟ್ಟಿ ಅಗ್ರಹಾರ ನಾಗರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎತ್ತಿನಹೊಳೆ C E ವರದಯ್ಯ ಎಸಿ ರೂಮ್ನ ಲ್ಲಿ, ಜಮೀನು ಕಳಕೊಂಡ ರೈತರು ಬೀದಿಲ್ಲಿ, ನಮ್ಮನ್ನಾಳುವ ಜನಪ್ರತಿನಿಧಿಗಳಿಗೆ ಪರ್ಸೆಂಟೇಜ್ ದುಡ್ಡು ಸೂಟ್ಕೇಸ್ ನಲ್ಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯ ಕಾಲುವೆ ಕಾಮಗಾರಿಗಳಲ್ಲಿ ಪ್ರಮುಖವಾಗಿ ಇರಕಸಂದ್ರ ಕಾಲೋನಿ ಮತ್ತು ಲಕ್ಕೇನಹಳ್ಳಿ ಭಾಗದ ಕಾಮಗಾರಿಗಳಲ್ಲಿ ಯಾವುದೇ Third party Quality Control Team ಇಲ್ಲದೆ ಅಧಿಕಾರಿಗಳು ನೂರಾರು ಕೋಟಿ ಬಿಲ್ಲುಗಳು ಪಾವತಿ ಮಾಡಿದ್ದಾರೆ ಅಂತ ನಾಗರಾಜು ಆರೋಪಿಸಿದ್ದಾರೆ. ನಿಯಮಗಳನ್ನ ಪಾಲಿಸದೆ ಎಗ್ಗಿಲ್ಲದೆ ಹಗಲು ರಾತ್ರಿ ಬ್ಲಾಸ್ಟಿಂಗ್ ಮಾಡಿ ಸಾರ್ವಜನಿಕರಿಗೆ ತೀವ್ರ ತೊಂದರೆ ನೀಡಲಾಗುತ್ತಿದೆ. ಈ ಬಗ್ಗೆ ಗಮನ ಹರಿಸದೇ ಅಧಿಕಾರಿಗಳು  ಕಣ್ಮುಚ್ಚಿ ಬೆಚ್ಚನೆ ಕುಳಿತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ತನಿಖಾ ಸಂಸ್ಥೆಗಳಿಂದ ತನಿಖೆ ಮಾಡಿದರೆ ಎತ್ತಿನಹೊಳೆ ಯೋಜನೆಯ ಬಂಡವಾಳ ಹೊರಬೀಳಲಿದೆ.   ಲಕ್ಕೇನಹಳ್ಳಿ ಭಾಗದ…

Read More

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು   ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ದೀಪಾವಳಿಯನ್ನು ಅಕ್ಟೋಬರ್ 31 ರಂದು  ಆಚರಿಸಲಾಗುವುದು. ಈ ವರ್ಷ ಮೂವತ್ತು ವರ್ಷಗಳ ನಂತರ ಶನಿದೇವ ದೀಪಾವಳಿಯಂದು ಶುಭ ಸಂಯೋಗ ರೂಪಿಸುತ್ತಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ದಿನ ಬುಧಾದಿತ್ಯ ಯೋಗದೊಂದಿಗೆ ಶಶ ರಾಜಯೋಗವೂ…

Read More

ತುಮಕೂರು:  ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವರ್ಚುಯಲ್ ಉಪಸ್ಥಿತಿಯಲ್ಲಿ ರೋಜ್‌ ಗಾರ್ ಮೇಳದ ಮೂಲಕ ದೇಶದಾದ್ಯಂತ ಸರ್ಕಾರಿ ಹುದ್ದೆಗಳಿಗೆ ನೇಮಕಗೊಂಡ 51ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದು ಕೇಂದ್ರ ಸರಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಮೈಸೂರಿನ ಮಾನಸ ಗಂಗೋತ್ರಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರಕಾರಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ 85 ಅಭ್ಯರ್ಥಿಗಳು ಹಾಗೂ ಇತರೆ ರಾಜ್ಯದ 86 ಅಭ್ಯರ್ಥಿಗಳು ಸೇರಿದಂತೆ ಒಟ್ಟು 171 ಫಲಾನುಭವಿಗಳಿಗೆ ರೋಜ್‌ಗಾರ್ ಮೇಳದಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ 2022ರ ಅಕ್ಟೋಬರ್ ತಿಂಗಳಿನಲ್ಲಿ ರಾಷ್ಟ್ರೀಯ ರೋಜ್‌ಗಾರ್ ಮೇಳ(ಉದ್ಯೋಗ…

Read More