Subscribe to Updates
Get the latest creative news from FooBar about art, design and business.
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
ತುಮಕೂರು: ಕೆರೆ ಕೋಡಿ ನೀರು ಹರಿಯುವ ಜಾಗದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಬಿದ್ದು ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವತಿಯೊಬ್ಬಳನ್ನು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ. ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ಈ ಘಟನೆ ನಡೆದಿದೆ. ಹಂಸ (19) ಅಪಾಯದಿಂದ ಪಾರಾದ ಯುವತಿಯಾಗಿದ್ದಾಳೆ. ಅಗ್ನಿಶಾಮಕ ದಳದ ಸಿಬ್ಬಂದಿ ಬರೋಬ್ಬರಿ 12 ಗಂಟೆಗಳ ಕಾರ್ಯಾಚರಣೆ ನಡೆಸಿ ಯುವತಿಯ ಪ್ರಾಣ ಉಳಿಸಿದ್ದಾರೆ. ಘಟನೆಯ ವಿವರ: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಅವರ ಪುತ್ರಿ ಹಂಸ, ನಿನ್ನೆ ರಜೆ ಹಿನ್ನೆಲೆ ಸ್ನೇಹಿತರ ಜೊತೆ ಮಂದಾರಗಿರಿ ಬೆಟ್ಟಕ್ಕೆ ಬಂದಿದ್ದಳು. ಈ ವೇಳೆ ಅಲ್ಲೆ ಸಮೀಪದಲ್ಲಿರುವ ಮೈದಾಳ ಕೆರೆ ತುಂಬಿ ಕೋಡಿ ಬಿದ್ದಿತ್ತು. ಅದನ್ನ ನೋಡಲು ತೆರಳಿದ್ದ ಯುವತಿ, ಕೆರೆ ಕೋಡಿ ನೀರು ಹರಿಯುವ ಸ್ಥಳದಲ್ಲಿ ನಿಂತು ಸೆಲ್ಪಿ ಪೋಟೋ ತೆಗೆದುಕೊಳ್ಳಲು ಮುಂದಾಗಿದ್ದು, ಈ ವೇಳೆ ಕಾಲು ಜಾರಿ ಬಿದ್ದಿದ್ದು, ಕೋಡಿಹರಿಯುತ್ತಿರುವ ನೀರಿನಲ್ಲಿ ಕೊಚ್ಚಿ ಹೋಗಿದ್ದಳು. ವಿಷಯ ತಿಳಿದು ಸ್ಥಳಕ್ಕೆ…
ಸರಗೂರು: ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಸದಸ್ಯತ್ವ ಅಭಿಯಾನವು ಭಾನುವಾರ ದೇವಲಾಪುರ ಹುಲ್ಲೇಮಾಳ, ತೆಲಗುಮಸಹಳ್ಳಿ, ಸಿದ್ದಾಪುರ, ತೆರಣಿಮುಂಟಿ ಗ್ರಾಮಗಳಿಗೆ ನಡೆಯಿತು. ಸಂಘದ ಅಧ್ಯಕ್ಷ ನಟರಾಜು ಸಮ್ಮುಖದಲ್ಲಿ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಸದಸ್ಯತ್ವ ಅಭಿಯಾನ ನಡೆಸಲಾಯ್ತು. ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಹೆಚ್ಚಿನ ಕೆಲಸ ಮಾಡುವ ನಿಟ್ಟಿನಲ್ಲಿ ಈ ಸದಸ್ಯತ್ವ ಅಭಿಯಾನ ನಡೆಸಲಾಯ್ತು. ಇದೇ ವೇಳೆ ಪ್ರಧಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ ಮಾತನಾಡಿ, ಪ್ರತಿ ಗ್ರಾಮಗಳಲ್ಲಿ 100 ರಿಂದ 200 ಜನರು ಸದಸ್ಯತ್ವ ಪಡೆದುಕೊಂಡು ನಮ್ಮ ಜನಾಂಗವನ್ನು ರಾಷ್ಟ್ರ ಮಟ್ಟಕ್ಕೆ ತೋರಿಸಬೇಕು. ನಮ್ಮ ಜನಾಂಗದ ಯುವ ಪೀಳಿಗೆ ಮುಂದಿನ ಭವಿಷ್ಯಗಳಿಗೆ ಮಾದರಿವಾಗುವ ನಿಟ್ಟಿನಲ್ಲಿ, ಎಲ್ಲಾ ಗ್ರಾಮದ ಮುಖಂಡರು ಮತ್ತು ಯುವಕರು ನಮ್ಮ ಜೊತೆ ಕೈಜೋಡಿಸಲು ಮುಂದೆ ಬನ್ನಿ ಎಂದು ಕರೆ ನೀಡಿದರು. ನಾವುಗಳು ತಾಲ್ಲೂಕು ಮಟ್ಟದಿಂದ 1,000 ಸಾವಿರಕ್ಕಿಂತ ಹೆಚ್ಚು ಸದಸ್ಯತ್ವ ಮಾಡಿ ಜಿಲ್ಲಾ ಮತ್ತು ರಾಜ್ಯಕ್ಕೆ ಕಳಿಸಿ, ನಂತರ ರಾಷ್ಟ್ರಿಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಕ್ಕೆ ಮಾಹಿತಿಯನ್ನು…
ತುಮಕೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಂದು ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸಿದರು. ತಿಪಟೂರಿನ ಕಲ್ಪತರು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ರೈತರು ಹಾಗೂ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಚಿವ ವಿ.ಸೋಮಣ್ಣ ಮುಂದೆ ಪ್ರಸ್ತಾಪಿಸಿದರು. ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂಬ ದೂರನ್ನು ಸಚಿವರ ಬಳಿ ಹೇಳಿಕೊಂಡರು. ಸ್ಥಳದಲ್ಲಿ ಇದ್ದ ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ಸಚಿವ ಸೋಮಣ್ಣ ತರಾಟೆಗೆ ತೆಗೆದುಕೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಮೇಘಲಪಾಳ್ಯ ಗ್ರಾಮದಲ್ಲಿ ಭಾನುವಾರ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರವನ್ನು ಮೇಘಲಪಾಳ್ಯ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಯುವಕರು ಡಿಜೆ ಸದ್ದಿಗೆ ಕುಡಿದು ಕುಪ್ಪಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ತುಮಕೂರು: ಸಮಾಜದಲ್ಲಿನ ಬಲ್ಲಿದರ ಸಹವಾಸದಿಂದ ಬರವಣಿಗೆ –ಬೆಳವಣಿಗೆ ಸುಲಭವಾಗಿದ್ದು, ಹಂಪನ ಅಧ್ಯಯನದಲ್ಲಿ ಅವರ ಗಂಭೀರತೆ ಹೊಂದಿದ್ದರು. ಕಮಲ –ಹಂಪನಾ ದಂಪತಿಗಳು ಪುಸ್ತಕ ಪ್ರಿಯರಾಗಿದ್ದರು. ಸಂಶೋಧನೆಗೆ ತಳಹದಿ ಅಗತ್ಯ ಹಾಗೂ ಯಾವುದೇ ವಿಷಯಕ್ಕೆ ವಿಮರ್ಶೆ ಅಗತ್ಯ ಎಂದು ಹಿರಿಯ ಸಾಹಿತಿ ಸಂಶೋಧಕ ಡಾ.ಎಸ್.ಪಿ.ಪದ್ಮಪ್ರಸಾದ್ ಜೈನ್ ತಿಳಿಸಿದರು . ಅವರಿಂದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಡಾ.ಹಂಪನ ಬದುಕು– ಬರಹ ಕುರಿತು ಗೋಷ್ಠಿ -2 ರ ಬಾಳಿನ ಬಗ್ಗೆ ಉಪನ್ಯಾಸ ನೀಡಿದರು . ಇವರ ನೀತಿಯಿಂದ ಸ್ಥಳೀಯರಿಂದ ವಿದೇಶಿ ಸಂಶೋಧಕರವರೆಗೂ ತುಲನೆಯಿಂದ ಹಲವಾರು ಸಂಶೋಧಕರು ಕಣ್ಣು ತೆರೆದಿದ್ದಾರೆ, ಹಂಪನಾ ಸಾಹಿತ್ಯ ಪರಿಷತ್ ಸಾರಥ್ಯ ವಹಿಸಿ ಹಲವಾರು ಪುಸ್ತಕ ಬರೆದಿದ್ದಾರೆ, ಇವರು ಪುಸ್ತಕಗಳು ಪಠ್ಯಪುಸ್ತಕಗಳಾಗಿವೆ, ಓಲೆ ಗರಿ ಅಂತ ಪ್ರಾಚೀನ ಗ್ರಂಥಗಳನ್ನು ಸಂಪಾದಿಸಿದ್ದಾರೆ .ಕನ್ನಡ ಸೇವಕನಾಗಿ ದುಡಿದಿದ್ದಾರೆ, ಜೀವನದ ಯಾವುದೇ ಕಾರ್ಯಕ್ಕೆ ಕಾಲವೇ ವಿಮರ್ಶಕ ಎಂದು ನಂಬಿದ್ದರು ಎಂದರು. ಡಾ.ಹಂಪನಾ ಅವರ ಕನ್ನಡ ಮತ್ತು ಇಂಗ್ಲಿಷ್ ಕೃತಿಗಳ ಕುರಿತು ವಿಚಾರ ಮಂಡಿಸಿದ ಸಾಹಿತಿ ಡಾ.ಸಂಕಂ…
ತುಮಕೂರು: ಸಮಾಜದಲ್ಲಿ ಸಮಾನತೆ ಸಭ್ಯತೆ ಶಿಸ್ತು ಬದ್ಧ ಜೀವನವೇ ಕಮಲ ಹಂಪನ ಬದುಕಾಗಿತ್ತು ಎಂದು ಅವರು ಸಾಹಿತಿ ಎಚ್.ಎನ್ . ರಾಜ್ಯಶ್ರೀ ತಿಳಿಸಿದರು. ತುಮಕೂರಿನ ಕನ್ನಡ ಸಾಹಿತ್ಯ ಭವನದ ವತಿಯಿಂದ ನಾಡೋಜ ಕಮಲ ಹಂಪನ ಬದುಕು ಬರಹ ಗೋಷ್ಠಿ, –2 ರಲ್ಲಿ ಕಮಲ ಬಾಳಿನ ಬಗ್ಗೆ ಮಾತನಾಡಿದರು. ಕಮಲ ಹಾಗೂ ಹಂಪ ನಾಗರಾಜಯ್ಯ ಸರ್ಕಾರದಿಂದ ಸ್ವಂತಕ್ಕೆ ಯಾವುದೇ ಸಹಾಯ ಪಡೆದಿಲ್ಲ ಅವರು ಎಲ್ಲೂ ಹೊರಗಡೆ ಆಹಾರ ಸೇವಿಸಿದವರಲ್ಲ, ಶಿಸ್ತು ಬದ್ಧ ಜೀವ ಜೀವನದ ಮುಖಿನ ಸಭ್ಯ ಜೀವಮಾನ ನಡೆಸಿದರು ಅವರ ಭಾವನೆಗಳು ವಿಶಿಷ್ಟವಾದವು ಎಂದರು. ಇಳಿಯ ವಯಸ್ಸಿನಲ್ಲಿ ಅವರು ಜೀವನದ ಪಾಠ ಕಲಿಸಿದರು, ಎಲ್ಲಾ ಚಟುವಟಿಕೆಗಳಲ್ಲಿ ತಂದೆಗೆ ನೆರವಾಗಿದ್ದರು, ಅವರು ಬದುಕು ನಮಗೆ ಪಾಠವಾಗಿತ್ತು ಎಂದ ಅವರು ವ್ಯಕ್ತಿಯಲ್ಲ ಶಕ್ತಿಯಾಗಿದ್ದರು ಎಂದರು. ಸಮಾಜದಲ್ಲಿ ಹೇಗೆ ಬದುಕಬೇಕೆನ್ನುವುದನ್ನು ಸಮಾಜಕ್ಕೆ ವಿಶ್ವ ಮಾನವರಾಗಿ ತೋರಿಸಿ ಕೊಟ್ಟರು ವಿಶ್ವಮಾನವರಾಗುವಂತೆ ಸಲಹೆ ನೀಡಿದರು. ಲೇಖಕಿ ಡಾ.ಎನ್ .ಆರ್.ಲಲಿತಾಂಬ ಕಮಲ ಹಂಪನ ರವರು ಸಂಶೋಧನೆ ಮತ್ತು ವೈಚಾರಿಕ ಕೃತಿಗಳ…
ಅಕ್ಟೋಬರ್ 28 ರ ದಿನ ಭವಿಷ್ಯ ಈ ರಾಶಿಗಿಂದು ಶಿವನ ಕೃಪೆಯಿಂದ ಮುಟ್ಟಿದ್ದೆಲ್ಲ ಬಂಗಾರವಾಗುವ ದಿನ. ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ನವೆಂಬರ್ ತಿಂಗಳು ✨ ತುಲಾ ರಾಶಿ ✨ಯವರಿಗೆ ಉತ್ತಮವಾಗಿರುತ್ತದೆ. ಈ ತಿಂಗಳು ಉದ್ಯೋಗ ಸಂದರ್ಶನಗಳಲ್ಲಿ ಯಶಸ್ಸನ್ನು ಪಡೆಯಬಹುದು.…
ನವದೆಹಲಿ: ದೆಹಲಿಯಲ್ಲಿ ಭಾನುವಾರ ಗಾಳಿ ಗುಣಮಟ್ಟ ಸೂಚ್ಯಂಕವು 359 ದಾಖಲಾಗುವ ಮೂಲಕ ಮತ್ತೆ ಅತ್ಯಂತ ಕಳಪೆ ವರ್ಗಕ್ಕೆ ಸೇರಿದ್ದು, ವಾಯುಮಾಲಿನ್ಯ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಸುಧಾರಿಸಿದ್ದ ಗಾಳಿಯ ಗುಣಮಟ್ಟವು ಶನಿವಾರ 255 ಎಕ್ಯೂಐ ಇತ್ತು. ಆದರೆ ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹೆಚ್ಚಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣಾ ಮಂಡಳಿ ತಿಳಿಸಿದೆ. 40 ಮೇಲ್ವಿಚಾರಣಾ ಕೇಂದ್ರಗಳ ಪೈಕಿ 36 ಕೇಂದ್ರಗಳ ಮಾಹಿತಿ ಹಂಚಿಕೊಂಡಿರುವ ಇಲಾಖೆ, 8 ಕೇಂದ್ರಗಳನ್ನು ಹೊರತುಪಡಿಸಿ ಉಳಿದ 28 ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ಬಹಳ ಕಳಪೆಯಾಗಿದೆ ಎಂದು ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ಬೆಂಗಳೂರು: ಕುಡಿದ ಮತ್ತಿನಲ್ಲಿ ಇಬ್ಬರು ಯುವಕರು ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಿಎಂಟಿಸಿ ಬಸ್ ಯಲಹಂಕದಿಂದ ಶಿವಾಜಿನಗರಕ್ಕೆ ಬರುವ ಮಾರ್ಗಮಧ್ಯೆ ನಿನ್ನೆ ಮಧ್ಯಾನಹ್ನ 4 ಗಂಟೆ ಸಂದರ್ಭದಲ್ಲಿ ಟ್ಯಾನರಿ ರಸ್ತೆಯ ಕೆನರಾ ಬ್ಯಾಂಕ್ ಬಸ್ ಸ್ಟಾಪ್ ನಲ್ಲಿ ನಿಂತಾಗ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಏಕಾಏಕಿ ಬಸ್ ನೊಳಗೆ ನುಗ್ಗಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದಾರೆ. ಕಿಡಿಗೇಡಿಗಳು ಮದ್ಯದ ನಶೆಯಲ್ಲಿ ಅವಾಚ್ಯ ಶಬ್ದದಿಂದ ನಿಂದಿಸಿ ಅಮಾನುಷವಾಗಿ ವರ್ತಿಸಿದ್ದಾರೆ. ಮೊದಲು ಚಾಲಕ ಗಗನ್ ಮೇಲೆ ಹಲ್ಲೆ ಮಾಡಿ ನಂತರ ಬಿಡಿಸಲು ಬಂದ ನಿರ್ವಾಹಕನ ಶಿವಕುಮಾರ್ ಮೇಲೆ ಏರಗಿ ಬಸ್ ನಿಂದ ಕೆಳಗೆ ಎಳೆದು ತಂದು ನಂತರ ಮುಖಕ್ಕೆ ಗುದ್ದಿ, ಸೊಂಟಕ್ಕೆ ಹೊಡೆದು ಥಳಿಸಿದ್ದಾರೆ. ಪ್ರಯಾಣಿಕರು ರಕ್ಷಣೆ ಮುಂದಾದಾಗ ಕಿಡಿಗೇಡಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಚಾಲಕ ಗಗನ್ ನೀಡಿರುವ ದೂರಿನ ಮೇರೆಗೆ…
ಬೆಂಗಳೂರು: ಪ್ರತ್ಯೇಕ ಎರಡು ಘಟನೆಗಳಲ್ಲಿ ದರೋಡೆಕೋರರು ಮೊಬೈಲ್ ದೋಚಿ ಪರಾರಿಯಾದ ಘಟನೆ ಬೆಳಕಿಗೆ ಬಂದಿದ್ದು, ದರೋಡೆಕೋರರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕಾರಿನಲ್ಲಿ ಹೋಗುತ್ತಿದ್ದ ಯುವಕನ ದರೋಡೆ: ಕಾರಿನಲ್ಲಿ ಹೋಗುತ್ತಿದ್ದ ಯುವಕನನ್ನು ದ್ವಿಚಕ್ರ ವಾಹದಲ್ಲಿ ಹಿಂಬಾಲಿಸಿದ ಇಬ್ಬರು ದರೋಡೆಕೋರರು ಅಡ್ಡಗಟ್ಟಿ ಬೆದರಿಸಿ ಮೊಬೈಲ್ ಪೋನ್ ದೋಚಿರುವ ಘಟನೆ ರಾತ್ರಿ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಭಂದಿಸಿದಂತೆ ಪರಶುರಾಮ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ ರಾತ್ರಿ 9:30ರ ಸಂದರ್ಭದಲ್ಲಿ ಐಸಿರಿ ಗೋಸಾಲಾ ಬಳಿ ಪರಶುರಾಮ್ ಅವರು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾಗ ಹೊಂಡಾ ಬೈಕ್ ನಲ್ಲಿ ಹಿಂಬಾಲಿಸಿ ಬಂದ ಇಬ್ಬರು ದರೋಡೆಕೋರರು ಅಡ್ಡಗಟ್ಟಿದ್ದಾರೆ. ನಂತರ ಅವರ ಜೊತೆ ಜಗಳವಾಡಿ ಕಾರಿನಲ್ಲಿದ್ದ ಸುಮಾರು 8 ಸಾವಿರ ಮೊತ್ತದ ಮೊಬೈಲ್ ಎಗರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಮಹದೇವಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್ ಕಳವು: ಹೈಗ್ರೌಂಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ…