Subscribe to Updates
Get the latest creative news from FooBar about art, design and business.
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
ಶಿವಮೊಗ್ಗ: ಒಂದೇ ದಿನದಲ್ಲಿ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ನಡೆದಿದೆ. ಚಿಕ್ಕಪೇಟೆನಗರದ ಭಾಷಾ ಎಂಬುವವರ ಮನೆ ಸಮೀಪ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಭಾಷಾ, ಅವರ ಪತ್ನಿ ಅಸ್ಮಾ , ಮಕ್ಕಳಾದ ಆರೀಪ್ , ಅನೀಫ್ , ಪಕ್ಕದ ಮನೆ ನಿವಾಸಿ ಯಾಸೀನ್ ಹಾಗೂ ಹಾಸಿಗೆ ರಿಪೇರಿಗಾಗಿ ತೆರಳಿದ್ದ ಹುಸೇನ್ ಸಾಬ್ , ಬಾಬಾ ಸಾಬ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಸೇನ್ ಸಾಬ್ (68) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಹೊಸನಗರದ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅದೇ ದಿನ ಮತ್ತೇ ರಾತ್ರಿ ಹೆಜ್ಜೇನು ಭಾಷಾ ಪುತ್ರ ಆರೀಫ್ ಮೇಲೆ ಮತ್ತೆ ದಾಳಿಸಿದೆ. ಒಂದೇ ದಿನ ಎರಡು ಬಾರಿ ಹೆಜ್ಜೇನು ದಾಳಿ ನಡೆಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಸರಗೂರು: ಕರ್ನಾಟಕ ರಾಜ್ಯ ಗ್ರಾ.ಪಂ. ಬಿಲ್ ಕಲೆಕ್ಟರ್ ನೌಕರರ ಸಂಘ ಮೈಸೂರು ಜಿಲ್ಲಾ ಸಮಿತಿ ಸಮಾಲೋಚನಾ ಸಭೆ ಹಾಗೂ ಜಿಲ್ಲಾ ಸಮಿತಿಯ ಪುನರ್ ರಚನೆ ಸಭೆಯಲ್ಲಿ ಭಾನುವಾರದಂದು ರಾಜ್ಯಾಧ್ಯಕ್ಷ ಶ್ರೀಲಿಂಗೇಶ್ ರಾಜ್ಯಪ್ರಧಾನ ಕಾರ್ಯದರ್ಶಿ ನಾರಾಯಣ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ ವೇಳೆ ಆಯ್ಕೆಯಾದ ಅಧ್ಯಕ್ಷರು ಮತ್ತು ಸದಸ್ಯರಿಗೆ ಸನ್ಮಾನಿಸಲಾಯಿತು. ಬಿಲ್ ಕಲೆಕ್ಟರ್ ನೌಕರರ ಜಿಲ್ಲಾ ಸಮಿತಿ ಆಯ್ಕೆ ಪಟ್ಟಿ: ಜಿಲ್ಲಾಧ್ಯಕ್ಷರಾಗಿ ಅನಿಲ್ ಕುಮಾರ್. ಹೆಚ್.ಡಿ.ಕೋಟೆ, ಉಪಾಧ್ಯಕ್ಷರಾಗಿ ಶಂಕರ್ ನಂಜನಗೂಡು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್, ಮೈಸೂರು ತಾಲೂಕು ಖಜಾಂಚಿಯಾಗಿ ಗಣೇಶ್ ಮೈಸೂರು, ತಾಲೂಕು ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮಹೇಶ್ ಕುಮಾರ್ ಟಿ ನರಸೀಪುರ, ನಂಜನಗೂಡು ತಾಲ್ಲೂಕಿನ ನಿರ್ದೇಶಕರಾಗಿ ಚಂದ್ರು ಶೇಖರ್. ತಾಲ್ಲೂಕು ಮಟ್ಟದ ನೌಕರರ ಪಟ್ಟಿ: ಮೈಸೂರು ತಾಲೂಕು ನಿರ್ದೇಶಕರಾಗಿ ತಿಲಕ್ , ಹೆಚ್.ಡಿ.ಕೋಟೆ ಜಯಪ್ರಕಾಶ್, ಸರಗೂರು ತಾಲೂಕು ಮಹೇಶ್ ಬಿ.ಮಟಕರೆ ಎಸ್ಸಿ ಕಾಲೋನಿ, ಕೆ.ಆರ್.ನಗರ ಹಾಗೂ ಸಾಲಿಗ್ರಾಮ ತಾಲೂಕಿನ ನಿರ್ದೇಶಕರಾಗಿ ಇಂದ್ರೇಶ್, ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಭೆಯಲ್ಲಿ ಪ.ಜಾತಿ…
ತುಮಕೂರು: ಮಧುಗಿರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ನಲ್ಲಿ ಭಾಗವಹಿಸಿದ ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿದ್ಯಾರ್ಥಿನಿ ಕುಮಾರಿ ಯಶವಂತ ಪ್ರಿಯ ಎಸ್.ಎನ್. ಜಿಲ್ಲಾ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ನಲ್ಲಿ ವಿಜೇತಳಾಗಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಸಾಧನೆ ಮೆರೆದ ವಿದ್ಯಾರ್ಥಿನಿ ಕುಮಾರಿ ಯಶವಂತ ಪ್ರಿಯ ಎಸ್.ಎನ್. ಅವರನ್ನು ಶಾಲೆಯ ಮುಖ್ಯಶಿಕ್ಷಕರಾದ ರಾಮಚಂದ್ರಪ್ಪ ಕೆ., ಸಹಶಿಕ್ಷಕರಾದ ರೇಣುಕರಾಜ್ ಜಿ.ಹೆಚ್. ಹನುಮೇಶ ಎನ್., ಮೋಹನ್ ಕುಮಾರ್ ಜಿ.ಕೆ.ಕುಮಾರ್ ಎಸ್., ಅಭಿಷೇಕ್ ಎಂ.ವಿ., ಶಿಕ್ಷಿಕಿಯರಾದ ವಿಮಲಾ ಆರ್., ರಶ್ಮೀ ಸಿ.ಎಸ್., ಮಾನಸ ಎಂ. ಮತ್ತು ಶ್ರೀಲಕ್ಷ್ಮೀ ಹಾಗೂ ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿನಂದಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ನಟ ದರ್ಶನ್ ಅವರ ಹಳೆಯ ಚಿತ್ರಗಳು ಒಂದರ ಹಿಂದೊಂದರಂತೆ ಬಿಡುಗಡೆಯಾಗುತ್ತಲೇ ಇದೆ. ಇದೀಗ ಮತ್ತೆ ಎರಡು ಚಿತ್ರಗಳು ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ “ಮೆಜೆಸ್ಟಿಕ್’, “ಶಾಸ್ತ್ರಿ’ ಸಿನಿಮಾ ಬಿಡುಗಡೆಯಾಗಿದ್ದವು. ಅದಕ್ಕೂ ಮೊದಲು “ಕರಿಯ’ ಸಿನಿಮಾ ತೆರೆ ಕಂಡಿತ್ತು. ಇತ್ತೀಚೆಗೆ “ನಮ್ಮ ಪ್ರೀತಿಯ ರಾಮು’, “ಪೊರ್ಕಿ’ ಸಿನಿಮಾ ಮತ್ತೆ ಬಿಡುಗಡೆಗೊಂಡು ತಕ್ಕಮಟ್ಟಿಗೆ ಪ್ರದರ್ಶನಗಳನ್ನು ಕಂಡಿವೆ. ಈ ನಡುವೆ “ನವಗ್ರಹ’ ಹಾಗೂ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾಗಳು ಮರು ಬಿಡುಗಡೆಗೆ ಸಿದ್ಧಗೊಂಡಿವೆ. ನವಗ್ರಹ ಸಿನಿಮಾ ನವೆಂಬರ್ 8ರಂದು ಮರು ಬಿಡುಗಡೆಯಾಗುತ್ತಿದೆ. ಅದೇ ದಿನ “ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಸಹ ಬಿಡುಗಡೆಯಾಗುವುದಿತ್ತು. ಆದರೆ, ಒಂದೇ ದಿನ ದರ್ಶನ್ ಅವರ ಎರಡು ಸಿನಿಮಾಗಳು ಮರು ಬಿಡುಗಡೆಯಾಗುವುದಕ್ಕೆ ಅಭಿಮಾನಿಗಳಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಚಿತ್ರದ ಮರು ಬಿಡುಗಡೆ ನವೆಂಬರ್ 22ಕ್ಕೆ ಮುಂದೂಡಲಾಗಿದೆ. 2012ರಲ್ಲಿ ನಾಗಣ್ಣ ನಿರ್ದೇಶನದಲ್ಲಿ ಮೂಡಿಬಂದಿದ್ದ ಐತಿಹಾಸಿಕ ಚಿತ್ರದಲ್ಲಿ ದರ್ಶನ್ ಸಂಗೊಳ್ಳಿ ರಾಯಣ್ಣನ ಪಾತ್ರದಲ್ಲಿ ಮಿಂಚಿದ್ದರು. ಚಿತ್ರ ಹಲವೆಡೆ ಶತದಿನಗಳನ್ನು ಕಂಡಿತ್ತು. ಜಯಪ್ರದಾ,…
ಮುಂಬೈ: ನಗರದ ಬಾಂದ್ರಾ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ವೇಳೆ ನೂಕುನುಗ್ಗಲು ಉಂಟಾಗಿ, ಕಾಲ್ತುಳಿತ ಸಂಭವಿಸಿರುವ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈಯಲ್ಲಿ ಪ್ರಯಾಣಿಕರನ್ನು ನಿರ್ಲಕ್ಷಿಸಲಾಗುತ್ತಿದೆ. ಆದರೆ ಇಂತಹ ಸಂದರ್ಭದಲ್ಲಿ ಸಂದರ್ಭದಲ್ಲಿ ಕೇಂದ್ರ ಸಚಿವರು ಬುಲೆಟ್ ರೈಲು ಯೋಜನೆಯನ್ನು ಜಾರಿಗೆ ತರಲು ನಿರತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸೂಕ್ತ ಸೌಲಭ್ಯಗಳನ್ನು ಒದಗಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಕಳಪೆ ಮೂಲಸೌಕರ್ಯದಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಯಾಣಿಕರ ಸಮಸ್ಯೆಗಳನ್ನು ಬಗೆಹರಿಸಬೇಕಾದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಬುಲೆಟ್ ರೈಲು ಯೋಜನೆಯಲ್ಲಿ ನಿರತರಾಗಿರುವುದು ಎಷ್ಟು ಸರಿ’ ಎಂದು ರಾವುತ್ ಟೀಕಿಸಿದ್ದಾರೆ. ಭಾನುವಾರ ಬೆಳಿಗ್ಗೆ ಮುಂಬೈನ ಬಾಂದ್ರಾ ನಿಲ್ದಾಣದಲ್ಲಿ ಉತ್ತರ ಪ್ರದೇಶದ ಗೋರಖ್ ಪುರಕ್ಕೆ ತೆರಳುವ ರೈಲು ಹತ್ತುವ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಒಂಬತ್ತು ಜನರು ಗಾಯಗೊಂಡಿದ್ದು,…
ಬೀದರ್ : ಬೇಲೆಕೇರಿ ಅದಿರು ಲೂಟಿಯಾಗಿದ್ದು ಬಿಜೆಪಿ ಅವಧಿಯಲ್ಲಿ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ 23 ಅಧಿಕಾರಿಗಳನ್ನು ಬಿಜೆಪಿ ದೋಷಮುಕ್ತ ಮಾಡಿದೆ ಎಂದು ಕಾನೂನು ಸಚಿವ H.K.ಪಾಟೀಲ್ ಆರೋಪಿಸಿದ್ದಾರೆ. ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ಪ್ರಹ್ಲಾದ್ ಜೋಶಿ, ಆರ್.ಅಶೋಕ್ ಸೇರಿದಂತೆ ಎಲ್ಲರೂ ಕ್ಷಮೆ ಕೇಳಬೇಕು. ಸೈಲ್ ಗೆ ಲೂಟಿ ಮಾಡಲು ಅನುಕೂಲ ಮಾಡಿದ 23 ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದರು, ಪ್ರಕರಣದಲ್ಲಿ ಇದ್ದವರನ್ನು ನೀವು ಕೈಬಿಟ್ಟಿದ್ದೀರಿ. ಆದರೆ, ನಾಚಿಗೆ ಪಟ್ಟುಕೊಳ್ಳದೇ ಹೇಳಿಕೆ ನೀಡಲು ಬರುತ್ತೀರಲ್ಲವೆ? ಸಮಾಜಕ್ಕೆ ಮುಖ ತೋರಿಸಲು ನಿಮಗೆ ಮುಜುಗರ ಅನಿಸೋದಿಲ್ವಾ? ಸೈಲ್ ಗೆ ಸಹಕಾರ ನೀಡಿದ ಅಧಿಕಾರಿಗಳನ್ನು ದೋಷಮುಕ್ತ ಮಾಡಿದ್ದಕ್ಕೆ ನೀವು ಕ್ಷಮೆ ಕೇಳಬೇಕು ಎಂದರು. ಬೇಲೆಕೇರಿ ಅದಿರು ಪ್ರಕರಣದಲ್ಲಿ ಸತೀಶ್ ಸೈಲ್ ಗೆ ಜೈಲು ಶಿಕ್ಷೆ ಕುರಿತು ಮಾತನಾಡಿ, ಯಾರು ಉಪ್ಪು ತಿಂದಿದ್ದಾರೋ ಅವರು ನೀರು ಕುಡಿಯಲೇಬೇಕು. ಅವರಿಗೆ ಶಿಕ್ಷೆಯಾಗಬೇಕು ಅಂತಾ ನಾವೇ ತನಿಖೆ ಮಾಡಿಸಿದ್ದು. ಹೀಗಾಗಿ ಇಂದು ಕೋರ್ಟ್ ಸೈಲ್ ಗೆ ಶಿಕ್ಷೆ ನೀಡಿದ್ದು.…
ಹಾಸನ: ಹೆಚ್.ಡಿ.ಕುಮಾರಸ್ವಾಮಿ ತಮ್ಮ ಕುಟುಂಬಸ್ಥರೊಂದಿಗೆ ಹಾಸನಾಂಬೆ ದರ್ಶನ ಪಡೆದರು. ಛತ್ರಿ, ಚಾಮರ, ವಾದ್ಯಗೋಷ್ಠಿಯೊಂದಿಗೆ ಜಿಲ್ಲಾಡಳಿತ ಅವರನ್ನು ದೇವಸ್ಥಾನಕ್ಕೆ ಬರಮಾಡಿಕೊಂಡಿತು. ಚನ್ನಪಟ್ಟಣ ಚುನಾವಣೆ ಮಧ್ಯೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಅವರ ಪತ್ನಿ ಅನಿತಾ, ಸೊಸೆ ರೇವತಿ ಮತ್ತು ಮೊಮ್ಮಗನ ಜೊತೆ ಹಾಸನಾಂಬೆ ದರ್ಶನಕ್ಕೆ ಆಗಮಿಸಿದ್ದರು. ಕುಟುಂಬಸ್ಥರೆಲ್ಲಾ ಹಾಸನಾಂಬೆ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾವು ಚಿಕ್ಕಮಕ್ಕಳಿಂದ ಹಾಸನಾಂಬೆ ಪವಾಡವನ್ನ ಗಮನಿಸಿದ್ದೇವೆ. ಒಂದೂದುವರೆ ತಿಂಗಳು ನಮ್ಮ ಚಿಕ್ಕವಯಸ್ಸಿನಲ್ಲಿ ಜಾತ್ರೆ ನಡೆಯುತ್ತಿತ್ತು. ಉತ್ತಮ ರೀತಿಯಲ್ಲಿ ರೈತ ಬಂಧುಗಳು ಬದುಕು ನಡೆಸುವಂತಾಗಲಿ. ಮಳೆ, ಬೆಳೆ ಎಲ್ಲವೂ ಚನ್ನಾಗಿ ಆಗಿ ನೆಮ್ಮದಿಯ ಬದುಕು ಅವರಿಗೆ ಸಿಗಲಿ. ನಮ್ಮ ಹಳೆಯ ಸಂಪ್ರದಾಯದಂತೆ ಬಂಧು ಬಾಂಧವರು ಉತ್ತಮ ಸಂಬಂಧ ಇಟ್ಟುಕೊಳ್ಳುವಂತಾಗಲಿ. ದೇವರ ಆಶೀರ್ವಾದದಿಂದ ನಮ್ಮ ಬೇಡಿಕೆಗಳು ಈಡೇರುತ್ತವೆ’ ಎಂದು ತಿಳಿದರು. ದೇವರಲ್ಲಿ ಒಳ್ಳೆ ಕೆಲಸ ಮಾಡಲು ಶಕ್ತಿ ಕೊಡು ಎಂದು ಕೇಳಿದ್ದೇನೆ. ಈ ಬಾರಿ ನನ್ನ ಮಗ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಚುನಾವಣೆಗೆ ನಿಂತಿದ್ದಾನೆ.…
ಕೋಲಾರ: ಅತ್ತಿಗೆ ಮೇಲೆ ಕಣ್ಣು ಹಾಕಬೇಡ ಎಂದು ವಾರ್ನಿಂಗ್ ನೀಡಿದ ಯುವಕನನ್ನು ಸ್ನೇಹಿತನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರದ ಜಮಾಲ್ ಷಾ ನಗರದಲ್ಲಿ ನಡೆದಿದೆ. ರೋಹಿದ್ ಅಲಿಯಾಸ್ ಅರ್ಬಾಜ್(26) ಹತ್ಯೆಗೀಡಾದ ಯುವಕ ಎಂದು ತಿಳಿದು ಬಂದಿದೆ. ಅಮ್ಜದ್ ಎಂಬಾತ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ರೋಹಿದ್ ಮತ್ತು ಅಮ್ಜಾದ್ ದೂರದ ಸಂಬಂಧಿಗಳು ಮತ್ತು ಸ್ನೇಹಿತರಾಗಿದ್ದರು. ಅಮ್ಜಾದ್ ಆಗಾಗ ರೋಹಿದ್ ಮನೆಗೆ ಬರುತ್ತಿದ್ದ. ಈ ವೇಳೆ ರೋಹಿದ್ ಅಣ್ಣನ ಹೆಂಡತಿ ಮೇಲೆ ಕಣ್ಣು ಹಾಕಿದ್ದು, ಆಕೆಯ ಮೊಬೈಲ್ ನಂಬರ್ ಪಡೆದುಕೊಂಡು ಕರೆ ಮಾಡಿ ಪೀಡಿಸುತ್ತಿದ್ದ. ಈ ವಿಷಯ ಮನೆಯವರಿಗೆ ತಿಳಿದಿದ್ದು, ಈ ವೇಳೆ ಅಮ್ಜಾದ್ ಮನೆ ಬಳಿ ಹೋಗಿ ರೋಹಿದ್ & ಸಂಬಂಧಿಕರು ಗಲಾಟೆ ನಡೆಸಿ ವಾರ್ನಿಂಗ್ ಕೊಟ್ಟಿದ್ದರು. ಇಷ್ಟಾದ್ರೂ ರೋಹಿದ್ ಗೆ ಬುದ್ಧಿ ಬರಲಿಲ್ಲ, ಬಳಿಕ ವಿಡಿಯೋ ಕರೆ ಮಾಡಿ ಕಿರುಕುಳ ನೀಡಿದ್ದ ಎನ್ನಲಾಗಿದೆ. ನಿನ್ನೆ ಬೆಂಗಳೂರಿಗೆ ಕೆಲಸದ ಮೇಲೆ ಹೋಗಿದ್ದ ರೋಹಿದ್ ರಾತ್ರಿ ವಾಪಾಸ್ ಬಂದಿದ್ದ. ಈ…
ಬೆಳಗಾವಿ: ಸಚಿವ ಬೈರತಿ ಸುರೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಚಿವೆ ಶೋಭಾ ಕರಂದ್ಲಾಜೆ, ತಾಕತ್ತಿದ್ದರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ ಅಂತ ಸವಾಲು ಹಾಕಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೈರತಿ ಸುರೇಶ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಸಾವಿರಾರು ಕಡತಗಳನ್ನು ತಂದು, ಸುಟ್ಟು ಹಾಕಿದ್ದಾರೆ. ಅದರ ಬಗ್ಗೆ ನಾನು ಧ್ವನಿ ಎತ್ತಿದ್ದಕ್ಕೆ ನನ್ನ ವಿರುದ್ಧ ಬೇರೆ ಬೇರೆ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು. ಈ ಹಿಂದೆ ಹಲವಾರು ಸರ್ಕಾರದವರು ನನ್ನ ಬಗ್ಗೆ ಆರೋಪ ಮಾಡಿ, ತನಿಖೆ ಮಾಡಿದರು. ಆದರೆ, ಶೋಭಾ ಕರಂದ್ಲಾಜೆ ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ ಎಂದು ತಿರುಗೇಟು ಕೊಟ್ಟರು. ನನ್ನ ವಿರುದ್ಧ ದಾಖಲೆ ಬಹಿರಂಗಕ್ಕೆ ಸಿ.ಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರನ್ನು ನೇಮಿಸಲಾಗಿದೆ. ಆದರೆ, ಪೊನ್ನಣ್ಣ ಅವರಿಗೂ ವಿದ್ಯುತ್ ಇಲಾಖೆಗೂ ಏನು ಸಂಬಂಧ? ನಕಲಿ ಕಡತ ಸೃಷ್ಟಿಸಲು ಪೊನ್ನಣ್ಣ ಅವರಿಗೆ ಜವಾಬ್ದಾರಿ ಕೊಟ್ಟಿದ್ದೀರಿ. ಇದರಲ್ಲೂ ಒಂದು ಭ್ರಷ್ಟಾಚಾರ ಮಾಡಲು ಹೊರಟಿದ್ದೀರಿ. ನಿಮ್ಮ ಬಳಿ ಇರುವ…
ಗುಜರಾತ್ : ಮಧ್ಯರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದವರಿಗೆ ರಸ್ತೆಯಲ್ಲಿ ಸಿಂಹವೊಂದು ಎದುರಾದ ಘಟನೆ ಗುಜರಾತ್ ನಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇಬ್ಬರು ಮಧ್ಯರಾತ್ರಿ ಬೈಕ್ ನಲ್ಲಿ ರಸ್ತೆಯಲ್ಲಿ ಬರುತ್ತಿದ್ದರು. ಬೈಕ್ ತಿರುವುವೊಂದನ್ನು ದಾಟಿ ಮುಂದೆ ಹೋಗುತ್ತಿದ್ದಂತೆಯೇ ಏಕಾಏಕಿ ನಿಂತು ಬಿಡುತ್ತದೆ. ಈ ವೇಳೆ ಹಿಂಬದಿ ಸವಾರ ಬೈಕ್ ನಿಂದ ಇಳಿದು ಎದ್ದೂ ಬಿದ್ದು ಓಡುತ್ತಾನೆ, ನಂತರ ಬೈಕ್ ಸವಾರ ಕೂಡ ಬೈಕ್ ನ್ನು ಸ್ಥಳದಲ್ಲೇ ಸ್ಟಾಂಡ್ ಹಾಕಿ ನಿಲ್ಲಿಸಿ, ಓಡುತ್ತಾನೆ. ಸ್ವಲ್ಪ ಹೊತ್ತಲ್ಲೇ ಸಿಂಹ ಇವರಿಬ್ಬರನ್ನು ಅಟ್ಟಿಸಿಕೊಂಡು ಬರುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ನ ಹೆಡ್ ಲೈಟ್ ನಿಂದಾಗಿ ಸಿಂಹಕ್ಕೆ ಇದು ಮನುಷ್ಯರು ಎನ್ನುವುದು ಏಕಾಏಕಿ ತಿಳಿಯಲಿಲ್ಲ ಅನ್ಸುತ್ತೆ ಇಲ್ಲವಾದ್ರೆ ಬೈಕ್ ಸವಾರರ ಕಥೆ ಮುಗಿಯುತ್ತಿತ್ತು ಅಂತ ನೆಟ್ಟಿಗರು ಈ ವಿಡಿಯೋಕ್ಕೆ ಕಾಮೆಂಟ್ ಹಾಕಿದ್ದಾರೆ. Damn💀 pic.twitter.com/p6Q0yW9Nv3 — Ghar Ke Kalesh (@gharkekalesh) October 10, 2024 ನಮ್ಮತುಮಕೂರಿನ ಕ್ಷಣ…