Author: admin

ಕೊರಟಗೆರೆ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಸೆರೆಮನೆ ವಾಸದಲ್ಲಿದ್ದ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದ ಕಾರಣ ಶಸ್ತ್ರಚಿಕಿತ್ಸೆಗಾಗಿ ಮಂಗಳವಾರ ಹಿರಿಯ ವಕೀಲ ಸಿ.ವಿನಾಗೇಶ್ ಮಧ್ಯಾಂತರ ಜಾಮೀನಿಗೆ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಬುಧವಾರ ಬೆ.10:30ಕ್ಕೆ ಉಚ್ಚ ನ್ಯಾಯಾಲಯ 6ವಾರಗಳ ಮಧ್ಯಾಂತರ ಜಾಮೀನು ನೀಡಿದ ಬೆನ್ನಲ್ಲೆ ಇಲ್ಲಿನ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿ ನ್ಯಾಯಾಲಯಕ್ಕೆ ಕೃತಜ್ಞತೆ ತಿಳಿಸಿದ್ದಾರೆ. ಅಡವಿ ಸಿನಿಮಾದ ನಿರ್ಮಾಪಕ ಟೈಗರ್ ನಾಗರಾಜ್ ಮಾತನಾಡಿ, ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್‍ ರವರು ಕನ್ನಡ ಚಿತ್ರರಂಗದಲ್ಲಿ ಸಿನಿಮಾದ ಮುಖಾಂತರ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ. ಆದರೆ ಇತ್ತೀಚಿಗೆ ಕಳೆದ ಕೆಲವು ತಿಂಗಳ ಹಿಂದೆ ಕೊಲೆ ಪ್ರಕರಣದಲ್ಲಿ ಸೆರೆಮನೆ ವಾಸದಲ್ಲಿದ್ದ ವೇಳೆ ಬೆನ್ನು ನೋವಿನ ಸಮಸ್ಯೆ ತೀವ್ರಗೊಂಡ ಕಾರಣ ಹೈಕೋರ್ಟ್ ನ್ಯಾಯಧೀಶರು ವೈದ್ಯಕೀಯ ವರದಿಯನ್ನು ಗಮನಿಸಿ ದರ್ಶನ್  ಅವರಿಗೆ 6 ವಾರಗಳವೆರೆಗೆ ಮಧ್ಯಾಂತರ ಜಾಮೀನು ನೀಡಿ ಅಭಿಮಾನಿಗಳಿಗೆ ದೀಪಾವಳಿ ಹಬ್ಬಕ್ಕೆ ಉಡುಗೊರೆ ನೀಡಿದ್ದಾರೆ. ದರ್ಶನ್…

Read More

ಮಧುಗಿರಿ: ಮಾದಿಗ ಸಮಾಜ ಒಳಮೀಸಲಾತಿಗಾಗಿ 3 ದಶಕದಿಂದ ನಿರಂತರ ಹೋರಾಟ ಮಾಡುತ್ತಿದೆ . ಮೀಸಲಾತಿ ವಂಚಿತರ ಕಣ್ಣೀರು ಒರೆಸುವ ಬದಲು ಕರ್ನಾಟಕ ಸರ್ಕಾರ ಕಣ್ಣಿಗೆ ಮಣ್ಣೆರುಚುವ ಹೊಸ ಆಯೋಗ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಮಧುಗಿರಿ ಜಿಲ್ಲೆ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್.ಆರ್. ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 1 ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರವೂ ಕರ್ನಾಟಕದಲ್ಲಿ ನಿರಂತರ ಹೋರಾಟ ನಡೆದಿದೆ. ಹೊಸದೊಂದು ಆಯೋಗ ರಚಿಸಿ ಅನ್ನುವ ಬೇಡಿಕೆ ಮಾದಿಗ ಸಮಾಜದಿಂದ ಬಂದಿರಲೇ ಇಲ್ಲ . ಹೊಸ ಆಯೋಗ ರಚಿಸಿ ಎಂದು ಮಾದಿಗ ಸಮಾಜದ ಯಾವ ಹೋರಾಟಗಾರರೂ ಬೇಡಿಕೆ ಸಲ್ಲಿಸಿರಲಿಲ್ಲ . ಹೊಸ ಆಯೋಗ ರಚಿಸುವ ಹಿಂದೆ ದೊಡ್ಡ ಹುನ್ನಾರವಿದೆ . ಕಾಲಹರಣ ಮಾಡಿ ಸಂತ್ರಸ್ತ ದಲಿತರನ್ನು ವಂಚಿಸುವ ಉದ್ದೇಶದಿಂದಲೇ ಆಯೋಗ ರಚಿಸುವ ನಾಟಕ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಸುಪ್ರೀಂಕೋರ್ಟಿನ ತೀರ್ಪು ಬಂದು 3 ತಿಂಗಳಾದರು ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯ ಬೇಡಿಕೆಯನ್ನು ನಿರ್ಲಕ್ಷಿಸುತ್ತಾ…

Read More

ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂಪೀರ್ ಖಾದ್ರಿ ಇಂದು ನಾಮಪತ್ರ ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಅಜ್ಜಂಪೀರ್ ಖಾದ್ರಿ ಮನವೊಲಿಕೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಚಿವ ಜಮೀರ್ ಅಹ್ಮದ್, ಶಿವಾನಂದ ಪಾಟೀಲ್ ಜೊತೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ನ.13ರಂದು ನಡೆಯಲಿರುವ ಉಪಚುನವಣೆ ಹಿನ್ನೆಲೆಯಲ್ಲಿ ನಾಮಪತ್ರ ವಾಪಾಸ್ ಪಡೆಯಲು ಇಂದು ಕೊನೆ ದಿನವಾಗಿತ್ತು. ಮಧ್ಯಾಹ್ನ 3ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮಲಪ್ಪುರಂ: ಕಂಪನದ ಸಹಿತ ಸ್ಫೋಟದಂತಹ ಶಬ್ದ ಕೇಳಿದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಆನಕಲ್ ಪ್ರದೇಶದಲ್ಲಿ ನಡೆದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಮಾರು 300 ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ಮಂಗಳವಾರ ರಾತ್ರಿ 9:15ಕ್ಕೆ ಮೊದಲ ಬಾರಿ ಸದ್ದು ಕೇಳಿಸಿತು. ನಂತರ ರಾತ್ರಿ 10:15 ಹಾಗೂ 10.45ಕ್ಕೆ ಮತ್ತೆರಡು ಸಲ ಲಘು ಕಂಪನದ ಅನುಭವ ಉಂಟಾಯಿತು. ಈ ಶಬ್ದಗಳು ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಉಂಟಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭೀತಿಯನ್ನುಂಟು ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ತಡರಾತ್ರಿ 85 ಕುಟುಂಬಗಳಿಗೆ ಸೇರಿದ 287 ಜನರನ್ನು ಶಾಲೆಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾನೈಟ್ ಕ್ವಾರಿಗಳಿಂದ ಕೇಳಿಬರುವುದಕ್ಕೆ ಸಮಾನವಾದ ಶಬ್ದ ಕೇಳಿಸಿತು. ನಿರಂತರವಾಗಿ ಕಂಪನ ಉಂಟಾಯಿತು. ಕೆಲವು ಮನೆಗಳಲ್ಲಿ ಬಿರುಕು ಕಂಡುಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗ್ರಾಮ, ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಳಿಕ ಜನರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಲು ಆರಂಭಿಸಿದ್ದಾರೆ ಎಂದು…

Read More

ಬೆಂಗಳೂರು : ಸಿಎಂ ಆಗಿದ್ದಾಗಲೇ ತಾನು ಪ್ರತಿನಿಧಿಸುತ್ತಿದ್ದ ಚನ್ನಪಟ್ಟಣ ಕ್ಷೇತ್ರಕ್ಕೆ ಏನೂ ಮಾಡದ ಕುಮಾರಣ್ಣ ಈಗ ಈ ಕ್ಷೇತ್ರದ ಶಾಸಕ ಸ್ಥಾನವೂ ಇಲ್ಲದಿರುವಾಗ ಅವರು ಏನು ತಾನೇ ಮಾಡಲು ಸಾಧ್ಯ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ನಾವು ಚುನಾವಣೆಗಾಗಿ ಚನ್ನಪಟ್ಟಣದಲ್ಲಿ ಕೆಲಸ ಮಾಡುತ್ತಿಲ್ಲ. ಅಲ್ಲಿ ಶಾಸಕ ಸ್ಥಾನ ತೆರವಾದಾಗಿನಿಂದಲೂ ನಾನು ಹಾಗೂ ರಾಮಲಿಂಗಾರೆಡ್ಡಿ ಅವರು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಆ ಕ್ಷೇತ್ರದ ಜನರ ಮನೆ ಬಾಗಿಲಿಗೆ ಸರ್ಕಾರ ಹೋಗಿ ಅವರ ಕಷ್ಟಗಳನ್ನು ಆಲಿಸಿದೆ. ಪಂಚಾಯ್ತಿ ವ್ಯಾಪ್ತಿಯಲ್ಲಿ ಜನರ ಸಮಸ್ಯೆ ಕೇಳಲು ಕಾರ್ಯಕ್ರಮ ಮಾಡಿದಾಗ ಸುಮಾರು 22 ಸಾವಿರ ಕುಟುಂಬಗಳು ಅರ್ಜಿ ಸಲ್ಲಿಸಿವೆ ಎಂದರು. ತಮಗೆ ಮನೆ, ನಿವೇಶನ ನೀಡಿಲ್ಲ, ಬಗರ್ ಹುಕ್ಕುಂ ಸಾಗುವಳಿ ಸಭೆ ಮಾಡಿಲ್ಲ, ರಸ್ತೆ ಇಲ್ಲ. ನಮ್ಮ ಕಷ್ಟ ಕೇಳಲು ಈ ಹಿಂದೆ ಶಾಸಕರಾಗಿದ್ದ ಕುಮಾರಣ್ಣ ಬಂದಿಲ್ಲ ಎಂದು ಜನ ಸಮಸ್ಯೆ ಹೇಳಿಕೊಂಡರು.…

Read More

ಮೈಸೂರು: ಮಾಜಿ ಶಾಸಕರೊಬ್ಬರ ಜಮೀನಿನ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ 7 ವರ್ಷದ ಬೃಹತ್ ಗಂಡು ಚಿರತೆ ಬಿದ್ದಿದ್ದು, ಚಿರತೆಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ ಪಟ್ಟಣದ ಸಮೀಪ ಇರುವ ಮಾಜಿ ಶಾಸಕ ಎನ್.ನಾಗರಾಜು ಅವರಿಗೆ ಸೇರಿದ ಜಮೀನಿನ ಬಳಿ ಚಿರತೆಗೆ ಬೋನು ಇರಿಸಲಾಗಿತ್ತು. ಇದೀಗ ಕೊನೆಗೂ ಚಿರತೆ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಹೆಚ್‌ಡಿ ಕೋಟೆ ಪಟ್ಟಣದ ಹೌಸಿಂಗ್ ಬೋರ್ಡ್‌ಗೆ ಹೊಂದಿಕೊಂಡಂತೆ ಇರುವ ಜಮೀನಿನ ರೈತರಾದ ದಶರಥ, ಎನ್.ನಾಗರಾಜು, ವಿವೇಕ, ಗುರುಮಲ್ಲು, ಸಣ್ಣಪ್ಪ, ಸೋಮಣ್ಣ, ಸಣ್ಣಯ್ಯರ ಜಮೀನುಗಳಲ್ಲಿ ಕಳೆದ ಒಂದು ತಿಂಗಳ ಒಳಗೆ ನೂರು ಅಡಿಗಳ ಅಂತರದಲ್ಲಿ 4 ಚಿರತೆ ಸೆರೆಯಾಗಿತ್ತು. ಇದೀಗ ಮತ್ತೊಂದು 7 ವರ್ಷದ ಚಿರತೆ ಸೆರೆ ಸಿಕ್ಕಿರುವುದು ಆತಂಕ ಹೆಚ್ಚಿಸಿದೆ. ಈ ಚಿರತೆಗಳು ಈ ಭಾಗದಲ್ಲಿ ರೈತರ ಹಸು, ಕರು ಮೇಕೆ ಹಾಗೂ ಸಾಕು ನಾಯಿಗಳನ್ನು ತಿಂದು ಹಾಕುತ್ತಿದ್ದವು. ಪ್ರತಿ ಭಾರಿ ಚಿರತೆ ಸಿಕ್ಕಿದ ನಂತರ ಮತ್ತೆ ಜಮೀನುಗಳಲ್ಲಿ…

Read More

ಕೊರಟಗೆರೆ: ಹೊಳವನಹಳ್ಳಿ ಕೃಷಿ ಉತ್ಪನ್ನ ಉಪ ಮಾರುಕಟ್ಟೆಗೆ ಗ್ರಾಮ ಪಂಚಾಯಿತಿ ಅಧಿಕಾರಿ ವರ್ಗ ಬೀಗ ಜಡಿದು ಮೌನಕ್ಕೆ ಶರಣಾಗಿದ್ದು, ಈ ಮೂಲಕ ಗೃಹ ಸಚಿವರ ರೈತಪರ ಆಶಯವನ್ನೇ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಮಣ್ಣು ಪಾಲು ಮಾಡಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ. ಗ್ರಾಮೀಣ ಭಾಗದ ರೈತರ ಅನುಕೂಲಕ್ಕಾಗಿ 2018–19ರಲ್ಲಿ 2 ಕೋಟಿ ವೆಚ್ಚದಲ್ಲಿ 40 ಅಂಗಡಿ ಮಳಿಗೆ ನಿರ್ಮಾಣ ಮಾಡಲಾಗಿತ್ತು. ಆದರೆ ಈ 40 ಅಂಗಡಿ ಮಳಿಗೆಗಳ ಸುತ್ತಮುತ್ತ ಜಾಲಿ ಮತ್ತು ಬೇಲಿ ಗಿಡಗಳು ಬೆಳೆದು ಕೃತಕ ಕಾಡು ಸೃಷ್ಟಿಯಾಗಿದೆ. ಜನರಿಗೆ ಅನುಕೂಲವಾಗಲಿ ಎಂದು ಕೋಟಿಗಟ್ಟಲೆ ಹಣ ಸುರಿಸಿ ಕಟ್ಟಿದ ಕಟ್ಟಡ ನೀರಲ್ಲಿ ಮಾಡಿದ ಹೋಮದಂತಾಗಿದೆ. ಶುಕ್ರವಾರದ ಹೊಳವನಹಳ್ಳಿ ತರಕಾರಿ ಸಂತೆಗೆ ತಾ.ಪಂ. ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದಲೇ ತೊಂದರೆಯಾಗುತ್ತಿದೆ. ಕೊರೊನಾ ಸಮಯದಲ್ಲಿ ಸ್ಥಗಿತವಾದ ಶುಕ್ರವಾರ ತರಕಾರಿ ಸಂತೆ ಪ್ರಾರಂಭಕ್ಕೆ ಗ್ರಾಮ ಪಂಚಾಯಿತಿಯೇ ಮನಸ್ಸು ಮಾಡದೇ ಇರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಹೊಳವನಹಳ್ಳಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಅಧಿಕಾರ ದುರುಪಯೋಗದ ಕರ್ಮಕಾಂಡ…

Read More

ಬಳ್ಳಾರಿ: ನಟ ದರ್ಶನ್ ಅವರಿಗೆ ಜಾಮೀನು ಸಿಕ್ಕಿರುವ ಹಿನ್ನೆಲೆ ದರ್ಶನ್ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇದರ ಬೆನ್ನಲ್ಲೇ ಡಿ ಕಂಪೆನಿ ಸಾಮಾಜಿಕ ಜಾಲತಾಣಗಳಲ್ಲಿ ದರ್ಶನ್ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದೆ. ಎಲ್ಲಾ ತೂಗುದೀಪ ಪರಿವಾರದ ಅಭಿಮಾನಿಗಳಿಗೆ ಈ ಮೂಲಕ ತಿಳಿಸುವುದು ಏನೆಂದರೆ ಡಿ ಬಾಸ್ ರವರು ಬಿಡುಗಡೆಯಾಗಿರುವುದು ಚಿಕಿತ್ಸೆಯ ಸಲುವಾಗಿ ಆದ್ದರಿಂದ, ಅಭಿಮಾನಿಗಳು ದರ್ಶನ್ ಅವರ ಮನೆ ಮುಂದೆ ಹೋಗಿ ಪಟಾಕಿ ಹೊಡೆಯುವುದು, ಕೂಗಾಡುವುದು ಮಾಡುವಂತಿಲ್ಲ, ಹಾಗೂ ಮಾಧ್ಯಮಗಳಿಗೆ, ಬೇರೆ ನಟರಿಗೆ, ಪೊಲೀಸ್ ಅಧಿಕಾರಿಗಳ ಬಗ್ಗೆ ಹಗುರವಾಗಿ ಮಾತನಾಡುವಂತಿಲ್ಲ ಎಂದು ತಿಳಿಸುತ್ತೇವೆ ಎಂದು ಮನವಿ ಮಾಡಿಕೊಂಡಿದ್ದಾರೆ. ಡಿ ಕಂಪನಿ ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋ ವೊಂದನ್ನು ಶೇರ್ ಮಾಡಿರುವ ಫ್ಯಾನ್ಸ್, ಡೆವಿಲ್ ಈಸ್ ಬ್ಯಾಕ್ ಎಂದು ವಿಡಿಯೋವೊಂದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ದರ್ಶನ್ ಬಿಡುಗಡೆ ಸುದ್ದಿ ತಿಳಿಯುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಬಳ್ಳಾರಿ ಜೈಲಿನ ಮುಂಭಾಗ ಕಾದು ಕುಳಿತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ–2025ಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಎಲ್ಲಾ 2627 ಮತಗಟ್ಟೆಗಳಲ್ಲಿ ಮಂಗಳವಾರ ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಕರಡು ಮತದಾರರ ಪಟ್ಟಿಯಲ್ಲಿ 11,40,216 ಪುರುಷರು, 11,61,932 ಮಹಿಳೆಯರು ಹಾಗೂ 89 ಇತರೆ ಸೇರಿ ಒಟ್ಟು 23,02,237 ಮತದಾರರಿದ್ದಾರೆ. ಕರಡು ಸೇವಾ ಮತದಾರರ ಪಟ್ಟಿಗಳಲ್ಲಿ 685 ಪುರುಷರು, 40 ಮಹಿಳೆಯರು ಸೇರಿ ಒಟ್ಟು 725 ಮತದಾರರಿದ್ದಾರೆ. ವಿಶೇಷ ಚೇತನ ಮತದಾರರಿಗೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಒಟ್ಟು 32,010 ಮತದಾರರನ್ನು ನೋಂದಣಿ ಮಾಡಲಾಗಿದೆ. ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬAಧಿಸಿದAತೆ ಅಕ್ಟೋಬರ್ 29 ರಿಂದ ನವೆಂಬರ್ 28ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು. ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಪ್ರತಿ ವರ್ಷ 1ನೇ ಜನವರಿ ಯನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ, ಪರಿಷ್ಕರಣೆ ಕಾರ್ಯ ನಡೆಸಲಾಗುತ್ತಿತ್ತು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ…

Read More

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾ ನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನವೆಂಬರ್ 18ರಂದು ಆಚರಿಸಲಾಗುವ “ಸಂತ ಶ್ರೇಷ್ಠ ಕನಕದಾಸರ ಜಯಂತ್ಯುತ್ಸವ” ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕುರುಬ ಸಮುದಾಯದ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸ್ವ ಬರಹದ ಅರ್ಜಿಯನ್ನು ನವೆಂಬರ್ 8ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕ, ಬಾಳನಕಟ್ಟೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816-2275204ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

Read More