Subscribe to Updates
Get the latest creative news from FooBar about art, design and business.
- ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
- ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
- ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
- ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
- ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
- ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
- ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
- ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
Author: admin
ಕೊರಟಗೆರೆ: ಕೋಟ್ಯಾಂತರ ರೂ ನರೇಗಾ ಯೋಜನೆಯ ಅನುದಾನ ಬಳಕೆಯಾದ್ರು ನಾಗರಕೆರೆ ಅಭಿವೃದ್ದಿ ಕಂಡಿಲ್ಲ. ಕೆರೆಯಲ್ಲಿ ಮಣ್ಣಿನ ಗುಂಡಿ ತೆಗೆದು ನರೇಗಾ ಅನುದಾನವನ್ನು ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಪೋಲು ಮಾಡಿದೆ. ನಾಗರಕೆರೆಯಲ್ಲಿ ಮೀನು ಸಾಕಾಣಿಕೆಗೆ ಹರಾಜು ಮಾಡಿರುವ 2 ಲಕ್ಷ 40ಸಾವಿರ ಹಣವು ಸಹ ಮಾಯವಾಗಿದೆ. ನಾಗರಕೆರೆಯ ಸಮಗ್ರ ಅಭಿವೃದ್ದಿಗೆ ಹರಾಜು ಹಣ ಬಳಸದೇ ಹೊಳವನಹಳ್ಳಿ ಗ್ರಾಮ ಪಂಚಾಯಿತಿಯಿಂದ ದುರುಪಯೋಗಪಡಿಸಿದೆ ಎನ್ನುವ ಆರೋಪ ಕೇಳಿ ಬಂದಿದೆ. ತಾಲ್ಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿ ವರ್ಗ ಸಾರ್ವಜನಿಕ ಸಭೆ ಮತ್ತು ಪೋಟೊಗಳಿಗೆ ಸಿಮೀತವಾಗಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಗ್ರಾಮ ಪಂಚಾಯಿತಿಯ ನಾಗರಕೆರೆಗೆ ಅಭಿವೃದ್ದಿಯೇ ಮರೀಚಿಕೆಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಮೆಜಾಲಿ ಮತ್ತು ಬೇಲಿಗಿಡಗಳ ಹಾವಳಿಯಿಂದ ನಾಗರಕೆರೆಯ ಏರ ಕಣ್ಮರೆಯಾಗಿದೆ. ನಾಗರಕೆರೆಯ ಕೋಡಿ ಮತ್ತು ತೋಬು ಶಿಥಿಲವಾಗಿ ನೀರು ವ್ಯರ್ಥವಾಗಿ ಹರಿಯುತ್ತಿದೆ. ನಾಗರಕೆರೆ ತುಂಬಿ ಕೋಡಿಬಿದ್ದ 30 ದಿನಗಳ ಕಾಲವು ಕೆರೆಯಲ್ಲಿ ನೀರು ನಿಲ್ಲದೇ ವ್ಯರ್ಥವಾಗಿ ಪೋಲಾಗುತ್ತಿದೆ. ಹೊಳವನಹಳ್ಳಿ ಗ್ರಾಮ ಪಂಚಾಯಿತಿಯ ಸಮಗ್ರ…
ಕೋಲ್ಕತ್ತಾ: ಮಹಿಳೆಯರ ಸುರಕ್ಷತೆಗಾಗಿ ಪಶ್ಚಿಮ ಬಂಗಾಳ ಸರ್ಕಾರ ಇತ್ತೀಚೆಗೆ ಪಿಂಕ್ ಮೊಬೈಲ್ ವ್ಯಾನ್ ಗಳನ್ನು ಸ್ಥಾಪಿಸಿತ್ತು. ಈ ವ್ಯಾನ್ ಗಳಲ್ಲಿ ಗಸ್ತು ತಿರುಗಿ ಮಹಿಳೆಯರ ಸುರಕ್ಷತೆಗೆ ಕ್ರಮಕೈಗೊಳ್ಳಲಾಗುತ್ತಿದೆ. ಆದರೆ, ಕರ್ತವ್ಯ ನಿರತ ಮಹಿಳಾ ಸಹಾಯಕ ಸಬ್ ಇನ್ಸ್ಪೆಕ್ಟರ್ ತನಿಯಾ ರಾಯ್ ಎಂಬವರು ಕುಡಿದ ಮತ್ತಿನಲ್ಲಿ ತಾನೇ ಮಹಿಳೆಯರ ಜೊತೆಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಸಿಲಿಗುರಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ತಾನಿಯಾ ಕುಡಿದ ಮತ್ತಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ತಾನಿಯಾಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಅಲ್ಲಿದ್ದ ಮಹಿಳೆಗೆ ತಾನಿಯಾ ಲಿಪ್ ಕಿಸ್ ಕೊಡಲು ಯತ್ನಿಸಿದ್ದು, ಅನುಚಿತವಾಗಿ ವರ್ತಿಸಿದ್ದಾರೆ. ತಾನಿಯಾ ಅವರ ಈ ವರ್ತನೆಯಿಂದ ಆಕ್ರೋಶಗೊಂಡ ಜನರು ಆಕೆಗೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಉಳಿದ ಪೊಲೀಸರು ಅವರು ತಡೆಯಲು ಯತ್ನಿಸಿದರು. ಈ ಘಟನೆಯ ವಿರುದ್ಧ ನೆಟ್ಟಿಗರು ಮತ್ತು ಬಿಜೆಪಿ ಪಕ್ಷದ ನಾಯಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024–25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡು (Accriditation Card) , ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ–ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ…
ಶ್ರೀ ವೀರೇಂದ್ರ ಹೆಗಡೆಯವರ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ,ಸಾಂಸ್ಕೃತಿಕ ರಂಗಗಳಲ್ಲಿ ಸೇವೆಯನ್ನು ಗುರುತಿಸಿ ಧರ್ಮಸ್ಥಳದ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ್ದು, ಅವರ ಸೇವೆಗಳು ನಡವಳಿಕೆಗಳು ಸಾಮಾಜಿಕ ಪ್ರಜ್ಞೆಗಳು ಇದಕ್ಕೆ ಪೂರಕವಾಗಿವೆ ಎಂದು ಶ್ರೀ ಕ್ಷೇತ್ರ ಮೂಡುಬಿದರೆ ಜೈನಮಠದ ಸ್ವಸ್ತಿ ಶ್ರೀ ಚಾರು ಕೀರ್ತಿ ಭಟ್ಟರಕ ಪಂಡಿತಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಧರ್ಮಸ್ಥಳ ಸಭಾಭವನದಲ್ಲಿ ನಡೆದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಡೆಯವರ 57ನೇ ವರ್ಧಂನ್ಯೋತ್ಸವ ಸಮಾರಂಭದ ಪಾವನ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಬಹುಮುಖಿ ಸಮಾಜ ಸೇವಾ ಕಾರ್ಯದಿಂದ ವಿಶ್ವಮಾನವರಾಗಿರುವ ಇವರು ಚತುರ್ವಿದ ದಾನ ಪರಂಪರೆ ಹೊಂದಿದ್ದಾರೆ ಎಂದರು. ಡಾ.ವೀರೇಂದ್ರ ಹೆಗ್ಗಡೆಯವರ ಪ್ರತಿಮೆ ಅನಾವರಣ ಮಾಡಿದ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್ .ಮಂಜುನಾಥ್ ಮಾತನಾಡಿ, ದೈಹಿಕ ಆರೋಗ್ಯಕ್ಕಿಂತಲೂ ಮಾನಸಿಕ ಆರೋಗ್ಯ ಅಗತ್ಯ. ನಮ್ಮ ಧರ್ಮಸ್ಥಳ ಮಾನಸಿಕ , ಶಾಂತಿ ,ನೆಮ್ಮದಿ ನೀಡುವ ತಾಣವಾಗಿದ್ದು ಶ್ರೀ ಹೆಗ್ಗಡೆಯವರ ಹತ್ತಾರು ಧರ್ಮಕಾರ್ಯಗಳು ಸಮಾಜಕ್ಕೆ ನಂದಾದೀಪವಾಗಿದ್ದು ಇವರ ನಿಸ್ವಾರ್ಥ ಸೇವೆ ಸಮಾಜಕ್ಕೆ ಮಾದರಿಯಾಗಿದೆ ಎಂದರು. ವಿಧಾನಪರಿಷತ್ ಸದಸ್ಯಕ್ಕೆ ಪ್ರತಾಪ್ ಸಿಂಗ್…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490 ಬುಧ ಮತ್ತು ಗುರು ಪರಸ್ಪರ ಆರನೇ ಮತ್ತು ಎಂಟನೇ ಮನೆಯಲ್ಲಿ ಸ್ಥಿತರಿದ್ದು ಷಡಾಷ್ಟಕ ಯೋಗವನ್ನು ರೂಪಿಸುತ್ತಿದೆ. ಈ ಯೋಗವನ್ನು ಜ್ಯೋತಿಷ್ಯದಲ್ಲಿ ಅತ್ಯಂತ ಅಶುಭವೆಂದು ಪರಿಗಣಿಸಲಾಗಿದೆ. ಜಾತಕದ ಆರನೇ ಮತ್ತು ಎಂಟನೇ ಮನೆಯಲ್ಲಿ ಯಾವುದೇ ಶುಭ…
ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮದಲ್ಲಿ ಸತತವಾಗಿ ಧಾರಾಕಾರ ಮಳೆಯಾಗಿರುವ ಕಾರಣ ಇಲ್ಲಿನ ಹೆಳವಯ್ಯ ಎಂಬವರಿಗೆ ಸೇರಿದ ಮನೆ ಕುಸಿದು ಬಿದ್ದಿದೆ. ಗೋಡೆ ಛಾವಣಿ ಕುಸಿತಗೊಂಡು ಮನೆ ಒಳಗಡೆ ಇದ್ದ ಕೆಲವು ಹಸುಗಳ ಪೈಕಿ ಒಂದು ಹಸು ಸಾವನ್ನಪ್ಪಿದೆ. ವರದಿ: ಮಂಜು ಶ್ರವಣೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q
ವಿಶೇಷ ವರದಿ: ಮಂಜುಸ್ವಾಮಿ ಎಂ.ಎನ್. ತುಮಕೂರು/ಚಿಕ್ಕನಾಯಕನಹಳ್ಳಿ : ತಾಲೂಕಿನ ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಎಸ್.ನಾಗರಾಜುಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಹತ್ತು ಸಾವಿರ ದಂಡ ವಿಧಿಸಿದ ಏಳನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶಿಸಿದೆ. ಏಳನೇ ಅಪಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಟಿ.ಪಿ.ರಾಮಲಿಂಗೇಗೌಡರವರು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣಾ ಮೊ.ನಂ : ೧೩/೨೦೨೧ ಕಲಂ–೭(ಎ) ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ–೧೯೮೮ (ತಿದ್ದುಪಡಿ — ೨೦೧೮) ರ ಟ್ರ್ಯಾಪ್ ಪ್ರಕರಣವನ್ನು ನ್ಯಾಯಾಲಯದ ವಿಶೇಷ ಪ್ರಕರಣ ಸಂಖ್ಯೆ : ೩೨೯/೨೦೨೩ ರಲ್ಲಿ ವಿಚಾರಣೆ ನಡೆಸಿ, ಹೊಯ್ಸಳಕಟ್ಟೆ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿ ನಾಗರಾಜು ಎಸ್ ರವರನನ್ನು ದೋಷಿ ಎಂದು ಘನ ನ್ಯಾಯಾಲಯದಲ್ಲಿ ಘೋಷಿಸಿ. ದಿನಾಂಕ : ೨೪/೧೦/೩೦೨೪ ರಂದು ೭(ಎ) ಭ್ರಷ್ಟಾಚಾರ ಪ್ರತಿಬಂಧ ಕಾಯ್ದೆ–೧೯೮೮ (ತಿದ್ದುಪಡಿ — ೨೦೧೮) ರ ಅಡಿಯಲ್ಲಿ ಆರೋಪಿಗೆ ಮೂರು ವರ್ಷಗಳ ಕಠಿಣ ಕಾರಾಗೃಹಕ ಶಿಕ್ಷೆ ಮತ್ತು…
ಕೊರಟಗೆರೆ : ಕೊರಟಗೆರೆಯ ಗ್ರಾಮೀಣ ಮತ್ತು ಪಟ್ಟಣದಲ್ಲಿ ಇದುವರೇಗೆ 168 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಸ್ವಚ್ಚತೆ ಇಲ್ಲದೇ ಅನೈರ್ಮಲ್ಯ ಹೆಚ್ಚಾಗಿ ಡೇಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗ್ತಿದೆ. ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ 168 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಡೆಂಗ್ಯೂಜ್ವರ ಹೆಚ್ಚಾಗಿ ಕೊರಟಗೆರೆಯ ಪಟ್ಟಣ ಮತ್ತು ಗ್ರಾಮೀಣದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಜೆಟ್ಟಿಅಗ್ರಹಾರ ಗ್ರಾಮ ಪಂಚಾಯಿತಿಯ ಜಂಪೇನಹಳ್ಳಿ ಕ್ರಾಸಿಗೆ ಮೂಲಸೌಲಭ್ಯವೇ ಮರೀಚಿಕೆಯಾಗಿದೆ. ಜಂಪೇನಹಳ್ಳಿ ಕ್ರಾಸ್ ಒಂದೇ ಗ್ರಾಮದಲ್ಲೇ 8ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ. ಚರಂಡಿ ಮತ್ತು ರಸ್ತೆಗಳೇ ಇಲ್ಲದ ಜಂಪೇನಹಳ್ಳಿ ಕ್ರಾಸಿನಲ್ಲಿ ಅನೈರ್ಮಲ್ಯ ಹೆಚ್ಚಳವಾಗಿದೆ. ಚರಂಡಿಗಳೇ ಇಲ್ಲದೇ ಕೆರೆಯಂತಾದ ರಸ್ತೆಗಳ ಅಕ್ಕಪಕ್ಕ ಅನೈರ್ಮಲ್ಯ ತಾಂಡವವಾಡುತ್ತಿದೆ. ಜೆಟ್ಟಿಅಗ್ರಹಾರ ಗ್ರಾಮ ಪಂಚಾಯಿತಿ ಪಿಡಿಓ ಮತ್ತು ತಾಲೂಕು ಪಂಚಾಯಿತಿ ಇಓ ನಿರ್ಲಕ್ಷ್ಯದ ವಿರುದ್ದ ಸ್ಥಳೀಯ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡೆಂಗ್ಯುಊ ಪ್ರಕರಣ ಏರಿಕೆಯಾದ್ರು ಆರೋಗ್ಯ ಮತ್ತು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯವಹಿಸಿದೆ. ಹಳ್ಳಿಗಳಿಗೆ ಮೂಲಸೌಲಭ್ಯ ಕಲ್ಪಿಸುವಲ್ಲಿ 24 ಗ್ರಾಮ ಪಂಚಾಯಿತಿ ಅಧಿಕಾರಿಗಳು ಮೀನಾಮೇಷ…
ಬೆಂಗಳೂರು : ನನಗೆ 30 ವರ್ಷದ ಹಿಂದೆಯೇ ಸಕ್ಕರೆ ಖಾಯಿಲೆ ಬಂದಿದೆ. 24 ವರ್ಷದ ಹಿಂದೆಯೇ ಸ್ಟಂಟ್ ಅಳವಡಿಕೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ನನಗೆ 30 ವರ್ಷದ ಹಿಂದೆಯೇ ಸಕ್ಕರೆ ಖಾಯಿಲೆ ಬಂದಿದೆ. 24 ವರ್ಷದ ಹಿಂದೆಯೇ ಸ್ಟಂಟ್ ಅಳವಡಿಕೆ ಮಾಡಿದ್ದಾರೆ. ಆದರೂ ಇಂದಿಗೂ ಪಕ್ಷದ ಕಾರ್ಯ, ಸರ್ಕಾರದ ಕಾರ್ಯ ಮಾಡುತ್ತಾ, ಚುನಾವಣಾ ಪ್ರಚಾರ ಮಾಡುತ್ತಾ ಆರಾಮವಾಗಿ ಓಡಾಡಿಕೊಂಡು ಇದ್ದೀನಿ. ಇದಕ್ಕೆ ಕಾರಣ ವೈದ್ಯರ ಸಲಹೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಗೃಹ ಆರೋಗ್ಯ ಯೋಜನೆಯ ಮೂಲಕ ನಿಮ್ಮ ಮನೆ ಬಾಗಿಲಲ್ಲಿ ಆರೋಗ್ಯ ತಪಾಸಣಾ ವ್ಯವಸ್ಥೆ ಬರುತ್ತಿದೆ. ರಕ್ತದೊತ್ತಡ, ಸಕ್ಕರೆ ಖಾಯಿಲೆ ಹಾಗೂ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್, ನಿದ್ರೆಯಲ್ಲಿ ಉಸಿರುಕಟ್ಟುವಿಕೆ, ಮಾನಸಿಕ ಆರೋಗ್ಯದ ತಪಾಸಣೆ ಸೇರಿದಂತೆ ಬಹುಜನರನ್ನು ಕಾಡುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಮನೆಯಲ್ಲೇ ಪತ್ತೆಮಾಡಿ, ಪರಿಸ್ಥಿತಿ ಕೈಮೀರದಂತೆ ನಿಯಂತ್ರಿಸುವುದು ಈ ಯೋಜನೆಯ ಉದ್ದೇಶ. ನೀವಿನ್ನು ನಿಶ್ಚಿಂತರಾಗಿರಿ,…
ಮುಂಬೈ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನಿಂದ ಇತ್ತೀಚೆಗೆ ಹತ್ಯೆಗೀಡಾದ ಎನ್ ಸಿಪಿ ಮುಖಂಡ ಬಾಬಾ ಸಿದ್ದೀಕಿ ಅವರ ಪುತ್ರ, ಮುಂಬೈ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜೀಶನ್ ಸಿದ್ದೀಕಿ ಶುಕ್ರವಾರ ಅಜಿತ್ ಪವಾರ್ ನೇತೃತ್ವದ ಎನ್ ಸಿಪಿಗೆ ಸೇರ್ಪಡೆಗೊಂಡಿದ್ದಾರೆ. ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್ ಸಿಪಿಗೆ ಸೇರ್ಪಡೆಗೊಂಡಿದ್ದರು. ಇದಕ್ಕೂ ಮುನ್ನ ದೀರ್ಘಕಾಲ ಕಾಂಗ್ರೆಸ್ ಸದಸ್ಯರಾಗಿದ್ದರು. ಅಕ್ಟೋಬರ್ 12ರಂದು ಬಾಬಾ ಸಿದ್ದೀಕಿ ಅವರನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಸದಸ್ಯರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದನ್ನು ಭಾವನಾತ್ಮಕ ಕ್ಷಣ ಎಂದು ಕರೆದ ಜೀಶನ್, 2019 ರಲ್ಲಿ ಕಾಂಗ್ರೆಸ್ ಟಿಕೆಟ್ ನಲ್ಲಿ ಗೆದ್ದಿರುವ ಬಾಂದ್ರಾ ಪೂರ್ವ ಕ್ಷೇತ್ರದಿಂದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎನ್ ಸಿಪಿ ಯಿಂದ ಸ್ಪರ್ಧಿಸುವುದಾಗಿ ಹೇಳಿದರು. ಇದು ನನಗೆ ಮತ್ತು ನನ್ನ ಕುಟುಂಬಕ್ಕೆ ಭಾವನಾತ್ಮಕ ದಿನವಾಗಿದೆ. ಈ ಕಷ್ಟದ ಸಮಯದಲ್ಲಿ ನನ್ನ ಮೇಲೆ…